ಕೋಮು ಪ್ರಚೋದನಾ ಹೇಳಿಕೆ ಆರೋಪ; ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು – Kannada News | FIR registered against Mamata Banerjee over communal remarks ahead of west Bengal Assembly elections

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೇಳೆ ಕೋಮು ಸಂಘರ್ಷ ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಧರ್ಮದ ಆಧಾರದ ಮೇಲೆ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ಸಾರ್ವಜನಿಕ ಸಭೆಯೊಂದರಲ್ಲಿ ನಿರ್ದಿಷ್ಟ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತಾ, “ನಿಮ್ಮ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಿ ಮತ್ತು ಒಗ್ಗಟ್ಟಾಗಿ ಟಿಎಂಸಿ ಪಕ್ಷಕ್ಕೆ ಮತ ಚಲಾಯಿಸಿ” ಎಂದು ಕರೆ ನೀಡಿದ್ದರು ಎನ್ನಲಾಗಿದೆ. ಈ ಹೇಳಿಕೆಯು ವಿಧಾನಸಭಾ ಚುನಾವಣೆಯ ಮೇಲೆ ಪ್ರಭಾವ ಬೀರಲು ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಮಾಡಿದ್ದಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ

ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಪ್ರಯತ್ನ ಮತ್ತು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯ ಆರೋಪಗಳ ಅಡಿಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. “ಇದು ಬಿಜೆಪಿಯ ರಾಜಕೀಯ ಪ್ರೇರಿತ ಪಿತೂರಿಯಾಗಿದೆ. ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ನೇರವಾಗಿ ಎದುರಿಸಲು ಸಾಧ್ಯವಾಗದ ಬಿಜೆಪಿ, ತನಿಖಾ ಸಂಸ್ಥೆಗಳು ಮತ್ತು ಪೊಲೀಸರನ್ನು ಬಳಸಿಕೊಂಡು ಇಂತಹ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ” ಎಂದು ಟಿಎಂಸಿ ನಾಯಕರು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ಮೇ 20ರಂದು ದಕ್ಷಿಣ ಕೊಲ್ಕತ್ತಾದ ನೇತಾಜಿ ನಗರ ಪೊಲೀಸ್ ಠಾಣೆಗೆ ಸಲ್ಲಿಕೆಯಾಗಿದ್ದ ದೂರಿನ ಪ್ರಕಾರ, ಸ್ಥಳೀಯ ನಿವಾಸಿ ತುಷಾರ್ ಕಾಂತಿ ದಾಸ್ ಎಂಬುವವರು, ಸಾರ್ವಜನಿಕ ಸಭೆಯೊಂದರಲ್ಲಿ ಮಮತಾ ಬ್ಯಾನರ್ಜಿ ಅವರು ನೀಡಿದ ಹೇಳಿಕೆಯು ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಸಮುದಾಯಗಳ ನಡುವೆ ಭಯ, ತಪ್ಪು ತಿಳುವಳಿಕೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಭಾರತ- ಅಫ್ಘನ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan ODI Series 2026: Full Schedule, Squads and Match Details

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಆದರೆ ಮತ್ತೊಬ್ಬ ಅನುಭವಿ ಆಟಗಾರ ರೋಹಿತ್ ಶರ್ಮಾ ಆಡುತ್ತಿರುವುದು ಅಭಿಮಾನಿಗಳ ಬೇಸರವನ್ನು ಕೊಂಚ ಕಡಿಮೆ ಮಾಡಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಜೂನ್ 13 ರಂದು ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣ, ಧರ್ಮಶಾಲಾದಲ್ಲಿ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು.

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

ಉಭಯ ತಂಡಗಳು

ಏಕದಿನ ಸರಣಿಗೆ ಟೀಂ ಇಂಡಿಯಾ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

ಏಕದಿನ ಸರಣಿಗೆ ಅಫ್ಘಾನಿಸ್ತಾನ ತಂಡ: ಹಸ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ರಹಮತ್ ಷಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ಅಜ್ಮತುಲ್ಲಾ ಒಮರ್ಜೈ, ರಶೀದ್ ಖಾನ್, ನಂಗ್ಯಾಲ್ ಖರೋಟೈ, ಎಎಮ್ ಗಜನ್ಫರ್, ಜಿಯಾ ಯು ರೆಹಮಾನ್ ಶರೀಫಿ, ಫರೀದ್ ಮಲಿಕ್, ಬಿಲಾಲ್ ಸಾಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೊಲ್ಲೂರು ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್ – Kannada News | CM Vijays Devout Visit to Kollur Mookambika Temple Continues Political Tradition

ಉಡುಪಿ, ಜೂ.12: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಅವರು ಮೂಕಾಂಬಿಕಾ ದೇವಿಗೆ ಭಕ್ತಿಯಿಂದ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಪಿಸಿದರು. ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ಸ್ವಾಗತ ಕೋರಿದರು. ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಳೆದ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು ಎಂದು ಅಲ್ಲಿ ಅರ್ಚಕರು ಹೇಳಿದರು. ಈ ಹಿಂದೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ದಿವಂಗತ ಎಂ.ಜಿ. ರಾಮಚಂದ್ರನ್ (MGR) ಅವರು ಕೊಲ್ಲೂರು ಮೂಕಾಂಬಿಕಾ ದೇವಿಗೆ ಚಿನ್ನದ ಖಡ್ಗವನ್ನು ಕಾಣಿಕೆಯಾಗಿ ನೀಡಿದ್ದರು. ತಮಗಿಂತ ಮುಂಚೆ ತಮಿಳುನಾಡನ್ನು ಆಳಿದ ಧೀಮಂತ ನಾಯಕ ನೀಡಿದ್ದ ಆ ಐತಿಹಾಸಿಕ ಚಿನ್ನದ ಖಡ್ಗವನ್ನು ಸಿಎಂ ವಿಜಯ್ ಅವರು ಕುತೂಹಲದಿಂದ ವೀಕ್ಷಿಸಿ, ಅದರ ಹಿನ್ನೆಲೆಯನ್ನು ಅಧಿಕಾರಿಗಳಿಂದ ಕೇಳಿ ತಿಳಿದುಕೊಂಡರು. ತಮಿಳುನಾಡು ಮುಖ್ಯಮಂತ್ರಿ ಬರುವ ವಿಷಯ ತಿಳಿದು ಕೊಲ್ಲೂರು ದೇಗುಲದ ಬಳಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು – Kannada News | India’s Retail Inflation Rises to 3.93pc in May: Food, Fuel Drive Price Surge

ನವದೆಹಲಿ, ಜೂನ್ 12: ಭಾರತದ ಚಿಲ್ಲರೆ ಹಣದುಬ್ಬರ (Retail Inflation) ಸತತವಾಗಿ ಏರುವುದು ಮುಂದುವರಿದಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಮೇ ತಿಂಗಳಲ್ಲಿ ರೀಟೇಲ್ ಇನ್​ಫ್ಲೇಶನ್ ಏಪ್ರಿಲ್​ನದಕ್ಕಿಂತ 45 ಮೂಲಾಂಕಗಳಷ್ಟು ಹೆಚ್ಚಳಗೊಂಡಿದೆ. ಏಪ್ರಿಲ್ ತಿಂಗಳಲ್ಲಿದ್ದ ಶೇ. 3.48 ರಿಂದ ಮೇ ತಿಂಗಳಲ್ಲಿ ಶೇ. 3.93 ಕ್ಕೆ ವೇಗ ಪಡೆದುಕೊಂಡಿದೆ. ಇದು ಸತತ ಐದನೇ ತಿಂಗಳ ಹೆಚ್ಚಳವಾಗಿದ್ದು, ಕಳೆದೆರಡು ತಿಂಗಳುಗಳಿಗೆ ಹೋಲಿಸಿದರೆ ಬೆಲೆ ಏರಿಕೆಯ ಒತ್ತಡ ತೀವ್ರವಾಗುತ್ತಿರುವುದನ್ನು ತೋರಿಸುತ್ತದೆ.

ಆಹಾರ ಪದಾರ್ಥಗಳ ಬೆಲೆಯೇ ಪ್ರಮುಖ ಕಾರಣ

ಹಣದುಬ್ಬರ ಹೆಚ್ಚಾಗಲು ಪ್ರಮುಖ ಕಾರಣ ಆಹಾರ ಪದಾರ್ಥಗಳ ಬೆಲೆ ಏರಿಕೆ (Food Inflation). ಆಹಾರ ಹಣದುಬ್ಬರವು ಏಪ್ರಿಲ್‌ನಲ್ಲಿದ್ದ ಶೇ. 4.2 ರಿಂದ ಮೇ ತಿಂಗಳಲ್ಲಿ ಶೇ. 4.78 ಕ್ಕೆ ಏರಿದೆ. ಗ್ರಾಮೀಣ ಭಾಗದಲ್ಲಿ ಆಹಾರ ಹಣದುಬ್ಬರ ಶೇ. 4.85 ರಷ್ಟಿದ್ದರೆ, ನಗರ ಪ್ರದೇಶಗಳಲ್ಲಿ ಶೇ. 4.66 ರಷ್ಟಿದೆ. ಅಂದರೆ ನಗರಗಳಿಗಿಂತ ಗ್ರಾಮೀಣ ಭಾಗದಲ್ಲಿ ಬೆಲೆ ಏರಿಕೆಯ ಬಿಸಿ ಹೆಚ್ಚಾಗಿದೆ.

ಇದನ್ನೂ ಓದಿ: ಷೇರುಬಜಾರಿನಲ್ಲಿ ಭಾರಿ ಗೂಳಿ ಓಟ; ಗರಿಬಿಚ್ಚಿದ ಸೆನ್ಸೆಕ್ಸ್, ನಿಫ್ಟಿ; ಮಾರುಕಟ್ಟೆಯ ಭರ್ಜರಿ ಆಟಕ್ಕೆ ಕಾರಣಗಳೇನು?

ಕೇವಲ ಹಸಿ ಆಹಾರ ಧಾನ್ಯಗಳು ಮಾತ್ರವಲ್ಲದೆ, ಸಿದ್ಧ ಆಹಾರದ ಮೇಲೂ ಇದರ ಪ್ರಭಾವ ಬೀರಿದೆ. ರೆಸ್ಟೋರೆಂಟ್‌ಗಳು ಮತ್ತು ವಸತಿ ಸೇವೆಗಳ ದರಗಳು ಶೇಕಡಾ 5.75 ರಷ್ಟು ದುಬಾರಿಯಾಗಿವೆ.

ಸಾರಿಗೆ ವೆಚ್ಚ ಮತ್ತು ಚಿನ್ನದ ಬೆಲೆಯ ಪ್ರಭಾವ

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಹಾಗೂ ಕಚ್ಚಾ ತೈಲ ಬೆಲೆಯ ಏರಿಳಿತದ ಕಾರಣ ಸರಕು ಸಾಗಣೆ ವೆಚ್ಚವು ವಾರ್ಷಿಕವಾಗಿ ಶೇಕಡಾ 7.63 ರಷ್ಟು ಹೆಚ್ಚಾಗಿದೆ. ಚಿನ್ನದ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬಂದ ಹಿನ್ನೆಲೆಯಲ್ಲಿ, ಆಭರಣ ಮತ್ತು ಅಮೂಲ್ಯ ಲೋಹಗಳನ್ನೊಳಗೊಂಡ ವಲಯದಲ್ಲಿ ಶೇ. 56.35 ರಷ್ಟು ಭಾರಿ ಹಣದುಬ್ಬರ ದಾಖಲಾಗಿದೆ. ಇದು ಗ್ರಾಹಕ ಬೆಲೆ ಸೂಚ್ಯಂಕ (CPI) ಬುಟ್ಟಿಯಲ್ಲೇ ಅತ್ಯಂತ ವೇಗವಾಗಿ ಬೆಳೆದ ಅಂಶವಾಗಿದೆ.

ಶಿಕ್ಷಣವೂ ದುಬಾರಿ: ಉನ್ನತ ಶಿಕ್ಷಣದ ವೆಚ್ಚಗಳು ಶೇ. 3.64 ರಷ್ಟು ಮತ್ತು ಒಟ್ಟಾರೆ ಶಿಕ್ಷಣ ಸೇವೆಗಳ ದರ ಶೇ. 2.99 ರಷ್ಟು ಹೆಚ್ಚಾಗಿದ್ದು, ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬಿದ್ದಿದೆ.

ಆರ್‌ಬಿಐ (RBI) ಮುಂದಿರುವ ಸವಾಲುಗಳು

ಪ್ರಸ್ತುತ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಗುರಿಯಾದ ಶೇಕಡಾ 2 ರಿಂದ 6 ರ ಒಳಗಿನ ಮಿತಿಯಲ್ಲೇ ಇದ್ದರೂ, ಅದು 4 ರ ಸನಿಹಕ್ಕೆ ತಲುಪುತ್ತಿರುವುದು ಕಳವಳ ಮೂಡಿಸಿದೆ. ಒಂದು ವೇಳೆ ಮುಂಗಾರು (Monsoon) ದುರ್ಬಲಗೊಂಡರೆ ಅಥವಾ ಜಾಗತಿಕವಾಗಿ ಕಚ್ಚಾ ತೈಲ ಬೆಲೆಗಳು ಮತ್ತೆ ಏರಿಕೆಯಾದರೆ ಹಣದುಬ್ಬರವು ಶೇಕಡಾ 5 ರ ಗಡಿ ದಾಟಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ. ಇದರಿಂದಾಗಿ ಆರ್‌ಬಿಐ ಮುಂದಿನ ದಿನಗಳಲ್ಲಿ ಬಡ್ಡಿದರಗಳನ್ನು (Repo Rate) ಶೇಕಡಾ 0.25 ರಿಂದ 0.50 ರಷ್ಟು ಹೆಚ್ಚಿಸುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ

ವರ್ಷದ ಆರಂಭದಲ್ಲಿ (ಜನವರಿಯಲ್ಲಿ ಶೇ. 2.74) ನಿಯಂತ್ರಣದಲ್ಲಿದ್ದ ಹಣದುಬ್ಬರವು, ಕಳೆದ 5 ತಿಂಗಳುಗಳಿಂದ ನಿರಂತರವಾಗಿ ಏರುತ್ತಾ ಮೇ ತಿಂಗಳಲ್ಲಿ ಶೇ. 3.93 ಕ್ಕೆ ತಲುಪಿದೆ. ತರಕಾರಿ, ಆಹಾರ ಧಾನ್ಯಗಳು ಮತ್ತು ಸಾಗಣೆ ವೆಚ್ಚದ ಏರಿಕೆಯೇ ಇದಕ್ಕೆ ಮುಖ್ಯ ಕಾರಣ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹೊರಬಂದಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ, FWICE (ಚಲನಚಿತ್ರ ಕಾರ್ಮಿಕರ ಒಕ್ಕೂಟ) ರಣವೀರ್ ವಿರುದ್ಧ ಅಸಹಕಾರದ ನಿರ್ದೇಶನವನ್ನು ಹೊರಡಿಸಿತ್ತು. ಈ ವಿಚಾರವಾಗಿ ರಣವೀರ್ ಪರವಾಗಿ ನಿಂತಿದ್ದ ಕಂಗನಾ, ಈಗ ಅದರ ಹಿಂದಿನ ಅಸಲಿ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ‘ನಮ್ಮ ಚಿತ್ರರಂಗದಲ್ಲಿ ಒಂದು ವರ್ಗಕ್ಕೆ ಪಾಕಿಸ್ತಾನದ ಮೇಲೆ ವಿಶೇಷ ಪ್ರೇಮವಿದೆ. ದಶಕಗಳಿಂದ ಬಾಲಿವುಡ್ ಸಿನಿಮಾಗಳು ನಮಗೆ ಪಾಕಿಸ್ತಾನದ ಬಗ್ಗೆ ಮೃದು ಧೋರಣೆ ಹೊಂದುವುದನ್ನೇ ಕಲಿಸುತ್ತಾ ಬಂದಿವೆ. ಆದರೆ ಯಾವಾಗ ರಣವೀರ್ ಸಿಂಗ್ ನಟನೆಯ ಧುರಂಧರ್ ರೀತಿಯ ಸಿನಿಮಾಗಳು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿಗೆ ತೋರಿಸುತ್ತವೆಯೋ, ಆಗ ಇಲ್ಲಿನ ಕೆಲವರಿಗೆ ನೋವಾಗಲು ಶುರುವಾಗುತ್ತದೆ’ ಎಂದು ಕಿಡಿಕಾರಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗಳಿಗೂ ಹೆಚ್ಚು ಗಳಿಕೆ ಮಾಡಿ ದಾಖಲೆ ನಿರ್ಮಿಸಿತ್ತು. ಈ ಚಿತ್ರದಲ್ಲಿ ರಣವೀರ್ ಅವರು ಭಾರತೀಯ ಗೂಡಾಚಾರಿಯಾಗಿ ಪಾಕಿಸ್ತಾನದ ಭಯೋತ್ಪಾದಕ ಜಾಲವನ್ನು ಧ್ವಂಸ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಯಶಸ್ಸಿನ ನಂತರವೇ ರಣವೀರ್ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂಬುದು ಕಂಗನಾ ಅವರ ವಾದ.

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ಸಿಕ್ಕ ಬಳಿಕವೂ ನನಗೆ ಕೆಲಸ ಸಿಗಲಿಲ್ಲ: ಸತ್ಯ ತೆರೆದಿಟ್ಟ ಕಂಗನಾ ರಣಾವತ್

‘ತಾವು ಇಷ್ಟು ವರ್ಷ ಮಾಡಿಕೊಂಡು ಬಂದ ಪಾಕಿಸ್ತಾನ ಪರವಾದ ಪ್ರಚಾರಕ್ಕೆ ಬೆಲೆ ಇಲ್ಲದಂತಾಯಿತೇ ಎಂಬ ಭಯ ಅವರಲ್ಲಿ ಮೂಡಿದೆ. ಹಾಗಾಗಿಯೇ ಧುರಂಧರ್ ಸಕ್ಸಸ್ ಬೆನ್ನಲ್ಲೇ ಇಂತಹ ವಿವಾದಗಳನ್ನು ಸೃಷ್ಟಿಸಲಾಗುತ್ತಿದೆ’ ಎಂದು ಕಂಗನಾ ಬಾಲಿವುಡ್‌ನ ಒಳಸಂಚಿನ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಬಾಲಿವುಡ್ ಮಂದಿ ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು? – Kannada News | Vijaypura Student gangadhar talks about first rank In KCET veterinary science

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ ಗಂಗಾಧರ ಮುತ್ತಗಿ ವೆಟರ್ನರಿ ಸೈನ್ಸ್‌ನಲ್ಲಿ 0.5 ರ್‍ಯಾಂಕ್‌ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ್‍ಯಾಂಕ್‌ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಗಂಗಾಧರ ಮುತ್ತಗಿ, ದ್ವಿತೀಯ ಪಿಯುಸಿ ಅಂಕ ಪಟ್ಟಿ ಸಲ್ಲಿಕೆ ಮಾಡಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ತಡವಾಗಿ ಅಂಕಪಟ್ಟಿ ಸಲ್ಲಿಕೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ಸ್ಪಾಟ್ ರ್‍ಯಾಂಕ್‌ ನೀಡಿದೆ. ಮೊದಲ ಸ್ಥಾನ ಪಡೆದ ವಿದ್ಯಾರ್ಥಿಕ್ಕಿಂತ ಹೆಚ್ಚು ಅಂಕ ಬಂದ ಹಿನ್ನೆಲೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಲಾಗಿದೆ.

ಇನ್ನು ಈ ಬಗ್ಗೆ ಟಿವಿ9 ಜತ ಗಂಗಾಧರ ಮಾತನಾಡಿದ್ದು, ನನಗೆ ಸ್ಪಾಟ್ ರ್‍ಯಾಂಕ್‌ ಬಂದಿದ್ದು ಖುಷಿಯಾಗಿದ್ದು, ಇದಕ್ಕೆ ಇದಕ್ಕೆ ಕಾರಣ ನನ್ನ ತಂದೆ-ತಾಯಿ.ನನ್ನ ತಂದೆ ನಿತ್ಯವೂ ದುಡಿಯಲು ಹೋಗುತ್ತಾರೆ. ನಾವು ತೀರಾನೇ ಬಡ ಕುಟುಂಬದವರು. ತಂದೆಯವರ ದುಡಿಮೆಯಿಂದಲೇ ಮನೆ ನಡೆಯಬೇಕು. ಈ ಸಾಧನೆಗೆ ಅವರೇ ಕಾರಣ. ನನ್ನ ಉಪನ್ಯಾಸಕರು ಕೂಡ ಚೆನ್ನಾಗಿ ಕಲಿಸಿದ್ದಾರೆ. ಸೆರಿಕಲ್ಚರ್ ಹಾಗೂ ಅಗ್ರಿಯಲ್ಲಿ 3.5 ಸ್ಪಾಟ್ ರ್‍ಯಾಂಕ್‌ ಬಂದಿದೆ. ಕೊಂಚ ತಾಂತ್ರಿಕ ಕಾರಣದಿಂದ ಫಲಿತಾಂಶ ಬಂದಿರಲಿಲ್ಲ ಇದೀಗ ಸ್ಪಾಟ್ ರ್‍ಯಾಂಕ್‌ ನೀಡಿದ್ದಾರೆ. ನಾನು ಮುಂದೆ ವೈದ್ಯನಾಗುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Source link

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್ ಜೂನಿಯರ್ಸ್ ಜೆ 100 ಪಂದ್ಯಾವಳಿಯ ಫೈನಲ್ ಕೂಡ ತಲುಪಿದ್ದರು.

ಇದೀಗ ಟಿವಿ9 ನ ಅಂಗಸಂಸ್ಥೆಯಾದ ನ್ಯೂಸ್ 9 ಜೊತೆಗೆ ಮಾತನಾಡಿರುವ ಸೃಷ್ಟಿ ಕಿರಣ್ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮನದಾಳ ತೆರೆದಿಟ್ಟಿದ್ದಾರೆ. ಮುಂದೆ ಯುರೋಪಿನಲ್ಲಿ ನಡೆಯುವ ಗ್ರಾಸ್ ಕೋರ್ಟ್​ ಪಂದ್ಯಾವಳಿ ಮೇಲೆ ಸೃಷ್ಟಿ ಕಣ್ಣಿಟ್ಟಿದ್ದಾರೆ. ಹಾಗೆಯೇ ಭವಿಷ್ಯದಲ್ಲಿ ದೇಶಕ್ಕಾಗಿ ಎಲ್ಲಾ ಗ್ರ್ಯಾಂಡ್​ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆಲ್ಲುವುದು ಮತ್ತು ಒಲಿಂಪಿಕ್ಸ್​ನಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಡುವುದು ನನ್ನ ಗುರಿ ಎಂದಿದ್ದಾರೆ.

Source link

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ – Kannada News | Deepfake Blackmail Case: Two Arrested for Extorting Girl’s Family in Chikkamagaluru

ಚಿಕ್ಕಮಗಳೂರು, ಜೂನ್​​ 12: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್ ಹಾಗೂ ಸಾಹುಲ್ ಎಂಬವರನ್ನು ಅರೆಸ್ಟ್​​ ಮಾಡಲಾಗಿದೆ.

ಯೋಗೇಶ್​​ ಎಂಬ ಹೆಸರಲ್ಲಿ ಬ್ಲ್ಯಾಕ್​​ಮೇಲ್​

ಬಾವಿಕೆರೆ ಗ್ರಾಮದ 25 ವರ್ಷದ ಯುವತಿಯ ಪೋಟೋವನ್ನ ಫೇಸ್ಬುಕ್​​ನಿಂದ ಪಡೆದುಕೊಂಡಿದ್ದ ಆರೋಪಿಗಳು ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿದ್ದರು. ಆ ಬಳಿಕ ಯುವತಿಯ ತಾಯಿಗೆ ಬೆಂಗಳೂರು ಮೂಲದ ಯೋಗೇಶ್ ಎಂಬ ಹೆಸರಿನಲ್ಲಿ ಪದೇಪದೇ ಕರೆ ಮಾಡಿ ಹಣ ಕೇಳಿದ್ದರು. ಆರೋಪಿಗಳು ನಿರಂತರ ಬ್ಲ್ಯಾಕ್​​ಮೇಲ್​​ ಮಾಡಲಾರಂಭಿಸಿದಾಗ ಯುವತಿ ಕಡೆಯವರು ಈ ಸಂಬಂಧ ಯೋಗೇಶ್​​ ಎಂಬ ಹೆಸರನ್ನೇ ಉಲ್ಲೇಖಿಸಿ ದೂರು ನೀಡಿದ್ದರು. ಆದರೆ ಪೊಲೀಸ್​​ ತನಿಖೆ ವೇಳೆ ಆರೋಪಿಗಳ ಕಳ್ಳಾಟ ಬಯಲಾಗಿದ್ದು, ಹಣಕ್ಕಾಗಿ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಅಸಲಿ ಆರೋಪಿಗಳು ಅದೇ ಬಾವಿಕೆರೆ ಗ್ರಾಮದ ಸಾಹುಲ್ ಮತ್ತು ಅಕ್ಷಯ್​​ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ; ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ!

ಇನ್ನು ಆರೋಪಿಗಳು ಮೈತುಂಬ ಸಾಲಮಾಡಿಕೊಂಡಿದ್ದರು. ಹೀಗಾಗಿ ಹೇಗಾದರೂ ಹಣ ಮಾಡಬೇಕೆಂಬ ಆಸೆಗೆ ಬಿದ್ದು ಈ ರೀತಿಯ ಕೆಲಸಕ್ಕೆ ಕೈಹಾಕಿದ್ದರು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದು, ಮಾಡಬಾರದ್ದು ಮಾಡಲು ಹೋದವರೀಗ ಜೈಲು ಸೇರಿದ್ದಾರೆ. ಒಳ್ಳೆ ಕೆಲಸಗಳಿಗೆ ಬಳಕೆಯಾಗಬೇಕಿದ್ದ ತಂತ್ರಜ್ಞಾನವನ್ನು ಇಂತಹ ಕೆಟ್ಟ ಕೆಲಸಕ್ಕೆ ಬಳಕೆ ಮಾಡಿಕೊಂಡು ಹಣ ಮಾಡಲು ಹೋದವರೀಗ ತಕ್ಕ ಶಾಸ್ತಿಯಾಗಿದೆ ಎಂಬ ಮಾತುಗಳು ಗ್ರಾಮದಲ್ಲಿ ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?

ತಮಿಳುನಾಡು ಸಿಎಂ ವಿಜಯ್ (Vijay) ಅವರು ಇಂದು (ಜೂನ್ 12) ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಆದ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುತ್ತಿರುವ ಮೂರನೇ ತಮಿಳುನಾಡು ಸಿಎಂ ಆಗಿದ್ದಾರೆ ವಿಜಯ್. ದಳಪತಿ ವಿಜಯ್ ಬರುತ್ತಿದ್ದ ಕಾರಣಕ್ಕೆ ಒಂದು ಗಂಟೆ ಕಾಲ ಇತರೆ ಭಕ್ತಾದಿಗಳಿಗೆ ದೇವಾಲಯದ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ವಿಜಯ್ ಅವರು ದೇವಾಲಯಕ್ಕೆ ಬಂದು ಮಾಡಿಸಿದ ಪೂಜೆಯ ಬಗ್ಗೆ ದೇವಾಲಯದ ಅರ್ಚಕರಾದ ನಿತ್ಯಾನಂದ ಅಡಿಗ ಅವರು ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅರ್ಚಕರು ಹೇಳಿರುವಂತೆ ವಿಜಯ್ ಅವರಿಗಾಗಿ ವಿಶೇಷ ಪೂಜೆಗಳನ್ನೇನೂ ಮಾಡಿಲ್ಲವಂತೆ ಬದಲಿಗೆ ಸಾಮಾನ್ಯ ಪೂಜೆಯನ್ನೇ ಮಾಡಲಾಗಿದೆಯಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಟ್ರಾವೆಲ್ ಮಾಡುವಾಗ ಮಲಬದ್ಧತೆ ಸಮಸ್ಯೆ ಕಂಡುಬರುತ್ತಾ? ಹಾಗಿದ್ರೆ ಈ ರೀತಿ ಮಾಡುವುದನ್ನು ಮರೆಯಬೇಡಿ – Kannada News | Travel Digestive Problems: Best Ways To Avoid Constipation

ಪ್ರಯಾಣ (Travel) ಮಾಡುವುದು ಎಲ್ಲರಿಗೂ ಇಷ್ಟ. ಆದರೆ ದೂರ ದೂರದ ಪ್ರಯಾಣ, ಆಹಾರದ ಬದಲಾವಣೆ, ನಿದ್ರೆಯ ಸಮಯದಲ್ಲಿ ವ್ಯತ್ಯಾಸ ಹಾಗೂ ನೀರಿನ ಕೊರತೆ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಹಲವರಿಗೆ ಪ್ರಯಾಣದ ಸಮಯದಲ್ಲಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನೇ “ಟ್ರಾವೆಲ್ ಕಾಂಸ್ಟಿಪೇಶನ್” ಎಂದು ಕರೆಯಲಾಗುತ್ತದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಪ್ರಯಾಣದ ವೇಳೆ ದಿನಚರಿಯಲ್ಲಿ ಆಗುವಂತಹ ಬದಲಾವಣೆಗಳಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ ಪ್ರವಾಸ ಮಾಡುವಾಗ ಇರಬೇಕಾದ ಸಂತೋಷ, ಉತ್ಸಾಹ ಎಲ್ಲವೂ ಕಡಿಮೆಯಾಗಬಹುದು. ಅದಕ್ಕಾಗಿಯೇ ಅತಿಯಾಗಿ ಪ್ರಯಾಣ ಮಾಡುವವರು ಮತ್ತು ಟ್ರಿಪ್ ಹೋಗುವ ಸಮಯದಲ್ಲಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವವರು, ಈ ರೀತಿ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಪ್ರಯಾಣದ ವೇಳೆ ಮಲಬದ್ಧತೆ ಏಕೆ ಕಂಡುಬರುತ್ತದೆ?

ನೀರಿನ ಕೊರತೆ: ಗಂಟೆಗಳ ಕಾಲ ಬಸ್, ಕಾರು ಅಥವಾ ವಿಮಾನದಲ್ಲಿ ಪ್ರಯಾಣಿಸುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಇದರಿಂದ ಮಲ ಗಟ್ಟಿಯಾಗಿ ಹೊರಬರಲು ಕಷ್ಟವಾಗುತ್ತದೆ.

ದೈಹಿಕ ಚಟುವಟಿಕೆ ಕಡಿಮೆಯಾಗುವುದು: ಒಂದೇ ಜಾಗದಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದರಿಂದ ಹೆಚ್ಚಾಗಿ ದೈಹಿಕ ಚಟುವಟಿಕೆ ಇರುವುದಿಲ್ಲ. ಇದರಿಂದ ಮಲಬದ್ಧತೆ ಸಮಸ್ಯೆ ಕಂಡುಬರಬಹುದು.

ಆಹಾರ ಪದ್ಧತಿಯಲ್ಲಿ ಬದಲಾವಣೆ: ಪ್ರಯಾಣದ ವೇಳೆ ಹೊರಗಿನ ಆಹಾರ, ಫಾಸ್ಟ್ ಫುಡ್ ಅಥವಾ ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು ಜೀರ್ಣಕ್ರಿಯೆಯನ್ನು ಹಾಳು ಮಾಡಬಹುದು.

ಮಲವಿಸರ್ಜನೆಗೆ ಹೋಗದಿರುವುದು: ಸರಿಯಾದ ಟಾಯ್ಲೆಟ್ ಸೌಲಭ್ಯ ಇಲ್ಲದಿರುವುದು ಅಥವಾ ಹೊಸ ಸ್ಥಳದಲ್ಲಿ ಅಸೌಕರ್ಯ ಅನುಭವಿಸುವುದರಿಂದ ಹಲವರು ಮಲವಿಸರ್ಜನೆಯನ್ನು ತಡೆಹಿಡಿಯುತ್ತಾರೆ. ಇದು ಮಲಬದ್ಧತೆಗೆ ಪ್ರಮುಖ ಕಾರಣ.

ಲಕ್ಷಣಗಳು ಹೇಗಿರುತ್ತವೆ?

  • ವಾರದಲ್ಲಿ ತುಂಬಾ ಕಡಿಮೆ ಬಾರಿ ಮಲವಿಸರ್ಜನೆ ಆಗುವುದು
  • ಮಲ ಗಟ್ಟಿಯಾಗಿ ಹೊರಬರುವುದು
  • ಹೊಟ್ಟೆ ಉಬ್ಬರ ಮತ್ತು ನೋವು
  • ಮಲವಿಸರ್ಜನೆ ವೇಳೆ ಹೆಚ್ಚು ಒತ್ತಡ ಹಾಕಬೇಕಾಗುವುದು
  • ಹೊಟ್ಟೆ ಸಂಪೂರ್ಣ ಖಾಲಿಯಾಗದ ಭಾವನೆ

ಇದನ್ನೂ ಓದಿ: ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ

ಈ ಸರಳ ಸಲಹೆಗಳನ್ನು ಅನುಸರಿಸಿ:

ಸಾಕಷ್ಟು ನೀರು ಕುಡಿಯಿರಿ: ಪ್ರಯಾಣದ ವೇಳೆ ಹೆಚ್ಚು ನೀರು ಹಾಗೂ ದ್ರವ ಪದಾರ್ಥಗಳನ್ನು ಸೇವಿಸುವುದು ಮುಖ್ಯ.

ಫೈಬರ್ ಅಂಶವಿರುವ ಆಹಾರ ಸೇವಿಸಿ: ಹಣ್ಣು, ತರಕಾರಿ, ಧಾನ್ಯಗಳು ಹಾಗೂ ನಟ್ಸ್‌ಗಳಲ್ಲಿ ಇರುವ ಫೈಬರ್ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ಬಿಡುವಿದ್ದಾಗ ವಾಕಿಂಗ್ ಮಾಡಿ: ದೀರ್ಘ ಪ್ರಯಾಣದ ವೇಳೆ ಸ್ವಲ್ಪ ಹೊತ್ತು ನಡೆದು ದೇಹಕ್ಕೆ ಚಲನೆ ನೀಡುವುದು ಒಳ್ಳೆಯದು.

ಸಮಯಕ್ಕೆ ಸರಿಯಾಗಿ ಊಟ ಮಾಡಿ: ಸರಿಯಾದ ಸಮಯದಲ್ಲಿ ಊಟ ಮಾಡದಿದ್ದಾಗ ಇದು ಜೀರ್ಣಕ್ರಿಯೆ ಸಮಸ್ಯೆ ಹೆಚ್ಚಿಸುತ್ತದೆ.

ಮಲವಿಸರ್ಜನೆಯನ್ನು ತಡೆಯಬೇಡಿ: ಅವಶ್ಯಕತೆ ಬಂದಾಗ ತಕ್ಷಣ ಟಾಯ್ಲೆಟ್‌ಗೆ ಹೋಗುವ ಅಭ್ಯಾಸ ಮಾಡಿಕೊಳ್ಳಿ.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಪ್ರಯಾಣ ಮುಗಿದ ನಂತರವೂ ಮಲಬದ್ಧತೆ ಕಡಿಮೆಯಾಗದಿದ್ದರೆ ಅಥವಾ ಹೊಟ್ಟೆ ನೋವು, ವಾಂತಿ, ಮಲದಲ್ಲಿ ರಕ್ತ, ತೂಕ ಏಕಾಏಕಿ ಕಡಿಮೆಯಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version