Headlines

50 ದಿನ ಪೂರೈಸಿದ ಖುಷಿಯಲ್ಲಿ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾ ತಂಡ

ಎಂ.ಎಲ್. ಪ್ರಸನ್ನ ಅವರು ನಿರ್ದೇಶನ ಮಾಡಿದ ‘ಭಾರತಿ ಟೀಚರ್ 7ನೇ ತರಗತಿ’ ಸಿನಿಮಾದಲ್ಲಿ ವಿಶೇಷ ಕಥಾಹಂದರ ಇದೆ. ಈ ಸಿನಿಮಾ ಬಿಡುಗಡೆಯಾಗಿ 50 ದಿನಗಳನ್ನು (50 Days) ಪೂರೈಸಿದೆ. ಕನ್ನಡದಲ್ಲಿ ಅರ್ಧ ಶತಕ ಪೂರೈಸಿದ 2026ರ ಮೊದಲ ಸಿನಿಮಾ ಎಂಬ ಖ್ಯಾತಿಗೆ ಈ ಸಿನಿಮಾ ಪಾತ್ರವಾಗಿದೆ. ಆ ಸಲುವಾಗಿ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. ವಿ. ನಾಗೇಂದ್ರ ಪ್ರಸಾದ್, ಧರ್ಮ ಕೀರ್ತಿರಾಜ್, ರವಿ ಗೌಡ, ಮೋಹನ್, ಜಡೇಶ್ ಕೆ. ಹಂಪಿ, ಓಂ ಪ್ರಕಾಶ್ ರಾವ್, ಚಕ್ರವರ್ತಿ…

Read More

ಕರ್ನಾಟಕದಿಂದ ಚಾರ್​​ ಧಾಮ್​​​ ಯಾತ್ರೆಗೆ ಹೋಗುವವರು ಈಗ ಪೂಜಾ ಫೀ ಎಷ್ಟು ಕೊಡಬೇಕು ಗೊತ್ತಾ?

ವಿಶ್ವಪ್ರಸಿದ್ಧ ಚಾರ್​​ ಧಾಮ್​ ಯಾತ್ರೆಗೂ ಮುನ್ನ ಬದ್ರಿನಾಥ್​​-ಕೇದಾರನಾಥ್​ ಟೆಂಪಲ್​​ ಕಮಿಟಿ (ಬಿಕೆಟಿಸಿ)ಯಿಂದ ಭಕ್ತರಿಗೆ ಮಹತ್ವದ ಮಾಹಿತಿ ನೀಡಲಾಗಿದೆ. ಉಭಯ ದೇಗುಲಗಳಲ್ಲಿ ವಿಶೇಷ ಪೂಜೆ ಮತ್ತು ಆರತಿಗಳ ಶುಲ್ಕವನ್ನು ಹೆಚ್ಚಿಸಲಾಗಿದ್ದು, ಬಿಕೆಟಿಸಿ ಸಭೆಯಲ್ಲಿ ಈ ನಿರ್ಧಾರವನ್ನು ಏಕಮತದಿಂದ ಅಂಗೀಕರಿಸಲಾಗಿದೆ. ಆದರೆ ಸಾಮಾನ್ಯ ದರ್ಶನ ಹಿಂದಿನಂತೆ ಉಚಿತವಾಗಿಯೇ ಮುಂದುವರಿಯಲಿದೆ. ಬಿಕೆಟಿಸಿ ನಿರ್ವಹಣೆಯಡಿ ಇರುವ ಈ ಎರಡೂ ಧಾಮಗಳಲ್ಲಿ ಪ್ರತಿದಿನ ಬೆಳಗ್ಗೆ-ಸಂಜೆ ವಿವಿಧ ಪೂಜೆಗಳು ಮತ್ತು ಆರತಿಗಳು ನಡೆಯುತ್ತವೆ. ಮಹಾಭಿಷೇಕ, ಅಭಿಷೇಕ, ಭೋಗ, ಅಖಂಡ ಜ್ಯೋತಿ ಸೇರಿದಂತೆ ಅನೇಕ ಧಾರ್ಮಿಕ ವಿಧಿಗಳು…

Read More

Video: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ….

Read More

ಬೆಂಗಳೂರು: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ನಿಂದ ಕೋಟಿ ಕೋಟಿ ವಂಚನೆ ಆರೋಪ, 18 ಜನರ ವಿರುದ್ಧ ಪ್ರಕರಣ

ಬೆಂಗಳೂರು, ಮಾರ್ಚ್ 20: ಬೆಂಗಳೂರು (Bangalore) ಉತ್ತರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿರುವ ಪ್ರತಿಷ್ಠಿತ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿ ಕೋಟಿ ಕೋಟಿ ಹಣ ವಂಚನೆ ಆರೋಪ ಕೇಳಿಬಂದಿದೆ. ಸುಮಾರು 700 ಫ್ಲಾಟ್‌ಗಳಿರುವ ಈ ಅಪಾರ್ಟ್‌ಮೆಂಟ್‌ನಲ್ಲಿ ಅಸೋಸಿಯೇಷನ್ ಸದಸ್ಯರು ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿ ಹಾಗೂ ವಕೀಲೆ ನಿಶಾ ಎಂಬವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಸೋಸಿಯೇಷನ್ ಅಧ್ಯಕ್ಷ ಅರುಣ್ ಕುಲಕರ್ಣಿ, ಕಾರ್ಯದರ್ಶಿ ಅಲೆಕ್ಸ್, ಖಜಾಂಚಿ ಪ್ರವೀಣ್…

Read More

ಸುಮ್ನೆ ಇರೋಕಾಗ್ದೆ ಭಾರತ-ಇರಾನ್ ನಡುವೆ ಬೆಂಕಿ ಹಚ್ಚಲು ಕುತಂತ್ರ ನಡೆಸಿದ ಪಾಕ್

ನವದೆಹಲಿ, ಮಾರ್ಚ್​ 20: ಯುದ್ಧಭೂಮಿಯಲ್ಲಿ ಗೆಲ್ಲಲಾಗದೆ ಒಪ್ಪಂದವನ್ನು ಮಾಡಿಕೊಂಡ ರಾಷ್ಟ್ರಗಳಿಗೆ ರಕ್ಷಣೆಯನ್ನೂ ನೀಡಲಾಗದೆ ಅತಂತ್ರವಾಗಿರುವ ಪಾಕಿಸ್ತಾನ(Pakistan)ವು ಇರಾನ್ ಹಾಗೂ ಭಾರತದ ನಡುವೆ ವೈಷಮ್ಯವನ್ನು ಹುಟ್ಟುಹಾಕಲು ಕುತಂತ್ರ ನಡೆಸುತ್ತಿರುವುದು ಬಹಿರಂಗವಾಗಿದೆ. ಇತ್ತೀಚೆಗೆ ಅಮೆರಿಕದ ಸೇನೆಯು ಇರಾನ್​ನ ಯುದ್ಧನೌಕೆ ಐರಿಸ್ ಡೇನಾವನ್ನು ಹೊಡೆದುಹಾಕಿತ್ತು, ಇದು ಭಾರತದಲ್ಲಿ ಸಮರಭ್ಯಾಸ ನಡೆಸಿಕೊಂಡು ಇರಾನ್​​ನತ್ತ ಹೊರಟಿದ್ದ ಯುದ್ಧನೌಕೆಯಾಗಿತ್ತು. ಶ್ರೀಲಂಕಾದ ಬಳಿಯ ಹಿಂದೂ ಮಹಾಸಾಗರದಲ್ಲಿ ಈ ಅವಘಡ ಸಂಭವಿಸಿತ್ತು. ಇರಾನ್​ ಇಸ್ರೇಲ್ ಅಮೆರಿಕ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನದಲ್ಲಿಯೂ ಯುದ್ಧದ ಸನ್ನಿವೇಶ ನಿರ್ಮಾಣವಾಗಿದೆ. ಒಂದೆಡೆ ಅಫ್ಘಾನಿಸ್ತಾನ…

Read More

IPL 2026: ಟಿಕೆಟ್ ಖರೀದಿ ಬಗ್ಗೆ ಮಾಹಿತಿ ನೀಡಿದ ಆರ್​ಸಿಬಿ; ಸ್ಟೇಡಿಯಂ ಎಂಟ್ರಿ, ಪಾರ್ಕಿಂಗ್ ವಿವರವೂ ಇಲ್ಲಿದೆ

2026 ರ ಐಪಿಎಲ್ (IPL 2026) ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್​ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಇದರ ಜೊತೆಗೆ ಉಭಯ ತಂಡಗಳ ನಡುವಿನ ಈ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ತನ್ನ ತವರು ಮೈದಾನದಲ್ಲಿ ಆಡುತ್ತಿದೆ. ಹೀಗಾಗಿ ಅಭಿಮಾನಿಗಳು ಕೂಡ ತನ್ನ ನೆಚ್ಚಿನ ತಂಡ ಮೊದಲ ಪಂದ್ಯವನ್ನು ತವರಿನಲ್ಲಿ ಆಡುವುದನ್ನು ಕಣ್ತುಂಬಿಕೊಳ್ಳಲು…

Read More

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ಶಾಸಕನ​​ ಆಕ್ರೋಶ

ಹಾಸನ, ಮಾರ್ಚ್​​ 20: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರ್ಪಡೆಗೊಳಿಸಿರುವುದಕ್ಕೆ ಹಾಸನದ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮವು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುವ ಯತ್ನ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಕೆಲ ಪ್ರಭಾವಿ ವ್ಯಕ್ತಿಗಳ ಹೆಸರುಗಳನ್ನು ಕೈಬಿಟ್ಟು, ಯಾವುದೇ ಸಂಬಂಧವಿಲ್ಲದ 10-12 ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಸಿಲುಕಿಸಲಾಗಿದೆ. ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವ ಬದಲು, ಜೆಡಿಎಸ್ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿರುವುದನ್ನು ಖಂಡಿಸುತ್ತೇವೆ. ಉನ್ನತ…

Read More

ಮದುವೆಯಾಗಿದ್ದರೂ ಮತ್ತೊಬ್ಬ ವಿವಾಹಿತೆ ಮೇಲೆ ಲವ್​: ಮಹಿಳೆ ಇರಿದು ಕೊಂದವ ಜೈಲು ಪಾಲು

ಬೆಂಗಳೂರು, ಮಾರ್ಚ್​​ 20: ಗಂಗೊಂಡನಹಳ್ಳಿಯಲ್ಲಿ ಇಬ್ಬರು ಮಕ್ಕಳ ತಾಯಿ ಹಿಂದೆ ಬಿದ್ದ ಯುವಕನೋರ್ವ ಆಕೆಯನ್ನು ಡ್ಯಾಗರ್​ನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಆರೋಪಿ ಹಫೀಜ್​​ನ ಚಂದ್ರಾಲೇಔಟ್​ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಸಂಜೆ ಫೀರ್ದೋಸ್ ಬಾನು ಎಂಬಾಕೆಯನ್ನು ಈತ ಹತ್ಯೆಗೈದಿದ್ದು, ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಹಫೀಜ್ನ ಅರೆಸ್ಟ್​​ ಮಾಡಲಾಗಿದೆ.  ಮಹಿಳೆ ಆರೋಪಿಯನ್ನು ದೂರ ಮಾಡಿದ್ದೇ ಕೊಲೆಗೆ ಕಾರಣವಾಗಿದ್ದು, ಫೀರ್ದೋಸ್ ಬಾನುಗೆ ಆರೋಪಿ ಹಫೀಜ್ ಜತೆ ಸಂಪರ್ಕ ಇತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಮೃತ ಫೀರ್ದೋಸ್…

Read More

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

ಯುವ ನಟನಿಂದ ಸ್ಪೂರ್ತಿ, ಉಚಿತ ಶಿಕ್ಷಣ ಘೋಷಿಸಿದ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ಭಾರತದ ಸೂಪರ್ ಸ್ಟಾರ್ ನಟರಲ್ಲಿ ಒಬ್ಬರು. ಒಂದು ಸಮಯದಲ್ಲಿ ಅಮಿತಾಬ್ ಬಚ್ಚನ್​​ಗಿಂತಲೂ ದೊಡ್ಡ ಸ್ಟಾರ್ ಆಗಿದ್ದ ಚಿರಂಜೀವಿ, ಭಾರತದಲ್ಲಿ ಒಂದು ಕೋಟಿ ಸಂಭಾವನೆ ಪಡೆದಿದ್ದ ಮೊದಲ ನಟ. ಈಗಲೂ ಸಿನಿಮಾಗಳಲ್ಲಿ ಸಕ್ರಿಯವಾಗಿರುವ ಚಿರಂಜೀವಿ, ಸಿನಿಮಾ ನಟರುಗಳು ಹೇಗೆ ಅಭಿಮಾನಿ ಸಂಘಗಳ ಬಳಸಿ ಎಷ್ಟು ಸಕ್ರಿಯವಾಗಿ ಸಮಾಜ ಸೇವೆ ಮಾಡಬಹುದು ಎಂದು ತೋರಿಸಿಕೊಟ್ಟ ಕೆಲವೇ ಸ್ಟಾರ್ ನಟರುಗಳಲ್ಲಿ ಒಬ್ಬರು. ಮೆಗಾಸ್ಟಾರ್ ಅವರು ಪ್ರಾರಂಭಿಸಿದ ಬ್ಲಡ್ ಬ್ಯಾಂಕ್​​ಗಳು ಸಾವಿರಾರು ಜೀವಗಳನ್ನು ಉಳಿಸಿವೆ. ಈಗಲೂ ಸಹ…

Read More