WPL 2026: ಆರ್​ಸಿಬಿಗೆ ಆಘಾತ; 2026 ರ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದ ಎಲ್ಲಿಸ್ ಪೆರ್ರಿ – Kannada News | Ellyse Perry Exits WPL 2026: RCB Faces Major Setback Before Season Start

ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್​ ಲೀಗ್ (Women’s Premier League) ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಚಾಂಪಿಯನ್ ಆಟಗಾರ್ತಿ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ (Ellyse Perry) ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿಯುತ್ತಿರುವುದಾಗಿ ಪೆರ್ರಿ ತಿಳಿಸಿದ್ದಾರೆ. ಪೆರ್ರಿ ಅವರ ಈ ನಿರ್ಧಾರ ಆರ್​ಸಿಬಿಗೆ ದೊಡ್ಡ ಹಿನ್ನಡೆಯನ್ನುಂಟು ಮಾಡಿದೆ.

ಪೆರ್ರಿ ಬದಲಿಯಾಗಿ ಬಂದಿದ್ಯಾರು?

ವಾಸ್ತವವಾಗಿಮಿನಿ ಹರಾಜಿಗೂ ಮುನ್ನವೇ ಆರ್​ಸಿಬಿ ಎಲ್ಲಿಸ್ ಪೆರ್ರಿ ಅವರನ್ನು 2 ಕೋಟಿ ರೂ. ಬೆಲೆಗೆ ತಂಡದಲ್ಲೇ ಉಳಿಸಿಕೊಂಡಿತ್ತು. ಆದರೆ ವೈಯಕ್ತಿಕ ಕಾರಣಗಳಿಂದಾಗಿ ಪೆರ್ರಿ ಈ ಆವೃತ್ತಿಯಲ್ಲಿ ಆಡುತ್ತಿಲ್ಲ. ಎಲ್ಲಿಸ್ ಪೆರ್ರಿ ತಂಡದಿಂದ ಹಿಂದೆ ಸರಿದ ನಂತರ, ಆರ್‌ಸಿಬಿ ಈಗ ಅವರ ಬದಲಿ ಆಟಗಾರ್ತಿಯನ್ನು ಘೋಷಿಸಿದೆ. 25 ವರ್ಷದ ಆಲ್‌ರೌಂಡರ್ ಸಯಾಲಿ ಸತ್‌ಘರೆ ಅವರನ್ನು ಆರ್‌ಸಿಬಿ ಬದಲಿಯಾಗಿ ಸೇರಿಸಿಕೊಳ್ಳಲಾಗಿದೆ. ಈ ಆಟಗಾರ್ತಿ ಭಾರತ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ.

ಈ ಹಿಂದೆ ಗುಜರಾತ್ ಜೈಂಟ್ಸ್ ತಂಡದ ಪರ ನಾಲ್ಕು ಪಂದ್ಯಗಳನ್ನು ಆಡಿರುವ ಸತ್‌ಘರೆ ಎರಡು ಇನ್ನಿಂಗ್ಸ್‌ಗಳಲ್ಲಿ ಒಂದು ವಿಕೆಟ್ ಪಡೆದು 20 ರನ್ ಗಳಿಸಿದ್ದಾರೆ. ಈ ಆವೃತ್ತಿಯಲ್ಲಿ ಸಯಾಲಿ ಅವರನ್ನು ಯಾವುದೇ ತಂಡವು ಖರೀದಿಸಿರಲಿಲ್ಲ. ಆದರೆ ಎಲೀಸ್ ಪೆರ್ರಿ ಗಾಯಗೊಂಡ ನಂತರ, ಅವರು ಈಗ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೆರ್ರಿ WPL ದಾಖಲೆ

ಎಲಿಸ್ ಪೆರ್ರಿ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಇದುವರೆಗೆ 25 ಪಂದ್ಯಗಳನ್ನಾಡಿದ್ದು 64.8 ಸರಾಸರಿಯಲ್ಲಿ 972 ರನ್ ಗಳಿಸಿದ್ದಾರೆ, 132 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಅವರು ಎಂಟು ಅರ್ಧಶತಕಗಳನ್ನು ಸಹ ಸಿಡಿಸಿದ್ದಾರೆ. ಹಾಗೆಯೇ ಬೌಲಿಂಗ್​ನಲ್ಲೂ 14 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:24 pm, Tue, 30 December 25

Source link

ವಿಜಯಪುರ PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್​ಗೆ ಟ್ವಿಸ್ಟ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ – Kannada News | Vijayapura Police Officer Illicit Affair Case: Victim Clarifies Rumours

ವಿಜಯಪುರ, ಡಿಸೆಂಬರ್​​ 30: ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದವಳ ಜೊತೆ ಪೊಲೀಸ್ ಅಧಿಕಾರಿ ಸಂಬಂಧ ಆರೋಪ ವಿಚಾರವಾಗಿ ಸ್ವತಃ ಮಹಿಳೆಯೇ ಟವಿ9 ಕನ್ನಡದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಭೀಮಾಶಂಕರ ಪತ್ನಿ ಅನುರಾಧಾ ತನಗಾದ ಸಮಸ್ಯೆಗಳ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದು, ಗಂಡನ ಕಿರುಕುಳದಿಂದ ನಾನು ಆತನಿಂದ ದೂರವಾಗಿದ್ದೇನೆ. ಕುಡಿದು ಬಂದು ಹಲ್ಲೆ ಜೊತೆಗೆ ಕೊಲೆಗೂ ಆತ ಯತ್ನಿಸಿದ್ದ. ಹೀಗಾಗಿ ಗಂಡನಿಂದ ದೂರವಾಗಿ 4 ವರ್ಷಗಳು ಕಳೆದಿವೆ ಎಂದು ತಿಳಿಸಿದ್ದಾರೆ.

ಊರಲ್ಲಿದ್ದ ಜಮೀನು ಮಾರಿ ಬೆಂಗಳೂರಿನಲ್ಲಿ ನಿವೇಶನ ಖರೀದಿ ಮಾಡಿದ್ದೆವು. ಆ ಜಾಗ ನನ್ನ ಹಾಗೂ ಪತಿ ಭೀಮಾಶಂಕರ ಹೆಸರಿನಲ್ಲಿದೆ. ಹೀಗಾಗಿ ಅದನ್ನೂ ತನಗೆ ನೀಡುವಂತೆ ಆತ ಪೀಡಿಸಿದ್ದ. ಈ ಬಗ್ಗೆ ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಲ್ಲೇ ರಾಜಿ ಪಂಚಾಯಿತಿಯೂ ಆಗಿತ್ತು. ಆ ವೇಳೆ ನನಗೆ ಪೊಲೀಸ್ ಅಧಿಕಾರಿ ಮನೋಹರ್ ಕಂಚಗಾರ ಪರಿಚಯವಾಗಿದ್ದರು. ಬಳಿಕ ನಾನು ಒಬ್ಬಳೇ ಬೆಂಗಳೂರಿಗೆ ಬಂದು ನೆಲೆಸಿದರೂ ಗಂಡನ ಹಿಂಸೆ ತಪ್ಪಿರಲಿಲ್ಲ. ಹೀಗಾಗಿ 2022ರಲ್ಲಿ ರಕ್ಷಣೆಯಾಗಿ ಮನೋಹರ್ ಕಂಚಗಾರ ಸಹಾಯ ಪಡೆದಿದ್ದೆ. ಆ ಪರಿಚಯ, ಸ್ನೇಹದಿಂದ ನಾನು ಅವರ ಜೊತೆ ಚಾಟ್ ಮಾಡಿದ್ದೇನೆ. ಈಗ ಅವರ ಜೊತೆ ನನಗೆ ಸಂಪರ್ಕ ಇಲ್ಲ ಎಂದು ಅನುರಾಧಾ ತಿಳಿಸಿದ್ದಾರೆ. ಜೊತೆಗೆ ಪತಿಯಿಂದ ಹಲ್ಲೆಗೊಳಗಾದ ಫೋಟೋಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು: ಬಯೋಕಾನ್ ಕಂಪನಿಯ 3ನೇ ಮಹಡಿಯಿಂದ ಜಿಗಿದು ಉದ್ಯೋಗಿ ಆತ್ಮಹತ್ಯೆ – Kannada News | Bengaluru: Biocon Employee Dies by Suicide After Jumping From Third Floor

ಬೆಂಗಳೂರು, ಡಿಸೆಂಬರ್​ 30: ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿರುವ ಬಯೋಕಾನ್ ಕಂಪನಿಯ (biocon company) ಉದ್ಯೋಗಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಅನಂತ್ ಭಟ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್ ಮೃತದೇಹವನ್ನು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯ: ಮನನೊಂದು ಆಟೋ ಡ್ರೈವರ್ ಆತ್ಮಹತ್ಯೆ

ಅನಾರೋಗ್ಯದ ಹಿನ್ನೆಲೆ ಮನನೊಂದು ಆಟೋ ಡ್ರೈವರ್ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ನಗರದ ಜಯನಗರ ಬಡಾವಣೆ ನಿವಾಸಿ ಚಂದ್ರಶೇಖರ್ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಮನೆಗೆ ಬರ್ತಾನೆಂದು ಮಗನ ದಾರಿ ಕಾಯುತ್ತಿದ್ದ ತಾಯಿಗೆ ಬರಸಿಡಿಲು: 10 ದಿನದ ಬಳಿಕ ಪುತ್ರ ಶವವಾಗಿ ಪತ್ತೆ

ಕಳೆದ ಹಲವು ವರ್ಷಗಳಿಂದ ಆಟೋ ಚಾಲಕ ಚಂದ್ರಶೇಖರ್‌ಗೆ ಅಸ್ತಮಾ ಖಾಯಿಲೆಯಿಂದ ಬಳಲುತ್ತಿದ್ದರು. ಆಟೋ ಚಾಲಕನಾಗಿರುವ ಇವರಿಗೆ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಹಣಕಾಸು ಕೊರತೆ ಎದುರಾಗಿದ್ದು, ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇನ್ನೂ ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಚಿತ್ರದುರ್ಗದಲ್ಲಿ​ ಗೀಸರ್​ ಸೋರಿಕೆ: ಉಸಿರುಗಟ್ಟಿ ಯುವತಿ ಸಾವು

ಗೀಸರ್​ ಸೋರಿಕೆ ಆಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗದ ವಿನಾಯಕ ಕಲ್ಯಾಣ ಮಂಟಪದ ಬಳಿ ‌ಮನೆಯಲ್ಲಿ ನಡೆದಿದೆ. ಬಿಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ(20) ಮೃತ ಯುವತಿ. ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ವೈದ್ಯರು ಸಾವು ಖಚಿತ ಪಡಿಸಿ ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಸಂಬಂಧಿಕರು ಯುವತಿಯ ಮೃತದೇಹವನ್ನು ಬೈಕ್​ನಲ್ಲೇ ತೆಗೆದುಕೊಂಡು ಹೋಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು, ಐವರ ಮೇಲೆ ಬಿತ್ತು ಎಫ್​​​ಐಆರ್​​ – Kannada News | Devanahalli Bypass: Drunk Driving Check Turns Violent, Youths Assault Police

ದೇವನಹಳ್ಳಿ, ಡಿ.30: ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಮದ್ಯಪಾನದ ಅಮಲಿನಲ್ಲಿದ್ದ ಯುವಕರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಬೈಪಾಸ್​​​ನಲ್ಲಿ ನೆನ್ನೆ (ಡಿ.29) ರಾತ್ರಿ ನಡೆದಿದೆ. ಡಿಡಿ ಕೇಸ್ ಚೇಕಿಂಗ್ (ಮದ್ಯಪಾನ ಮಾಡಿ ವಾಹನ ಚಲಾಯಿಸುವುದು) ವೇಳೆ ಅವಾಜ್ ಹಾಕಿದ್ದ ಈ ಯುವಕರ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕನನ್ನು ಬ್ರೆತ್ ಅನಾಲೈಸರ್​​ಗೆ ಊದಲು ಹೇಳಿದ್ದಾರೆ. ಆದರೆ ಇದಕ್ಕೆ ಚಾಲಕ ನಿರಾಕರಿಸಿದ್ದಾನೆ. ಈ ವಿಚಾರವಾಗಿ ಪೊಲೀಸರು ಹಾಗೂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರಿನಿಂದ ಕೆಳಗಿಳಿದು ಟ್ರಾಫಿಕ್ ಪೊಲೀಸರ ಮೇಲೆ ದರ್ಪ ತೋರಿಸಿದ್ದಾನೆ. ಕಾರಿನಲ್ಲಿದ್ದ ಇತರರು ಕೂಡ ಪೊಲೀಸರನ್ನ‌ ಎಳೆದಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ‌ ಮಾಡಿದ್ದಾರೆ ಎಂದು ಹೇಳಲಾಗಿದೆ. ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕವಾಗಿ ಅವಮಾನಿಸಿರುವ ಹಿನ್ನೆಲೆ‌ ಪ್ರಕರಣ ದಾಖಲಿಸಲಾಗಿದೆ. ಎ1 ಕಿಶೋರ್, ಎ2 ಪ್ರತಾಪ್, ಎ3 ರಘುನಂದನ್,ಎ4 ಕಾರ್ತಿಕ್ ಮೇಲೆ ಎಫ್ ಐ ಆರ್ ದಾಖಲಾಗಿದೆ. ಟ್ರಾಫಿಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲು ಮಾಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

India Post Recruitment 2026: ಭಾರತೀಯ ಅಂಚೆ ಇಲಾಖೆಯಲ್ಲಿ 30,000ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | India Post GDS Recruitment 2026: Apply for 30,000+ Posts | 10th Pass Jobs

ಭಾರತೀಯ ಅಂಚೆ ಇಲಾಖೆಯಲ್ಲಿ ನೇಮಕಾತಿ

ಭಾರತೀಯ ಅಂಚೆ ಇಲಾಖೆಯು ದೇಶದ ಅತಿದೊಡ್ಡ ಸರ್ಕಾರಿ ಇಲಾಖೆಗಳಲ್ಲಿ ಒಂದಾಗಿದೆ. ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವುದರಿಂದ, ಇಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗೆ ಹೆಚ್ಚಿನ ಸಂಬಳ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. ಅಂಚೆ ಇಲಾಖೆಯಲ್ಲಿ ಕೆಲಸ ಮಾಡುವುದು ಕೇಂದ್ರ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವವರಿಗೆ ಉತ್ತಮ ಅವಕಾಶವಾಗುತ್ತದೆ. ಪ್ರತಿ ವರ್ಷ, ಸಾವಿರಾರು ಯುವಕರು ಅಂಚೆ ಇಲಾಖೆಯ ಉದ್ಯೋಗ ಜಾಹೀರಾತಿಗಾಗಿ ಕಾಯುತ್ತಿರುತ್ತಾರೆ. ಈ ಕ್ರಮದಲ್ಲಿ, ಭಾರತೀಯ ಅಂಚೆ ಇಲಾಖೆಯಲ್ಲಿನ ಉದ್ಯೋಗಗಳಿಗಾಗಿ ಪ್ರಮುಖ ಜಾಹೀರಾತು ಬಿಡುಗಡೆಯಾಗಿದೆ.

2026ರ ಜನವರಿ 15ರಂದು ಅಧಿಕೃತ ಅಧಿಸೂಚನೆ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ಅಂದರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಶಾಖೆಯೇತರ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಇದರಲ್ಲಿ ಗ್ರಾಮ ಮಟ್ಟದ ನೌಕರರು ಮತ್ತು ಶಾಖಾ ಪೋಸ್ಟ್‌ಮಾಸ್ಟರ್‌ಗಳಂತಹ ಹುದ್ದೆಗಳು ಸೇರಿವೆ.

ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ:

ಇದರ ಜೊತೆಗೆ, ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಜಾಹೀರಾತು ಕೂಡ ಬಿಡುಗಡೆಯಾಗಿದೆ. ಶಾಖೆ ಪೋಸ್ಟ್ ಮಾಸ್ಟರ್ (ಬಿಪಿಎಂ), ಸಹಾಯಕ ಶಾಖೆ ಪೋಸ್ಟ್ ಮಾಸ್ಟರ್ (ಎಬಿಪಿಎಂ), ಪೋಸ್ಟ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದರಲ್ಲಿ ಒಟ್ಟು 30,000 ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆಯಿದೆ. ಈ ಉದ್ಯೋಗಗಳಿಗೆ ಅಧಿಕೃತ ಜಾಹೀರಾತು ಜನವರಿ 15 ರಂದು ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿದೆ. ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು 18 ವರ್ಷ ವಯಸ್ಸಿನವರಾಗಿರಬೇಕು. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ಇದರಲ್ಲಿ, ಪರಿಶಿಷ್ಟ ಜಾತಿ (SC) 5 ವರ್ಷಗಳು, ಪರಿಶಿಷ್ಟ ಪಂಗಡ (ST) 5 ವರ್ಷಗಳು, ಇತರ ಹಿಂದುಳಿದ ವರ್ಗಗಳಿಗೆ 3 ವರ್ಷಗಳು ಮತ್ತು ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ಇದೆ. ಈ ಕೆಲಸಕ್ಕೆ, ನೀವು 10 ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. 10 ನೇ ತರಗತಿಯಲ್ಲಿ ಪಡೆದ ಅಂಕಗಳ ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಈ ಕೆಲಸಕ್ಕೆ ಅರ್ಜಿ ಸಲ್ಲಿಸುವವರು ಸ್ಥಳೀಯ ಭಾಷೆಯನ್ನು ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು. ದ್ವಿಚಕ್ರ ವಾಹನ ಅಥವಾ ಸೈಕಲ್ ಸವಾರಿ ಮಾಡಲು ತಿಳಿದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?

ಈ ಅಂಚೆ ಇಲಾಖೆಯ ಕೆಲಸಕ್ಕೆ ಅರ್ಜಿ ಸಲ್ಲಿಸಲು, indiapostgdsonline.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಇದಲ್ಲದೆ, ಅರ್ಜಿದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಶೈಕ್ಷಣಿಕ ಅರ್ಹತೆ, ಜಾತಿ ಪ್ರಮಾಣಪತ್ರ, ಫೋಟೋ, ಸಹಿ, ಫೋನ್ ಸಂಖ್ಯೆ ಇತ್ಯಾದಿಗಳನ್ನು ನೋಂದಾಯಿಸಿಕೊಳ್ಳಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಟ್ರಾನ್ಸ್‌ಜೆಂಡರ್‌ನಂತಹ ವರ್ಗಗಳಿಗೆ ಸೇರಿದವರು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಇತರ ವರ್ಗಗಳಿಗೆ ಸೇರಿದವರು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕು. ಅರ್ಜಿ ಶುಲ್ಕವನ್ನು UPI, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಇತ್ಯಾದಿಗಳ ಮೂಲಕವೂ ಪಾವತಿಸಬಹುದು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ವರ್ಷದ ಹೊತ್ತಲ್ಲಿ ವೀರೇಂದ್ರ ಪಪ್ಪಿಗೆ ಬಿಗ್​​ ರಿಲೀಫ್​: ಇಡಿ ಪ್ರಕರಣದಲ್ಲಿ ಜಾಮೀನು – Kannada News | Chitradurga MLA Veerendra Pappy Gets Bail in ED Money Laundering Case

ಬೆಂಗಳೂರು, ಡಿಸೆಂಬರ್​​ 30: ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್​​ ರಿಲೀಫ್​​ ನೀಡಿದೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೋರ್ಟ್ ಜಾಮೀನು ನೀಡಿದ್ದು,​​ ಆ ಮೂಲಕ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಾಸಕರಿಗೆ ಹೊಸ ವರ್ಷದ ಹೊತ್ತಲ್ಲಿ ಶುಭಸುದ್ದಿ ಸಿಕ್ಕಿದೆ.

ಅಕ್ರಮ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಹುಬ್ಬಳ್ಳಿ, ಗೋವಾ, ಮುಂಬೈ ಸೇರಿದಂತೆ ಪಪ್ಪಿಗೆ ಸಂಬಂಧಿಸಿದ ಎಲ್ಲ ಸ್ಥಳಗಳ ಮೇಲೆ ರೇಡ್​​ ನಡೆದಿತ್ತು. ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ್ದ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಕೈ ಶಾಸಕ ವಿರೇಂದ್ರ ಪಪ್ಪಿ ಖಜಾನೆಯನ್ನೇ ತೆರೆದಿಟ್ಟ ಇಡಿ; ಲಕ್ಸುರಿ ಕಾರು, ಚಿನ್ನಾಭರಣ ಪತ್ತೆ

ಎಂಜಿಎಂ ಕ್ಯಾಸಿನೊ, ಮೆಟ್ರೋಪಾಲಿಟನ್ ಕ್ಯಾಸಿನೊ, ಬೆಲ್ಲಾಜಿಯೊ ಕ್ಯಾಸಿನೊ, ಮರೀನಾ ಕ್ಯಾಸಿನೊ, ಕ್ಯಾಸಿನೊ ಜ್ಯುವೆಲ್​ ಹೀಗೆ ಅಂತಾರಾಷ್ಟ್ರೀಯ ಕ್ಯಾಸಿನೊ ಸದಸ್ಯತ್ವ, ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳು, ತಾಜ್, ಹಯಾತ್, ಲೀಲಾ ಐಷಾರಾಮಿ ಆತಿಥ್ಯ ಸದಸ್ಯತ್ವ ಕಾರ್ಡ್‌ಗಳನ್ನು ಪಪ್ಪಿ ಹೊಂದಿರೋದು ದಾಳಿ ವೇಳೆ ಬಯಲಾಗಿತ್ತು. ಹೀಗಾಗಿ ವ್ಯವಹಾರ ಸಂಬಂಧ ಜಾಗ ಭೋಗ್ಯ ಪಡೆಯಲು ಸಿಕ್ಕಿಂನ ಗ್ಯಾಂಗ್ಟಕ್​ಗೆ ತೆರಳುತ್ತಿದ್ದ ವೇಳೆಯೇ ಪಪ್ಪಿ ಅವರನ್ನು ಅರೆಸ್ಟ್​​ ಮಾಡಲಾಗಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:26 pm, Tue, 30 December 25

Source link

ವಿಶ್ವದ ಅತ್ಯಂತ ಶ್ರೀಮಂತ ದೇಶದಲ್ಲಿ ಜನರ ಸರಾಸರಿ ವಾರ್ಷಿಕ ಆದಾಯ 2 ಕೋಟಿ ರೂ; ಇಲ್ಲಿದೆ ಟಾಪ್-10 ಪಟ್ಟಿ – Kannada News | USA is 10th in the list of richest nations, despite having world’s biggest economy

ನವದೆಹಲಿ, ಡಿಸೆಂಬರ್ 30: ಭಾರತ ಐದನೇ ಅತಿದೊಡ್ಡ ಆರ್ಥಿಕತೆಯ ದೇಶ. ಆದರೆ, ಅತೀ ಶ್ರೀಮಂತ ದೇಶಗಳನ್ನು ಒಂದು ಸಾಲಿಗೆ ಜೋಡಿಸಿದರೆ ಭಾರತವು ಶ್ರೀಲಂಕಾಗಿಂತಲೂ ಹಿಂದಕ್ಕೆ ಹೋಗುತ್ತದೆ. ಒಂದು ದೇಶ ಎಷ್ಟು ಶ್ರೀಮಂತಿಕೆ ಹೊಂದಿದೆ ಎಂಬುದನ್ನು ಅದರ ಆರ್ಥಿಕ ಗಾತ್ರ ಮಾತ್ರವಲ್ಲದೆ, ಜನರ ತಲಾದಾಯವನ್ನೂ ಪರಿಗಣಿಸಲಾಗುತ್ತದೆ. ಈ ಜಿಡಿಪಿ ತಲಾದಾಯದಲ್ಲಿ ಚೀನಾ ದೇಶವೇ 74ನೇ ಸ್ಥಾನದಲ್ಲಿರುವುದು ಅಚ್ಚರಿ ಎನಿಸಬಹುದು. ಮಾಲ್ಡೀವ್ಸ್​ನಂತಹ ದೇಶವೇ ಚೀನಾಗಿಂತ ಮೇಲಿದೆ ಎಂದರೆ ಅಚ್ಚರಿ ಎನಿಸಬಹುದು.

ಜಿಡಿಪಿ ಪಿಪಿಪಿ ತಲಾದಾಯದಲ್ಲಿ ಟಾಪ್-10 ದೇಶಗಳ ಪಟ್ಟಿ

  1. ಲೀಕ್ಟನ್​ಸ್ಟೇನ್: 2,01,112 ಡಾಲರ್
  2. ಸಿಂಗಾಪುರ್: 1,56,969 ಡಾಲರ್
  3. ಲುಕ್ಸಂಬರ್ಗ್: 1,52,394 ಡಾಲರ್
  4. ಐರ್ಲೆಂಡ್: 1,47,878 ಡಾಲರ್
  5. ಕತಾರ್: 1,22,283 ಡಾಲರ್
  6. ನಾರ್ವೇ: 1,06,694 ಡಾಲರ್
  7. ಸ್ವಿಟ್ಜರ್​ಲ್ಯಾಂಡ್: 97,659 ಡಾಲರ್
  8. ಬ್ರೂನೇ ದಾರುಸ್ಸಲಂ: 94,472 ಡಾಲರ್
  9. ಗಯಾನ: 94,189 ಡಾಲರ್
  10. ಅಮೆರಿಕ: 89,598 ಡಾಲರ್

ಇದನ್ನೂ ಓದಿ: ಜನವರಿಯಲ್ಲಿ ಹೊಸ ವರ್ಷಾಚರಣೆಯಿಂದ ಗಣರಾಜ್ಯೋತ್ಸವವರೆಗೂ 16 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ

ಅಮೆರಿಕ ವಿಶ್ವದ ಅತಿದೊಡ್ಡ ಆರ್ಥಿಕ ಹೊಂದಿದ್ದರೂ, ಲೀಕ್ಟನ್​ಸ್ಟೇನ್ ದೇಶದ ಜಿಡಿಪಿಗಿಂತ 500 ಪಟ್ಟು ಹೆಚ್ಚು ಜಿಡಿಪಿ ಹೊಂದಿದ್ದರೂ ಶ್ರೀಮಂತ ದೇಶಗಳ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಸುಮಾರು 10 ಬಿಲಿಯನ್ ಡಾಲರ್​ನಷ್ಟೇ ಗಾತ್ರದ ಜಿಡಿಪಿ ಹೊಂದಿರುವ ಲೀಕ್ಟನ್​ಸ್ಟೇನ್ ಶ್ರೀಮಂತಿಕೆಯಲ್ಲಿ ನಂಬರ್ ಒನ್ ಎನಿಸಿದೆ.

ಬಹಳ ಪುಟ್ಟದಾಗಿರುವ, ಮತ್ತು ಸ್ವಿಟ್ಜರ್​ಲ್ಯಾಂಡ್ ಹಾಗೂ ಆಸ್ಟ್ರಿಯಾ ನಡುವೆ ಲ್ಯಾಂಡ್ ಲಾಕ್ ಆದಂತಿರುವ ಲೀಕ್ಟನ್​ಸ್ಟೀನ್ ದೇಶದಲ್ಲಿ ಶ್ರೇಷ್ಠ ಮ್ಯಾನುಫ್ಯಾಕ್ಚರಿಂಗ್ ಸಿಸ್ಟಂ ಇದೆ. ಹೈ ಪ್ರಿಸಿಶನ್ ಮ್ಯಾನುಫ್ಯಾಕ್ಚರಿಂಗ್​ಗೆ ಇದು ಹೆಸರುವಾಸಿ. ಹೈವ್ಯಾಲ್ಯೂ ಉತ್ಪನ್ನಗಳನ್ನು ತಯಾರಿಸುವುದರಿಂದ ಇದಕ್ಕೆ ಶ್ರೀಮಂತಿಕೆಯೂ ಹೆಚ್ಚು. ಹಣಕಾಸು ಸೆಕ್ಟರ್ ಕೂಡ ಈ ಪುಟ್ಟ ದೇಶದಲ್ಲಿ ಬಹಳ ಪ್ರಬಲವಾಗಿದೆ.

ಇದನ್ನೂ ಓದಿ: ಆಸ್ತಿ ಮಾರಿ ಬಂದ 94 ಲಕ್ಷ ರೂನಲ್ಲಿ 38 ಲಕ್ಷ ರೂ ಕ್ಯಾಷ್; ಅಘೋಷಿತ ಆದಾಯವೆಂದು ಟ್ಯಾಕ್ಸ್ ನೋಟೀಸ್; ಕೇಸ್ ಗೆದ್ದ ಮಹಿಳೆ

ಅಂದಹಾಗೆ, 4 ಟ್ರಿಲಿಯನ್ ಡಾಲರ್ ಜಿಡಿಪಿ ದಾಟಿರುವ ಭಾರತದ ತಲಾದಾಯ 10-12,000 ಡಾಲರ್ ಮಾತ್ರವೇ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಮೋಸ – Kannada News | Bigg Boss Kannada: Gilli unfaithful decision to help Kavya

ಬಿಗ್​​ಬಾಸ್ ಕನ್ನಡ 12 (Bigg Boss Kannada 12) ಮುಗಿಯಲು ಕೆಲವೇ ವಾರ ಬಾಕಿ ಇದೆ. ಗಿಲ್ಲಿ ಗೆಲ್ಲುವ ಫೇವರೇಟ್ ಆಗಿದ್ದಾರೆ. ಗಿಲ್ಲಿ ಮತ್ತು ಕಾವ್ಯಾ ಗೆಳೆತನ ಪ್ರೇಕ್ಷಕರಿಗೆ ಇಷ್ಟವಾಗಿದೆ. ಆದರೆ ಕಾವ್ಯಾಗಾಗಿ ಗಿಲ್ಲಿ ಇತರರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ವಾರ ಗಿಲ್ಲಿ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಟಾಸ್ಕ್​​ಗಳ ಉಸ್ತುವಾರಿ ಅವರದ್ದೆ. ಇದೀಗ ಮನೆಯ ಮಹಿಳಾ ಸ್ಪರ್ಧಿಗಳಿಗಾಗಿ ಆಡಿಸಿದ ಟಾಸ್ಕ್ ಒಂದರಲ್ಲಿ ಸ್ಪಂದನಾ, ಕಾವ್ಯಾಗಿಂತಲೂ ಚೆನ್ನಾಗಿ ಆಡಿದ್ದಾರೆ. ಆದರೆ ಗಿಲ್ಲಿ, ಉದ್ದೇಶಪೂರ್ವಕವಾಗಿ ಕಾವ್ಯಾ ವಿನ್ನರ್ ಎಂದು ಘೋಷಿಸಿದ್ದಾರೆ. ಸಹ ಉಸ್ತುವಾರಿ ಆಗಿರುವ ಅಶ್ವಿನಿ ಜೊತೆ ಇದೇ ವಿಷಯಕ್ಕೆ ಜಗಳ ಸಹ ಮಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಮಿತ್ ಶಾ, ಮೋದಿಯನ್ನು ಮಹಾಭಾರತದ ದುಶ್ಯಾಸನ, ದುರ್ಯೋಧನನಿಗೆ ಹೋಲಿಸಿದ ಸಿಎಂ ಮಮತಾ ಬ್ಯಾನರ್ಜಿ – Kannada News | West Bengal CM Mamata Banerjee labelled amit Shah and PM Modi as Dushyasahan and Duryodhana

ಕೊಲ್ಕತ್ತಾ, ಡಿಸೆಂಬರ್ 30: ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಯೋತ್ಪಾದಕ ಜಾಲಗಳು ಕಾರ್ಯನಿರ್ವಹಿಸುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ತಮ್ಮ ಕೊಲ್ಕತ್ತಾ ಭೇಟಿಯ ವೇಳೆ ಆರೋಪಿಸಿದ್ದರು. ಇದಕ್ಕೆ ಇಂದು ತಿರುಗೇಟು ನೀಡಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಹಾಭಾರತದ ಇಬ್ಬರು ಖಳ ನಾಯಕರಾದ ದುಶ್ಯಾಸನ ಮತ್ತು ದುರ್ಯೋಧನನಿಗೆ ಹೋಲಿಸಿದ್ದಾರೆ.

ಬಂಗಾಳದ ಬಂಕುರಾದ ಬಿರ್ಸಿಂಗ್‌ಪುರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಮಮತಾ ಬ್ಯಾನರ್ಜಿ, “ಶಕುನಿಯ ಶಿಷ್ಯ ದುಶ್ಶಾಸನ ಮಾಹಿತಿಯನ್ನು ಸಂಗ್ರಹಿಸಲು ಬಂಗಾಳಕ್ಕೆ ಬಂದಿದ್ದಾನೆ. ಚುನಾವಣೆ ಹತ್ತಿರ ಬಂದ ತಕ್ಷಣ ದುಶ್ಶಾಸನ ಮತ್ತು ದುರ್ಯೋಧನ ಇಬ್ಬರೂ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತಾರೆ” ಎಂದು ಟೀಕಿಸಿದ್ದಾರೆ. ಡಿಸೆಂಬರ್ 20ರಂದು ಪ್ರಧಾನಿ ಮೋದಿ ಬಂಗಾಳಕ್ಕೆ ಭೇಟಿ ನೀಡಿದ್ದರು. 2026ರ ಬಂಗಾಳ ಚುನಾವಣೆಗೂ ಮುಂಚಿತವಾಗಿ ಅಮಿತ್ ಶಾ ಪ್ರಸ್ತುತ ಪಶ್ಚಿಮ ಬಂಗಾಳ ರಾಜ್ಯಕ್ಕೆ 3 ದಿನಗಳ ಭೇಟಿಯಲ್ಲಿದ್ದಾರೆ.

ಇದನ್ನೂ ಓದಿ: ಇನ್ನೊಮ್ಮೆ ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಹೊರಹಾಕುತ್ತೇವೆ; ಅಮಿತ್ ಶಾ

“ಪಶ್ಚಿಮ ಬಂಗಾಳ ಭಯೋತ್ಪಾದಕರ ನೆಲೆಯಾಗಿದೆ ಎಂದಾದರೆ ಪಹಲ್ಗಾಮ್ ದಾಳಿಯನ್ನು ನಮ್ಮ ಕೇಂದ್ರ ಸರ್ಕಾರವೇ ಕಾರ್ಯಗತಗೊಳಿಸಿದೆಯೇ? ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರೇ ಇಲ್ಲದಿದ್ದರೆ, ಪಹಲ್ಗಾಮ್‌ನಲ್ಲಿ ದಾಳಿ ಹೇಗೆ ನಡೆಯಿತು? ನೀವು ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದೀರಾ? ದೆಹಲಿಯಲ್ಲಿ ನಡೆದ ಘಟನೆಯ ಹಿಂದೆ ಯಾರ ಕೈವಾಡವಿದೆ?” ಎಂದು ಅಮಿತ್ ಶಾ ಅವರನ್ನು ಸಿಎಂ ಮಮತಾ ಬ್ಯಾನರ್ಜಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:09 pm, Tue, 30 December 25

Source link

Govt Internships 2026: 2026 ರಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪದವೀಧರರಿಗೆ ನೂರಾರು ಇಂಟರ್ನ್‌ಶಿಪ್ ಅವಕಾಶ – Kannada News | Govt Internships 2026: Kickstart Your Career in Public Policy and Administration in India

ನೀವು ದೇಶದ ನೀತಿಗಳನ್ನು ಅರ್ಥಮಾಡಿಕೊಳ್ಳಲು, ಆಡಳಿತದ ಭಾಗವಾಗಲು ಅಥವಾ ಸರ್ಕಾರಿ ಸೇವೆ ಮತ್ತು ಸಾರ್ವಜನಿಕ ನೀತಿಯಲ್ಲಿ ವೃತ್ತಿಜೀವನದ ಕನಸು ಕಾಣಲು ಬಯಸಿದರೆ , 2026 ರ ವರ್ಷವು ನಿಮಗೆ ಹಲವು ಅವಕಾಶಗಳನ್ನು ತರುತ್ತಿದೆ. ಭಾರತ ಸರ್ಕಾರ ಮತ್ತು ಅದರ ಪ್ರಮುಖ ಸಂಸ್ಥೆಗಳು 2026 ರಲ್ಲಿ ನೂರಾರು ಇಂಟರ್ನ್‌ಶಿಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿವೆ . ಈ ಇಂಟರ್ನ್‌ಶಿಪ್‌ಗಳು ವಿದ್ಯಾರ್ಥಿಗಳು ಮತ್ತು ಹೊಸ ಪದವೀಧರರಿಗೆ ಕಲಿಯುವ ಅವಕಾಶವನ್ನು ಒದಗಿಸುವುದಲ್ಲದೆ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳನ್ನು ಗಮನಿಸುವ ಮತ್ತು ಅರ್ಥಮಾಡಿಕೊಳ್ಳುವ ಮೊದಲ ಅನುಭವವನ್ನು ಸಹ ಒದಗಿಸುತ್ತದೆ

ಸರ್ಕಾರಿ ಇಂಟರ್ನ್‌ಶಿಪ್ ಕ್ಯಾಲೆಂಡರ್ 2026:

ಸರ್ಕಾರಿ ಇಂಟರ್ನ್‌ಶಿಪ್ ಕ್ಯಾಲೆಂಡರ್ 2026 ಅನ್ನು ಸಾರ್ವಜನಿಕ ನೀತಿ, ಆಡಳಿತ, ಕಾನೂನು, ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳು ಮತ್ತು ಯುವಕರಿಗಾಗಿ ವಿನ್ಯಾಸಗೊಳಿಸಲಾಗಿದೆ. ಈ ಕ್ಯಾಲೆಂಡರ್‌ನಲ್ಲಿ ಪ್ರಧಾನ ಮಂತ್ರಿ ಕಚೇರಿ, ಆರ್‌ಬಿಐ , ನೀತಿ ಆಯೋಗ, ಸೆಬಿ, ವಿದೇಶಾಂಗ ಸಚಿವಾಲಯ, ಇಸ್ರೋ ಮತ್ತು ಕಾನೂನು ಆಯೋಗದಂತಹ ಪ್ರತಿಷ್ಠಿತ ಸಂಸ್ಥೆಗಳು ನೀಡುವ 25 ಕ್ಕೂ ಹೆಚ್ಚು ಇಂಟರ್ನ್‌ಶಿಪ್ ಕಾರ್ಯಕ್ರಮಗಳು ಸೇರಿವೆ .

ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕ ಮತ್ತು ಅವಧಿ:

ಈ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿಗಳು ಜನವರಿ ಮತ್ತು ಮಾರ್ಚ್ 2026 ರ ನಡುವೆ ತೆರೆಯುವ ನಿರೀಕ್ಷೆಯಿದೆ. ಹೆಚ್ಚಿನ ಇಂಟರ್ನ್‌ಶಿಪ್‌ಗಳು ಎರಡರಿಂದ ಆರು ತಿಂಗಳ ಅವಧಿಯವರೆಗೆ ಇರುತ್ತವೆ. ಕೆಲವು ಇಂಟರ್ನ್‌ಶಿಪ್‌ಗಳು ಬೇಸಿಗೆ ಅವಧಿಗಳಲ್ಲಿ ನಡೆಯುತ್ತವೆ, ಆದರೆ ಇತರವು ವರ್ಷಪೂರ್ತಿ ನಿರಂತರ ಅಧಿವೇಶನದ ಭಾಗವಾಗಿ ನಡೆಸಲ್ಪಡುತ್ತವೆ.

ಯಾರು ಅರ್ಜಿ ಸಲ್ಲಿಸಬಹುದು ?

ಪದವಿ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಮತ್ತು ಇತ್ತೀಚಿನ ಪದವೀಧರರು ಈ ಸರ್ಕಾರಿ ಇಂಟರ್ನ್‌ಶಿಪ್‌ಗಳಿಗೆ ಅರ್ಜಿ ಸಲ್ಲಿಸಬಹುದು . ಅರ್ಹತಾ ಅವಶ್ಯಕತೆಗಳು ಸಂಸ್ಥೆಯಿಂದ ಸಂಸ್ಥೆಗೆ ಬದಲಾಗಬಹುದು, ಆದ್ದರಿಂದ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಎಚ್ಚರಿಕೆಯಿಂದ ಓದುವುದು ಮುಖ್ಯ.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶ; ಸಂಶೋಧನಾ ಸಹಾಯಕ ಹುದ್ದೆಗೆ ನೇಮಕಾತಿ

ವಲಯವಾರು ಉನ್ನತ ಇಂಟರ್ನ್‌ಶಿಪ್ ಅವಕಾಶಗಳು:

  • ನೀತಿ ಮತ್ತು ಆಡಳಿತ: ಪ್ರಧಾನ ಮಂತ್ರಿ ಕಚೇರಿ ಇಂಟರ್ನ್‌ಶಿಪ್ ಯೋಜನೆ, ನೀತಿ ಆಯೋಗ ಮತ್ತು ವಿದೇಶಾಂಗ ಸಚಿವಾಲಯ
  • ಹಣಕಾಸು: ಆರ್‌ಬಿಐ ಸಂಶೋಧನೆ ಮತ್ತು ಬೇಸಿಗೆ ಇಂಟರ್ನ್‌ಶಿಪ್ , ಸೆಬಿ ಇಂಟರ್ನ್‌ಶಿಪ್
  • ಕಾನೂನು ಮತ್ತು ಹಕ್ಕುಗಳು: ಕಾನೂನು ಆಯೋಗ, NALSA , WIPO
  • ವಿಜ್ಞಾನ ಮತ್ತು ತಂತ್ರಜ್ಞಾನ: ಇಸ್ರೋ , ಸಿಎಸ್‌ಐಆರ್ , ಎನ್‌ಸಿಆರ್‌ಜಿ

ಸರ್ಕಾರಿ ಇಂಟರ್ನ್‌ಶಿಪ್ ಏಕೆ ಪ್ರಯೋಜನಕಾರಿ ?

ಈ ಇಂಟರ್ನ್‌ಶಿಪ್‌ಗಳ ಸಮಯದಲ್ಲಿ , ಯುವಜನರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಮತ್ತು ವಿಷಯ ತಜ್ಞರಿಂದ ನೇರ ಮಾರ್ಗದರ್ಶನ ಪಡೆಯುತ್ತಾರೆ. ನೀತಿ ನಿರೂಪಣಾ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು, ನೈಜ-ಪ್ರಪಂಚದ ಯೋಜನೆಗಳಲ್ಲಿ ಕೆಲಸ ಮಾಡಲು ಮತ್ತು ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವವರೊಂದಿಗೆ ಸಂಪರ್ಕ ಸಾಧಿಸಲು ಅವರಿಗೆ ಅವಕಾಶವಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version