Headlines

Namma Metro: ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! – Kannada News | Bengaluru Yellow Line Driverless Metro Derails: Safety Probe Launched by BMRC

ಹಳಿ ತಪ್ಪಿದ ನಮ್ಮ ಮೆಟ್ರೋ ಡ್ರೈವರ್ಲೆಸ್ ರೈಲು! ಬೆಂಗಳೂರು, ಫೆಬ್ರವರಿ 20: ಯೆಲ್ಲೋ ಲೈನ್‌ನಲ್ಲಿ ಸಂಚರಿಸುತ್ತಿದ್ದ ಡ್ರೈವರ್ಲೆಸ್ ಮೆಟ್ರೋ (Namma Metr0) ರೈಲು ಹಳಿ ತಪ್ಪಿದ ಘಟನೆ ಜನವರಿ- 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿಪೋದಿಂದ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದತ್ತ ಸಾಗುತ್ತಿದ್ದ ವೇಳೆ ಮೂರನೇ ಡ್ರೈವರ್ಲೆಸ್ ರೈಲು ಹಳಿ ತಪ್ಪಿರುವುದು ತಿಳಿದುಬಂದಿದೆ. ಘಟನೆ ಎಲಿವೇಟೆಡ್ ಕಾರಿಡಾರ್ ಮೇಲೆ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು ಎಂಬ ಆತಂಕ ವ್ಯಕ್ತವಾಗಿದೆ. ಈ…

Read More

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಪರಾಜಯವನ್ನು ಸಹಿಸಲಾಗದು

ಮೇಷ ರಾಶಿ: ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು ಮಾಡುವಿರಿ. ತಪ್ಪನ್ನು ಒಪ್ಪಿಕೊಂಡು ಮೆಚ್ಚುಗೆ ಪಡೆಯುವಿರಿ. ವೃಷಭ ರಾಶಿ: ಭೂಮಿಗೆ ಸಂಬಂಧಿತ ಕೆಲಸವನ್ನು ಪೂರ್ಣಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಬೆಳವಣಿಗೆಗೆ ಹೊಸ ಅವಕಾಶಗಳಿವೆ. ನಿಮ್ಮ ಸಂಗಾತಿಯ ಆರೋಗ್ಯದ ಕಡೆ…

Read More

WPL 2026: ಯುಪಿ ವಿರುದ್ಧ ಗೆದ್ದ ಡೆಲ್ಲಿ; ಟೂರ್ನಿಯಿಂದ ಹೊರಬಿದ್ದ ಮುಂಬೈ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ನ ಲೀಗ್ ಹಂತದ 20ನೇ ಮತ್ತು ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ಪರಸ್ಪರ ಮುಖಾಮುಖಿಯಾಗಿದ್ದವು. ಬರೋಡಾದ ಕೋಟಂಬಿಯಲ್ಲಿರುವ ಬಿಸಿಎ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಡೆಲ್ಲಿ ತಂಡದ ಈ ಗೆಲುವಿನೊಂದಿಗೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಲೀಗ್ ಹಂತದಲ್ಲೇ ತನ್ನ ಪ್ರಯಾಣ ಮುಗಿಸಿದೆ. ವಾಸ್ತವವಾಗಿ ಮುಂಬೈ ತಂಡ ಎಲಿಮಿನೇಟರ್​ಗೆ ಅರ್ಹತೆ…

Read More

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?

ತಮಿಳು ನಟ ಸೂರ್ಯ (Suriya) ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಅವರ ನಟನೆಯ ‘ಕರುಪ್ಪು’ ಚಿತ್ರ ಹಲವು ಸಮಯದಿಂದ ಮುಂದಕ್ಕೆ ಹೋಗುತ್ತಲೇ ಇತ್ತು. ಕೊನೆಗೂ ಅದಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ‘ಕರುಪ್ಪು’ ಸಿನಿಮಾ ಮೇ 15ರಂದು ತೆರೆಗೆ ಬರುತ್ತಿದೆ. ಈಗ ಹೊಸ ಪೋಸ್ಟರ್ ಹಂಚಿಕೊಂಡು ಸಿನಿಮಾ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. 2020ರಲ್ಲಿ ರಿಲೀಸ್ ಆದ ಸೂರ್ಯ ನಟನೆಯ ‘ಸೂರರೈ ಪೊಟ್ರು’ ಸಿನಿಮಾ ಮೆಚ್ಚುಗೆ ಪಡೆಯಿತು. ಇದಾದ…

Read More

ನೀವು ಲಿಫ್ಟ್ ಬಳಸಬಾರದು: ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್ – Kannada News | Viral: Delivery Boy Denied Lift Access, Carries Heavy Parcel Up 6 Floors; Netizens Condemn

ಡೆಲಿವರಿ ಬಾಯ್ ಒಬ್ಬರು ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಯವರೆಗೆ ಮೆಟ್ಟಿಲುಗಳನ್ನು ಹತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಇದೀಗ ಈ ವಿಡಿಯೋ ನೋಡಿ ನೆಟ್ಟಿಗರು ಅಕ್ರೋಶ ವ್ಯಕ್ತಪಡಿದ್ದಾರೆ. ನಗರವೊಂದರ ವಸತಿ ಸಂಕೀರ್ಣವೊಂದರಲ್ಲಿ (Housing Society), ಡೆಲಿವರಿ ಬಾಯ್ ಒಬ್ಬರಿಗೆ ಲಿಫ್ಟ್ ಬಳಸಲು ಅಲ್ಲಿನ ಭದ್ರತಾ ಸಿಬ್ಬಂದಿ ಅನುಮತಿ ನೀಡಲಿಲ್ಲ. ಈ ಕಾರಣಕ್ಕೆ ಈ ಡೆಲಿವರಿ ಬಾಯ್​​​​​​​​ ಮೆಟ್ಟಿಲಿನಲ್ಲಿ ಹತ್ತಿಕೊಂಡೆ ಬಂದಿದ್ದಾರೆ. ಪಾರ್ಸೆಲ್​​ ತಲುಪಿಸುವ ಅನಿವಾರ್ಯವಾಗಿ ಅತ್ಯಂತ ಭಾರವಾದ ಪಾರ್ಸೆಲ್ ಅನ್ನು ತನ್ನ ಬೆನ್ನಿನ…

Read More

ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House

ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ. ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ…

Read More

‘ಅದಕ್ಕೂ ನಮಗೂ ಸಂಬಂಧವಿಲ್ಲ’; ‘ಟಾಕ್ಸಿಕ್’ ಟೀಸರ್ ದೂರಿಗೆ ಸೆನ್ಸಾರ್ ಮಂಡಳಿಯ ಪ್ರತಿಕ್ರಿಯೆ – Kannada News | Toxic Teaser Controversy: Censor Board Denies Jurisdiction Over YouTube Content

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ಸೃಷ್ಟಿಸಿದ ಹಲ್​​ಚಲ್ ಅಷ್ಟಿಷ್ಟಲ್ಲ. ಈ ಸಿನಿಮಾದ ಟೀಸರ್ ನೋಡಿದ ಅನೇಕರು ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಈ ಟೀಸರ್​​​ನಲ್ಲಿದ್ದ ಬೋಲ್ಡ್​ ದೃಶ್ಯಗಳ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದರು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತರು ಹಾಗೂ ಮಹಿಳಾ ಕಮಿಷನ್ ಸೆನ್ಸಾರ್ ಮಂಡಳಿಗೆ ದೂರು ನೀಡಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿತ್ತು. ಆದರೆ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟವಾಗಿ ಹೇಳಿದೆ. ಎನ್​ಡಿಟಿವಿ ಮಾಡಿದ ವರದಿ…

Read More

ಕನಕಪುರ ಶ್ರೀನಿವಾಸ್ ಅಶ್ಲೀಲ ಮಾತಿಗೆ ಕಿಚ್ಚ ಸುದೀಪ್ ಖಡಕ್ ರಿಯಾಕ್ಷನ್ – Kannada News | Kichcha Sudeep reaction to Kanakapura Srinivas derogatory speech

ನಿರ್ಮಾಪಕ ಕನಕಪುರ ಶ್ರೀನಿವಾಸ್ (Kanakapura Srinivas) ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಕೆ ಶಿವಕುಮಾರ್, ಧ್ರುವ ಸರ್ಜಾ, ಎ.ಪಿ. ಅರ್ಜುನ್, ಜೋಗಿ ಪ್ರೇಮ್, ಪುನೀತ್ ರಾಜ್​ಕುಮಾರ್ ಸೇರಿದಂತೆ ಹಲವರ ವಿರುದ್ಧ ಅವರು ಅಶ್ಲೀಲವಾಗಿ ಮಾತನಾಡಿದ್ದರು. ಅದಕ್ಕೆ ಚಿತ್ರರಂಗದಲ್ಲಿ ಖಂಡನೆ ವ್ಯಕ್ತವಾಗಿದೆ. ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರಿಗೆ ಈ ಬಗ್ಗೆ ಪ್ರಶ್ನೆ ಕೇಳಲಾಯಿತು. ತಮ್ಮದೇ ರೀತಿಯಲ್ಲಿ ಅವರು ಉತ್ತರ ನೀಡಿದ್ದಾರೆ. ‘ಇದು ಸಿಸಿಎಲ್ ಸುದ್ದಿಗೋಷ್ಠಿ. ಸಿಹಿ ತಿನ್ನುವ…

Read More

ಹೊಸ ವರ್ಷಕ್ಕೆ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್​​​ನ್ಯೂಸ್​​: ಪ್ರಾಯೋಗಿಕ ಪರೀಕ್ಷೆಗಳಿಗೆ ಹೊಸ ರೂಲ್ಸ್​​​ ತಂದ ಇಲಾಖೆ – Kannada News | 2nd PUC Practical Exams Live Web Streamed by KSEAB for Transparency and Monitoring

ಬೆಂಗಳೂರು, ಜ.2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ದ್ವಿತೀಯ ಪಿಯು ಕೋರ್ಸ್‌ಗಳ ಪ್ರಾಯೋಗಿಕ ಪರೀಕ್ಷೆಗಳಿಗೆ ವೆಬ್-ಸ್ಟ್ರೀಮಿಂಗ್ ಕಡ್ಡಾಯಗೊಳಿಸಿದೆ. ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಈ ಕ್ರಮವನ್ನು ಕೆಎಸ್‌ಇಎಬಿ ತಂದಿದೆ. ಈ ಹೊಸ ವ್ಯವಸ್ಥೆಯನ್ನು ತರುವ ಮೂಲಕ ವಿದ್ಯಾರ್ಥಿಗಳಿಗೆ ಅಂಕದಲ್ಲಿ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನಡೆಯುವ ಎಲ್ಲಾ ಚಟುವಟಿಕೆಯನ್ನು ರಿಯಲ್​​​ ಟೈಮ್​​ನಲ್ಲಿ ಲೈವ್​​ ಸ್ಟ್ರೀಮ್​​​​ ಮಾಡಲಾಗುತ್ತದೆ. ಕಳೆದ ವರ್ಷ ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ್ದರೂ, ಥಿಯರಿ ಪರೀಕ್ಷೆಯಲ್ಲಿ…

Read More