IAF Recruitment 2026: ಭಾರತೀಯ ವಾಯುಪಡೆಯಲ್ಲಿ ನೇಮಕಾತಿ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ – Kannada News | IAF Agniveer Vayu Non Combatant Recruitment 2026: Apply for Air Force Jobs

ಅಗ್ನಿಪಥ್ ಯೋಜನೆಯ ಭಾಗವಾಗಿ ಭಾರತೀಯ ವಾಯುಪಡೆಯು ಅಗ್ನಿವೀರ್ ವಾಯು (Agniveer Vayu) ನಾನ್-ಕಾಂಬಟೆಂಟ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಇರುವ ವಾಯುಪಡೆ ನಿಲ್ದಾಣಗಳ ಹಾಸ್ಪಿಟಾಲಿಟಿ ಮತ್ತು ಹೌಸ್ ಕೀಪಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಸೇವೆ ಮಾಡಲು ಆಸಕ್ತಿ ಹೊಂದಿರುವ ಯುವಕರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು, ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸನ್ನು ನನಸು ಮಾಡುವ ಅವಕಾಶವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅವಿವಾಹಿತ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ದೈಹಿಕ ಅರ್ಹತೆಯಾಗಿ ಅಭ್ಯರ್ಥಿಗಳ ಎತ್ತರ ಕನಿಷ್ಠ 152 ಸೆಂಟಿಮೀಟರ್ ಇರಬೇಕು. ವಯೋಮಿತಿ 21 ವರ್ಷಗಳ ಒಳಗಿರಬೇಕು. ಅಂದರೆ, ಅಭ್ಯರ್ಥಿಗಳು ಜುಲೈ 2, 2005 ರಿಂದ ಜನವರಿ 2, 2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಧಿಸೂಚನೆಯಲ್ಲಿ ನೀಡಿರುವ ಎಲ್ಲಾ ಮಾನದಂಡಗಳನ್ನು ಪೂರೈಸಿದವರು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆಫ್‌ಲೈನ್ ಮೂಲಕ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 23 ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳ ಪ್ರತಿಗಳನ್ನು ಜೊತೆಯಾಗಿ ಕಳುಹಿಸುವುದು ಕಡ್ಡಾಯವಾಗಿದೆ.

ಅಭ್ಯರ್ಥಿಗಳ ಅಂತಿಮ ಆಯ್ಕೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ SST (ಸ್ಕ್ರೀನಿಂಗ್/ಸ್ಕಿಲ್ ಟೆಸ್ಟ್) ಆಧಾರಿತವಾಗಿರುತ್ತದೆ. ಈ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಸಾಮರ್ಥ್ಯ, ಆರೋಗ್ಯ ಹಾಗೂ ಕಾರ್ಯನೈಪುಣ್ಯವನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಮಾತ್ರ ನೇಮಕಾತಿ ನೀಡಲಾಗುತ್ತದೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 30,000 ವೇತನವನ್ನು ಇತರ ಭತ್ಯೆಗಳೊಂದಿಗೆ ನೀಡಲಾಗುತ್ತದೆ. ಈ ನೇಮಕಾತಿ ನಾಲ್ಕು ವರ್ಷಗಳ ಒಪ್ಪಂದದ ಆಧಾರದ ಮೇಲೆ ನಡೆಯಲಿದೆ. ಸೇವಾ ಅವಧಿಯಲ್ಲಿ ತರಬೇತಿ, ಶಿಸ್ತು ಮತ್ತು ವೃತ್ತಿಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶ ಲಭ್ಯವಿದ್ದು, ಭವಿಷ್ಯದ ಉದ್ಯೋಗಾವಕಾಶಗಳಿಗೆ ಇದು ಉತ್ತಮ ಅನುಭವವಾಗುತ್ತದೆ.

ವಾಯುಪಡೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವ ಯುವಕರಿಗೆ ಇದು ಅಪರೂಪದ ಅವಕಾಶವಾಗಿದ್ದು, ಅರ್ಹ ಅಭ್ಯರ್ಥಿಗಳು ಸಮಯ ವ್ಯರ್ಥ ಮಾಡದೆ ತಕ್ಷಣವೇ ಅರ್ಜಿ ಸಲ್ಲಿಸುವುದು ಒಳಿತು. ರಾಷ್ಟ್ರಸೇವೆಯ ಜೊತೆಗೆ ಸ್ಥಿರವಾದ ವೃತ್ತಿಜೀವನದ ದಾರಿ ತೆರೆದಿಡುವ ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ.

ಅಧಿಕೃತ ಅಧಿಸೂಚನೆ ಹಾಗೂ ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್​ ಮಾಡಿ: 

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹೂಡಿಕೆಗಳು ಎತ್ತ..? ಕುಗ್ಗಿದ ಈಕ್ವಿಟಿ ಮ್ಯೂಚುವಲ್ ಫಂಡ್​ಗಳು; ಹಿಗ್ಗಿದ ಗೋಲ್ಡ್ ಇಟಿಎಫ್​ಗಳು – Kannada News | Gold ETFs attract more investment, while Equity mutual funds see decline in inflows

ನವದೆಹಲಿ, ಫೆಬ್ರುವರಿ 10: ಸತತ ಎರಡನೇ ತಿಂಗಳು ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ (Equity Mutual Funds) ಹೂಡಿಕೆಗಳ ಒಳಹರಿವು ಕಡಿಮೆ ಆಗಿದೆ. ಭಾರತೀಯ ಮ್ಯೂಚುವಲ್ ಫಂಡ್​ಗಳ ಸಂಘಟನೆಯಾದ ಎಎಂಎಫ್​ಐ ನೀಡಿರುವ ಮಾಹಿತಿ ಪ್ರಕಾರ ಜನವರಿ ತಿಂಗಳಲ್ಲಿ 24,029 ಕೋಟಿ ರೂ ಮೊತ್ತದಷ್ಟು ಹೂಡಿಕೆಗಳು ಈಕ್ವಿಟಿ ಫಂಡ್​ಗಳಿಗೆ ಬಂದಿವೆ. ಹಿಂದಿನ ತಿಂಗಳಿಗೆ ಹೋಲಿಸಿದರೆ ಜನವರಿಯಲ್ಲಿ ಈಕ್ವಿಟಿ ಫಂಡ್​ಗಳಿಗೆ ಸಿಕ್ಕ ಫಂಡ್​ನಲ್ಲಿ ಶೇ. 14 ಇಳಿಕೆ ಆಗಿದೆ. 2025ರ ಡಿಸೆಂಬರ್ ತಿಂಗಳಲ್ಲಿ ಈಕ್ವಿಟಿ ಫಂಡ್​ಗಳು 28,054 ಕೋಟಿ ರೂ ಹೂಡಿಕೆಯನ್ನು ಆಕರ್ಷಿಸಿದ್ದವು.

ಇನ್ನು, 2025ರ ಜನವರಿಯಲ್ಲಿ ಈ ಫಂಡ್​ಗಳಿಗೆ ಹರಿದುಬಂದಿದ್ದ ಹೂಡಿಕೆಯ ಒಟ್ಟು ಮೊತ್ತ 39,687 ಕೋಟಿ ರೂ. ಇದಕ್ಕೆ ಹೋಲಿಸಿದರೆ 2026ರ ಜನವರಿಯಲ್ಲಿ ಹರಿದುಬಂದ ಹೂಡಿಕೆಯಲ್ಲಿ ಬರೋಬ್ಬರಿ ಶೇ. 39ರಷ್ಟು ಕಡಿಮೆ ಆಗಿದೆ.

ಇದನ್ನೂ ಓದಿ: ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ?

ಈಕ್ವಿಟಿ ಫಂಡ್​ಗಳ ಪೈಕಿ ಮಿಡ್ ಕ್ಯಾಪ್ ಫಂಡ್​ಗಳು, ಸ್ಮಾಲ್ ಕ್ಯಾಪ್ ಫಂಡ್​ಗಳಿಗೆ ಬರುವ ಹೂಡಿಕೆ ಒಳಹರಿವಿಲ್ಲಿ ಶೇ. 23-24ರಷ್ಟು ಕಡಿಮೆ ಆಗಿದೆ. ಇಎಲ್​​ಎಸ್​ಎಸ್ ಫಂಡ್​ಗಳಿಂದ 593 ಕೋಟಿ ರೂ ಹೊರಹರಿವು ಆಗಿದೆ.

ಲಾರ್ಜ್ ಕ್ಯಾಪ್ ಫಂಡ್​ಗಳು, ಫ್ಲೆಕ್ಸಿ ಕ್ಯಾಪ್ ಫಂಡ್​ಗಳು, ಫೋಕಸ್ಡ್ ಫಂಡ್​ಗಳು ಬೇಡಿಕೆ ಉಳಿಸಿಕೊಂಡಿವೆ.

ಗೋಲ್ಡ್ ಇಟಿಎಫ್​ಗಳಿಗೆ ಹೆಚ್ಚಿದ ಹೂಡಿಕೆ

ಈಕ್ವಿಟಿ ಮ್ಯೂಚುವಲ್ ಫಂಡ್​ಗಳಿಗೆ ಜನವರಿಯಲ್ಲಿ ಬೇಡಿಕೆ ತಗ್ಗಿರುವ ಹೊತ್ತಲ್ಲೇ ಗೋಲ್ಡ್ ಇಟಿಎಫ್​ಗಳಿಗೆ (Gold ETFs) ಹೂಡಿಕೆಗಳು ಮುಗಿಬಿದ್ದು ಹೋಗುತ್ತಿವೆ. ಕಳೆದ 1-2 ವರ್ಷದಲ್ಲಿ ಸಿಕ್ಕಾಪಟ್ಟೆ ಬೆಳೆದಿರುವ ಕಾರಣಕ್ಕೆ ಬಹಳಷ್ಟು ಹೂಡಿಕೆದಾರರು ಗೋಲ್ಡ್ ಇಟಿಎಫ್ ಮತ್ತು ಸಿಲ್ವರ್ ಇಟಿಎಫ್​ಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು

ಎಎಂಎಫ್​ಐ ರಿಪೋರ್ಟ್ ಪ್ರಕಾರ ಜನವರಿಯಲ್ಲಿ ನಿವ್ವಳ ಒಳ ಹರಿವು 24,040 ಕೋಟಿ ರೂ ದಅಖಲಾಗಿದೆ. ಡಿಸೆಂಬರ್​ನಲ್ಲಿ ದಾಖಲಾಗಿರುವುದಕ್ಕೆ ಹೋಲಿಸಿದರೆ ಜನವರಿಯಲ್ಲಿ ಎರಡು ಪಟ್ಟು ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Video: 50 ಲಕ್ಷ ರೂ ಸಂಬಳದ ಉದ್ಯೋಗ ತೊರೆದು ಮೊಮೊ ಶಾಪ್ ತೆರೆದು ಕೋಟಿ ಸಂಪಾದಿಸಿದ ವ್ಯಕ್ತಿ – Kannada News | Gurgaon Man says goodbye to lakh salary job and opens Momo shop

ಕೈ ತುಂಬಾ ಸಂಬಳ ಸಿಗೋ ದುಡಿಮೆ (job) ಹೊಂದಿದ್ದರೂ ಕೆಲವರಿಗೆ ತೃಪ್ತಿ ಅನ್ನೋದೆ ಇರಲ್ಲ. ಜೀವನ ಪರ್ಯಂತ ಕೊರತೆಯೊಂದು ಕಾಡುತ್ತಿರುತ್ತದೆ. ಯಾರ ಕೈ ಕೆಳಗೂ ಕೆಲಸ ಮಾಡದೇ ಸ್ವಂತವಾಗಿ ಏನಾದ್ರು ಮಾಡಿಕೊಳ್ಳಬೇಕು ಎನ್ನುವುದಿರುತ್ತದೆ. ಆದರೆ, ಗುರ್ಗಾವ್ (Gurgaon) ಮೂಲದ ಉದ್ಯಮಿಯೊಬ್ಬರು ತಮ್ಮ ಸಣ್ಣದಾದ ಮೊಮೊ ಶಾಪ್  ತೆರೆದು, ಅದನ್ನು ಹೇಗೆ ಲಾಭದಾಯಕ ವ್ಯವಹಾರವಾಗಿ ಬದಲಾಯಿಸಿ ಕೊಂಡರು ಎನ್ನುವುದಕ್ಕೆ ಇದುವೇ ನೈಜ ಉದಾಹರಣೆ. ಈ ಉದ್ಯಮಿಯ ಹೆಸರು ಸಾಕೇತ್ ಸೌರಭ್ (Saketh Sowrabh). ಲಕ್ಷಾನುಗಟ್ಟಲೇ ಸಂಬಳದ ಉದ್ಯೋಗ ತೊರೆದು ಸ್ವಂತ ಉದ್ಯಮ ಬದುಕು ಕಟ್ಟಿಕೊಂಡಿದ್ದಾರೆ. ಯಶಸ್ವಿ ಉದ್ಯಮಿಯ ವಿಡಿಯೋ ವೈರಲ್ ಆಗಿದೆ.

ದಿ ಮೊಮೊಸ್ ಮಾಫಿಯಾ (The Momos Mafia) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ 50 ಲಕ್ಷ ರೂ ಸಂಬಳದ ಕೆಲಸಕ್ಕೆ ರಾಜೀನಾಮೆ ನೀಡಿ ಮೊಮೋ ಬ್ಯುಸಿನೆಸ್ ಪ್ರಾರಂಭಿಸಿದೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಹೌದು, ಸಾಕೇತ್ ಸೌರಭ್ ಅವರು 2023 ರಲ್ಲಿ ತಮ್ಮ ಉತ್ತಮ ಸಂಬಳದ ಉದ್ಯೋಗವನ್ನುತೊರೆದರು. ಆ ಬಳಿಕ ದಿ ಮೊಮೊಸ್ ಮಾಫಿಯಾ ಉದ್ಯಮ ಆರಂಭಿಸಿ,ಇದೀಗ ಅದರ ಸಹ-ಸಂಸ್ಥಾಪಕ ಹಾಗೂ ಸಿಇಒ ಆಗಿದ್ದಾರೆ. ಇದೀಗ ಈ ಮೊಮೊಸ್ ಮಾಫಿಯಾ ಫ್ರಾಂಚೈಸ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಏಳು ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ. ಎರಡೂವರೆ ವರ್ಷಗಳಲ್ಲಿ, ತಮ್ಮ ಕಂಪನಿಯು  5 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸುತ್ತಿದ್ದು ಯಶಸ್ಸು ಸಾಧಿಸಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವಿಶ್ರಾಂತಿ ಪಡೆಯದೇ ದಿನದ 14 ಗಂಟೆ ಕೆಲಸ ಮಾಡಿದ ಬೆಂಗಳೂರಿನ ಮಹಿಳೆ, ಮುಂದೇನಾಯ್ತು ಗೊತ್ತಾ?

ಈ ವಿಡಿಯೋ ಮೂರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಆತ್ಮವಿಶ್ವಾಸವಿದ್ದರೆ ಎಲ್ಲವೂ ಸಾಧ್ಯ ಎಂದಿದ್ದಾರೆ. ಇನ್ನೊಬ್ಬರು, ಇಂತಹ ಯುವಕರು ಎಲ್ಲರಿಗೂ ಸ್ಫೂರ್ತಿ, ಇನ್ನಷ್ಟು ಯಶಸ್ಸು ಸಿಗಲಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇದು ನಿಮ್ಮ ಜೀವನದ ಉತ್ತಮ ನಿರ್ಧಾರ, ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು! – Kannada News | HVF Chennai Recruitment 2026: 220 Jr Technician Jobs in Defense Sector Apply Now!

ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಇಲ್ಲಿದೆ. ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (Heavy Vehicles Factory – HVF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿಯಲ್ಲಿ ಒಟ್ಟು 220 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಉತ್ತಮ ಉದ್ಯೋಗ ಅವಕಾಶವಾಗಿದೆ. ಆಸಕ್ತರು ಫೆಬ್ರವರಿ 14ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿಭಾಗವಾರು ಹಂಚಿಕೆಯಲ್ಲಿ ಜೂನಿಯರ್ ಟೆಕ್ನಿಷಿಯನ್ (ಮೆಷಿನಿಸ್ಟ್) ಹುದ್ದೆಗಳು ಹೆಚ್ಚು ಸಂಖ್ಯೆಯಲ್ಲಿ ಲಭ್ಯವಿದ್ದು, 122 ಸ್ಥಾನಗಳಿವೆ. ಆಪರೇಟರ್ – ಮೆಟೀರಿಯಲ್ ಹ್ಯಾಂಡ್ಲಿಂಗ್ ಎಕ್ವಿಪ್ಮೆಂಟ್ ವಿಭಾಗದಲ್ಲಿ 55 ಹುದ್ದೆಗಳು, ರಿಗ್ಗರ್ ವಿಭಾಗದಲ್ಲಿ 25, ಹೀಟ್ ಟ್ರೀಟ್ಮೆಂಟ್ ಆಪರೇಟರ್‌ಗೆ 8, ಸ್ಯಾಂಡ್ ಆ್ಯಂಡ್ ಶಾಟ್ ಬ್ಲಾಸ್ಟರ್‌ಗೆ 6 ಹಾಗೂ ಫಿಟ್ಟರ್ ಆಟೋ ಎಲೆಕ್ಟ್ರಿಕ್ ವಿಭಾಗದಲ್ಲಿ 4 ಹುದ್ದೆಗಳು ಲಭ್ಯವಿವೆ. ಅಭ್ಯರ್ಥಿಗಳು ತಮ್ಮ ಅರ್ಹತೆ ಮತ್ತು ಅನುಭವಕ್ಕೆ ಅನುಗುಣವಾಗಿ ಹುದ್ದೆಯನ್ನು ಆಯ್ಕೆ ಮಾಡಬಹುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಜೊತೆಗೆ, ಸಂಬಂಧಿತ ಟ್ರೇಡ್‌ನಲ್ಲಿ ಕೆಲಸದ ಅನುಭವ ಹೊಂದಿರಬೇಕು. ಗರಿಷ್ಠ ವಯೋಮಿತಿ 35 ವರ್ಷಗಳಾಗಿದ್ದು, ಸರ್ಕಾರಿ ನಿಯಮಗಳ ಪ್ರಕಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ. ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಭ್ಯರ್ಥಿಗಳ ಅಂತಿಮ ಆಯ್ಕೆಯನ್ನು ವ್ಯಾಪಾರ ಪರೀಕ್ಷೆ (Trade Test) ಮತ್ತು ಅರ್ಹತೆಗಳ ಆಧಾರದ ಮೇಲೆ ಮಾಡಲಾಗುತ್ತದೆ.

ಭರ್ತಿ ಮಾಡಿದ ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು:
ಮುಖ್ಯ ಜನರಲ್ ಮ್ಯಾನೇಜರ್, ಹೆವಿ ವೆಹಿಕಲ್ಸ್ ಫ್ಯಾಕ್ಟರಿ, ಪೋಸ್ಟ್ ಬ್ಯಾಗ್ ಸಂಖ್ಯೆ 01, HVF ಎಸ್ಟೇಟ್, ಅವಡಿ, ಚೆನ್ನೈ – 600 054.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ – Kannada News | Promise Day 2026: Why is Promise Day celebrated? Know the history and significance of this day

ವ್ಯಾಲೆಂಟೈನ್‌ ವೀಕ್‌ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (Promise Day)  ಆಚರಿಸಲಾಗುತ್ತದೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ನೀಡುತ್ತಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ.

 ಪ್ರಾಮಿಸ್‌ ಡೇ ಆಚರಣೆ ಪ್ರಾರಂಭವಾದ್ದು ಹೇಗೆ?

ಪ್ರೇಮಿಗಳ ವಾರದಲ್ಲಿ ಆಚರಿಸಲಾಗುವಂತಹ ಪ್ರಾಮಿಸ್‌ ಡೇ ತುಂಬಾನೇ ವಿಶೇಷವಾಗಿದ್ದು, ಇದು ಇಬ್ಬರು ಜನರ ನಡುವಿನ ಬಾಂಧವ್ಯ ಮತ್ತು ಪ್ರೀತಿಯನ್ನು ಬಲಪಡಿಸುವ ದಿನವಾಗಿದೆ. ಪ್ರಾಮಿಸ್ ಡೇ ಬಗ್ಗೆ ಯಾವುದೇ ಲಿಖಿತ ಇತಿಹಾಸವಿಲ್ಲದಿದ್ದರೂ, ಪ್ರಾಮಿಸ್ ಡೇ ಅನ್ನು ಏಕೆ ಆಚರಿಸಲಾಗುತ್ತದೆ ಎಂಬುದಕ್ಕೆ ಸ್ಪಷ್ಟ ವಿವರಣೆ ಇಲ್ಲದಿದ್ದರೂ  ಪ್ರಾಮಿಸ್ ಡೇ ಆಚರಿಸುವ ಸಂಪ್ರದಾಯವು ಪ್ರಾಚೀನ ರೋಮ್‌ನಲ್ಲಿ ಪ್ರಾರಂಭವಾಯಿತು ಎಂದು ಹೇಳಾಗುತ್ತದೆ.

ಪ್ರಾಮಿಸ್ ಡೇಗೆ ಸಂಬಂಧಿಸಿದ ಒಂದು ಕಥೆಯ ಪ್ರಕಾರ, 1816 ರಲ್ಲಿ, ರಾಜಕುಮಾರಿ ಷಾರ್ಲೆಟ್ ತನ್ನ ಭಾವಿ ಪತಿಗೆ ಪ್ರಪೋಸ್ ಮಾಡಿದಳು. ನಂತರ ಅವರಿಬ್ಬರು ತಮ್ಮ ಸಂಬಂಧವನ್ನು ಬಲಪಡಿಸಲು ಪರಸ್ಪರ ಭರವಸೆ ನೀಡಿದರು. ಅದರ ನಂತರ, ಈ ಸಂಪ್ರದಾಯವು ಕ್ರಮೇಣ ಮುಂದುವರೆಯಿತು ಮತ್ತು ವ್ಯಾಲೆಂಟೈನ್ಸ್ ವೀಕ್‌ನಲ್ಲಿ ಈ ಪ್ರಾಮಿಸ್ ಡೇ ಆಚರಿಸುವ ಸಂಪ್ರದಾಯ ಬಂತು ಎಂದು ಹೇಳಲಾಗುತ್ತದೆ. ಈ ದಿನದಂದು, ಪ್ರೇಮಿಗಳು ತಮ್ಮ ಜೀವನದುದ್ದಕ್ಕೂ ತಮ್ಮ ಪ್ರೀತಿಯ ಸಂಬಂಧವನ್ನು ಬಲವಾಗಿಡಲು ಅನೇಕ ಭರವಸೆಗಳನ್ನು ನೀಡುತ್ತಾರೆ. ಪ್ರತಿಯೊಂದು ಕ್ಷಣವೂ ಜೊತೆಯಾಗಿರುತ್ತೇವೆ ಎಂದು ಪ್ರತಿಜ್ಞೆಯನ್ನೂ ಮಾಡುತ್ತಾರೆ.

ಪ್ರಾಮಿಸ್‌ ಡೇ ಮಹತ್ವವೇನು?

  • ಪ್ರಾಮಿಸ್ ಡೇ ಎಂದರೆ ಪ್ರೀತಿಯನ್ನು ಬದ್ಧತೆಯಾಗಿ ಪರಿವರ್ತಿಸುವ ದಿನ.
  • ಇದು ಸಂಬಂಧದಲ್ಲಿ ನಂಬಿಕೆಯನ್ನು ಹೆಚ್ಚಿಸುತ್ತದೆ
  • ಕಷ್ಟದ ಸಮಯದಲ್ಲಿ ಒಟ್ಟಾಗಿ ನಿಲ್ಲಲು ಶಕ್ತಿ ನೀಡುತ್ತದೆ.
  • ಭರವಸೆಗಳು ವ್ಯಕ್ತಿಯ ವಿಶ್ವಾಸಾರ್ಹತೆಯನ್ನು ಹೆಚ್ಚಿಸುತ್ತವೆ.
  • ಭರವಸೆಯು ಒಂದು ದಾರವಾಗಿದ್ದು, ಇದು ಬಂಧವನ್ನು ಬಿಗಿಗೊಳಿಸುತ್ತದೆ.
  • ಒಟ್ಟಾರೆಯಾಗಿ ಇದು ಸಂಬಂಧವನ್ನು ಬಲಪಡಿಸಲು ಮತ್ತು ಸಂಗಾತಿಗಳ ನಡುವಿನ ನಂಬಿಕೆಯನ್ನು ಹೆಚ್ಚಿಸಲು ಇರುವ ವಿಶೇಷ ದಿನವಾಗಿದೆ.

ಇದನ್ನೂ ಓದಿ: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ಭಾಗವಾಗಿದ್ದು ಹೇಗೆ? ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಪ್ರಾಮಿಸ್‌ ಡೇ ದಿನ ನೀವು ಈ ಭರವಸೆಗಳನ್ನು ನೀಡಬಹುದು:

  • ಪ್ರಾಮಿಸ್ ಡೇ ದಿನದಂದು, ನಿಮ್ಮ ಸಂಗಾತಿಯನ್ನು ಯಾವಾಗಲೂ ಸಂತೋಷವಾಗಿಡುತ್ತೇನೆ ಎಂದು ನೀವು ಭರವಸೆ ನೀಡಬಹುದು.
  • ಎಷ್ಟೇ ದೊಡ್ಡ ಜಗಳವಾದರೂ ನಿನ್ನನ್ನು ಬಿಟ್ಟು ಹೋಗುವುದಿಲ್ಲ ಎಂಬ ಪ್ರತಿಜ್ಞೆ ಮಾಡಬಹುದು.
  • ಯಾವುದೇ ಸಂಬಂಧಕ್ಕೂ ಪ್ರೀತಿ ಅತ್ಯಗತ್ಯ. ಪ್ರಾಮಿಸ್ ಡೇಯಂದು ನಿಮ್ಮ ಸಂಗಾತಿಗೆ ಅವರ ಮೇಲಿನ ನಿಮ್ಮ ಪ್ರೀತಿ ಎಂದಿಗೂ ಕಡಿಮೆಯಾಗುವುದಿಲ್ಲ ಎಂದು ನೀವು ಭರವಸೆ ನೀಡಬಹುದು.
  • ಸಂಗಾತಿಯ ಎಲ್ಲಾ ಕನಸುಗಳನ್ನು ಈಡೇರಿಸುವಲ್ಲಿ ನಿಮ್ಮ ಸಂಗಾತಿಯನ್ನು ಬೆಂಬಲಿಸುವುದಾಗಿ ಭರವಸೆ ನೀಡಬಹುದು.
  • ಎಷ್ಟೇ ಬ್ಯುಸಿ ಇದ್ದರೂ ಸಹ ನಿನಗಾಗಿ ಪ್ರತಿನಿತ್ಯ ಸ್ವಲ್ಪ ಸಮಯ ಮೀಸಲಿಡುವೆ, ನಿನ್ನೊಂದಿಗೆ ಸಮಯ ಕಳೆಯುವೇ ಎಂಬ ಪ್ರತಿಜ್ಞೆಯನ್ನೂ ಮಾಡಬಹುದು.
  • ನೀವು ನಿಮ್ಮ ಸಂಗಾತಿಯ ನಂಬಿಕೆಯನ್ನು ಎಂದಿಗೂ ಮುರಿಯುವುದಿಲ್ಲ ಮತ್ತು ಯಾವಾಗಲೂ ನಿಷ್ಠರಾಗಿರುತ್ತೀರಿ ಎಂದು ಪ್ರಾಮಿಸ್‌ ಮಾಡಬಹುದು.
  • ನೀವು ಅವರ ಭಾವನೆಗಳನ್ನು ಗೌರವಿಸುವಿರಿ ಮತ್ತು ಪ್ರತಿಯೊಂದು ಸನ್ನಿವೇಶದಲ್ಲೂ ಅವರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವ ಮೂಲಕ ಅವರಿಗೆ ಪೂರ್ಣ ಗೌರವವನ್ನು ನೀಡುವಿರಿ ಎಂಬ ಭರವಸೆಯನ್ನೂ ನೀಡಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ – Kannada News | Big HRA Boost for Bengaluru: 50% Tax Exemption as Metro City Status Confirmed

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ ಕೇವಲ ಶೇ. 40 ರಷ್ಟು ಮಾತ್ರ ವಿನಾಯಿತಿ ಸಿಗುತ್ತಿತ್ತು. ಆದರೆ ಇದೀಗ ಬೆಂಗಳೂರನ್ನು ಮೆಟ್ರೋ ನಗರಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಮೂಲಕ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುವುದು.

ಸಂಸದ ತೇಜಸ್ವಿ ಸೂರ್ಯ ಅವರು ಎರಡು ವರ್ಷಗಳ ಹಿಂದೆಯೇ ಸಂಸತ್ತಿನಲ್ಲಿ ಮತ್ತು ಹಣಕಾಸು ಸಚಿವರ ಬಳಿ ಬೆಂಗಳೂರಿನ ಜೀವನ ವೆಚ್ಚ (Cost of Living) ದೆಹಲಿ-ಮುಂಬೈಗೆ ಸಮಾನವಾಗಿದೆ, ಆದ್ದರಿಂದ ಬೆಂಗಳೂರನ್ನು ಮೆಟ್ರೋ ಪಟ್ಟಿಗೆ ಸೇರಿಸಲೇಬೇಕು ಎಂದು ಒತ್ತಾಯಿಸಿದ್ದರು. ಆ ಬೇಡಿಕೆ ಈಗ ಈಡೇರಿದಂತಾಗಿದೆ. ಈ ಮೂಲಕ ಬೆಂಗಳೂರಿಗೆ ಮೆಟ್ರೋ ನಗರಗಳ ಪಟ್ಟಿಯಲ್ಲಿ ಸೇರುವ ಭಾಗ್ಯ ಸಿಕ್ಕಿದೆ.

ಇದನ್ನೂ ಓದಿ: GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ

ಇದರಿಂದ ಆಗುವ ನೇರ ಲಾಭವೇನು?

ಹೆಚ್ಚುವರಿ ತೆರಿಗೆ ಉಳಿತಾಯ: ಈಗ ನಿಮ್ಮ ಮೂಲ ವೇತನದ ಶೇ. 50 ರಷ್ಟು ಮೊತ್ತವನ್ನು HRA ವಿನಾಯಿತಿಯಾಗಿ ಪಡೆಯಬಹುದು. ಇದುವರೆಗೆ ಇದು ಶೇ. 40 ರಷ್ಟಿತ್ತು.

ವೇತನದಾರರಿಗೆ ನೆರವು: ಸಾಫ್ಟ್‌ವೇರ್ ಉದ್ಯೋಗಿಗಳು ಸೇರಿದಂತೆ ಖಾಸಗಿ ಮತ್ತು ಸರ್ಕಾರಿ ವಲಯದ ಲಕ್ಷಾಂತರ ಉದ್ಯೋಗಿಗಳ ಕೈಗೆ ಸಿಗುವ ವೇತನ ಹೆಚ್ಚಾಗಲಿದೆ.

ತೆರಿಗೆ ಹೊರೆ ಇಳಿಕೆ: ಒಟ್ಟು ತೆರಿಗೆ ವಿಧಿಸಬಹುದಾದ ಆದಾಯದಲ್ಲಿ (Taxable Income) ಹೆಚ್ಚಿನ ಕಡಿತ ಪಡೆಯಲು ಅವಕಾಶ ಸಿಗುವುದರಿಂದ ತೆರಿಗೆ ಪಾವತಿ ಕಡಿಮೆಯಾಗಲಿದೆ.

ಯಾವ ಆರ್ಥಿಕ ವರ್ಷದಿಂದ ಅನ್ವಯ?

ಸಂಸದ ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸಿರುವ ಈ ಹೊಸ ಡ್ರಾಫ್ಟ್ ನಿಯಮವು, ಕೇಂದ್ರ ಸರ್ಕಾರದ ಮುಂದಿನ ಅಧಿಸೂಚನೆಯ ಪ್ರಕಾರ ಆರ್ಥಿಕ ವರ್ಷ 2026-27 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಒಂದು ವೇಳೆ ಸರ್ಕಾರವು ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿದರೆ, ಪ್ರಸಕ್ತ ವರ್ಷದ ತೆರಿಗೆ ರಿಟರ್ನ್ಸ್‌ನಲ್ಲೂ ಲಾಭ ಸಿಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿ ರಾಜಾ ಸಾಬ್: ಚಿತ್ರಮಂದಿರದಲ್ಲಿ ಪ್ರಭಾಸ್ ಸಿನಿಮಾ ಫ್ಲಾಪ್, ಒಟಿಟಿಯಲ್ಲಿ ಸೂಪರ್ ಹಿಟ್ – Kannada News | Prabhas starrer The Raja Saab movie is now trending at No 1 on Jio Hotstar

ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ (Prabhas) ಅವರು ನಟಿಸಿದ ‘ದಿ ರಾಜಾ ಸಾಬ್’ ಸಿನಿಮಾ ಮೇಲೆ ಅಭಿಮಾನಿಗಳು ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡಿದ್ದರು. ಅವರು ನಟಿಸಿದ ಮೊದಲ ಹಾರರ್ ಸಿನಿಮಾ ಎಂಬ ಕಾರಣದಿಂದ ನಿರೀಕ್ಷೆ ಡಬಲ್ ಆಗಿತ್ತು. ಜನವರಿ 9ರಂದು ಚಿತ್ರಮಂದಿರಗಳಲ್ಲಿ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿತ್ತು. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಗಲ್ಲಾಪೆಟ್ಟಿಗೆಯಲ್ಲಿ ಫ್ಲಾಪ್ ಆದ ಈ ಸಿನಿಮಾ ಇತ್ತೀಚೆಗೆ ಒಟಿಟಿಗೆ ಬಂತು. ಅಚ್ಚರಿ ಎಂದರೆ, ಒಟಿಟಿಯಲ್ಲಿ (OTT ) ಈ ಸಿನಿಮಾ ಸೂಪರ್ ಹಿಟ್ ಆಗಿದೆ.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆದ ‘ದಿ ರಾಜಾ ಸಾಬ್’ ಸಿನಿಮಾಗೆ ಒಳ್ಳೆಯ ಓಪನಿಂಗ್ ಸಿಕ್ಕಿತ್ತು. ಆದರೆ ನಂತರದ ದಿನಗಳಲ್ಲಿ ಕಲೆಕ್ಷನ್ ವಿಪರೀತ ಕುಸಿಯಿತು. ಗಲ್ಲಾಪಟ್ಟಿಗೆಯಲ್ಲಿ ಈ ಸಿನಿಮಾ ಮಾಡಿದ ಒಟ್ಟು ಕಲೆಕ್ಷನ್ ಅಂದಾಜು 206 ಕೋಟಿ ರೂಪಾಯಿ. ಚಿತ್ರದ ಒಟ್ಟು ಬಜೆಟ್ 400 ಕೋಟಿ ರೂಪಾಯಿಗೂ ಅಧಿಕ. ಹಾಕಿದ ಬಂಡವಾಳ ಮರಳಿ ಬಂದಿಲ್ಲ. ಅದರಿಂದ ವಿತರಕರಿಗೆ ನಷ್ಟ ಆಯಿತು.

ಚಿತ್ರಮಂದಿರದಲ್ಲಿ ಫ್ಲಾಪ್ ಆಗಿದ್ದರಿಂದ ಕೆಲವೇ ದಿನಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾ ಒಟಿಟಿಗೆ ಬಂತು. ಫೆಬ್ರವರಿ 6ರಿಂದ ಈ ಸಿನಿಮಾ ‘ಜಿಯೋ ಹಾಟ್​ಸ್ಟಾರ್’ ಒಟಿಟಿ ಮೂಲಕ ಪ್ರಸಾರ ಆಗುತ್ತಿದೆ. ಒಟಿಟಿಯಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಕೂಡ ನೆಗೆಟಿವ್ ವಿಮರ್ಶೆ ನೀಡಿದ್ದಾರೆ. ಹಾಗಿದ್ದರೂ ಕೂಡ ಈ ಸಿನಿಮಾ ಟ್ರೆಂಡಿಂಗ್​​ನಲ್ಲಿದೆ.

ಒಟಿಟಿ ವೀಕ್ಷಕರು ಮುಗಿಬಿದ್ದು ‘ದಿ ರಾಜಾ ಸಾಬ್’ ಸಿನಿಮಾವನ್ನು ನೋಡುತ್ತಿದ್ದಾರೆ. ತೆಲುಗಿನಲ್ಲಿ ಮಾತ್ರವಲ್ಲದೇ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲೂ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ತೆಲುಗು, ತಮಿಳು ಮತ್ತು ಕನ್ನಡ ಒಟಿಟಿ ಟ್ರೆಂಡಿಂಗ್​​ನಲ್ಲಿ ಈ ಸಿನಿಮಾ ನಂಬರ್ 1 ಸ್ಥಾನ ಪಡೆದಿದೆ. ಮಲಯಾಳಂನಲ್ಲಿ 2ನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ: ‘ರಾಜಾಸಾಬ್’ ಸೋಲಿನ ಬಳಿಕ ಬಜೆಟ್ ಉಳಿಸಲು ಹೊಸ ಪ್ಲ್ಯಾನ್ ರೂಪಿಸಿದ ಪ್ರಭಾಸ್

ಮಾರುತಿ ಅವರು ನಿರ್ದೇಶನ ಮಾಡಿದ ‘ದಿ ರಾಜಾ ಸಾಬ್’ ಸಿನಿಮಾದಲ್ಲಿ ಪ್ರಭಾಸ್ ಅವರು ಹಲವು ಗೆಟಪ್ ಧರಿಸಿದ್ದಾರೆ. ಸಂಜಯ್ ದತ್, ನಿಧಿ ಅಗರ್​ವಾಲ್, ಮಾಳವಿಕಾ ಮೋಹನನ್, ರಿದ್ಧಿ ಕುಮಾರ್, ಬೋಮನ್ ಇರಾನಿ, ಮುರಳಿ ಶರ್ಮಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ – Kannada News | BJP Minister Kiren Rijiju releases 2 videos of Congress MPs gathering near PM Modis chair in Lok Sabha on Feb 4

ನವದೆಹಲಿ, ಫೆಬ್ರವರಿ 10: ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣ ಮಾಡಬೇಕಾಗಿದ್ದ ದಿನವಾದ ಫೆ. 4ರಂದು ಲೋಕಸಭೆಯ ಒಳಗೆ ಏನೆಲ್ಲ ನಡೆಯಿತು ಎಂಬುದರ 2 ವಿಡಿಯೋಗಳನ್ನು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. ಇಂದು ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ದೂರನ್ನು ಕೂಡ ಅವರು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸಂಸದರು ಸಂಸತ್ತಿನ ಮಿತಿಗಳನ್ನು ಮೀರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ ಮಾಡಿದ ಕಿರಣ್ ರಿಜಿಜು, “ಕಾಂಗ್ರೆಸ್ ಪಕ್ಷವು ತಮ್ಮ ಸಂಸದರ ಅತ್ಯಂತ ಅವಮಾನಕರ ನಡವಳಿಕೆಯ ಬಗ್ಗೆ ಹೆಮ್ಮೆಪಡುತ್ತದೆ!! ನಾವು ಆ ದಿನ ಎಲ್ಲಾ ಬಿಜೆಪಿ ಸಂಸದರನ್ನು ತಡೆಯದಿದ್ದರೆ ಆ ದಿನ ತುಂಬಾ ಮುಜುಗರದ ದೃಶ್ಯಕ್ಕೆ ಕಾರಣವಾಗುತ್ತಿತ್ತು. ಸಂಸತ್ತಿನ ಘನತೆ ಮತ್ತು ಪಾವಿತ್ರ್ಯವನ್ನು ರಕ್ಷಿಸಲು ನಾವು ಆ ದಿನ ಸುಮ್ಮನಿದ್ದೆವು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ

ಫೆಬ್ರವರಿ 4ರಂದು ಮೋದಿಯವರ ಭಾಷಣಕ್ಕೆ ಕೆಲವೇ ನಿಮಿಷಗಳ ಮೊದಲು ಅಧಿವೇಶನವನ್ನು ಮುಂದೂಡಬೇಕಾಯಿತು. ಕಾಂಗ್ರೆಸ್ ಮಹಿಳಾ ಸಂಸದರ ಗದ್ದಲದಿಂದ ಸ್ಪೀಕರ್ ಓಂ ಬಿರ್ಲಾ ತಾವೇ ಪ್ರಧಾನಿ ಮೋದಿಗೆ ಅಧಿವೇಶನಕ್ಕೆ ಹಾಜರಾಗದಿರಲು ಸೂಚಿಸಿದ್ದಾಗಿ ಹೇಳಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು 2 ವಿಡಿಯೋಗಳನ್ನು ಸಚಿವ ಕಿರಣ್ ರಿಜಿಜು ಹಂಚಿಕೊಂಡಿದ್ದಾರೆ. “ಗೌರವಾನ್ವಿತ ಸಂಸದರ ಇಂತಹ ನಡವಳಿಕೆಗಳನ್ನು ಯಾರಾದರೂ ಸಮರ್ಥಿಸಲು ಸಾಧ್ಯವೇ? ನಾವು ಸದನದ ಘನತೆಯನ್ನು ಕಾಪಾಡಿಕೊಳ್ಳಬೇಕು. ಯಾವುದೇ ಬಿಜೆಪಿ ಸಂಸದರು ಅಸಭ್ಯವಾಗಿ ವಿರೋಧ ಪಕ್ಷದ ಸಂಸದರೊಂದಿಗೆ ದೈಹಿಕ ಘರ್ಷಣೆಗೆ ಇಳಿಯಬಾರದು ಎಂಬುದು ನಮ್ಮ ಹೈಕಮಾಂಡ್​ನ ಸ್ಪಷ್ಟ ನಿರ್ದೇಶನವಾಗಿತ್ತು” ಎಂದು ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿ ಕುರ್ಚಿ ಸುತ್ತುವರೆದಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು

“ಬಿಜೆಪಿ ಮಹಿಳಾ ಸಂಸದರು ಕಾಂಗ್ರೆಸ್ ಸಂಸದರ ವರ್ತನೆಯ ವಿರುದ್ಧ ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಸಂಸದರು ಪ್ರಧಾನಿ ಕುಳಿತುಕೊಳ್ಳುವ ಬೆಂಚನ್ನು ದಾಟಿ, ಖಜಾನೆ ಕಡೆಗೆ ಹೋದರು. ಅವರು ಇಡೀ ಪ್ರದೇಶವನ್ನು ಬಹುತೇಕ ಮುತ್ತಿಗೆ ಹಾಕಿದ್ದರು. ಕಾಂಗ್ರೆಸ್ ಸಂಸದರು ಖಜಾನೆ ಕಡೆಗೆ ದಾಟಿದ ನಂತರ ಬಿಜೆಪಿ ಮಹಿಳಾ ಸಂಸದರು ಕೋಪಗೊಂಡರು. ಆ ವೇಳೆ ನಮ್ಮ ಬಿಜೆಪಿ ಹಾಗೂ ಎನ್‌ಡಿಎ ಸಂಸದರನ್ನು ನಾವು ನಿಯಂತ್ರಿಸಬೇಕಾಗಿತ್ತು. ಕಾಂಗ್ರೆಸ್ ಸಂಸದರ ಈ ವರ್ತನೆಯಿಂದ ಬಿಜೆಪಿ ಮಹಿಳಾ ಸಂಸದರು ತುಂಬಾ ಉದ್ರೇಕಗೊಂಡರು. ಆದರೂ ನಾವು ಸದನಕ್ಕೆ ಗೌರವ ಕೊಟ್ಟು ನಮ್ಮ ಸಂಸದರು ದೈಹಿಕ ಘರ್ಷಣೆ ಮಾಡದಂತೆ ತಡೆದಿದ್ದೇವೆ. ನಂತರ ಕಾಂಗ್ರೆಸ್ ಸಂಸದರು ಸ್ಪೀಕರ್ ಕೊಠಡಿಗೆ ಹೋಗಿ ಸ್ಪೀಕರ್‌ಗೆ ಬೆದರಿಕೆ ಹಾಕಿದರು. ಹೀಗಾಗಿ ಬಿಜೆಪಿ ಮಹಿಳಾ ಸಂಸದರು ದೂರು ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರತಿಷ್ಠಿತ ಹೋಟೆಲ್​​ನಲ್ಲಿ ಮಹಿಳೆಯ ಜೊತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ ಆರೋಪ: ಕೇಸ್​​ ದಾಖಲು – Kannada News | Canadian Woman Files Police Complaint Over Inappropriate Behavior at Bengaluru Hotel Spa

ಬೆಂಗಳೂರು, ಫೆಬ್ರವರಿ 10: ಕೆನಡಾದ ಮಹಿಳೆಯೊಬ್ಬರ ಜೊತೆ ನಗರದ ಖಾಸಗಿ ಹೋಟೆಲ್​​ನ ಸ್ಪಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದು, ಮಸಾಜ್ ಸಮಯದಲ್ಲಿ ಥೆರಪಿಸ್ಟ್ ಅಸಮಂಜಸವಾಗಿ ವರ್ತಿಸಿದ್ದಾನೆ. ತಾನು ಅರೆನಗ್ನ ಸ್ಥಿತಿಯಲ್ಲಿದ್ದಾಗಲೇ ಕೊಠಡಿಯ ಬಾಗಿಲು ತೆರೆದಿದ್ದರಿಂದ ತೀವ್ರ ಅವಮಾನ ಮತ್ತು ಮಾನಸಿಕ ಪೀಡನೆ ಅನುಭವಿಸಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ.

ಘಟನೆ ಬಗ್ಗೆ ದೂರಿದರೂ ನಿರ್ಲಕ್ಷ್ಯ ಆರೋಪ

ಇನ್ನು ನಡೆದ ಘಟನೆಯ ಬಗ್ಗೆ ತಕ್ಷಣವೇ ಮಹಿಳೆ ಹೋಟೆಲ್ ಆಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಅವರ ದೂರನ್ನು ಹೋಟೆಲ್​​ ಗಂಭೀರವಾಗಿ ಪರಿಗಣಿಸಲಾಗಿಲ್ಲ. ಬದಲಾಗಿ 7000 ರೂಪಾಯಿ ಮಸಾಜ್ ಶುಲ್ಕದ ಹಣವನ್ನ ಮರುಪಾವತಿ ಮಾಡಿ, ವಿಷಯವನ್ನು ಮುಂದುವರಿಸದಂತೆ ಸಲಹೆ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಇದನ್ನೂ ಓದಿ: ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ.

ಹೋಟೆಲ್​​ ಆಡಳಿತದಿಂದ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದ ಮಹಿಳೆ ನಿರಾಸೆಗೊಂಡ ಬಳಿಕ ಘಟನೆ ಬಗ್ಗೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ, ಥೆರಪಿಸ್ಟ್ ಮತ್ತು ಇತರ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಧಿಕೃತ ದೂರು ಸಲ್ಲಿಸಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಹೋಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟವರ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿರೋದಾಗಿ ಟೈಮ್ಸ್​​ ನೌ ವರದಿ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೆಲ ದಿನಗಳ ಹಿಂದೆಯಷ್ಟೇ ಕೇಳಿಬಂದಿತ್ತು. ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್​ಲೈನ್ಸ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರಲಾದ ಕಾರಣ ಆತನನ್ನು ಪೊಲೀಸರು ಬಂಧಿಸಿದ್ದರು. ಆ ಘಟನೆ ಮಾಸುವ ಮುನ್ನವೇ ವಿದೇಶಿ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ ಬೆಂಗಳೂರಲ್ಲಿ ಕೇಳಿಬಂದಿರೋದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಜಗತ್ತು ವಿನಾಶದ ಅಂಚಿನಲ್ಲಿದ್ಯಾ? ಆಂಥ್ರೋಪಿಕ್ನ ಮೃಣಾಂಕ್ ಶರ್ಮಾ ರಾಜೀನಾಮೆ ಪತ್ರದಲ್ಲಿ ಹೇಳಿದ್ದರ ಅರ್ಥವೇನು? – Kannada News | World in Peril, says Anthropic AI safety team chief Mrinank Sharma in his resignation letter

ಸ್ಯಾನ್ ಫ್ರಾನ್ಸಿಸ್ಕೋ, ಫೆಬ್ರುವರಿ 10: ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದ ಮೃಣಾಂಕ್ ಶರ್ಮಾ (Mrinank Sharma) ರಾಜೀನಾಮೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಈ ಜಗತ್ತು ವಿನಾಶದ ಅಂಚಿನಲ್ಲಿದೆ (The World in peril) ಎಂದು ಹೇಳಿಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ರಾಜೀನಾಮೆಗೆ ನಿರ್ದಿಷ್ಟ ಕಾರಣ ನೀಡದೇ ನಿಗೂಢವಾಗಿರುವ ಅವರ ಟ್ವೀಟ್ ಸಾಕಷ್ಟು ಕುತೂಹಲ ಕೆರಳಿಸುವಂತಿದೆ. ತಮ್ಮ ಟ್ವೀಟ್​ನಲ್ಲಿ ಅವರು ತಾವು ರಾಜೀನಾಮೆ ನೀಡಲು ಕಾರಣವೇನೆಂದು ವಿವರಿಸಿ ಬರೆದಿರುವ ಪತ್ರವೊಂದನ್ನು ಲಗತ್ತಿಸಿದ್ದಾರೆ.

ಮೃಣಾಂಕ್ ಶರ್ಮಾ ಅವರು ಅಂಥ್ರೋಪಿಕ್​ನಲ್ಲಿ ಸೇಫ್​ಗಾರ್ಡ್ಸ್ ರಿಸರ್ಚ್ ತಂಡದ ಮುಖ್ಯಸ್ಥರಾಗಿದ್ದರು. ‘ಜಗತ್ತು ವಿನಾಶದ ಅಂಚಿನಲ್ಲಿದೆ’ ಎಂದಿರುವ ಅವರ ಮಾತಿನ ಇಂಗಿತ ನಿಜಕ್ಕೂ ನಿಗೂಢತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು?

‘ಜಗತ್ತು ವಿನಾಶದಂಚಿನಲ್ಲಿದೆ. ಎಐ, ಅಥವಾ ಬಯೋವೆಪನ್​ಗಗಳಿಂದಷ್ಟೇ ಅಲ್ಲ, ಪರಸ್ಪರ ಜೋಡಿತವಾದ ವಿವಿಧ ಬಿಕ್ಕಟ್ಟುಗಳಿಂದ ಈ ಜಗತ್ತು ಅಪಾಯದಲ್ಲಿದೆ. ಈ ಜಗತ್ತಿನ ಮೇಲೆ ಪರಿಣಾಮ ಬೀರಬಲ್ಲ ನಮ್ಮ ಸಾಮರ್ಥ್ಯಕ್ಕೆ ತಕ್ಕುದಾದಷ್ಟು ವಿವೇಕ ನಮ್ಮಲ್ಲಿ ಬೆಳೆಯುವ ಅವಶ್ಯಕತೆ ಇದೆ..’ ಎಂದು ಮೃಣಾಂಕ್ ಶರ್ಮಾ ಹೇಳಿದ್ದಾರೆ.

ಅಂದರೆ, ಮನುಷ್ಯನ ಶಕ್ತಿಯು ಆತನ ಜವಾಬ್ದಾರಿಗಳನ್ನು ಮೀರಿ ಬೆಳೆಯುತ್ತಿದೆ. ಕೋತಿ ಕೈಯಲ್ಲಿ ಮಾಣಿಕ್ಯ ಸಿಕ್ಕಂತಾಗಿದೆ ಎಂಬರ್ಥದಲ್ಲಿ ಆಂಥ್ರೋಪಿಕ್​ನ ಈ ಉನ್ನತ ಅಧಿಕಾರಿ ಹೇಳಿರುವುದು ನಿಜಕ್ಕೂ ಎಐನ ಮುಂದಿನ ದಾರಿಯ ಬಗ್ಗೆ ಯಾರಿಗಾದರೂ ಕಳವಳ ಮೂಡಬಹುದು.

ಎಐ ಸುರಕ್ಷತೆ ವಿಚಾರದ ಬಗ್ಗೆ ತಮ್ಮ ಕಂಪನಿ ಹೆಚ್ಚಿನ ಆದ್ಯತೆ ಕೊಡುತ್ತಿಲ್ಲ ಎಂಬುದು ಮೃಣಾಂಕ್ ಬೇಸರ. ‘ಮೌಲ್ಯಗಳ ಆಧಾರದ ಮೇಲೆ ಕ್ರಿಯೆಗಳು ನಡೆಯುವುದು ಈಗ ಬಹಳ ಕಷ್ಟವೆಂಬುದು ಬಾರಿ ಬಾರಿ ತೋರುತ್ತಿದೆ. ಯಾವುದು ಬಹಳ ಮುಖ್ಯವಾಗಿದೆಯೋ ಅದನ್ನು ನಿರ್ಲಕ್ಷಿಸಲು ಈ ಸಂಸ್ಥೆಯಲ್ಲಿ ಮತ್ತು ನನ್ನಲ್ಲಿ ನಿರಂತರ ಒತ್ತಡ ಬರುವುದನ್ನು ಕಂಡಿದ್ದೇನೆ’ ಎಂದು ಆಂಥ್ರೋಪಿಕ್​ನ ಸೇಫ್​ಗಾರ್ಡ್ಸ್ ರಿಸರ್ಚ್ ಟೀಮ್​ನ ಮುಖ್ಯಸ್ಥ ಹೇಳಿದ್ಧಾರೆ.

ಇದನ್ನೂ ಓದಿ: ಐಟಿ ಸೆಕ್ಟರ್​ಗೆ ಆಂಥ್ರೋಪಿಕ್ ಶಾಕ್; ಇದರ ಹಿಂದಿರುವ ಬ್ರೇನ್ ಬೆಂಗಳೂರು ಮೂಲದ ವ್ಯಕ್ತಿಯದ್ದು

ಮೃಣಾಂಕ್ ಶರ್ಮಾ ಅವರ ಆಂಥ್ರೋಪಿಕ್ ಅವಧಿ ನಿನ್ನೆಯೇ (ಫೆ. 9) ಮುಗಿದಿದೆ. ಇದೀಗ ಅವರು ಬ್ರಿಟನ್ ದೇಶಕ್ಕೆ ಮರಳಿ ಹೋಗಲಿದ್ದಾರಂತೆ. ಒಂದಷ್ಟು ದಿನ ಕಾಣದ ಕಣ್ಮರೆಯಲ್ಲಿ ಇದ್ದುಬಿಡುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version