ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು ಸಿಗ್ನಲ್​​​ ಬಗ್ಗೆ ಸಿದ್ದರಾಮಯ್ಯ ಅವರ ಸುಪುತ್ರ ಹೇಳಬೇಕು; ಕಮಿಷನ್ ಆಸೆಗಾಗಿ ಈ ವ್ಯವಸ್ಥೆ ಎಂದ ಪ್ರತಾಪ್ ಸಿಂಹ

ಮೈಸೂರು, ಮಾ.18: ನಗರದಲ್ಲಿ ನೂತನವಾಗಿ ಅಳವಡಿಸಲಾಗಿರುವ ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುಮಾರು 108 ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿದ್ದು, ಇದು ಅವೈಜ್ಞಾನಿಕವಾಗಿದೆ. ಕೇವಲ 1.5 ರಿಂದ 2 ಕಿಲೋಮೀಟರ್ ಅಂತರದಲ್ಲಿ 9-10 ಸಿಗ್ನಲ್‌ಗಳಿದ್ದು, ವಾಹನ ದಟ್ಟಣೆ ಇಲ್ಲದ ರಸ್ತೆಗಳಲ್ಲೂ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲ ಉಂಟುಮಾಡುತ್ತಿದೆ ಎಂದು ಅವರು ಹೇಳಿದ್ದಾರೆ. ರಿಂಗ್ ರೋಡ್‌ಗೆ ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವೇ ಹೊರತು ಸಿಗ್ನಲ್‌ಗಳಲ್ಲ ಎಂದು ಸಿಂಹ ಪ್ರತಿಪಾದಿಸಿದ್ದಾರೆ. ಅದೇ ರೀತಿ, ಮೈಸೂರಿನಾದ್ಯಂತ ಹೆಚ್ಚುತ್ತಿರುವ ಫ್ಲೆಕ್ಸ್ ಬೋರ್ಡ್‌ಗಳ ಬಗ್ಗೆಯೂ ಅವರು ಚಿಂತಿತರಾಗಿದ್ದಾರೆ. ರಾಜಕೀಯ ಪಕ್ಷಗಳು ತಮ್ಮ ಪ್ರಚಾರಕ್ಕಾಗಿ ನಗರವನ್ನು ಗಬ್ಬೆಬ್ಬಿಸುತ್ತಿವೆ ಎಂದು ಆರೋಪಿಸಿದ ಪ್ರತಾಪ್ ಸಿಂಹ, ಬದಲಿಗೆ ಸ್ಥಳೀಯ ಪತ್ರಿಕೆಗಳು ಮತ್ತು ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಮೈಸೂರನ್ನು ಫ್ಲೆಕ್ಸ್ ಮುಕ್ತ ನಗರವನ್ನಾಗಿ ಮಾಡುವಂತೆ ಅವರು ಜಿಲ್ಲಾಧಿಕಾರಿಗಳು ಮತ್ತು ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡಿಕೊಂಡಿದ್ದಾರೆ. ರಿಂಗ್ ರೋಡ್‌ಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಿಗ್ನಲ್‌ಗಳ ಬದಲು ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳು ಪರಿಹಾರವಾಗಿವೆ ಎಂದು ಸಿಂಹ ತಿಳಿಸಿದ್ದಾರೆ. ಸಂಸದರಾಗಿ ತಾವು ಈಗಾಗಲೇ ರಿಂಗ್ ರೋಡ್‌ಗೆ ಏಳು ಅಂಡರ್‌ಪಾಸ್ ಮತ್ತು ಓವರ್‌ಬ್ರಿಡ್ಜ್‌ಗಳಿಗೆ ಅನುಮೋದನೆ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ. ಬೆಳಗ್ಗೆ ಪೀಕ್ ಅವರ್ಸ್ ಹೊರತುಪಡಿಸಿ, ಹಗಲಿನ ಸಮಯದಲ್ಲಿ ಈ ಸಿಗ್ನಲ್‌ಗಳ ಅಗತ್ಯವಿಲ್ಲ. ಕಮಿಷನ್ ಆಸೆಗಾಗಿ ಸಿಕ್ಕ ಸಿಕ್ಕ ಜಾಗಗಳಲ್ಲೆಲ್ಲಾ ಸಿಗ್ನಲ್‌ಗಳನ್ನು ಅಳವಡಿಸಿರುವುದು ಜನರಿಗೆ ಅನಾನುಕೂಲವನ್ನುಂಟುಮಾಡುತ್ತಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಯುಗಾದಿಗೆ ಗಣೇಶ್ ಕಡೆಯಿಂದ ಸಿಗಲಿದೆ ದೊಡ್ಡ ಸರ್​ಪ್ರೈಸ್

ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ‘ಯುಗಾದಿ, ಹೊಸ ವರ್ಷ ಮಾತ್ರ ಅಲ್ಲ, ಹೊಸ ಟೈಟಲ್, ಹೊಸ ಸಂಚಲನ, ಹೊಸ ಸಿನಿಮಾ, ಹಲವು ತಿಂಗಳ ಪರಿಶ್ರಮ, ಅನೇಕ ಕನಸುಗಳ ಶ್ರಮ’ ಎಂದು ಕ್ಯಾಪ್ಶನ್ ಹಾಕಿದ್ದಾರೆ. ಈ ವಿಡಿಯೋದಲ್ಲಿ ಮಂಜು ಪಾವಗಡ ಟೈಟಲ್ ಹೇಳಿ ಅಂತ ದುಂಬಾಲು ಬೀಳ್ತಾರೆ. ಕೊನೆಗೆ ಗಣೇಶ್ ಬಳಿಯೂ ಬರ್ತಾರೆ. ಯುಗಾದಿಗೆ ಟೈಟಲ್ ಹೇಳೋದಾಗಿ ಅವರು ತಿಳಿಸ್ತಾರೆ. ಇದರಿಂದ ಯುಗಾದಿಗೆ ಸರ್​​ಪ್ರೈಸ್ ಸಿಗೋದು ಪಕ್ಕಾ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ನಿರ್ದೇಶಕ ಆದಿತ್ಯ ಧಾರ್ (Aditya Dhar) ಅವರು ಈಗ ಸುದ್ದಿಯಲ್ಲಿದ್ದಾರೆ. ಅವರ ನಿರ್ದೇಶನದ ‘ಧುರಂಧರ್’ ಸಿನಿಮಾ ಅದ್ಭುತ ಯಶಸ್ಸು ಕಂಡಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​​ನಲ್ಲಿ 1300 ಕೋಟಿ ರೂಪಾಯಿ ಗಳಿಕೆ ಮಾಡಿತು. ಈ ಮೂಲಕ ಹಲವು ದಾಖಲೆಗಳನ್ನು ಬರೆಯಿತು. ಹಿಂದಿ ಚಿತ್ರವೊಂದು ವಿಶ್ವ ಮಟ್ಟದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಸಿದ್ದು ಇದೇ ಮೊದಲು. ಇನ್ನು, ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಮಾಡಲು ರೆಡಿ ಆಗಿದೆ. ಈ ಮಧ್ಯೆ ಚಿತ್ರದ ನಿರ್ದೇಶಕ ಆದಿತ್ಯ ಧಾರ್ ಅವರ ಬಗ್ಗೆ ಚರ್ಚೆ ಆಗುತ್ತಿದೆ. ಅವರು ಕ್ರಿಕೆಟರ್ ಆಗಹೊರಟಿದ್ದರು. ಆದರೆ, ಅಲ್ಲಿನ ರಾಜಕೀಯ ಅವರಿಗೆ ಅವಕಾಶ ನೀಡಲೇ ಇಲ್ಲ.

ಕ್ರಿಕೆಟ್​ ಅಲ್ಲಿ ಹೆಸರು ಮಾಡಬೇಕು ಎಂದು ಆದಿತ್ಯಧಾರ್ ಪ್ರಯತ್ನಿಸಿದ್ದರು. ಏನೇ ಮಾಡಿದರೂ ಅದರ ಒಳಗೆ ಎಂಟ್ರಿ ಸಿಗಲೇ ಇಲ್ಲ. ಈ ಕಾರಣದಿಂದ ಅವರು ಸಿನಿಮಾದತ್ತ ವಾಲಿದರು. ಅಲ್ಲಿ ಅವರಗೆ ದೊಡ್ಡ ಯಶಸ್ಸು ಸಿಕ್ಕಿತು. ಈ ಬಗ್ಗೆ ನಿರ್ದೇಶಕ ಪ್ರಿಯದರ್ಶನ್ ಮಾತನಾಡಿದ್ದಾರೆ.

‘ಆದಿತ್ಯ ಧಾರ್ ಕ್ರಿಕೆಟಿಗರಾಗಿದ್ದರು. ಆದರೆ ಕೆಲವು ರಾಜಕೀಯ ಪ್ರಭಾವದಿಂದಾಗಿ ಅಂಡರ್ -19 ತಂಡಕ್ಕೆ ಸೇರಲು ಸಾಧ್ಯವಾಗಲಿಲ್ಲ. ಆದ್ದರಿಂದ ಅವರನ್ನು ಹೊರಹಾಕಲಾಯಿತು. ಮನೆಯಲ್ಲಿ ಕುಳಿತಿದ್ದಾಗ ಅವರು ತುಂಬಾ ನಿರಾಶೆಗೊಂಡಿದ್ದರು. ಯಾರೋ ಅವರಿಗೆ ಸಿನಿಮಾ ನೋಡಲು ಬರುವಂತೆ ಕರೆ ನೀಡಿದರು. ಅದು ಗಾರ್ಡಿಶ್ ಹೆಸರಿನ ಸಿನಿಮಾ ಆಗಿತ್ತು. ಚಿತ್ರ ನೋಡಿದ ಬಳಿಕ ಅವರಿಗೆ ಸಿನಿಮಾ ಮಾಡುವ ಬಯಕೆ ಬಂತು’ ಎಂದು ನಿರ್ದೇಶಕ ಪ್ರಿಯದರ್ಶನ್ ಹೇಳಿದ್ದಾರೆ.

ಇದನ್ನೂ ಓದಿ: ‘ಸತ್ಯ’, ‘ಕಂಪನಿ’ ಸಿನಿಮಾ ಸೇರಿಸಿ ‘ಧುರಂಧರ್’ ಮಾಡಿದ ಆದಿತ್ಯ ಧಾರ್: ವಿಷಯ ಬಯಲು

ಆದಿತ್ಯ ಧಾರ್ ಮುಂಬೈಗೆ ಬಂದರು. ಇಲ್ಲಿ ಸಿನಿಮಾ ಮಾಡಲು ಆರಂಭಿಸಿದರು. ಆದರೆ, ಅವರಿಗೆ ಕ್ರೆಡಿಟ್ ಸಿಗಲಿಲ್ಲ. ಕೊನೆಗೆ 2010ರ ಸಮಯದಲ್ಲಿ ಆದಿತ್ಯ ಅವರು ಪ್ರಿಯದರ್ಶನ್ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದರು. ಆ ಬಳಿಕ ಅವರು ಪೂರ್ಣಪ್ರಮಾಣದ ನಿರ್ದೇಶಕರಾದರು. ಈಗ ಎಲ್ಲರೂ ತಿರುಗಿ ನೋಡುವ ರೀತಿಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ: ಟ್ರಂಪ್‌ಗೆ ನ್ಯಾಟೋ ರಾಷ್ಟ್ರಗಳ ಶಾಕ್; ಏಕಾಂಗಿಯಾದ ಅಮೆರಿಕ?

ಟೆಹ್ರಾನ್, ಮಾ.18: ಇರಾನ್‌ನಲ್ಲಿ ಹೊಸ ಆಡಳಿತ ತರುವ ಅಮೆರಿಕ ಮತ್ತು ಇಸ್ರೇಲ್ ಪ್ಲ್ಯಾನ್‌ಗೆ ಈಗ ಇರಾನ್ ಸೇನೆ ಮತ್ತು ಹೊಸ ನಾಯಕ ಮೊಜ್ತಾಬಾ ಖಮನೈ ಮರ್ಮಾಘಾತ ನೀಡಿದ್ದಾರೆ. ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ (NATO) ದೇಶಗಳು ಈಗ ಯುದ್ಧದಿಂದ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಟ್ರಂಪ್ ನ್ಯಾಟೋ ದೇಶಗಳ ಸಹಾಯ ಕೋರಿದ್ದರು. ಆದರೆ ನ್ಯಾಟೋ ರಾಷ್ಟ್ರಗಳು ಕಡಾತುಂಡಾಗಿ ನಿರಾಕರಿಸಿವೆ.

ನ್ಯಾಟೋಗೆ ಈ ಯುದ್ಧಕ್ಕೂ ಸಂಬಂಧವಿಲ್ಲ ಎಂದು ಜರ್ಮನಿ ಹೇಳಿದೆ. ನಾವು ಈ ಯುದ್ಧದಲ್ಲಿ ಪಾಲುದಾರರಲ್ಲ ಎಂದು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಸ್ಪಷ್ಟಪಡಿಸಿದ್ದಾರೆ. ನಮ್ಮದು ಕೇವಲ ರಕ್ಷಣಾತ್ಮಕ ನಿಲುವು ಎಂದು ಯುಕೆ ಪ್ರಧಾನಿ ಸ್ಟಾರ್ಮರ್ ಹೇಳಿದ್ದಾರೆ. ಇನ್ನು ನಮ್ಮನ್ನು ಕೇಳಿ ಈ ಯುದ್ಧ ಆರಂಭಿಸಿಲ್ಲ ಎಂದು ಕೆನಡಾ ಧಾನಿ ಮಾರ್ಕ್ ಕಾರ್ನಿ ಖಾರವಾಗಿ ಹೇಳಿದ್ದಾರೆ.

ನ್ಯಾಟೋ ನಿಲುವಿನಿಂದ ಕೆರಳಿರುವ ಟ್ರಂಪ್, “ಇದು ನ್ಯಾಟೋ ಮಾಡುತ್ತಿರುವ ಮೂರ್ಖತನದ ತಪ್ಪು. ನಮಗೆ ಯಾರ ಸಹಾಯವೂ ಬೇಕಿಲ್ಲ, ನಮ್ಮ ಶಕ್ತಿಯೇ ನಮಗೆ ಸಾಕು” ಎಂದು ಗುಡುಗಿದ್ದಾರೆ. ಅಲ್ಲದೆ, ಏಕಾಂಗಿಯಾಗಿಯಾದರೂ ಹಾರ್ಮುಜ್ ಜಲಸಂಧಿಯನ್ನು ವಶಪಡಿಸಿಕೊಳ್ಳುವುದಾಗಿ ಸವಾಲು ಹಾಕಿದ್ದಾರೆ. ಇರಾನ್ ವಿರುದ್ಧದ ಕಾರ್ಯಾಚರಣೆಗೆ ಬೆಂಬಲ ನೀಡದ ಚೀನಾದ ಮೇಲೆ ಟ್ರಂಪ್ ಅಸಮಾಧಾನಗೊಂಡಿದ್ದಾರೆ. ಈ ಕಾರಣಕ್ಕೆ ಮಾರ್ಚ್ 31 ರಿಂದ ನಿಗದಿಯಾಗಿದ್ದ ತಮ್ಮ ಚೀನಾ ಪ್ರವಾಸವನ್ನು ಐದು ವಾರಗಳ ಕಾಲ ಮುಂದೂಡಿದ್ದಾರೆ.

ಇದನ್ನೂ ಓದಿ: ಹೊರನಡೆದಿದ್ದು ಒಳ್ಳೆಯದೇ ಆಯಿತು; ಜೋ ಕೆಂಟ್ ರಾಜೀನಾಮೆ ಕುರಿತು ಟ್ರಂಪ್ ಪ್ರತಿಕ್ರಿಯೆ

ಇರಾನ್ ಮೇಲಿನ ಯುದ್ಧಕ್ಕೆ ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (NCTC) ನಿರ್ದೇಶಕ ಜೋಸೆಫ್ ಕೆಂಟ್ ತೀವ್ರ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಇರಾನ್ ನಮ್ಮ ದೇಶಕ್ಕೆ ಯಾವುದೇ ಬೆದರಿಕೆ ಹಾಕಿಲ್ಲ” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದು ಟ್ರಂಪ್ ಅವರ ‘ಮೇಕ್ ಅಮೆರಿಕಾ ಗ್ರೇಟ್ ಅಗೈನ್’ (MAGA) ಬೆಂಬಲಿಗರಲ್ಲೇ ಒಡಕು ಮೂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಕೆಎಲ್​ ರಾಹುಲ್​ಗಾಗಿ ಇಂಗ್ಲೆಂಡ್ ಆಟಗಾರನ ಖರೀದಿಸಿದ ಡೆಲ್ಲಿ ಕ್ಯಾಪಿಟಲ್ಸ್

Source link

‘ಧುರಂಧರ್ 2’ ಸಿನಿಮಾ ಬಜೆಟ್ ಹಾಗೂ ಸ್ಟಾರ್​​ಗಳ ಸಂಭಾವನೆ ವಿವರ

ಆದಿತ್ಯ ಧಾರ್ ನಿರ್ದೇಶನದ ಮತ್ತು ರಣವೀರ್ ಸಿಂಗ್ ನಾಯಕನಾಗಿ ನಟಿಸಿರುವ ‘ಧುರಂಧರ್ 2’ (Dhurandhar 2) ಬಿಡುಗಡೆ ಸಮೀಪಿಸುತ್ತಿದೆ. ಪ್ರೇಕ್ಷಕರು ಕಾತರದಿಂದ ಕಾಯುತ್ತಿರುವ ಈ ಚಿತ್ರವು ಮಾರ್ಚ್ 19ರಂದು ಯುಗಾದಿಗೆ ಉಡುಗೊರೆಯಾಗಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಒಂದು ದಿನ ಮೊದಲು ಅಂದರೆ ಮಾರ್ಚ್ 18ರಂದು, ‘ಧುರಂಧರ್ 2’ ಪ್ರೀಮೀಯರ್​ಗಳನ್ನು ಆಯೋಜಿಸಲಾಗಿದೆ. ಮೊದಲ ಭಾಗವು ಬ್ಲಾಕ್ಬಸ್ಟರ್ ಆಗಿದ್ದರಿಂದ, ಈ ಮುಂದುವರಿದ ಭಾಗದ ಮೇಲೆ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಗಳಿವೆ. ರಣವೀರ್ ಸಿಂಗ್, ಸಂಜಯ್ ದತ್, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಮತ್ತು ಇತರ ತಾರೆಯರು ಈ ಬಹುತಾರಾಗಣದ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಬಜೆಟ್ 275 ಕೋಟಿ ರೂಪಾಯಿ. ಕಲಾವಿದರ ಸಂಭಾವನೆ ಬಗ್ಗೆ ಇಲ್ಲಿದೆ ವಿವರ.

ಕೆಲವು ಮಾಧ್ಯಮ ವರದಿಗಳ ಪ್ರಕಾರ, ‘ಧುರಂಧರ್ 2’ ಚಿತ್ರಕ್ಕಾಗಿ ರಣವೀರ್ ಸಿಂಗ್ ಅವರಿಗೆ 50 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಈ ಚಿತ್ರದಲ್ಲಿ ಅವರು ಅತಿ ಹೆಚ್ಚು ಸಂಭಾವನೆ ಪಡೆದಿರೋ ನಟ. ಈ ಚಿತ್ರದಲ್ಲಿ ರಣವೀರ್ ಹಮ್ಜಾ ಮತ್ತು ಜಸ್ಕಿರತ್ ಸಿಂಗ್ ರಂಗಿ ಎಂಬ ಎರಡು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚೌಧರಿ ಅಸ್ಲಾಂ ಪಾತ್ರದಲ್ಲಿ ನಟಿಸಿರುವ ಸಂಜಯ್ ದತ್ ಗೆ 10 ಕೋಟಿ ರೂ. ಅರ್ಜುನ್ ರಾಂಪಾಲ್ ಈ ಚಿತ್ರದಲ್ಲಿ ಅತ್ಯಂತ ಕ್ರೂರ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದಕ್ಕಾಗಿ ಅವರಿಗೆ 3 ಕೋಟಿ ರೂ. ಸಂಭಾವನೆ ನೀಡಲಾಗಿದೆ. ಸಾರಾ ಅರ್ಜುನ್ ಗೆ 1 ಕೋಟಿ ರೂ. ಹಮ್ಜಾ ಅವರ ಪತ್ನಿ ಯಲಿನಾ ಜಮಾಲಿ ಪಾತ್ರದಲ್ಲಿ ನಟಿಸಿದ್ದಾರೆ. ಇದಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕ್ರಿಕೆಟರ್ ಆಗ ಹೊರಟಿದ್ದ ‘ಧುರಂಧರ್’ ನಿರ್ದೇಶಕ; ರಾಜಕೀಯದಿಂದ ಎಲ್ಲವೂ ಬದಲಾಯ್ತು

ಈ ಚಿತ್ರದಲ್ಲಿ ನಟ ಆರ್. ಮಾಧವನ್ ಅಜಯ್ ಸನ್ಯಾಲ್ ಪಾತ್ರವನ್ನು ನಿರ್ವಹಿಸಿದ್ದಾರೆ. ಇದಕ್ಕಾಗಿ ಅವರು 9 ಕೋಟಿ ರೂ. ಸಂಭಾವನೆ ಪಡೆದರು. ‘ಧುರಂಧರ್’ ಚಿತ್ರದಲ್ಲಿ ಅಕ್ಷಯ್ ಖನ್ನಾ ಅವರ ಪಾತ್ರವು ಒಂದು ಹೈಲೈಟ್ ಆಗಿತ್ತು. ಮೊದಲ ಭಾಗದಲ್ಲಿ, ಅಕ್ಷಯ್, ರೆಹಮಾನ್ ಡಕಾಯಿತ ಪಾತ್ರ ಸಾಯುತ್ತದೆ. ಆದರೆ ಈಗ ಎರಡನೇ ಭಾಗದಲ್ಲಿ ಅಕ್ಷಯ್ ಫ್ಲ್ಯಾಷ್‌ಬ್ಯಾಕ್ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಅವರು 2 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 2025 ರಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ 1300 ಕೋಟಿ ರೂ.ಗಳಿಗೂ ಹೆಚ್ಚು ಸಂಗ್ರಹಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

LPG ಸಿಲಿಂಡರ್ ಬಿಕ್ಕಟ್ಟು: ಕಾಳಸಂತೆಯಲ್ಲಿ ಏಜೆನ್ಸಿಗಳು, ದಂಧೆಕೋರರ ಕಳ್ಳಾಟ, 15 ಸಾವಿರ ಸಿಲಿಂಡರ್ ಜಪ್ತಿ

ಬೆಂಗಳೂರು, ನವದೆಹಲಿ, ಮಾರ್ಚ್ 18: ಇರಾನ್-ಇಸ್ರೇಲ್, ಮಧ್ಯಪ್ರಾಚ್ಯ ಸಂಘರ್ಷ ಭಾರತದಲ್ಲಿ, ಅದರಲ್ಲೂ ಕರ್ನಾಟಕದಲ್ಲಿ ಗ್ಯಾಸ್ ಸಿಲಿಂಡರ್‌ಗಳ ತೀವ್ರತರದ ಅಭಾವಕ್ಕೆ ಕಾರಣವಾಗಿದೆ. ಈ ಪರಿಸ್ಥಿತಿಯು ಹೋಟೆಲ್ ಮಾಲೀಕರನ್ನು ದಿಕ್ಕೆಡಿಸಿದ್ದು, ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಿಕ್ಕಟ್ಟನ್ನು ದುರ್ಬಳಕೆ ಮಾಡಿಕೊಂಡ ಕೆಲ ಖದೀಮರು ಗೃಹಬಳಕೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಅಕ್ರಮಗಳ ವಿರುದ್ಧ ದೇಶಾದ್ಯಂತ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ, ದೆಹಲಿ, ಜಮ್ಮು ಕಾಶ್ಮೀರ, ಕೇರಳ ಸೇರಿದಂತೆ 12 ಸಾವಿರಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ಈ ದಾಳಿಗಳಲ್ಲಿ ಸುಮಾರು 15 ಸಾವಿರ ಗ್ಯಾಸ್ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ದೆಹಲಿಯಲ್ಲಿ 600 ಸಿಲಿಂಡರ್‌ಗಳು, ಉತ್ತರ ಪ್ರದೇಶದಲ್ಲಿ 405 ತಪಾಸಣೆಗಳು ನಡೆದಿವೆ ಹಾಗೂ 10 ಜನರನ್ನು ಬಂಧಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ 504 ದಾಳಿ ನಡೆಸಿ ಎಫ್‌ಐಆರ್‌ ದಾಖಲಿಸಲಾಗಿದೆ.

ಕರ್ನಾಟಕದಲ್ಲಿ ಬೀದರ್‌ನಲ್ಲಿ 105, ದಾವಣಗೆರೆ ಮತ್ತು ಯಾದಗಿರಿಯಲ್ಲಿ ತಲಾ 20 ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಏತನ್ಮಧ್ಯೆ, ಕಮರ್ಷಿಯಲ್ ಗ್ಯಾಸ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಸಮರ್ಪಕ ಗ್ಯಾಸ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದಲ್ಲಿ 9ನೇ ದಿನಕ್ಕೆ ಕಾಲಿಟ್ಟ ಎಲ್​ಪಿಜಿ ಸಿಲಿಂಡರ್ ಕೊರತೆ: ಜಿಲ್ಲೆ ಜಿಲ್ಲೆಗಳಲ್ಲೂ ಬಿಗಡಾಯಿಸಿದ ಪರಿಸ್ಥಿತಿ

ಬೆಂಗಳೂರು, ಮಾರ್ಚ್ 18: ಇರಾನ್–ಇಸ್ರೇಲ್ ಯುದ್ಧದ (Iran-Israel War) ಪರಿಣಾಮವಾಗಿ ಉಂಟಾದ ಅಡುಗೆ ಅನಿಲ (ಕಮರ್ಷಿಯಲ್ LPG) ಕೊರತೆ ಕರ್ನಾಟಕದಲ್ಲಿ (Karnataka) ತೀವ್ರ ಸಮಸ್ಯೆ ಸೃಷ್ಟಿಸಿದೆ. ಕಳೆದ 9 ದಿನಗಳಿಂದ ಮುಂದುವರಿದಿರುವ ಈ ಸಂಕಷ್ಟದಿಂದ ದೊಡ್ಡ ದೊಡ್ಡ ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ಹೋಟೆಲ್ ಆಹಾರಕ್ಕೆ ಅವಲಂಬಿತವಾಗಿದ್ದ ಜನರು ಈಗ ಒಂದು ಕಡೆಯಿಂದ ಮತ್ತೊಂದು ಕಡೆಗೆ ಅಲೆದಾಡುವಂತಾಗಿದೆ. 6 ಸಾವಿರ ರೂಪಾಯಿ ಕೊಟ್ಟರೂ ಕಮರ್ಷಿಯಲ್ ಸಿಲಿಂಡರ್‌ ಒಂದು ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಅಡುಗೆ ಎಣ್ಣೆ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುತ್ತಿದೆ.

ರಾಜಧಾನಿ ಬೆಂಗಳೂರಿನ ಪ್ರಸಿದ್ಧ ಹೋಟೆಲ್‌ಗಳಿಗೂ ಗ್ಯಾಸ್ ಕೊರತೆಯ ಹೊಡೆತ ಬಿದ್ದಿದ್ದು, ವಿ.ವಿ.ಪುರಂನ ಖ್ಯಾತ ‘ನ್ಯೂ ಮಾಡರ್ನ್ ಹೋಟೆಲ್’ ಬಾಗಿಲು ಮುಚ್ಚಿದೆ. ಇನ್ನೊಂದೆಡೆ, ‘ನಾಗಾರ್ಜುನ ಹೋಟೆಲ್’ ಮೆನು ಕಡಿತಗೊಳಿಸಿ ಗ್ರಾಹಕರ ಸಹಕಾರ ಕೋರಿದೆ.

ಜಿಲ್ಲೆಗಳಲ್ಲೂ ಸಮಸ್ಯೆ: ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ ಗ್ಯಾಸ್ ಬಿಸಿ

ಧಾರವಾಡದಲ್ಲಿ ಗ್ಯಾಸ್ ಲಭ್ಯವಿಲ್ಲದ ಕಾರಣ ನಗರದ ಹಳೆಯ ಹೋಟೆಲ್ ‘ವಿಜಯಸಾಗರ್’ ಕೂಡ ಬಂದ್ ಆಗಿದ್ದು, ಸುಮಾರು 20 ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಿಸಿದ್ದಾರೆ. ತುಮಕೂರಿನಲ್ಲಿ ಹೋಟೆಲ್‌ಗಳ ಜೊತೆಗೆ ಇಂದಿರಾ ಕ್ಯಾಂಟೀನ್‌ಗಳೂ ಕಾರ್ಯನಿರ್ವಹಣೆ ನಿಲ್ಲಿಸಿದ್ದರಿಂದ ಅನೇಕರು ಬೇರೆ ಉದ್ಯೋಗಗಳತ್ತ ಮುಖಮಾಡಿದ್ದಾರೆ. ರಂಜಾನ್ ಹಿನ್ನೆಲೆ ಆಹಾರ ತಯಾರಿಕೆಗೆ ಗ್ಯಾಸ್ ಸಿಗದ ಕಾರಣ, ಸೌದೆ ಒಲೆಗಳತ್ತ ಮೊರೆ ಹೋಗಲಾಗಿದೆ.

ವಿಜಯಪುರದಲ್ಲೂ ರೊಟ್ಟಿ ತಯಾರಿಕೆಗೆ ಗ್ಯಾಸ್ ಕೊರತೆ ತಟ್ಟಿದ್ದು, ಅನಿವಾರ್ಯವಾಗಿ ಸೌದೆ ಮತ್ತು ಇದ್ದಿಲು ಒಲೆಗಳನ್ನು ಬಳಸಲಾಗುತ್ತಿದೆ.

ರಫ್ತು ಸ್ಥಗಿತ: ಲಕ್ಷಾಂತರ ರೂ. ಮೌಲ್ಯದ ಆಹಾರೋತ್ಪನ್ನ ಹಾಸನಕ್ಕೆ ವಾಪಸ್

ಹಾಸನದಲ್ಲಿ ಗರ್ಕಿನ್, ಬೇಬಿಕಾರ್ನ್, ಮಿಡಿ ಸೌತೆ ಉಪ್ಪಿನಕಾಯಿ ಸೇರಿದಂತೆ ವಿವಿಧ ಆಹಾರ ಉತ್ಪನ್ನಗಳನ್ನು ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತಿತ್ತು. ಆದರೆ ಹಾರ್ಮುಜ್ ಜಲಮಾರ್ಗದ ಅಡಚಣೆಗಳಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಕಂಟೇನರ್‌ಗಳಲ್ಲೇ ವಾಪಸ್ ಆಗುತ್ತಿರುವುದು ಉದ್ಯಮಿಗಳಿಗೆ ಭಾರೀ ನಷ್ಟ ಉಂಟುಮಾಡಿದೆ.

ತತ್ತರಿಸಿದ ಕುಕ್ಕುಟೋದ್ಯಮ: ಮೊಟ್ಟೆ ಬೆಲೆ ದಿಢೀರ್ ಕುಸಿತ

ಕುಕ್ಕುಟೋದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ. ಬೆಂಗಳೂರಿನಲ್ಲಿ ಪ್ರತಿದಿನ 1.25 ಕೋಟಿ ಮೊಟ್ಟೆಗಳಿಗೆ ಇದ್ದ ಬೇಡಿಕೆ, ಹೋಟೆಲ್‌ಗಳು ಬಂದ್ ಆಗಿದ್ದರಿಂದ 80 ಲಕ್ಷಕ್ಕೆ ಇಳಿದಿದೆ. ಗಲ್ಫ್ ರಾಷ್ಟ್ರಗಳಿಗೆ ರಫ್ತು ಕಡಿಮೆಯಾಗಿರುವುದರಿಂದ ಮೊಟ್ಟೆ ದರ 6 ರೂಪಾಯಿಯಿಂದ 4 ರೂಪಾಯಿಗೆ ಕುಸಿದಿದೆ.

ಇದನ್ನೂ ಓದಿ: ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಕಿಡಿಗೇಡಿಗಳು: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನೂರಾರು ಸಿಲಿಂಡರ್​​ ಸೀಜ್​​​

ಒಟ್ಟಾರೆ, ಮಧ್ಯಪ್ರಾಚ್ಯ ಪ್ರದೇಶದ ಯುದ್ಧದ ಪರಿಣಾಮ ಕೇವಲ LPG ಸಿಲಿಂಡರ್ ಕೊರತೆಗಷ್ಟೇ ಸೀಮಿತವಾಗದೆ ಹೋಟೆಲ್ ಉದ್ಯಮ, ರಫ್ತು ವಲಯ ಮತ್ತು ಪೌಲ್ಟ್ರಿ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಭಾರೀ ಹೊಡೆತ ನೀಡಿದೆ. ಸಮಸ್ಯೆಗೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ಜೊತೆ ತ್ರಿಷಾ ಮದುವೆ ಆಗೋದು ತಾಯಿಗೂ ಇಷ್ಟ?

ತಮಿಳು ಸ್ಟಾರ್ ಹೀರೋ ದಳಪತಿ ವಿಜಯ್ ಅವರ ಹೆಸರು ಈಗ ಕಾಲಿವುಡ್ ಮತ್ತು ಟಾಲಿವುಡ್‌ನಲ್ಲಿ ಮನೆಮಾತಾಗಿದೆ. ಜನರು ವಿಜಯ್ ಮತ್ತು ತ್ರಿಷಾ ಬಗ್ಗೆ ಮಾತನಾಡುತ್ತಿದ್ದಾರೆ. ಇತ್ತೀಚೆಗೆ ನಾಯಕ ವಿಜಯ್ ಅವರ ಪತ್ನಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ . ವಿಜಯ್ ನಾಯಕಿಯೊಂದಿಗೆ ಸಂಬಂಧ ಹೊಂದಿದ್ದಾರೆಂದು ಆರೋಪಿಸಿ ಅವರು ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ವಿವಾಹ ಆಗುತ್ತಾರಾ ಎನ್ನುವ ಪ್ರಶ್ನೆ ಚರ್ಚೆ ಹುಟ್ಟುಹಾಕಿದೆ.

ವಿಜಯ್ ಮತ್ತು ತ್ರಿಷಾ ನಡುವೆ ಏನೋ ಇದೆ ಎಂಬ ಸುದ್ದಿ ಜೋರಾಗಿದೆ. ವಿಜಯ್ ಅವರ ಪತ್ನಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ವಿಜಯ್ ನಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಇವರು ಮದುವೆ ಆಗೋದು ತ್ರಿಷಾ ಅಮ್ಮನಿಗೂ ಇಷ್ಟವೇ ಎನ್ನುವ ಪ್ರಶ್ನೆ ಮುಡಿದೆ.

ಇತ್ತೀಚೆಗೆ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಮದುವೆಗೆ ಹೋಗಿದ್ದರು. ಇದು ದೊಡ್ಡ ಸಂಚಲನವನ್ನೇ ಸೃಷ್ಟಿಸಿತು. ವಿಜಯ್ ಮತ್ತು ತ್ರಿಷಾ ಐದು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಈ ಇಬ್ಬರ ನಡುವೆ ಉತ್ತಮ ಸ್ನೇಹವಿದೆ. ಈ ಮಧ್ಯೆ ಕೆಲವು ವಿಜಯ್ ಫ್ಯಾನ್ಸ್ ವಿಜಯ್ ಮತ್ತು ತ್ರಿಶಾ ಅವರ ಫೋಟೋಗಳನ್ನು ಕೊಲ್ಯಾಜ್ ಮಾಡುತ್ತಿದ್ದಾರೆ. ಎಐ ಮೂಲಕ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿವಾಹ ಆಗುವಂತೆ ತೋರಿಸಲಾಗಿದೆ.

ಇದನ್ನೂ ಓದಿ: ‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ತ್ರಿಷಾ ಅವರ ತಾಯಿ ಈ ವಿಡಿಯೋನ ಲೈಕ್ ಮಾಡಿರೋದು ಈಗ ಚರ್ಚೆಯ ವಿಷಯವಾಗಿದೆ. ಅದರೊಂದಿಗೆ, ವಿಜಯ್ ಮತ್ತು ತ್ರಿಷಾ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ದೊಡ್ಡ ಸುದ್ದಿ ಹರಿದಾಡುತ್ತಿದೆ. ತ್ರಿಷಾ ಅವರ ತಾಯಿ ವಿಜಯ್ ಜೊತೆಗಿನ ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಅವರು ಇಷ್ಟಪಟ್ಟ ಪೋಸ್ಟ್ ವೈರಲ್ ಆಗುತ್ತಿದೆ. ವಿಜಯ್ ಮತ್ತು ತ್ರಿಷಾ ಸಂಬಂಧದ ಬಗ್ಗೆ ಶೀಘ್ರದಲ್ಲೇ ಸ್ಪಷ್ಟತೆ ಬರುವ ಸಾಧ್ಯತೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB ತಂಡದ ಖರೀದಿಗೆ ಹಿಂದೇಟು: ಫೈನಲ್​​ ರೇಸ್​ನಲ್ಲಿ ಇಬ್ಬರು ಬೆಂಗಳೂರಿಗರು!

ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಮಾಲೀಕರು ಯಾರು? ಈ ಕುತೂಹಲಕಾರಿ ಪ್ರಶ್ನೆಗೆ ಶೀಘ್ರದಲ್ಲೇ ಉತ್ತರ ದೊರೆಯಲಿದೆ. ಏಕೆಂದರೆ  RCB ಫ್ರಾಂಚೈಸಿ ಮಾರಾಟ ಪ್ರಕ್ರಿಯೆಯು ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಆದರೆ ಈ ಹಿಂದೆ ಇದ್ದ ಪ್ರಮುಖ ಕಂಪೆನಿಗಳು ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಖರೀದಿಯಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಮ್ಯಾಂಚೆಸ್ಟರ್ ಯುನೈಟೆಡ್ ಮಾಲೀಕ ಅವ್ರಾಮ್ ಗ್ಲೇಝರ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್‌ನ ಅದಾರ್ ಪೂನಾವಾಲಾ ಅವರು ಆರ್​ಸಿಬಿ ಫ್ರಾಂಚೈಸಿ ಖರೀದಿಗೆ ಆಸಕ್ತಿ ತೋರಿದ್ದರು. ಆದರೆ ಇದೀಗ ಇವರು ಅಂತಿಮ ಬಿಡ್ ಸಲ್ಲಿಸದೆ ಹಿಂದೆ ಸರಿದಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಸಹ ಮಾಲೀಕರಾದ ಪಾರ್ಥ್ ಜಿಂದಾಲ್ ಕೂಡ ಆರ್​ಸಿಬಿ ಮೇಲೆ ಕಣ್ಣಿಟ್ಟಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ಅವರ ಹೆಸರು ಕೂಡ ಕಾಣಿಸುತ್ತಿಲ್ಲ.

ಇನ್ನೊಂದೆಡೆ ಅದಾನಿ ಗ್ರೂಪ್ ಕೂಡ ಆರ್​ಸಿಬಿ ಫ್ರಾಂಚೈಸಿಯನ್ನು ಖರೀದಿಸಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಎಂಟ್ರಿ ಕೊಡಲು ಪ್ಲ್ಯಾನ್ ಹೊಂದಿದ್ದರು. ಇದೀಗ ಅದಾನಿ ಗ್ರೂಪ್​ ಕಡೆಯಿಂದಲೂ ಬಿಡ್ ಸಲ್ಲಿಕೆಯಾಗಿಲ್ಲ ಎಂದು ವರದಿಯಾಗಿದೆ.

ರೇಸ್​ನಲ್ಲಿ ಇಬ್ಬರು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಖರೀದಿಗಾಗಿ ಈಗ ಇಬ್ಬರು ಮಾತ್ರ ರೇಸ್​ನಲ್ಲಿದ್ದಾರೆ. ಇಬ್ಬರೂ ಸಹ ಬೆಂಗಳೂರು ಮೂಲದವರು ಎಂಬುದು ವಿಶೇಷ. ಅವರೆಂದರೆ…

  • EQT ಮತ್ತು ಪ್ರೇಮ್‌ಜಿ ಇನ್ವೆಸ್ಟ್: ಸ್ವೀಡನ್ ಮೂಲದ ಇಕ್ವಿಟಿ ಸಂಸ್ಥೆ ‘EQT’ ಮತ್ತು ಅಝೀಂ ಪ್ರೇಮ್‌ಜಿ ಅವರ ‘ಪ್ರೇಮ್‌ಜಿ ಇನ್ವೆಸ್ಟ್’ ಜಂಟಿಯಾಗಿ ಸುಮಾರು $2.1 ಬಿಲಿಯನ್ ಬಿಡ್ ಮಾಡಿವೆ ಎಂದು ವರದಿಯಾಗಿದೆ.
  • ರಂಜನ್ ಪೈ ಮತ್ತು ಕೆಕೆಆರ್ (KKR): ಮಣಿಪಾಲ್ ಗ್ರೂಪ್‌ನ ಡಾ. ರಂಜನ್ ಪೈ ನೇತೃತ್ವದ ತಂಡದಲ್ಲಿ ಅಮೆರಿಕದ ಕೆಕೆಆರ್ ಮತ್ತು ಸಿಂಗಾಪುರದ ಟೆಮಾಸೆಕ್ (Temasek) ಕಂಪನಿ ಕೂಡ ಅಂತಿಮ ರೇಸ್​ನಲ್ಲಿದೆ.
  • ಅಝೀಂ ಪ್ರೇಮ್​ಜಿ ಹಾಗೂ ಡಾ. ರಂಜನ್ ಪೈ ಬೆಂಗಳೂರು ಮೂಲದವರಾಗಿರುವುದರಿಂದ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಲ್ಲೇ ಉಳಿಯುವುದು ಖಚಿತವಾಗಿದೆ.

ರೇಸ್‌ನಿಂದ ಹೊರಬಂದವರು:

  • ಜೆಎಸ್​ಡಬ್ಲ್ಯೂ ಗ್ರೂಪ್ (ಪಾರ್ಥ್ ಜಿಂದಾಲ್)
  • ಅದಾನಿ ಗ್ರೂಪ್ (ಗೌತಮ್ ಅದಾನಿ)
  • ಪೂನಾವಾಲ ಗ್ರೂಪ್ (ಆದಾರ್ ಪೂನಾವಾಲ)
  • ನಿಖಿಲ್ ಕಾಮತ್ (ಝೆರೋಧಾ ಕಂಪೆನಿ)
  • ದೇವಯಾನಿ ಇಂಟರ್ನ್ಯಾಷನಲ್ ಗ್ರೂಪ್ (ರವಿಕಾಂತ್ ಜೈಪುರಿಯಾ)

ಆರ್​ಸಿಬಿ ಮೌಲ್ಯ ಎಷ್ಟು?

ಆರ್​ಸಿಬಿ ಫ್ರಾಂಚೈಸಿಯ ಆರಂಭಿಕ ಬಿಡ್ಡಿಂಗ್ ಮೊತ್ತ ಸುಮಾರು $2 ಬಿಲಿಯನ್ (ಅಂದಾಜು ₹18,500 ಕೋಟಿ) ಎಂದು ಘೋಷಿಸಲಾಗಿದೆ. EQT ಮತ್ತು ಪ್ರೇಮ್‌ಜಿ ಇನ್ವೆಸ್ಟ್ ಕಂಪೆನಿಯು $2.1 ಬಿಲಿಯನ್ ಬಿಡ್ ಮಾಡಿವೆ ಎಂದು ವರದಿಯಾಗಿದೆ. ಇದಾಗ್ಯೂ ರಂಜನ್ ಪೈ ಮತ್ತು ಕೆಕೆಆರ್ (KKR) ಸಲ್ಲಿಸಿರುವ ಬಿಡ್ ಮೊತ್ತದ ಮಾಹಿತಿ ಬಹಿರಂಗವಾಗಿಲ್ಲ. ಹೀಗಾಗಿ ಆರ್​ಸಿಬಿ ಯಾರ ಪಾಲಾಗಲಿದೆ ಎಂಬುದೇ ಕುತೂಹಲ.

ಇದನ್ನೂ ಓದಿ: IPL 2026: 10 ತಂಡಗಳು ರೆಡಿ: ಯಾರು ಬಲಿಷ್ಠ?

ಇಷ್ಟು ದೊಡ್ಡ ಮೊತ್ತಕ್ಕೆ ಕಾರಣವೇನು?

  • ಬ್ರ್ಯಾಂಡ್ ಮೌಲ್ಯ: ಐಪಿಎಲ್‌ನಲ್ಲಿ ಆರ್‌ಸಿಬಿ ಅತ್ಯಂತ ಹೆಚ್ಚು ಬ್ರ್ಯಾಂಡ್ ಮೌಲ್ಯ ($269 ಮಿಲಿಯನ್) ಹೊಂದಿರುವ ತಂಡವಾಗಿದೆ.
  • ಚಾಂಪಿಯನ್ ಪಟ್ಟ: 2025ರ ಐಪಿಎಲ್‌ನಲ್ಲಿ ಆರ್‌ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಅದರ ಮೌಲ್ಯವನ್ನು ಮತ್ತಷ್ಟು ಹೆಚ್ಚಿಸಿದೆ.
  • ವಿರಾಟ್ ಕೊಹ್ಲಿ: ತಂಡದ ಅತಿದೊಡ್ಡ ಆಕರ್ಷಣೆಯಾಗಿರುವ ವಿರಾಟ್ ಕೊಹ್ಲಿ ಅವರ ಜನಪ್ರಿಯತೆ ಈ ದೊಡ್ಡ ಮೊತ್ತಕ್ಕೆ ಪ್ರಮುಖ ಕಾರಣ.

 

Source link

Exit mobile version