Headlines

Bengaluru Karaga: ಇಂದು ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ; ಹಸಿ ಕರಗ ಹೊತ್ತು ದ್ರೌಪದಿ ದೇವಿ ದರ್ಶನ!

ಬೆಂಗಳೂರು, ಮಾರ್ಚ್​ 31: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವು ಪ್ರತಿ ವರ್ಷದಂತೆ ಈ ಬಾರಿಯೂ ಸಡಗರದಿಂದ ನಡೆಯಲು ಸಿದ್ಧವಾಗಿದೆ. ಧರ್ಮರಾಯಸ್ವಾಮಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಚೈತ್ರ ಹುಣ್ಣಿಮೆಗೆ ಮೂರು ದಿನಗಳ ಮೊದಲು ದ್ರೌಪದಿ ದೇವಿ ಭೂಮಿಗೆ ಬರುವ ನಂಬಿಕೆ ಈ ಉತ್ಸವದ ಪ್ರಮುಖ ಅಂಶವಾಗಿದೆ. ಈ ಆಚರಣೆಗೆ ಮಹಾಭಾರತ ಕಾಲದ ಇತಿಹಾಸವಿದೆ. ಪಾಂಡವರ ಸ್ವರ್ಗಾರೋಹಣದ ಸಂದರ್ಭದಲ್ಲಿ ತಾಯಿ ದ್ರೌಪದಿ ದೇವಿ ಮೂರ್ಛೆ ಹೋದಾಗ, ತಿಮಿರಾಸುರ ಎಂಬ…

Read More

‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು

ಟೊವಿನೋ ಥಾಮಸ್ (Tovino Thomas) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗಲಿದ್ದು, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಮ್ಸ್ ವಿತರಣೆ ಮಾಡುತ್ತಿದ್ದು, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾನಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ….

Read More

ಸಮುದಾಯಗಳ ನಡುವೆ ಬೆಂಕಿ ಹಚ್ಚುವ ಯತ್ನಿಸಿದವರ ಹೆಡೆಮುರಿ ಕಟ್ಟಿದ ಪೊಲೀಸರು – Kannada News | Udupi: Manager and Businessman Arrested for Spreading Communal Hate Video via WhatsApp

ಉಡುಪಿ, ಜನವರಿ 30: ಸೋಶಿಯಲ್​ ಮೀಡಿಯಾದಲ್ಲಿ ಮನಸ್ಸಿಗೆ ಬಂದದನ್ನು ಪೋಸ್ಟ್ ಮಾಡುವವರು ಅಥವಾ ಬೇರೆಯವರಿಗೆ ಶೇರ್​ ಮಾಡುವವರು ಈ ಸ್ಟೋರಿಯನ್ನ ಒಮ್ಮೆ ಓದಿ. ಸಾಮಾಜಿಕ ಜಾಲತಾಣದ ಮೂಲಕ ದ್ವೇಷ ಹರಡಿದ ಆರೋಪ ಹಿನ್ನೆಲೆ ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಶಿಕ್ಷಕರ ಸಹಕಾರ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಕುಮಾರಶೆಟ್ಟಿ ಮತ್ತು ಉದ್ಯಮಿ ಕೆ.ನಾಗರಾಜ್ ಬಂಧಿತರು (Arrested). ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ಗ್ರೂಪ್​ನಲ್ಲಿ ವಿಡಿಯೋ ಶೇರ್​​ ಬಂಧಿತರು ವಾಟ್ಸಾಪ್ ಗ್ರೂಪ್​ನಲ್ಲಿ ಸಮುದಾಯಗಳ…

Read More

ವೇದಿಕೆ ಮೇಲೆ ವಾಂತಿ ಮಾಡಿ ಬಿದ್ರು: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಬೆಂಗಳೂರು, (ಏಪ್ರಿಲ್ 03): ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ (santosh hegde) ಅವರು ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದುಬಿದ್ದಿದ್ದಾರೆ. ಬೆಂಗಳೂರಿನ (Bengaluru) ಮಹಾರಾಣಿ ಕಾಲೇಜಿನ ಸಮೀಪವಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಂತೋಷ್ ಹೆಗ್ಡೆ ಅವರನ್ನು ಆಹ್ವಾನಿಸಲಾಗಿತ್ತು. ವೇದಿಕೆಯ ಮೇಲೆ ಡಯಾಸ್ ಬಳಿ ನಿಂತು ನೆರೆದಿದ್ದವರನ್ನು ಉದ್ದೇಶಿಸಿ ಮಾತಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ…

Read More

ಗ್ಯಾಸ್​ ಬುಕಿಂಗ್ ಆಗುತ್ತಿಲ್ಲವೇ? ವಾಟ್ಸಾಪ್ ಮೂಲಕ ಸುಲಭವಾಗಿ LPG ಬುಕ್ ಮಾಡುವುದು ಹೇಗೆ?

ನವದೆಹಲಿ, ಮಾರ್ಚ್ 14: ಎಲ್​ಪಿಜಿ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಿಲ್ಲ, ದೇಶದಲ್ಲಿ ಬೇಕಾದಷ್ಟು ಎಲ್​ಪಿಜಿ (LPG Cylinder Booking) ಸಂಗ್ರಹವಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಆದರೂ ಗ್ರಾಹಕರಿಗೆ ಆ್ಯಪ್ ಮೂಲಕ, ಎಸ್​ಎಂಎಸ್ ಅಥವಾ ಆನ್​ಲೈನ್ ಮೂಲಕ ಸಿಲಿಂಡರ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ. ಗ್ಯಾಸ್ ಬುಕ್ ಮಾಡಲಾಗದೆ ಜನರು ಪರದಾಡುತ್ತಿದ್ದಾರೆ. ಫೋನ್, ಮಿಸ್ಡ್ ಕಾಲ್, ಆ್ಯಪ್, ವಾಟ್ಸಾಪ್ ಮೂಲಕ ನೀವು ಹೇಗೆ ಸುಲಭವಾಗಿ ಎಲ್​ಪಿಜಿ ಸಿಲಿಂಡರ್ ಬುಕ್ ಮಾಡಬಹುದು ಎಂಬುದರ ಮಾಹಿತಿ ಇಲ್ಲಿದೆ. ಜಾಗತಿಕ ಯುದ್ಧದ ಪರಿಣಾಮವಾಗಿ ಎಲ್ಲೆಡೆ…

Read More

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾಳೆ ಪ್ರಧಾನಿ ಮೋದಿ ಸಂವಾದ

ನವದೆಹಲಿ, ಮಾರ್ಚ್​ 26: ಅಮೆರಿಕ, ಇಸ್ರೇಲ್, ಇರಾನ್ ನಡುವಿನ ಸಂಘರ್ಷ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ದೇಶದ ಸಿದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಶುಕ್ರವಾರ(ಮಾರ್ಚ್​ 27) ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂವಾದ ನಡೆಸಲಿದ್ದಾರೆ. ಮಾದರಿ ನೀತಿ ಸಂಹಿತೆ (MCC) ಯಿಂದಾಗಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ. ಆದಾಗ್ಯೂ, ಚುನಾವಣೆ ನಡೆಯಲಿರುವ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗಾಗಿ ಪ್ರತ್ಯೇಕ ಸಭೆ ಶೀಘ್ರದಲ್ಲೇ ನಡೆಯಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು…

Read More

ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಕೊಚ್ಚಿ ಹಾಕಿದ್ರು! – Kannada News | Bengaluru rowdy sheeter pavan kumar brutal murder in front of his mother at thanisandra

ಬೆಂಗಳೂರು, (ಫೆಬ್ರವರಿ 26): ರೌಡಿಶೀಟರ್ ಪವನ್ ಕುಮಾರ್‌ನನ್ನು (Rowdy sheeter Pawan Kumar)  ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ನಡೆದಿದೆ. ಡಿಜೆ ಹಳ್ಳಿಯ ಕಪಿಲ್ ಕೊಲೆಯಲ್ಲಿ ಭಾಗಿಯಾಗಿದ್ದ ಪವನ್ ಕುಮಾರ್ ಎನ್ನುವಾತನನ್ನೇ ಆತನ ತಾಯಿ ಎದುರೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೂರು ವರ್ಷಗಳ ಹಿಂದಿನ ಕಪಿಲ ಎಂಬಾತನ ಕೊಲೆಗೆ ಸೇಡಿಗಾಗಿ ನಡೆದ ರಿವೇಂಜ್ ಮರ್ಡರ್ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ….

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

Virat Kohli: ಒಂದೇ ಪಂದ್ಯದಲ್ಲಿ ಚೇಸ್ ಮಾಸ್ಟರ್​ ಹೆಸರಿಗೆ 10 ದಾಖಲೆಗಳು ಸೇರ್ಪಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದ ಮೂಲಕವೇ ವಿರಾಟ್ ಕೊಹ್ಲಿ ದಾಖಲೆಗಳ ಮೇಲೆ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಕೇವಲ 38 ಎಸೆತಗಳಲ್ಲಿ 69 ರನ್ ಸಿಡಿಸುವ ಮೂಲಕ. ಈ 69 ರನ್​ಗಳೊಂದಿಗೆ ಕಿಂಗ್ ಕೊಹ್ಲಿ ಬರೆದಿರುವ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… 4000 ರನ್​: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ…

Read More

Chittoor Accident: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಚಿತ್ತೂರು ಬಳಿ ಅಪಘಾತ, ಕರ್ನಾಟಕದ ಐವರು ಸಾವು – Kannada News | Bengaluru–Tirupati Journey Ends in Tragedy After Highway Crash in Chittoor

ಚಿತ್ತೂರು, ಮಾರ್ಚ್​ 04: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತ(Accident)ಕ್ಕೀಡಾಗಿದ್ದು, ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ವರದಿಯಾಗಿದೆ. ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಅತಿ ವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತರುವುದು ಪೊಲೀಸರಿಗೆ ಕಷ್ಟಕರವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ….

Read More