Headlines

6,6,6,6,6,6,6,6,6.. ಪ್ರೇಯಸಿ ಮಹಿಕಾ ಎದರು ಸಿಕ್ಸರ್‌ಗಳ ಮಳೆಗರೆದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Vijay Hazare Blast: 75 Off 31 Balls, Mahika Sharma Cheers!

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಆಡುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ಹಾರ್ದಿಕ್ ಮೈದಾನದಲ್ಲಿ ಬೌಂಡರಿ, ಸಿಕ್ಸರ್‌ಗಳ ಮಳೆಗರೆಯುತ್ತಿದ್ದಾರೆ. ತವರು ತಂಡ ಬರೋಡಾ ಪರ ಆಡುತ್ತಿರುವ ಪಾಂಡ್ಯ ಇತ್ತೀಚೆಗಷ್ಟೇ ತಮ್ಮ ಲಿಸ್ಟ್ ಎ ವೃತ್ತಿಜೀವನದ ಮೊದಲ ಶತಕವನ್ನು ದಾಖಲಿಸಿದ್ದರು. ಇದೀಗ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಅಬ್ಬರಿಸಿದ ಪಾಂಡ್ಯ, ಸ್ಫೋಟಕ…

Read More

ಟಿ20 ವಿಶ್ವಕಪ್‌ನಲ್ಲಿ ಒಂದೇ ತಂಡದ ಪರವಾಗಿ ಆಡಲಿದ್ದಾರೆ ಭಾರತ- ಪಾಕ್ ಮೂಲದ ಆಟಗಾರರು – Kannada News | T20 World Cup 2026: USA Squad Announced, Indian and Pakistani Players Included

2026 ರ ಟಿ20 ವಿಶ್ವಕಪ್‌ಗೆ (T20 World Cup) ಕ್ಷಣಗಣನೆ ಆರಂಭವಾಗಿದೆ. ಈ ಪಂದ್ಯಾವಳಿಯಲ್ಲಿ ಇಪ್ಪತ್ತು ತಂಡಗಳು ಆಡಲಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ ಯುಎಸ್​ಎ (USA) ಕೂಡ ತನ್ನ 15 ಸದಸ್ಯರ ತಂಡವನ್ನು ಬಹಿರಂಗಪಡಿಸಿದೆ. ಅಚ್ಚರಿಯ ಸಂಗತಿಯೆಂದರೆ ಈ ತಂಡದಲ್ಲಿ ಭಾರತೀಯ ಮತ್ತು ಪಾಕಿಸ್ತಾನಿ ಮೂಲದ ಆಟಗಾರರು ಸೇರಿದ್ದು, ಒಟ್ಟಿಗೆ ಆಡಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ ಎ ಗುಂಪಿನಲ್ಲಿ ಸ್ಥಾನ ಪಡೆದಿರುವ ಅಮೆರಿಕ ತಂಡ, ಟೀಂ ಇಂಡಿಯಾ ವಿರುದ್ಧವೂ ಸ್ಪರ್ಧಿಸಲಿದೆ. ಒಂದೇ ತಂಡದಲ್ಲಿ ಭಾರತ, ಪಾಕ್…

Read More

ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್ – Kannada News | Cashier And His Friends Arrested For Stealing Rs 91 Lakh From Builders Office In Bengaluru

ಬೆಂಗಳೂರು, ಫೆಬ್ರವರಿ 27: ಸದಾಶಿವನಗರದಲ್ಲಿರುವ ಬಿಲ್ಡರ್ ನರಸಿಂಹ ಅವರ ಕಚೇರಿಯಲ್ಲಿ ನಡೆದ 91.76 ಲಕ್ಷ ರೂಪಾಯಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಚೇರಿಯ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಧನಂಜಯ್ ಮತ್ತು ಅವನ ಸ್ನೇಹಿತ ಪ್ರವೀಣ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರ ತನಿಖೆಯಿಂದಾಗಿ ಆರೋಪಿಗಳನ್ನು ಬಂಧಿಸಲಾಗಿದ್ದು, ಕಳ್ಳತನವಾದ ಒಟ್ಟು 91,76,000 ರೂಪಾಯಿಗಳ ಪೈಕಿ 81,66,000 ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಇನ್ನೂ ಇಬ್ಬರು ಆರೋಪಿಗಳು ಪತ್ತೆಯಾಗಬೇಕಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ…

Read More

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ…

Read More

ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬುಧವಾರ ಭಾರಿ ಆಲಿಕಲ್ಲು ಮಳೆ ಸುರಿದಿದೆ. ಬಿಸಿಲು ನಾಡು ಎಂದೇ ಹೆಸರಾದ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತಹ ಹಿಮಾವೃತ ಪ್ರದೇಶಗಳಂತೆ ಕಾಣಿಸಿ ಗಮನ ಸೆಳೆದಿವೆ. ಕಲಬುರಗಿ ಜಿಲ್ಲೆಯ ಚನ್ನೂರು ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಇಡೀ ಪ್ರದೇಶವು ಹಿಮದ ರಾಶಿಯಿಂದ ಆವರಿಸಿತ್ತು. ರಸ್ತೆಗಳ ಮೇಲೆಲ್ಲ ಮಂಜುಗಡ್ಡೆ ರಾಶಿ ಕಾಣಿಸಿದೆ. ಸಾಮಾನ್ಯವಾಗಿ ಕಾಣಸಿಗದ ಈ ಪ್ರಮಾಣದ ಆಲಿಕಲ್ಲು ಮಳೆಯು ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ವಿಜಯಪುರ…

Read More

ಈ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್, ಪಿಜ್ಜಾ ಕೊಡ್ತಾರೆ!

ಕೊಲ್ಕತ್ತಾ, ಏಪ್ರಿಲ್ 6: ಭಾರತೀಯ ಭಕ್ತಿ, ಚೀನಾದ ಸಂಪ್ರದಾಯದ ಸಂಗಮವಾಗಿರುವ ಕೊಲ್ಕತ್ತಾದ ‘ಚೀನಾ ಕಾಳಿ ದೇವಸ್ಥಾನ’ದಲ್ಲಿ ಪಿಜ್ಜಾ ಮತ್ತು ನೂಡಲ್ಸ್​ ಅನ್ನೇ ಪ್ರಸಾದವಾಗಿ ನೀಡಲಾಗುತ್ತದೆ. ಹಲವು ದಶಕಗಳ ಹಿಂದೆ ಚೀನಾದಿಂದ ಇಲ್ಲಿ ನೆಲೆಸಿ ಬಂಗಾಳಿ ಸಂಸ್ಕೃತಿಯನ್ನು ಸ್ವೀಕರಿಸಿದವರು ಈ ದೇವಾಲಯವನ್ನು (Kali Temple) ನಿರ್ಮಿಸಿದರು. ಈ ಮಂದಿರ ವೈವಿಧ್ಯತೆಯಲ್ಲಿ ಏಕತೆಗೆ ಸಾಕ್ಷಿಯಾಗಿದೆ. ನೂಡಲ್ಸ್ ಮತ್ತು ಸೂಪ್ ಅನ್ನು ನೈವೇದ್ಯವಾಗಿ ನೀಡುವ ಈ ವಿಚಿತ್ರ ಪದ್ಧತಿಯ ಹಿಂದಿನ ವಿಷಯಗಳ ಕುರಿತಾದ ಮಾಹಿತಿ ಇಲ್ಲಿದೆ. ಸಾಮಾನ್ಯವಾಗಿ ನಾವು ದೇವಸ್ಥಾನಗಳಿಗೆ ಹೋದಾಗ…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More

ಈ ರಾಶಿಯವರಿಗೆ ಮಾರ್ಚ್ 01ರಿಂದ 07 ರವರೆಗೆ ಉದ್ಯೋಗದಲ್ಲಿ ದೊಡ್ಡ ಮನ್ನಣೆ – Kannada News | Career Forecast March 1 7: Promotions, Transfers & Opportunities by Zodiac Sign

ಮಾರ್ಚ್ 01ರಿಂದ 07 ರವರೆಗೆ ಮೊದಲ ವಾರವಾಗಿದ್ದು ಉದ್ಯೋಗದಲ್ಲಿ ಕೆಲವರಿಗೆ ಆತಂಕ, ಸಂತೋಷ, ಆಲಸ್ಯ, ಪ್ರಯತ್ನ ಎಲ್ಲವೂ ಮಿಶ್ರವಾಗಿರುವುದು. ಒಂದನ್ನೇ ನಂಬಿ ಇರುವುದು ಬೇಕಾಗಿಲ್ಲ, ಬೇರೆ ಕ್ಷೇತ್ರಗಳ ಜ್ಞಾನವೂ ಮುಖ್ಯ. ಎರಡು ದೋಣಿಯಲ್ಲಿ ಹೋಗುವುದು ಕಷ್ಟ. ​ ಮೇಷ ​ಈ ವಾರ ಸೃಜನಾತ್ಮಕ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದ್ದು, ಮೇಲಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆದರೆ ಸಣ್ಣ ತಪ್ಪುಗಳು ಅವಮಾನಕ್ಕೆ ದಾರಿಯಾಗದಂತೆ ಎಚ್ಚರವಹಿಸಿ. ಭಡ್ತಿಯ ಮಾತುಕತೆಗಳು ಸಕಾರಾತ್ಮಕವಾಗಿ ನಡೆಯಲಿವೆ. ಹೊಸ ಜವಾಬ್ದಾರಿಗಳು ನಿಮ್ಮ ಸ್ಥಾನಮಾನವನ್ನು…

Read More

ಮಹಿಳೆಯರು, ರೈತರು, ಯುವಕರಿಗೆ ಗುಡ್ ನ್ಯೂಸ್; ಸೇವಾ ತೀರ್ಥ ಕಚೇರಿಯಲ್ಲಿ ಪ್ರಧಾನಿ ಮೋದಿ ಮೊದಲ ನಿರ್ಧಾರ – Kannada News | PM Narendra Modi’s First Decisions From Seva Teerth Office Farmers, Women, youth welfare on focus

ನವದೆಹಲಿ, ಫೆಬ್ರವರಿ 13: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಹೊಸ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teerth) ತಮ್ಮ ಮೊದಲ ನಿರ್ಧಾರ ತೆಗೆದುಕೊಂಡಿದ್ದಾರೆ. ಇಂದು ಪ್ರಧಾನಿ ಮೋದಿ ಸಹಿ ಹಾಕಿದ 4 ನಿರ್ಧಾರಗಳು ರೈತರು, ಮಹಿಳೆಯರು, ಯುವಕರ ಮೇಲೆ ಕೇಂದ್ರೀಕೃತವಾಗಿದೆ. ಇಂದು ಮೋದಿ ರಾಹತ್ ಯೋಜನೆಯನ್ನು ಪ್ರಾರಂಭಿಸಲು ಅನುಮೋದನೆ ನೀಡಿದರು, ಲಖಪತಿ ದೀದಿಯ ಯೋಜನೆಯ ಮಿತಿಯನ್ನು ದ್ವಿಗುಣಗೊಳಿಸಿದರು ಮತ್ತು ಕೃಷಿ ಮೂಲಸೌಕರ್ಯ ನಿಧಿಯ ವೆಚ್ಚವನ್ನು ಹೆಚ್ಚಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ…

Read More

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್​ ಹಾಕಿದ್ದ ಇನ್ನಿಬ್ಬರ ಬಂಧನ – Kannada News | Bengaluru Police arrest 2 more in Darshan wife Vijayalakshmi case

ನಟ ದರ್ಶನ್ ತೂಗುದೀಪ (Darshan) ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್​ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗರಾಜ್ ತಳವಾರ ಮತ್ತು ಪ್ರಶಾಂತ್ ತಳವಾರ ಎಂಬುದವರು ಬಂಧಿತರು. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬಂಕ್ ಮ್ಯಾನೇಜರ್ ಆಗಿರುವ ನಾಗರಾಜ್ ಹಾಗೂ ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ತಳವಾರ ಬಂಧನ ಆಗಿದೆ. ಆ ಮೂಲಕ ಪ್ರಕರಣದಲ್ಲಿ ಈವರೆಗೆ ಬಂಧಿತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ….

Read More