Headlines

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ: ತುಂಗಾ, ಭದ್ರಾ ಅಬ್ಬರಕ್ಕೆ ಹೊಲ-ಗದ್ದೆಗಳು ಜಲಾವೃತ – Kannada News | Chikkamagaluru Heavy Rain: Fields and Farmlands Inundated as Tunga and Bhadra Rivers Swell

ಚಿಕ್ಕಮಗಳೂರು, ಆಗಸ್ಟ್​​ 03: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ (Rain) ಅಬ್ಬರ ಮುಂದುವರೆದಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತುಂಗಾ-ಭದ್ರಾ ನದಿಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರವಾಹದ ಭೀತಿ ಎದುರಾಗಿದೆ.‌ ಶೃಂಗೇರಿಯ ಗಾಂಧಿ ಮೈದಾನ ಇಡೀ ಜಲಾವೃತವಾಗಿತ್ತು. ಭದ್ರೆಯ ಅಬ್ಬರಕ್ಕೆ ಹೊಲ-ಗದ್ದೆ ತೋಟಗಳು ಜಲಾವೃತವಾಗಿವೆ. ನಾಲ್ಕು ದಿನದ ಹಿಂದೆ ಮಳೆಗಾಗಿ ಆಕಾಶ ನೋಡುತ್ತಿದ್ದ ಮಲೆನಾಡಿಗರು ಸುರಿಯುತ್ತಿರುವ ಮಳೆ ಕಂಡು ಆತಂಕಕ್ಕೀಡಾಗಿದ್ದಾರೆ. ನದೀತೀರದ ತೋಟಗಳು ಜಲಾವೃತ: ಲಕ್ಷಾಂತರ ರೂ ಹಾನಿ ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ…

Read More

‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು – Kannada News | Kangana Ranaut Defends Cannes Party Video and Says Wants to Become a Sanghi

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರ ಹಳೆಯ ಪಾರ್ಟಿ ವಿಡಿಯೋ (Kangana Ranaut Party Video) ವೈರಲ್ ಆಗಿದೆ. ಅದನ್ನು ನೋಡಿದ ಜನರು ಟ್ರೋಲ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಕಂಗನಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಮೊದಲು ಸಾಧಾರಣ ಹಿಂದೂ ಆಗಿದ್ದೆ. ಆದರೆ ಈಗ ಜಾಗೃತ ಹಿಂದೂವಾಗಿದ್ದೇನೆ. ಅಲ್ಲದೇ, ನಾನು ಸಂಘಿ (Sanghi) ಆಗಲು  ಬಯಸುತ್ತೇನೆ’ ಎಂದು ಹೇಳುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಕಂಗನಾ ರಣಾವತ್ (Kangana Ranaut)…

Read More

ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ – Kannada News | Aluva Manappuram Siva Temple completely submerged in Periyar River Flood Water

ಎರ್ನಾಕುಲಂ, ಆಗಸ್ಟ್ 3: ಕೇರಳದಲ್ಲಿ ಭಾರೀ ಪ್ರವಾಹ (Kerala Flood) ಉಂಟಾಗಿದೆ. ಕೇರಳದಲ್ಲಿ ಮುಂದುವರಿದಿರುವ ಭಾರಿ ಮುಂಗಾರು ಮಳೆಯಿಂದಾಗಿ ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗಿದ್ದು, ಎರ್ನಾಕುಲಂ ಜಿಲ್ಲೆಯ ಪ್ರಸಿದ್ಧ ಆಲುವಾ ಮಣಪ್ಪುರಂ ಶ್ರೀ ಮಹಾದೇವ ದೇವಾಲಯವು (ಆಲುವಾ ಶಿವ ದೇವಾಲಯ) ಸಂಪೂರ್ಣ ಜಲಾವೃತಗೊಂಡಿದೆ. ಪೆರಿಯಾರ್ ನದಿಯ ಪ್ರವಾಹದ ನೀರು ದೇವಾಲಯದ ಆವರಣ ಮತ್ತು ನದಿಯ ದಂಡೆಗೆ ನುಗ್ಗಿದ್ದು, ದೇವಾಲಯದ ಶಿವಲಿಂಗ ಮತ್ತು ಗರ್ಭಗುಡಿಯ ಭಾಗಗಳು ನೀರಿನಲ್ಲಿ ಮುಳುಗಿವೆ. ಪೆರಿಯಾರ್ ನದಿಯ ದಂಡೆಯಲ್ಲಿರುವ ಜನರಿಗೆ ಮತ್ತು…

Read More

IND vs AUS: ಭಾರತ ಪ್ರವಾಸಕ್ಕೆ 16 ಸದಸ್ಯರ ಯುವ ಆಸ್ಟ್ರೇಲಿಯಾ ತಂಡ ಪ್ರಕಟ – Kannada News | Indian origin Neel Patel added in Australia U19 squad for India tour

ಬರುವ ಸೆಪ್ಟೆಂಬರ್ ತಿಂಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ 19 ವರ್ಷದೊಳಗಿನವರ (India vs Australia U19) ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ನಾಲ್ಕು ದಿನಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗಳಿಗಾಗಿ ಆಸ್ಟ್ರೇಲಿಯಾ ಯುವ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಇದೀಗ ಈ ಪ್ರವಾಸಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ 16 ಸದಸ್ಯರ ಆಸ್ಟ್ರೇಲಿಯಾ U19 ಪುರುಷರ ತಂಡವನ್ನು ಪ್ರಕಟಿಸಿದೆ. ಮುಂಬರುವ U19 ವಿಶ್ವಕಪ್‌ಗೆ ತಯಾರಿಯ ದೃಷ್ಟಿಯಿಂದ ಈ ಸರಣಿಯು ಎರಡೂ ತಂಡಗಳಿಗೆ…

Read More

‘ಒಪ್ಪಂದ ಮಾಡಿಕೊಳ್ಳಿ ಅಥವಾ ಸಂಪೂರ್ಣ ಶರಣಾಗಿ’; ಇರಾನ್‌ ವಿರುದ್ಧ ಗುಡುಗಿದ ಟ್ರಂಪ್ – Kannada News | Deal Or Total Surrender Donald Trump Slams Iran’s Duplicity In Denying Talks

ವಾಷಿಂಗ್ಟನ್, ಆಗಸ್ಟ್ 3: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಇರಾನ್ (Iran War) ವಿರುದ್ಧ ವಾಗ್ದಾಳಿ ನಡೆಸಿದ್ದು, ಮಾತುಕತೆಯ ವಿಷಯದಲ್ಲಿ ಇರಾನ್ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸಲು ನಾವು ಅನುಮತಿ ನೀಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ನಮ್ಮ ಬಳಿ ಖಾಸಗಿಯಾಗಿ ಇರಾನ್ ನಾಯಕರು ಮಾತುಕತೆಗಾಗಿ ಮನವಿ ಮಾಡುತ್ತಿದ್ದಾರೆ, ಆದರೆ ಸಾರ್ವಜನಿಕವಾಗಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಟ್ರಂಪ್ (Donald Trump) ಹೇಳಿಕೆಯಲ್ಲಿ ತಿಳಿಸಿದ್ದಾರೆ….

Read More

ಗಾಯತ್ರಿ ಶಾಂತೇಗೌಡಗೆ ಮಂತ್ರಿಗಿರಿ ಕೈತಪ್ಪಿದ್ದೇಕೆ? ಡಿಕೆ ಶಿವಕುಮಾರ್​​​ ಸ್ಫೋಟಕ ಹೇಳಿಕೆ

ಬೆಂಗಳೂರು, ಆ.3: ನೂತನ ಸಚಿವರ ಪಟ್ಟಿ ಅಂತಿಮಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದು, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಘೋಷಿಸಿದ್ದಾರೆ. ಸದ್ಯಕ್ಕೆ ಹರಿದಾಡುತ್ತಿರುವ ಯಾವುದೇ ಪಟ್ಟಿಗಳು ಅನಧಿಕೃತವಾಗಿದ್ದು, ರಾಜ್ಯಪಾಲರಿಗೆ ಸಲ್ಲಿಸುವ ಸಹಿ ಮಾಡಿದ ಪಟ್ಟಿಯೇ ಅಂತಿಮವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಪಕ್ಷದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ ಎಂದಿರುವ ಡಿಕೆ ಶಿವಕುಮಾರ್, ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ಇಪ್ಪತ್ತು ದಿನಗಳಿಂದ ನಾಲ್ಕು ಕ್ಯಾಬಿನೆಟ್ ಪಟ್ಟಿಗಳನ್ನು ತೋರಿಸಿರುವುದನ್ನು ಉಲ್ಲೇಖಿಸಿದ…

Read More

ಗಂಭೀರ ಆರೋಪ ಹೊರಿಸಿ ತಂಡ ತೊರೆದ ಶಶಾಂಕ್ ಸಿಂಗ್ – Kannada News | IPL Star Shashank Singh Quits Chhattisgarh for Puducherry: Cites Lack of Support

ಈ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿರುವ ಶಶಾಂಕ್, ‘ಹೌದು, ನಾನು ಛತ್ತೀಸ್‌ಗಢ ತೊರೆಯುತ್ತಿದ್ದೇನೆ. ನಾನು ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘದಿಂದ ಎನ್‌ಒಸಿ ಪಡೆದಿದ್ದೇನೆ ಮತ್ತು 2026-27ರ ಆವೃತ್ತಿಯಿಂದ ಪುದುಚೇರಿ ಪರ ಆಡುತ್ತೇನೆ. ಕಳೆದ ಆವೃತ್ತಿಯಲ್ಲಿ, ನಾನು ಗಂಭೀರ ಭುಜ ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದೆ, ಆದರೆ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಘವು ಆ ಕಷ್ಟದ ಸಮಯದಲ್ಲಿ ನನಗೆ ಯಾವುದೇ ಬೆಂಬಲ ನೀಡಲಿಲ್ಲ(PC-PTI). Source link

Read More

“ತಾಳ್ಮೆಯೇ ನಮ್ಮನ್ನು ಇಲ್ಲಿಯವರೆಗೆ ಕರೆತಂದಿದೆ, ಅಸಮಾಧಾನದ ಪ್ರಶ್ನೆಯೇ ಇಲ್ಲ”: ನೂತನ ಸಂಪುಟ ಸಭೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ – Kannada News | Karnataka Cabinet: CM Orders Ministers to Districts, Dismisses Rift Rumors with Siddaramaiah

ಬೆಂಗಳೂರು, ಆ.3: ನೂತನವಾಗಿ ಸೇರ್ಪಡೆಯಾದ 19 ಸಚಿವರೊಂದಿಗೆ ವಿಧಾನಸೌಧದಲ್ಲಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಸಂಪುಟ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಸಚಿವರಿಗೆ ನೀಡಿರುವ ಗಡುವು, ರಾಜ್ಯದ ಮಳೆ ಹಾಗೂ ಬರ ಪರಿಸ್ಥಿತಿ ಮತ್ತು ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರಿಗೆ ಈ ಮೂಲಕ ಸಂದೇಶಗಳನ್ನು ನೀಡಿದ್ದಾರೆ. ನೂತನ ಸಚಿವರಿಗೆ ಬೆಂಗಳೂರಿನಲ್ಲಿ ಇರಲು ನಾಳೆ (ಆಗಸ್ಟ್ 4) ಒಂದು ದಿನ ಮಾತ್ರ ಅವಕಾಶ ನೀಡಲಾಗಿದೆ….

Read More

ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ: ಶಾಸಕ ನಾರಾಯಣಸ್ವಾಮಿ ಆಕ್ರೋಶ – Kannada News | Kharge, Siddaramaiah and D.K. Shivakumar Have Cheated Kolar: MLA K Narayanaswamy Alleges

ಕೋಲಾರ, ಆಗಸ್ಟ್​​ 03: ‘ಜಿಲ್ಲೆಗೆ ಸಚಿವ ಸ್ಥಾನ ಸಿಗುತ್ತೆಂಬ ನಂಬಿಕೆ ಇತ್ತು. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಡಿಕೆ ಶಿವಕುಮಾರ್​ ಅವರು ಕೋಲಾರಕ್ಕೆ ದೊಡ್ಡ ಮೋಸ ಮಾಡಿದ್ದಾರೆ’ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪ್ರತಿ ಬಾರಿ ಎಡಗೈ ಸಮುದಾಯದ ಮುನಿಯಪ್ಪ ಗೆಲ್ಲಬೇಕು, ಮುನಿಯಪ್ಪರ ಮಗಳು KGF ಶಾಸಕಿ ರೂಪಾ ಗೆಲ್ಲಬೇಕು. ಇಲ್ಲಿ ಬಲಗೈ ಸಮುದಾಯದ ಸಹಾಯ ಪಡೆದು ಗೆಲುತ್ತಾರೆ. ಎಡಗೈ-ಬಲಗೈ…

Read More

ಹೃದಯಾಘಾತದ ಅಪಾಯ ಕಡಿಮೆ ಮಾಡಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ – Kannada News | Best Daily Habits for a Strong and Healthy Heart

ಹೃದಯವು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ದೇಹದ ಪ್ರತಿಯೊಂದು ಭಾಗಕ್ಕೂ ಆಮ್ಲಜನಕ ಮತ್ತು ಪೋಷಕಾಂಶಯುಕ್ತ ರಕ್ತವನ್ನು ತಲುಪಿಸುವ ಜವಾಬ್ದಾರಿ ಹೃದಯದ್ದಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಯುವಜನರಲ್ಲಿಯೂ ಹೆಚ್ಚಾಗುತ್ತಿವೆ. ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ, ಮೊದಲಿನಿಂದಲೇ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಹೃದಯದ ಆರೋಗ್ಯವನ್ನು ಕಾಪಾಡುವ ಅತ್ಯುತ್ತಮ ಮಾರ್ಗವಾಗಿದೆ. ಸಮತೋಲನ ಆಹಾರ, ನಿಯಮಿತ ವ್ಯಾಯಾಮ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿಯಂತ್ರಣದಂತಹ ಸಣ್ಣ-ಸಣ್ಣ ಅಭ್ಯಾಸಗಳು ಹೃದಯಾಘಾತ, ಪಾರ್ಶ್ವವಾಯು (ಸ್ಟ್ರೋಕ್), ಕೊರೊನರಿ ಆರ್ಟರಿ…

Read More