‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್ – Kannada News | Kangana Ranaut supports Ranveer Singh in Don 3 Controversy and talks about Pakistan Prem

ಬಾಲಿವುಡ್‌ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೊಮ್ಮೆ ತಮ್ಮ ನೇರ ನುಡಿಗಳಿಂದ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ‘ಡಾನ್ 3’ ವಿವಾದಕ್ಕೆ ಸಂಬಂಧಿಸಿದಂತೆ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಕಂಗನಾ ಆಕ್ರೋಶ ಹೊರಹಾಕಿದ್ದಾರೆ. ‘ಚಿತ್ರರಂಗದ ಕೆಲವರಿಗೆ ಪಾಕಿಸ್ತಾನದ ಮೇಲೆ ಅತಿಯಾದ ಪ್ರೇಮವಿದೆ, ಅದಕ್ಕಾಗಿಯೇ ದೇಶಪ್ರೇಮದ ಸಿನಿಮಾ ಮಾಡಿದವರನ್ನು ಇಲ್ಲಿ ಟಾರ್ಗೆಟ್ ಮಾಡಲಾಗುತ್ತದೆ’ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ತಿಂಗಳು ಫರ್ಹಾನ್ ಅಖ್ತರ್ ನಿರ್ದೇಶನದ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹೊರಬಂದಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ, FWICE (ಚಲನಚಿತ್ರ ಕಾರ್ಮಿಕರ ಒಕ್ಕೂಟ) ರಣವೀರ್ ವಿರುದ್ಧ ಅಸಹಕಾರದ ನಿರ್ದೇಶನವನ್ನು ಹೊರಡಿಸಿತ್ತು. ಈ ವಿಚಾರವಾಗಿ ರಣವೀರ್ ಪರವಾಗಿ ನಿಂತಿದ್ದ ಕಂಗನಾ, ಈಗ ಅದರ ಹಿಂದಿನ ಅಸಲಿ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ‘ನಮ್ಮ ಚಿತ್ರರಂಗದಲ್ಲಿ ಒಂದು ವರ್ಗಕ್ಕೆ ಪಾಕಿಸ್ತಾನದ ಮೇಲೆ ವಿಶೇಷ ಪ್ರೇಮವಿದೆ. ದಶಕಗಳಿಂದ ಬಾಲಿವುಡ್ ಸಿನಿಮಾಗಳು ನಮಗೆ ಪಾಕಿಸ್ತಾನದ ಬಗ್ಗೆ ಮೃದು ಧೋರಣೆ ಹೊಂದುವುದನ್ನೇ ಕಲಿಸುತ್ತಾ ಬಂದಿವೆ. ಆದರೆ ಯಾವಾಗ ರಣವೀರ್ ಸಿಂಗ್ ನಟನೆಯ ಧುರಂಧರ್ ರೀತಿಯ ಸಿನಿಮಾಗಳು ಪಾಕಿಸ್ತಾನದ ಅಸಲಿ ಮುಖವನ್ನು ಜಗತ್ತಿಗೆ ತೋರಿಸುತ್ತವೆಯೋ, ಆಗ ಇಲ್ಲಿನ ಕೆಲವರಿಗೆ ನೋವಾಗಲು ಶುರುವಾಗುತ್ತದೆ’ ಎಂದು ಕಿಡಿಕಾರಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 3000 ಕೋಟಿ ರೂಪಾಯಿಗಳಿಗೂ ಹೆಚ್ಚು ಗಳಿಕೆ ಮಾಡಿ ದಾಖಲೆ ನಿರ್ಮಿಸಿತ್ತು. ಈ ಚಿತ್ರದಲ್ಲಿ ರಣವೀರ್ ಅವರು ಭಾರತೀಯ ಗೂಡಾಚಾರಿಯಾಗಿ ಪಾಕಿಸ್ತಾನದ ಭಯೋತ್ಪಾದಕ ಜಾಲವನ್ನು ಧ್ವಂಸ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಯಶಸ್ಸಿನ ನಂತರವೇ ರಣವೀರ್ ಅವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂಬುದು ಕಂಗನಾ ಅವರ ವಾದ.

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ಸಿಕ್ಕ ಬಳಿಕವೂ ನನಗೆ ಕೆಲಸ ಸಿಗಲಿಲ್ಲ: ಸತ್ಯ ತೆರೆದಿಟ್ಟ ಕಂಗನಾ ರಣಾವತ್

‘ತಾವು ಇಷ್ಟು ವರ್ಷ ಮಾಡಿಕೊಂಡು ಬಂದ ಪಾಕಿಸ್ತಾನ ಪರವಾದ ಪ್ರಚಾರಕ್ಕೆ ಬೆಲೆ ಇಲ್ಲದಂತಾಯಿತೇ ಎಂಬ ಭಯ ಅವರಲ್ಲಿ ಮೂಡಿದೆ. ಹಾಗಾಗಿಯೇ ಧುರಂಧರ್ ಸಕ್ಸಸ್ ಬೆನ್ನಲ್ಲೇ ಇಂತಹ ವಿವಾದಗಳನ್ನು ಸೃಷ್ಟಿಸಲಾಗುತ್ತಿದೆ’ ಎಂದು ಕಂಗನಾ ಬಾಲಿವುಡ್‌ನ ಒಳಸಂಚಿನ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಬಾಲಿವುಡ್ ಮಂದಿ ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್, ಹೇಗಿದು? – Kannada News | Vijaypura Student gangadhar talks about first rank In KCET veterinary science

ಧಾರವಾಡ/ ವಿಜಯಪುರ, (ಜೂನ್ 12): ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) 2025-26ನೇ ಸಾಲಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಅರ್ಹತಾ ಪರೀಕ್ಷೆಯಲ್ಲಿ (KCET) ವಿಜಯಪುರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಗಂಗಾಧರ ಮುತ್ತಗಿಗೆ ವಿಶೇಷ ರ್ಯಾಕ್ ನೀಡಲಾಗಿದೆ.ಹೌದು..ಕೆಇಎ, ವೆಟರ್ನರಿ ವಿಭಾಗದಲ್ಲಿ ಗಂಗಾಧರಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಿದೆ. ಇತ್ತೀಚೆಗೆ ಪ್ರಕಟವಾದ ಕೆ-ಸಿಇಟಿ ಫಲಿತಾಂಶದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ಕೆಇಎ ಸ್ಪಾಟ್ ರ್‍ಯಾಂಕಿಂಗ್‌ ವ್ಯವಸ್ಥೆಯನ್ನು ಅಳವಡಿಸಿಕೊಂಡಿತ್ತು. ಅದರ ಆಧಾರದ ಮೇಲೆ ಗಂಗಾಧರ ಮುತ್ತಗಿ ವೆಟರ್ನರಿ ಸೈನ್ಸ್‌ನಲ್ಲಿ 0.5 ರ್‍ಯಾಂಕ್‌ ಹಾಗೂ ಬಿಎಸ್‌ಸಿ ಅಗ್ರಿಯಲ್ಲಿ 3.5 ರ್‍ಯಾಂಕ್‌ ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಗಂಗಾಧರ ಮುತ್ತಗಿ, ದ್ವಿತೀಯ ಪಿಯುಸಿ ಅಂಕ ಪಟ್ಟಿ ಸಲ್ಲಿಕೆ ಮಾಡಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ತಡವಾಗಿ ಅಂಕಪಟ್ಟಿ ಸಲ್ಲಿಕೆ ಹಿನ್ನೆಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗೆ ಅನ್ಯಾಯವಾಗದಂತೆ ಸ್ಪಾಟ್ ರ್‍ಯಾಂಕ್‌ ನೀಡಿದೆ. ಮೊದಲ ಸ್ಥಾನ ಪಡೆದ ವಿದ್ಯಾರ್ಥಿಕ್ಕಿಂತ ಹೆಚ್ಚು ಅಂಕ ಬಂದ ಹಿನ್ನೆಲೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್ ನೀಡಲಾಗಿದೆ.

ಇನ್ನು ಈ ಬಗ್ಗೆ ಟಿವಿ9 ಜತ ಗಂಗಾಧರ ಮಾತನಾಡಿದ್ದು, ನನಗೆ ಸ್ಪಾಟ್ ರ್‍ಯಾಂಕ್‌ ಬಂದಿದ್ದು ಖುಷಿಯಾಗಿದ್ದು, ಇದಕ್ಕೆ ಇದಕ್ಕೆ ಕಾರಣ ನನ್ನ ತಂದೆ-ತಾಯಿ.ನನ್ನ ತಂದೆ ನಿತ್ಯವೂ ದುಡಿಯಲು ಹೋಗುತ್ತಾರೆ. ನಾವು ತೀರಾನೇ ಬಡ ಕುಟುಂಬದವರು. ತಂದೆಯವರ ದುಡಿಮೆಯಿಂದಲೇ ಮನೆ ನಡೆಯಬೇಕು. ಈ ಸಾಧನೆಗೆ ಅವರೇ ಕಾರಣ. ನನ್ನ ಉಪನ್ಯಾಸಕರು ಕೂಡ ಚೆನ್ನಾಗಿ ಕಲಿಸಿದ್ದಾರೆ. ಸೆರಿಕಲ್ಚರ್ ಹಾಗೂ ಅಗ್ರಿಯಲ್ಲಿ 3.5 ಸ್ಪಾಟ್ ರ್‍ಯಾಂಕ್‌ ಬಂದಿದೆ. ಕೊಂಚ ತಾಂತ್ರಿಕ ಕಾರಣದಿಂದ ಫಲಿತಾಂಶ ಬಂದಿರಲಿಲ್ಲ ಇದೀಗ ಸ್ಪಾಟ್ ರ್‍ಯಾಂಕ್‌ ನೀಡಿದ್ದಾರೆ. ನಾನು ಮುಂದೆ ವೈದ್ಯನಾಗುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Source link

ಒಲಿಂಪಿಕ್ಸ್​ನಲ್ಲಿ ಚಿನ್ನ ಗೆಲ್ಲುವುದು ನನ್ನ ಗುರಿ; ಟಿವಿ9 ಜೊತೆ ಯುವ ಟೆನಿಸ್ ಆಟಗಾರ್ತಿ ಸೃಷ್ಟಿ ಕಿರಣ್ ಮಾತು – Kannada News | Shristi Kiran: Bengaluru’s 13 Year Old World No. 1 U13 Indian Tennis Star

ಭಾರತಕ್ಕೆ ಹೊಸ ಟೆನಿಸ್ ತಾರೆ ಸಿಕ್ಕಿದ್ದು, ಬೆಂಗಳೂರಿನ 13 ವರ್ಷದ ಸೃಷ್ಟಿ ಕಿರಣ್ 13 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವದ ನಂಬರ್ 1 ಶ್ರೇಯಾಂಕವನ್ನು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಸೃಷ್ಟಿ ಭಾರತೀಯ ಟೆನಿಸ್‌ನಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಂತರರಾಷ್ಟ್ರೀಯ ಜೂನಿಯರ್ ಟೆನಿಸ್ ಸರ್ಕ್ಯೂಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸೃಷ್ಟಿ, ಸತತ ಐದು ಐಟಿಎಫ್ ಜೂನಿಯರ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಗ್ವಾಟೆಮಾಲಾದಲ್ಲಿ ನಡೆದ ಐಟಿಎಫ್ ವರ್ಲ್ಡ್ ಟೆನಿಸ್ ಟೂರ್ ಜೂನಿಯರ್ಸ್ ಜೆ 100 ಪಂದ್ಯಾವಳಿಯ ಫೈನಲ್ ಕೂಡ ತಲುಪಿದ್ದರು.

ಇದೀಗ ಟಿವಿ9 ನ ಅಂಗಸಂಸ್ಥೆಯಾದ ನ್ಯೂಸ್ 9 ಜೊತೆಗೆ ಮಾತನಾಡಿರುವ ಸೃಷ್ಟಿ ಕಿರಣ್ ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಮನದಾಳ ತೆರೆದಿಟ್ಟಿದ್ದಾರೆ. ಮುಂದೆ ಯುರೋಪಿನಲ್ಲಿ ನಡೆಯುವ ಗ್ರಾಸ್ ಕೋರ್ಟ್​ ಪಂದ್ಯಾವಳಿ ಮೇಲೆ ಸೃಷ್ಟಿ ಕಣ್ಣಿಟ್ಟಿದ್ದಾರೆ. ಹಾಗೆಯೇ ಭವಿಷ್ಯದಲ್ಲಿ ದೇಶಕ್ಕಾಗಿ ಎಲ್ಲಾ ಗ್ರ್ಯಾಂಡ್​ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆಲ್ಲುವುದು ಮತ್ತು ಒಲಿಂಪಿಕ್ಸ್​ನಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದುಕೊಡುವುದು ನನ್ನ ಗುರಿ ಎಂದಿದ್ದಾರೆ.

Source link

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ – Kannada News | Deepfake Blackmail Case: Two Arrested for Extorting Girl’s Family in Chikkamagaluru

ಚಿಕ್ಕಮಗಳೂರು, ಜೂನ್​​ 12: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್ ಹಾಗೂ ಸಾಹುಲ್ ಎಂಬವರನ್ನು ಅರೆಸ್ಟ್​​ ಮಾಡಲಾಗಿದೆ.

ಯೋಗೇಶ್​​ ಎಂಬ ಹೆಸರಲ್ಲಿ ಬ್ಲ್ಯಾಕ್​​ಮೇಲ್​

ಬಾವಿಕೆರೆ ಗ್ರಾಮದ 25 ವರ್ಷದ ಯುವತಿಯ ಪೋಟೋವನ್ನ ಫೇಸ್ಬುಕ್​​ನಿಂದ ಪಡೆದುಕೊಂಡಿದ್ದ ಆರೋಪಿಗಳು ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿದ್ದರು. ಆ ಬಳಿಕ ಯುವತಿಯ ತಾಯಿಗೆ ಬೆಂಗಳೂರು ಮೂಲದ ಯೋಗೇಶ್ ಎಂಬ ಹೆಸರಿನಲ್ಲಿ ಪದೇಪದೇ ಕರೆ ಮಾಡಿ ಹಣ ಕೇಳಿದ್ದರು. ಆರೋಪಿಗಳು ನಿರಂತರ ಬ್ಲ್ಯಾಕ್​​ಮೇಲ್​​ ಮಾಡಲಾರಂಭಿಸಿದಾಗ ಯುವತಿ ಕಡೆಯವರು ಈ ಸಂಬಂಧ ಯೋಗೇಶ್​​ ಎಂಬ ಹೆಸರನ್ನೇ ಉಲ್ಲೇಖಿಸಿ ದೂರು ನೀಡಿದ್ದರು. ಆದರೆ ಪೊಲೀಸ್​​ ತನಿಖೆ ವೇಳೆ ಆರೋಪಿಗಳ ಕಳ್ಳಾಟ ಬಯಲಾಗಿದ್ದು, ಹಣಕ್ಕಾಗಿ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಅಸಲಿ ಆರೋಪಿಗಳು ಅದೇ ಬಾವಿಕೆರೆ ಗ್ರಾಮದ ಸಾಹುಲ್ ಮತ್ತು ಅಕ್ಷಯ್​​ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಮಧ್ಯರಾತ್ರಿ ಹುಡುಗಿಯರ ಹಾಸ್ಟೆಲ್​​ಗೆ ನುಗ್ಗಿದ ಯುವಕ; ಕಳ್ಳತನಕ್ಕೆಂದು ಹೋದವನೀಗ ಖಾಕಿ ಅತಿಥಿ!

ಇನ್ನು ಆರೋಪಿಗಳು ಮೈತುಂಬ ಸಾಲಮಾಡಿಕೊಂಡಿದ್ದರು. ಹೀಗಾಗಿ ಹೇಗಾದರೂ ಹಣ ಮಾಡಬೇಕೆಂಬ ಆಸೆಗೆ ಬಿದ್ದು ಈ ರೀತಿಯ ಕೆಲಸಕ್ಕೆ ಕೈಹಾಕಿದ್ದರು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದು, ಮಾಡಬಾರದ್ದು ಮಾಡಲು ಹೋದವರೀಗ ಜೈಲು ಸೇರಿದ್ದಾರೆ. ಒಳ್ಳೆ ಕೆಲಸಗಳಿಗೆ ಬಳಕೆಯಾಗಬೇಕಿದ್ದ ತಂತ್ರಜ್ಞಾನವನ್ನು ಇಂತಹ ಕೆಟ್ಟ ಕೆಲಸಕ್ಕೆ ಬಳಕೆ ಮಾಡಿಕೊಂಡು ಹಣ ಮಾಡಲು ಹೋದವರೀಗ ತಕ್ಕ ಶಾಸ್ತಿಯಾಗಿದೆ ಎಂಬ ಮಾತುಗಳು ಗ್ರಾಮದಲ್ಲಿ ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?

ತಮಿಳುನಾಡು ಸಿಎಂ ವಿಜಯ್ (Vijay) ಅವರು ಇಂದು (ಜೂನ್ 12) ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಆದ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುತ್ತಿರುವ ಮೂರನೇ ತಮಿಳುನಾಡು ಸಿಎಂ ಆಗಿದ್ದಾರೆ ವಿಜಯ್. ದಳಪತಿ ವಿಜಯ್ ಬರುತ್ತಿದ್ದ ಕಾರಣಕ್ಕೆ ಒಂದು ಗಂಟೆ ಕಾಲ ಇತರೆ ಭಕ್ತಾದಿಗಳಿಗೆ ದೇವಾಲಯದ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ವಿಜಯ್ ಅವರು ದೇವಾಲಯಕ್ಕೆ ಬಂದು ಮಾಡಿಸಿದ ಪೂಜೆಯ ಬಗ್ಗೆ ದೇವಾಲಯದ ಅರ್ಚಕರಾದ ನಿತ್ಯಾನಂದ ಅಡಿಗ ಅವರು ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅರ್ಚಕರು ಹೇಳಿರುವಂತೆ ವಿಜಯ್ ಅವರಿಗಾಗಿ ವಿಶೇಷ ಪೂಜೆಗಳನ್ನೇನೂ ಮಾಡಿಲ್ಲವಂತೆ ಬದಲಿಗೆ ಸಾಮಾನ್ಯ ಪೂಜೆಯನ್ನೇ ಮಾಡಲಾಗಿದೆಯಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಟ್ರಾವೆಲ್ ಮಾಡುವಾಗ ಮಲಬದ್ಧತೆ ಸಮಸ್ಯೆ ಕಂಡುಬರುತ್ತಾ? ಹಾಗಿದ್ರೆ ಈ ರೀತಿ ಮಾಡುವುದನ್ನು ಮರೆಯಬೇಡಿ – Kannada News | Travel Digestive Problems: Best Ways To Avoid Constipation

ಪ್ರಯಾಣ (Travel) ಮಾಡುವುದು ಎಲ್ಲರಿಗೂ ಇಷ್ಟ. ಆದರೆ ದೂರ ದೂರದ ಪ್ರಯಾಣ, ಆಹಾರದ ಬದಲಾವಣೆ, ನಿದ್ರೆಯ ಸಮಯದಲ್ಲಿ ವ್ಯತ್ಯಾಸ ಹಾಗೂ ನೀರಿನ ಕೊರತೆ ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಹಲವರಿಗೆ ಪ್ರಯಾಣದ ಸಮಯದಲ್ಲಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನೇ “ಟ್ರಾವೆಲ್ ಕಾಂಸ್ಟಿಪೇಶನ್” ಎಂದು ಕರೆಯಲಾಗುತ್ತದೆ. ಆರೋಗ್ಯ ತಜ್ಞರು ಹೇಳುವ ಪ್ರಕಾರ ಪ್ರಯಾಣದ ವೇಳೆ ದಿನಚರಿಯಲ್ಲಿ ಆಗುವಂತಹ ಬದಲಾವಣೆಗಳಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತದೆ. ಇದರಿಂದ ಪ್ರವಾಸ ಮಾಡುವಾಗ ಇರಬೇಕಾದ ಸಂತೋಷ, ಉತ್ಸಾಹ ಎಲ್ಲವೂ ಕಡಿಮೆಯಾಗಬಹುದು. ಅದಕ್ಕಾಗಿಯೇ ಅತಿಯಾಗಿ ಪ್ರಯಾಣ ಮಾಡುವವರು ಮತ್ತು ಟ್ರಿಪ್ ಹೋಗುವ ಸಮಯದಲ್ಲಿ ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವವರು, ಈ ರೀತಿ ಸಮಸ್ಯೆ ಕಂಡುಬರುವುದಕ್ಕೆ ಕಾರಣವೇನು, ಇದನ್ನು ತಡೆಗಟ್ಟಲು ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಪ್ರಯಾಣದ ವೇಳೆ ಮಲಬದ್ಧತೆ ಏಕೆ ಕಂಡುಬರುತ್ತದೆ?

ನೀರಿನ ಕೊರತೆ: ಗಂಟೆಗಳ ಕಾಲ ಬಸ್, ಕಾರು ಅಥವಾ ವಿಮಾನದಲ್ಲಿ ಪ್ರಯಾಣಿಸುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಇದರಿಂದ ಮಲ ಗಟ್ಟಿಯಾಗಿ ಹೊರಬರಲು ಕಷ್ಟವಾಗುತ್ತದೆ.

ದೈಹಿಕ ಚಟುವಟಿಕೆ ಕಡಿಮೆಯಾಗುವುದು: ಒಂದೇ ಜಾಗದಲ್ಲಿ ಹೆಚ್ಚು ಹೊತ್ತು ಕುಳಿತುಕೊಳ್ಳುವುದರಿಂದ ಹೆಚ್ಚಾಗಿ ದೈಹಿಕ ಚಟುವಟಿಕೆ ಇರುವುದಿಲ್ಲ. ಇದರಿಂದ ಮಲಬದ್ಧತೆ ಸಮಸ್ಯೆ ಕಂಡುಬರಬಹುದು.

ಆಹಾರ ಪದ್ಧತಿಯಲ್ಲಿ ಬದಲಾವಣೆ: ಪ್ರಯಾಣದ ವೇಳೆ ಹೊರಗಿನ ಆಹಾರ, ಫಾಸ್ಟ್ ಫುಡ್ ಅಥವಾ ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು ಜೀರ್ಣಕ್ರಿಯೆಯನ್ನು ಹಾಳು ಮಾಡಬಹುದು.

ಮಲವಿಸರ್ಜನೆಗೆ ಹೋಗದಿರುವುದು: ಸರಿಯಾದ ಟಾಯ್ಲೆಟ್ ಸೌಲಭ್ಯ ಇಲ್ಲದಿರುವುದು ಅಥವಾ ಹೊಸ ಸ್ಥಳದಲ್ಲಿ ಅಸೌಕರ್ಯ ಅನುಭವಿಸುವುದರಿಂದ ಹಲವರು ಮಲವಿಸರ್ಜನೆಯನ್ನು ತಡೆಹಿಡಿಯುತ್ತಾರೆ. ಇದು ಮಲಬದ್ಧತೆಗೆ ಪ್ರಮುಖ ಕಾರಣ.

ಲಕ್ಷಣಗಳು ಹೇಗಿರುತ್ತವೆ?

  • ವಾರದಲ್ಲಿ ತುಂಬಾ ಕಡಿಮೆ ಬಾರಿ ಮಲವಿಸರ್ಜನೆ ಆಗುವುದು
  • ಮಲ ಗಟ್ಟಿಯಾಗಿ ಹೊರಬರುವುದು
  • ಹೊಟ್ಟೆ ಉಬ್ಬರ ಮತ್ತು ನೋವು
  • ಮಲವಿಸರ್ಜನೆ ವೇಳೆ ಹೆಚ್ಚು ಒತ್ತಡ ಹಾಕಬೇಕಾಗುವುದು
  • ಹೊಟ್ಟೆ ಸಂಪೂರ್ಣ ಖಾಲಿಯಾಗದ ಭಾವನೆ

ಇದನ್ನೂ ಓದಿ: ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ವೈದ್ಯರು ಹೇಳುವ ಈ ಸರಳ ಸಲಹೆಗಳನ್ನು ಪಾಲಿಸಿ

ಈ ಸರಳ ಸಲಹೆಗಳನ್ನು ಅನುಸರಿಸಿ:

ಸಾಕಷ್ಟು ನೀರು ಕುಡಿಯಿರಿ: ಪ್ರಯಾಣದ ವೇಳೆ ಹೆಚ್ಚು ನೀರು ಹಾಗೂ ದ್ರವ ಪದಾರ್ಥಗಳನ್ನು ಸೇವಿಸುವುದು ಮುಖ್ಯ.

ಫೈಬರ್ ಅಂಶವಿರುವ ಆಹಾರ ಸೇವಿಸಿ: ಹಣ್ಣು, ತರಕಾರಿ, ಧಾನ್ಯಗಳು ಹಾಗೂ ನಟ್ಸ್‌ಗಳಲ್ಲಿ ಇರುವ ಫೈಬರ್ ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ.

ಬಿಡುವಿದ್ದಾಗ ವಾಕಿಂಗ್ ಮಾಡಿ: ದೀರ್ಘ ಪ್ರಯಾಣದ ವೇಳೆ ಸ್ವಲ್ಪ ಹೊತ್ತು ನಡೆದು ದೇಹಕ್ಕೆ ಚಲನೆ ನೀಡುವುದು ಒಳ್ಳೆಯದು.

ಸಮಯಕ್ಕೆ ಸರಿಯಾಗಿ ಊಟ ಮಾಡಿ: ಸರಿಯಾದ ಸಮಯದಲ್ಲಿ ಊಟ ಮಾಡದಿದ್ದಾಗ ಇದು ಜೀರ್ಣಕ್ರಿಯೆ ಸಮಸ್ಯೆ ಹೆಚ್ಚಿಸುತ್ತದೆ.

ಮಲವಿಸರ್ಜನೆಯನ್ನು ತಡೆಯಬೇಡಿ: ಅವಶ್ಯಕತೆ ಬಂದಾಗ ತಕ್ಷಣ ಟಾಯ್ಲೆಟ್‌ಗೆ ಹೋಗುವ ಅಭ್ಯಾಸ ಮಾಡಿಕೊಳ್ಳಿ.

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಪ್ರಯಾಣ ಮುಗಿದ ನಂತರವೂ ಮಲಬದ್ಧತೆ ಕಡಿಮೆಯಾಗದಿದ್ದರೆ ಅಥವಾ ಹೊಟ್ಟೆ ನೋವು, ವಾಂತಿ, ಮಲದಲ್ಲಿ ರಕ್ತ, ತೂಕ ಏಕಾಏಕಿ ಕಡಿಮೆಯಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ, ಅಭಿಷೇಕ್ ಅಲ್ಲ; ಟಿಎಂಸಿ ಬಂಡಾಯದ ನಡುವೆ ಶತ್ರುಘ್ನ ಸಿನ್ಹಾ ಹೇಳಿಕೆ – Kannada News | Only Mamata Banerjee is my leader not Abhishek Banerjee Shatrughan Sinha amid TMC Rebel Crisis

ಕೊಲ್ಕತ್ತಾ, ಜೂನ್ 12: ಸಂಸತ್ತಿನಲ್ಲಿ ಪ್ರತ್ಯೇಕ ಬಣ ರಚಿಸಲು ಮುಂದಾಗಿರುವ ಟಿಎಂಸಿಯ 19 ಬಂಡಾಯ ಸಂಸದರ ಪಟ್ಟಿಯಲ್ಲಿ ತಮ್ಮ ಹೆಸರು ಕೇಳಿಬಂದ ಮರುದಿನವೇ, ತೃಣಮೂಲ ಕಾಂಗ್ರೆಸ್ (TMC) ಸಂಸದ ಶತ್ರುಘ್ನ ಸಿನ್ಹಾ ತಮ್ಮ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ನಿಷ್ಠೆಯನ್ನು ಪುನರುಚ್ಚರಿಸಿದ್ದಾರೆ. ಕಷ್ಟದ ಸಮಯದಲ್ಲಿ ನಾನು ಎಂದಿಗೂ ಮಮತಾ ಬ್ಯಾನರ್ಜಿ ಅವರ ಕೈ ಬಿಡುವುದಿಲ್ಲ. ನಾನು ಸಂಕಷ್ಟದಲ್ಲಿದ್ದಾಗ ಮಮತಾ ಸಹಾಯ ಮಾಡಿದ್ದಾರೆ. ಈಗ ನನ್ನ ಸರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅಭಿಷೇಕ್ ಬ್ಯಾನರ್ಜಿ ಆಗಲಿ ಅಥವಾ ಬೇರೆ ಯಾರೇ ಆಗಲಿ ನನ್ನ ನಾಯಕರಲ್ಲ. ಮಮತಾ ಬ್ಯಾನರ್ಜಿ ಮಾತ್ರ ನಮ್ಮ ನಾಯಕಿ” ಎಂದು ಹೇಳಿರುವ ಶತ್ರುಘ್ನ ಸಿನ್ಹಾ ತಾವು ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲೇ ಕೆಲಸ ಮುಂದುವರಿಸುವುದಾಗಿ ಶಪಥ ಮಾಡಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಮತ್ತೊಂದು ಆಘಾತ; ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಇದೇ ವೇಳೆ ಯಾರ ಹೆಸರನ್ನೂ ಉಲ್ಲೇಖಿಸದೆ ಮಾತನಾಡಿದ ಶತ್ರುಘ್ನ ಸಿನ್ಹಾ, ನನಗೆ ಬಿಜೆಪಿಯಲ್ಲಿ ಹಲವು ಸ್ನೇಹಿತರಿದ್ದಾರೆ. ಅವರು ನನಗೆ ಏನನ್ನಾದರೂ ಆಫರ್ ಮಾಡಿದ್ದರೆ ಅದು ಒಳ್ಳೆಯ ಉದ್ದೇಶದಿಂದಲೇ ಇರಬಹುದು.ಆದರೆ ನನಗೆ ಮಮತಾ ಬ್ಯಾನರ್ಜಿ ಅವರೊಂದಿಗೆ ಇರುವುದೇ ಅತ್ಯಂತ ಸೂಕ್ತವಾದುದು ಎಂದು ಒಪ್ಪಿಕೊಂಡಿದ್ದಾರೆ.

ಟಿಎಂಸಿ ಎದುರಿಸುತ್ತಿರುವ ಈ ಪ್ರಸ್ತುತ ಬಿಕ್ಕಟ್ಟಿನ ಸಮಯದಲ್ಲಿ ತಾವು ಪಕ್ಷ ಬದಲಾಯಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಶತ್ರುಘ್ನ ಸಿನ್ಹಾ ಒತ್ತಿ ಹೇಳಿದ್ದಾರೆ. “ನಾನು ಯಾವಾಗಲೂ ಮಮತಾ ಬ್ಯಾನರ್ಜಿ ಅವರೊಂದಿಗೆ ಇರುತ್ತೇನೆ. ನಾನು ಒಬ್ಬನೇ ಉಳಿದರೂ ‘ಏಕ್ಲಾ ಚಲೋ’ ಎನ್ನುತ್ತಾ ಅವರೊಂದಿಗೇ ಇರುತ್ತೇನೆ. ಸದ್ಯಕ್ಕೆ ನಾನು ಎಲ್ಲಿಗೂ ಹೋಗುವ ಆಲೋಚನೆ ಮಾಡಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ನಾನು ಬೇಕಾ, ಅಭಿಷೇಕ್ ಬ್ಯಾನರ್ಜಿ ಬೇಕಾ ನಿರ್ಧರಿಸಿ; ಮಮತಾಗೆ ಟಿಎಂಸಿ ನಾಯಕ ಕಲ್ಯಾಣ್ ಬ್ಯಾನರ್ಜಿ ಸವಾಲು

ಮಮತಾ ಬ್ಯಾನರ್ಜಿ ಅವರ ರಾಜಕೀಯ ಉತ್ತರಾಧಿಕಾರಿ ಎಂದೇ ವ್ಯಾಪಕವಾಗಿ ಬಿಂಬಿತವಾಗಿರುವ ಅಭಿಷೇಕ್ ಬ್ಯಾನರ್ಜಿ ಅವರೇ ಪಕ್ಷದ ನಾಯಕತ್ವದ ಶೈಲಿಯನ್ನು ಪ್ರಶ್ನಿಸುತ್ತಿರುವ ಅತೃಪ್ತ ನಾಯಕರ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಇತ್ತೀಚೆಗಷ್ಟೇ ಕಾಕೋಲಿ ಘೋಷ್ ದಸ್ತಿದಾರ್ ನೇತೃತ್ವದ 19 ಅತೃಪ್ತ ಟಿಎಂಸಿ ಸಂಸದರ ಗುಂಪೊಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು, ತಾವು ಸಂಸತ್ತಿನಲ್ಲಿ ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುವುದಾಗಿ ಮತ್ತು ಬಿಜೆಪಿಯನ್ನು ಬೆಂಬಲಿಸುವುದಾಗಿ ತಿಳಿಸಿ ಮಮತಾ ಬ್ಯಾನರ್ಜಿಗೆ ದೊಡ್ಡ ಆಘಾತ ನೀಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಡುವೆ, ಶತ್ರುಘ್ನ ಸಿನ್ಹಾ ಅವರು ತಾವು ಬಂಡಾಯ ಬಣದಲ್ಲಿಲ್ಲ, ಮಮತಾ ಬ್ಯಾನರ್ಜಿ ಅವರ ಪರವಾಗಿಯೇ ಇರುವುದಾಗಿ ಪ್ರಕಟಿಸಿರುವುದು ಮಮತಾ ಬ್ಯಾನರ್ಜಿ ಅವರಿಗೆ ಸ್ವಲ್ಪ ನಿರಾಳತೆ ತಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್​​​​ನ ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು! – Kannada News | NCLT Bengaluru Declares Congress MLC Naseer Ahmed Bankrupt Over RS 1,454 Crore Personal Guarantee Dues, so he Faces Disqualification

ಬೆಂಗಳೂರು, (ಜೂನ್ 12): ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್‌ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್  (Congress MLC Naseer Ahmed  )ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್ 8ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ NCLT, ಇಂದು (ಜೂನ್ 12) ಈ ಆದೇಶವನ್ನು ನೀಡಿದೆ. ಹೀಗಾಗಿ ಎಂಎಲ್​​​ಸಿ ಸ್ಥಾನದಿಂದ ಅನರ್ಹಗೊಳ್ಳುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Source link

‘ಕರುಪ್ಪು’ ಸೂಪರ್ ಹಿಟ್ ಆದರೆ ಹಣ ಬಂದಿಲ್ಲವೆಂದ ಫೈನ್ಯಾನ್ಶಿಯರ್, ನಿರ್ದೇಶಕನ ಮೇಲೆ ಆಕ್ರೋಶ – Kannada News | Financier said Karuppu movie became super hit but he did not get money

ತಮಿಳು ಸ್ಟಾರ್ ನಟ ಸೂರ್ಯ (Suriya) ಅವರ ಇತ್ತೀಚಿನ ಚಿತ್ರ ‘ಕರುಪ್ಪು’ ಸೂಪರ್ ಹಿಟ್ ಎನಿಸಿಕೊಂಡಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 350 ಕೋಟಿಗೂ ಹೆಚ್ಚು ಮೊತ್ತ ಕಲೆ ಹಾಕಿದೆ ಎನ್ನಲಾಗುತ್ತಿದೆ. ನಿರ್ದೇಶಕ ಆರ್ ಬಾಲಾಜಿಯಂತೂ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದಾರೆ. ನಟ ಸೂರ್ಯ ಅವರು, ಬಾಲಾಜಿಗೆ ಐಶಾರಾಮಿ ಕಾರೊಂದನ್ನು ಉಡುಗೊರೆಯಾಗಿ ಸಹ ನೀಡಿದ್ದಾರೆ. ಸಿನಿಮಾ ಹಿಟ್ ಎಂದು ನಿರ್ದೇಶಕ, ನಟ ಹೇಳುತ್ತಿರುವಾಗಲೇ ಆ ಸಿನಿಮಾಕ್ಕೆ ಫೈನ್ಯಾನ್ಸ್ ಮಾಡಿದ ವ್ಯಕ್ತಿಯೊಬ್ಬರು ಸಂದರ್ಶನವೊಂದರಲ್ಲಿ ಮಾತನಾಡಿದ್ದು, ತಾವು ಹಾಕಿದ ಬಂಡವಾಳದ 50% ಮಾತ್ರವೆ ಮರಳಿ ಬಂದಿದೆ ಎಂದಿದ್ದಾರೆ. ಆ ಮೂಲಕ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಸುದ್ದಿಯ ಬಗ್ಗೆ ಅನುಮಾನ ಮೂಡುವಂತೆ ಮಾಡಿದ್ದಾರೆ.

ತಮಿಳು ಚಿತ್ರರಂಗದ ಹಿರಿಯ ಫೈನಾನ್ಸಿಯರ್ ಮತ್ತು ವಿತರಕ ತಿರುಪುರ್ ಸುಬ್ರಮಣಿಯಂ ಸಂದರ್ಶನವೊಂದರಲ್ಲಿ ಮಾತನಾಡಿ, ತಾವು ಸಹ ‘ಕರಪ್ಪು’ ಸಿನಿಮಾದ ಮೇಲೆ ಹೂಡಿಕೆ ಮಾಡಿದ್ದು, ತಾವು ಹೂಡಿಕೆ ಮಾಡಿದ ಹಣದಲ್ಲಿ ಕೇವಲ ಅರ್ಧದಷ್ಟು ಮಾತ್ರ ವಾಪಸ್ ಬಂದಿದೆ ಎಂದಿದ್ದಾರೆ. ಅಲ್ಲದೆ, ಸಂದರ್ಶನದಲ್ಲಿ ಸಿನಿಮಾದ ನಿರ್ದೇಶಕ ಆರ್​​ಜೆ ಬಾಲಾಜಿ ವಿರುದ್ಧ ಆಕ್ರೋಶ ಮತ್ತು ಅಸಮಾಧಾನವನ್ನು ಸಹ ಹೊರ ಹಾಕಿದ್ದಾರೆ.

‘ಕರುಪ್ಪು’ ಸಿನಿಮಾ ಬಿಡುಗಡೆಗೆ ಅಡೆ-ತಡೆ ಎದುರಾಗಿತ್ತು. ನಿಗದಿತ ದಿನಾಂಕದಂದು ಸಿನಿಮಾ ಬಿಡುಗಡೆ ಆಗಲಿಲ್ಲ. ಆ ದಿನ ಕಾರಲ್ಲಿ ಕೂತು ವಿಡಿಯೋ ಮಾಡಿದ್ದ ನಿರ್ದೇಶಕ ಬಾಲಾಜಿ, ಕಣ್ಣೀರು ಹಾಕಿದ್ದರು. ಈ ಬಗ್ಗೆ ತಿರುಪುರ್ ಸುಬ್ರಹ್ಮಣಿಯಂ ಅವರು ಟೀಕೆ ಮಾಡಿದ್ದು, ಶ್ರೀ ಶಕ್ತಿ ಸಿನೆಮಾಸ್ ಯೂಟ್ಯೂಬ್ ಚಾನೆಲ್‌ನಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿರುವ ಅವರು, ‘ಬಿಡುಗಡೆಗೆ ಎರಡು ದಿನಗಳ ಮೊದಲು ನಾವು ಎದುರಿಸಿದ ಸಮಸ್ಯೆಗಳ ಬಗ್ಗೆ ನಮಗೆ ತಿಳಿದಿದೆ. ನಿರ್ದೇಶಕರು ನಮ್ಮೊಂದಿಗೆ ಬಂದು ಆ ಸಮಸ್ಯೆಗಳನ್ನು ಎದುರಿಸಬೇಕಿತ್ತು, ಆದರೆ ಅವರು ಅದಕ್ಕೆ ಬದಲಾಗಿ ಕಾರಿನಲ್ಲಿ ಕುಳಿತು ಅಳುತ್ತಿರುವ ವಿಡಿಯೋ ಮಾಡಿಕೊಂಡರು. ಈಗ ಸಿನಿಮಾ ಹಿಟ್ ಆಗಿದೆ ಎಂದು ನಿರ್ದೇಶಕರು ಬೀಗುತ್ತಿದ್ದಾರೆ. ಆದರೆ, ಸಿನಿಮಾ ತೆರೆ ಕಾಣಲು ನಟ ಸೂರ್ಯ ಮಾತ್ರ ಮುಂದೆ ಬಂದು ಸಹಾಯ ಮಾಡಿದರು. ಸೂರ್ಯ ಅವರನ್ನು ಬಿಟ್ಟರೆ, ಸಮಸ್ಯೆಯನ್ನು ಬಗೆಹರಿಸಲು ಬೇರೆ ಯಾರೂ ಮುಂದೆ ಬರಲಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಬಾಲಿವುಡ್​​ನ ಸೀಕ್ವೆಲ್ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಕತ್ರಿನಾ ಕೈಫ್ ರೆಡಿ?

‘ಈ ಚಿತ್ರವು 2025ರ ದೀಪಾವಳಿಗೆ ಬಿಡುಗಡೆಯಾಗಬೇಕಿತ್ತು, ಆದರೆ ಎಂಟು ತಿಂಗಳ ನಂತರ ಬಿಡುಗಡೆಯಾಯಿತು. ₹30-40 ಕೋಟಿ ಬಜೆಟ್ ಎಂದು ಹೇಳುತ್ತಾರೆ, ಅದು 45 ಕೋಟಿಯವರೆಗೆ ಹೋದರೆ ಪರವಾಗಿಲ್ಲ, ಆದರೆ ಅದು 80 ಕೋಟಿಗೆ ತಲುಪಿದರೆ ಏನು ಮಾಡಲು ಸಾಧ್ಯ? ಇದು ನಿರ್ಮಾಪಕರು ಮತ್ತು ಫೈನಾನ್ಸಿಯರ್‌ಗಳನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಈ ಚಿತ್ರದ ಬಿಡುಗಡೆಗಾಗಿ ನಾನು ನನ್ನ ಸ್ವಂತ ಹಣವನ್ನು ಹೂಡಿಕೆ ಮಾಡಿದ್ದೆ. ಅದರಲ್ಲಿ ನನಗೆ ಸಿಕ್ಕಿದ್ದು ಕೇವಲ 50 ಪ್ರತಿಶತ ಮಾತ್ರ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕರುಪ್ಪು’ ಚಿತ್ರವು ಮೂಲತಃ ಮೇ 14 ರಂದು ಬಿಡುಗಡೆಯಾಗಬೇಕಿತ್ತು ಮತ್ತು ಮುಖ್ಯಮಂತ್ರಿ ವಿಜಯ್ ಅವರು ಬೆಳಿಗ್ಗೆ 9 ಗಂಟೆಯ ಪ್ರದರ್ಶನಕ್ಕೆ ಅನುಮೋದನೆ ನೀಡಿದ್ದರು. ಆದರೆ, ಕೊನೆಯ ನಿಮಿಷದಲ್ಲಿ ಪ್ರದರ್ಶನಗಳನ್ನು ರದ್ದುಗೊಳಿಸಲಾಯಿತು. ರಾಜ್ಯದಾದ್ಯಂತ ಚಿತ್ರಮಂದಿರಗಳು “ಅನಿವಾರ್ಯ ಕಾರಣಗಳು” ಮತ್ತು “ಆರ್ಥಿಕ ಕಾರಣಗಳಿಂದಾಗಿ” ಪ್ರದರ್ಶನಗಳನ್ನು ರದ್ದುಗೊಳಿಸುತ್ತಿರುವುದಾಗಿ ಘೋಷಿಸಿದ್ದವು. ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆಯು ನೀಡಬೇಕಿದ್ದ 10 ಕೋಟಿ ಬಾಕಿ ಪಾವತಿಯಾಗದಿದ್ದೇ ಈ ವಿಳಂಬಕ್ಕೆ ಕಾರಣವಾಗಿತ್ತು. ತಮಿಳು ಚಿತ್ರರಂಗದಲ್ಲಿ, ಬಾಕಿ ಹಣ ಪಾವತಿಯಾಗುವವರೆಗೆ ವಿತರಕರು ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅಗತ್ಯವಾದ ಡಿಜಿಟಲ್ ಕೀಯನ್ನು (KDM) ತಡೆಹಿಡಿಯುವುದು ಸಾಮಾನ್ಯ. ಅಂತಿಮವಾಗಿ ಮೇ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರವು, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಪಡೆಯಿತು. ಸಿನಿಮಾ ಒಳ್ಳೆಯ ಗಳಿಕೆ ಮಾಡಿದೆ ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

Source link

Exit mobile version