Headlines

ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಪೆಟ್ರೋಲ್ ಬಂಕ್​ನತ್ತ ಸುಳಿಯದ ವಾಹನ ಸವಾರರು

ರಾಯಚೂರು, ಮಾರ್ಚ್ 27: ನಯಾರಾ ಕಂಪನಿಯ ಪೆಟ್ರೋಲ್ ಬಂಕ್‌ಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದರಿಂದ ಇದೀಗ ಆ ಕಂಪನಿ ಬಂಕ್​ಗಳತ್ತ ಗ್ರಾಹಕರೇ ಸುಳಿಯುತ್ತಿಲ್ಲ. ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 5 ರೂ. ಮತ್ತು ಡೀಸೆಲ್ ಮೇಲೆ 3 ರೂ. ಏರಿಕೆಯಾಗಿದೆ. ಈ ಏಕಾಏಕಿ ದರ ಹೆಚ್ಚಳದಿಂದಾಗಿ ಬೈಕ್ ಸವಾರರು ನಯಾರಾ ಪೆಟ್ರೋಲ್ ಬಂಕ್‌ಗಳಿಂದ ದೂರ ಸರಿಯುತ್ತಿದ್ದಾರೆ. ಬಂಕ್‌ನತ್ತ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯ ನಯಾರಾ ಪೆಟ್ರೋಲ್ ಬಂಕ್‌ಗಳಿಗೆ ಹೆದ್ದಾರಿ ಮಾರ್ಗವಾಗಿ ಹೋಗುವವರು ಮಾತ್ರ ಭೇಟಿ…

Read More

ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ನವದೆಹಲಿ, ಏಪ್ರಿಲ್ 10: ಜಾಗತಿಕ ತುಮುಲಗಳು, ಬಿಕ್ಕಟ್ಟುಗಳ ಮಧ್ಯೆ ಭಾರತದ ಆರ್ಥಿಕತೆ (Indian Economy) ಉತ್ತಮ ಬೆಳವಣಿಗೆ ದಾಖಲಿಸುವ ನಿರೀಕ್ಷೆ ಇದೆ. ಈ ವರ್ಷ ನಿರೀಕ್ಷಿತ ಅಭಿವೃದ್ಧಿ ಕಾಣದಿದ್ದರೂ ಒಟ್ಟಾರೆಯಾಗಿ ಸಮಾಧಾನಕರ ಬೆಳವಣಿಗೆ ಪಡೆಯಬಹುದು ಎಂದು ಅನೇಕ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್​ನ (ಎಡಿಬಿ) ಇತ್ತೀಚಿನ ವರದಿಯಲ್ಲಿ 2026 ಮತ್ತು 2027ರ ವರ್ಷಕ್ಕೆ ಭಾರತದ ಜಿಡಿಪಿ ಎಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ. ಏಪ್ರಿಲ್ ತಿಂಗಳ ಏಷ್ಯನ್ ಡೆವಲಪ್ಮೆಂಟ್ ಔಟ್​ಲುಕ್ (ಎಡಿಒ) ವರದಿ ಪ್ರಕಾರ, 2026ರ ಕ್ಯಾಲೆಂಡರ್…

Read More

ಸುದೀಪ್ ವ್ಯಂಗ್ಯವಾಗಿ ಹೇಳಿದ್ದನ್ನೇ ಇಟ್ಟುಕೊಂಡು ಬಡಾಯಿಕೊಚ್ಚಿಕೊಂಡ ಸತೀಶ್ – Kannada News | Bigg Boss Satish Misinterprets Sudeep’s Sarcasm, Continues Boasting

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (Bigg Boss) ಮೂರನೇ ವಾರವೇ ಹೊರ ಬಂದ ಸತೀಶ್ ಸದಾ ಸುದ್ದಿಯಲ್ಲಿರೋ ಪ್ರಯತ್ನ ಮಾಡುತ್ತಿದ್ದಾರೆ. ಬಡಾಯಿಕೊಚ್ಚಿಕೊಳ್ಳುವುದರಲ್ಲಿ ಅವರು ಮುಂದು. ಇದು ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಬಿಗ್ ಬಾಸ್ ಫಿನಾಲೆಯಲ್ಲಿ ಸುದೀಪ್ ಅವರು ಈ ವಿಷಯವನ್ನು ವ್ಯಂಗ್ಯವಾಗಿ ಹೇಳಿದ್ದರು. ಆದರೆ, ಸತೀಶ್ ಗಂಭೀರವಾಗಿ ಸ್ವಿಕರಿಸಿಬಿಟ್ಟಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡುವಾಗ ಅವರು ಒಂದಷ್ಟು ವಿಷಯ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಸುದೀಪ್ ಅವರು ವ್ಯಂಗ್ಯವಾಗಿ ಮಾತನಾಡಿದ್ದರು. ಸತೀಶ್…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ನೋಡಲೇಬೇಕಾದ ಸಿನಿಮಾಗಳು: ಪಟ್ಟಿ ಇಲ್ಲಿದೆ

ಯೂಟ್ಯೂಬ್​​​ನಲ್ಲಿ ‘ಅಮೃತಾಂಜನ್’ ಹೆಸರಿನಲ್ಲಿ ತಮಾಷೆಯ ವಿಡಿಯೋಗಳನ್ನು ಮಾಡುತ್ತಿದ್ದ ಯುವಕರ ತಂಡ, ‘ಅಮೃತ-ಅಂಜನ್’ ಹೆಸರಿನ ಹಾಸ್ಯಮಯ ಸಿನಿಮಾ ಮಾಡಿದ್ದು, ಸಿನಿಮಾಕ್ಕೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ದೊಡ್ಡ ಮಟ್ಟದ ಸದ್ದು, ಸುದ್ದಿ ಮಾಡಿದ್ದ ತಮಿಳು ಸಿನಿಮಾ ‘ತಾಯ್ ಕಳವಿ’, ಇತ್ತೀಚೆಗೆ ಬಿಡುಗಡೆ ಆದ ಒಳ್ಳೆಯ, ಯೋಚನೆಗೆ ಪ್ರೇರೇಪಿಸುವ ಸಿನಿಮಾ ಇದೆಂಬ ವಿಮರ್ಶೆ ಇದಕ್ಕೆ ಸಿಕ್ಕಿತ್ತು. ಇದೀಗ ಈ ಸಿನಿಮಾ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ….

Read More

ಶ್ರವಣ ದೋಷದಿಂದ ಬಳಲುತ್ತಿರುವ ಗಾಯಕಿ ಅಲ್ಕಾ ಯಾಗ್ನಿಕ್; ಇನ್ಮುಂದೆ ಹಾಡೋದು ಅನುಮಾನ

ಬಾಲಿವುಡ್‌ನ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ (Alka Yagnik) ಅವರ ಆರೋಗ್ಯದ ಬಗ್ಗೆ ಕಳವಳಕಾರಿ ಸುದ್ದಿ ಹೊರಬಿದ್ದಿದೆ. ಕಳೆದ ವರ್ಷ ತಮಗೆ ಅಪರೂಪದ ಶ್ರವಣ ದೋಷ (Sensory Neural Nerve Hearing Loss) ಇರುವುದಾಗಿ ಅವರು ಬಹಿರಂಗಪಡಿಸಿದ್ದರು. ಆತಂಕದ ವಿಚಾರ ಏನೆಂದರೆ, ಈಗಲೂ ಅವರು ಆ ಸಮಸ್ಯೆಯಿಂದ ಗುಣಮುಖರಾಗಿಲ್ಲ. ಈ ನೋವಿನ ಸುದ್ದಿಯನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ಇನ್ಮುಂದೆ ಅವರು ಹಾಡುವುದು ಕಷ್ಟ ಎಂಬಂತಾಗಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಅಲ್ಕಾ ಯಾಗ್ನಿಕ್ ಅವರು ತಮ್ಮ ಆರೋಗ್ಯದ ಬಗ್ಗೆ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…

Read More

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ – Kannada News | PM Narendra Modi addresses the concluding session of Viksit Bharat Young Leaders Dialogue 2026

ನವದೆಹಲಿ, ಜನವರಿ 12: ದೆಹಲಿಯಲ್ಲಿ “ಅಭಿವೃದ್ಧಿ ಹೊಂದಿದ ಭಾರತ- ಯುವ ನಾಯಕರ ಸಂವಾದ”ವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (PM Narendra Modi), ಯುವಕರಿಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಕಾರಗೊಳಿಸಲು ಮನವಿ ಮಾಡಿದರು. ಯುವಕರ ಯಶಸ್ಸು ದೇಶವನ್ನು ಉನ್ನತೀಕರಿಸುತ್ತದೆ. ಯುವಕರು ಮೊದಲು ರಾಷ್ಟ್ರದ ಪ್ರಜ್ಞೆಯನ್ನು ಹೊಂದಿರಬೇಕು. ಯುವಕರ ಶಕ್ತಿಯೇ ಭಾರತದ ಶಕ್ತಿಯಾಗುತ್ತದೆ. ಯುವಕರು ಎಂದಿಗೂ ಅಪಾಯಗಳನ್ನು ಅಥವಾ ಸವಾಲುಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ಸದಾ ನಿಮ್ಮೊಂದಿಗೆ ಇರುತ್ತದೆ ಎಂದು ಅವರು ಹೇಳಿದರು. “ಇಂದು ನೀವು ವಿಕಸಿತ…

Read More

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ – Kannada News | Wild elephant Stops Buses in Ambikanagar And bommanahalli Road at Uttara Kananda

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು,…

Read More

ಕೇಂದ್ರ ಸರ್ಕಾರವನ್ನ ಸಂಶಯಿಸುವ ಅಗತ್ಯವಿಲ್ಲ: ಗ್ಯಾಸ್ ಸಿಲಿಂಡರ್ ರಿಟ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಬೆಂಗಳೂರು, (ಮಾರ್ಚ್ 23): ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ (bangalore hotel association) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court)​ ಇತ್ಯರ್ಥಗೊಳಿಸಿದೆ. ಇಂದು (ಮಾರ್ಚ್ 23) ಹೋಟೆಲ್ ಅಸೋಸಿಯೇಷನ್​ ಹಾಗೂ ಕೇಂದ್ರ ಸರ್ಕಾರದ ಪರ ವಾದ ಆಲಿಸಿ ರಿಟ್ ಅರ್ಜಿ ಇತ್ಯರ್ಥಪಡಿಸಿದೆ. ಎಲ್‌ಪಿಜಿ ಪೂರೈಕೆ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರ ನೀಡಿರುವ ಹೇಳಿಕೆಯನ್ನು ಸಂಶಯಿಸುವ ಅಗತ್ಯವಿಲ್. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಯಾವುದೇ ನಿರ್ದೇಶನ…

Read More

ಮಂಗಳೂರು ನಗರಕ್ಕೇ ಎಂಟ್ರಿಕೊಟ್ಟ ಚಿರತೆ: ಕದ್ರಿ ಬಳಿ ಚಿರತೆ ಓಡಾಟದ ವಿಡಿಯೋ ವೈರಲ್

ಮಂಗಳೂರು, ಫೆಬ್ರವರಿ 25: ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಚಿರತೆ ಕಾಣಿಸಿಕೊಂಡ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಇದೀಗ ಮಂಗಳೂರು ನಗರಕ್ಕೇ ಚಿರತೆ ಎಂಟ್ರಿ ಕೊಟ್ಟಿದೆ. ಮಂಗಳೂರಿನ ಕದ್ರಿ ಡಾಕ್ಟರ್ಸ್ ಕಾಲೊನಿಯಲ್ಲಿ ಮಧ್ಯರಾತ್ರಿ ಚಿರತೆ ಒಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಎರಡು ವರ್ಷದ ಹಿಂದೆ ಇದೇ ಜಾಗದಲ್ಲಿ ಕಾಡುಕೋಣ ಪತ್ತೆಯಾಗಿತ್ತು. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More