Headlines

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್ – Kannada News | Rishab Shetty starrer The Pride of Bharat Chhatrapati Shivaji Maharaj Rs 500 Cr Budget Two Parts

‘ಕಾಂತಾರ’ ಚಿತ್ರದ ಅಭೂತಪೂರ್ವ ಯಶಸ್ಸಿನ ನಂತರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಬ್ಯುಸಿಯಾಗಿರುವ ನ್ಯಾಷನಲ್ ಅವಾರ್ಡ್ ವಿನ್ನರ್ ರಿಷಬ್ ಶೆಟ್ಟಿ (Rishab Shetty) ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಸಿನಿಮಾ ಈಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ…

Read More

ಜಮೀನಿನ ಕಾಗದಗಳು ಮಿಸ್ಸಿಂಗ್, ನಿಮ್ಮ ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿಯ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ – Kannada News | Almond Protest: Man Targets Officer Over Missing File in Unusual Way

ಛತ್ತೀಸ್​ಗಢ, ಏಪ್ರಿಲ್ 19: ಸರ್ಕಾರಿ ಕಚೇರಿಗಳಲ್ಲಿ ಫೈಲ್ ಕಳೆದುಹೋಗಿದೆ ಅಥವಾ ನಾಳೆ ಬನ್ನಿ ಎಂಬ ಮಾತುಗಳು ಅದೆಷ್ಟು ಜನಸಾಮಾನ್ಯರ ನಿದ್ದೆ ಗೆಡಿಸಿವೆಯೋ ಗೊತ್ತಿಲ್ಲ. ಆದರೆ ಬಿಲಾಸ್‌ಪುರದ ಟಿಫ್ರಾ ಹೌಸಿಂಗ್ ಬೋರ್ಡ್ ಕಚೇರಿಯಲ್ಲಿ ತರುಣ್ ಸಾಹು ಎಂಬ ಯುವಕ ಈ ನಿರ್ಲಕ್ಷ್ಯಕ್ಕೆ ನೀಡಿದ ಉತ್ತರ ಮಾತ್ರ ಅತ್ಯಂತ ಸೃಜನಶೀಲ ಮತ್ತು ಖಾರವಾಗಿತ್ತು. ತರುಣ್ ಸಾಹು ಒಂದು ವರ್ಷದ ಹಿಂದೆ ಮ ಒಂದು ಫ್ಲಾಟ್ ಖರೀದಿಸಿದ್ದರು. ಆಸ್ತಿಯ ಮಾಲೀಕತ್ವ ಅವರ ಹೆಸರಿಗೆ ಬದಲಾಗಬೇಕಾದರೆ (Mutation) ಹೌಸಿಂಗ್ ಬೋರ್ಡ್‌ನ ಫೈಲ್ ಅತ್ಯಗತ್ಯ….

Read More

ಯುದ್ಧದಿಂದ ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ ಗತಿ ಏನು? ದೇಶದಲ್ಲಿರುವ ಪೆಟ್ರೋಲ್ ಎಷ್ಟು ದಿನಕ್ಕೆ ಆಗುತ್ತೆ? – Kannada News | Indias strategic petroleum reserves know how many days they last if crude oil supply is stopped

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯ ಹೊತ್ತಿ ಉರಿಯುತ್ತಿದೆ. ಇಸ್ರೇಲ್, ಇರಾನ್ ಸಂಘರ್ಷದಲ್ಲಿ (Middle East crisis) ಅಮೆರಿಕ ಅಖಾಡಕ್ಕೆ ಪ್ರವೇಶ ಮಾಡಿದೆ. ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ಅಮೆರಿಕ ಹಾಗೂ ಇಸ್ರೇಲ್ ಜಂಟಿ ಕಾರ್ಯಾಚರಣೆಯಲ್ಲಿ ಕೊಂದು ಹಾಕಿವೆ. ಗಲ್ಫ್ ದೇಶಗಳಿಂದ ತೈಲ ಪೂರೈಕೆಗೆ ಅಡಚಣೆ ಆಗಿದೆ. ಜಾಗತಿಕವಾಗಿ ತೈಲ ಬೆಲೆ ಹೆಚ್ಚುವ ಮತ್ತು ಪೂರೈಕೆ ಮೊಟಕುಗೊಳ್ಳುವ ಸಾಧ್ಯತೆ ಹೆಚ್ಚು ಕಾಣುತ್ತಿದೆ. ಒಂದು ವೇಳೆ, ತೈಲ ಪೂರೈಕೆ ನಿಂತು ಹೋದರೆ ಭಾರತಕ್ಕೆ…

Read More

ಅಸಲಿ ಆಟ ಇನ್ನು ಶುರು: ಒಂದೇ ಗ್ರೂಪ್​ನಲ್ಲಿ ಸೋಲಿಲ್ಲದ ಸರದಾರರು!

T20 World Cup 2026: ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಲೀಗ್​ ಹಂತದಲ್ಲಿ ಕಣಕ್ಕಿಳಿದ 20 ತಂಡಗಳಲ್ಲಿ 12 ಟೀಮ್​ಗಳು ಮೊದಲ ಸುತ್ತಿನಲ್ಲೇ ನಿರ್ಗಮಿಸಿದೆ. ಇನ್ನುಳಿದ 8 ತಂಡಗಳು ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಸೂಪರ್-8 ಸುತ್ತಿನ ಗ್ರೂಪ್-ಎ ನಲ್ಲಿ ಭಾರತ, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಹಾಗೂ ಝಿಂಬಾಬ್ವೆ ತಂಡಗಳು ಕಾಣಿಸಿಕೊಂಡಿವೆ. ಈ ತಂಡಗಳು ತಲಾ 3 ಪಂದ್ಯಗಳನ್ನಾಡಲಿದೆ. ಅಂದರೆ ಭಾರತ ತಂಡವು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯಗಳನ್ನು ಆಡಲಿದೆ. ಇನ್ನು…

Read More

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗರ್ಭಿಣಿ ಹೆಂಡತಿ ಬೀದಿಗೆ! ಗಂಡನ ಮೊಬೈಲ್‌ನಲ್ಲಿತ್ತು ಅಸಹ್ಯ ಚಿತ್ರಗಳು – Kannada News | Dasarahalli Illicit Affair: Pregnant Wife Harassed, Left Homeless by BMTC Officer

ಬೆಂಗಳೂರು, ಮೇ.3: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗರ್ಭಿಣಿ ಹೆಂಡತಿಯನ್ನೇ ಮನೆಯಿಂದ ಆಚೆ ಹಾಕಿರುವ ಅಮಾನವೀಯ ಘಟನೆ ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿ ಸೆಕ್ಯೂರಿಟಿ ಇನ್‌ಚಾರ್ಜ್ ಆಗಿರುವ ಜಗದೀಪ್ (42) ತನ್ನ ಪತ್ನಿ ಶ್ವೇತಾ (32)ಗೆ ದ್ರೋಹ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಶ್ವೇತಾ ಮತ್ತು ಜಗದೀಪ್ 14 ವರ್ಷಗಳ ಹಿಂದೆ ವಿವಾಹವಾಗಿದ್ದರು. ಜಯನಗರದ ಸರ್ಕಾರಿ ಕ್ವಾರ್ಟರ್ಸ್‌ನಲ್ಲಿ ಇಬ್ಬರೂ ವಾಸವಿದ್ದರು. ಪತಿ ಜಗದೀಪ್‌ನ ವರ್ತನೆಯಲ್ಲೂ ತುಂಬಾ ಬದಲಾವಣೆಗಳು ಆಗಿತ್ತು. ಇದರಿಂದ ಅನುಮಾನಗೊಂಡು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ…

Read More

ಪತ್ನಿಗೆ ಪಕ್ಕದ ಮನೆಯ ವ್ಯಕ್ತಿಯ ಜತೆ ಅಕ್ರಮ ಸಂಬಂಧ: ಮರ್ಯಾದೆ ಹೋಯಿತು ಎಂದು ಪತಿ ಆತ್ಮಹತ್ಯೆ! – Kannada News | Karnataka Suicides: Police Harassment and False Complaints Spark Tragedies

ಚಿಕ್ಕಮಗಳೂರು, ಫೆ.21: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನೆನ್ನೆ ಪೊಲೀಸ್ ಕಿರುಕುಳಕ್ಕೆ ವಿಧವೆ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿತ್ತು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಏಳು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಅಕ್ರಮ ಸಂಬಂಧ ಮತ್ತು ಆಕೆ ತನ್ನ ವಿರುದ್ಧವೇ ನೀಡಿದ ಸುಳ್ಳು ದೂರಿನಿಂದ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ ಚಾಲಕನಾಗಿದ್ದ ಮನು, ಸಖರಾಯಪಟ್ಟಣ ಮೂಲದ ಹರಿಣಿ ಎಂಬಾಕೆಯನ್ನು ಪ್ರೀತಿಸಿ…

Read More

‘ತೀರ್ಥರೂಪ ತಂದೆಯವರಿಗೆ’ ವಿಮರ್ಶೆ: ಭಾವನೆಗಳ ಪಯಣದಲಿ ‘ಹೊಂದಿಸಿ ಬರೆಯಿರಿ’ ಆಟ – Kannada News | Nihar Mukesh and Rachana Inder Starrer Ramenahalli Jagannatha Directional Theertharoopa Thandeyavarige Movie Review in Kannada

ತೀರ್ಥರೂಪ ತಂದೆಯವರಿಗೆ ಸಿನಿಮಾ ವಿಮರ್ಶೆ 2023ರಲ್ಲಿ ಬಂದ ‘ಹೊಂದಿಸಿ ಬರೆಯಿರಿ’ ಸಿನಿಮಾ ಗಮನ ಸೆಳೆಯಿತು. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ರಾಮೇನಹಳ್ಳಿ ಜಗನ್ನಾಥ. ಈಗ ಅವರು ‘ತೀರ್ಥರೂಪ ತಂದೆಯವರಿಗೆ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸ್ಟಾರ್ ಕಲಾವಿದರು ಇಲ್ಲದೆ ಇದ್ದರೂ ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಆ ಚಿತ್ರದ ವಿಮರ್ಶೆ ಇಲ್ಲಿದೆ. ಜಾನಕಿ (ಸಿತಾರಾ) ಜೀವನದಲ್ಲಿ ಸಾಕಷ್ಟು ಏರಿಳಿತ ಕಂಡವಳು. ಈಗ ಆಕೆಗೆ ಮಗನೇ ಪ್ರಪಂಚ. ಆದರೆ, ಮಗ ಪೃಥ್ವಿ ಸಂಚಾರಿ (ನಿಹಾರ್ ಮುಕೇಶ್​​)…

Read More

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ. ಮೇಷ ರಾಶಿ: ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ…

Read More

ತೀವ್ರ ಗತಿಯಲ್ಲಿ ಕುಸಿದ ‘ಧುರಂಧರ್ 2’ ಗಳಿಕೆ; ಆ ದಾಖಲೆ ಮುರಿಯೋದು ಕಷ್ಟ?

‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಡಿಸೆಂಬರ್‌ನಲ್ಲಿ ತಮ್ಮ ಮೊದಲ ಚಿತ್ರದೊಂದಿಗೆ ಆದಿತ್ಯ ಧರ್ 1,300 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದರು. ಕೆಲವೇ ತಿಂಗಳುಗಳ ನಂತರ, 1,000 ಕೋಟಿ ಕ್ಲಬ್‌ಗೆ ಪ್ರವೇಶಿಸುವ ಮೂಲಕ ಅವರು ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ‘ಧುರಂಧರ್ 2’ ಚಿತ್ರವು ಕೇವಲ 12 ದಿನಗಳಲ್ಲಿ ಇಡೀ ಬಾಕ್ಸ್ ಆಫೀಸ್ ಅನ್ನು ಅಲುಗಾಡಿಸಿದೆ. ಎರಡನೇ ಶನಿವಾರ ಮತ್ತು ಭಾನುವಾರದಂದು ನಡೆದ ಕಲೆಕ್ಷನ್​​ಗೆ ಹೋಲಿಸಿದರೆ ಎರಡನೇ ಸೋಮವಾರ ಚಿತ್ರದ ಗಳಿಕೆ ಗಮನಾರ್ಹವಾಗಿ ಕುಸಿದಿದೆ. ‘ಧುರಂಧರ್…

Read More

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್: ದೃಶ್ಯ ನೋಡಿದ್ರೆ ಬೆಚ್ಚಿ ಬೀಳ್ತೀರ

ಹುಬ್ಬಳ್ಳಿ, ಜನವರಿ 09: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಿಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಆರೋಪ ರಾಜ್ಯಾದ್ಯಂತ ಚರ್ಚೆ ಆಗುತ್ತಿರುವ ನಡುವೆ ಆಕೆಯೇ ವ್ಯಕ್ತಿಯೋರ್ವನನ್ನು ಬಟ್ಟೆ ಬಿಚ್ಚಿಸಿ ಥಳಿಸಿರುವ ವಿಡಿಯೋ ವೈರಲ್​​ ಆಗಿದೆ. ಧಾರವಾಡ ಮೂಲದ ತುಕಾರಾಂ ಎಂಬವರನ್ನು ವಿವಸ್ತ್ರಗೊಳಿಸಿ ಸುಜಾತಾ ಮತ್ತು ಆಕೆ ಸಹಚರರು ಥಳಿಸಿದ್ದರು. ಹನಿಟ್ರ್ಯಾಪ್ ಮಾಡಿ ತುಕಾರಾಂನನ್ನು ಅಪಹರಿಸಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಎರಡೂವರೆ ವರ್ಷದ ಹಿಂದೆ ನಡೆದಿದ್ದ ಘಟನೆ ವಿಡಿಯೋ ಈಗ ವೈರಲ್ ಆಗಿದೆ. ಇನ್ನು BJP ಕಾರ್ಯಕರ್ತೆ ಸುಜಾತಾ ಹಳೆಯ…

Read More