Viral: ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ? – Kannada News | Do you know what score Mahatma Gandhi got in the 10th class exam?

ಮಹಾತ್ಮ ಗಾಂಧೀಜಿ ಅಂಕ ಪಟ್ಟಿImage Credit source: Twitter/ Pinterest

ಓದೋದ್ರಲ್ಲಿ ಎಲ್ಲಾ ಮಕ್ಕಳು (children) ಬುದ್ಧಿವಂತರಾಗಿರುವುದಿಲ್ಲ. ಕೆಲ ಮಕ್ಕಳು ನೂರಕ್ಕೆ ನೂರು ಮಾರ್ಕ್ ತೆಗೆದುಕೊಂಡರೆ, ಇನ್ನು ಕೆಲವರು ಜಸ್ಟ್ ಪಾಸ್ ಆಗೋದು ಕಷ್ಟಕ್ಕೆ. ರಿಸಲ್ಟ್ ಬರುವ ದಿನವಂತೂ ಕೆಲ ಮಕ್ಕಳಿಗೆ ಪಾಸ್ ಆಗುತ್ತೇವೋ ಇಲ್ವೋ ಅನ್ನೋ ಭಯ ಇರುತ್ತದೆ. ಇದೀಗ ಗಾಂಧೀಜಿಯವರ ಹತ್ತನೇ ತರಗತಿಯ ಅಂಕ ಪಟ್ಟಿ ವೈರಲ್ ಆಗುತ್ತಿದೆ. ಎಷ್ಟೋ ಜನರಿಗೆ  ಮಹಾತ್ಮ ಗಾಂಧೀಜಿಯವರು (Mahatma Gandhiji) ಎಷ್ಟು ಅಂಕ ಪಡೆದಿದ್ದರು ಎನ್ನುವ ಕುತೂಹಲವಿರುವುದು ಸಹಜ. ಹೌದು, ಮಹಾತ್ಮ ಗಾಂಧೀಜಿಯವರು ಹತ್ತನೇ ತರಗತಿ ಪರೀಕ್ಷೆಯಲ್ಲಿ ಒಟ್ಟು 247 ಗಳಿಸಿದ್ದರು ಅಂದ್ರೆ ನಿಮಗೆ ಶಾಕ್ ಆಗ್ಬಹುದು. ಅಂದಹಾಗೆ, ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ

Common Man ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಹಾತ್ಮ ಗಾಂಧೀಜಿಯವರ ಅಂಕ ಪಟ್ಟಿಯನ್ನು ಕಾಣಬಹುದು. 1887 ರಲ್ಲಿ ರಾಜ್ ಕೋಟಟ್‌ನ ಆಲ್ಫ್ರೆಡ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದ ವೇಳೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ನೀವಿಲ್ಲಿ ಗಮನಿಸಬಹುದು. ಈ ಅಂಕಪಟ್ಟಿಯ ಪ್ರಕಾರ, ಮಹಾತ್ಮ ಗಾಂಧಿ ಅವರು ಇಂಗ್ಲಿಷ್ ವಿಷಯದಲ್ಲಿ 89 ಅಂಕಗಳನ್ನು ಗಳಿಸಿದರೆ, ದ್ವಿತೀಯ ಭಾಷಾ ವಿಷಯದಲ್ಲಿ 45 ಅಂಕಗಳು ಮತ್ತು ಗಣಿತದಲ್ಲಿ 59 ಅಂಕಗಳು, ವಿಜ್ಞಾನದಲ್ಲಿ 34 ಹಾಗೂ ಇತಿಹಾಸದಲ್ಲಿ 20 ಅಂಕಗಳನ್ನು ಪಡೆದಿರುವುದನ್ನು ನೀವಿಲ್ಲಿ ನೋಡಬಹುದು. ಅಂದರೆ 625 ರಲ್ಲಿ ಕೇವಲ 247.5 ಅಂಕಗಳನ್ನು ಪಡೆದುಕೊಂಡಿರುವುದನ್ನು ಕಾಣಬಹುದು. ಸರಾಸರಿ ವಿದ್ಯಾರ್ಥಿಯಾಗಿದ್ದ ಅವರು ಶಾಲಾ ಅಂತಿಮ ಪರೀಕ್ಷೆಯಲ್ಲಿ 800 ವಿದ್ಯಾರ್ಥಿಗಳಲ್ಲಿ 404ನೇ ರ್ಯಾಂಕ್‌ ಪಡೆದಿದ್ದರು ಎನ್ನುವುದಕ್ಕೆ ಈ ಪೋಸ್ಟ್ ಸಾಕ್ಷಿಯಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ

ಈ ಪೋಸ್ಟ್ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಜ್ಞಾನ ಕಡಿಮೆ .ಆ ಸಮಯದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಮಾತ್ರ ಶಿಕ್ಷಣ ಪಡೆದಿದ್ದರು ಮತ್ತು ಶಾಲೆಗಳ ಬಗ್ಗೆ ತಿಳಿದಿರಲಿಲ್ಲ .ಇತ್ತೀಚಿನ ದಿನಗಳಲ್ಲಿ ಶಾಲಾ ಶಿಕ್ಷಣವು ತುಂಬಾ ಸಾಮಾನ್ಯವಾದಾಗ ಅವಿದ್ಯಾವಂತರು ಸಹ ಮುಖ್ಯಮಂತ್ರಿ ಮತ್ತು ಪ್ರಧಾನಿ ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್ ಮತ್ತು ಸಾವರ್ಕರ್ ಅವರ ಮಾರ್ಕ್‌ಶೀಟ್ ಅನ್ನು ದಯವಿಟ್ಟು ಹಂಚಿಕೊಳ್ಳಬಹುದೇ? ಎಂದು ಕೇಳಿದ್ದಾರೆ. ಮತ್ತೊಬ್ಬರು, ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Swapna Shastra: ಕನಸಿನಲ್ಲಿ ಬಟ್ಟೆ ಒಗೆಯುವುದು ಕಂಡರೆ ಏನರ್ಥ? ಅದೃಷ್ಟದ ಸಂಕೇತವೇ, ಎಚ್ಚರಿಕೆಯೇ? – Kannada News | Dream of Washing Clothes: Swapanashastra Meanings and Future Signs

ಸ್ವಪ್ನಶಾಸ್ತ್ರದ ಪ್ರಕಾರ, ನಿದ್ರೆಯ ಸಮಯದಲ್ಲಿ ಬೀಳುವ ಪ್ರತಿಯೊಂದು ಕನಸು ಕೂಡ ಅರ್ಥಹೀನವಲ್ಲ. ಪ್ರತಿಯೊಂದು ದೃಶ್ಯದ ಹಿಂದೆ ಒಂದು ವಿಶೇಷ ಸಂದೇಶ ಹಾಗೂ ಭವಿಷ್ಯದ ಸುಳಿವು ಅಡಗಿರುತ್ತದೆ ಎಂದು ನಂಬಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನಾವು ಕಾಣುವ ಕನಸುಗಳು ನಮ್ಮ ಜೀವನದಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಒಳ್ಳೆಯ ಅಥವಾ ಕೆಟ್ಟ ಸನ್ನಿವೇಶಗಳನ್ನು ಮುನ್ಸೂಚನೆಯಾಗಿ ನೀಡುತ್ತವೆ. ಈ ಹಿನ್ನೆಲೆಯಲ್ಲಿ, ಕನಸಿನಲ್ಲಿ ಬಟ್ಟೆ ಒಗೆಯುವ ಕ್ರಿಯೆಯು ವಿಭಿನ್ನ ಅರ್ಥಗಳನ್ನು ಹೊಂದಿದೆ.

ಸ್ವಚ್ಛವಾದ ಬಟ್ಟೆ ಒಗೆಯುತ್ತಿರುವುದು:

ಒಂದು ವೇಳೆ ನಿಮ್ಮ ಕನಸಿನಲ್ಲಿ ನೀವು ಅತ್ಯಂತ ಸ್ವಚ್ಛವಾದ ಬಟ್ಟೆಗಳನ್ನು ಒಗೆಯುತ್ತಿರುವುದನ್ನು ಕಂಡರೆ, ಅದು ಅತ್ಯಂತ ಶುಭ ಸಂಕೇತವಾಗಿದೆ. ಇದರರ್ಥ ನಿಮ್ಮ ಜೀವನದ ಹಾದಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ನೀವು ಮಾನಸಿಕವಾಗಿ ಶಾಂತ ಹಾಗೂ ಸ್ಥಿರವಾಗಿದ್ದೀರಿ. ಇಂತಹ ಕನಸು ಭವಿಷ್ಯದಲ್ಲಿ ಬರಲಿರುವ ಶುಭ ಸುದ್ದಿಯ ಸಂಕೇತವಾಗಿದ್ದು, ದೀರ್ಘಕಾಲದಿಂದ ನೀವು ಪೂರ್ಣಗೊಳಿಸಲು ಪ್ರಯತ್ನಿಸುತ್ತಿರುವ ಅಪೂರ್ಣ ಕೆಲಸಗಳು ಶೀಘ್ರದಲ್ಲೇ ಯಶಸ್ವಿಯಾಗಿ ಮುಕ್ತಾಯಗೊಳ್ಳಲಿವೆ ಎಂದು ಇದು ಸೂಚಿಸುತ್ತದೆ.

ಕೊಳಕು ಬಟ್ಟೆ ಒಗೆಯುತ್ತಿರುವುದು:

ಮತ್ತೊಂದೆಡೆ, ಕನಸಿನಲ್ಲಿ ಕೊಳಕು ಬಟ್ಟೆಗಳನ್ನು ನೋಡುವುದು ನೀವು ಪ್ರಸ್ತುತ ಎದುರಿಸುತ್ತಿರುವ ನಕಾರಾತ್ಮಕತೆ ಅಥವಾ ಸಮಸ್ಯೆಗಳಿಂದ ಹೊರಬರಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ನಿಮ್ಮ ಜೀವನದಲ್ಲಿ ಸಣ್ಣಪುಟ್ಟ ಗೊಂದಲಗಳು ಇದ್ದರೂ ಸಹ, ಈ ಕನಸು ಒಂದು ಆಶಾವಾದಿ ಮುನ್ಸೂಚನೆಯಾಗಿದೆ. ಅಂದರೆ, ಶೀಘ್ರದಲ್ಲೇ ನಿಮ್ಮ ಜೀವನದ ತೊಂದರೆಗಳು ಕ್ರಮೇಣ ಕಡಿಮೆಯಾಗಿ, ಹೊಸ ಮತ್ತು ಉತ್ತಮ ಬದಲಾವಣೆಗಳು ಕಂಡುಬರಲಿವೆ ಎಂಬ ಭರವಸೆಯನ್ನು ಈ ಕನಸು ನೀಡುತ್ತದೆ.

ಬೇರೆಯವರ ಬಟ್ಟೆ ಒಗೆಯುತ್ತಿರುವುದು:

ಒಂದು ವೇಳೆ ನೀವು ಬೇರೆಯವರ ಬಟ್ಟೆಗಳನ್ನು ಒಗೆಯುತ್ತಿರುವಂತೆ ಕನಸು ಕಂಡರೆ, ಅದು ನಿಮ್ಮ ಜೀವನದ ಆದ್ಯತೆಗಳ ಬಗ್ಗೆ ಯೋಚಿಸುವಂತೆ ಮಾಡುತ್ತದೆ. ಅಂದರೆ, ನೀವು ನಿಮ್ಮ ಸ್ವಂತ ಹಿತಾಸಕ್ತಿಗಿಂತ ಇತರರ ಕಾಳಜಿ ಮತ್ತು ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೀರಿ ಎಂದರ್ಥ. ಇತರರಿಗೆ ಸಹಾಯ ಮಾಡುವ ಭರದಲ್ಲಿ ನಿಮ್ಮನ್ನು ನೀವು ನಿರ್ಲಕ್ಷಿಸುತ್ತಿದ್ದೀರಿ ಎಂದು ಈ ಕನಸು ಎಚ್ಚರಿಸುತ್ತದೆ. ಆದ್ದರಿಂದ ಈಗ ನಿಮ್ಮ ಸ್ವಂತ ಅಗತ್ಯಗಳು ಮತ್ತು ಅಭಿವೃದ್ಧಿಯ ಬಗ್ಗೆಯೂ ಗಮನ ಹರಿಸುವ ಸಮಯ ಬಂದಿದೆ ಎಂದು ಇದು ನೆನಪಿಸುತ್ತದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ನದಿಯಲ್ಲಿ ಬಟ್ಟೆ ಒಗೆಯುತ್ತಿರುವುದು:

ನದಿ ಅಥವಾ ಸರೋವರದಂತಹ ಪವಿತ್ರ ಜಲಮೂಲಗಳಲ್ಲಿ ಬಟ್ಟೆ ಒಗೆಯುವ ಕನಸು ಬಿದ್ದರೆ ಅದು ಆಧ್ಯಾತ್ಮಿಕ ಶುದ್ಧೀಕರಣದ ಸಂಕೇತವಾಗಿದೆ. ನೀವು ನಿಮ್ಮ ಮನಸ್ಸು ಮತ್ತು ಆತ್ಮವನ್ನು ಉತ್ತಮಗೊಳಿಸುವ ಹಾದಿಯಲ್ಲಿ ಸಾಗುತ್ತಿದ್ದೀರಿ ಎಂಬುದನ್ನು ಇದು ಸೂಚಿಸುತ್ತದೆ. ಇಂತಹ ಕನಸು ಬಿದ್ದರೆ ದೀರ್ಘಕಾಲದಿಂದ ನಿಂತುಹೋದ ಕೆಲಸಗಳು ಇತರರ ಸಹಕಾರದೊಂದಿಗೆ ಪೂರ್ಣಗೊಳ್ಳುತ್ತವೆ. ಅಷ್ಟೇ ಅಲ್ಲದೆ, ಉದ್ಯೋಗದಲ್ಲಿ ಬಡ್ತಿ ಅಥವಾ ವ್ಯವಹಾರದಲ್ಲಿ ದೊಡ್ಡ ಮಟ್ಟದ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುವ ಸಾಧ್ಯತೆಗಳಿವೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್ – Kannada News | Karnataka Heatwave: Bengaluru, Kalaburagi Record Soaring Temperatures Amid Heatwave Alert

ಬೆಂಗಳೂರು, ಏಪ್ರಿಲ್​​ 16: ಬಿಸಿಲಿನ ಬೇಗೆಗೆ ಈಗಾಗಲೇ ಕರ್ನಾಟಕದ ಜನ ಬೆಂದು ಹೋಗಿದ್ದಾರೆ. ಈ ನಡುವೆ ರಾಜ್ಯದ ವಿವಿಧ ಭಾಗಗಳಲ್ಲಿ ಉಷ್ಣತೆ ದಿನೇದಿನೇ ಏರಿಕೆಯಾಗುತ್ತಿದ್ದು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ 44°–45°C ತಾಪಮಾನ ದಾಖಲಾಗಿದೆ. ಇತ್ತ ಬೆಂಗಳೂರಿನಲ್ಲಿ ಬುಧವಾರ 35.8°C ತಾಪಮಾನ ದಾಖಲಾಗಿರೋದು ಜನರನ್ನು ಕಂಗೆಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಏಪ್ರಿಲ್ ತಿಂಗಳ ಹಿಂದಿನ ದಾಖಲೆಗಳನ್ನು ಮೀರಿಸುವ ಮಟ್ಟದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರಲ್ಲಿ ಒಣಹವೆ

ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36°C ರಿಂದ 37°C ನಡುವೆ ಇರಲಿದ್ದು, ನಗರದಲ್ಲಿ ಒಣಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಬೆಂಗಳೂರಿನಲ್ಲಿ 36.6°C ಗರಿಷ್ಠ ತಾಪಮಾನ ದಾಖಲಾಗಿದ್ದು, 2026ರ ಅತ್ಯಂತ ಬಿಸಿಯಾದ ದಿನವಾಗಿತ್ತು. ಬುಧವಾರ ತಾಪಮಾನ 0.8°C ಇಳಿಕೆಯಾಗಿದ್ದರೂ, ಮುಂದಿನ ದಿನಗಳಲ್ಲಿ 38°C ತಲುಪುವ ಸಾಧ್ಯತೆ ಇದೆ ಎಂದು ಐಎಂಡಿ ಬೆಂಗಳೂರಿನ ವಿಜ್ಞಾನಿ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದರೂ, ಅದು ಸೀಮಿತ ಪ್ರದೇಶಗಳಿಗೆ ಮಾತ್ರ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸುಧಾರಿಸದ ಗಾಳಿಯ ಗುಣಮಟ್ಟ; ಹಲವು ಜಿಲ್ಲೆಗಳಲ್ಲಿ ‘ಕಳಪೆ’ ಮಟ್ಟಕ್ಕೆ ಕುಸಿತ!

ಅತ್ತ ಕಲ್ಯಾಣ ಕರ್ನಾಟಕ ಭಾಗಕ್ಕೆ ಮುಂದಿನ ಎರಡು ದಿನಗಳಿಗೆ ಆರೆಂಜ್ ಮತ್ತು ಯೆಲ್ಲೋ ಹೀಟ್‌ವೇವ್ ಅಲರ್ಟ್ ನೀಡಲಾಗಿದೆ. ಕಲಬುರಗಿಯಲ್ಲಿ ಅವ್ರಾದ್ ಬಿ ಪ್ರದೇಶದಲ್ಲಿ 45°C, ಚಿಂಚೋಳಿ ಮತ್ತು ಅಫ್ಜಲ್ಪುರದಲ್ಲಿ 44.03°C ಹಾಗೂ ಕಲಬುರಗಿ ನಗರದಲ್ಲಿ 42.1°C ತಾಪಮಾನ ದಾಖಲಾಗಿದೆ. ಇಲ್ಲಿ ತಾಪಮಾನ 45°C ಮೀರಿಸುವ ಸಾಧ್ಯತೆ ಇದೆ. ಸಾಮಾನ್ಯಕ್ಕಿಂತ 3°C ರಿಂದ 4°C ಹೆಚ್ಚು ತಾಪಮಾನ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರಣ್ನುಮ್ ಅವರು ನಾಗರಿಕರಿಗೆ ಅಗತ್ಯವಿಲ್ಲದ ಹೊರಗಡೆ ಸಂಚಾರವನ್ನು ಬೆಳಿಗ್ಗೆ 11:30ರಿಂದ ಸಂಜೆ 5ರವರೆಗೆ ತಪ್ಪಿಸಲು ಸಲಹೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಬಿಸಿ ಮತ್ತು ತೇವಾಂಶಯುಕ್ತ ಹವಾಮಾನದ ಹಿನ್ನೆಲೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 12:17 pm, Thu, 16 April 26

Source link

ಶಸ್ತ್ರಚಿಕಿತ್ಸೆ ಅಸಾಧ್ಯ: ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ..! – Kannada News | Team India’s Former Player Vinod Kambli at risk of brain stroke

ಭಾರತದ ಮಾಜಿ ಸ್ಟಾರ್ ಬ್ಯಾಟರ್ ವಿನೋದ್ ಕಾಂಬ್ಳಿ ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಾಂಬ್ಳಿ ಅವರ ಮೆದುಳಿನಲ್ಲಿ ‘ಇನ್-ಆಪರೇಬಲ್’ ರಕ್ತದ ಹೆಪ್ಪುಗಟ್ಟುವಿಕೆ ಇರುವುದು ಪತ್ತೆಯಾಗಿದ್ದು, ಅವರು ಮೆದುಳಿನ ಪಾರ್ಶ್ವವಾಯುವಿಗೆ (Brain Stroke) ಒಳಗಾಗುವ ಅಪಾಯದಲ್ಲಿದ್ದಾರೆ ಎಂದು ಅವರ ಆಪ್ತ ಸ್ನೇಹಿತ ಮತ್ತು ಮಾಜಿ ಅಂಪೈರ್ ಮಾರ್ಕಸ್ ಕೌಟೊ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಅಸಾಧ್ಯ!

ಕಾಂಬ್ಳಿ ಅವರ ಮೆದುಳಿನ ಸೂಕ್ಷ್ಮ ಜಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ. ವೈದ್ಯರ ಪ್ರಕಾರ, ಇದಕ್ಕೆ ಶಸ್ತ್ರಚಿಕಿತ್ಸೆ ಮಾಡುವುದು ಅತ್ಯಂತ ಅಪಾಯಕಾರಿ. ಈ ಸ್ಥಿತಿ ಕಳೆದ 18 ತಿಂಗಳುಗಳಿಂದ ಮುಂದುವರಿದಿದೆ.

ಪಾರ್ಶ್ವವಾಯುವಿನ ಎಚ್ಚರಿಕೆ:

ನ್ಯೂರೋಸರ್ಜನ್ ಆದಿಲ್ ಚಾಗ್ಲಾ ಅವರು ಕಾಂಬ್ಳಿ ಅವರ ಸ್ಥಿತಿಯನ್ನು ಪರಿಶೀಲಿಸಿದ್ದು, ಮುಂದಿನ ಹಂತವು ಪಾರ್ಶ್ವವಾಯು ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಎಚ್ಚರಿಸಿದ್ದಾರೆ.

ನೆನಪಿನ ಶಕ್ತಿ ಕುಸಿತ:

ವಿನೋದ್ ಕಾಂಬ್ಳಿ ಅವರ ಸ್ಮರಣಶಕ್ತಿ ತೀವ್ರವಾಗಿ ಬಾಧಿತವಾಗಿದೆ. ವಿಷಯಗಳನ್ನು ನೆನಪಿಸಿಕೊಳ್ಳಲು ಅವರು ಕಷ್ಟಪಡುತ್ತಿದ್ದಾರೆ ಮತ್ತು ಆಗಾಗ್ಗೆ ವಿಷಯಗಳನ್ನು ಮರೆತುಬಿಡುತ್ತಿದ್ದಾರೆ.

ಇದಾಗ್ಯೂ ಆರು ತಿಂಗಳ ಹಿಂದೆ ನಡೆಯಲು ಪೀಠೋಪಕರಣಗಳ ಸಹಾಯ ಬೇಕಿದ್ದ ಕಾಂಬ್ಳಿ, ಈಗ ವಾಕಿಂಗ್ ಸ್ಟಿಕ್ ನೆರವಿನಿಂದ ನಡೆಯುತ್ತಿದ್ದಾರೆ. ಇದು ಸ್ವಲ್ಪಮಟ್ಟದ ದೈಹಿಕ ಸುಧಾರಣೆಯನ್ನು ತೋರಿಸುತ್ತಿದೆ.

ಜೀವನಶೈಲಿ ಸವಾಲು:

ಕಾಂಬ್ಳಿ ಅವರು ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿದ್ದಾರೆಯಾದರೂ, ಧೂಮಪಾನವನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಇದು ಅವರ ಮೆದುಳಿನ ಆರೋಗ್ಯಕ್ಕೆ ಮಾರಕವಾಗಬಹುದು ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ನೆರವಿಗೆ ನಿಂತ ಆಪ್ತರು:

ವಿನೋದ್ ಕಾಂಬ್ಳಿ ಅವರ ಕಷ್ಟದ ಸಮಯದಲ್ಲಿ ಭಾರತೀಯ ಕ್ರಿಕೆಟ್‌ನ ದಿಗ್ಗಜರು ಬೆಂಬಲವಾಗಿ ನಿಂತಿದ್ದಾರೆ. ಈ ಹಿಂದೆ
ಸಚಿನ್ ತೆಂಡೂಲ್ಕರ್ ಹಾಗೂ ಕಪಿಲ್ ದೇವ್ ನೆರವಿನ ಹಸ್ತ ಚಾಚಿದ್ದರು. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿದ್ದ ಸುನಿಲ್ ಗವಾಸ್ಕರ್ ಕಳೆದ ವರ್ಷ ತಮ್ಮ CHAMPS ಫೌಂಡೇಶನ್ ಮೂಲಕ ಕಾಂಬ್ಳಿ ಅವರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಿದ್ದರು.

ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ಕಾಂಬ್ಳಿ ಅವರ ಜೀವಿತಾವಧಿಯವರೆಗೆ ಪ್ರತಿ ತಿಂಗಳು ₹30,000 ಸಹಾಯಧನ ನೀಡಲಾಗುವುದು ಎಂದು ಸುನಿಲ್ ಗವಾಸ್ಕರ್ ಹೇಳಿದ್ದರು.

ಅಷ್ಟೇ ಅಲ್ಲದೆ, ಕಾಂಬ್ಳಿ ಅವರ ವೈದ್ಯಕೀಯ ಚಿಕಿತ್ಸೆಗಾಗಿ ವಾರ್ಷಿಕವಾಗಿ ಹೆಚ್ಚುವರಿ ₹30,000 ನೀಡುವುದಾಗಿ ಗವಾಸ್ಕರ್ ತಿಳಿಸಿದ್ದರು.

ಅಷ್ಟೇ ಅಲ್ಲದೆ ವಿನೋದ್ ಕಾಂಬ್ಳಿ ಅವರ ವೈದ್ಯಕೀಯ ವೆಚ್ಚಗಳನ್ನು ಭರಿಸಲು ಸ್ನೇಹಿತರು ಒಂದು ವಾಟ್ಸಾಪ್ ಗ್ರೂಪ್​ನ್ನು ರಚಿಸಿಕೊಂಡು ಹಣ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಬ್ಳಿ ಅವರ ವೃತ್ತಿಜೀವನ:

1990ರ ದಶಕದಲ್ಲಿ ಸಚಿನ್ ತೆಂಡೂಲ್ಕರ್ ಜೊತೆಗೆ ಶಾಲಾ ಕ್ರಿಕೆಟ್‌ನಲ್ಲಿ ದಾಖಲೆಯ ಜೊತೆಯಾಟವಾಡಿ ಪ್ರಸಿದ್ಧರಾಗಿದ್ದ ವಿನೋದ್ ಕಾಂಬ್ಳಿ, ಭಾರತದ ಪರ 17 ಟೆಸ್ಟ್ ಮತ್ತು 104 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 1084 ರನ್ ಕಲೆಹಾಕಿದರೆ, ಏಕದಿನ ಕ್ರಿಕೆಟ್​ನಲ್ಲಿ 2477 ರನ್​ಗಳಿಸಿದ್ದರು.

ಇದನ್ನೂ ಓದಿ: CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ

ಸದ್ಯ ಮುಂಬೈನಲ್ಲಿ ವಿನೋದ್ ಕಾಂಬ್ಳಿ ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Source link

Women Reservation Bill: ಗದ್ದಲದ ನಡುವೆ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ – Kannada News | Parliament Push: Bills on Women’s Quota and Delimitation Introduced in Lok Sabha

ನವದೆಹಲಿ, ಏಪ್ರಿಲ್ 16: ಲೋಕಸಭೆ(Lok Sabha)ಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026 ಮಂಡನೆಯಾಗಿದೆ.  ದೇಶದ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭೆಯ ಬಲವನ್ನು ಪ್ರಸ್ತುತ ಇರುವ 543 ರಿಂದ 850 ಸ್ಥಾನಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಇದೆ. ಇದೇ ರೀತಿ ರಾಜ್ಯ ವಿಧಾನಸಭೆಗಳ ಸ್ಥಾನಗಳನ್ನೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಕ್ಷೇತ್ರ ಪುನರ್ವಿಂಗಡಣೆಯ ನಂತರವಷ್ಟೇ ಇದು ಸಾಧ್ಯವಾಗಲಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಸೂದೆಯನ್ನು ವಿರೋಧಿಸಿದ್ದು, ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು

ಮಲ್ಲಿಕಾರ್ಜುನ ಖರ್ಗೆ ಬುಧವಾರದ ಸಭೆ ಬಳಿಕ ಮಾತನಾಡಿ, ನಾವೆಲ್ಲರೂ ಮಹಿಳಾ ಮೀಸಲಾತಿಯ ಪರವಾಗಿದ್ದೇವೆ. ಆದರೆ ಸರ್ಕಾರ ಇದನ್ನು ತರುತ್ತಿರುವ ವಿಧಾನ ರಾಜಕೀಯ ಪ್ರೇರಿತವಾಗಿದೆ. ಕ್ಷೇತ್ರ ಪುನರ್ವಿಂಗಡಣೆಯ ಹೆಸರಿನಲ್ಲಿ ಸರ್ಕಾರ ತಂತ್ರಗಳನ್ನು ಆಡುತ್ತಿದೆ,” ಎಂದು ನೇರವಾಗಿ ಆರೋಪಿಸಿದರು. ಸರ್ಕಾರವು ಜನಗಣತಿ ಮತ್ತು ಕ್ಷೇತ್ರ ಪುನರ್ವಿಂಗಡಣೆಯ ನಂತರವೇ ಮೀಸಲಾತಿ ಜಾರಿಯಾಗಲಿದೆ ಎಂಬ ಷರತ್ತು ವಿಧಿಸಿದೆ. ಇದು ಮೀಸಲಾತಿಯನ್ನು ಇನ್ನಷ್ಟು ವಿಳಂಬ ಮಾಡುವ ತಂತ್ರ ಎಂಬುದು ವಿರೋಧ ಪಕ್ಷಗಳ ವಾದ.

2023ರಲ್ಲೇ ಸಂವಿಧಾನಕ್ಕೆ 334(A) ವಿಧಿಯನ್ನು ಸೇರಿಸಿ ಒಮ್ಮತ ಮೂಡಿಸಲಾಗಿತ್ತು. ಈಗಿನ ಲೋಕಸಭಾ ಚುನಾವಣೆಯಿಂದಲೇ ಇದನ್ನು ಜಾರಿಗೆ ತರಲು ಏನು ಅಡ್ಡಿ?” ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

ಮಹಿಳಾ ಮೀಸಲಾತಿ ಮಸೂದೆ
ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ‘ನಾರಿ ಶಕ್ತಿ ವಂದನ ಅಧಿನಿಯಮ’ವನ್ನು ತ್ವರಿತವಾಗಿ ಜಾರಿಗೆ ತರುವುದು ಸರ್ಕಾರದ ಗುರಿಯಾಗಿದೆ. ಆದರೆ, ಈ ಮೀಸಲಾತಿಯು ಕ್ಷೇತ್ರ ಪುನರ್ವಿಂಗಡಣೆಯ ಪ್ರಕ್ರಿಯೆಯೊಂದಿಗೆ ತಳುಕು ಹಾಕಿಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಮಂಗಳವಾರ ನಡೆದ ಮೈತ್ರಿಕೂಟದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಿಲುವನ್ನು ಸ್ಪಷ್ಟಪಡಿಸಿದ್ದರು.

ಮತ್ತಷ್ಟು ಓದಿ: Explainer: ಸಂಸತ್​​ನಲ್ಲಿ ಅಂಗೀಕಾರವಾಗುತ್ತಾ ಮಹಿಳಾ ಮೀಸಲಾತಿ ಮಸೂದೆ? ಏನಿದರ ಮಹತ್ವ, ವಿಪಕ್ಷಗಳ ವಿರೋಧವೇಕೆ?

ಮಹಿಳಾ ಮೀಸಲಾತಿ ಮಸೂದೆಯು ಈ ಮಸೂದೆಯು ಲೋಕಸಭೆಯ ಬಲವನ್ನು ಪ್ರಸ್ತುತ 543 ರಿಂದ 850 ಸದಸ್ಯರಿಗೆ ಹೆಚ್ಚಿಸಲು ಪ್ರಸ್ತಾಪಿಸುತ್ತದೆ, ಇದರಲ್ಲಿ 815 ಸದಸ್ಯರು ರಾಜ್ಯಗಳಿಂದ ಮತ್ತು 35 ಸದಸ್ಯರು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾಗುತ್ತಾರೆ. 2026 ರ ನಂತರ ಜನಗಣತಿಗಾಗಿ ಕಾಯದೆ, ಇತ್ತೀಚಿನ ಲಭ್ಯವಿರುವ ಜನಗಣತಿಯ ಆಧಾರದ ಮೇಲೆ ಡಿಲಿಮಿಟೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಂವಿಧಾನದ 81 ಮತ್ತು 82 ನೇ ವಿಧಿಗಳನ್ನು ಇದು ತಿದ್ದುಪಡಿ ಮಾಡುತ್ತದೆ. 2029 ರ ಚುನಾವಣೆಗಳಿಗೆ ಮೊದಲು ತಕ್ಷಣ ಜಾರಿಗೆ ಬರುವಂತೆ ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ 33% ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ.

ಡಿಲಿಮಿಟೇಶನ್ ಮಸೂದೆ
ಡಿಲಿಮಿಟೇಶನ್ ಮಸೂದೆ, 2026( ಗಡಿ ನಿರ್ಣಯ) ಹಳೆಯ ಡಿಲಿಮಿಟೇಶನ್ ಕಾಯ್ದೆ, 2002 ಅನ್ನು ರದ್ದುಗೊಳಿಸುತ್ತದೆ ಮತ್ತು ಬದಲಾಯಿಸುತ್ತದೆ. ಈ ಮಸೂದೆಯು ಹೊಸ ಡಿಲಿಮಿಟೇಶನ್ ಆಯೋಗವನ್ನು ಸ್ಥಾಪಿಸಲು ಅವಕಾಶ ನೀಡುತ್ತದೆ. ಈ ಆಯೋಗವು ಕ್ಷೇತ್ರಗಳ ಗಡಿಗಳನ್ನು ಮರು ವ್ಯಾಖ್ಯಾನಿಸುತ್ತದೆ ಮತ್ತು ಇತ್ತೀಚಿನ ಜನಗಣತಿ ದತ್ತಾಂಶವನ್ನು ಆಧರಿಸಿ (2011) ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಸ್ಥಾನಗಳನ್ನು ಹಂಚುತ್ತದೆ.

ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2026
ಈ ಮಸೂದೆಯು ರಾಜ್ಯಗಳ ಶಾಸಕಾಂಗ ಸಭೆಗಳಲ್ಲಿ ಹಾಗೂ ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಪುದುಚೇರಿಯಂತಹ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಜಾರಿಗೆ ತರಲು ದಾರಿ ಮಾಡಿಕೊಡುತ್ತದೆ. ಈ ಮೂರು ಮಸೂದೆಗಳನ್ನು ಪ್ರಾಥಮಿಕವಾಗಿ ಮಹಿಳಾ ಮೀಸಲಾತಿಯ ಅನುಷ್ಠಾನವನ್ನು ತ್ವರಿತಗೊಳಿಸಲು ಮತ್ತು ದೇಶದ ಚುನಾವಣಾ ರಚನೆಯಲ್ಲಿ ವ್ಯಾಪಕ ಬದಲಾವಣೆಗಳನ್ನು ಮಾಡಲು ಪರಿಚಯಿಸಲಾಗುತ್ತಿದೆ.

ಸಂಸತ್ತಿನ ಅಧಿವೇಶನದಲ್ಲಿ ಈ ವಿಷಯದ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ನಿರ್ಧರಿಸಿವೆ. ಮೋದಿ ಸರ್ಕಾರವು ವಿರೋಧ ಪಕ್ಷಗಳನ್ನು ನಿಗ್ರಹಿಸಲು ಮತ್ತು ಚುನಾವಣಾ ಲಾಭ ಪಡೆಯಲು ಈ ರೀತಿ ವರ್ತಿಸುತ್ತಿದೆ. ನಾವು ಸಂಸತ್ತಿನ ಒಳಗೆ ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ನಾಯಕರು ಘೋಷಿಸಿದ್ದಾರೆ.

ಮಹಿಳೆಯರಿಗೆ ಅಧಿಕಾರ ನೀಡುವ ಮಸೂದೆಯ ಆಶಯಕ್ಕೆ ಎಲ್ಲರೂ ಸಹಮತ ಸೂಚಿಸಿದ್ದರೂ, ಅದು ಜಾರಿಯಾಗುವ ‘ಸಮಯ’ ಮತ್ತು ‘ವಿಧಾನ’ ಈಗ ದೊಡ್ಡ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಸರ್ಕಾರವು ತನ್ನ ಷರತ್ತುಗಳನ್ನು ಸಡಿಲಿಸುತ್ತದೆಯೇ ಅಥವಾ ಸಂಸತ್ತಿನಲ್ಲಿ ಸಂಘರ್ಷ ಮುಂದುವರೆಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 11:43 am, Thu, 16 April 26

Source link

ಒಟಿಟಿಗೆ ಬಂದೇ ಬಿಡ್ತು ಪವನ್ ಕಲ್ಯಾಣ್-ಶ್ರೀಲೀಲಾ ಸಿನಿಮಾ – Kannada News | Pawan Kalyan starrer Ustaad Bhagat Singh movie released on Netlix

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿತ್ತು. ‘ಧುರಂಧರ್ 2’ ಸಿನಿಮಾ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಎರಡೂ ಒಟ್ಟಿಗೆ ಬಿಡುಗಡೆ ಆಗಿತ್ತು. ಇದೇ ಕಾರಣಕ್ಕೆ ಸಿನಿಮಾಕ್ಕೆ ಬಾಕ್ಸ್ ಆಫೀಸ್​​ನಲ್ಲಿ ತುಸು ಹಿನ್ನಡೆ ಆಯ್ತು. ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಗಳಿಕೆ ಮಾಡಲಿಲ್ಲ. ಆದರೆ ಪವನ್ ಅಭಿಮಾನಿಗಳು ಪ್ರತಿಬಾರಿಯಂತೆ ಈ ಬಾರಿಯೂ ಸಿನಿಮಾವನ್ನು ಸಂಪೂರ್ಣವಾಗಿ ಸೋಲಲು ಬಿಡಲಿಲ್ಲ. ದೊಡ್ಡ ಮಟ್ಟದ ಗಳಿಕೆ ಅಲ್ಲದಿದ್ದರೂ ಲಾಭದಲ್ಲಿಯೇ ಇದೆ ಸಿನಿಮಾ. ಆದರೆ ಚಿತ್ರಮಂದಿರದಲ್ಲಿ ‘ಧುರಂಧರ್ 2’ ಅಲೆಯಿಂದ ಸಮಸ್ಯೆ ಎದುರಿಸಿದ ಈ ಸಿನಿಮಾ ಇದೀಗ ಒಟಿಟಿಗೆ ಬಂದಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಶ್ರೀಲೀಲಾ ಮತ್ತು ರಾಶಿ ಖನ್ನಾ ಅವರುಗಳು ನಾಯಕಿಯರಾಗಿ ನಟಿಸಿರುವ ಸಿನಿಮಾನಲ್ಲಿ ಆರ್ ಪಾರ್ತಿಬನ್, ಕೆಎಸ್ ರವಿಕುಮಾರ್, ನವಾಬ್ ಶಾ ಇನ್ನೂ ಹಲವರು ನಟಿಸಿದ್ದಾರೆ. ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅವರ ಕುಟುಂಬದವರು ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ವೀಕ್ಷಿಸಿದ್ದರು. ಇದೀಗ ಒಟಿಟಿಗೆ ಸಿನಿಮಾ ಬಂದಿದ್ದು, ಒಟಿಟಿಯಲ್ಲಿ ಸಿನಿಮಾ ಹಿಟ್ ಆಗುವ ನಿರೀಕ್ಷೆ ಚಿತ್ರತಂಡದ್ದು.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಅವರ ಕೆಲವು ವಿಂಟೇಜ್ ಹಾಡುಗಳನ್ನು ನಿರ್ದೇಶಕ ಹರೀಶ್ ಶಂಕರ್ ಬಳಸಿಕೊಂಡಿದ್ದರು. ಅದು ಪವನ್ ಅಭಿಮಾನಿಗಳಿಗೆ ಸಖತ್ ಇಷ್ಟವಾಗಿತ್ತು. ಅಲ್ಲದೆ, ಪವನ ಅವರ ಹಳೆಯ ಸಿನಿಮಾದ ರೆಫರೆನ್ಸ್​​ಗಳನ್ನು ಸಾಕಷ್ಟು ಈ ಸಿನಿಮಾನಲ್ಲಿ ಬಳಸಲಾಗಿದೆ. ಒಟ್ಟಾರೆಯಾಗಿ ಪವನ್ ಅಭಿಮಾನಿಗಳಿಗಾಗಿಯೆಂದೇ ಸಿನಿಮಾವನ್ನು ಪ್ಯಾಕೇಜ್ ಮಾಡಿ ಕೊಟ್ಟಿದ್ದರು ಹರೀಶ್ ಶಂಕರ್.

ಇದನ್ನೂ ಓದಿ:‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ಉಸ್ತಾದ್ ಭಗತ್ ಸಿಂಗ್, ಸಿನಿಮಾವನ್ನು ಪವನ್ ಕಲ್ಯಾಣ್ ಅವರು ವರ್ಷಗಳ ಹಿಂದೆ ಒಪ್ಪಿಕೊಂಡಿದ್ದರು. ಆದರೆ ಆಂಧ್ರ ಚುನಾವಣಾ ಪ್ರಚಾರಕ್ಕೆ ಧುಮುಕಿದ ಕಾರಣ ಸಿನಿಮಾದ ಚಿತ್ರೀಕರಣ ನಿಂತು ಹೋಗಿತ್ತು. ಇದೀಗ ಕೆಲ ವರ್ಷಗಳ ಬಳಿಕ ಸಿನಿಮಾದ ಚಿತ್ರೀಕರಣವನ್ನು ಪವನ್ ಮುಗಿಸಿ ಬಳಿಕ ಬಿಡುಗಡೆ ಮಾಡಲಾಯ್ತು. ಇದೀಗ ಪವನ್ ಕಲ್ಯಾಣ್ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ‘ಓಜಿ 2’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾವನ್ನು ಸುರೇಂಧರ್ ರೆಡ್ಡಿ ನಿರ್ದೇಶನ ಮಾಡಲಿದ್ದು, ಈ ಹಿಂದೆ ‘ಕಿಕ್’, ‘ರೇಸು ಗುರ್ರಂ’, ‘ಊಸರವಳ್ಳಿ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ – Kannada News | Lalit Modi’s Umpire Fixing Allegation Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.

Source link

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ ಹತ್ಯೆ ನಡೆದಾಗ ತಾನು ಕೂಡ ಪಿತೂರಿಯ ಭಾಗವಾಗಿದ್ದೆ ಎಂಬ ಪಾಪಪ್ರಜ್ಞೆ ತನಗೆ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಹುಲಿರಾಯನ ಖಡಕ್ ಲುಕ್​​​ಗೆ ಪ್ರವಾಸಿಗರು ಫಿದಾ: ತಣಿಗೆಬೈಲ್ ಅರಣ್ಯದಲ್ಲಿ ವ್ಯಾಘ್ರನ ‘ಫೋಟೋ ಶೂಟ್’!

ಚಿಕ್ಕಮಗಳೂರು, ಏ.16: ಕಾಫಿನಾಡು ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೆಮ್ಮಣ್ಣುಗುಂಡಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಅದೃಷ್ಟವಶಾತ್ ವ್ಯಾಘ್ರ ದರ್ಶನವಾಗಿದೆ. ಅಭಯಾರಣ್ಯದ ಅಂಚಿನ ರಸ್ತೆಯಲ್ಲೇ ಹುಲಿಯೊಂದು ರಾಜಗಾಂಭೀರ್ಯದಿಂದ ಕುಳಿತಿದ್ದ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ತಣಿಗೆಬೈಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರು ವಾಹನದಲ್ಲಿ ತೆರಳುತ್ತಿದ್ದಾಗ ಅರಣ್ಯದ ಅಂಚಿನಲ್ಲಿ ಹುಲಿಯೊಂದು ಯಾವುದೇ ಅಂಜಿಕೆಯಿಲ್ಲದೆ ಆರಾಮವಾಗಿ ಕುಳಿತಿರುವುದು ಕಂಡುಬಂದಿದೆ. ವಿಡಿಯೋ ಚಿತ್ರೀಕರಿಸುತ್ತಿದ್ದ ಪ್ರವಾಸಿಗರಿಗೂ ಹುಲಿ ದಿಟ್ಟವಾಗಿ ‘ಲುಕ್’ ಕೊಟ್ಟಿದೆ. ಅರಣ್ಯದಲ್ಲಿ ಸಫಾರಿ ಹೋದರೂ ಕಾಣದ ವ್ಯಾಘ್ರ, ಇಂದು ರಸ್ತೆ ಬದಿಯಲ್ಲೇ ಕಾಣಿಸಿಕೊಂಡಿದ್ದರಿಂದ ಪ್ರವಾಸಿಗರು ಪುಳಕಿತರಾಗಿದ್ದಾರೆ. ಹುಲಿಯು ಕೆಲಕಾಲ ಅಲ್ಲೇ ಕುಳಿತು, ನಂತರ ನಿಧಾನವಾಗಿ ಕಾಡಿನೊಳಗೆ ಮರೆಯಾಗಿದೆ. ಈ ಭಾಗದಲ್ಲಿ ಹುಲಿಗಳ ಸಂಚಾರವಿರುವುದು ದೃಢಪಟ್ಟಿದ್ದು, ಕೆಮ್ಮಣ್ಣುಗುಂಡಿ ಮತ್ತು ತಣಿಗೆಬೈಲ್ ಮಾರ್ಗದಲ್ಲಿ ಸಂಚರಿಸುವ ಪ್ರವಾಸಿಗರು ವಾಹನಗಳಿಂದ ಕೆಳಗಿಳಿಯಬಾರದು ಮತ್ತು ಕಾಡುಪ್ರಾಣಿಗಳಿಗೆ ತೊಂದರೆ ನೀಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Live: ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಸುದ್ದಿಗೋಷ್ಠಿ – Kannada News | Darshan Former Manager Mallikarjuna Press Meet

ದರ್ಶನ್ ಮ್ಯಾಜೇರ್ ಆಗಿದ್ದ ಮಲ್ಲಿಕಾರ್ಜುನ ಅವರು ಹಲವು ವರ್ಷಗಳ ಕಾಲ ತಲೆಮರಿಸಿಕೊಂಡಿದ್ದರು. ಅವರ ಕಾಣೆ ಆದ ಪ್ರಕರಣದಲ್ಲಿ ತನಿಖೆ ನಡೆಯಬೇಕು ಎಂದೆಲ್ಲ ಆಗ್ರಹ ಕೇಳಿ ಬಂದವು. ಈಗ ಮಲ್ಲಿಕಾರ್ಜುನ್ ಮರಳಿದ್ದು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ಲೈವ್ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version