ಸುದೀಪ್ ಆತ್ಮಹತ್ಯೆ ಪ್ರಕರಣ: ಪತಿ ಸಾವಿಗೆ ಕಾರಣ ಬಿಚ್ಚಿಟ್ಟ ಉದ್ಯಮಿ ಪತ್ನಿ ಸೌಮ್ಯಾ

ಉಡುಪಿ, ಏಪ್ರಿಲ್​​ 02: ಮದುವೆಯಾದ ಒಂದೇ ತಿಂಗಳಿಗೆ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿತ್ತು. ಮಗನ ಸಾವಿಗೆ ಆತನ ಪತ್ನಿ ಸೌಮ್ಯಾ ಶೆಟ್ಟಿಯೇ ಕಾರಣ ಎಂಬ ಗಂಭೀರ ಆರೋಪವನ್ನು ಸುದೀಪ್​​ ಪೋಷಕರು ಮಾಡಿದ್ದರು. ಆದರೀಗ ತನ್ನ ಮೇಲಿನ ಆರೋಪಗಳಿಗೆ ಸ್ವತಃ ಸೌಮ್ಯಾ ಶೆಟ್ಟಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್​​ ಹೆತ್ತವರ ಆರೋಪ ಅಲ್ಲಗಳೆದಿರುವ ಈಕೆ, ಪತಿಯ ಸಾವಿಗೆ ತಾನು ಕಾರಣಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದೀಪ್​​ ಪೋಷಕರು ಹೇಳುವಂತೆ…

Read More

ಹೈದರಾಬಾದ್‌ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್‌ಎಸ್ ಶಾಸಕ

ಹೈದರಾಬಾದ್, ಏಪ್ರಿಲ್ 2: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಸುಧೀರ್ ರೆಡ್ಡಿ ಇಂದು ಹೈದರಾಬಾದ್​ನ (Hyderabad) ವಿಧಾನಸಭೆ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಸೊಳ್ಳೆ ಪರದೆ ಧರಿಸಿಕೊಂಡು, ಫಾಗಿಂಗ್ ಯಂತ್ರವನ್ನು ಹಿಡಿದುಕೊಂಡು ಆಗಮಿಸಿದ್ದಾರೆ. ಹೈದರಾಬಾದ್ ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೊಳ್ಳೆ ಸಮಸ್ಯೆಯ ವಿರುದ್ಧ ಅವರು ಈ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಮೊದಲು ಮಾಧ್ಯಮ ಕೇಂದ್ರಕ್ಕೆ ಸೊಳ್ಳೆ ಪರದೆ ಮತ್ತು ಫಾಗಿಂಗ್ ಯಂತ್ರವನ್ನು ಕೊಂಡೊಯ್ಯಲು ಪ್ರಯತ್ನಿಸಿದಾಗ ಸುಧೀರ್ ರೆಡ್ಡಿ ಅವರಿಗೆ ವಿಧಾನಸಭೆ ಸಿಬ್ಬಂದಿ ಅನುಮತಿ ನಿರಾಕರಿಸಿದರು. ಭದ್ರತಾ ಸಿಬ್ಬಂದಿಯ…

Read More

ಕಮರ್ಷಿಯಲ್ ಬ್ಯಾಂಕ್​ಗಳ ಎಫ್​ಡಿಗಿಂತಲೂ ಹೆಚ್ಚು ರಿಟರ್ನ್ಸ್ ಕೊಡುತ್ತೆ ಈ ಪೋಸ್ಟ್ ಆಫೀಸ್ ಡೆಪಾಸಿಟ್

ಇವತ್ತಿನ ಷೇರು ಮಾರುಕಟ್ಟೆ ಅಲುಗಾಟದಲ್ಲಿ ನಿಶ್ಚಿತ ಠೇವಣಿಗಳು ಹೆಚ್ಚು ಸುರಕ್ಷಿತ, ಹೆಚ್ಚು ಉಪಯುಕ್ತ ಎನಿಸಿವೆ. ಎಫ್​ಡಿಗಳನ್ನು ಇಡಲು ಬ್ಯಾಂಕ್​ಗಳಲ್ಲಿ ವಿವಿಧ ಪ್ಲಾನ್​ಗಳಿವೆ. ಸಹಕಾರಿ ಬ್ಯಾಂಕುಗಳು, ಎನ್​ಬಿಎಫ್​ಸಿಗಳು ಕೂಡ ಫಿಕ್ಸೆಡ್ ಡೆಪಾಸಿಟ್ (Fixed Deposit) ಸ್ಕೀಮ್ಸ್ ಹೊಂದಿವೆ. ಪೋಸ್ಟ್ ಆಫೀಸ್​ಗಳಲ್ಲೂ (Post Office) ಫಿಕ್ಸೆಡ್ ಡೆಪಾಸಿಟ್ ರೀತಿಯ ಟೈಮ್ ಡೆಪಾಸಿಟ್ ಪ್ಲಾನ್​ಗಳಿವೆ. ನಿಶ್ಚಿತ ಠೇವಣಿಯಲ್ಲಿ ಹೂಡಿಕೆ ಮಾಡಲು ಬಯಸುವ ಮಂದಿಗೆ ಈ ನಾನಾ ಆಯ್ಕೆಗಳಿವೆ. ಆದರೆ, ಯಾವುದು ಉತ್ತಮ? ಬ್ಯಾಂಕ್ ಎಫ್​ಡಿಗಿಂತ ಪೋಸ್ಟ್ ಆಫೀಸ್​ನಲ್ಲಿ ಹೆಚ್ಚು ಬಡ್ಡಿ ಪ್ರಮುಖ…

Read More

ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ: ಕೊಲೆ ಮಾಡುವಷ್ಟು ಆಗಿದ್ದೇನು?

ಶಿವಮೊಗ್ಗ, ಏಪ್ರಿಲ್​​ 02: ಹಣಕಾಸಿನ ವಿಚಾರಕ್ಕೆ ಹೋಟೆಲ್​ ಮಾಲೀಕನಿಂದಲೇ ಕಾರ್ಮಿಕನ ಹತ್ಯೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ನಡೆದಿದೆ. ಮಾಲೀಕ ಇಮ್ರಾನ್​​ನಿಂದ ಟಿಂಕು ಶರ್ಮಾ(30)ನ ಕೊಲೆ ಮಾಡಲಾಗಿದೆ. ಸದ್ಯ ಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್​ನನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು? ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ರೂಫ್ ಟಾಪ್ ಕೆಫೆಯಲ್ಲಿ ಬಿಹಾರ ಮೂಲದ ಟಿಂಕು ಶರ್ಮಾ ಕೆಲಸ ಮಾಡುತ್ತಿದ್ದ. ಹಣಕಾಸಿನ ವಿಚಾರಕ್ಕೆ ಮಾಲೀಕ…

Read More

Apply Now: ಕರ್ನಾಟಕ ಆರ್‌ಡಿಪಿಆರ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಮಾಸಿಕ 45,000 ರೂ. ವೇತನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಸಾರ್ವಜನಿಕ ಸೇವೆಯ ವೃತ್ತಿಜೀವನವನ್ನು ಬಯಸುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವೇತನ ಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ವಯೋಮಿತಿಯ…

Read More

Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಕಣ್ಣಿಗೆ ಕಾಣುವ ದೇವರು ಎಂದರೆ ತಾಯಿ (mother). ಆಕೆಯ ನಿಷ್ಕಲ್ಮಶ ಪ್ರೀತಿ, ಕಾಳಜಿಗೆ ಬೆಲೆ ಕಟ್ಟಲು ಆಗದು. ತನ್ನ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ತನ್ನ ನೋವು, ಕಷ್ಟಗಳನ್ನು ಬದಿಗಿರಿಸಿ ಅವರಿಗಾಗಿ ದುಡಿಯುತ್ತಾಳೆ. ಆದರೆ ಇಲ್ಲೊಬ್ಬ ತಾಯಿಯ ದೈಹಿಕ ಕೊರತೆಯೂ ಆಕೆಗೆ ತನ್ನ ಕಂದನ ಮೇಲಿನ ಪ್ರೀತಿ, ಕಾಳಜಿಯನ್ನು ಕಸಿದು ಕೊಂಡಿಲ್ಲ. ಕೈಗಳಿಲ್ಲದಿದ್ದರೂ ಪಕ್ಷಿಯಂತೆ ಬಾಯಿಂದಲೇ ತುತ್ತು ನೀಡಿದ್ದಾಳೆ. ಮಗನ ಮೇಲೆ ತಾಯಿ ಪ್ರೀತಿ ತೋರ್ಪಡಿಸಿದ ರೀತಿ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ. Whatsinthenews ಹೆಸರಿನ ಇನ್ಸ್ಟಾಗ್ರಾಮ್…

Read More

ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ: ಮುಂದಾಗಿದ್ದು ಘನಘೋರ!

ಚಾಮರಾಜನಗರ, (ಏಪ್ರಿಲ್ 02): ತಮ್ಮ ಮದುವೆಗೆ (marriage) ಪೋಷಕರ ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಪ್ರೇಮಿಗಳು (Lovers) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆಯ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನದಿಯಾ(19), ನಾಗೇಂದ್ರ(21) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮನೆಬಿಟ್ಟು ಹೋಗಿತ್ತು. ಹೀಗಾಗಿ ಇತ್ತ ಯುವತಿ ಕಡೆಯವರು ಮಿಸ್ಸಿಂಗ್ ದೂರು ನೀಡಿದ್ದಾರೆ. ಇದರಿದ ಹೆದರಿ ಪ್ರೇಮಿಗಳು ಜತೆಯಲ್ಲೇ ಸಾಯುಲು ನಿರ್ಧರಿಸಿ ನೇಣಿಗೆ ಶರಣಾಗಿದ್ದಾರೆ. ನಾಗೇಂದ್ರ ಹಾಗೂ ಪಾಲಾರ್ ಗ್ರಾಮದ ನದಿಯಾ…

Read More

ಮಕ್ಕಳಲ್ಲಿ ಆಟಿಸಂ ಇರುವುದನ್ನು ಕಂಡುಹಿಡಿಯುವುದು ಹೇಗೆ? ಲಕ್ಷಣಗಳು ಹೇಗಿರುತ್ತವೆ?

ಆಟಿಸಂ (Autism Spectrum Disorder) ಎನ್ನುವುದು ಮಕ್ಕಳ ವರ್ತನೆ ಮತ್ತು ಮೆದುಳಿನ ಬೆಳವಣಿಗೆಯನ್ನು ಪರಿಣಾಮಗೊಳಿಸುವ ಒಂದು ಸ್ಥಿತಿ. ಕೆಲವೊಮ್ಮೆ ಮಗುವಿಗೆ ಈ ಸಮಸ್ಯೆ ಇರುವುದನ್ನು ಪೋಷಕರು ಹಲವು ವರ್ಷಗಳ ನಂತರ ಗಮನಿಸಬಹುದು. ತಡವಾಗಿ ಗುರುತಿಸಿದರೆ ಸರಿಯಾದ ಚಿಕಿತ್ಸೆ ಪಡೆಯುವುದು ಕಷ್ಟವಾಗಬಹುದು. ಆದ್ದರಿಂದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಬಹಳ ಮುಖ್ಯ. ಅದಕ್ಕಾಗಿಯೇ ಪ್ರತಿ ವರ್ಷ ಏಪ್ರಿಲ್ 2ರಂದು ವಿಶ್ವ ಆಟಿಸಂ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಜನರಲ್ಲಿ ಆಟಿಸಂ ಬಗ್ಗೆ ಅರಿವು ಮೂಡಿಸುವುದೇ ಇದರ ಉದ್ದೇಶ. ಹಾಗಾಗಿ ಆಟಿಸಂ ಎಂದರೇನು,…

Read More

ಕಂಟೇನರ್​ಗೆ ಕಾರು ಡಿಕ್ಕಿ: ನವವಿವಾಹಿತೆ ಸೇರಿ ಇಬ್ಬರು ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ, ಏಪ್ರಿಲ್​ 02: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ದುರ್ಮರಣ (death) ಹೊಂದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು,  ರಕ್ಷಿತಾ ಪತಿ ರಾಜಶೇಖರರೆಡ್ಡಿ ಸ್ಥಿತಿ ಗಂಭೀರವಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ರಕ್ಷಿತಾ ರೆಡ್ಡಿ ಮತ್ತು ರಾಜಶೇಖರ ರೆಡ್ಡಿ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು….

Read More

Kitchen Tips: ಈ ಸಣ್ಣ ಅಡುಗೆ ಟ್ರಿಕ್ಸ್ ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತೆ

ಬೆಂಗಳೂರು (ಏ. 02): ದಿನನಿತ್ಯದ ಅಡುಗೆಮನೆಯಲ್ಲಿ (Kitchen), ರುಚಿಕರವಾದ ಆಹಾರವನ್ನು ತಯಾರಿಸಲು ಸಾಕಷ್ಟು ಶ್ರಮ, ಸಮಯ ಮತ್ತು ದುಬಾರಿ ಪದಾರ್ಥಗಳು ಬೇಕಾಗುತ್ತವೆ ಎಂದು ಅನೇಕರು ಭಾವಿಸುತ್ತಾರೆ. ಆದರೆ ಇದು ನಿಜವಲ್ಲ, ಕೆಲವೊಮ್ಮೆ ಸರಳ ಅಡುಗೆ ಸಲಹೆಗಳು ನಿಮ್ಮ ಆಹಾರದ ರುಚಿಯನ್ನು ಅದ್ಭುತವಾಗಿಸುತ್ತದೆ. ಸ್ವಲ್ಪ ಸಾಮಾನ್ಯ ಜ್ಞಾನ, ಸರಿಯಾದ ಸಮಯದಲ್ಲಿ ಸರಿಯಾದ ಪದಾರ್ಥಗಳನ್ನು ಬಳಸುವುದು ಮತ್ತು ಕೆಲವು ಸರಳ ತಂತ್ರಗಳನ್ನು ಅನುಸರಿಸುವುದರಿಂದ ರುಚಿಯಾದ ಅಡುಗೆ ಮಾಡಬಹುದು. ಈ ಲೇಖನದಲ್ಲಿ, ನಿಮ್ಮ ಆಹಾರದ ರುಚಿಯನ್ನು ಹೆಚ್ಚಿಸುವ ಐದು ಅಡುಗೆ ಸಲಹೆಗಳನ್ನು…

Read More