ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ – Kannada News | Irregularities Uncovered: Lokayukta Investigation At Ramanagara RTO Highlights Proxy Employment And Broker Menace

ರಾಮನಗರ, ಜೂ.12: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಕಚೇರಿಯ ಇಂಚಿಂಚೂ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಆರ್‌ಟಿಒ ಕಚೇರಿಯ ಕರಾಳ ಮುಖ ಬಯಲಾಗಿದೆ. ನಿಯಮದ ಪ್ರಕಾರ ಕೇವಲ 7 ದಿನಗಳಲ್ಲಿ ಸಾರ್ವಜನಿಕರ ಕೈ ಸೇರಬೇಕಾಗಿದ್ದ ಲೈಸೆನ್ಸ್ ಹಾಗೂ ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು, ಮೂರು ತಿಂಗಳು ಕಳೆದರೂ ವಿತರಣೆಯಾಗದೆ ಕಚೇರಿಯಲ್ಲೇ ಕಂತೆ ಕಂತೆಯಾಗಿ ಶೇಖರಣೆಗೊಂಡಿರುವುದು ಪತ್ತೆಯಾಗಿದೆ. ಸಾರ್ವಜನಿಕರು ನೇರವಾಗಿ ಬಂದರೆ ಕೆಲಸ ಮಾಡಿಕೊಡದ ಸಿಬ್ಬಂದಿ, ಏಜೆಂಟ್​ಗಳ ಮೂಲಕ ಲಂಚದ ಹಣದೊಂದಿಗೆ ಬಂದರೆ ಮಾತ್ರ ಕೆಲಸ ಮಾಡಿಕೊಡುತ್ತಿದ್ದರು ಎಂಬ ದೂರುಗಳು ದಾಳಿ ವೇಳೆ ಸಾಬೀತಾಗಿವೆ. ಇನ್ನು ವಾರದ ಹಿಂದೆಯಷ್ಟೇ ಇದೇ ಕಚೇರಿ ಆವರಣದಲ್ಲಿ ಕಮಿಷನ್ ವಿಚಾರಕ್ಕಾಗಿ ಏಜೆಂಟ್​ಗಳ ನಡುವೆ ಭೀಕರ ಹೊಡೆದಾಟ ನಡೆದಿದ್ದರೂ ಆರ್‌ಟಿಒ ಅಧಿಕಾರಿಗಳು ಯಾವುದೇ ಪೊಲೀಸ್ ದೂರು ನೀಡದೆ ಭ್ರಷ್ಟರನ್ನು ರಕ್ಷಿಸಿದ್ದರು ಎನ್ನಲಾಗಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಈ ಕಚೇರಿಯ ಮೇಲೆ ಈಗಾಗಲೇ ಮೂರು ಬಾರಿ ಲೋಕಾಯುಕ್ತ ದಾಳಿ ನಡೆದಿದ್ದರೂ ಭ್ರಷ್ಟಾಚಾರದ ಹಾದಿ ಮಾತ್ರ ಬದಲಾಗಿರಲಿಲ್ಲ. ಕಚೇರಿಯಲ್ಲಿ ತುಂಬಿ ತುಳುಕುತ್ತಿದ್ದ ಅಕ್ರಮಗಳು, ಸ್ಮಾರ್ಟ್ ಕಾರ್ಡ್ ವಿಳಂಬ ಹಾಗೂ ಏಜೆಂಟ್‌ಗಳ ದರ್ಬಾರ್ ಕುರಿತು ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ಅವರು ಕೇಳಿದ ಖಡಕ್ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಆರ್‌ಟಿಒ ಅಧಿಕಾರಿ ಟಿ.ಎ.ಸತೀಶ್ ಬಾಬು ಕಚೇರಿಯಲ್ಲೇ ತಬ್ಬಿಬ್ಬಾಗಿ ತಡಕಾಡಿದ್ದಾರೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಕಚೇರಿಯ ಪ್ರಮುಖ ಕಡತಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುಣೆಯಲ್ಲಿ ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ; ಇಬ್ಬರು ಮಹಿಳಾ ಸಹೋದ್ಯೋಗಿಗಳ ವಿರುದ್ಧ ಕೇಸ್ ದಾಖಲು – Kannada News | TCS employee dies by suicide after Repeatedly Humiliating him FIR against 2 women colleagues

ಪುಣೆ, ಜೂನ್ 12: ಮಹಾರಾಷ್ಟ್ರದ ಪುಣೆಯಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ 48 ವರ್ಷದ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಹೋದ್ಯೋಗಿಗಳ ಕಿರುಕುಳವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಹಿತಿ ತಂತ್ರಜ್ಞಾನ ನೌಕರರ ಸಂಘಟನೆಯಾದ NITES ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಪತ್ರ ಬರೆದಿದೆ.

ಟಿಸಿಎಸ್ ಉದ್ಯೋಗಿಯಾದ ಪುಣೆಯ ಪಿಂಪ್ರಿ ಚಿಂಚಾವಡ್ ವ್ಯಾಪ್ತಿಯ ಭೋಸರಿ ನಿವಾಸಿಯಾದ ಅಮಿತ್ ಅಭಯ್ ಬ್ರಹ್ಮೆ ಎಂಬ 48 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಿಂಜೆವಾಡಿಯಲ್ಲಿರುವ ಟಿಸಿಎಸ್ (TCS) ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಜೂನ್ 2ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅವರು ಬರೆದಿದ್ದ ‘ಡೆತ್ ನೋಟ್’ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ 19 ವರ್ಷದ ಮಗ ನೀಡಿದ ದೂರಿನ ಮೇರೆಗೆ ಜೂನ್ 9ರಂದು ಭೋಸರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ, ಅಮಿತ್ ಬ್ರಹ್ಮೆ ಅವರ ಆತ್ಮಹತ್ಯೆಗೆ ಕುಟುಂಬದ ಪರಿಚಯಸ್ಥನೊಬ್ಬನ ಅಪಪ್ರಚಾರ ಮತ್ತು ಕಂಪನಿಯೊಳಗಿನ ಸಹೋದ್ಯೋಗಿಗಳ ಕಿರುಕುಳ ಕಾರಣ. ಟಿಸಿಎಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಸಹೋದ್ಯೋಗಿಗಳು ಇತರ ಉದ್ಯೋಗಿಗಳ ಸಮ್ಮುಖದಲ್ಲೇ ಅಮಿತ್ ಅವರಿಗೆ ನಿರಂತರವಾಗಿ ಅವಮಾನ ಮಾಡುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಅಮಿತ್ ಅವರ ಕೈಯಲ್ಲಿದ್ದ ಒಂದು ಉತ್ತಮ ಪ್ರಾಜೆಕ್ಟ್ ಅನ್ನು ಬಲವಂತವಾಗಿ ಕಸಿದುಕೊಂಡು, ಅವರಿಗೆ ಯಾವುದೇ ಅನುಭವವಿಲ್ಲದ ಬೇರೆ ಕೆಲಸವನ್ನು ಮಾಡಲು ಒತ್ತಾಯಿಸಲಾಗಿತ್ತು. ಅಷ್ಟೇ ಅಲ್ಲದೆ, ಅವರ ವಿರುದ್ಧ ಕಂಪನಿಗೆ ನೆಗೆಟಿವ್ ಪ್ರತಿಕ್ರಿಯೆ ನೀಡುವುದಾಗಿ ಬೆದರಿಕೆಯನ್ನೂ ಹಾಕಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಟಿಸಿಎಸ್ ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಕೊನೆಗೂ ಅರೆಸ್ಟ್

ಅಮಿತ್ ಅವರ ಪತ್ನಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, 2024ರಲ್ಲಿ ಫೇಸ್‌ಬುಕ್ ಮೂಲಕ ಆರೋಪಿಯ ಪತ್ನಿಯೊಂದಿಗೆ ಗೆಳತನ ಹೊಂದಿದ್ದರು. ಅಂದಿನಿಂದ ಎರಡೂ ಕುಟುಂಬಗಳ ನಡುವೆ ಪರಿಚಯವಿತ್ತು. ಆದರೆ, ಆರೋಪಿ ವ್ಯಕ್ತಿಯು ತನ್ನ ಪತ್ನಿಯೊಂದಿಗೆ ನಿರಂತರವಾಗಿ ಜಗಳವಾಡುತ್ತಿದ್ದರಿಂದ, ಆಕೆ ಎನ್‌ಜಿಒ ಒಂದರ ಸಹಾಯದಿಂದ ಫಿಲಿಪೈನ್ಸ್ ದೇಶಕ್ಕೆ ತೆರಳಿದ್ದಳು. ತನ್ನ ಪತ್ನಿ ಮನೆ ಬಿಟ್ಟು ವಿದೇಶಕ್ಕೆ ಹೋಗಲು ಅಮಿತ್ ಬ್ರಹ್ಮೆ ಮತ್ತು ಅವರ ಪತ್ನಿಯೇ ಕಾರಣ ಎಂದು ಆ ವ್ಯಕ್ತಿ ತಪ್ಪು ತಿಳಿದುಕೊಂಡಿದ್ದರು. ಈ ದ್ವೇಷದಿಂದಾಗಿ ಆತ ಅಮಿತ್ ವಿರುದ್ಧ ಹಿಂಜೆವಾಡಿ ಪೊಲೀಸ್ ಠಾಣೆಯಲ್ಲಿ ವಂಚನೆ ಮತ್ತು ಕಳ್ಳತನದ ಸುಳ್ಳು ದೂರುಗಳನ್ನು ನೀಡಿದ್ದರು. ಜೊತೆಗೆ ವಕೀಲರ ಮೂಲಕ ಲೀಗಲ್ ನೋಟಿಸ್ ಕಳುಹಿಸಿ, ಟಿಸಿಎಸ್ ಕಂಪನಿಯ ಅಧಿಕೃತ ಇಮೇಲ್‌ಗೂ ಅಮಿತ್ ವಿರುದ್ಧ ಸುಳ್ಳು ದೂರುಗಳನ್ನು ರವಾನಿಸಿ ಮಾನಸಿಕವಾಗಿ ಹಿಂಸೆ ನೀಡಿದ್ದರು.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಟಿಸಿಎಸ್​​ನ ಇಬ್ಬರು ಮಹಿಳಾ ಸಿಬ್ಬಂದಿಯ ಬಗ್ಗೆ ಆಂತರಿಕ ತನಿಖೆ ನಡೆಸುವಂತೆ ಟಿಸಿಎಸ್ (TCS) ಕಂಪನಿಯ ಅಧಿಕಾರಿಗಳಿಗೆ ಪೊಲೀಸರು ಅಧಿಕೃತ ನೋಟಿಸ್ ಜಾರಿ ಮಾಡಿದ್ದಾರೆ. ಕೌಟುಂಬಿಕ ದ್ವೇಷ ಸಾಧಿಸಿ ಸುಳ್ಳು ದೂರು ನೀಡಿದ್ದ ಮೂರನೇ ಆರೋಪಿ ವ್ಯಕ್ತಿಯ ಬಂಧನಕ್ಕಾಗಿ ಪೊಲೀಸರು ಸದ್ಯ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಟಿಸಿಎಸ್ ಮತಾಂತರ ಪ್ರಕರಣ: ತಾನು ಗರ್ಭಿಣಿ ಎಂದು ನ್ಯಾಯಾಲಯದ ಮೊರೆ ಹೋದ ಆರೋಪಿ ನಿದಾ ಖಾನ್

ಈ ಘಟನೆಯನ್ನು ಐಟಿ ನೌಕರರ ಹಕ್ಕುಗಳಿಗಾಗಿ ಹೋರಾಡುವ ಸಂಘಟನೆಯಾದ NITES ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಕಾರ್ಪೊರೇಟ್ ವಲಯದಲ್ಲಿ ಹೆಚ್ಚುತ್ತಿರುವ ಇಂತಹ ಮಾನಸಿಕ ಕಿರುಕುಳ ಮತ್ತು ಕೆಲಸದ ಒತ್ತಡದ ಸಂಸ್ಕೃತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಯು ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಮಹಾರಾಷ್ಟ್ರ ಮುಖ್ಯಮಂತ್ರಿಯವರು ತಕ್ಷಣವೇ ಮಧ್ಯಪ್ರವೇಶಿಸಿ ಉನ್ನತ ಮಟ್ಟದ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕಾಲಾ ಹಿರಣ್’ ಟೀಸರ್: ವಿವಾದಿತ ಸಿನಿಮಾದಲ್ಲಿ ಸಲ್ಮಾನ್ ಖಾನ್ ರೀತಿಯೇ ಕಾಣುವ ನಟ – Kannada News | Salman Khan lookalike Blackbuck Case Kala Hiran movie Teaser Viral Case in Delhi High Court

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಜೀವನದ ಅತ್ಯಂತ ವಿವಾದಾತ್ಮಕ ಅಧ್ಯಾಯವಾಗಿದ್ದ 1998ರ ಕೃಷ್ಣಮೃಗ ಬೇಟೆ (Blackbuck Case) ಪ್ರಕರಣವನ್ನು ಆಧರಿಸಿ ಸಿದ್ಧವಾಗುತ್ತಿರುವ ಹೊಸ ಸಿನಿಮಾ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಕೋರಿ ನಟ ಸಲ್ಮಾನ್ ಖಾನ್ (Salman Khan) ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಬೆನ್ನಲ್ಲೇ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಸವಾಲು ಹಾಕಿದೆ.

ಅಮಿತ್ ಜಾನಿ ನಿರ್ಮಾಣದ ಈ ಕ್ರೈಮ್ ಥ್ರಿಲ್ಲರ್ ಮತ್ತು ಕೋರ್ಟ್‌ರೂಮ್ ಡ್ರಾಮಾ ಚಿತ್ರದ ಟೀಸರ್ ಸಂಪೂರ್ಣವಾಗಿ ಸಲ್ಮಾನ್ ಖಾನ್ ಮತ್ತು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಡುವಿನ ಹಗೆತನವನ್ನು ಹೋಲುವಂತಿದೆ. ಟೀಸರ್‌ನಲ್ಲಿ ಸಲ್ಮಾನ್ ಖಾನ್ ಅವರನ್ನೇ ಹೋಲುವ ನಟ ಕಾಸಿಫ್ ಇಕ್ಬಾಲ್ ಖಾನ್ ಅವರು ‘ಅಯಾನ್ ಖಾನ್’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ ಅವರ ಐಕಾನಿಕ್ ಗುರುತಾದ ನೀಲಿ ಬಣ್ಣದ ಬ್ರೇಸ್‌ಲೆಟ್ ಅನ್ನು ಸಹ ಈ ಪಾತ್ರಕ್ಕೆ ತೊಡಿಸಲಾಗಿದೆ. ಈ ಅಯಾನ್ ಖಾನ್ ಕಾಡಿನಲ್ಲಿ ಕೃಷ್ಣಮೃಗವನ್ನು ಬೇಟೆಯಾಡುವುದು ಮತ್ತು ನಂತರ ಜೈಲಿನಲ್ಲಿರುವ ‘ಲಯನ್ ಬಿಷ್ಣೋಯ್’ ಎಂಬ ಪಾತ್ರದಿಂದ ಕೊಲೆ ಬೆದರಿಕೆ ಪಡೆಯುವ ದೃಶ್ಯಗಳು ಟೀಸರ್‌ನಲ್ಲಿವೆ.

ಚಿತ್ರತಂಡವು ಕಾನೂನು ಕೈಯಿಂದ ಬಚಾವಾಗಲು ಪಾತ್ರಗಳ ಹೆಸರನ್ನು ಬದಲಾಯಿಸಿದೆ. ಸಲ್ಮಾನ್ ಖಾನ್ ಹೆಸರನ್ನು ‘ಅಯಾನ್ ಖಾನ್’ ಎಂದು, ಲಾರೆನ್ಸ್ ಬಿಷ್ಣೋಯ್ ಹೆಸರನ್ನು ‘ಲಯನ್ ಬಿಷ್ಣೋಯ್’ ಎಂದು ಬದಲಾಯಿಸಲಾಗಿದೆ. ಇಷ್ಟೇ ಅಲ್ಲದೆ, ಸಲ್ಮಾನ್ ಖಾನ್ ಅವರ ಸೂಪರ್ ಹಿಟ್ ಸಿನಿಮಾ ‘ದಬಾಂಗ್’ನ ಚುಲ್ಬುಲ್ ಪಾಂಡೆ ಪಾತ್ರವನ್ನು ಇಲ್ಲಿ ‘ಬುಲ್ಬುಲ್ ಚೌಬೆ’ ಎಂದು ಮರುಸೃಷ್ಟಿಸಲಾಗಿದೆ. ಟೀಸರ್‌ನಲ್ಲಿ ಬರುವ ಒಂದು ಸಂಭಾಷಣೆ ಈಗ ವೈರಲ್ ಆಗಿದೆ. ‘ಮುಂಬೈ ಅಂಡರ್‌ವರ್ಲ್ಡ್‌ಗೆ ಒಬ್ಬನೇ ಬಾಸ್ ಇದ್ದ, ಅವನೇ ದಾವೂದ್.. ಆದರೆ ಇವತ್ತು ದಾವೂದ್‌ಗೂ ಒಬ್ಬ ಅಪ್ಪ ಇದ್ದಾನೆ, ಅವನ ಹೆಸರೇ ಲಯನ್ ಬಿಷ್ಣೋಯ್!’ ಎಂಬ ಡೈಲಾಗ್ ಇದೆ.

‘ಕಾಲಾ ಹಿರಣ್’ ಸಿನಿಮಾದ ಟೀಸರ್:

ಹಿರಿಯ ನಟ ಗೋವಿಂದ್ ನಾಮದೇವ್ ಅವರು ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಇಡೀ ಪ್ರಕರಣದ ಹಿನ್ನೆಲೆಯನ್ನು ವಿವರಿಸುತ್ತಾರೆ. 1998ರಲ್ಲಿ ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಶೂಟಿಂಗ್ ವೇಳೆ ನಡೆದ ಘಟನೆಗಳು ಮತ್ತು ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ, ನೀಲಂ ಅವರನ್ನೇ ಹೋಲುವ ಪಾತ್ರಗಳ ಝಲಕ್ ಕೂಡ ಟೀಸರ್‌ನಲ್ಲಿದೆ.

ಇದನ್ನೂ ಓದಿ: ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ

ಈ ಚಿತ್ರವು ತನ್ನ ವ್ಯಕ್ತಿತ್ವದ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ ಮತ್ತು ಸಾರ್ವಜನಿಕವಾಗಿ ತನ್ನ ಇಮೇಜ್‌ಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಸಲ್ಮಾನ್ ಖಾನ್ ಈಗ ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿದ್ದಾರೆ. ಶಸ್ತ್ರಾಸ್ತ್ರ ಕಾಯ್ದೆಯಡಿ ತಾವು ಈಗಾಗಲೇ ಖುಲಾಸೆಗೊಂಡಿದ್ದರೂ, ಚಿತ್ರದ ಪೋಸ್ಟರ್‌ನಲ್ಲಿ ತಮ್ಮನ್ನು ಹೋಲುವ ಪಾತ್ರದ ಕೈಗೆ ಗನ್ ನೀಡಿ ಸಾರ್ವಜನಿಕರನ್ನು ಹಾದಿ ತಪ್ಪಿಸಲಾಗುತ್ತಿದೆ ಎಂದು ಸಲ್ಮಾನ್ ವಾದಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹಕ್ಕೆ ಸುಪ್ರೀಂಕೋರ್ಟ್ ಬ್ರೇಕ್ – Kannada News | Defamation Dispute: Supreme Court Appoints Justice Kurian Joseph As Mediator In Karnataka IAS Rohini Sindhuri And IPS Roopa Moudgil

ನವದೆಹಲಿ, (ಜೂನ್ 12): ಕರ್ನಾಟಕದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (IAS Officer Rohini Sindhuri) ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್(IPS Officer Roopa D Moudgil) ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ (Supreme Court) ಈಗ ಸಂಧಾನದ ಹಾದಿ ತೋರಿಸಿದೆ. ಇಬ್ಬರು ಅಧಿಕಾರಿಗಳ ನಡುವಿನ ಮಾನಹಾನಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ವಹಿಸಿದ್ದು, ಇಬ್ಬರೂ ಉನ್ನತ ಹುದ್ದೆಯಲ್ಲಿದ್ದು, ಸಾರ್ವಜನಿಕವಾಗಿ ಜಗಳವಾಡುವುದು ಸರಿಯಲ್ಲ ಎಂದು ಹೇಳಿ ಸಂಧಾನ ಮಾಡಿಕೊಳ್ಳುವಂತೆ ಕಿವಿ ಮಾತು ಹೇಳಿದೆ. ಅಲ್ಲದೇ ಮಾನನಷ್ಟ ಮೊಕದ್ದಮೆಯನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಿ ಎಂದು ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ (Retired Justice Kurian Joseph) ಅವರನ್ನು ಸಂಧಾನಕಾರರನ್ನಾಗಿ ನೇಮಕ ಮಾಡಿದೆ.

ಮುಖ್ಯಾಂಶಗಳು

  • IAS ರೋಹಿಣಿ ಸಿಂಧೂರಿ- IPS ಡಿ. ರೂಪಾ ನಡುವೆ ಜಟಾಪಟಿಗೆ ಬ್ರೇಕ್ ಹಾಕಲು ಮುಂದಾದ ಕೋರ್ಟ್
  • ಇಬ್ಬರ ನಡುವಿನ ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ಸಂಧಾನಕ್ಕೆ ಸೂಚನೆ
  • ಕೋರ್ಟ್‌ನ ಹೊರಗಡೆ ಇಬ್ಬರೂ ಕುಳಿತು ಮಾತನಾಡಿ ವಿವಾದ ಬಗೆಹರಿಸಿಕೊಳ್ಳಿ ಎಂದು ಕಿವಿಮಾತು
  • ಇಬ್ಬರು ಮಹಿಳಾ ಅಧಿಕಾರಿಗಳ ನಡುವೆ ರಾಜಿಗೆ ನ್ಯಾಯಾಧೀಶರನ್ನು ನೇಮಿಸಿದ ಸುಪ್ರೀಂಕೋರ್ಟ್
  • ಸಂಧಾನಕಾರರಾಗಿ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರನ್ನ ನೇಮಿಸಿದ ಸುಪ್ರೀಂ

ಸುಪ್ರೀಂ ಕೋರ್ಟ್ ಹೇಳಿದ್ದೇನು?

ಇಂದು (ಜೂನ್ 12) ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್‌ದೇವ್ ಅವರ ಪೀಠವು ,   ಇಬ್ಬರು ಉನ್ನತ ಅಧಿಕಾರಿಗಳ ನಡುವಿನ ಸುದೀರ್ಘ ಜಗಳದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇಬ್ಬರೂ ಅತ್ಯುತ್ತಮ ಅಧಿಕಾರಿಗಳು. ಆದರೆ ಈ ರೀತಿ ನ್ಯಾಯಾಲಯದ ಮೆಟ್ಟಿಲೇರಿ ಜಗಳ ಮಾಡುವ ಮೂಲಕ ಪರಸ್ಪರ ಅವರ ವೃತ್ತಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಇಬ್ಬರ ಕಡೆ ವಕೀಲರಿಗೆ ಸೂಚಿಸಿದ್ದು, ಕೋರ್ಟ್‌ನ ಹೊರಗಡೆ ಇಬ್ಬರೂ ಕುಳಿತು ಮಾತನಾಡಿ ವಿವಾದ ಬಗೆಹರಿಸಿಕೊಳ್ಳಲು ಸಂಧಾನಕಾರರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯಾಗಿರುವ ಕುರಿಯನ್ ಜೋಸೆಫ್ ಅವರನ್ನು ನೇಮಿಸಿದೆ.

ಇದನ್ನೂ ಓದಿ: ಜಡ್ಜ್​ ಮನವಿಗೂ ಬಗ್ಗದ IPS-IAS:ಸುಪ್ರೀಂಕೋರ್ಟ್​ನಲ್ಲಿ ಸಿಂಧೂರಿ-ರೂಪ ಪ್ರತಿಷ್ಠೆ ಜಿದ್ದು ಹೇಗಿತ್ತು ನೋಡಿ

ಈ ಹಿಂದೆ ರೋಹಿಣಿ ಸಿಂಧೂರಿ ಅವರು ಸಂಧಾನಕ್ಕೆ ಒಪ್ಪಿಕೊಂಡಿರಲಿಲ್ಲ. ಆದ್ರೆ, ಇಂದು ಸುಪ್ರೀಂಕೋರ್ಟ್ ಕೊಟ್ಟ ಕೆಲ ಸಲಹೆ ಸೂಚನೆಗಳ ಮೇರೆಗೆ ರೋಹಿಣಿ ಸಿಂಧೂರಿ ಈಗ ಸಂಧಾನಕ್ಕೆ ಒಪ್ಪಿಕೊಂಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಜೋಸೆಫ್ ನೇತೃತ್ವದಲ್ಲಿ ಸಂಧಾನ ಸಭೆ ನಡೆಯುವ ಸಾಧ್ಯತೆ ಇದೆ.

ಪ್ರಕರಣದ ಹಿನ್ನೆಲೆ

2023ರಲ್ಲಿ ಡಿ. ರೂಪಾ ಅವರು ರೋಹಿಣಿ ಸಿಂಧೂರಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಈ ವಿವಾದ ಆರಂಭವಾಗಿತ್ತು. ರೋಹಿಣಿ ಸಿಂಧೂರಿ ಅವರು ಜಾಲಹಳ್ಳಿಯಲ್ಲಿ ಬೃಹತ್ ಬಂಗಲೆ ನಿರ್ಮಿಸಿದ್ದಾರೆ ಮತ್ತು ತಮ್ಮ ಆಸ್ತಿ ವಿವರದಲ್ಲಿ ಅದನ್ನು ಘೋಷಿಸಿಲ್ಲ ಎಂದು ರೂಪಾ ಆರೋಪಿಸಿದ್ದರು. ಅಲ್ಲದೆ ಅವರ ಕೆಲವು ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಆರೋಪ-ಪ್ರತ್ಯಾರೋಪಗಳು ಸಾರ್ವಜನಿಕವಾಗಿ ಭಾರಿ ಸದ್ದು ಮಾಡಿದ್ದವು. ಉನ್ನತ ಅಧಿಕಾರಿಗಳ ಈ ಜಗಳದಿಂದ ಆಡಳಿತದ ಮೇಲೂ ಪರಿಣಾಮ ಬೀರುತ್ತಿರುವುದನ್ನು ಗಮನಿಸಿದ ಅಂದಿನ ರಾಜ್ಯ ಸರ್ಕಾರ, ಇಬ್ಬರೂ ಅಧಿಕಾರಿಗಳಿಗೆ ಯಾವುದೇ ಹುದ್ದೆ ನೀಡದೆ ಎತ್ತಂಗಡಿ ಮಾಡಿತ್ತು.

ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಸಿಂಧೂರಿ

ಇನ್ನು ರೂಪಾ ಅವರ ಆರೋಪಗಳಿಂದ ತಮ್ಮ ಘನತೆಗೆ ಧಕ್ಕೆಯಾಗಿದೆ ಮತ್ತು ಮಾನಸಿಕ ಕಿರುಕುಳವಾಗಿದೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ, ರೂಪಾ ಅವರಿಗೆ ಲೀಗಲ್ ನೋಟಿಸ್ ನೀಡಿದ್ದರು. ಬೇಷರತ್ ಕ್ಷಮೆಯಾಚಿಸಬೇಕು ಹಾಗೂ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದರು.

ಮಾರ್ಚ್ 2023 ರಲ್ಲಿ ಬೆಂಗಳೂರಿನ ನ್ಯಾಯಾಲಯವು ಸಿಂಧೂರಿ ಅವರ ದೂರನ್ನು ಪುರಸ್ಕರಿಸಿ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿಕೊಂಡಿತ್ತು. ಬಳಿಕ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದರಾದರೂ, ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ವಿಚಾರಣೆ ಎದುರಿಸುವಂತೆ ಸೂಚಿಸಿತ್ತು. ಇದೀಗ ಈ ಪ್ರಕರಣ ಮತ್ತೆ ಸುಪ್ರೀಂ ಕೋರ್ಟ್ ಮುಂದೆ ಬಂದಿದ್ದು, ಇಬ್ಬರ ವೃತ್ತಿಜೀವನದ ದೃಷ್ಟಿಯಿಂದ ಈ ಹಗೆತನವನ್ನು ಕೈಬಿಟ್ಟು, ನಿವೃತ್ತ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದೆ. ಈ ಮೂಲಕ ಕೋರ್ಟ್, ಹಲವು ವರ್ಷಗಳಿಂದ ಇಬ್ಬರು ಅಧಿಕಾರಿಗಳ ನಡುವಿನ ನಡೆಯುತ್ತಿದ್ದ ಜಟಾಪಟಿಗೆ ಬ್ರೇಕ್ ಹಾಕಲು ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 9:07 pm, Fri, 12 June 26

Source link

ವಾರದ ಪ್ರೇಮ ಭವಿಷ್ಯ: ಜೂನ್ 14ರಿಂದ 20ರವರೆಗೆ ಪ್ರೀತಿಯ ಲೋಕದಲ್ಲಿ ಅಚ್ಚರಿಯ ಚಮತ್ಕಾರ!; ಈ ರಾಶಿಯವರಿಗೆ ಸಿಗಲಿದೆ ಸಂಗಾತಿಯ ಗಿಫ್ಟ್ – Kannada News | Love Horoscope June 14 20: Romantic Forecast and Surprising Turns for All Zodiacs

ಜೂನ್ 14ರಿಂದ ಜೂನ್ 20ರವರೆಗೆ ಪ್ರೇಮದಲ್ಲಿ ಅನೇಕ ಅಚ್ಚರಿಯ ಸಂಗತಿಗಳು ನಡೆಯಲಿವೆ. ಶುಕ್ರನು ಚಂದ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಅನಿರೀಕ್ಷಿತವಾದ ರೋಮಾಂಚನದ ಕ್ಷಣಗಳು ನಿಮ್ಮದಾಗಲಿದೆ.

ಮೇಷ ರಾಶಿ :

ಹೃದಯದ ಬಡಿತಕ್ಕೆ ಹೊಸ ಲಯ ಸಿಗಲಿದ್ದು, ಮಂಗಳನ ಪ್ರಭಾವದಿಂದ ಪ್ರೀತಿಯಲ್ಲಿ ರೋಮಾಂಚನ ಕಾದಿದೆ. ಕಣ್ಣಲ್ಲೇ ಸನ್ನೆ ಮಾಡಿ ಮನಸ್ಸು ಕದಿಯುವಿರಿ. ಸಂಗಾತಿಯೊಂದಿಗೆ ಸುಂದರ ಪಯಣಕ್ಕೆ ಸಕಾಲವಿದು.

​ವೃಷಭ ರಾಶಿ :

​ಮೌನ ಕರಗಿ, ಒಲವಿನ ಮಾತು ಚಿಗುರುವುದು. ನಿಮ್ಮ ಪ್ರೀತಿಯ ಆಳ ಸಂಗಾತಿಗೆ ಮನವರಿಕೆಯಾಗಲಿದೆ. ಮುನಿಸುಗಳೆಲ್ಲಾ ಮರೆಯಾಗಿ, ಒಲವಿನ ಹೂವು ಅರಳಲಿದೆ. ಕಂಕಣ ಭಾಗ್ಯಕ್ಕೆ ದಾರಿಯಾಗುವ ಮಧುರ ವಾರವಿದು.

​ಮಿಥುನ ರಾಶಿ :

​ಮಾತುಗಳೇ ಮಂತ್ರವಾಗಿ ಹೃದಯ ಗೆಲ್ಲುವ ಕ್ಷಣವಾಗಲಿದೆ. ನಿಮ್ಮ ಮಾತುಗಳಿಗೆ ಸಂಗಾತಿ ಫಿದಾ ಆಗಲಿದ್ದಾರೆ. ಪ್ರೇಮದ ಸುಳಿಯಲ್ಲಿ ಸಿಲುಕಿ ಹೊಸ ಲೋಕವನ್ನೇ ಸೃಷ್ಟಿಸುವಿರಿ. ಪ್ರೀತಿಯಲ್ಲಿ ನೆನಪಿನಲ್ಲಿ ಉಳಿಯುವಂತಹ ರೋಮಾಂಚನಕಾರಿ ತಿರುವು ಸಿಗಲಿದೆ.

​ಕರ್ಕಾಟಕ ರಾಶಿ :

ಈ ರಾಶಿಯಲ್ಲಿ ​ಶುಕ್ರನ ವಾಸ, ಒಲವಿನ ಸಾಮ್ರಾಜ್ಯದಲ್ಲಿ ಹೊಸ ಹರ್ಷ. ನಿಮ್ಮ ರಾಶಿಯ ಶುಕ್ರ ಪ್ರೇಮದ ಮಳೆ ಸುರಿಸಲಿದ್ದಾನೆ. ಸಂಗಾತಿಯ ತೋಳಿನಲ್ಲಿ ಸ್ವರ್ಗ ಸುಖ ಕಾಣುವಿರಿ, ಆತ್ಮೀಯತೆ ದುಪ್ಪಟ್ಟಾಗಲಿದೆ.

​ಸಿಂಹ ರಾಶಿ :

​ಚಂದಿರನ ಬೆಳಕಿನಲ್ಲಿ ಪ್ರೇಮದ ಕಾವ್ಯ ಮೂಡುವುದಿದೆ. ಭಾವನೆಗಳ ಅಲೆ ನಿಮ್ಮನ್ನು ಸಂಗಾತಿಯ ಹತ್ತಿರ ತರಲಿದೆ. ಪ್ರೀತಿಯಲ್ಲಿ ನಿಷ್ಠೆ ಹೆಚ್ಚಲಿದ್ದು, ವಿಶೇಷ ಉಡುಗೊರೆಯೊಂದಿಗೆ ಅವರ ಮನಸ್ಸನ್ನು ಸಂಪೂರ್ಣವಾಗಿ ಗೆಲ್ಲುವಿರಿ.

​ಕನ್ಯಾ ರಾಶಿ :

​ವಾದಗಳನ್ನು ಬದಿಗಿಟ್ಟು, ಪ್ರೀತಿಯ ಗೀತೆ ಹಾಡುವ ಸಮಯ. ಮನಸ್ಸಿನ ಗೊಂದಲಗಳು ದೂರವಾಗಿ ಸಂಗಾತಿಯ ಸನಿಹ ಸುಖ ನೀಡಲಿದೆ. ಪ್ರೇಮಕ್ಕೆ ಕುಟುಂಬದ ಹರಕೆ ಸಿಗುವ ಸುವರ್ಣ ಅವಕಾಶವಿದೆ. ಪ್ರೀತಿ ಮಾಗುವ ಸುಂದರ ದಿನಗಳಿವು.

​ತುಲಾ ರಾಶಿ :

​ಹೃದಯಗಳು ಒಂದಾಗಿ, ಪ್ರೇಮದ ಹೆಜ್ಜೆ ಇಡುವ ಕಾಲ. ಸಂಗಾತಿಯ ಕಣ್ಣಲ್ಲೇ ನಿಮ್ಮ ಜಗತ್ತನ್ನು ಕಾಣುವಿರಿ. ಪ್ರೀತಿಯ ಸಂಬಂಧ ಮುಂದಿನ ಹಂತಕ್ಕೆ ತಲುಪಲು ಈ ವಾರ ಹೆಜ್ಜೆಯಿಡಲಿದ್ದೀರಿ. ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲಿದೆ.

​ವೃಶ್ಚಿಕ ರಾಶಿ :

​ಸಂಶಯದ ಮೋಡ ಸರಿದು, ಪ್ರೇಮದ ಸೂರ್ಯ ಮೂಡುವ ವಾರವಿದು. ನಿಮ್ಮ ನಿಗೂಢ ಪ್ರೀತಿ ಈಗ ಬಹಿರಂಗವಾಗುವ ಸಮಯ. ಸಂಗಾತಿಯ ನಂಬಿಕೆ ನಿಮ್ಮಲ್ಲಿ ಹೊಸ ಚೈತನ್ಯ ತುಂಬಲಿದೆ. ಪ್ರೇಮ ಸಾಮ್ರಾಜ್ಯದಲ್ಲಿ ನೀವೇ ರಾಜ ಮತ್ತು ರಾಣಿಯರು.

​ಧನು ರಾಶಿ :

​ಹೊಸ ಕನಸು, ಹೊಸ ಒಲವು ಮೂಡುವ ರಂಗಿನ ದಿನಗಳು ನಿಮಗೆ. ಒಂಟಿತನಕ್ಕೆ ಬ್ರೇಕ್ ಬೀಳಲಿದೆ. ಹೊಸಬರ ಪ್ರವೇಶದಿಂದ ಮನಸ್ಸು ತೇಲಲಿದೆ. ಹಳಬರ ಮುನಿಸು ಕರಗಿ, ಪ್ರೀತಿಯ ಸವಿ ಸಿಗುವ ಅದ್ಭುತ ವಾರವಿದು.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ?

ಮಕರ ರಾಶಿ :

​ನಂಬಿಕೆಯ ತಳಹದಿಯ ಮೇಲೆ ಪ್ರೇಮದ ಅರಮನೆ ನಿರ್ಮಾಣವಾಗಲಿ. ಮಾತಗಿಂತ ಕೃತಿಯಲ್ಲಿ ಪ್ರೀತಿ ತೋರಿಸುವಿರಿ. ಸಂಗಾತಿಯ ಜವಾಬ್ದಾರಿಯುತ ನಡವಳಿಕೆ ನಿಮ್ಮಲ್ಲಿ ನೆಮ್ಮದಿ ತರಲಿದೆ. ಪ್ರೇಮ ಜೀವನದಲ್ಲಿ ಸ್ಥಿರತೆ ಮತ್ತು ಗೌರವ ಹೆಚ್ಚಾಗಲಿದೆ.

​ಕುಂಭ ರಾಶಿ :

​ಹಠ ಬಿಟ್ಟು ಒಲವಿಗೆ ಶರಣಾಗುವ ಮಧುರ ಕ್ಷಣ ಬರಲಿದೆ. ಸಂಗಾತಿಯ ಸಣ್ಣ ಮುನಿಸನ್ನು ಪ್ರೀತಿಯಿಂದಲೇ ಗೆಲ್ಲುವಿರಿ. ವಾರಾಂತ್ಯದಲ್ಲಿ ದೂರವಿಹಾರ ನಿಮ್ಮ ಪ್ರೇಮದ ರಂಗನ್ನು ಮತ್ತಷ್ಟು ಹೆಚ್ಚಿಸಲಿದೆ.

​ಮೀನ ರಾಶಿ :

​ಶನಿಯ ಸ್ಥಿರತೆಯಲ್ಲಿ, ಅಮರ ಪ್ರೇಮದ ಪಿಸುಮಾತು ಬರಲಿದೆ. ಮೀನದ ಶನಿ ಪ್ರೀತಿಗೊಂದು ಜವಾಬ್ದಾರಿ ನೀಡಲಿದ್ದಾನೆ. ಸಂಗಾತಿಯ ಮೌನವನ್ನೂ ಅರ್ಥೈಸಿಕೊಂಡು, ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಅನುಭವಿಸುವಿರಿ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಮೊದಲ ಪಂದ್ಯಕ್ಕೆ ಹೇಗಿರಲಿದೆ ಪ್ಲೇಯಿಂಗ್ 11? ಕೊಹ್ಲಿ, ಪಾಂಡ್ಯ ಸ್ಥಾನ ತುಂಬುವವರು ಯಾರು? – Kannada News | India vs Afghanistan 1st ODI:Probable Playing XI, Kohli and Pandya Replacements

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More

Source link

ಥಲಸ್ಸೆಮಿಯಾ ಅಪಾಯಕಾರಿಯೇ? ಮದುವೆ ಅಥವಾ ಗರ್ಭಧಾರಣೆಗೂ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಯಾಕೆ ಮುಖ್ಯ? – Kannada News | How Genetic Blood Disorder Thalassemia Affects Children’s Health

ಥಲಸ್ಸೆಮಿಯಾ (Thalassemia) ಒಂದು ಗಂಭೀರವಾದ ಜೆನೆಟಿಕ್ ರಕ್ತ ಸಂಬಂಧಿ ಕಾಯಿಲೆಯಾಗಿದೆ. ಇದು ಪೋಷಕರಿಂದ ಮಕ್ಕಳಿಗೆ ಜೀನ್ಸ್ ಮೂಲಕ ಬರಬಹುದು. ಭಾರತದಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಥಲಸ್ಸೆಮಿಯಾ ಮೇಜರ್ ಸಮಸ್ಯೆಯೊಂದಿಗೆ ಜನಿಸುತ್ತಿದ್ದಾರೆ. ಆರಂಭಿಕ ಹಂತದಲ್ಲಿ ಲಕ್ಷಣಗಳು ಸ್ಪಷ್ಟವಾಗಿ ಕಾಣಿಸಿಕೊಳ್ಳದ ಕಾರಣ, ಹಲವರು ಇದನ್ನು ಸಾಮಾನ್ಯ ರಕ್ತಹೀನತೆ ಅಥವಾ ದೌರ್ಬಲ್ಯ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಹಾಗಾದರೆ ಥಲಸ್ಸೆಮಿಯಾ ಎಂದರೇನು? ಇದರ ಲಕ್ಷಣಗಳು ಹೇಗಿರುತ್ತವೆ ಮತ್ತು ಇದು ಎಷ್ಟು ಅಪಾಯಕಾರಿ ಎಂಬುದರ ಬಗ್ಗೆ ತಿಳಿದುಕೊಳ್ಳಿ. ಈ ಬಗ್ಗೆ ಸ್ವಲ್ಪ ಮಟ್ಟಿನ ಅರಿವಿದ್ದಾಗ ಇಂತಹ ಆರೋಗ್ಯ ಸಮಸ್ಯೆಗಳನ್ನು ತಡೆಯಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಥಲಸ್ಸೆಮಿಯಾ ಎಂದರೇನು?

ಥಲಸೆಮಿಯಾ ಎನ್ನುವುದು ದೇಹದಲ್ಲಿ ಸರಿಯಾದ ಪ್ರಮಾಣದ ಹಿಮೋಗ್ಲೋಬಿನ್ ಉತ್ಪಾದನೆ ಆಗದಿರುವ ಸ್ಥಿತಿ. ಹಿಮೋಗ್ಲೋಬಿನ್ ಕಡಿಮೆಯಾದಾಗ ದೇಹಕ್ಕೆ ಆಮ್ಲಜನಕ ಸರಿಯಾಗಿ ತಲುಪುವುದಿಲ್ಲ. ಇದರ ಪರಿಣಾಮವಾಗಿ ಮಕ್ಕಳಲ್ಲಿ ದೌರ್ಬಲ್ಯ, ಬೆಳವಣಿಗೆ ಸಮಸ್ಯೆಗಳು ಮತ್ತು ಹಲವು ಆರೋಗ್ಯ ತೊಂದರೆಗಳು ಕಾಣಿಸಿಕೊಳ್ಳುತ್ತವೆ.

ಮಕ್ಕಳಲ್ಲಿ ಕಾಣಿಸಿಕೊಳ್ಳುವ ಲಕ್ಷಣಗಳು

  • ಸದಾ ದಣಿವು ಮತ್ತು ಶಕ್ತಿಹೀನತೆ
  • ಚರ್ಮ ಬಿಳಿಯಾಗುವುದು
  • ತೂಕ ಮತ್ತು ಎತ್ತರ ಸರಿಯಾಗಿ ಹೆಚ್ಚದಿರುವುದು
  • ಆಗಾಗ ಜ್ವರ ಅಥವಾ ಸೋಂಕು
  • ಆಹಾರ ಆಸಕ್ತಿ ಕಡಿಮೆಯಾಗುವುದು
  • ಮುಖದ ಎಲುಬುಗಳಲ್ಲಿ ಬದಲಾವಣೆಗಳು ಕಾಣಿಸಿಕೊಳ್ಳುವುದು

ಥಲಸ್ಸೆಮಿಯಾ ಅಪಾಯಕಾರಿಯೇ?

ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಥಲಸ್ಸೆಮಿಯಾ ಮೇಜರ್ ಸಮಸ್ಯೆಯಾಗಬಹುದು. ಇದರಿಂದ ಹೃದಯ, ಲಿವರ್ ಹಾಗೂ ಇತರ ಪ್ರಮುಖ ಅಂಗಾಂಗಗಳಿಗೆ ಹಾನಿಯಾಗುವ ಸಾಧ್ಯತೆ ಇದೆ. ಕೆಲವರಿಗೆ ಜೀವಪೂರ್ತಿ ರಕ್ತ ತುಂಬಿಸುವ (Blood Transfusion) ಅಗತ್ಯವೂ ಬರಬಹುದು. ತಜ್ಞರ ಪ್ರಕಾರ, ಮದುವೆಗೂ ಮೊದಲು ಅಥವಾ ಗರ್ಭಧಾರಣೆಗೆ ಮುನ್ನ ಸರಳ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ತಾಯಿ ಮತ್ತು ತಂದೆ ಇಬ್ಬರೂ ಥಲಸ್ಸೆಮಿಯಾ ಕ್ಯಾರಿಯರ್ ಆಗಿದ್ದರೆ, ಮಗುವಿಗೆ ಈ ಕಾಯಿಲೆ ಬರುವ ಸಾಧ್ಯತೆ 25% ಇರುತ್ತದೆ. ಆದ್ದರಿಂದ ಪ್ರೀ-ಮ್ಯಾರಿಟಲ್ ಸ್ಕ್ರೀನಿಂಗ್, ಜೆನೆಟಿಕ್ ಕೌನ್ಸೆಲಿಂಗ್, ಗರ್ಭಧಾರಣೆಗೆ ಮುನ್ನ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಒಳ್ಳೆಯದು ಇವು ಥಲಸ್ಸೆಮಿಯಾ ತಡೆಗಟ್ಟಲು ಸಹಾಯಕವಾಗುತ್ತವೆ.

ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಥಲಸೆಮಿಯಾ ಚಿಕಿತ್ಸೆಯಲ್ಲಿ ಸಾಕಷ್ಟು ಪ್ರಗತಿ ಕಂಡುಬಂದಿದೆ. ನಿಯಮಿತ ರಕ್ತ ತುಂಬಿಸುವುದು, ಐರನ್ ನಿಯಂತ್ರಣ ಔಷಧಿಗಳು ಮತ್ತು ಕೆಲವು ಸಂದರ್ಭಗಳಲ್ಲಿ ಬೋನ್ ಮ್ಯಾರೋ ಟ್ರಾನ್ಸ್‌ಪ್ಲಾಂಟ್ ಪರಿಣಾಮಕಾರಿ ಚಿಕಿತ್ಸೆ ಎಂದು ಪರಿಗಣಿಸಲಾಗುತ್ತಿದೆ. ಜೀನ್ ಥೆರಪಿ ಕುರಿತ ಸಂಶೋಧನೆಯೂ ಭವಿಷ್ಯದಲ್ಲಿ ಹೊಸ ಆಶಾಕಿರಣ ಮೂಡಿಸಿದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೃಶ್ಯಂ 3: ಮೋಹನ್​ಲಾಲ್ ಕಾರ್ ನಂಬರ್​ನಿಂದ ರೈತನಿಗೆ ಮಾನಸಿಕ ಕಿರಿಕಿರಿ; ದಾಖಲಾಯ್ತು ದೂರು – Kannada News | Mohanlal Drishyam 3 movie Legal Trouble Car Registration Number Plate row

ಮಲಯಾಳಂ ಚಿತ್ರರಂಗದಲ್ಲಿ ಇತ್ತೀಚೆಗಷ್ಟೇ ತೆರೆಕಂಡು ಭರ್ಜರಿ ಕಲೆಕ್ಷನ್ ಮಾಡುತ್ತಿರುವ ಸೂಪರ್ ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಸಿನಿಮಾ ಈಗ ಅನಿರೀಕ್ಷಿತ ಕಾನೂನು ಸಂಕಷ್ಟಕ್ಕೆ ಸಿಲುಕಿದೆ. ಚಿತ್ರದಲ್ಲಿ ಜಾರ್ಜ್‌ಕುಟ್ಟಿ (ಮೋಹನ್‌ಲಾಲ್) ಚಲಾಯಿಸುವ ಕಾರಿನ ನಂಬರ್ (Drishyam 3 Car Number) ಪ್ಲೇಟನ್ನು ತನ್ನ ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಇಡುಕ್ಕಿ ಜಿಲ್ಲೆಯ ರೈತರೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ.

ಕೇರಳದ ಇಡುಕ್ಕಿ ಜಿಲ್ಲೆಯ ಕುಂಚಿತ್ತಣ್ಣಿ ನಿವಾಸಿ, ರೈತ ಆರ್.ಡಿ. ರಾಜೀವ್ ಎಂಬುವರು ಮುನ್ನಾರ್ ಪೊಲೀಸರಿಗೆ ಚಿತ್ರದ ನಿರ್ಮಾಪಕ ಆಂಟೋನಿ ಪೆರುಂಬಾವೂರ್ ಮತ್ತು ನಿರ್ದೇಶಕ ಜೀತು ಜೋಸೆಫ್ ವಿರುದ್ಧ ಅಧಿಕೃತ ದೂರು ನೀಡಿದ್ದಾರೆ. ‘ದೃಶ್ಯಂ 3’ ಚಿತ್ರದಲ್ಲಿ ಮೋಹನ್‌ಲಾಲ್ ಅವರ ಪಾತ್ರ ಚಲಾಯಿಸುವ ವಾಹನಕ್ಕೆ ಬಳಸಿರುವ ‘KL 69 D 2772’ ನೋಂದಣಿ ಸಂಖ್ಯೆ ತಮಗೆ ಸೇರಿದ್ದಾಗಿದೆ ಎಂದು ರಾಜೀವ್ ಆರೋಪಿಸಿದ್ದಾರೆ.

ರಾಜೀವ್ ಅವರ ಸ್ನೇಹಿತರು ಥಿಯೇಟರ್‌ನಲ್ಲಿ ಸಿನಿಮಾ ನೋಡುತ್ತಿದ್ದಾಗ ಈ ನಂಬರ್ ಪ್ಲೇಟ್ ಗಮನಿಸಿ ಅವರಿಗೆ ತಿಳಿಸಿದ್ದಾರೆ. ತದನಂತರ ಸ್ವತಃ ರಾಜೀವ್ ಅವರೇ ಚಿತ್ರವನ್ನು ವೀಕ್ಷಿಸಿ ಈ ವಿಷಯವನ್ನು ಖಚಿತಪಡಿಸಿಕೊಂಡಿದ್ದಾರೆ. ವಿಶೇಷವೆಂದರೆ, ರಾಜೀವ್ ಅವರದ್ದು, ಬಿಳಿ ಬಣ್ಣದ ಮಹೀಂದ್ರಾ ಸ್ಕಾರ್ಪಿಯೋ ಕಾರು. ಚಿತ್ರದಲ್ಲಿ ಇದೇ ನಂಬರ್ ಅನ್ನು ಮತ್ತೊಂದು ಮಾಡೆಲ್‌ನ ವಾಹನಕ್ಕೆ ಬಳಸಲಾಗಿದೆ.

ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿದ್ದಂತೆ ಇತ್ತ ರಾಜೀವ್ ಅವರಿಗೆ ಮಾನಸಿಕ ಕಿರಿಕಿರಿ ಶುರುವಾಗಿದೆ. ಸಾರ್ವಜನಿಕರು ಮತ್ತು ಯುವ ಪೀಳಿಗೆಯವರು ರಸ್ತೆಯಲ್ಲಿ ಅವರ ಕಾರನ್ನು ನೋಡಿದಾಗ ‘ದೃಶ್ಯಂ ವಾಹನ’ ಎಂದು ಕರೆಯುತ್ತಿದ್ದು, ಅವರನ್ನು ‘ದೃಶ್ಯಂ ರಾಜೀವ್’ ಎಂದು ಚುಡಾಯಿಸುತ್ತಿದ್ದಾರಂತೆ. ಸಿನಿಮಾದ ಕಾಲ್ಪನಿಕ ಕ್ರಿಮಿನಲ್ ಕಥೆಯೊಂದಿಗೆ ತನ್ನ ವಾಹನದ ನಂಬರ್ ಲಿಂಕ್ ಆಗಿರುವುದರಿಂದ ಭವಿಷ್ಯದಲ್ಲಿ ತನಗೆ ಕಾನೂನು ತೊಡಕುಗಳು ಎದುರಾಗಬಹುದು ಎಂದು ರಾಜೀವ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನ್ನಡಕ್ಕೆ ಬರಲ್ಲ ದೃಶ್ಯಂ 3; ನಿರ್ದೇಶಕ ಜೀತು ಜೋಸೆಫ್ ಬಿಚ್ಚಿಟ್ಟ ಅಸಲಿ ಕಾರಣ

ತಮ್ಮ ದೂರಿನೊಂದಿಗೆ ವಾಹನದ ಅಸಲಿ ಆರ್‌ಸಿ (RC) ಪ್ರತಿಯನ್ನು ಪೊಲೀಸರಿಗೆ ಸಲ್ಲಿಸಿರುವ ರಾಜೀವ್, ಚಿತ್ರತಂಡ ತನಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಮತ್ತು ವಿವಾದಿತ ನಂಬರ್ ಪ್ಲೇಟ್ ಇರುವ ದೃಶ್ಯಗಳನ್ನು ತಕ್ಷಣವೇ ಚಿತ್ರದಿಂದ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುನ್ನಾರ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶನಿಯ ಮನೆಯಲ್ಲಿ ರಾಹುವಿನ ನಕ್ಷತ್ರದಲ್ಲಿಯೇ ರಾಹುವಿನ ಸಂಚಾರ .. ಆಗಲಿದೆ ಅನೇಕ ಚಮತ್ಕಾರ… – Kannada News | June Astrology Forecast 2026: Rahu, Shani, Guru, Shukra Effects on Your Zodiac

ಜೂನ್ ತಿಂಗಳಲ್ಲಿ ಕುಂಭ ರಾಶಿಯಲ್ಲಿ ರಾಹುವಿನ ಸಂಚಾರವಾಗಲಿದ್ದು ಶನಿ, ರವಿ, ಗುರು ಮತ್ತು ಶುಕ್ರರ ವಿವಿಧ ವರ್ಗ ಪ್ರಭಾವಗಳಲ್ಲಿ ಸಂಚರಿಸುವುದರಿಂದ, ಹನ್ನೆರಡು ರಾಶಿಗಳ ಮೇಲೆ ಮಿಶ್ರ ಫಲಗಳು ಉಂಟಾಗಲಿವೆ. ಶತಭಿಷಾ ನಕ್ಷತ್ರದಲ್ಲಿ ಇದ್ದು, ಇದರ ಅಧಿಪತಿ ರಾಹುವೇ ಆಗಿರುವುದು ವಿಶೇಷ.

​ಮೇಷ ರಾಶಿ

​ಆದಾಯದ ಮೂಲಗಳು ಹೆಚ್ಚಲಿವೆ. ಹಳೆಯ ಬಾಕಿ ವಸೂಲಾಗಲಿದೆ. ಸ್ನೇಹಿತರಿಂದ ಮತ್ತು ಹಿರಿಯರಿಂದ ಉತ್ತಮ ಬೆಂಬಲ ಸಿಗಲಿದೆ. ಆದರೆ, ಉದ್ಯೋಗದಲ್ಲಿ ಸ್ವಲ್ಪ ಒತ್ತಡವಿರುತ್ತದೆ. ಆರೋಗ್ಯದ ಕಡೆ ಗಮನವಿರಲಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಒಟ್ಟಾರೆಯಾಗಿ ಇದು ನಿಮಗೆ ಪ್ರಗತಿಯನ್ನು ನೀಡುವ ಸುಂದರವಾದ ಮತ್ತು ಲಾಭದಾಯಕ ತಿಂಗಳಾಗಿದೆ.

ವೃಷಭ ರಾಶಿ

​ಉದ್ಯೋಗ ಕ್ಷೇತ್ರದಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರಲಿವೆ. ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗೆ ಉತ್ತಮ ಸಮಯವಿದು. ಆದರೆ, ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು. ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು. ನಾಯಕತ್ವದ ಗುಣಗಳು ನಿಮಗೆ ಸಮಾಜದಲ್ಲಿ ಗೌರವವನ್ನು ತಂದುಕೊಡಲಿವೆ.

ಮಿಥುನ ರಾಶಿ

​ದೂರದ ಪ್ರಯಾಣ ಅಥವಾ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಭಾಗ್ಯೋದಯಕ್ಕೆ ಹೊಸ ಅವಕಾಶಗಳು ಸಿಗಲಿವೆ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕಚೇರಿಯಲ್ಲಿ ಮೇಲಧಿಕಾರಿಗಳೊಂದಿಗೆ ವಾದ ಮಾಡಬೇಡಿ. ಆರ್ಥಿಕ ಪರಿಸ್ಥಿತಿ ಸಾಧಾರಣವಾಗಿರುತ್ತದೆ. ಕಠಿಣ ಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಶಿವನ ಆರಾಧನೆಯು ನಿಮಗೆ ಮಾನಸಿಕ ಶಾಂತಿಯನ್ನು ನೀಡುತ್ತದೆ.

ಕರ್ಕಾಟಕ ರಾಶಿ

​ಆರೋಗ್ಯದ ಬಗ್ಗೆ ಅತಿಯಾದ ಜಾಗ್ರತೆ ಇರಲಿ. ಹಠಾತ್ ಧನನಷ್ಟ ಅಥವಾ ಹಠಾತ್ ಧನಲಾಭದ ಸಾಧ್ಯತೆ ಇದೆ. ವಾಹನ ಚಾಲನೆ ಮಾಡುವಾಗ ಎಚ್ಚರದಿಂದಿರಿ. ವಿನಾಕಾರಣ ಯಾರೊಂದಿಗೂ ಜಗಳಕ್ಕೆ ಹೋಗಬೇಡಿ. ಮಾನಸಿಕವಾಗಿ ಸ್ವಲ್ಪ ಆತಂಕವಿರಬಹುದು. ಆದರೆ, ಆಧ್ಯಾತ್ಮಿಕ ಚಿಂತನೆಗಳು ನಿಮಗೆ ಧೈರ್ಯ ನೀಡುತ್ತವೆ. ಹಿರಿಯರ ಮಾರ್ಗದರ್ಶನವನ್ನು ತಪ್ಪದೇ ಪಾಲಿಸಿ.

ಸಿಂಹ ರಾಶಿ

​ವೈವಾಹಿಕ ಜೀವನದಲ್ಲಿ ಮತ್ತು ಪಾಲುದಾರಿಕೆ ವ್ಯವಹಾರದಲ್ಲಿ ಮಿಶ್ರ ಫಲವಿರಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಸಾರ್ವಜನಿಕ ಜೀವನದಲ್ಲಿ ನಿಮ್ಮ ಕೀರ್ತಿ ಹೆಚ್ಚಲಿದೆ. ಹೊಸ ಒಪ್ಪಂದಗಳಿಗೆ ಸಹಿ ಮಾಡುವ ಮುನ್ನ ಯೋಚಿಸಿ. ಉದ್ಯೋಗದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಅನಗತ್ಯ ಕೋಪವನ್ನು ನಿಯಂತ್ರಿಸುವುದು ಈ ತಿಂಗಳು ಅತ್ಯಂತ ಅವಶ್ಯಕವಾಗಿದೆ.

ಕನ್ಯಾ ರಾಶಿ

​ಶತ್ರುಗಳ ಮೇಲೆ ಜಯ ಸಿಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ಪಡೆಯುವಿರಿ. ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆದರೆ, ಸಣ್ಣಪುಟ್ಟ ವಿಷಯಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕೋರ್ಟ್ ಕಚೇರಿ ಕೆಲಸಗಳು ಸುಲಭವಾಗಿ ಬಗೆಹರಿಯಲಿವೆ. ಆರ್ಥಿಕವಾಗಿ ಲಾಭದಾಯಕ ದಿನಗಳು ಇವಾಗಿವೆ.

​ತುಲಾ ರಾಶಿ

​ಮಕ್ಕಳ ವಿಷಯದಲ್ಲಿ ಸ್ವಲ್ಪ ಕಳವಳ ಉಂಟಾಗಬಹುದು. ಪ್ರೇಮ ಜೀವನದಲ್ಲಿ ತಪ್ಪು ತಿಳುವಳಿಕೆಗಳು ಬರದಂತೆ ನೋಡಿಕೊಳ್ಳಿ. ಷೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟದ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ. ಉದ್ಯೋಗದಲ್ಲಿ ಬುದ್ಧಿವಂತಿಕೆಯಿಂದ ಕೆಲಸ ನಿರ್ವಹಿಸಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ಆದಾಯವು ಸಾಮಾನ್ಯವಾಗಿದ್ದರೂ, ಸೃಜನಶೀಲ ಕೆಲಸಗಳಿಗೆ ಉತ್ತಮ ಮನ್ನಣೆ ದೊರೆಯಲಿದೆ.

ವೃಶ್ಚಿಕ ರಾಶಿ

​ಸ್ಥಿರ ಆಸ್ತಿ ಅಥವಾ ವಾಹನ ಖರೀದಿಯ ಯೋಗವಿದೆ. ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಮನೆಯಲ್ಲಿ ಶಾಂತಿ ಕದಡದಂತೆ ತಾಳ್ಮೆಯಿಂದಿರಿ. ಕಚೇರಿಯಲ್ಲಿ ಕೆಲಸದ ಒತ್ತಡ ಹೆಚ್ಚಾಗಬಹುದು. ಧನಲಾಭಕ್ಕೆ ಹೊಸ ಮಾರ್ಗಗಳು ಸುಲಭವಾಗಿ ಸಿಗಲಿವೆ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡಲಿದೆ. ಸಾರ್ವಜನಿಕವಾಗಿ ನಿಮ್ಮ ಗೌರವ ವೃದ್ಧಿಸಲಿದೆ.

ಧನು ರಾಶಿ

​ನಿಮ್ಮ ಆತ್ಮವಿಶ್ವಾಸ ಮತ್ತು ಪರಾಕ್ರಮ ಹೆಚ್ಚಾಗಲಿದೆ. ಸಹೋದರರೊಂದಿಗೆ ಬಾಂಧವ್ಯ ಸುಧಾರಿಸಲಿದೆ. ಸಣ್ಣ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. ಸಮಾಜದಲ್ಲಿ ನಿಮ್ಮ ಗೌರವ ಮತ್ತು ಕೀರ್ತಿ ಹೆಚ್ಚಾಗಲಿದೆ. ಉದ್ಯೋಗ ಬದಲಾವಣೆಗೆ ಇದು ಸಕಾಲ. ನಿಮ್ಮ ಸೃಜನಶೀಲ ಆಲೋಚನೆಗಳಿಗೆ ಸೂಕ್ತವಾದ ಮನ್ನಣೆ ಸಿಗಲಿದೆ. ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಾಗಿರುತ್ತದೆ.

ಮಕರ ರಾಶಿ

​ಮಾತಿನ ಮೇಲೆ ನಿಗಾ ಇರಲಿ, ಇಲ್ಲದಿದ್ದರೆ ಸಂಬಂಧಗಳು ಹಾಳಾಗಬಹುದು. ಆರ್ಥಿಕವಾಗಿ ಆದಾಯ ಹೆಚ್ಚಿದರೂ, ಅಷ್ಟೇ ವೇಗವಾಗಿ ಖರ್ಚು ಕೂಡ ಆಗಬಹುದು. ಕಣ್ಣು ಅಥವಾ ಹಲ್ಲಿನ ನೋವು ಕಾಣಿಸಿಕೊಳ್ಳಬಹುದು. ಕೌಟುಂಬಿಕ ವಿಷಯಗಳಲ್ಲಿ ಹಿರಿಯರ ಸಲಹೆ ಪಡೆದು ಮುನ್ನಡೆಯಿರಿ. ಹೂಡಿಕೆ ಮಾಡುವಾಗ ಜಾಗರೂಕರಾಗಿರಿ. ಕಠಿಣ ಪರಿಶ್ರಮದಿಂದ ಮಾತ್ರ ಧನಸಂಗ್ರಹ ಮಾಡಲು ಸಾಧ್ಯವಾಗುತ್ತದೆ.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಜೂನ್ 14ರಿಂದ 20ರವರೆಗೆ ಈ ರಾಶಿಯವರಿಗೆ ಸಿಗಲಿದೆ ಪ್ರಮೋಷನ್; ನಿಮ್ಮ ರಾಶಿಯ ಉದ್ಯೋಗ ಯೋಗ ಹೇಗಿದೆ?

ಕುಂಭ ರಾಶಿ

​ರಾಹು ನಿಮ್ಮ ರಾಶಿಯಲ್ಲೇ ಇರುವುದರಿಂದ ಮಾನಸಿಕ ಗೊಂದಲಗಳು ಹೆಚ್ಚಾಗಬಹುದು. ಯಾವುದೇ ಪ್ರಮುಖ ನಿರ್ಧಾರಗಳನ್ನು ಯೋಚಿಸಿ ತೆಗೆದುಕೊಳ್ಳಿ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ. ಸಮಾಜದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಆದಾಗ್ಯೂ, ಸಂಗಾತಿಯೊಂದಿಗೆ ಸಣ್ಣ ವೈಮನಸ್ಸು ಬರಬಹುದು. ತಾಳ್ಮೆ ಮತ್ತು ಸಕಾರಾತ್ಮಕ ಆಲೋಚನೆಗಳಿಂದ ಎಲ್ಲ ಸವಾಲುಗಳನ್ನು ಸುಲಭವಾಗಿ ಎದುರಿಸಲು ಸಾಧ್ಯವಾಗುತ್ತದೆ.

ಮೀನ ರಾಶಿ

​ವಿದೇಶಿ ಮೂಲಗಳಿಂದ ಲಾಭ ಸಿಗಲಿದೆ. ಆದರೆ, ಅನಗತ್ಯ ಖರ್ಚುಗಳು ಹೆಚ್ಚಾಗಲಿವೆ. ನಿದ್ರಾಹೀನತೆ ಅಥವಾ ಕಣ್ಣಿನ ತೊಂದರೆ ಕಾಡಬಹುದು. ಕೋರ್ಟ್ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಯಾರೊಂದಿಗೂ ಜಾಮೀನು ಇರಬೇಡಿ. ಆಧ್ಯಾತ್ಮಿಕ ಕಾರ್ಯಗಳಿಗಾಗಿ ಹಣ ವ್ಯಯಿಸುವಿರಿ. ವೃತ್ತಿಜೀವನದಲ್ಲಿ ಸಣ್ಣ ಸವಾಲುಗಳು ಎದುರಾಗಬಹುದು. ಹಿರಿಯರ ಆಶೀರ್ವಾದ ಮತ್ತು ದೈವಭಕ್ತಿ ನಿಮ್ಮನ್ನು ಕಷ್ಟಗಳಿಂದ ಪಾರು ಮಾಡುತ್ತದೆ.

– ಲೋಹಿತ್ ಹೆಬ್ಬಾರ್

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಾರ್ಮುಜ್‌ನಿಂದ ಹೊರಟ ಭಾರತೀಯ ಹಡಗುಗಳ ಮೇಲೆ ಇರಾನ್​ನಿಂದ ಡ್ರೋನ್ ದಾಳಿ; ಟ್ರಂಪ್ ಆರೋಪ – Kannada News | Totally Unacceptable Donald Trump blames Iran Drones attack on Indian Ships Leaving Hormuz

ವಾಷಿಂಗ್ಟನ್, ಜೂನ್ 12: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಹಾರ್ಮುಜ್ ಜಲಸಂಧಿಯಿಂದ ಹೊರಟಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ (Iran) ಡ್ರೋನ್‌ಗಳು ದಾಳಿ ನಡೆಸಿವೆ ಎಂದು ಆರೋಪಿಸಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ ಜಾಲತಾಣದಲ್ಲಿ ಹಂಚಿಕೊಂಡಿರುವ ಕಠಿಣ ಪದಗಳ ಪೋಸ್ಟ್‌ನಲ್ಲಿ ಅವರು ಈ ಆಪಾದಿತ ಘಟನೆಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿದ್ದಾರೆ. ಈ ಬಗ್ಗೆ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಹಾರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ನಿನ್ನೆ ರಾತ್ರಿ ನಡೆದ ಇರಾನ್‌ನ ಡ್ರೋನ್ ದಾಳಿಯನ್ನು ಸೌಜನ್ಯಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ಹಾರ್ಮುಜ್ ಜಲಸಂಧಿಯನ್ನು ದಾಟಿ ಹೊರಡುತ್ತಿದ್ದ ಭಾರತೀಯ ನಾವಿಕರಿದ್ದ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ನ ಮಾನವರಹಿತ ಡ್ರೋನ್‌ಗಳು ದಾಳಿ ನಡೆಸಿವೆ. ಅಂತಾರಾಷ್ಟ್ರೀಯ ಜಲಮಾರ್ಗಗಳಲ್ಲಿ ಮುಗ್ಧ ನಾವಿಕರು ಮತ್ತು ವಾಣಿಜ್ಯ ಸರಕು ಸಾಗಣೆಯ ಮೇಲೆ ನಡೆಯುತ್ತಿರುವ ಇಂತಹ ಕೃತ್ಯಗಳು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲದ ಪ್ರಚೋದನೆಯಾಗಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್​ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್

ಕಳೆದ 4 ದಿನಗಳಲ್ಲಿ ಒಮಾನ್ ಕರಾವಳಿಯ ಬಳಿ ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಣಿಜ್ಯ ಹಡಗುಗಳ ಮೇಲೆ ಮೂರು ದಾಳಿಗಳು ನಡೆದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷರ ಈ ಇತ್ತೀಚಿನ ಹೇಳಿಕೆ ಹೊರಬಿದ್ದಿದೆ. ಈ ದಾಳಿಗಳ ಪೈಕಿ ಒಂದರಲ್ಲಿ ಮೂವರು ಭಾರತೀಯ ನಾವಿಕರು ಪ್ರಾಣ ಕಳೆದುಕೊಂಡಿದ್ದರು. ಶಾಂತಿ ಒಪ್ಪಂದದ ಬಗ್ಗೆ ಇರಾನ್ ಸುಳ್ಳು ಸುದ್ದಿ ಹರಡುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ. ಇದರ ಜೊತೆಗೆ, ಹಾರ್ಮುಜ್ ಜಲಸಂಧಿಯ ಬಳಿ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ಡ್ರೋನ್ ದಾಳಿ ನಡೆಸಿವೆ ಎಂದೂ ಅಮೆರಿಕ ಅಧ್ಯಕ್ಷ ಟ್ರಂಪ್ ಆರೋಪಿಸಿದ್ದಾರೆ.

ಇರಾನ್ ಒಪ್ಪಂದದ ನಿಯಮಗಳ ಬಗ್ಗೆ ಹರಿದಾಡುತ್ತಿರುವ ವರದಿಗಳು ಸುಳ್ಳು. ಅವು ಲಿಖಿತ ರೂಪದಲ್ಲಿ ಒಪ್ಪಿಕೊಂಡಿರುವ ನಿಯಮಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಟ್ರಂಪ್ ಟ್ರುತ್ ಸೋಷಿಯಲ್‌ನಲ್ಲಿ ಪ್ರತಿಪಾದಿಸಿದ್ದಾರೆ. ಒಪ್ಪಂದದ ಕುರಿತು ಇರಾನ್ ನೀಡಿರುವ ಹೇಳಿಕೆಗಳು ಅಗೌರವಯುತ ಎಂದಿರುವ ಅವರು, ಇರಾನ್ ಅಪನಂಬಿಕೆಯಿಂದ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಸಂಪೂರ್ಣ ಬಂದ್; ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ

ಹಾರ್ಮುಜ್ ಜಲಸಂಧಿಯಿಂದ ಹೊರಬರುತ್ತಿದ್ದ ಭಾರತೀಯ ಹಡಗುಗಳನ್ನು ಗುರಿಯಾಗಿಸಿಕೊಂಡು ನಡೆದ ಡ್ರೋನ್ ದಾಳಿಯ ವಿಷಯವನ್ನೂ ಟ್ರಂಪ್ ಪ್ರಸ್ತಾಪಿಸಿದ್ದಾರೆ. ಇದನ್ನು ಸಂಪೂರ್ಣವಾಗಿ ಒಪ್ಪಲು ಸಾಧ್ಯವಿಲ್ಲ ಎಂದು ಕರೆದಿರುವ ಅವರು, ಇಂತಹ ಕ್ರಮಗಳು ತಕ್ಷಣವೇ ನಿಲ್ಲಬೇಕು ಎಂದು ಎಚ್ಚರಿಸಿದ್ದಾರೆ. ಹಾರ್ಮುಜ್ ಜಲಸಂಧಿಯ ಬಳಿ ಭಾರತೀಯ ಸಿಬ್ಬಂದಿಯಿದ್ದ 3 ಹಡಗುಗಳ ಮೇಲೆ ತಾವು ಬಾಂಬ್ ದಾಳಿ ನಡೆಸಿರುವುದನ್ನು ಅಮೆರಿಕ ಒಪ್ಪಿಕೊಂಡ ಬೆನ್ನಲ್ಲೇ ಈ ಹೇಳಿಕೆ ಬಂದಿದೆ. ಆ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version