ಬಿಜೆಪಿ-ಕಾಂಗ್ರೆಸ್ ನಡುವೆ ಧ್ವಜ ದಂಗಲ್: ಉಡುಪಿ ಡಿಸಿ ನಡೆ ಬಗ್ಗೆ ಪರ-ವಿರೋಧ ಚರ್ಚೆ – Kannada News | Udupi Flag Row: BJP Opposes Congress Complaint; DC Issues Clarification
ಉಡುಪಿ ಡಿಸಿ ನಡೆಗೆ ಪರ-ವಿರೋಧ ಚರ್ಚೆ ಉಡುಪಿ, ಜನವರಿ 21: ಶೀರೂರು ಮಠದ ಪರ್ಯಾಯ ಮಹೋತ್ವ ಹಿನ್ನೆಲೆ ಉಡುಪಿಯ ಜೋಡುಕಟ್ಟೆಯಿಂದ ಆರಂಭವಾದ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಜಿಲ್ಲಾಧಿಕಾರಿಗಳಿಂದ ಚಾಲನೆ ವಿಚಾರವೀಗ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಶಾಸಕ ಯಶಪಾಲ್ ಸುವರ್ಣ ನೀಡಿದ್ದ ಕೇಸರಿ ಧ್ವಜವನ್ನು ಪಡೆದಿದ್ದ ಡಿಸಿ ಸ್ವರೂಪ ಟಿ. ಕೆ. ಅದನ್ನು ತೋರಿಸುವ ಮೂಲಕ ಪರ್ಯಾಯ ಮೆರವಣಿಗೆ ಚಾಲನೆ ನೀಡಿದ್ದರು. ಇದೇ ವಿಚಾರಕ್ಕೀಗ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಕ್ಷೇಪ ತೆಗೆದಿದೆ. ಮುಂದುವರಿದು ಮುಖ್ಯಮಂತ್ರಿಗಳಿಗೆ…