Headlines

ಅಮೆರಿಕ ಮತ್ತು ಇಸ್ರೇಲ್ ವರ್ತನೆ ಆಧುನಿಕ ಅನಾಗರಿಕತೆಯ ಪ್ರತಿಬಿಂಬ; ಇರಾನ್ ಟೀಕೆ

ಟೆಹ್ರಾನ್, ಏಪ್ರಿಲ್ : ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಇಂದು ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್‌ನ ನಡವಳಿಕೆ ಮತ್ತು ಹೇಳಿಕೆ ಎರಡರಲ್ಲೂ ಆಧುನಿಕ ಅನಾಗರಿಕತೆ ಗೋಚರಿಸುತ್ತಿದೆ ಎಂದು ಟೀಕಿಸಿದ್ದಾರೆ. ಎಎನ್​ಐಗೆ ನೀಡಿದ ಲಿಖಿತ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮೇಲೆ ಬಾಂಬ್ ಹಾಕುವುದಾಗಿ ನೀಡಿದ ಬೆದರಿಕೆ ಮತ್ತು ಟೆಹ್ರಾನ್ ಬಳಿಯ ಪ್ರಮುಖ ಸೇತುವೆಯನ್ನು ನಾಶಪಡಿಸಲಾಗಿದೆ ಎಂಬ ಅವರ ಇತ್ತೀಚಿನ ಹೇಳಿಕೆ ಬಗ್ಗೆ ಮಾತನಾಡಿದ್ದಾರೆ. “ನಮ್ಮದು ಸಾವಿರಾರು ವರ್ಷಗಳ…

Read More

ಟೀಕಿಸಿ, ಟ್ರೋಲ್ ಮಾಡಿದವರಿಗೆ ಅವಾರ್ಡ್​ ಮೂಲಕ ಉತ್ತರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ (Rashmika Mandanna) ಅವರು ಅನೇಕ ವಿಷಯಗಳಿಗೆ ಟ್ರೋಲ್ ಆದ ಉದಾಹರಣೆ ಇದೆ. ಈಗ ಅವರು ಟ್ರೋಲ್ ಮಾಡುವ ಎಲ್ಲರಿಗೂ ತಮ್ಮ ಕೆಲಸದ ಮೂಲಕ ಉತ್ತರ ನೀಡಿದ್ದಾರೆ. ತೆಲಂಗಾಣ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವಾರ್ಡ್ ಸ್ವೀಕರಿಸಿದರು. ಅಂದರೆ ಅವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿದ್ದು, ಅದನ್ನು ಸಿಎಂ ಕೈಯಿಂದ ಪಡೆದರು. ಈ ಸಂದರ್ಭದಲ್ಲಿ ಅವರು ಹಳೆಯ ದಿನಗಳನ್ನು ನೆನಪಿಸಿಕೊಂಡರು. ಅವರು ಉತ್ತರಿಸಿದ್ದು ಹಿಗೆ. ‘ಹಿಂದೆ ನಾನು ಟ್ರೋಲ್‌ಗಳನ್ನು ಎದುರಿಸಿದ್ದೆ. ಆದರೆ ಈಗ ರಾಜ್ಯ…

Read More

ಹಸುವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರ ದರನೆ ಎಳೆದ ರಭಸಕ್ಕೆ ಕಾಲೇ ಕಿತ್ತು ಬಂತು

ಒಡಿಶಾ, ಏಪ್ರಿಲ್ 06: ವ್ಯಕ್ತಿಯೊಬ್ಬ ಹಸು(Cow)ವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರದರನೆ ಎಳೆದೊಯ್ದ ಪರಿಣಾಮ ಅದರ ಕಾಲೇ ಕಿತ್ತು ಬಂದಿರುವ ಅಮಾನವೀಯ ಘಟನೆ ಒಡಿಶಾದ ಮಯೂರ್​ಭಂಜ್​ನಲ್ಲಿ ನಡೆದಿದೆ. ಟ್ರಕ್ ಚಾಲಕನೊಬ್ಬ ಹಸುವನ್ನು ತನ್ನ ವಾಹನದ ಹಿಂದೆ ಕಟ್ಟಿ ಹಲವಾರು ಮೀಟರ್‌ಗಳಷ್ಟು ಎಳೆದುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ-49 ರಲ್ಲಿ ಈ ಘಟನೆ ನಡೆದಿದ್ದು, ಚಾಲಕನನ್ನು ತಕ್ಷಣ ಬಂಧಿಸಿ ಭಾರೀ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಸುವಿನ ಹಿಂಗಾಲುಗಳನ್ನು ಹಗ್ಗದಿಂದ ಕಟ್ಟಿ ಟ್ರಕ್​ನ ಹಿಂಭಾಗಕ್ಕೆ ಕಟ್ಟಲಾಗಿತ್ತು. ನಂತರ…

Read More

ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಬೆಂಗಳೂರು, ಏಪ್ರಿಲ್ 08: ಓದು ಮುಗಿಸಿ, ಕೆಲಸ ಹಿಡಿದು, ಆರಾಮದಾಯಕ ಜೀವನ ಕಟ್ಟಿಕೊಂಡರೆ ಸಾಕು ಎನ್ನುವ ಮನೋಭಾವ ಹಲವು ಯುವಕರಿಗಿದೆ. ಆದರೆ ಕೆಲವೇ ಕೆಲವರು ಮಾತ್ರ ರಿಸ್ಕ್ ತೆಗೆದುಕೊಂಡು ತಾವೇ ಒಂದು ಸ್ಟಾರ್ಟ್​ಅಪ್ (Startup) ಮಾಡಲು ಮುಂದಾಗುತ್ತಾರೆ. ಅಂತೆಯೇ ನಗರದಲ್ಲಿ ಯುವ ಉದ್ಯಮಿಯೊಬ್ಬರು ತಮ್ಮ ಕಾರ್ಪೊರೇಟ್ ವೃತ್ತಿಯನ್ನು ತೊರೆದು ಹೊಸ ಪ್ರಯೋಗಕ್ಕೆ ಕೈಹಾಕಿರುವ ಘಟನೆ ಗಮನಸೆಳೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಫ್ಲಾಟ್‌ನಿಂದ ಕ್ಲೌಡ್ ಕಿಚನ್ ಆರಂಭಿಸಿ ಸ್ವಯಂ…

Read More

3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು – Kannada News | Woman Family assaults On Youth Who illicit relationship with 3 Children Mother at Belagavi

ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್​ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್​ ನನ್ನು ಮಹಿಳೆಯ ಪತಿ…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ. ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ…

Read More

ಮಗ ರಾಮ್ ಚರಣ್ ಹುಟ್ಟುಹಬ್ಬಕ್ಕೆ ಹತ್ತು ಲಕ್ಷ ದೇಣಿಗೆ ಕೊಟ್ಟ ಮೆಗಾಸ್ಟಾರ್ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ (Chiranjeevi), ತೆಲುಗು ಚಿತ್ರರಂಗ ಮಾತ್ರವಲ್ಲ, ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ನಟರುಗಳಲ್ಲಿ ಒಬ್ಬರು. ಈಗಲೂ ಸಹ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಚಿರಂಜೀವಿ ಅವರು ಸಿನಿಮಾ ನಟನೆಯ ಜೊತೆಗೆ ತಮ್ಮ ಅಪಾರ ಸಮಾಜ ಸೇವೆಯಿಂದಲೂ ಗುರುತಿಸಿಕೊಂಡಿದ್ದಾರೆ. ಚಿರಂಜೀವಿ ಬ್ಲಡ್ ಬ್ಯಾಂಕ್, ಐ ಬ್ಯಾಂಕ್ ಈಗಾಗಲೇ ಲಕ್ಷಾಂತರ ಜನರ ಜೀವ ಉಳಿಸಿವೆ. ಹಲವಾರು ಸಮಾಜ ಸೇವಾ ಕಾರ್ಯಕ್ರಗಳಲ್ಲಿ ತೊಡಗಿಕೊಂಡಿರುವ ನಟ ಚಿರಂಜೀವಿ, ಇದೀಗ ತಮ್ಮ ಮಗ, ಸೂಪರ್ ಸ್ಟಾರ್ ರಾಮ್ ಚರಣ್ ಹುಟ್ಟುಹಬ್ಬದಂದು ಹಲವಾರು ಮಂದಿಗೆ ಊಟ ಹಾಕಿಸಿದ…

Read More

ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್ – Kannada News | Public Angry Against Post Office for Bundle of Aadhaar Cards Found In Netravati River at Mnagaluru

ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ. ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ…

Read More

ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ – Kannada News | Union Minister HD Kumaraswamy Talks about Kannadigas Who stuck In dubai for Israel And Iran War

ಮೈಸೂರು, (ಮಾರ್ಚ್ 02): ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ. ಇಂದು…

Read More