ಕಾಂಗ್ರೆಸ್ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ – Kannada News | Minister Satish Jarkiholi hosts dinner meeting In His House at Belagavi, here Is menu
ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18)…