Headlines

ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ! – Kannada News

ಬೆಂಗಳೂರು, ಜೂ.3: ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಜಾರಿಯಾಗುತ್ತಿರುವ ಎರಡು ಪ್ರಮುಖ ಸಾರಿಗೆ ಯೋಜನೆಗಳಾದ ‘ನಮ್ಮ ಮೆಟ್ರೋ’ (Namma Metro) ಮತ್ತು ‘ಬೆಂಗಳೂರು ಉಪನಗರ ರೈಲು’ (Suburban Rail) ಪೂರ್ವ ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸಂಪರ್ಕ ಸಾಧಿಸಲಿದೆ. ನಗರದ ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ, ಈ ಎರಡು ಬೃಹತ್ ಸಾರಿಗೆ ವ್ಯವಸ್ಥೆಗಳು ಒಂದೇ ಮಾರ್ಗದಲ್ಲಿ (Shared Alignment), ಒಂದರ ಕೆಳಗೆ ಮತ್ತೊಂದರಂತೆ ಸಂಚರಿಸುವ ಅತ್ಯಂತ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಇದು ಭೂಸ್ವಾಧೀನದ ವೆಚ್ಚ ಮತ್ತು…

Read More

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು: ಒಬ್ಬೊಬ್ಬರದು ಒಂದೊಂದು ಕಥೆ – Kannada News | Many Students Across the State Miss NEET Re Exam Due to Traffic Jams and Other Issues

ಬೆಂಗಳೂರು, ಜೂನ್​​ 21: ಪ್ರಶ್ನೆ ಪತ್ರಿಕೆ ಲೀಕ್​ನಿಂದ ರದ್ದಾಗಿದ್ದ ನೀಟ್ ಮರುಪರೀಕ್ಷೆ (NEET Re Exam)  ಇಂದು ರಾಜ್ಯಾದ್ಯಂತ ನಡೆದಿದೆ. ವರ್ಷದಲ್ಲೇ ಎರಡನೇ ಬಾರಿಗೆ ವಿದ್ಯಾರ್ಥಿಗಳು (Students) ನೀಟ್ ಪರೀಕ್ಷೆ ಬರೆದಿದ್ದಾರೆ. ಆದರೆ ರಾಜ್ಯದ ಹಲವು ವಿದ್ಯಾರ್ಥಿಗಳು ಈ ಭಾರಿ ಕೂಡ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಟ್ರಾಫಿಕ್ ​ಜಾಮ್ ಸೇರಿದಂತೆ ನಾನಾ ಕಾರಣಗಳಿಗೆ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದು, ಸಿಬ್ಬಂದಿ ನಿರಾಕರಿಸಿದ್ದಾರೆ. ಹೀಗಾಗಿ ಕಣ್ಣೀರು ಹಾಕುತ್ತಲೇ ಪರೀಕ್ಷಾರ್ಥಿಗಳು ಮನೆಗೆ ತೆರಳಿದ್ದಾರೆ. ಮುಖ್ಯಾಂಶಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು…

Read More

Video: ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಜನ – Kannada News | Bee Swarm Sparks Panic at Mandore Garden, Visitors Rush for Safety

ಜೋಧ್​ಪುರ, ಏಪ್ರಿಲ್ 21: ಜೋಧ್​ಪುರದ ಮಂಡೋರ್ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್‌ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್ರವಾಸಿಗರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ, ಐತಿಹಾಸಿಕ ಸೌಂದರ್ಯವನ್ನು ಸವಿಯುತ್ತಿದ್ದರು. ಆದರೆ, ದೊಡ್ಡ ಆಪತ್ತು ಕಾದಿದೆ ಎಂದು ಯಾರೂ ಊಹಿಸಿರಲಿಲ್ಲ. ಉದ್ಯಾನದ ಮುಖ್ಯ ದ್ವಾರದ ಬಳಿ ಇದ್ದ ಬೃಹತ್ ಜೇನುಗೂಡಿನಿಂದ ಸಾವಿರಾರು ಜೇನುನೊಣಗಳು ಒಮ್ಮೆಗೆ ಹೊರಬಂದವು. ನೋಡುನೋಡುತ್ತಿದ್ದಂತೆಯೇ ದಾಳಿ ಶುರು ಮಾಡಿದ್ದವು. ದಾಳಿಯ ತೀವ್ರತೆ…

Read More

ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಬೈಕ್ ಪಾರ್ಕ್ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಪಿಯುಸಿ ವಿದ್ಯಾರ್ಥಿ ಸಾವು! – Kannada News | Bengaluru Monsoon Mayhem: Rain Claims 8 Lives, Electrocution and Compound Collapse

ಬೆಂಗಳೂರು, ಏ.29: ರಾಜಧಾನಿಯಲ್ಲಿ ಇಂದು ಆರ್ಭಟಿಸಿದ ಮಳೆಯು ಸಾವು-ನೋವುಗಳ ಸರಣಿಯನ್ನೇ ಸೃಷ್ಟಿಸುತ್ತಿದೆ. ಈಗಾಗಲೇ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ಸಾವು ಸಂಭವಿಸಿದೆ. ನಗರದ ಯಾರಬ್ ನಗರದಲ್ಲಿ ವಿದ್ಯುತ್ ಶಾಕ್ ತಗುಲಿ ಸೈಯದ್ ಸೂಫಿಯಾನ್ ಎಂಬ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇತ್ತೀಚೆಗಷ್ಟೇ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಸೈಯದ್ ಸೂಫಿಯಾನ್, ಸಂಜೆ ಮಳೆ ಸುರಿಯುತ್ತಿದ್ದ ವೇಳೆ ಯಾರಬ್ ನಗರದಲ್ಲಿ ತನ್ನ ಬೈಕ್…

Read More

ಭಾರತೀಯ ವಿವಾಹಗಳಲ್ಲಿ ಹೊಸ ಟ್ರೆಂಡ್: 13 ರಿಂದ 25 ಸಾವಿರ ರೂ. ಬೆಲೆಯ ಇಂಜೆಕ್ಷನ್ ತಗೊಳ್ತಿದ್ದಾರೆ ವಧುಗಳು!

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸಿಕೊಳ್ಳುವುದು ಬಹಳ ಕಷ್ಟ, ಅದಕ್ಕೆ ಆಹಾರ ಪದ್ಧತಿಯಲ್ಲಿ ಬದಲಾವಣೆ, ವ್ಯಾಯಾಮ ಇನ್ನು ಅನೇಕ ಕಸರತ್ತುಗಳನ್ನು ಮಾಡಬೇಕು, ಸಾಮಾನ್ಯವಾಗಿ ಜನ ಡಯಟ್ ಮಾಡುತ್ತಾರೆ. ಈ ಕ್ರಮವು ಅನೇಕರಿಗೆ ಒಳ್ಳೆಯ ಫಲಿತಾಂಶವನ್ನು ನೀಡಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತಕ್ಷಣಕ್ಕೆ ತೂಕ ಇಳಿಸಿಕೊಳ್ಳಲು ಔಷಧಿಗಳ ಕಡೆ ಹೋಗುತ್ತಿದ್ದಾರೆ. ಇಂಜೆಕ್ಷನ್​​ಗಳನ್ನು ತೆಗೆದುಕೊಂಡು ತೂಕ ಇಳಿಸಿಕೊಳ್ಳುತ್ತಾರೆ. ಅದರಲ್ಲೂ ಇದೀಗ ಮದುವೆ ಆಗುತ್ತಿರುವ ನೂತನ ಜೋಡಿಗಳು ಕೂಡ ಹಾದಿಯಲ್ಲೇ ಸಾಗುತ್ತಿದ್ದಾರೆ. ಈ ಬಗ್ಗೆ ಇಲ್ಲೊಂದು ವರದಿಯನ್ನು ನೀಡಲಾಗಿದೆ. ಮದುವೆ ಕಡಿಮೆ ಸಮಯ…

Read More

IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್​​ಗಳಿಂದ…

Read More

ಗಿಲ್ಲಿಯಿಂದ ಅಶ್ವಿನಿ ಗೌಡ ತನಕ: ಬಿಗ್ ಬಾಸ್ ಫಿನಾಲೆ ಸ್ಪರ್ಧಿಗಳ ಪ್ಲಸ್ ಏನು? ಮೈನಸ್ ಏನು? – Kannada News | Plus and Minus of Bigg Boss Kannada Season 12 Finale contestants Gilli Nata Ashwini Gowda

ನೋಡನೋಡುತ್ತಿದ್ದಂತೆಯೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬಂದೇ ಬಿಟ್ಟಿದೆ. ಎಲ್ಲವೂ ನಿನ್ನೆ ಮೊನ್ನೆ ಶುರು ಆದಂತಿದೆ. ಆದರೆ ಮೂರೂವರೆ ತಿಂಗಳು ಕಳೆದುಹೋಗಿದೆ. ಹಲವಾರು ಸ್ಪರ್ಧಿಗಳಿಂದ ತುಂಬಿದ್ದ ಬಿಗ್ ಬಾಸ್ ಮನೆ ಈಗ ಕೇವಲ 6 ಮಂದಿಗೆ ಬಂದು ನಿಂತಿದೆ. ಅಶ್ವಿನಿ ಗೌಡ, ಕಾವ್ಯಾ ಶೈವ, ಮ್ಯೂಟೆಂಟ್ ರಘು, ಧನುಷ್, ರಕ್ಷಿತಾ ಶೆಟ್ಟಿ ಹಾಗೂ ಗಿಲ್ಲಿ ನಟ (Gilli Nata) ಅವರು ಫಿನಾಲೆ ತಲುಪಿದ್ದಾರೆ. ಜನವರಿ 18ರಂದು ಅದ್ದೂರಿಯಾಗಿ…

Read More

“ಇದು ನಮ್ಮ ಮೈದಾನ, ನಮ್ಮ ಹವಾ!”: ಆರ್​ಸಿಬಿ ಅಭಿಮಾನಿ ಅಬ್ಬರಕ್ಕೆ ಸಿಎಸ್​​ಕೆ ಫ್ಯಾನ್ಸ್ ಗಪ್​​​​ಚುಪ್

ಬೆಂಗಳೂರು, ಏ. 6: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯವು ಕೇವಲ ಮೈದಾನಕ್ಕಷ್ಟೇ ಸೀಮಿತವಾಗಿರಲಿಲ್ಲ, ಗ್ಯಾಲರಿಯಲ್ಲೂ ಅಭಿಮಾನಿಗಳ ನಡುವೆ ಭಾರಿ ಜಿದ್ದಾಜಿದ್ದಿಗೆ ಸಾಕ್ಷಿಯಾಯಿತು. ಪಂದ್ಯದ ವೇಳೆ ಆರ್‌ಸಿಬಿ ತಂಡವು ಭರ್ಜರಿ ಸಿಕ್ಸರ್ ಸಿಡಿಸಿದಾಗ ಕೆಂಪು ಜರ್ಸಿ ತೊಟ್ಟಿದ್ದ ಆರ್‌ಸಿಬಿ ಅಭಿಮಾನಿ ಯುವತಿಯೊಬ್ಬರು ಸಂಭ್ರಮಿಸಿದ ರೀತಿ ಈಗ ಇಂಟರ್ನೆಟ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ತಮ್ಮ ಎದುರಿಗೇ ಕುಳಿತಿದ್ದ ಹಳದಿ ಜರ್ಸಿ ತೊಟ್ಟ ಸಿಎಸ್‌ಕೆ…

Read More

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More

60ನೇ ವಯಸ್ಸಿನಲ್ಲೂ ಎಷ್ಟು ಯಂಗ್ ಆಗಿ ಕಾಣ್ತಾರೆ ನೋಡಿ ವಿಕ್ರಮ್ – Kannada News | Vikram’s Youthful Look at 60: Is it Cosmetic Surgery or Natural Diet?

ತಮಿಳಿನ ಸ್ಟಾರ್ ಹೀರೋ ವಿಕ್ರಮ್ ಅವರನ್ನು ಪರಿಚಯಿಸುವ ಅಗತ್ಯವಿಲ್ಲ. ಅವರು ತಮ್ಮ ಚಿತ್ರಗಳ ಮೂಲಕ ಅನೇಕ ಅಭಿಮಾನಿಗಳನ್ನು ಗೆದ್ದಿದ್ದಾರೆ. ತಮಿಳಿನಲ್ಲಿ ಸ್ಟಾರ್ ಹೀರೋ ಆಗಿರುವ ವಿಕ್ರಮ್, ದಕ್ಷಿಣ ಭಾರತದಲ್ಲಿ ಸಾಕಷ್ಟು ಕ್ರೇಜ್ ಹೊಂದಿದ್ದಾರೆ. ವಿಕ್ರಮ್ ಪ್ರಸ್ತುತ 60 ವರ್ಷ ವಯಸ್ಸಿನವರಾಗಿದ್ದರೂ, ಅವರು ತಮ್ಮ ಲುಕ್ನಲ್ಲಿ 20-25 ವರ್ಷದ ಹುಡುಗನಂತೆ ಕಾಣುತ್ತಾರೆ. ಇತ್ತೀಚೆಗೆ, ವಿಕ್ರಮ್‌ಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಕ್ರಮ್ ಅವರ ಲುಕ್ ನೆಟ್ಟಿಗರು ಮತ್ತು ಅವರ ಅಭಿಮಾನಿಗಳನ್ನು ಅಪಾರವಾಗಿ ಮೆಚ್ಚಿಸಿದೆ. ವಿಕ್ರಮ್ ಅವರ…

Read More