ಮಹಿಳಾ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್ ಕಲೆಹಾಕಿದ್ದರೆ, ಇದೀಗ 10000 ರನ್ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ.
ಮಹಿಳಾ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ತಮ್ಮ ವೃತ್ತಿಜೀವನದಲ್ಲಿ ಮೂರು ಸ್ವರೂಪಗಳಲ್ಲಿ 10,868 ರನ್ ಕಲೆಹಾಕಿದ್ದರೆ, ಇದೀಗ 10000 ರನ್ಗಳ ಗಡಿ ದಾಟಿರುವ ಸ್ಮೃತಿ, ಮಿಥಾಲಿ ಅವರ ದಾಖಲೆಯನ್ನು ಇನ್ನು ಕೆಲವೇ ಪಂದ್ಯಗಳಲ್ಲಿ ಮುರಿಯಲಿದ್ದಾರೆ.
ರಾಯಚೂರು, ಡಿಸೆಂಬರ್ 28: ಕಲಿಯುಗದ ಕಾಮಧೇನು ಅಂತಲೇ ಭಕ್ತರಿಂದ ಕರೆಸಿಕೊಳ್ಳುವ ಮಂತ್ರಾಲಯ (Mantralaya) ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದ ಇದೀಗ ಕನ್ನಡಿಗರನ್ನ ಕೆರಳಿಸಿದೆ. ಶ್ರೀ ಮಠದ ಮುಖ್ಯದ್ವಾರದಲ್ಲಿ ಕನ್ನಡ ಭಾಷೆಯಲ್ಲಿರುವ ರಾಯರ ಶ್ಲೋಕವನ್ನ ತೆಲುಗು ಭಾಷಿಗರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಕರ್ನಾಟಕದ ಭಕ್ತರು 1981ರಲ್ಲಿ ಇದೇ ಮಂತ್ರಾಲಯದಲ್ಲಿ ಚಿತ್ರೀಕರಣವಾದ ರಾಜ್ ಕುಮಾರ್ ಅಭಿನಯದ ಭಾಗ್ಯವಂತ ಸಿನೆಮಾದಲ್ಲೂ ಕನ್ನಡದಲ್ಲೇ ರಾಯರ ಶ್ಲೋಕ ಇರುವುದನ್ನ ತೋರಿಸಿ ಕೌಂಟರ್ ಕೊಟ್ಟಿದ್ದಾರೆ.
ಆಂಧ್ರಪ್ರದೇಶದಲ್ಲಿರುವ ಕರ್ನಾಟಕದ ಗಡಿಯ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭಾಷಾ ವಿವಾದವನ್ನ ಸೃಷ್ಟಿ ಮಾಡಿರೋದರ ವಿರುದ್ಧ ಭಕ್ತ ವೃಂದವೇ ಕೆರಳಿದೆ. ವಿವಾದ ಸೃಷ್ಟಿಸುತ್ತಿರುವವರ ವಿರುದ್ಧ ಭಕ್ತರು ಆಕ್ರೋಶ ಹೊರಹಾಕ್ತಿದ್ದಾರೆ. ಶ್ರೀ ಮಠದ ಮುಖ್ಯ ದ್ವಾರದಲ್ಲಿ ಕನ್ನಡ ಭಾಷೆಯಲ್ಲಿ ರಾಯರ ಶ್ಲೋಕವಿದೆ. ಇದೇ ಶ್ಲೋಕ ತೆಲುಗು ಭಾಷೆಯಲ್ಲಿ ಯಾಕಿಲ್ಲ ಅಂತ ತೆಲುಗು ಭಾಷಿಕರು ಸಾಮಾಜಿಕ ಜಾಲತಾಣಗಳ ಮೂಲಕ ಅಲ್ಲಿನ ಸಿಎಂ, ಡಿಸಿಎಂ ಅವರನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಕರ್ನಾಟಕದ ಭಕ್ತರು ಕೌಂಟರ್ ಕೊಟ್ಟಿದ್ದಾರೆ. ರಾಯರ ಮಠದ ಇತಿಹಾಸದಲ್ಲೇ ಇಂದೆಂದು ವಿವಾದವಾಗಿಲ್ಲ. ಅದರಲ್ಲೂ ಕನ್ನಡ ಭಾಷೆಯಲ್ಲಿ ಶ್ಲೋಕ ಇದೆ ಅನ್ನೋದು ದಶಕಗಳಿಂದ ಎಲ್ಲರಿಗೂ ಗೊತ್ತು. ಆದರೆ ಇದೀಗ ಅದನ್ನೇ ಮುಂದಿಟ್ಟುಕೊಂಡು ವಿವಾದ ಸೃಷ್ಟಿಸುತ್ತಿರುವವರಿಗೆ ಕರ್ನಾಟಕದ ಭಕ್ತರ ಸಾಕ್ಷ ಸಮೇತ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ
1981ರಲ್ಲಿ ಕನ್ನಡದ ಭಾಗ್ಯವಂತ ಸಿನೆಮಾದ ಬಗ್ಗೆ ವಿವರಿಸಿದ್ದಾರೆ. ಆ ಸಿನೆಮಾದಲ್ಲಿ ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಬಾಲ ಕಲಾವಿದನಾಗಿ ನಟಿಸಿದ್ದಾರೆ. ಆ ಸಿನೆಮಾವನ್ನು ಇದೇ ಮಂತ್ರಾಲಯದಲ್ಲೇ ಚಿತ್ರೀಕರಣ ಮಾಡಲಾಗಿದೆ. ಆ ಸಿನೆಮಾದ ಕ್ಲೈಮ್ಯಾಕ್ಸ್ನಲ್ಲಿ ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಜೊತೆ ಮಾತನಾಡಿ, ಮನವೊಲಿಸುವ ದೃಶ್ಯವಿದೆ. ಅದರಲ್ಲಿ ಸ್ಪಷ್ಟವಾಗಿ ಕನ್ನಡ ಭಾಷೆಯಲ್ಲಿ ಈಗಿರುವ ಶ್ಲೋಕವೂ ಇದೆ ನೋಡಿಕೊಳ್ಳಿ ಅಂತ ಕರ್ನಾಟಕದ ಭಕ್ತರು ಕೌಂಟರ್ ಕೊಟ್ಟಿದ್ದಾರೆ.
ದಶಕಗಳಿಂದ ಇರದ ಈ ವಿಚಾರವನ್ನ ಈಗ ಬೇಕಂತಲೇ ಹಬ್ಬಿಸುತ್ತಿರುವ ಆರೋಪ ಕೇಳಿ ಬಂದಿದೆ. ಅಷ್ಟಕ್ಕೂ ರಾಯರ ಮಠದಲ್ಲಿ ತೆಲುಗು ಭಾಷೆಯೇ ಪ್ರಮುಖ ಭಾಷೆಯನ್ನಾಗಿ ಶ್ರೀ ಮಠ ಪರಿಗಣಿಸಿದೆ. ಅಲ್ಲದೇ ಭಕ್ತರ ಸಂಖ್ಯೆ ಹೆಚ್ಚಿರುವ ಕಾರಣಕ್ಕೆ ಇಂಗ್ಲಿಷ್, ಹಿಂದಿ ಕನ್ನಡದಲ್ಲೂ ನಾಮಫಲಕಗಳನ್ನ ಹಾಕಲಾಗಿದೆ. ಆದರೆ ಈ ವಿವಾದದ ಬೆನ್ನಲ್ಲೇ ರಾಯರ ಪರಮ ಭಕ್ತರಾಗಿರುವ ಉಪನ್ಯಾಕ ಜಿ.ರಾಮ್ ರಾವ್ ಅನ್ನೋರು ರಾಯರಿಗೆ ಅಚ್ಚುಮೆಚ್ಚಿನ ಭಾಷೆಯೇ ಕನ್ನಡ ಅಂತ ಇತಿಹಾಸ ತಿಳಿಸಿದೆ. ರಾಯರು ಎಲ್ಲಾ ಭಾಷೆಗೆ ಕೊಡುಗೆ, ಗೌರವ ಕೊಟ್ಟಿದ್ದಾರೆ. ಗುರುಗಳಿಗೆ ಭಾಷೆ ತರುವುದು ಬೇಡ ಅನ್ನೋದು ಭಕ್ತರ ವಾದ.
ಹಂಪಿ ಕ್ಷೇತ್ರದಲ್ಲಿ ಅವರ ಪೂರ್ವಜರು ಇದ್ದದ್ದು, ಬಳಿಕ ಯತಿ ಪರಂಪರೆಯಲ್ಲಿ ಕನ್ನಡದಲ್ಲಿ ಕೊಡುಗೆ ಕೊಟ್ಟಿದ್ದಾರೆ. ಕನ್ನಡದಲ್ಲಿ ಕೃತಿ, ಹಾಡು ರಚನೆ ಮಾಡಿದ್ದಾರೆ. ಅವರ ಕಾಲದ ಅವಧಿಯಲ್ಲಿ ರಾಯಚೂರಿನ ಬಿಚ್ಚಾಲಿ, ಪಂಚಮುಖಿಯಲ್ಲಿ ಸೇವೆ ಮಾಡಿದ್ದಾರೆ. ದೈವಿ ಸಂಕಲ್ಪದಿಂದ ಗಡಿ ಪ್ರಾಂತ್ಯದ ಮಂತ್ರಾಲಯ ಅಂತಿಮ ಕ್ಷೇತ್ರ ಆಯ್ತು. ಗುರುಗಳಿಗೆ ಕನ್ನಡ ಭಾಷೆ ಪ್ರಿಯವಾದ ಭಾಷೆ ಅಂತ ಉಪನ್ಯಾಸಕ ಜಿ.ರಾಮ್ ರಾವ್ ಹೇಳಿದ್ದಾರೆ.
ಇದನ್ನೂ ಓದಿ: ಮಂತ್ರಾಲಯಕ್ಕೂ ತಟ್ಟಿದ ಭಾಷಾ ವಿವಾದದ ಕಿಚ್ಚು, ಇದು ಕಿಡಿಗೇಡಿಗಳ ಕೃತ್ಯವೆಂದ ಭಕ್ತರು
ಇದಷ್ಟೇ ಅಲ್ಲ ಮಂತ್ರಾಲಯದ ಮಠಕ್ಕೆ ಕರ್ನಾಟಕದಿಂದಲೇ ಸುಮಾರು 80ರಷ್ಟು ಭಕ್ತರು ಬರುತ್ತಾರೆ. ಅಲ್ಲದೇ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆ ಶ್ಲೋಕ ಅಳವಡಿಸಲಾಗಿದೆಯೇ ಹೊರತು ಬೇರೆ ಉದ್ದೇವಿಲ್ಲ ಅಂತ ಭಕ್ತರ ವಾದ. ಹೀಗಾಗಿ ಈ ಬಗ್ಗೆ ಸುಖಾಸುಮ್ಮನೇ ಭಾಷೆ ವಿವಾದ ಸೃಷ್ಟಿಸುವುದನ್ನು ಬಿಟ್ಟು ರಾಯರ ಅನುಗೃಹಕ್ಕಾಗಿ ಪ್ರಾರ್ಥನೆ ಮಾಡಿ ಅಂತ ಹೇಳ್ತಿದ್ದಾರೆ ಅಪಾರ ಭಕ್ತ ಗಣ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಭಾಸ್ (Prabhas) ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ಕೆಟ್ಟ ಸಿನಿಮಾಗಳು ಸಹ 200-300 ಕೋಟಿ ಹಣವನ್ನು ಸುಲಭವಾಗಿ ಬಾಕ್ಸ್ ಆಫೀಸ್ನಲ್ಲಿ ಗಳಿಕೆ ಮಾಡುತ್ತವೆ. ಪ್ರಭಾಸ್ ನಟನೆಯ ಕಳೆದ ಕೆಲ ಸಿನಿಮಾಗಳು ದೊಡ್ಡ ಯಶಸ್ಸು ಗಳಿಸದೇ ಇದ್ದರೂ ಸಹ ಅವರ ಕೈಯಲ್ಲಿ ಕನಿಷ್ಟ ಐದು ಸಿನಿಮಾಗಳಂತೂ ಇದೆ. ತೆಲುಗು ಮಾತ್ರವಲ್ಲದೆ ಬಾಲಿವುಡ್ನ ನಿರ್ಮಾಪಕರುಗಳು ಸಹ ಹಣದ ಥೈಲಿ ಹಿಡಿದುಕೊಂಡು ಪ್ರಭಾಸ್ ಕಾಲ್ಶೀಟ್ಗಾಗಿ ಕಾಯುತ್ತಿದ್ದಾರೆ. ಅಂಥಹಾ ನಟನನ್ನು ನಿರ್ದೇಶಕನೊಬ್ಬ ‘ಮಿಡ್ ರೇಂಜ್ ಹೀರೋ’ ಎಂದಿದ್ದಾರೆ. ಇದು ಪ್ರಭಾಸ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ನಿನ್ನೆ ಬಲು ಅದ್ಧೂರಿಯಾಗಿ ನೆರವೇರಿದೆ. ಕಾರ್ಯಕ್ರಮದಲ್ಲಿ ಪ್ರಭಾಸ್ ಸೇರಿದಂತೆ ಸಿನಿಮಾನಲ್ಲಿ ನಟಿಸಿದ ಹಲವು ನಟ, ನಟಿಯರು ಭಾಗಿ ಆಗಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವ ಮಾರುತಿ ಅವರು ಸಹ ಕಾರ್ಯಕ್ರಮದಲ್ಲಿದ್ದು ವೇದಿಕೆ ಮೇಲೆ ಭಾವುಕವಾಗಿ ಮಾತನಾಡಿದ್ದಾರೆ. ಒಂದು ಹಂತದಲ್ಲಂತೂ ವೇದಿಕೆ ಮೇಲೆ ಕಣ್ಣೀರು ಸಹ ಹಾಕಿದ್ದಾರೆ ಮಾರುತಿ.
ಪ್ರಭಾಸ್ ಅನ್ನಂತೂ ಹೊಗಳಿ ಅಟ್ಟಕ್ಕೆ ಏರಿಸಿದರು ಮಾರುತಿ. ಆದರೆ ಅವರು ವೇದಿಕೆ ಮೇಲೆ ಮಾತು ಆರಂಭಿಸಿದಾಗ ಪ್ರಭಾಸ್ ಅವರನ್ನು ‘ಮೀಡಿಯಮ್ ರೇಂಜ್ ಹೀರೋ’ (ಸಾಧಾರಣ ನಾಯಕ ನಟ) ಎಂದು ಕರೆದರು.
ಇದನ್ನೂ ಓದಿ:ಪ್ರಭಾಸ್ ಅಭಿಮಾನಿಗಳಿಗೆ ತನ್ನ ಮನೆ ವಿಳಾಸ ಕೊಟ್ಟ ‘ರಾಜಾ ಸಾಬ್’ ನಿರ್ದೇಶಕ
ಆಗಿದ್ದಿಷ್ಟು, ಪ್ರಭಾಸ್ ಅವರ ಜನಪ್ರಿಯತೆ ಬಗ್ಗೆ ವೇದಿಕೆ ಮೇಲೆ ಮಾತನಾಡಿದ ಮಾರುತಿ, ‘ಕಾಶ್ಮೀರಕ್ಕೆ ಹೋಗಲಿ, ಎಲ್ಲೇ ಹೋಗಲಿ ಪ್ರಭಾಸ್ ಅಲ್ಲಿನ ಜನರಿಗೆ ಗೊತ್ತು. ನಾನು ಆಫ್ರಿಕಾದ ಮಸಾಯಿಮಾರಾಕ್ಕೆ ಶೂಟಿಂಗ್ಗೆ ಹೋಗಿದ್ದೆ ಅಲ್ಲಿಯ ಹಳ್ಳಿಯ ಜನರಿಗೂ ಪ್ರಭಾಸ್ ಎಂದರೆ ಗೊತ್ತು. ಇದಕ್ಕೆಲ್ಲ ನಾವು ರಾಜಮೌಳಿಗೆ ಧನ್ಯವಾದ ಹೇಳಬೇಕು, ನಾವೆಲ್ಲ ಇಂದು ಪ್ಯಾನ್ ಇಂಡಿಯಾ ಎಂದು ಕಾಲರ್ ಮೇಲೆತ್ತುಕೊಂಡು ಓಡಾತ್ತಿದ್ದೇವೆ, ಆದರೆ ತನ್ನ ಜೀವನವನ್ನೇ ಮುಡಿಪಾಗಿಟ್ಟು ಒಬ್ಬ ‘ಮೀಡಿಯಮ್ ರೇಂಜ್ ಹೀರೋ’ ಅನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದವರು ರಾಜಮೌಳಿ’ ಎಂದು ಮಾರುತಿ ಹೇಳಿದರು.
ಮಾರುತಿ ಅವರು ಪ್ರಭಾಸ್ ಅವರನ್ನು ‘ಮೀಡಿಯಮ್ ರೇಂಜ್ ಹೀರೋ’ ಎಂದಿದ್ದು ಪ್ರಭಾಸ್ ಅಭಿಮಾನಿಗಳಿಗೆ ಬೇಸರ ತಂದಿದೆ. ಸಾಮಾಜಿಕ ಜಾಲತಾಣದಲ್ಲಿ ಇದೀಗ ಮಾರುತಿ ಅವರ ಭಾಷಣದ ತುಣುಕು ವೈರಲ್ ಆಗಿದ್ದು, ಸಖತ್ ಟ್ರೋಲ್ ಸಹ ಆಗುತ್ತಿದ್ದಾರೆ. ಆದರೆ ಮಾರುತಿ ತಮ್ಮ ಅದೇ ಭಾಷಣದಲ್ಲಿ ಪ್ರಭಾಸ್ ಅವರನ್ನು ನಾನಾ ರೀತಿಯಲ್ಲಿ ಕೊಂಡಾಡಿದ್ದಾರೆ. ಆದರೆ ರಾಜಮೌಳಿಯವರನ್ನು ಹೊಗಳುವ ಭರದಲ್ಲಿ ಪ್ರಭಾಸ್ ಅವರನ್ನು ಮೀಡಿಯಮ್ ರೇಂಜ್ ಹೀರೋ ಎಂದಿದ್ದಾರಷ್ಟೆ.
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಇದು ಹಾರರ್ ಕಾಮಿಡಿ ಸಿನಿಮಾ ಆಗಿದ್ದು, ಸಂಕ್ರಾಂತಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾನಲ್ಲಿ ನಿಧಿ ಅಗರ್ವಾಲ್ ಸೇರಿದಂತೆ ಮೂವರು ನಾಯಕಿಯರು ಇದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಿದ್ದ ಟೀಂ ಇಂಡಿಯಾ (Team India) ಪ್ರಸ್ತುತ ವಿಶ್ರಾಂತಿ ಮೂಡ್ನಲ್ಲಿದೆ. ಇನ್ನೇನಿದ್ದರೂ ತಂಡ ಕಣಕ್ಕಿಳಿಯುವುದು ಮುಂದಿನ ವರ್ಷವೇ. ಆದಾಗ್ಯೂ 2026 ರಲ್ಲಿ ಟೀಂ ಇಂಡಿಯಾ ಮೊದಲಿಗೆ ಯಾವ ತಂಡವನ್ನು ಯಾವಾಗ ಎದುರಿಸಲಿದೆ ಎಂಬುದು ಖಚಿತವಾಗಿದೆ. ಅದರಂತೆ ಭಾರತ ಏಕದಿನ ತಂಡ ನ್ಯೂಜಿಲೆಂಡ್ (India vs New Zealand) ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿ ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಯೊಂದಿಗೆ ಟೀಂ ಇಂಡಿಯಾದ ಹೊಸ ವರ್ಷವೂ ಆರಂಭವಾಗಲಿದೆ. ಆದರೆ ಈ ಸರಣಿಗೆ ಇನ್ನು ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿಲ್ಲ. ಈ ಏಕದಿನ ಸರಣಿ ಆರಂಭವಾಗಲು ಕೇವಲ 14 ದಿನಗಳು ಮಾತ್ರ ಉಳಿದಿದ್ದು, ಆಯ್ಕೆ ಪ್ರಕ್ರಿಯೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಆದಾಗ್ಯೂ, ಇದು ಹೊಸ ವರ್ಷದ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.
ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಮುನ್ನ ಇದು ಟೀಂ ಇಂಡಿಯಾದ ಕೊನೆಯ ಸರಣಿಯಾಗಲಿದೆ. ಏಕದಿನ ಸರಣಿ ಅಷ್ಟೇನೂ ಮುಖ್ಯವಾಗದಿದ್ದರೂ, ಹಲವಾರು ಕಾರಣಗಳಿಂದ ಈ ಸರಣಿ ಕೂಡ ವಿಶೇಷವಾಗಿರುತ್ತದೆ. ವಾಸ್ತವವಾಗಿ, ಟೀಂ ಇಂಡಿಯಾ ಕಳೆದ ಎರಡು ತಿಂಗಳುಗಳಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗಳನ್ನು ಆಡಿದೆ, ಅಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಇಬ್ಬರು ಅನುಭವಿಗಳು ಟಿ20 ತಂಡದ ಭಾಗವಾಗಿಲ್ಲದ ಕಾರಣ ಅಭಿಮಾನಿಗಳು ಸಾಧ್ಯವಾದಷ್ಟು ಬೇಗ ಅವರನ್ನು ಮತ್ತೆ ನೋಡಲು ಉತ್ಸುಕರಾಗಿದ್ದಾರೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ಜನವರಿ 3 ರ ಶನಿವಾರ ಅಥವಾ ಜನವರಿ 4 ರ ಭಾನುವಾರ ಏಕದಿನ ಸರಣಿಗೆ ತಂಡಗಳನ್ನು ಪ್ರಕಟಿಸುವ ನಿರೀಕ್ಷೆಯಿದೆ. ವರದಿಯ ಪ್ರಕಾರ, ಅಜಿತ್ ಅಗರ್ಕರ್ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಸಭೆ ಸೇರುವ ಬದಲು ಆನ್ಲೈನ್ನಲ್ಲಿ ಸಭೆ ಸೇರಲಿದೆ. ಇದು ಟಿ20 ವಿಶ್ವಕಪ್ ತಂಡ ಪ್ರಕಟಣೆಗಳಿಗಿಂತ ಭಿನ್ನವಾಗಿ, ತಂಡವನ್ನು ಪತ್ರಿಕಾಗೋಷ್ಠಿಯಲ್ಲಿ ಅಲ್ಲ, ಬಿಸಿಸಿಐನ ಸೋಶಿಯಲ್ ಮೀಡಿಯಾ ಖಾತೆ ಮತ್ತು ವೆಬ್ಸೈಟ್ನಲ್ಲಿ ಪ್ರಕಟಿಸುವ ಸಾಧ್ಯತೆಗಳಿವೆ.
ಈ ಬಾರಿಯೂ ವಿರಾಟ್ ಮತ್ತು ರೋಹಿತ್ ಆಯ್ಕೆ ಖಚಿತವಾಗಿದ್ದರೂ, ಆಯ್ಕೆದಾರರು ಯಾವುದಾದರೂ ಅಚ್ಚರಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆಯೇ ಎಂಬ ಕುತೂಹಲವಿದೆ. ಹೆಚ್ಚಿನ ಕಣ್ಣುಗಳು ಸ್ಟಾರ್ ಬ್ಯಾಟ್ಸ್ಮನ್ ಮತ್ತು ಇತ್ತೀಚೆಗೆ ನೇಮಕಗೊಂಡ ಉಪನಾಯಕ ಶ್ರೇಯಸ್ ಅಯ್ಯರ್ ಅವರ ಆಯ್ಕೆಯ ಮೇಲಿರುತ್ತವೆ. ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ಅಯ್ಯರ್ ಗಾಯಗೊಂಡು ಅಂದಿನಿಂದ ಕ್ರಿಕೆಟ್ ಚಟುವಟಿಕೆಯಿಂದ ದೂರವಿದ್ದಾರೆ. ಅವರು ಇತ್ತೀಚೆಗೆ ಎರಡು ತಿಂಗಳ ನಂತರ ಮೊದಲ ಬಾರಿಗೆ ಬ್ಯಾಟಿಂಗ್ ಅಭ್ಯಾಸ ಮಾಡಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿರುವ ಅಯ್ಯರ್ ತಂಡಕ್ಕೆ ಮರಳುವುದು ಖಚಿತವಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 7:38 pm, Sun, 28 December 25
ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದರು.
ಚಳಿಗಾಲದಲ್ಲಿ ಥೈರಾಯ್ಡ್ (Thyroid) ರೋಗಿಗಳು ಆರೋಗ್ಯದ ಬಗ್ಗೆ ಸ್ವಲ್ಪ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಶೀತ ಹೆಚ್ಚಾದಂತೆ, ದೇಹದಲ್ಲಿ ಆಲಸ್ಯ, ಆಯಾಸ, ತೂಕ ಹೆಚ್ಚಾಗುವುದು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಉದ್ಭವಿಸಬಹುದು. ಅದರಲ್ಲಿಯೂ ಥೈರಾಯ್ಡ್ ಇರುವಾಗ, ಔಷಧಿಗಳ ಜೊತೆಗೆ, ಸರಿಯಾದ ಆಹಾರ ಸೇವನೆಯೂ ಸಹ ಬಹಳ ಮುಖ್ಯವಾಗುತ್ತದೆ. ಹೆಚ್ಚು ಹುರಿದ ಮತ್ತು ಸಿಹಿ ಅಂಶವಿರುವ ಆಹಾರ ಸೇವನೆ ಥೈರಾಯ್ಡ್ ರೋಗಿಗಳ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ಮತ್ತು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಜೊತೆಗೆ ಈ ರೀತಿಯ ಅನುಚಿತ ಆಹಾರ ಪದ್ಧತಿ, ಔಷಧಿಗಳ ಪರಿಣಾಮವನ್ನು ಕೂಡ ಕಡಿಮೆ ಮಾಡಬಹುದು. ಹಾಗಾಗಿ ರೋಗಲಕ್ಷಣಗಳು ನಿಯಂತ್ರಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಚಳಿಗಾಲದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು ಮತ್ತು ಮಾಡಬಾರದು ಎಂಬುದರ ಬಗ್ಗೆ ವಿಶೇಷ ಗಮನ ಹರಿಸುವುದು ಮುಖ್ಯವಾಗುತ್ತದೆ. ಹಾಗಾದರೆ, ಥೈರಾಯ್ಡ್ ರೋಗಿಗಳು ಚಳಿಗಾಲದಲ್ಲಿ ಯಾವ ರೀತಿಯ ಆಹಾರವನ್ನು ಸೇವಿಸಬಾರದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಡಾ. ಅಮಿತ್ ಕುಮಾರ್ ಅವರು ಹೇಳುವ ಪ್ರಕಾರ, ಚಳಿಗಾಲದಲ್ಲಿ ಥೈರಾಯ್ಡ್ ಸಮಸ್ಯೆ ಇರುವವರು ಹೊರಗೆ ಸಿಗುವ ಹುರಿದ, ಮಸಾಲೆಯುಕ್ತ ಮತ್ತು ಜಂಕ್ ಫುಡ್ಗಳನ್ನು ಸೇವಿಸುವುದನ್ನು ತಪ್ಪಿಸಬೇಕು, ಏಕೆಂದರೆ ಇವು ತೂಕ ಹೆಚ್ಚಾಗಲು ಮತ್ತು ಆಯಾಸವನ್ನು ಹೆಚ್ಚಿಸಲು ಕಾರಣವಾಗಬಹುದು. ಸೋಯಾ ಮತ್ತು ಸೋಯಾ ಆಧಾರಿತ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಥೈರಾಯ್ಡ್ ಹಾರ್ಮೋನುಗಳ ಸಮತೋಲನವನ್ನು ಅಡ್ಡಿಪಡಿಸಬಹುದು. ಎಲೆಕೋಸು, ಹೂಕೋಸು ಮತ್ತು ಬ್ರೊಕೊಲಿಯಂತಹ ತರಕಾರಿಗಳನ್ನು ಕಚ್ಚಾ ರೂಪದಲ್ಲಿ ಅತಿಯಾಗಿ ತಿನ್ನುವುದು ಸಹ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ. ಹೆಚ್ಚುವರಿಯಾಗಿ, ಹೆಚ್ಚು ಸಕ್ಕರೆ, ಸಂಸ್ಕರಿಸಿದ ಹಿಟ್ಟು ಮತ್ತು ಬೇಕರಿ ಉತ್ಪನ್ನಗಳನ್ನು ಸೇವಿಸುವುದು ಹಾನಿಕಾರಕವಾಗಿದೆ. ಚಳಿಗಾಲದಲ್ಲಿ ಚಹಾ ಮತ್ತು ಕಾಫಿಯನ್ನು ಅತಿಯಾಗಿ ಸೇವಿಸುವುದು ಥೈರಾಯ್ಡ್ ರೋಗಿಗಳಿಗೆ ಸೂಕ್ತವಲ್ಲ. ಆದ್ದರಿಂದ, ಈ ಆಹಾರಗಳನ್ನು ಸೀಮಿತಗೊಳಿಸುವುದರಿಂದ ರೋಗಲಕ್ಷಣಗಳನ್ನು ನಿಯಂತ್ರಿಸುವುದು ಸುಲಭವಾಗುತ್ತದೆ.
ಚಳಿಗಾಲದಲ್ಲಿ, ಥೈರಾಯ್ಡ್ ಸಮಸ್ಯೆ ಇದ್ದವರು ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಸೀಮಿತ ಪ್ರಮಾಣದಲ್ಲಿ ಬೆಚ್ಚಗಿನ ಹಾಲು, ಮೊಸರು ಮತ್ತು ಚೀಸ್ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಹಸಿರು ತರಕಾರಿ, ಕಾಲೋಚಿತ ಹಣ್ಣು ಮತ್ತು ಧಾನ್ಯಗಳು ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತವೆ. ಬಾದಾಮಿ, ವಾಲ್ನಟ್ಸ್ ಮತ್ತು ಅಗಸೆಬೀಜಗಳಂತಹ ಬೀಜಗಳು ದೇಹಕ್ಕೆ ಶಕ್ತಿಯನ್ನು ನೀಡುತ್ತವೆ ಮತ್ತು ಶೀತದಿಂದ ರಕ್ಷಿಸುತ್ತವೆ. ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್ ಸೇವಿಸುವುದರಿಂದ ಆಯಾಸ ಕಡಿಮೆಯಾಗುತ್ತದೆ ದೇಹವನ್ನು ಸಕ್ರಿಯವಾಗಿರಿಸುತ್ತದೆ. ಈ ಆಹಾರಗಳು ಥೈರಾಯ್ಡ್ ರೋಗಿಗಳಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಇದನ್ನೂ ಓದಿ: ಈ ಭಾಗಗಳಲ್ಲಿ ನೋವು ಕಂಡುಬಂದರೆ ನಿರ್ಲಕ್ಷಿಸಬೇಡಿ ಇದು ಥೈರಾಯ್ಡ್ ಲಕ್ಷಣವಾಗಿರಬಹುದು!
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕೊಪ್ಪಳ, ಡಿಸೆಂಬರ್ 28: ಕೇವಲ 10 ಗಂಟೆ ಹಿಂದೆ ಜನಿಸಿದ ಮಗು (Newborn baby). ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು. ಮಗುವನ್ನು ಉಳಿಸಲು ಕೆಲವರು ಪ್ರಾಣ ಒತ್ತೆ ಇಟ್ಟಿದ್ದರು. ಮಗುವನ್ನು ಝೀರೋ ಟ್ರಾಫಿಕ್ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿತ್ತು.
ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ ಮಗುವೊಂದನ್ನ ಝೀರೋ ಟ್ರಾಫಿಕ್ನಲ್ಲಿ ಸುಮಾರು 110 ಕಿ.ಮೀ ದೂರದ ಹುಬ್ಬಳ್ಳಿ ಕಿಮ್ಸ್ಗೆ ಕರೆದುಕೊಂಡು ಹೋಗಲಾಗಿದೆ. ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ, ವಿಜಯಲಕ್ಷ್ಮೀ ದಂಪತಿಗೆ ಶನಿವಾರ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. 10 ಗಂಟೆಗಳ ಹಿಂದೆ ಜನಿಸಿದ ಮಗುವಿನ ಕರಳುಗಳೆಲ್ಲಾ ಹೊರಗಡೆ ಬಂದಿದ್ದ ಕಾರಣ ಮಗುವಿಗೆ ತುರ್ತು ಆಪರೇಷನ್ ಮಾಡಬೇಕಾದ ಹಿನ್ನಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ತಾಯಿ ಮತ್ತು ಮಗುವನ್ನು 5 ಆಂಬ್ಯುಲೆನ್ಸ್ಗಳ ಮೂಲಕ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್ನಲ್ಲಿ ರವಾನಿಸಲಾಗಿದೆ.
ಇದನ್ನೂ ಓದಿ: ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?
ಮಗುವಿಗೆ ಕರಳು ಸಮಸ್ಯೆ ಇರುವ ಹಿನ್ನಲೆ ವೈದ್ಯರು ತುರ್ತಾಗಿ ಆಪರೇಷನ್ ಮಾಡಬೇಕು ಎಂದು ಕಿಮ್ಸ್ಗೆ ರೆಫರ್ ಮಾಡಿದ್ದರು. ಅಲ್ಲದೆ ನವಜಾತ ಶಿಶುವಿಗೆ ಕಿಡ್ನಿ ಸಮಸ್ಯೆ ಕೂಡ ಇದೆ. ಈ ಕಾರಣಕ್ಕೆ ಮಗುವಿನ ಪ್ರಾಣ ಉಳಿಸಲು ಕೊಪ್ಪಳ ವೈದ್ಯರು ಸಾಕಷ್ಟು ಹರಸಾಹಸ ಪಟ್ಟರು. ಹತ್ತು ಗಂಟೆ ಹಿಂದೆ ಜನಿಸಿದ ಮಗುವನ್ನ ಆಂಬ್ಯುಲೆನ್ಸ್ ಚಾಲಕ ಪ್ರಕಾಶ್ ಝೀರೋ ಟ್ರಾಫಿಕ್ನಲ್ಲಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ನವಜಾತ ಶಿಶು ಪ್ರಾಣ ಉಳಿಸಲು ಪೊಲೀಸರು ಕೂಡ ಸಾಥ್ ನೀಡಿದ್ದಾರೆ.
ಇದನ್ನೂ ಓದಿ: ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ
ಒಟ್ಟಾರೆ ಹತ್ತು ಗಂಟೆಯ ಹಿಂದೆ ಜನಿಸಿದ ಮಗು ಇದೀಗ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದೆಸಾಕಷ್ಟು ಅಪಾಯ ತಗೆದುಕೊಂಡು ಕೊಪ್ಪಳದಿಂದ ಝೀರೋ ಟ್ರಾಫಿಕ್ನಲ್ಲಿ ಮಗುವನ್ನ ಕರೆದುಕೊಂಡು ಬರಲಾಗಿದೆ. ದೇವರ ದಯೆಯಿಂದ ಮಗು ಬದುಕಿದರೆ ಸಾಕು ಅನ್ನೋದು ನಮ್ಮ ಆಶಯ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಹೊರಗಿಡುವ ಬಗ್ಗೆ ಬಿಸಿಸಿಐ (BCCI) ಚಿಂತಿಸುತ್ತಿದ್ದು, ಅವರ ಬದಲಿಗೆ ವಿವಿಎಸ್ ಲಕ್ಷ್ಮಣ್ (VVS Laxman) ಅವರನ್ನು ಈ ಸ್ಥಾನಕ್ಕೆ ತಂದುಕೂರಿಸಲು ಬಿಸಿಸಿಐ ಚಿಂತಿಸುತ್ತಿದೆ ಎಂದು ಕೆಲವು ದಿನಗಳಿಂದ ವರದಿಯಾಗುತ್ತಿದೆ. ಆದರೀಗ ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಇದೆಲ್ಲ ಕೇವಲ ಊಹಾಪೋಹ ಎಂದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿ ಸೋಲಿನ ನಂತರ ಬಿಸಿಸಿಐ ಮಾಜಿ ಸ್ಟಾರ್ ಬ್ಯಾಟ್ಸ್ಮನ್ ವಿವಿಎಸ್ ಲಕ್ಷ್ಮಣ್ ಅವರನ್ನು ಸಂಪರ್ಕಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆಯ ಇತ್ತೀಚಿನ ವರದಿ ತಿಳಿಸಿತ್ತು. ವರದಿಯ ಪ್ರಕಾರ, ಮಂಡಳಿಯ ಅಧಿಕಾರಿಯೊಬ್ಬರು ಲಕ್ಷ್ಮಣ್ ಅವರೊಂದಿಗೆ ಟೆಸ್ಟ್ ತಂಡಕ್ಕೆ ತರಬೇತಿ ನೀಡುವ ಸಾಧ್ಯತೆಯ ಬಗ್ಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ. ಆದರೆ ಲಕ್ಷ್ಮಣ್ ಮಾತ್ರ ಬಿಸಿಸಿಐ ಆಹ್ವಾನವನ್ನು ನಿರಾಕರಿಸಿದ್ದು, ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲೇ ತಾನು ಮುಂದುವರೆಯುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿತ್ತು.
ಆದಾಗ್ಯೂ ಈ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಊಹಾಪೋಹಗಳಿಗೆ ಅಂತ್ಯ ಹಾಡಲು ಪ್ರಯತ್ನಿಸಿದ್ದಾರೆ. ಲಕ್ಷ್ಮಣ್ ಅವರನ್ನು ಕೋಚ್ ಆಗಿ ನೇಮಕ ಮಾಡಲು ಕೇಳಲಾಗಿದೆ ಎಂಬ ಹೇಳಿಕೆಯನ್ನು ಸೈಕಿಯಾ ತಳ್ಳಿಹಾಕಿದ್ದು, ‘ಹರಿದಾಡುತ್ತಿರುವ ಎಲ್ಲಾ ವರದಿಗಳು ಸುಳ್ಳು ಮತ್ತು ಕೇವಲ ಊಹಾಪೋಹಗಳು. ಈ ವರದಿಗಳು ಪ್ರಮುಖ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿವೆ, ಆದರೆ ಅಂತಹ ಹೇಳಿಕೆಗಳಲ್ಲಿ ಯಾವುದೇ ಸತ್ಯವಿಲ್ಲ. ಬಿಸಿಸಿಐ ಈ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸುತ್ತದೆ ಮತ್ತು ಅಂತಹ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದ್ದಾರೆ.
IND vs SA: ‘ನೀವು ಆತ್ಮಾವಲೋಕನ ಮಾಡಿಕೊಳ್ಳಬೇಕು’; ಗಂಭೀರ್ ತಂತ್ರವನ್ನು ಪ್ರಶ್ನಿಸಿದ ಕುಂಬ್ಳೆ
ಸಧ್ಯಕ್ಕೆ ದೇವಜಿತ್ ಸೈಕಿಯಾ ಅವರ ಸ್ಪಷ್ಟನೆಯ ನಂತರ ಟೆಸ್ಟ್ ತಂಡದಲ್ಲೂ ಗಂಭೀರ್ ಅವರೇ ಮುಖ್ಯ ಕೋಚ್ ಆಗಿ ಮುಂದುವರೆಯಲಿದ್ದಾರೆ ಎಂಬುದು ಖಚಿತವಾಗಿದೆ. ಆದರೆ ಮುಂದಿನ ಕೆಲವು ತಿಂಗಳುಗಳಲ್ಲಿ ಈ ಪರಿಸ್ಥಿತಿ ಮುಂದುವರಿಯುತ್ತದೆಯೇ? ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಗಂಭೀರ್ ಅವರನ್ನು ಮೂರು ವರ್ಷಗಳಿಗೆ ಮಾತ್ರ ಈ ಹುದ್ದೆಗೆ ನೇಮಕ ಮಾಡಲಾಗಿದೆ. ಅದರಂತೆ ಅವರ ಅಧಿಕಾರಾವಧಿಯು 2027 ರ ವಿಶ್ವಕಪ್ವರೆಗೆ ಇರುತ್ತದೆ. ಆದಾಗ್ಯೂ, ಈ ಮಧ್ಯೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಅನ್ನು ಸಹ ಆಡಲಿದೆ, ನಂತರ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನ ಬದಲಾಗದಿದ್ದರೆ, ಗಂಭೀರ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 6:36 pm, Sun, 28 December 25
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ ಎರಡು ಪಂದ್ಯಗಳಲ್ಲಿ ಮಾಡಬೇಕಿದೆ.
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಸರಣಿಯಲ್ಲಿ ಲಂಕಾ ತಂಡ ಟಾಸ್ ಗೆದ್ದಿರುವುದು ಇದೇ ಮೊದಲು. ಮೊದಲ 3 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಟೀಂ ಇಂಡಿಯಾ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ಭಾರತವನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ.
🚨 Toss 🚨#TeamIndia have been asked to bat first.
Updates ▶️ https://t.co/9lrjb3dMqU #INDvSL | @IDFCFIRSTBank pic.twitter.com/nt2W5NWqU1
— BCCI Women (@BCCIWomen) December 28, 2025
ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.
ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಾಮರಿ ಅಟಾಪಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವಿಶಾ ದಿಲ್ಹಾರಿ, ಕೌಶಿನಿ ನುತ್ಯಂಗನಾ (ವಿಕೆಟ್ ಕೀಪರ್), ಮಲ್ಶಾ ಶೆಹಾನಿ, ನಿಮಾಶಾ ಮೀಪಗೆ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂಡಿ.
Published On – 6:49 pm, Sun, 28 December 25
ದಾವಣಗೆರೆ, ಡಿಸೆಂಬರ್ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ.
ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್, ಅಭಿವೃದ್ಧಿಗೆ ಹೊಸ ಭಾಷೆ ಬರೆಯಲು ಮುಂದಾಗಿದ್ಧಾರೆ. ಅಧಿಕಾರಿಗಳ ಬೆಳಗಿನ ನಡೆ, ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.
ಇದನ್ನೂ ಓದಿ: ವಿವಿಧ ಕೇಸ್ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ
ದಿನಕ್ಕೆ ಎರಡರಿಂದ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರ ಜೊತೆ ಔಪಚಾರಿಕ ಸಭೆ ನಡೆಸಿ ಪಂಚಾಯಿತಿಯ ಕುಂದು, ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ.
ಇನ್ನು ಸ್ವಚ್ಛತಾ ಕಾರ್ಯ ಹೇಗೆ ನಡೆಯುತ್ತಿದೆ, ಪ್ರತಿನಿತ್ಯ ತ್ಯಾಜ್ಯ ವಿಲೇವಾರಿ ವಾಹನ ಬರುತ್ತಿದೆಯಾ, ಗ್ರಾಮದಲ್ಲಿ ಏನೇನು ಸಮಸ್ಯೆ ಇದೆ ಅಂತ ಗ್ರಾಮಸ್ಥರ ಬಳಿ ಮಾಹಿತಿ ಪಡೆದುಕೊಂಡು ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಕೂಡ ಮಾಡುತ್ತಿದ್ದಾರೆ.
ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠಲ್ ರಾವ್ ಈಗಾಗಲೇ ಮಾಯಕೊಂಡ, ಅಣಜಿ, ನರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದು, ನಿತ್ಯ ಬೆಳಗ್ಗೆ 6 ಗಂಟೆಯಿಂದ ಅವರ ದಿನಚರಿ ಶುರುವಾಗುತ್ತದೆ. ಗ್ರಾಮ ಪಂಚಾಯತಿಗಳನ್ನು ಭೇಟಿ ಮಾಡೋದು, ಸರ್ಕಾರಿ ವಸತಿ ಶಾಲೆ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಅವರ ಜೊತೆಯೇ ಊಟ, ಉಪಹಾರ ಮಾಡುವ ಕೆಲಸ ಮಾಡುತ್ತಿದ್ದಾರೆ.
ಇದನ್ನೂ ಓದಿ: ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ
ಯಾವ ದಿನ, ಯಾವ ಗ್ರಾಮಕ್ಕೆ ಹೋಗುತ್ತಾರೆ ಎನ್ನುವುದು ಮೊದಲೇ ನಿಗದಿಯಾಗಿರುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಸಿಇಒ ಅವರಿಗೆ ಹೋಗಬೇಕೆನಿಸಿದ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಜಿಲ್ಲಾ ಕೇಂದ್ರದಿಂದ ನೂರಾರು ದೂರದಲ್ಲಿರುವ ಗ್ರಾಮಕ್ಕೂ ಕೂಡ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲಿದ್ದಾರೆ. ಅಲ್ಲದೆ ಜನರು ಅಧಿಕಾರಿಗಳನ್ನು ಹುಡುಕಿ ಕಚೇರಿ ಅಲೆಯುವುದಲ್ಲ ಅಧಿಕಾರಿಗಳೇ ಜನರ ಬಳಿ ಹೋಗಬೇಕು ಎನ್ನುವ ಉದ್ದೇಶ ಇವರದ್ದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ನಡೆ ಬಗ್ಗೆ ಜನರು ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಮಟ್ಟದ ಓರ್ವ ಅಧಿಕಾರಿ ಹೀಗೆ ಗ್ರಾಮಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡುತ್ತಾರೆ. ಅಲ್ಲದೆ ಸಾಮಾನ್ಯ ಜನರಿಗೂ ಜಿಲ್ಲಾ ಮಟ್ಟದ ಅಧಿಕಾರಿ ಅಂದರೆ ಯಾರು, ಅವರ ಕಾರ್ಯ ಏನು ಅನ್ನೋದು ಗೊತ್ತಾಗುತ್ತದೆ. ಅಧಿಕಾರಿಗಳಿಗೂ ಗ್ರೌಂಡ್ ಲೆವೆಲ್ ಮಾಹಿತಿ ಲಭ್ಯ ಆಗುತ್ತದೆ. ಗಿತ್ತೆ ಮಾಧವ್ ವಿಠಲ್ ರಾವ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಇವರ ಕಾರ್ಯ ಇತರೆ ಅಧಿಕಾರಿಗಳಿಗೂ ಮಾದರಿ ಆಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.