ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಥ್ಯಾಂಕ್ ಯು ಮಳೆರಾಯ: ನಿನ್ನ ಕೃಪೆಯಿಂದ ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಉತ್ತಮ

ಬೆಂಗಳೂರು, ಮಾ.19: ಕರ್ನಾಟಕದ ರಾಜಧಾನಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ಇಂದು ‘ಉತ್ತಮ’ (Good) ಹಾಗೂ ‘ತೃಪ್ತಿದಾಯಕ’ (Satisfactory) ಮಟ್ಟದಲ್ಲಿದೆ. ಸತತವಾಗಿ ಸುರಿಯುತ್ತಿರುವ ಬೇಸಿಗೆ ಮಳೆಯು ಧೂಳಿನ ಕಣಗಳನ್ನು ಕಡಿಮೆ ಮಾಡಿದ್ದು, ಜನರಿಗೆ ನಿರಾಳ ತಂದಿದೆ. ಬೆಂಗಳೂರಿನ ಗಾಂಧಿ ಬಜಾರ್ ಮತ್ತು ಬೊಮ್ಮನಹಳ್ಳಿ ಭಾಗದಲ್ಲಿ AQI ಪ್ರಮಾಣ 40ರ ಆಸುಪಾಸಿನಲ್ಲಿದ್ದು, ಅತ್ಯುತ್ತಮ ಹಂತದಲ್ಲಿದೆ. ಮಳೆಯಿಂದಾಗಿ ವಾತಾವರಣವು ತಿಳಿಯಾಗಿದೆ.

ಇಂದಿನ ವಾಯು ಗುಣಮಟ್ಟವು ಎಲ್ಲಾ ವಯಸ್ಸಿನವರಿಗೂ ಸುರಕ್ಷಿತವಾಗಿದೆ. ದೈಹಿಕ ವ್ಯಾಯಾಮ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಇದು ಸೂಕ್ತ ಸಮಯ. ಪೀಣ್ಯ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಮಾಲಿನ್ಯವಿದ್ದರೂ ಅದು ‘ತೃಪ್ತಿದಾಯಕ’ ಮಟ್ಟದಲ್ಲಿಯೇ ಇದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾಯು ಮಾಲಿನ್ಯದ ಮಟ್ಟವು ಪ್ರಸ್ತುತ ನಿಯಂತ್ರಣದಲ್ಲಿದೆ. ಪ್ರವಾಸೋದ್ಯಮ ಮತ್ತು ಆರೋಗ್ಯದ ದೃಷ್ಟಿಯಿಂದ ಈ ಜಿಲ್ಲೆಗಳಲ್ಲಿನ ಇಂದಿನ ಗಾಳಿಯ ಮಟ್ಟದಲ್ಲಿ ಬದಲಾವಣೆ ಕಂಡಿದೆ.

ಪ್ರಮುಖ ನಗರಗಳ ಇಂದಿನ AQI ವಿವರ

ನಗರ AQI ಮಟ್ಟ ವರ್ಗ (Category) ಪ್ರಮುಖ ಮಾಲಿನ್ಯಕಾರಕ
ಬೆಂಗಳೂರು 38 – 52 ಉತ್ತಮ / ತೃಪ್ತಿದಾಯಕ PM10 & PM2.5
ಮೈಸೂರು 42 – 55 ತೃಪ್ತಿದಾಯಕ PM2.5
ಹುಬ್ಬಳ್ಳಿ-ಧಾರವಾಡ 45 – 60 ತೃಪ್ತಿದಾಯಕ PM10
ಮಂಗಳೂರು 35 – 48 ಉತ್ತಮ PM2.5
ಬೆಳಗಾವಿ 50 – 65 ತೃಪ್ತಿದಾಯಕ PM10

ಮಂಗಳೂರಿನಲ್ಲಿ ಇಂದಿನ ಗಾಳಿಯ ಮಟ್ಟ ಉತ್ತಮ ಹಾಗೂ ತೃಪ್ತಿದಾಯಕವಾಗಿದೆ. ಸಮುದ್ರ ತೀರದ ಗಾಳಿ ಶುದ್ಧವಾಗಿದೆ. ಉಡುಪಿಯಲ್ಲಿ ತೃಪ್ತಿದಾಯಕ ಗಾಳಿಯ ಮಟ್ಟವನ್ನು ಹೊಂದಿದೆ. ಹಬ್ಬದ ಖರೀದಿಯಿಂದಾಗಿ ಧೂಳಿನ ಪ್ರಮಾಣ ತುಸು ಹೆಚ್ಚಿದೆ.ಮೈಸೂರಿನಲ್ಲಿ ತೃಪ್ತಿದಾಯಕ ಮತ್ತು ಸಾಧಾರಣ ಗಾಳಿಯ ಮಟ್ಟವನ್ನು ಹೊಂದಿದ್ದು, ನಗರ ಪ್ರದೇಶಗಳಲ್ಲಿ ವಾಹನ ಸಂಚಾರದಿಂದ ಅಲ್ಪ ಏರಿಕೆ. ಕೊಡಗಿನಲ್ಲಿ ಅತ್ಯುತ್ತಮವಾಗಿದೆ. ಮಲೆನಾಡಿನ ಹಸಿರು ಮತ್ತು ಮಳೆಯಿಂದಾಗಿ ಅತ್ಯಂತ ಶುದ್ಧ ಗಾಳಿ.

ರಾಜ್ಯದ ಅತ್ಯಂತ ಶುದ್ಧ ಗಾಳಿ ಹೊಂದಿರುವ ಜಿಲ್ಲೆಯಾಗಿ ಕೊಡಗು ಮುಂದುವರಿದಿದೆ. ಇಲ್ಲಿನ ಗಾಳಿಯ ಗುಣಮಟ್ಟವು ಆರೋಗ್ಯಕ್ಕೆ ಅತ್ಯಂತ ಪೂರಕವಾಗಿದೆ. ಕರಾವಳಿ ಭಾಗದಲ್ಲಿ ತೇವಾಂಶ ಹೆಚ್ಚಿರುವುದರಿಂದ ಮತ್ತು ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇರುವುದರಿಂದ ಮಾಲಿನ್ಯಕಾರಕ ಕಣಗಳು ನೆಲಕ್ಕೆ ಸೇರುತ್ತಿವೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಬ್ಬದ ಸಡಗರದಿಂದಾಗಿ ಮಾರುಕಟ್ಟೆ ಪ್ರದೇಶಗಳಲ್ಲಿ ವಾಯು ಗುಣಮಟ್ಟವು 100ರ ಆಸುಪಾಸಿನಲ್ಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಉತ್ತರ ಕರ್ನಾಟಕದಲ್ಲೂ ಗಾಳಿ ಮಟ್ಟದಲ್ಲಿ ದೊಡ್ಡ ಬದಲಾವಣೆಗಳು ಕಂಡಿದೆ. ಹುಬ್ಬಳ್ಳಿಯ ಕೆಲವು ಭಾಗಗಳಲ್ಲಿ AQI 35ರ ಆಸುಪಾಸಿನಲ್ಲಿದ್ದು, ಇದು ಅತ್ಯಂತ ಶುದ್ಧ ಗಾಳಿಯ ಸಂಕೇತವಾಗಿದೆ. ಬಿಸಿಲು ಹೆಚ್ಚಿದ್ದರೂ, ಗಾಳಿಯಲ್ಲಿನ ತೇವಾಂಶ ಮತ್ತು ಸಣ್ಣ ಮಳೆಯ ಮುನ್ಸೂಚನೆಯು ಮಾಲಿನ್ಯವನ್ನು ನಿಯಂತ್ರಣದಲ್ಲಿಟ್ಟಿದೆ. ಈ ಮಟ್ಟದ AQI ಆರೋಗ್ಯವಂತ ಜನರಿಗೆ ಸುರಕ್ಷಿತವಾಗಿದೆ. ಆದರೆ ಅಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುವವರು ಸಂಜೆ ವೇಳೆ ಹೊರಗೆ ಹೋಗುವಾಗ ಜಾಗರೂಕರಾಗಿರಿ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

ಉತ್ತಮ- 0-50

ಮಧ್ಯಮ – 50-100

ಕಳಪೆ – 100-150

ಅನಾರೋಗ್ಯಕರ – 150-200

ಗಂಭೀರ – 200 – 300

ಅಪಾಯಕಾರಿ – 300 -500+

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Source link

ಆ ವ್ಯಕ್ತಿ ಇಲ್ಲದೆ ಸಿನಿಮಾ ಅಪೂರ್ಣ; ‘ಧುರಂಧರ್ 2’ ಬಗ್ಗೆ ವೀಕ್ಷಕರ ಅಸಮಾಧಾನ ಏನು?

‘ಧುರಂಧರ್ 2’ ಸಿನಿಮಾ (Dhurandhar 2 Review) ವಿಶ್ವಾದ್ಯಂತ ತೆರೆಗೆ ಬಂದಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆದರೂ, ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಇಡಲಾಗಿತ್ತು. ಈ ಸಿನಿಮಾ ಅಬ್ಬರಿಸಿದೆ. ಈ ಚಿತ್ರವನ್ನು ನೋಡಿದ ಅನೇಕರು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಚಿತ್ರದಲ್ಲಿ ಓರ್ವ ಪ್ರಮುಖ ವ್ಯಕ್ತಿ ಕಾಣಿಸಿಕೊಳ್ಳೋದಿಲ್ಲ. ಇದಕ್ಕೆ ವೀಕ್ಷಕರು ಸಾಕಷ್ಟು ಅಸಮಾಧನ ಹೊರಹಾಕಿದ್ದಾರೆ. ಉಳಿದಂತೆ ಸಿನಿಮಾದ ಆ್ಯಕ್ಷನ್ ವಿಷಯ ವೀಕ್ಷಕರಿಗೆ ಇಷ್ಟ ಆಗಿದೆ.

‘ಧುರಂಧರ್ 2’ ಸಿನಿಮಾ ವಿಶ್ವ ಮಟ್ಟದಲ್ಲಿ ಏಕ ಕಾಲಕ್ಕೆ ರಿಲೀಸ್ ಆಗಿದೆ. ಆದರೆ, ಕನ್ನಡ, ತೆಲುಗು, ತಮಿಳು ಮೊದಲಾದ ಭಾಷೆಗಳಲ್ಲಿ ಸಿನಿಮಾದ ಪ್ರೀಮಿಯರ್ ಆಗಿಲ್ಲ. ಹಿಂದಿ ವರ್ಷನ್ ನೋಡಿದ ಜನರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ರಣವೀರ್ ಸಿಂಗ್ ಅವರನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ. ಅವರ ಆ್ಯಕ್ಷನ್ ದೃಶ್ಯಗಳು ಗಮನ ಸೆಳೆದಿವೆ.

‘ಧುರಂಧರ್’ ಸಿನಿಮಾದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದರು. ಎರಡನೇ ಭಾಗದಲ್ಲಿ ಅವರು ಫ್ಲ್ಯಾಶ್​​ಬ್ಯಾಕ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ಆದರೆ, ಅವರು ಒಂದೇ ಒಂದು ದೃಶ್ಯದಲ್ಲೂ ಕಾಣಿಸಿಕೊಳ್ಳುವುದಿಲ್ಲ. ಕೇವಲ ಪೋಸ್ಟರ್​​ಗೆ ಮಾತ್ರ ಸೀಮಿತ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ತರಿಸುತ್ತದೆ. ಅವರು ಇರಬೇಕಿತ್ತು ಎಂದು ಅನೇಕರು ಹೇಳಿದ್ದಾರೆ. ಇನ್ನೂ ಕೆಲವರಿಗೆ ಅಕ್ಷಯ್ ಖನ್ನಾ ಅವರ ಸ್ಥಾನವನ್ನು ಅರ್ಜುನ್ ರಾಮ್​​ಪಾಲ್ ತುಂಬಿದ್ದಾರೆ ಎಂದು ಅನಿಸಿದೆ.

ಇದನ್ನೂ ಓದಿ: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

ರಣವೀರ್ ಸಿಂಗ್ ಅವರ ಆ್ಯಕ್ಷನ್ ಇಷಟ ಆಗಿದೆ. ಹಿಂಸಾತ್ಮಕ ದೃಶ್ಯವನ್ನು ಸಾಕಷ್ಟು ರಾ ಆಗಿ ತೋರಿಸಲಾಗಿದೆ ಎಂದು ಕೆಲವರಿಗೆ ಹೇಳಿದ್ದಾರೆ. ಆ್ಯಕ್ಷನ್ ದೃಶ್ಯಗಳನ್ನು ಇಷ್ಟಪಡೋರಿಗೆ ಸಿನಿಮಾ ಹೆಚ್ಚು ಇಷ್ಟ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಮಾನ್‌ ಗಲ್ಫ್‌ನತ್ತ ಭಾರತದ 6ಕ್ಕೂ ಹೆಚ್ಚು ಯುದ್ಧನೌಕೆ ರವಾನೆ: ಕೇಂದ್ರದ ದಿಢೀರ್ ನಿರ್ಧಾರಕ್ಕೆ ಇಲ್ಲಿದೆ ಕಾರಣ

ನವದೆಹಲಿ, ಬೆಂಗಳೂರು, ಮಾರ್ಚ್ 19: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸೇನಾ ಸಂಘರ್ಷ (Iran-Israel Conflict) ಆರಂಭವಾಗಿ 20 ದಿನಗಳಾದರೂ ಉದ್ವಿಗ್ನತೆ ತಗ್ಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಯುದ್ಧದ ಪರಿಣಾಮ ಜಾಗತಿಕ ತೈಲ ಹಾಗೂ ಅನಿಲ ಸರಬರಾಜಿನ ಮೇಲೆ ಬೀರಿದ್ದು, ಅದರ ಪರಿಣಾಮವಾಗಿ ಕರ್ನಾಟಕದಲ್ಲೂ ಕಮರ್ಷಿಯಲ್ ಎಲ್‌ಪಿಜಿ (LPG) ಕೊರತೆ ಉಂಟಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಹೊರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ನೂರಾರು ತೈಲ ಹಾಗೂ ಅನಿಲ ಹಡಗುಗಳು ಅಲ್ಲಿ ಸಿಲುಕಿಕೊಂಡಿವೆ. ಭಾರತದ 22ಕ್ಕೂ ಹೆಚ್ಚು ಹಡಗುಗಳು ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಸಿಲುಕಿರುವುದಾಗಿ ಕೇಂದ್ರ ಸರ್ಕಾರದ ಶಿಪ್ಪಿಂಗ್ ಸಚಿವಾಲಯ ಮಾಹಿತಿ ನೀಡಿದೆ.

ಅವುಗಳಲ್ಲಿ 6 ಎಲ್‌ಪಿಜಿ ಹಡಗುಗಳು, 4 ಕಚ್ಚಾ ತೈಲ ಹಡಗುಗಳು, 3 ಕಂಟೇನರ್ ಹಡಗುಗಳು, 2 ಕಚ್ಚಾ ವಸ್ತು ಸಾಗಣೆ ಹಡಗುಗಳು, 1 ಎಲ್‌ಎನ್‌ಜಿ ಹಡಗು ಹಾಗೂ 1 ರಾಸಾಯನಿಕ ವಸ್ತು ಸಾಗಣೆ ಹಡಗು ಸೇರಿವೆ.

ಹೊರ್ಮುಜ್‌ನಲ್ಲಿ ಭಾರತದ ಹಡಗುಗಳು!

  • ಪರ್ಷಿಯನ್‌ ಗಲ್ಫ್‌ನಲ್ಲಿ – 22 ಹಡಗು
  • LPG ತುಂಬಿದ ಹಡಗುಗಳು – 6 ಹಡಗು
  • ಕಚ್ಚಾ ತೈಲ ತುಂಬಿದ ಹಡಗು – 4 ಹಡಗು
  • ಕಂಟೇನರ್‌ ಹಡಗುಗಳು – 3 ಹಡಗು
  • ಕಚ್ಚಾ ವಸ್ತುಗಳ ಸಾಗಿಸುವ ಹಡಗು – ಹಡಗು
  • LNG ತುಂಬಿದ ಹಡಗುಗಳು – 1 ಹಡಗು
  • ರಾಸಾಯನಿಕ ವಸ್ತುಗಳ ಹಡಗು – 1 ಹಡಗು

ಇದಕ್ಕೂ ನಡುವೆ, ಭಾರತಕ್ಕೆ ಅಗತ್ಯವಾದ ಅನಿಲ ಸರಬರಾಜು ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ‘ಶಿವಾಲಿಕ್’ ಮತ್ತು ‘ನಂದಾದೇವಿ’ ಹಡಗುಗಳು ಸೇರಿ ಸುಮಾರು 92 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಭಾರತಕ್ಕೆ ತಲುಪಿಸಿವೆ. ‘ಜಗ್ ಲಾಡ್ಕಿ’ ಸೇರಿದಂತೆ ಇನ್ನೂ ಕೆಲವು ಹಡಗುಗಳು ಕಚ್ಚಾ ತೈಲವನ್ನು ಹೊತ್ತು ದೇಶ ತಲುಪಿವೆ.

ಮತ್ತಷ್ಟು ಹಡಗುಗಳನ್ನು ಸುರಕ್ಷಿತವಾಗಿ ಕರೆತರಲು ಭಾರತೀಯ ನೌಕಾಪಡೆ ಒಮಾನ್ ಗಲ್ಫ್ ಭಾಗದತ್ತ ಯುದ್ಧನೌಕೆಗಳನ್ನು ರವಾನಿಸಿದೆ ಎಂದು ವರದಿಯಾಗಿವೆ. ತೈಲ ಹಡಗುಗಳಿಗೆ ಎಸ್ಕಾರ್ಟ್ ನೀಡಲು 6ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಲಾಗಿದೆ ಎಂದು ‘ಬ್ಲೂಮ್​ಬರ್ಗ್’ ಹಾಗೂ ಇತರೆ ಕೆಲವು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ದೃಢೀಕರಣ ನೀಡಿಲ್ಲ.

ಸಂಪೂರ್ಣ ಬಂದಾಗಿಲ್ಲ ಹೊರ್ಮುಜ್ ಜಲಸಂಧಿ!

ಏತನ್ಮಧ್ಯೆ, ಹೊರ್ಮುಜ್ ಜಲಸಂಧಿ ಸಂಪೂರ್ಣವಾಗಿ ಬಂದ್ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇರಾನ್ ಪ್ರತಿ ಹಡಗಿನ ದಾಖಲೆಗಳನ್ನು ಪರಿಶೀಲಿಸಿ ಬಳಿಕವೇ ಸಾಗಲು ಅನುಮತಿ ನೀಡುತ್ತಿದೆ. ಅಮೆರಿಕಕ್ಕೆ ಸಂಬಂಧಿಸಿದ ಹಡಗುಗಳನ್ನು ಮಾತ್ರ ತಡೆಯಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಭಾರತ ಸೇರಿದಂತೆ ಹಲವು ದೇಶಗಳ ಹಡಗುಗಳನ್ನು ಪರಿಶೀಲನೆ ಬಳಿಕ ಬಿಡುಗಡೆ ಮಾಡಲಾಗಿದೆ.

ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಇತ್ತ ದೇಶದಲ್ಲಿ ಗ್ಯಾಸ್ ಕೊರತೆ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಎಲ್‌ಪಿಜಿ ಉತ್ಪಾದನೆಯನ್ನು ಶೇಕಡಾ 40ರಷ್ಟು ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈಗಾಗಲೇ 15 ರಾಜ್ಯಗಳಲ್ಲಿ ಕಮರ್ಷಿಯಲ್ ಎಲ್‌ಪಿಜಿ ವಿತರಣೆ ಆರಂಭಗೊಂಡಿದ್ದು, ಸುಮಾರು 7,200 ಟನ್ ಅನಿಲವನ್ನು ಹೆಚ್ಚುವರಿಯಾಗಿ ಪೂರೈಸಲಾಗಿದೆ ಎಂದು ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದ್ದಾರೆ.

ಕರ್ನಾಟಕದಲ್ಲಿ ಗ್ಯಾಸ್ ಬಿಕ್ಕಟ್ಟು: ಪರಿಸ್ಥಿತಿ ಇನ್ನೂ ಗಂಭೀರ

ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಕಳೆದ ಒಂದು ವಾರದಿಂದ ಕಮರ್ಷಿಯಲ್ ಗ್ಯಾಸ್ ಕೊರತೆಯಿಂದ ಅನೇಕ ಹೋಟೆಲ್‌ಗಳು ಬಾಗಿಲು ಮುಚ್ಚಿವೆ. ಬೆಂಗಳೂರಿನಲ್ಲಿಯೂ ಹಲವು ಪ್ರಸಿದ್ಧ ಹೋಟೆಲ್‌ಗಳು ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಿವೆ. ಶೇಷಾದ್ರಿಪುರ, ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೋಟೆಲ್‌ಗಳು ಬಂದ್ ಆಗಿರುವುದು ಗಮನಾರ್ಹ.

ರಾಜ್ಯ ವಿಧಾನಸಭೆಯಲ್ಲಿಯೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ‘ಒಂದು ವಾರ ತಾಳ್ಮೆಯಿಂದ ಇರಬೇಕು’ ಎಂದು ಮನವಿ ಮಾಡಿದ್ದಾರೆ. ಸಿಲಿಂಡರ್ ಪೂರೈಕೆ ಸೀಮಿತವಾಗಿರುವುದರಿಂದ ಹೋಟೆಲ್ ಮಾಲೀಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇನ್ನೊಂದೆಡೆ, ಬೆಂಗಳೂರಿನ ಶಾಸಕರ ಭವನದಲ್ಲಿಯೂ ಗ್ಯಾಸ್ ಸಮಸ್ಯೆ ತಟ್ಟಿದ್ದು, ಶಾಸಕರಿಗೆ ಆಹಾರ ಸಿಗದ ಸ್ಥಿತಿ ನಿರ್ಮಾಣವಾಗಿದೆ ಎಂಬ ಅಳಲು ಕೇಳಿಬಂದಿದೆ. ಶಿವಾಜಿನಗರ ಬಸ್ ನಿಲ್ದಾಣದ ಬಳಿ ಸಿಲಿಂಡರ್‌ಗಾಗಿ ನೂಕುನುಗ್ಗಲು ಉಂಟಾದ ಘಟನೆ ಕೂಡ ವರದಿಯಾಗಿದೆ.

ಇದನ್ನೂ ಓದಿ: LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

ಒಟ್ಟಿನಲ್ಲಿ, ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ಕೇವಲ ಜಾಗತಿಕ ಮಟ್ಟದಲ್ಲೇ ಅಲ್ಲದೆ, ಕರ್ನಾಟಕದ ಸಾಮಾನ್ಯ ಜನಜೀವನ ಮತ್ತು ಹೋಟೆಲ್ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರುತ್ತಿರುವುದು ಸ್ಪಷ್ಟವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೇವು ಬೆಲ್ಲ ಆಯುಷ್ಯ ವೃದ್ಧಿಸುತ್ತದೆ! ಅದು ಹೇಗೆ?

ಬೆಂಗಳೂರು, ಮಾ.19: ಯುಗಾದಿ ಹಬ್ಬದ ಪ್ರಮುಖ ಸಂಪ್ರದಾಯಗಳಲ್ಲಿ ಬೇವು ಬೆಲ್ಲ ಸೇವನೆ ಮುಖ್ಯವಾಗಿದೆ. ಬೇವು ಬೆಲ್ಲ ಆಯುರ್ವೇದದಲ್ಲಿ ಆರೋಗ್ಯವರ್ಧಕ ಹಾಗೂ ಶಕ್ತಿವರ್ಧಕವೆಂದು ಗುರುತಿಸಲ್ಪಟ್ಟಿದೆ. ಬೇವು ಕಷ್ಟಗಳನ್ನು, ಬೆಲ್ಲ ಸುಖಗಳನ್ನು ಪ್ರತಿನಿಧಿಸುತ್ತಾ, ಜೀವನದ ಕಹಿಯನ್ನು ಸಹಿಸಿಕೊಂಡು ಮಾಧುರ್ಯವನ್ನು ಸ್ವೀಕರಿಸುವ ಸಂದೇಶ ನೀಡುತ್ತದೆ. ಹೊಸ ವರ್ಷದ ದಿನ ಬೇವು ಬೆಲ್ಲ ಸೇವಿಸುವುದರಿಂದ ದೇಹದ ಉಷ್ಣತೆ ಸಮತೋಲನಗೊಂಡು ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಚೈತ್ರ ಮಾಸದ ಆರಂಭದಲ್ಲಿ ಪ್ರಕೃತಿ ಹೊಸ ಚಿಗುರನ್ನು ಪಡೆಯುವಂತೆ, ಬೇವು ಬೆಲ್ಲ ಸೇವನೆಯು ದೇಹ, ಮನಸ್ಸು, ಮತ್ತು ಸಂಕಲ್ಪಗಳಿಗೆ ನವಚೈತನ್ಯ ತುಂಬುತ್ತದೆ. ಇದು ಸತ್ವ, ರಜೋ, ತಮೋ ಗುಣಗಳನ್ನು ಸಮತೋಲನಗೊಳಿಸಿ, ಗ್ರಹಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡುತ್ತದೆ. ಬೇವು ಬೆಲ್ಲ ಕೇವಲ ಸಾಂಪ್ರದಾಯಿಕವಲ್ಲ, ಆರೋಗ್ಯ ಮತ್ತು ಆಯುಷ್ಯ ವೃದ್ಧಿಸುವ ಅಂಶವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ: ಮಹಿಳೆಯರಿಗೆ ಮಾತ್ರ ಸಂಕಷ್ಟ

ಬೆಂಗಳೂರು, ಮಾ.19: ಇಂದು 2026ರ ಮಾರ್ಚ್ 19, ಗುರುವಾರದ ಭವಿಷ್ಯದ ಬಗ್ಗೆ ತಿಳಿಸಲಾಗಿದೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ, ಉತ್ತರಾಭಾದ್ರ ನಕ್ಷತ್ರ, ಶುಕ್ಲ ಯೋಗ ಮತ್ತು ನವಗವಾನ್ ಕರಣ ಇರತಕ್ಕಂತ ದಿನವಾಗಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದು ಚಾಂದ್ರಮಾನ ಯುಗಾದಿಯ ಮಹತ್ವವನ್ನು ವಿವರಿಸಿದ್ದಾರೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ದಿನವು, ಪರಾಭವ ನಾಮ ಸಂವತ್ಸರದ ಪ್ರಾರಂಭ ಹಾಗೂ ವಸಂತ ನವರಾತ್ರಿಗಳ ಆರಂಭವನ್ನೂ ಗುರುತಿಸುತ್ತದೆ. ಯುಗಾದಿಯನ್ನು ಹಿಂದೂ ಸಂಪ್ರದಾಯದಲ್ಲಿ ವಿಜಯದಶಮಿ, ದೀಪಾವಳಿ ಮತ್ತು ಅಕ್ಷಯ ತೃತೀಯದಂತಹ ಮಹತ್ವದ ಮೂರೂವರೆ ಮುಹೂರ್ತಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇಂದು ಘಟಸ್ಥಾಪನೆ, ಬೇವು-ಬೆಲ್ಲ ಸೇವನೆ, ಶ್ರೀರಾಮ ಪಟ್ಟಾಭಿಷೇಕ ಮತ್ತು ಬ್ರಹ್ಮನು ಸೃಷ್ಟಿಯನ್ನು ಪ್ರಾರಂಭಿಸಿದ ದಿನದ ಮಹತ್ವವನ್ನು ತಿಳಿಸಿದರು. ಇದರ ಜೊತೆಗೆ, ಮೇಷದಿಂದ ಮೀನ ರಾಶಿಯವರೆಗಿನ ದ್ವಾದಶ ರಾಶಿಗಳ ದೈನಂದಿನ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಕೌಟುಂಬಿಕ ಸಂಬಂಧಗಳು, ಉದ್ಯೋಗ, ಆರೋಗ್ಯ, ಪ್ರಯಾಣದ ಯೋಗ, ಅದೃಷ್ಟದ ಬಣ್ಣಗಳು ಮತ್ತು ಮಂತ್ರಗಳ ಕುರಿತು ಮಾಹಿತಿ ಒದಗಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್!

ಬೆಂಗಳೂರು, ಮಾ.19: ರಾಜ್ಯದಾದ್ಯಂತ ಬೇಸಿಗೆಯ ಬಿಸಿಲು ಏರುತ್ತಿದ್ದರೂ, ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನೆನ್ನೆ ಬೆಂಗಳೂರಿನಲ್ಲಿ ಆಲಿಕಲ್ಲು ಮಳೆಯಾಗಿತ್ತು. ಇಂದು ಕೂಡ ಮಳೆ ಬರುವ ಸಾಧ್ಯ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿಯಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ (ಸುಮಾರು 55% ಮಳೆಯ ಸಂಭವನೀಯತೆ). ಗರಿಷ್ಠ ತಾಪಮಾನ 32°C ಮತ್ತು ಕನಿಷ್ಠ 19°C ದಾಖಲಾಗಬಹುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯ ನಿರೀಕ್ಷೆಯಿದೆ. ಈ ಭಾಗದಲ್ಲಿ ಗರಿಷ್ಠ ತಾಪಮಾನ 37°C ವರೆಗೆ ತಲುಪಬಹುದು. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಇನ್ನು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಏಕಾಏಕಿ ಬದಲಾವಣೆಯಾಗಿದ್ದು, ಇಂದಿನಿಂದ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

ಹಾವೇರಿ, ಧಾರವಾಡ, ಗದಗ, ಚಿತ್ರದುರ್ಗ ಈ ನಾಲ್ಕೂ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನ ಎಚ್ಚರಿಕೆ ನೀಡಲಾಗಿದೆ. ರೈತರು ಮತ್ತು ಸಾರ್ವಜನಿಕರು ಮಳೆಯ ಸಮಯದಲ್ಲಿ ಮರದ ಕೆಳಗೆ ಆಶ್ರಯ ಪಡೆಯಬಾರದು ಎಂದು ಸೂಚಿಸಲಾಗಿದೆ. ಮಳೆ ಬರುವ ಮುನ್ನ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಮಳೆಯ ಮುನ್ಸೂಚನೆ ಇದ್ದರೂ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರೇ ತಮ್ಮ ಕಾರ್ಯವನ್ನು ಹಾಳುಮಾಡಿಕೊಳ್ಳುವರು

ಯುಗಾದಿ ಹೊಸ ವರ್ಷದ ಆರಂಭ. ಹೊಸ ಹರ್ಷಕ್ಕೂ ಆರಂಭ. ಹಳೆಯ ನೋವನ್ನು ಮರೆತು ಹೊಸ ಹರ್ಷಕ್ಕೆ ಸಿದ್ಧರಾಗಿ. ವರ್ಷವಿಡೀ ಸಂತೋಷವಿರಲಿ.

ಮೇಷ ರಾಶಿ:

ನಿಮ್ಮ ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟ ಇದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು.‌ ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ.

ವೃಷಭ ರಾಶಿ:

ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಸಮಯ ಹಾಗೂ ಸ್ಥಳಗಳೂ ಮುಖ್ಯ. ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಗುರಿಯ ಬಗ್ಗೆ ಇರುವ ದೃಢತೆಯು ಸಡಿಲವಾದೀತು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ಬಂಧುಗಳ ಮನೆಯಲ್ಲಿ ನೀವು ಇಂದು ಅನಿರೀಕ್ಷಿತವಾಗಿ ಭೋಜನ ಮಾಡುವಿರಿ. ನಿಂದಕರ ಬಗ್ಗೆ ನಿಮ್ಮ ಮಾತುಗಳು ಇರದು.

ಮಿಥುನ ರಾಶಿ:

ನಿಮ್ಮನ್ನು ಸಂತೋಷಪಡಿಸಿದವರಿಗೆ ಕೃತಜ್ಞತೆಯನ್ನು ತಿಳಿಸಿ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ದ್ವೇಷಕ್ಕೆ ಸರಿಯಾದ ಕಾರಣವಿರಲಿ. ಮಕ್ಕಳ ಕಾಳಜಿಯು ಅತಿಯಾಗುವುದು. ನಿಮ್ಮ ಬಳಿ ಇರುವುದನ್ನು ಜೋಪಾನ‌ಮಾಡಿಕೊಳ್ಳುವುದು ಸೂಕ್ತ. ಮಹಾವಿಷ್ಣುವಿನ ಉಪಾಸನೆಯು ನಿಮ್ಮ ಈ‌ ದಿನವನ್ನು ಸಾರ್ಥಕ ಮಾಡಿಸೀತು.

ಕರ್ಕಾಟಕ ರಾಶಿ:

ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಗೌರವ ಹೆಚ್ಚಾಗುವುದು. ಸ್ನೇಹಿತರ ಸಹಾಯದಿಂದ ವ್ಯವಹಾರ ಬೆಳೆಯುತ್ತದೆ. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು, ಮುಗ್ಗರಿಸಿ ಬೀಳುವುದು ಬೇಡ.

ಸಿಂಹ ರಾಶಿ:

ಯಾವುದೇ ಸಮಸ್ಯೆಯಲ್ಲಿ ಮುಳುಗಿದ್ದರೆ, ಇಂದು ಅದಕ್ಕೆ ಪರಿಹಾರ ಸಿಗುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಪ್ರಗತಿಯಿಂದ ಲಾಭ ಸಿಗುವುದು. ಕುಟುಂಬ ಜೀವನವನ್ನು ಬಹಳ ಆನಂದಿಸುವಿರಿ. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು.

ಕನ್ಯಾ ರಾಶಿ:

ನಿಮ್ಮ ಕೋಪವನ್ನು ಒಂದಿಷ್ಟು ಸಮಯದಲ್ಲಾದರೂ ನಿಯಂತ್ರಣದಲ್ಲಿಡಿ. ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಅನಗತ್ಯವಾಗಿ ಓಡಾಡುವುದರಿಂದ ಮನಸ್ಸು ತೊಂದರೆಗೊಳಗಾಗಬಹುದು. ಪ್ರಯಾಣವು ಅವಸರವಸರವಾಗಿ ಇರುವುದು. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನೌಕರರಿಗೆ ಕೆಲಸವನ್ನು ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು.

ತುಲಾ ರಾಶಿ:

ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಕಂಡುಕೊಳ್ಳುವ ಅನಿವಾರ್ಯತೆ ಸೃಷ್ಟಿ. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ನಿಮ್ಮ ಘನತೆಗೆ ಯಾರಿಂದಲಾದರೂ ಧಕ್ಕೆ ಬರುವುದು. ಸಮಯಪಾಲನೆಗೆ ಎಲ್ಲರೂ ಪ್ರಶಂಸಿಸುವರು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.‌ ಇಲ್ಲವಾದರೆ ಎಲ್ಲವೂ ನಿಮ್ಮ ಬುಡಕ್ಕೇ ಬರುವುದು.

ವೃಶ್ಚಿಕ ರಾಶಿ:

ಉತ್ಸಾಹದಿಂದ ಇರಲು ನಿಮಗೆ ದಾರಿ ಕಡಿಮೆ‌ ಇರಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಿಸುವಿರಿ. ನಿಮ್ಮ ವೃತ್ತಿಜೀವನದಲ್ಲಿ ಹೊಸತನ್ನು ಸಾಧಿಸಲು ಅವಕಾಶ ಸಿಗುತ್ತದೆ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವನ್ನೆಲ್ಲ ಹಾಳುಮಾಡಿಕೊಳ್ಳುವಿರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು.

ಧನು ರಾಶಿ:

ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಮಾತಿನ ಪ್ರಭಾವದಿಂದ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಆಒ್ತರು ಬಟ್ಟೆ ಇತ್ಯಾದಿಗಳನ್ನು ಉಡುಗೊರೆಯಾಗಿ ಪಡೆಯುವಿರಿ. ಆಮದು ವ್ಯವಹಾರವನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ನಿಮ್ಮ ದೌರ್ಬಲ್ಯಗಳನ್ನು ಎಲ್ಲರೆದುರು ಪ್ರಕಟಪಡಿಸುವುದು ಬೇಡ.

ಮಕರ ರಾಶಿ:

ಇಂದು ನೀವು ಮಾತಿನಿಂದ ಮಂತ್ರ ಮುಗ್ಧರನ್ನಾಗಿ ಮಾಡುವಿರಿ. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ನಿಮ್ಮನ್ನು ಬಲವಾದ ಕಾರಣದಿಂದ ಒಪ್ಪಿಕೊಳ್ಳಬಹುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಉದ್ಯಮಕ್ಕೆ ಪ್ರಭಾವಿಗಳ ಕೃಪಾಕಟಾಕ್ಷ ಬೇಕು. ಅಪರಿಚಿತ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ. ಅನಪೇಕ್ಷಿತ ಮಾತುಗಳನ್ನು ಹೆಚ್ಚಾಗ ಆಡುವಿರಿ.

ಕುಂಭ ರಾಶಿ:

ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಪರರ ವಸ್ತುವನ್ನು ಬಳಸಿ, ಸರಿಯಾಗಿ ಹಿಂದಿರುಗಿಸಿ. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ನೆಚ್ಚಿನ ವ್ಯಕ್ತಿಗಳ ಬಗ್ಗೆ ಪ್ರೀತಿ ಅಧಿಕವಾಗಬಹುದು.

ಮೀನ ರಾಶಿ:

ಇಂದು ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಕಾಣುವಿರಿ. ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಯಶಸ್ಸು ಸಿಗುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಸ್ಥಿತಿಯನ್ನು ಬಹಳ ಗಂಭೀರವಾಗಿ ನೋಡಿಕೊಳ್ಳಬೇಕು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಪೂರ್ವಾಭಾದ್ರ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ಪ್ರತಿಪತ್ ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಶುಭ, ಕರಣ : ಕಿಂಸ್ತುಘ್ನ, ಸೂರ್ಯೋದಯ – 06 – 30 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:03 – 15:33, ಯಮಗಂಡ ಕಾಲ 06:30 – 08:01, ಗುಳಿಕ ಕಾಲ 09:31 – 11:02

-ಲೋಹಿತ ಹೆಬ್ಬಾರ್-8762924271 (what’s app only)

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ ಮಾಡುವುದು ಒಳ್ಳೆಯದು.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ನಿಮ್ಮ ಮನಸ್ಸಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗಲಿದೆ. ಯಾವ ಕೆಲಸವನ್ನು ಮಾಡಬಾರದು, ಯಾವ ವ್ಯಕ್ತಿಯ ಜತೆಗೆ ಮಾತನಾಡಬಾರದು ಎಂದುಕೊಂಡಿರುತ್ತೀರೋ ಅದೇ ಕೆಲಸವನ್ನು ಮಾಡುತ್ತೀರಿ ಹಾಗೂ ನೀವಾಗಿಯೇ ಆ ವ್ಯಕ್ತಿಯ ಜತೆಗೆ ಮಾತನಾಡುತ್ತೀರಿ. ಹಾಗಂತ ನೀವು ಮಾನಸಿಕವಾಗಿ ದುರ್ಬಲರಾದಿರಿ ಅಂತಲ್ಲ. ಯಾವುದೇ ಮನಸ್ಸಿನ ಕಹಿಯನ್ನು ಮುಂದುವರಿಸಿಕೊಂಡು ಹೋಗುವುದಕ್ಕೆ ನಿಮಗೆ ಇಷ್ಟ ಇರುವುದಿಲ್ಲ ಎಂದರ್ಥ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಮನಸ್ತಾಪಗಳು- ಅಭಿಪ್ರಾಯ ಭೇದಗಳು ನಿವಾರಣೆ ಆಗಲಿವೆ. ತಂದೆ- ತಾಯಿಯ ಆರೋಗ್ಯ ವಿಚಾರ ಒಂದಿಷ್ಟು ಚಿಂತೆಗೆ ಕಾರಣ ಆಗಬಹುದು. ಆದರೆ ಅದಕ್ಕೆ ಸೂಕ್ತ ಪರಿಹಾರೋಪಾಯಗಳು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಈ ದಿನ ಮಿಶ್ರ ಫಲಿತಾಂಶ ದೊರೆಯಲಿದೆ. ಕೆಲವು ಬೆಳವಣಿಗೆಗಳು ನಿಮಗೆ ಪೂರಕವಾಗಿಯೂ ಮತ್ತೆ ಕೆಲವು ಬಾಧಕವಾಗಿಯೂ ಪರಿಣಮಿಸಬಹುದು.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 19ರ ದಿನಭವಿಷ್ಯ

ದುರ್ಗಾ ಸಪ್ತಶತಿ ಶ್ರವಣವನ್ನು ಮಾಡಿ. ಆಸ್ತಿ ಖರೀದಿ ಮೊದಲಾದ ವಿಚಾರಗಳಲ್ಲಿ ಕಾಡುತ್ತಿರುವ ಅಡೆತಡೆ ನಿವಾರಣೆಗೆ ದುರ್ಗಾ ದೇವಿಯನ್ನು ಪ್ರಾರ್ಥಿಸಿ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಉದ್ಯೋಗ ಸ್ಥಳದಲ್ಲಿ ನಿಮ್ಮ ಕೈ ಮೇಲಾಗುತ್ತದೆ. ಯಾರು ನಿಮ್ಮ ಸಾಮರ್ಥ್ಯ, ಶಕ್ತಿ ಹಾಗೂ ಪ್ರಭಾವದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾ ಬಂದಿರುತ್ತಾರೋ ಅಂಥವರೇ ಬೆರಗಾಗುವಂಥ ಸಾಧನೆಗಳು ನಿಮ್ಮಿಂದ ಆಗಲಿದೆ. ಇತರರು ತಮ್ಮಿಂದ ಸಾಧ್ಯವೇ ಇಲ್ಲ ಎಂದು ಕೈ ಚೆಲ್ಲಿ, ಅಸಹಾಯಕರಾದ ಸಂದರ್ಭದಲ್ಲಿ ನೀವು ಅದನ್ನು ಯಶಸ್ವಿಯಾಗಿ ಮಾಡಲಿದ್ದೀರಿ. ಈ ದಿನ ನಿಮಗೆ ದೈವಾನುಗ್ರಹ ಸಹ ಇರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಈಗಾಗಲೇ ಹೊಸ ಉದ್ಯಮವನ್ನೋ ಅಥವಾ ವ್ಯವಹಾರವನ್ನು ಆರಂಭಿಸಿದ್ದೀರಿ, ಅದು ನಿರೀಕ್ಷಿತ ಮಟ್ಟಕ್ಕೆ ಲಾಭ ತಂದುಕೊಡುತ್ತಿಲ್ಲ ಎಂದಾದಲ್ಲಿ ಈ ದಿನ ಅದು ಲಾಭದಾಯಕವಾಗಿ ಮಾಡುವುದಕ್ಕೆ ಬೇಕಾದ ಮಾರ್ಗೋಪಾಯಗಳು ದೊರೆಯುತ್ತವೆ. ಆದ್ದರಿಂದ ಒಟ್ಟಾರೆ ಈ ದಿನ ನಿಮ್ಮ ಪಾಲಿಗೆ ಉತ್ತಮವಾಗಿರುತ್ತದೆ. ಆದ್ದರಿಂದ ಅವಕಾಶಗಳನ್ನು ಎಷ್ಟು ಚೆನ್ನಾಗಿ ಬಳಸಿಕೊಳ್ಳಲಿದ್ದೀರಿ ಎಂಬುದು ಮುಖ್ಯವಾಗುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಕೃತಕ ಗರ್ಭಧಾರಣೆ ವಿಧಾನದ ಮೂಲಕ ಸಂತಾನ ಅಪೇಕ್ಷಿತರಿಗೆ ಬಹಳ ಒತ್ತಡದ ದಿನ ಇದಾಗಿರುತ್ತದೆ. ದಂಪತಿ ಮಧ್ಯೆ ಯಾವುದೋ ಮೂರನೇ ವ್ಯಕ್ತಿಯ ಕಾರಣಕ್ಕೆ ವಿಪರೀತ ಮಾತಿಗೆ ಮಾತು ಬೆಳೆಯುವಂಥ ಸಾಧ್ಯತೆ ಇದೆ. ಈ ಹಿಂದೆ ಯಾವಾಗಲೋ ಆಡಿದ ಮಾತಿನ ರೆಕಾರ್ಡಿಂಗ್ ಮುಂದಿಟ್ಟುಕೊಂಡು ಜೋರು ಜಗಳಗಳಾಗಬಹುದು. ಮುಖ್ಯವಾಗಿ ನಿಮಗೆ ಗೊತ್ತಿಲ್ಲದ ಸನ್ನಿವೇಶವನ್ನು ಊಹಿಸಿಕೊಂಡು, ನೀನು ಹೇಗೆ ನನಗೆ ಗೊತ್ತಿಲ್ಲವಾ ಎಂಬ ರೀತಿಯ ಮಾತುಗಳನ್ನು ಆಡಬೇಡಿ.

ಲೇಖನ- ಸ್ವಾತಿ ಎನ್.ಕೆ.

Source link

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 19ರ ದಿನಭವಿಷ್ಯ

ನಿಮ್ಮ ಮನೆಯಲ್ಲಿ ಇರುವಂಥ ಈಶ್ವರ ವಿಗ್ರಹ ಅಥವಾ ಚಿತ್ರಪಟಕ್ಕೆ ಸಕ್ಕರೆ ಅಥವಾ ಹಣ್ಣನ್ನು ನೈವೇದ್ಯ ಮಾಡಿ ಪ್ರಸಾದವಾಗಿ ಸ್ವೀಕರಿಸಿ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಮುಂದೆ ನಡೆಯುವ ಸಂಗತಿಗಳ ಬಗ್ಗೆ ಸುಳಿವು ದೊರೆಯಲಿದೆ. ನಿಮ್ಮ ಮಾತು ಬಹಳ ಪ್ರಭಾವಿ ಆಗಿರುತ್ತದೆ. ಹಲವರು ಅದರಿಂದ ಸಹಾಯ ಪಡೆಯುವ ಅವಕಾಶಗಳಿವೆ. ರಾಜಕೀಯ ಕ್ಷೇತ್ರದಲ್ಲಿ ಇರುವಂಥವರಾದರೆ ನಿಮ್ಮ ಬೆಂಬಲಿಗರು, ಅನುಯಾಯಿಗಳು ಹಲವು ರೀತಿಯಲ್ಲಿ ಅನುಕೂಲ ಮಾಡಿಕೊಡಲಿದ್ದೀರಿ. ಅದು ಉತ್ತಮ ಹುದ್ದೆಗಳನ್ನು ಕೊಡಿಸುವುದಕ್ಕೆ ಇರಬಹುದು ಅಥವಾ ಯಾವುದಾದರೂ ಕಾಂಟ್ರಾಕ್ಟ್ ಗಳನ್ನು ಕೊಡಿಸುವುದೇ ಇರಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ದೊಡ್ಡ ಮಟ್ಟದಲ್ಲಿ ಅನಿರೀಕ್ಷಿತವಾಗಿ ಸಹಾಯ ದೊರೆಯಲಿದೆ. ನಿಮ್ಮ ಒಳಿತಿಗಾಗಿ ಸ್ನೇಹಿತರು, ಸಂಬಂಧಿಗಳು ಬಹಳ ಸಹಾಯ ಮಾಡಲಿದ್ದಾರೆ. ಭವಿಷ್ಯದಲ್ಲಿ ಅತಿ ದೊಡ್ಡ ಬದಲಾವಣೆ ತರುವಂಥ ನಿರ್ಧಾರವನ್ನು ತೆಗೆದುಕೊಳ್ಳಲು ನಿಮ್ಮಲ್ಲಿ ಆತ್ಮವಿಶ್ವಾಸ ಮೂಡಲಿದೆ. ಗುರು ಸಮಾನರಾದವರು ನಿಮಗೆ ನೀಡುವಂಥ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ. ಈ ಹಿಂದೆ ನೀವು ಕೆಲಸ ಮಾಡಿದ್ದ ಸ್ಥಳದಿಂದ ಮತ್ತೆ ಕರೆ ಬರುವಂಥ ಸಾಧ್ಯತೆಗಳಿವೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಇತರರಿಗೆ ನೀವು ಶಿಫಾರಸು ಮಾಡುವ ಮೂಲಕವಾಗಿ ಸಹಾಯ ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರು ತುಂಬ ದೊಡ್ಡ ಪ್ರಮಾಣದ ಕೃಷಿ ಜಮೀನನ್ನು ಗುತ್ತಿಗೆಗೆ ಪಡೆಯುವ ಅಥವಾ ಖರೀದಿ ಮಾಡುವ ಯೋಗ ಇದೆ. ಶಿಸ್ತನ್ನು ಅನುಸರಿಸುವುದರಿಂದ ಆಗುವ ಪ್ರಯೋಜನಗಳು ಹಲವು ಇವೆ. ಆದ್ದರಿಂದ ಯಾವುದೇ ಕೆಲಸವನ್ನು ಆಮೇಲೆ ಮಾಡಿದರಾಯಿತು ಎಂದು ಆಲೋಚನೆ ಮಾಡದೆ, ತಕ್ಷಣವೇ ಮಾಡಿ.

ಲೇಖನ- ಸ್ವಾತಿ ಎನ್.ಕೆ.

Source link

Exit mobile version