ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಚಿನ್ನದ ಅಂಗಡಿ ಬೀಗ ಒಡೆದು ಕಳ್ಳತನ – Kannada News | Gold Jewellery Shop Burglary in Chintamani: Thieves Break Lock, Steal Gold and Silver Ornaments in Chikkaballapur

ಚಿಕ್ಕಬಳ್ಳಾಪುರ, ಫೆಬ್ರವರಿ 10: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಶಿವ ಜ್ಯುವೆಲರ್ಸ್ ಚಿನ್ನದ ಅಂಗಡಿಯಲ್ಲಿ ದೊಡ್ಡ ಪ್ರಮಾಣದ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಶಟರ್ಸ್ ಬೀಗ ಒಡೆದು ಒಳನುಗ್ಗಿದ್ದು, ಅಲ್ಲಿ ಸಂಗ್ರಹಿಸಿದ್ದ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಂತಾಮಣಿ ನಗರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಕಳ್ಳತನದ ಪ್ರಮಾಣ ಮತ್ತು ದರೋಡೆಯಾದ ಆಭರಣಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಹಾಗೂ ಸಾಕ್ಷ್ಯಾಧಾರಗಳ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

BESCOM Power Cut: ಫೆಬ್ರವರಿ 11, 12ರಂದು ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಪವರ್ ಕಟ್ – Kannada News | BESCOM Power Cut on Feb 11 and 12: Electricity Outage in Several Areas for Maintenance Works

ಬೆಂಗಳೂರು, ಫೆಬ್ರವರಿ 10: ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಪವರ್ ಕಟ್ (Power Cut) ಇರಲಿದೆ. ಈ ಬಗ್ಗೆ ಪ್ರಕಟಣೆ ಮೂಲಕ ಬೆಸ್ಕಾಂ ಮಾಹಿತಿ ನೀಡಿದೆ.

ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ, ಬೇಡರಡ್ಡಿ-ಹಳ್ಳಿ, ತಿಮ್ಮಪ್ಪಯನಹಳ್ಳಿ, ಎನ್.ದೇವರಹಳ್ಳಿ, ತಳಕು, ಮೊನ್ನೆಕೋಟೆ, ದೇವರೆಡ್ಡಿಹಳ್ಳಿ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೂ ನಿರಂತರ ಜ್ಯೋತಿ, ಕೃಷಿ ಬಳಕೆಯ ವಿದ್ಯುತ್‌ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ರೈತರು, ಸಾರ್ವಜನಿಕರು ಸಹಕರಿಸಬೇಕೆಂದು ಎಇಇ ಎನ್​​ಜಿ ಮಮತಾ ಹಾಗೂ ಎಂಜಿನಿಯರ್ ವೆಂಕಟೇಶ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಫೆಬ್ರವರಿ 12ಕ್ಕೆ ತುಮಕೂರಿನ ಈ ಪ್ರದೇಶಗಳಲ್ಲಿ ಪವರ್ ಕಟ್

ತುಮಕೂರಿನಲ್ಲಿ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೊಂಡಿರುವುದರಿಂದ ಫೆ.12ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 66/11 ಕೆವಿ ಅಂಕಸಂದ್ರ ಉಪಸ್ಥಾವರದಿಂದ ವಿದ್ಯುತ್‌ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್

ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎಂಇಐ ಉಪಕೇಂದ್ರದಲ್ಲಿ ತುರ್ತು ನಿರ್ವ ಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಟ್ರೇಡಿಂಗ್ ಅಡಿಕ್ಷನ್: ಡ್ರಗ್ಸ್ ಅಡಿಕ್ಷನ್​ನಂತೆಯೇ ಸಿಟಿ ಜನರಿಗೆ ಈಗ ಟ್ರೇಡಿಂಗ್ ಖಯಾಲಿ

ಎಜಿಬಿಜಿ-ಲೇಔಟ್, ಭೈರವೇಶ್ವರ ಹೋಟೆಲ್, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್ ಲೇಔಟ್, ಗಣೇಶ ಸಾ ಮಿಲ್, ಕೆಂಪೇಗೌಡ ನಗರ, ಬೃಂದಾವನ ಲೇಔಟ್, ಕಲ್ಯಾಣನಗರ ಬಾಗಲಗುಂಟೆ, ಸೌರ ಲೇಔಟ್, ಮೀನಾಕ್ಷಿ ಲೇಔಟ್ ಸೇರಿದಂತೆ ಹಲವು ಕಡೆಗಳಲ್ಲಿ ಪವರ್ ಕಟ್ ಆಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ! – Kannada News | Man leaves bag containing cash and gold in Vidhana Soudha lobby

ಬೆಂಗಳೂರು, ಫೆಬ್ರವರಿ 10: ವಿಧಾನಸೌಧದ ಸಚಿವರ ಕಚೇರಿಯೊಂದರ ಬಳಿ ವ್ಯಕ್ತಿಯೊಬ್ಬರು 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಬಿಟ್ಟುಹೋದ ಘಟನೆ ನಡೆದಿದೆ. ನವೀನ್ ಎಂಬವರು ಸಚಿವರೊಬ್ಬರನ್ನು ಭೇಟಿಯಾಗಲು ಬಂದಾಗ ಕೈಚೀಲವನ್ನು ಮರೆತುಹೋಗಿದ್ದರು. ಮರುದಿನ ಬಂದಾಗ ಚೀಲ ಅಲ್ಲಿ ಇಲ್ಲದೇ ಇದ್ದುದು ಕಂಡು ಗಾಬರಿಯಾಗಿದ್ದಾರೆ. ನಂತರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು, ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ನಂತರ ಆತನನ್ನು ವಶಕ್ಕೆ ಪಡೆದ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

ಏತನ್ಮಧ್ಯೆ, ಸಚಿವರ ಕಚೇರಿಯಿಂದಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವಾಗಿದೆ ಎಂಬ ವದಂತಿ ಹರಡಿದೆ. ಈ ವಿಚಾರವಾಗಿ ಸಚಿವರ ಕಚೇರಿ ಸ್ಪಷ್ಟನೆ ನೀಡಿದ್ದು, ಕಚೇರಿಯಲ್ಲಿ ಎಲ್ಲೂ ಕಳ್ಳತನವಾಗಿಲ್ಲ ಎಂದು ದೃಢಪಡಿಸಿದೆ. ವ್ಯಕ್ತಿಯೊಬ್ಬರು ವಿಧಾನಸೌಧದ ಪಡಸಾಲೆಯಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಭದ್ರತಾ ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕಚೇರಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:09 am, Tue, 10 February 26

Source link

ಜೀ ಕನ್ನಡದ ಹೊಸ ಧಾರಾವಾಹಿಗೆ ನಾಯಕಿಯಾದ ಮೋಕ್ಷಿತಾ ಪೈ – Kannada News | Mokshita Pai to Act In Zee Kannada New Serial Jagaddhaatri

ಮೋಕ್ಷಿತಾ ಪೈ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಬಾರಿ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ತೆರಳಿದ್ದರು. ಈಗ ಅವರಿಗೆ ಜೀ ಕನ್ನಡ ವಾಹಿನಿಯಿಂದ ಆಫರ್ ಸಿಕ್ಕಿದೆ. ‘ಜಗದ್ಧಾತ್ರಿ’ ಹೆಸರಿನ ಹೊಸ ಧಾರಾವಾಹಿ ಶೀಘ್ರವೇ ಪ್ರಸಾರ ಕಾಣಲಿದೆ. ಈ ಧಾರಾವಾಹಿಗೆ ಮೋಕ್ಷಿತಾ ಪೈ ನಾಯಕಿ ಎಂದು ವರದಿ ಆಗಿದೆ. ಈ ವಿಷಯ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

 

 

Source link

ಒಂದೆರಡಲ್ಲ ಸುಚಿತ್ರಾ ರಂಗಿನಾಟ: ಜ್ಯೋತಿಷಿ, ಜಮೀನ್ದಾರ್​ ಮಾತ್ರವಲ್ಲದೆ ಮತ್ತೊಬ್ಬನ ಜೊತೆಗೂ ಇತ್ತು ದೋಸ್ತಿ!

ಶಿವಮೊಗ್ಗ, ಫೆಬ್ರವರಿ 10: ಸಿದ್ದಾಪುರದ ವಸಂತ್ ನಾಯಕ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸುಚಿತ್ರಾ ಅಲಿಯಾಸ್ ಸುರೇಖಾಳ ಹಲವು ರಂಗಿನಾಟಗಳು ಇದೀಗ ಬಯಲಾಗುತ್ತಿವೆ. ಜ್ಯೋತಿಷಿ ಕಮಲಾಕರ ಭಟ್ ಹಾಗೂ ಜಮೀನ್ದಾರ್ ಶರಣಬಸಪ್ಪ ಜೊತೆಗಿನ ಈಕೆಯ ಸಂಬಂಧಗಳ ಬಗ್ಗೆ ಈಗಾಗಲೇ ಮಾಹಿತಿ ಹೊರಬಿದ್ದಿತ್ತು. ಇದೀಗ ಜೆಸಿಬಿ ಪ್ರಕಾಶ್ ಎಂದು ಗುರುತಿಸಲ್ಪಟ್ಟ ಸಿದ್ದಾಪುರದ ಯುವಕನೊಂದಿಗೆ ಆಕೆ ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಂಡಿರೋದು ಬಹಿರಂಗವಾಗಿದೆ. ಮಹೇಶ್ ನಾಯಕ್ ಅವರೊಂದಿಗೆ ವಿವಾಹವಾದ ನಂತರವೂ ಸುಚಿತ್ರಾ ಪ್ರಕಾಶ್ ಜೊತೆ ಸ್ನೇಹ ಮುಂದುವರಿಸಿದ್ದಳು. ಪ್ರಕಾಶ್‌ಗೆ ಜೆಸಿಬಿ ಖರೀದಿಸಲು ಆರ್ಥಿಕವಾಗಿ ಸಹಾಯ ಕೂಡ ಮಾಡಿದ್ದಳು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬೆಂಗಳೂರು ಮೂಲದ ಸರ್ವಮ್​ನಿಂದ ಎಐ ಸಂಚಲನ; ಈ ಕಂಪನಿ ಹಿಂದಿನ ಇಬ್ಬರು ವ್ಯಕ್ತಿಗಳು ಯಾರು? – Kannada News | Sarvam AI, the Bengaluru based startup and its new products and co founders

ಬೆಂಗಳೂರು, ಫೆಬ್ರುವರಿ 10: ಭಾರತೀಯ ಭಾಷೆಗಳಲ್ಲಿ ಎಐ ಸೇವೆ ಒದಗಿಸಬೇಕು ಮತ್ತು ಜಾಗತಿಕ ಎಐ ಮಾಡಲ್​ಗಳಿಗೆ ಯಾವುದರಲ್ಲೂ ಕಡಿಮೆ ಇರಬಾರದು, ಎನ್ನುವ ಸರ್ಕಾರದ ಆಶಯದಂತೆ ಸರ್ವಮ್ ಎಐ (Sarvam AI) ರೂಪುಗೊಳ್ಳುತ್ತಿದೆ. 2023ರಲ್ಲಿ ಶುರುವಾದ ಸರ್ವಮ್ ಎಐ ತನ್ನ ವಿವಿಧ ಲ್ಯಾಂಗ್ವೇಜ್ ಸೇವೆಗಳಿಂದ ಗಮನ ಸೆಳೆಯತೊಡಗಿದೆ. ವರ್ಷದ ಹಿಂದೆ ಎಐ ಮಾಡಲ್​ಗಳನ್ನು ಬಿಡುಗಡೆ ಮಾಡಿದ್ದ ಸರ್ವಮ್ ಇದೀಗ ಎರಡು ಹೊಸ ಪ್ರಾಡಕ್ಟ್ಸ್ ಲಾಂಚ್ ಮಾಡಿದೆ. ಸರ್ವಮ್ ವಿಷನ್ ಮತ್ತು ಬುಲ್​ಬುಲ್ ವಿ3 ಮಾಡಲ್​ಗಳು ಬಿಡುಗಡೆ ಆಗಿವೆ.

ಈ ಎರಡೂ ಮಾಡಲ್​ಗಳು ಚ್ಯಾಟ್​ಜಿಪಿಟಿ ಮತ್ತು ಜೆಮಿನಿಯ ಅಡ್ವಾನ್ಸ್ಡ್ ವರ್ಷನ್​ಗಳಿಗೆ ಪೈಪೋಟಿ ನೀಡುವಷ್ಟು ಉತ್ತಮ ಪ್ರದರ್ಶನ ತೋರುತ್ತಿವೆ. ಸರ್ವಮ್ ವಿಷನ್ ಮಾಡಲ್ ಭಾರತೀಯ ಭಾಷೆಗಳ ಡಾಕ್ಯುಮೆಂಟ್​ಗಳನ್ನು ಸಂಸ್ಕರಿಸಬಲ್ಲುದು. ಬುಲ್​ಬುಲ್ ವಿ3 ಮಾಡಲ್ ಪಠ್ಯವನ್ನು ಮಾತಿಗೆ ಪರಿವರ್ತಿಸಬಲ್ಲುದು. ಕನ್ನಡವೂ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಇದರ ಸೇವೆ ಇದೆ. ಇದರ ಕನ್ನಡ ಸೇವೆ ಪರಿಶೀಲಿಸಿದಾಗ, ಅಪ್ಪಟ ಕನ್ನಡಿಗರ ಶೈಲಿಯಲ್ಲಿ ಓದಿದ ರೀತಿ ಭಾಸವಾಗಿದ್ದು ಹೌದು. ಈ ವಿಚಾರದಲ್ಲಿ ಚ್ಯಾಟ್​ಜಿಟಿಪಿ, ಗೂಗಲ್ ಜೆಮಿನಿ, ಡೀಪ್​ಸೀಕ್ ಇತ್ಯಾದಿ ಯಾವ ಮಾಡಲ್​ಗಳು ಸಾಟಿ ಇಲ್ಲ ಎನ್ನಲಾಗತ್ತಿದೆ.

ಇದನ್ನೂ ಓದಿ: ಸರ್ವಮ್ ಎಐನಿಂದ ಹೊಸ ಮಾಡಲ್; ಡಾಕ್ಯುಮೆಂಟ್ ಇಂಟೆಲಿಜೆನ್ಸ್​ನಲ್ಲಿ ವಿಶ್ವಲ್ಲೇ ಬೆಸ್ಟ್; ಕಟು ಟೀಕಾಕಾರರಿಗೂ ಅಚ್ಚರಿ

ಸರ್ವಮ್ ಎಐ ಹಿಂದಿದ್ದಾರೆ ವಿವೇಕ್ ರಾಘವನ್ ಮತ್ತು ಪ್ರತ್ಯುಶ್ ಕುಮಾರ್

ಐಐಟಿ ಎಂಜಿನಿಯರುಗಳಾದ ವಿವೇಕ್ ರಾಘವನ್ ಮತ್ತು ಪ್ರತ್ಯುಶ್ ಕುಮಾರ್ ಅವರು 2023ರ ಆಗಸ್ಟ್ ತಿಂಗಳಲ್ಲಿ ಸರ್ವಮ್ ಎಐ ಅನ್ನು ಸ್ಥಾಪಿಸಿದ್ದಾರೆ. ಬೆಂಗಳೂರಿನಲ್ಲಿ ಇದರ ಕಚೇರಿ ಇರುವುದು. ಐಐಟಿ ಡೆಲ್ಲಿಯಲ್ಲಿ ಬಿಟೆಕ್, ಅಮೆರಿಕದ ಕಾರ್ನೇಜೀ ಮೆಲ್ಲೋನ್ ಯೂನಿವರ್ಸಿಟಿಯಲ್ಲಿ ಪಿಎಚ್​ಡಿ ಮಾಡಿದ್ದಾರೆ.

ವಿವೇಕ್ ರಾಘವನ್ ಅವರು ಆಧಾರ್ ಪ್ರಾಜೆಕ್ಟ್​ನಲ್ಲೂ ಭಾಗಿಯಾಗಿದ್ದಾರೆ. 2010ರಲ್ಲಿ ಆಧಾರ್ ಪ್ರೋಗ್ರಾಮ್​ನಲ್ಲಿ ಚೀಫ್ ಬಯೋಮೆಟ್ರಿಕ್ ಆರ್ಕಿಟೆಕ್ಟ್ ಆಗಿ ಕೆಲಸ ಮಾಡಿದ್ದಾರೆ. ಆಧಾರ್​ನ ಬಯೋಮೆಟ್ರಿಕ್ ಸಿಸ್ಟಂಗಳನ್ನು ಸಮರ್ಪಕವಾಗಿ ರೂಪಿಸುವುದರ ಹಿಂದೆ ಅವರ ಶ್ರಮ ಇದೆ.

ಇದನ್ನೂ ಓದಿ: ಹೊಸ ಇಪಿಎಫ್​ಒ ಆ್ಯಪ್​ನಲ್ಲಿ ಯುಪಿಐ ಮೂಲಕ ಹಣ ವಿತ್​ಡ್ರಾಗೆ ಅವಕಾಶ?

ಪ್ರತ್ಯುಶ್ ಕುಮಾರ್ ಬಗ್ಗೆ…

2014ರಲ್ಲಿ ಪಿಎಚ್​​ಡಿ ಮಾಡಿರುವ ಪ್ರತ್ಯುಶ್ ಕುಮಾರ್ ಅವರು ಐಬಿಎಂನಲ್ಲಿ ಕೆಲಸ ಮಾಡಿದ್ದಾರೆ. ಒನ್ ಫೋರ್ತ್ ಲ್ಯಾಬ್ಸ್, ಎಐ4ಭಾರತ್ ಕಂಪನಿಗಳ ಸಹ-ಸಂಸ್ಥಾಪಕರಾಗಿದ್ದಾರೆ. ಆನ್ಲೈನ್ ಶಿಕ್ಷಣ ಒದಗಿಸುವ ಪಧ್​ಎಐ ಅನ್ನೂ ಆರಂಭಿಸಿದ ಅನುಭವ ಅವರಿಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತು – Kannada News | Nick Jonas talks about Hindi religion and praised it

ನಿಕ್ ಜೋನಸ್ (Nick Jonas), ಹಾಲಿವುಡ್​ನ (Hollywood) ಖ್ಯಾತ ಪಾಪ್ ಗಾಯಕ ಮತ್ತು ನಟ. ನಿಕ್ ಜೋನಸ್ ಭಾರತದ ಅಳಿಯ ಸಹ ಹೌದು, ಪ್ರಿಯಾಂಕಾ ಚೋಪ್ರಾ ಪತಿಯಾಗಿರುವ ನಿಕ್ ಜೋನಸ್, ಭಾರತದೊಂದಿಗೆ ಹತ್ತಿರದ ಬಂಧ ಹೊಮದಿದ್ದಾರೆ. ನಟಿ ಪ್ರಿಯಾಂಕಾ, ನಿಕ್ ಜೋನಸ್​​ಗೆ ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಬಗ್ಗೆ ಕಲಿಸಿಕೊಟ್ಟಿದ್ದಾರೆ. ಇತ್ತೀಚೆಗಿನ ಸಂದರ್ಶನದಲ್ಲಿ ಭಾರತ ಮತ್ತು ವಿಶೇಷವಾಗಿ ಹಿಂದೂ ಧರ್ಮದ ಬಗ್ಗೆ ನಿಕ್ ಜೋನಸ್ ಮಾತನಾಡಿದ್ದಾರೆ, ಹಿಂದೂ ಧರ್ಮದ ಬಗ್ಗೆ ಅಪಾರ ಗೌರವವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ‘ಸ್ಯಾಚ್ ಸಂಗ್ ಶೋ’ನಲ್ಲಿ (Zach Sang Show) ಮಾತನಾಡಿರುವ ನಿಕ್ ಜೋನಸ್, ‘ನಾನು ಹಿಂದೂ ಧರ್ಮದ ಬಗ್ಗೆ ಸಾಕಷ್ಟು ಕಲಿಯುತ್ತಿದ್ದೇನೆ. ಹಿಂದೂ ಧರ್ಮ ನಿಜಕ್ಕೂ ಅದ್ಭುತವಾಗಿದೆ. ವಿಶೇಷವಾಗಿ ಹಿಂದೂ ಧರ್ಮದ ಕರ್ಮದ ಸಿದ್ಧಾಂತ ನನ್ನನ್ನು ಹೆಚ್ಚು ಪ್ರಭಾವಿಸಿದೆ. ನಾವು ಇತರರಿಗೆ ಒಳ್ಳೆಯದನ್ನು ಮಾಡಿದರೆ ಅದು ನಮಗೆ ಮರಳಿ ಬರುತ್ತದೆ, ಕೆಟ್ಟದು ಮಾಡಿದರೆ ನಮಗೆ ಕೆಟ್ಟದು ಆಗುತ್ತದೆ ಎಂಬ ತತ್ವವು ನನಗೆ ತುಂಬಾ ಇಷ್ಟ’ ಎಂದಿದ್ದಾರೆ. ಜೊತೆಗೆ ಅಲ್ಲದೆ ಭಾರತದ ಹಬ್ಬಗಳು ಮತ್ತು ಸಂಪ್ರದಾಯಗಳು ಈಗ ತಮ್ಮ ಮನೆಯ ಅವಿಭಾಜ್ಯ ಅಂಗವಾಗಿವೆ, ನಾನು ಭಾರತೀಯ ಹಬ್ಬಗಳನ್ನು ಬಹಳ ಇಷ್ಟಪಟ್ಟು ಆಚರಿಸುತ್ತೇನೆ’ ಎಂದಿದ್ದಾರೆ ನಿಕ್.

ತಮ್ಮ ಪುತ್ರಿ ಮಾಲತಿ ಮೇರಿ ಅವರನ್ನು ಹಿಂದೂ ಮತ್ತು ಕ್ರಿಶ್ಚಿಯನ್ ಎರಡು ಧರ್ಮಗಳ ಸಮನ್ವಯದೊಂದಿಗೆ ಬೆಳೆಸುತ್ತಿರುವುದಾಗಿ ನಿಕ್ ತಿಳಿಸಿದ್ದಾರೆ. ‘ನಮ್ಮ ಮಗಳು ಹಿಂದೂ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅದರ ಅರ್ಥಪೂರ್ಣ ಜೀವನ ಕ್ರಮವನ್ನು ಅಳವಡಿಸಿಕೊಳ್ಳಬೇಕು ಎಂಬುದು ನಮ್ಮ ಆಶಯ. ಬಹುಸಂಸ್ಕೃತಿಯ ಕುಟುಂಬವನ್ನು ಹೊಂದಿರುವುದು ನನ್ನ ಸೌಭಾಗ್ಯ’ ಎಂದು ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಪ್ರಿಯಾಂಕಾ ಚೋಪ್ರಾ ಮನವಿಯನ್ನು ಪುರಸ್ಕರಿಸಿದ ರಾಜಮೌಳಿ, ಆದರೆ…

ನಿಕ್ ಜೋನಸ್ ಅವರ ಈ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ನೆಟ್ಟಿಗರು ನಿಕ್ ಜೋನಸ್ ಅನ್ನು ‘ರಾಷ್ಟ್ರೀಯ ಅಳಿಯ’ ಎಂದು ಕರೆಯುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಸದ್ಯಕ್ಕೆ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದು, ನಿಕ್ ಜೋನಾಸ್ ಅವರು ಪತ್ನಿಯ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ನಿಕ್ ಸಹ ಲೈವ್ ಕಾನ್ಸರ್ಟ್, ಹೊಸ ಆಲ್ಬಂ ಮತ್ತು ಸಿನಿಮಾ ನಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಅವರು 2018ರಲ್ಲಿ ವಿವಾಹವಾದರು. ನಿಕ್ ಜೋನಸ್, ಪ್ರಿಯಾಂಕಾ ಅವರಿಗಿಂತಲೂ ವಯಸ್ಸಿನಲ್ಲಿ 10 ವರ್ಷ ಚಿಕ್ಕವರು. ಈ ವಯಸ್ಸಿನ ಅಂತರದ ಕಾರಣಕ್ಕೆ ಆರಂಭದಲ್ಲಿ ಈ ಜೋಡಿ ಟ್ರೋಲ್​​ಗೆ ಒಳಗಾಗಿತ್ತು. ಅಲ್ಲದೆ, ಇವರ ಅದ್ಧೂರಿ ವಿವಾಹ ಭಾರತದಲ್ಲಿ ಭಾರತೀಯ ಸಂಸ್ಕೃತಿಯಂತೆ ನಡೆದಿತ್ತು. ಆಗಲೂ ಸಹ ಇದನ್ನು ಪಿಆರ್ ಸ್ಟಂಟ್ ಎಂದೆಲ್ಲ ಕರೆಯಲಾಗಿತ್ತು. ಆದರೆ ಮದುವೆಯಾಗಿ ಇಷ್ಟು ವರ್ಷಗಳ ಬಳಿಕವೂ ಈ ಜೋಡಿ ಖುಷಿಯಾಗಿ ಒಟ್ಟಿಗೆ ಇದ್ದಾರೆ. ಇಬ್ಬರಿಗೂ ಮಾಲತಿ ಹೆಸರಿನ ಮುದ್ದಾದ ಮಗಳು ಸಹ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 1:21 pm, Tue, 10 February 26

Source link

ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!

ಬೆಂಗಳೂರು, ಫೆಬ್ರವರಿ 10: ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಬಂದಿರುವ ಸಿಸಿಟಿವಿ ವಿಡಿಯೋ ಕೆಲವು ದಿನಗಳ ಹಿಂದೆ ಜನರನ್ನು ಭಯಭೀತರನ್ನಾಗಿಸಿತ್ತು. ಇದೀಗ ಮತ್ತೆ ಅಂಜನಾಪುರದ 5ಜಿ ಬ್ಲಾಕ್​​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಸಂದೀಪ್ ಎಂಬುವರ ಮನೆ ಗೇಟ್​ ಬಳಿ ಚಿರತೆ ಕಾಣಿಸಿಕೊಂಡಿದೆ. ತಡರಾತ್ರಿ ಮನೆ ಗೇಟ್ ಒಳಗೇ ಬಂದ ಚಿರತೆ ನಂತರ ಹೊರ ಹೋಗುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! – Kannada News | Why Online Gaming Addiction Is Turning Deadly for Youth

ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು!

ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತರೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ ಆಗಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್​ಲೈನ್​ ಗೇಮಿಂಗ್ (Online Gaming), ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್​ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಕೆಲ ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು ಆ ಗೀಳು ಇನ್ನೂ ವಿಕೋಪಕ್ಕೆ ತಿರುಗಿ ಇಡೀ ಕುಟುಂಬವೇ ಪ್ರಾಣ ಕಳೆದುಕೊಳ್ಳುವ ದುಸ್ಥಿತಿ ಬಂದಿದೆ. ಅದಕ್ಕೆ ಉದಾಹರಣೆಯಾಗಿ ಇತ್ತೀಚಿನ ಮೂರು ಪ್ರಕರಣಗಳು ದೇಶವನ್ನೇ ಬೆಚ್ಚಿಬೀಳಿಸಿವೆ.

ಘಟನೆ-1: ಗಾಜಿಯಾಬಾದ್ – ಆಟದ ಅಂತಿಮ ಟಾಸ್ಕ್‌ಗಾಗಿ ಮೂವರು ಸಹೋದರಿಯರ ಬಲಿ

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನೆಲೆಸಿದ್ದ 12, 14 ಮತ್ತು 16 ವರ್ಷದ ಮೂವರು ಸಹೋದರಿಯರು ಕೋರಿಯನ್ ಲವ್ ಗೇಮ್​ ಒಂದಕ್ಕೆ ಇನ್ನಿಲ್ಲದಂತೆ ಅಡಿಕ್ಟ್ ಆಗಿದ್ದರು. ಕೋವಿಡ್ ಸಮಯದಲ್ಲಿ ಮೂವರು ಟೈಮ್ ಪಾಸ್​ಗೆಂದು ಈ ಗೇಮ್​ ಆಡಲು ಶುರು ಮಾಡಿದ್ದರೂ ಕ್ರಮೇಣ ಅದು ಚಟವಾಗಿ ಪರಿಣಮಿಸಿತ್ತು. ಎಷ್ಟರ ಮಟ್ಟಿಗೆಂದರೆ ಅಕ್ಕ-ತಂಗಿಯರೆಲ್ಲರೂ ಶಾಲೆಗೆ ಹೋಗುವುದನ್ನೂ ನಿಲ್ಲಿಸಿದ್ದರು. ಇವರ ವರ್ತನೆಗೆ ಬೇಸತ್ತ ತಂದೆ-ತಾಯಿ ಆಟವಾಡಬೇಡಿ ಎಂದು ತಡೆದಾಗ, ಮಾನಸಿಕ ಒತ್ತಡಕ್ಕೆ ಸಿಲುಕಿದ ಮಕ್ಕಳು, ಬೆಳಗಿನ ಜಾವ 2 ಗಂಟೆಗೆ, ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಒಬ್ಬೊಬ್ಬರಾಗಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ ಬೆಂಗಳೂರು: ಫ್ರೀಫೈರ್ ಗೇಮ್​​ಗೆ ಅಡಿಕ್ಟ್! ಅಕ್ಕನ ಮಗನನ್ನೇ ಕೊಂದ ಮಾವ

ಘಟನೆ – 2: ಬೆಂಗಳೂರು – ಗೇಮ್ ಚಟಕ್ಕೆ ಬಿದ್ದವನ ಕೊಲೆ, ಬಳಿಕ ಸಾಮೂಹಿಕ ಆತ್ಮಹತ್ಯೆ

ಸೋಲದೇವನಹಳ್ಳಿಯಲ್ಲಿ ಫ್ರೀಫೈರ್ ಗೇಮ್‌ಗೆ ಅಡಿಕ್ಟ್ ಆಗಿದ್ದ ಬಾಲಕ ಅಮೋಘಕೀರ್ತಿ ಹಣಕ್ಕಾಗಿ ಮನೆಯವರನ್ನು ಪೀಡಿಸುತ್ತಿದ್ದ. ಇದರಿಂದ ಬೇಸತ್ತ ಆತನ ಮಾವ ನಾಗಪ್ರಸಾದ್ ಬಾಲಕನನ್ನೇ ಕೊಲೆ ಮಾಡಿದ್ದ. ಈ ಅಪರಾಧದ ಪಶ್ಚಾತ್ತಾಪ, ಸಮಾಜದ ಒತ್ತಡ ಮತ್ತು ಮನೋವ್ಯಥೆ ಕುಟುಂಬವನ್ನು ಸಂಪೂರ್ಣವಾಗಿ ಕುಗ್ಗಿಸಿತ್ತು. ಕೊಲೆ ಬಳಿಕ ಜೈಲು ಸೇರಿದ್ದವ ನಂತರ ಜಾಮೀನಿನ ಮೇಲೆ ಹೊರಬಂದು ಟೆಂಪಲ್ ರನ್ ಮಾಡಿದರೂ ಮನಸ್ಸಿಗೆ ಶಾಂತಿ ಸಿಕ್ಕಿರಲಿಲ್ಲ. ಕೊನೆಗೆ ಬಿಹಾರ ಪ್ರವಾಸದ ವೇಳೆ ನಾಗಪ್ರಸಾದ್ ಸೇರಿದಂತೆ ಕುಟುಂಬದ ನಾಲ್ವರೂ ನಿದ್ದೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕನೊಬ್ಬನ ಗೇಮಿಂಗ್ ಚಟ ಇಡೀ ಕುಟುಂಬವನ್ನೇ ಸುಡುಗಾಡು ಸೇರಿಸಿದೆ.

ಇದನ್ನೂ ಓದಿ ಫ್ರೀಫೈರ್​​ಗೆ ಅಡಿಕ್ಟ್ ಆಗಿದ್ದ ಅಕ್ಕನ ಮಗನನ್ನೇ ಕೊಂದಿದ್ದ ಮಾವ ಸೇರಿ ಕುಟುಂಬದ ನಾಲ್ವರು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣು!

ಕೇವಲ ಮಾನಸಿಕ ಒತ್ತಡ ಮಾತ್ರವಲ್ಲ, ದೈಹಿಕವಾಗಿಯೂ ಪರಿಣಾಮ ಬೀರುತ್ತೆ ಆನ್​ಲೈನ್ ಗೇಮ್!

ಆನ್​ಲೈನ್ ಗೇಮ್​ ಕೇವಲ ಮಾನಸಿಕ ಮಾತ್ರವಲ್ಲದೆ ದೈಹಿಕವಾಗಿಯೂ ಮಾರಕವಾಗಿದೆ ಎಂಬುದಕ್ಕೆ ಮೀರತ್​ನ ಘಟನೆಯೊಂದು ಸಾಕ್ಷಿಯಾಗಿದೆ.  22 ವರ್ಷದ ಮೊಹಮ್ಮದ್ ಕೈಫ್ ಪಬ್‌ಜಿ ಗೇಮ್‌ಗೆ ತೀವ್ರವಾಗಿ ಅಡಿಕ್ಟ್ ಆಗಿದ್ದ. ರಾತ್ರಿ 3 ಗಂಟೆಗೆ ಪಬ್‌ಜಿ ಆಡುತ್ತಿದ್ದಾಗಲೇ ಅವನಿಗೆ ಹೈಪರ್‌ಟೆನ್ಷನ್ ಉಂಟಾಗಿ, ಮೆದುಳಿನಲ್ಲಿ ರಕ್ತಸ್ರಾವವಾಗಿತ್ತು. ರಕ್ತದೊತ್ತಡ 300ಕ್ಕಿಂತ ಹೆಚ್ಚಾಗಿತ್ತು. ಎರಡು ದಿನಗಳ ಚಿಕಿತ್ಸೆ ಬಳಿಕವೂ ಕೈಫ್ ಪ್ರಾಣ ಕಳೆದುಕೊಂಡಿದ್ದಾನೆ. ವೈದ್ಯರ ಪ್ರಕಾರ, ಡೋಪಮೈನ್ ಹೆಚ್ಚಳ, ನಿದ್ರಾಹೀನತೆ ಮತ್ತು ಮಾನಸಿಕ ಒತ್ತಡವೇ ಈ ಸಾವಿಗೆ ಕಾರಣ. ಇದು ನೇರವಾಗಿ ಆತ್ಮಹತ್ಯೆಯಲ್ಲದಿದ್ದರೂ, ಗೇಮ್ ಗೀಳಿಗೆ ಬಿದ್ದ ಯುವಕ ಹೊರಗಿನ ಪ್ರಪಂಚವನ್ನೇ ಮರೆತು, ತನ್ನ ಆರಗ್ಯವನ್ನೂ ಲೆಕ್ಕಿಸದೆ, ಹಗಲು ರಾತ್ರಿ ಗೇಮ್ ಆಡಿ ತನ್ನ ಪ್ರಾಣವನ್ನು ತಾನೆ ಕಳೆದುಕೊಂಡ ಘಟನೆಯಾಗಿದೆ.

ಇದನ್ನೂ ಓದಿ ಆನ್​ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಸಹೋದರಿಯರು 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

 ಆನ್‌ಲೈನ್ ಗೇಮಿಂಗ್ ವಿರುದ್ದ ಕರ್ನಾಟಕದ ಧ್ವನಿ

ಇಂತಹ ಹಲವು ಘಟನೆಗಳು ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದರೂ, ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಹಾಗೂ ಜೂಜಾಟದ ವಿರುದ್ಧ ವಿವಿಧ ಹಂತಗಳಲ್ಲಿ ರಾಜಕೀಯ ವಲಯದಿಂದ ಗಟ್ಟಿ ಧ್ವನಿಗಳು ಕೇಳಿಬಂದಿವೆ. 2021ರಲ್ಲಿ ಕರ್ನಾಟಕ ಪೊಲೀಸ್ (ತಿದ್ದುಪಡಿ) ಕಾಯಿದೆಯನ್ನು ಮಂಡಿಸುವ ಮೂಲಕ ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಆಗಿನ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಪ್ರಮುಖ ಪಾತ್ರ ವಹಿಸಿದ್ದರು.

ಬೆಂಗಳೂರಿನ ಕೆಂಗೇರಿಯಲ್ಲಿ ನಡೆದ ಆನ್‌ಲೈನ್ ಜೂಜಾಟ ನಿಷೇಧಕ್ಕೆ ಆಗ್ರಹಿಸಿದ ಬೃಹತ್ ವಿದ್ಯಾರ್ಥಿ ರ್ಯಾಲಿಯಲ್ಲಿ ಶಾಸಕ ಎಸ್.ಟಿ. ಸೋಮಶೇಖರ್ ಭಾಗವಹಿಸಿ ಬೆಂಬಲ ಸೂಚಿಸಿದ್ದರು. ಮಾಜಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಆನ್‌ಲೈನ್ ಗೇಮಿಂಗ್‌ನಿಂದ ಸಮಾಜಕ್ಕೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಂಪುಟ ಸಭೆಯಲ್ಲಿ ನಿಷೇಧದ ಪರವಾಗಿ ಧ್ವನಿ ಎತ್ತಿದ್ದರು. ಇತ್ತೀಚೆಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆನ್‌ಲೈನ್ ಬೆಟ್ಟಿಂಗ್ ಹಾಗೂ ಗೇಮಿಂಗ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು ತರಲು ಸರ್ಕಾರ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದರು.

ಇದನ್ನೋ ಓದಿ ಹೆಡ್​ಫೋನ್ ಹಾಕಿಕೊಂಡು ಪಬ್​​ಜಿ ಆಡುತ್ತಿದ್ದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಹೆಚ್ಚಾಯ್ತು ರಕ್ತದೊತ್ತಡ, ಮೆದುಳಿನಲ್ಲಿ ರಕ್ತಸ್ರಾವವಾಗಿ ಸಾವು

ಕಳೆದ ಒಂದು ವರ್ಷದಲ್ಲಿ ಭಾರತದ 100ಕ್ಕೂ ಹೆಚ್ಚು ಜೀವಗಳು ಇದೇ ಗೇಮ್ ಗೀಳಿಗೆ ಬಲಿಯಾಗಿವೆ. ಅಪ್ರಾಪ್ತರಿಗೆ ಟಾಸ್ಕ್ ಆಧಾರಿತ, ಹಿಂಸಾತ್ಮಕ ಹಾಗೂ ಮಾನಸಿಕ ಒತ್ತಡ ನೀಡುತ್ತಿರುವ ಈ ಆನ್​ಲೈನ್ ಗೇಮ್​ಗಳು ಇನ್ನೆಷ್ಟು ಜೀವಗಳನ್ನು ಬಲಿಪಡೆಯಬೇಕೆಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ – Kannada News | Sunetra Pawar Assumes Office as Maharashtra’s Deputy Chief Minister

ಪುಣೆ, ಫೆಬ್ರವರಿ 10: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದಾದರ್‌ನ ಚೈತ್ಯಭೂಮಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಅವರು ತಮ್ಮ ಹಿರಿಯ ಮಗ ಪಾರ್ಥ್ ಪವಾರ್ ಮತ್ತು ಹಿರಿಯ ಎನ್‌ಸಿಪಿ ನಾಯಕರೊಂದಿಗೆ ಸಚಿವಾಲಯಕ್ಕೆ ತೆರಳಿದರು. ಸುನೇತ್ರಾ ಪವಾರ್ ಅವರಿಗೆ ಈ ಹಿಂದೆ ಅಜಿತ್ ಪವಾರ್ ಹೊಂದಿದ್ದ ಅದೇ ಖಾತೆಗಳನ್ನು ನೀಡಲಾಗಿದೆ. ಜನವರಿ 31 ರಂದು ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಅವರಿಗೆ ಪ್ರಮಾಣವಚನ ಬೋಧಿಸಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Exit mobile version