ಸಚಿವ ಜಮೀರ್ ಅಚ್ಚರಿಯ ನಡೆ: ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿದ ಜಮೀರ್, ಕುತೂಹಲ ಮೂಡಿಸಿದ ಚರ್ಚೆ! – Kannada News | Karnataka Politics: Zameer Naseer Meet After CM Siddaramaiah’s Davangere Upset

ಬೆಂಗಳೂರು, ಏ.15: ದಾವಣಗೆರೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿವಾದದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ಅವರನ್ನು ವಜಾ ಮಾಡಿದ ನಂತರ, ಸಚಿವ ಜಮೀರ್​​​ ಜತೆ ಸಿಎಂ ಸಿದ್ಧರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಈ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗರಂ ಆಗಿದ್ದರು. ಹೈಕಮಾಂಡ್​ ಕೇಳುವ ಎಲ್ಲ ಪ್ರಶ್ನೆಗೂ ನೀನೇ ಉತ್ತರ ನೀಡುಬೇಕು ಎಂದು ಹೇಳಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ನಸೀರ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ ನಸೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ. ನಸೀರ್ ಅಹ್ಮದ್ ಅವರ ವಜಾ ಬಳಿಕ ನಡೆದ ಮೊದಲ ಭೇಟಿ ಇದಾಗಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಅವರಿಗೆ “ಹೈಕಮಾಂಡ್ ದೂರುಗಳ ಬಗ್ಗೆ ನೀನೇ ಉತ್ತರ ನೀಡಬೇಕು” ಎಂದು ತಾಕೀತು ಮಾಡಿದ್ದರು. ಇದರ ಬೆನ್ನಲ್ಲೇ ಜಮೀರ್ ಅಹ್ಮದ್ ಅವರು ಅಸಮಾಧಾನಗೊಂಡಿರುವ ನಾಯಕರನ್ನು ಭೇಟಿ ಮಾಡುತ್ತಿರುವುದು ಮಹತ್ವ ಪಡೆದಿದೆ.

ಇದನ್ನೂ ಓದಿ: ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್!: ಹೈಕಮಾಂಡ್ ನಿನ್ನ ಮೇಲೆ ಸಿಟ್ಟಾಗಿದೆ, ನೀನೇ ಸಮಜಾಯಿಷಿ ನೀಡಬೇಕು

ದಾವಣಗೆರೆಯಲ್ಲಿ ಎದ್ದಿರುವ ಬಂಡಾಯದ ಕಿಚ್ಚು ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಅವರ ಅಸಮಾಧಾನವನ್ನು ಶಮನಗೊಳಿಸಲು ಜಮೀರ್ ಅಹ್ಮದ್ ಸಂಧಾನಕ್ಕೆ ಇಳಿದಿದ್ದಾರೆಯೇ ಅಥವಾ ಮುಂದಿನ ಹೋರಾಟದ ಬಗ್ಗೆ ಚರ್ಚಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ದಾವಣಗೆರೆ ಚುನಾವಣೆಯಲ್ಲಿ ಆಗಿರುವ ಗೊಂದಲದಿಂದ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್​​​​​​​​​​​​​​​​​ ಮುಸ್ಲಿಂ ನಾಯಕರ ತಲೆದಂಡ ಮಾಡುತ್ತಿದೆ ಎಂದು ಹೇಳಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:47 am, Wed, 15 April 26

Source link

Sri Guru Bhairavaikya Mandir: ಮೋದಿ ಲೋಕಾರ್ಪಣೆಗೊಳಿಸಿದ ಆದಿಚುಂಚನಗಿರಿಯ ಶ್ರೀ ಗುರುಭಾವೈಕ್ಯ ಮಂದಿರದ ವಿಶೇಷತೆ ಏನು ಗೊತ್ತಾ? – Kannada News | PM Modi Opens Sri Guru Bhairavaikya Mandira, Adichunchanagiri: Honoring Balgangadharanatha Swamiji

ನಾಗಮಂಗಲ (ಮಂಡ್ಯ): ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು(ಏ.15) ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದ್ದು, ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಇತಿಹಾಸದಲ್ಲಿ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು. ಆದ್ದರಿಂದ ಮೋದಿ ಭೇಟಿ ನೀಡಿದ ಶ್ರೀ ಗುರುಭಾವೈಕ್ಯ ಮಂದಿರದ ವಿಶೇಷತೆ ಏನು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶ್ರೀ ಗುರುಭಾವೈಕ್ಯ ಮಂದಿರ:

ಈ ಸುಂದರ ಮಂದಿರವು ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಸಮಾಧಿ ಸ್ಥಳವಾಗಿದೆ (ಲಿಂಗೈಕ್ಯರಾದ ಸ್ಥಳ). ಶ್ರೀಗಳು ಜನವರಿ 13, 2013ರಂದು ಲಿಂಗೈಕ್ಯರಾದರು. ಅವರ ದಿವ್ಯ ಸ್ಮರಣೆ ಹಾಗೂ ಭಕ್ತರ ದರ್ಶನಕ್ಕಾಗಿ ಅತ್ಯಂತ ಶ್ರದ್ಧೆಯಿಂದ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ.

ವಾಸ್ತುಶಿಲ್ಪದ ವೈಭವ; ಕಣ್ಮನ ಸೆಳೆಯುವ ಶಿಲ್ಪಕಲೆ:

ಶ್ರೀ ಗುರುಭಾವೈಕ್ಯ ಮಂದಿರವು ಭಾರತೀಯ ವಾಸ್ತುಶಿಲ್ಪದ ಒಂದು ಅತ್ಯುತ್ತಮ ನಿದರ್ಶನವಾಗಿದೆ. ಇದು ಸಂಪೂರ್ಣವಾಗಿ ಕಲ್ಲಿನಿಂದ ಕೆತ್ತಲ್ಪಟ್ಟಿದ್ದು, ಅದ್ಭುತ ಶಿಲ್ಪಕಲೆಯನ್ನು ಒಳಗೊಂಡಿದೆ. ಮಂದಿರದ ಗರ್ಭಗುಡಿಯಲ್ಲಿ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಅಮೃತಶಿಲೆಯ ಭವ್ಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ನೋಡುವಾಗ ಗುರುಗಳು ನಮ್ಮ ಮುಂದೆಯೇ ಕುಳಿತಿದ್ದಾರೆ ಎಂಬ ಅನುಭವ ಭಕ್ತರಿಗಾಗುತ್ತದೆ. ಮಂದಿರದ ಒಳಗಿರುವ ಪ್ರಶಾಂತತೆಯು ಧ್ಯಾನ ಮತ್ತು ಆಧ್ಯಾತ್ಮಿಕ ಚಿಂತನೆಗೆ ಸೂಕ್ತವಾಗಿದ್ದು, ಇಲ್ಲಿಗೆ ಬರುವ ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ ದೊರೆಯುತ್ತದೆ.

ಆಧ್ಯಾತ್ಮಿಕ ಶಕ್ತಿ; ಭಕ್ತರ ಪಾಲಿನ ‘ನಡೆದಾಡುವ ದೇವರು’:

ಆದಿಚುಂಚನಗಿರಿ ಮಠದ ಇತಿಹಾಸದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಕಾಲವನ್ನು ‘ಸುವರ್ಣಯುಗ’ ಎಂದು ಕರೆಯಲಾಗುತ್ತದೆ. ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಕ್ರಾಂತಿಕಾರಿ ಕಾರ್ಯಗಳಿಂದಾಗಿ ಅವರು ಕೋಟ್ಯಂತರ ಭಕ್ತರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ಭಕ್ತರಿಗೆ ಇದು ಕೇವಲ ಒಂದು ಕಟ್ಟಡವಲ್ಲ; ಇದು ಗುರುಗಳ ದಿವ್ಯ ಚೇತನ ಸದಾ ಜಾಗೃತವಾಗಿರುವ ಶಕ್ತಿ ಕೇಂದ್ರವಾಗಿದೆ.

ದರ್ಶನದ ಮಾಹಿತಿ:

ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕರಿಗೆ ದರ್ಶನ ಲಭ್ಯವಿರುತ್ತದೆ. ಶ್ರೀಕ್ಷೇತ್ರಕ್ಕೆ ಬರುವ ಭಕ್ತರು ಕಾಲಭೈರವೇಶ್ವರ ಸ್ವಾಮಿಯ ದರ್ಶನದ ಜೊತೆಗೆ ಈ ಮಂದಿರಕ್ಕೂ ಭೇಟಿ ನೀಡುವುದನ್ನು ಮರೆಯಬೇಡಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 12:13 pm, Wed, 15 April 26

Source link

PM Modi in Adichunchanagiri: ಮೋದಿಯಿಂದ ಭೈರವೈಕ್ಯ ಮಂದಿರ ಲೋಕಾರ್ಪಣೆ! – Kannada News | PM Modi Inaugurates Sri Guru Bhairavaikya Mandira In Mandya

ಮಂಡ್ಯ, ಏಪ್ರಿಲ್ 15: ಕೊನೆಗೂ ಭಕ್ತರು ಕಾದು ಕುಳಿತಿದ್ದ ಕ್ಷಣ ಬಂದೇ ಬಿಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮೀಜಿಗಳ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ.

ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ 80 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ಮೂಡಿಬಂದಿದೆ. ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್! ಜಿಬಿಎ ಯಡವಟ್ಟಿನ ನಿರ್ಧಾರಕ್ಕೆ ಪ್ರಾಪರ್ಟಿ ಟ್ಯಾಕ್ಸ್ ಕಟ್ಟೋಕೆ ಆಗದೆ ನಿವಾಸಿಗಳು ಪರದಾಟ – Kannada News | Bengaluru Property Tax: New Waste Data Rule Blocks Apartment Tax Payments Online

ಬೆಂಗಳೂರು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಹೊಸ ಟೆನ್ಷನ್!

ಬೆಂಗಳೂರು, ಏಪ್ರಿಲ್ 15: ನಗರದಲ್ಲಿನ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಪ್ರಾಪರ್ಟಿ ಟ್ಯಾಕ್ಸ್ ಪಾವತಿಯಲ್ಲಿ ಹೊಸ ಸಮಸ್ಯೆ ಎದುರಾಗಿದೆ. ಜಿಬಿಎ (GBA) ತೆಗೆದುಕೊಂಡಿರುವ ಇತ್ತೀಚಿನ ನಿರ್ಧಾರದಿಂದಾಗಿ ನಿವಾಸಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಇದೀಗ ಕಸದ ವಿಲೇವಾರಿ ಕುರಿತು ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕಾಗಿದೆ.

ಜಿಬಿಎ ಹೊಸ ನಿಯಮಕ್ಕೆ ನಿವಾಸಿಗಳು ಕಂಗಾಲು

ಮನೆಯಲ್ಲಿ ಉತ್ಪತ್ತಿಯಾಗುವ ಒಣ ಕಸ ಮತ್ತು ಹಸಿ ಕಸದ ಪ್ರಮಾಣವನ್ನು ಪ್ರತ್ಯೇಕವಾಗಿ ದಾಖಲಿಸದಿದ್ದರೆ ಆನ್‌ಲೈನ್ ಮೂಲಕ ಪ್ರಾಪರ್ಟಿ ಟ್ಯಾಕ್ಸ್ ಕಟ್ಟಲು ಸಾಧ್ಯವಿಲ್ಲ. ಈ ನಿಯಮದಿಂದಾಗಿ ಅನೇಕರು ಟ್ಯಾಕ್ಸ್ ಕಟ್ಟಲು ಪರದಾಡುತ್ತಿದ್ದಾರೆ. ವಿಶೇಷವಾಗಿ ಅಪಾರ್ಟ್ಮೆಂಟ್‌ಗಳಲ್ಲಿ ದಿನವೂ 100 ಕಿಲೋಗ್ರಾಂಕ್ಕೂ ಹೆಚ್ಚು ಕಸ ಸಂಗ್ರಹವಾಗುತ್ತಿದ್ದು, ಈ ಮಟ್ಟವನ್ನು ಮೀರಿ ಹೋದರೆ ಜಿಬಿಎ ವತಿಯಿಂದ ಕಸದ ನಿರ್ವಹಣೆ ಮಾಡಲಾಗುವುದಿಲ್ಲ ಎಂಬ ಅಂಶ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ.

ಹಿಂದೆ ಈ ರೀತಿಯ ಆಯ್ಕೆಯೇ ಇರಲಿಲ್ಲ

ಹೀಗಾಗಿ ಹಲವಾರು ಅಪಾರ್ಟ್ಮೆಂಟ್‌ಗಳು ಖಾಸಗಿ ಸಂಸ್ಥೆಗಳ ಮೂಲಕವೇ ಕಸದ ವಿಲೇವಾರಿ ಮಾಡಿಸುತ್ತಿವೆ. ಆದರೆ ಈಗ ಪ್ರತಿ ಫ್ಲ್ಯಾಟ್‌ನ ನಿವಾಸಿಯೂ ತನ್ನದೇ ಆದ ಕಸದ ಲೆಕ್ಕವನ್ನು ಆನ್‌ಲೈನ್‌ನಲ್ಲಿ ನೀಡಬೇಕು ಎಂಬ ನಿಯಮ ಜಾರಿಗೆ ಬಂದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಅಂದಾಜಿನಲ್ಲಿ ಒಂದೊಂದು ಕೆಜಿ ಅಂತ ಲೆಕ್ಕ ಹಾಕಿ, ನಾಲ್ಕು ಕೆಜಿ ಅಂತ ದಾಖಲಿಸಿದ್ರೂ ಹಣ ಪಾವತಿ ಆಗ್ತಿಲ್ಲ100KGಗಿಂತ ಮೇಲೆ ದಾಖಲು ಮಾಡಬೇಕು ಅಂತ ತೋರಿಸುತ್ತಿದೆ ಎಂದು ನಿವಾಸಿಗಳು ದೂರುತ್ತಿದ್ದಾರೆ. ಹಿಂದೆ ಈ ರೀತಿಯ ಆಯ್ಕೆಯೇ ಇರಲಿಲ್ಲ ಎಂದು ನಿವಾಸಿಗಳು ಹೇಳುತ್ತಿದ್ದಾರೆ. ಈ ಕುರಿತು ಬೆಂಗಳೂರು ಅಪಾರ್ಟ್ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಮಲ್ಯ ತಕ್ಷಣ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.

ವರದಿ: ಅರುಣ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಮಲಲ್ಲಾನ ದರ್ಶನ ಪಡೆದ ‘ಕೈ’ ಪಡೆ: ಅಯೋಧ್ಯೆ ರಾಮಮಂದಿರಕ್ಕೆ ಕರ್ನಾಟಕ ಕಾಂಗ್ರೆಸ್ ಶಾಸಕರ ಭೇಟಿ! – Kannada News | 15 Congress MLAs from Karnataka Visit Ayodhya Ram Mandir

ಮಂಡ್ಯ, ಏ.15: ರಾಜ್ಯದ 15 ಕಾಂಗ್ರೆಸ್ ಶಾಸಕರು ಅಯೋಧ್ಯೆಗೆ ಭೇಟಿ ನೀಡಿ ರಾಮನ ದರ್ಶನ ಪಡೆದು ಸಂತೋಷ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಕಸರತ್ತು ನಡೆಸುತ್ತಿದ್ದ ಶಾಸಕರು, ನಂತರ ಅಯೋಧ್ಯೆಗೆ ತೆರಳಿ ರಾಮನ ಆಶೀರ್ವಾದ ಪಡೆದಿದ್ದಾರೆ. ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕರು, ರಾಮನ ದರ್ಶನ ಪಡೆಯಬೇಕೆಂಬುದು ತಮ್ಮ ಬಯಕೆಯಾಗಿತ್ತು ಎಂದು ತಿಳಿಸಿದ್ದಾರೆ. ಅಯೋಧ್ಯೆಯಲ್ಲಿರುವ ರಾಮವಿಗ್ರಹವನ್ನು ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿರುವುದು ಕರ್ನಾಟಕಕ್ಕೆ ಅತ್ಯಂತ ಸಂತೋಷ ತಂದಿದೆ ಎಂದು ಶಾಸಕರು ಹೇಳಿದ್ದಾರೆ. ಕರ್ನಾಟಕ ಹನುಮಂತನ ಜಾಗ ಎಂಬುದು ಹಾಗೂ ಅಯೋಧ್ಯೆಗೆ ರಾಜ್ಯದ ನಂಟಿದೆ ಎಂದು ಭಾವಿಸಲಾಗಿದೆ. ರಾಮನ ದರ್ಶನ ಲಭಿಸಿರುವುದು ತಮಗೆ ಬಹಳ ಸಂತೋಷವಾಗಿದೆ ಎಂದು ಭೇಟಿ ನೀಡಿದ ಶಾಸಕರು ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ? – Kannada News | PM Modi in Bengaluru: CM Siddaramaiah Submits 18 Point Memorandum for Karnataka’s Growth

ಬೆಂಗಳೂರು, ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಯಾವೆಲ್ಲ ಮನವಿಗಳನ್ನು ಮಾಡಿದ್ದಾರೆ ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ.

ಪ್ರಮುಖ 18 ಬೇಡಿಕೆಗಳು:

  • ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ: 1,123 ಎಕರೆ ಭೂಮಿ ನೀಡಿದ್ದರೂ ಅನುಷ್ಠಾನಗೊಳ್ಳದ ಈ ಯೋಜನೆಯ ಪುನರುಜ್ಜೀವನಕ್ಕೆ ಮನವಿ.
  • ಹೈ-ಸ್ಪೀಡ್ ರೈಲು ವಿಸ್ತರಣೆ: ಬೆಂಗಳೂರು-ಮೈಸೂರು ವಿಭಾಗವನ್ನು ಪ್ರಸ್ತಾವಿತ ಹೈ-ಸ್ಪೀಡ್ ರೈಲು ಕಾರಿಡಾರ್‌ನಲ್ಲಿ ಸೇರಿಸಲು ಕೋರಿಕೆ.
  • ಸಬರ್ಬನ್ ರೈಲು ಮತ್ತು ಮುಂಬೈ ಕಾರಿಡಾರ್: ಬೆಂಗಳೂರು ಉಪನಗರ ರೈಲು ಯೋಜನೆಗೆ ಹಣ ಬಿಡುಗಡೆ ಹಾಗೂ ಕಿತ್ತೂರು-ಕಲ್ಯಾಣ ಕರ್ನಾಟಕ ಸಂಪರ್ಕಿಸುವ ಬೆಂಗಳೂರು-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ ಆರಂಭಿಸಲು ವಿನಂತಿ.
  • ಜಲ ಜೀವನ್ ಮಿಷನ್ (JJM): ಕೇಂದ್ರದಿಂದ ಬರಬೇಕಾದ ₹17,554 ಕೋಟಿ ಬಾಕಿ ಹಣ ಬಿಡುಗಡೆಗೆ ಒತ್ತಾಯ.
  • 15ನೇ ಹಣಕಾಸು ಆಯೋಗದ ಅನುದಾನ: ಗ್ರಾಮ ಪಂಚಾಯತ್‌ಗಳಿಗೆ ಬರಬೇಕಾದ ₹2,860 ಕೋಟಿ ಅನುದಾನ ಬಿಡುಗಡೆಗೆ ಮನವಿ.
  • ರಾಷ್ಟ್ರೀಯ ಹೆದ್ದಾರಿ ಯೋಜನೆಗಳು: ಕಳೆದ 12 ವರ್ಷಗಳಿಂದ ಬಾಕಿ ಇರುವ ಹೊಸ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಂಜೂರಾತಿಗೆ ಕೋರಿಕೆ.
  • ಕಂದಾಯ ಕೊರತೆ ಅನುದಾನ: 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ₹5,495 ಕೋಟಿ ಬಿಡುಗಡೆಗೆ ವಿನಂತಿ.
  • ಬೆಂಗಳೂರಿಗೆ ವಿಶೇಷ ಪ್ಯಾಕೇಜ್: ನಗರದ ಮೂಲಸೌಕರ್ಯ ಅಭಿವೃದ್ಧಿಗಾಗಿ ₹26,000 ಕೋಟಿ ವಿಶೇಷ ಅನುದಾನಕ್ಕೆ ಬೇಡಿಕೆ.
  • ಮೇಕೆದಾಟು ಯೋಜನೆ: ಕುಡಿಯುವ ನೀರಿನ ಉದ್ದೇಶದ ಈ ಯೋಜನೆಗೆ ಶೀಘ್ರವಾಗಿ ಕೇಂದ್ರದ ಅನುಮೋದನೆಗೆ ಒತ್ತಾಯ.
  • ಭದ್ರಾ ಮೇಲ್ದಂಡೆ ಯೋಜನೆ: ಈ ಯೋಜನೆಗೆ ‘ರಾಷ್ಟ್ರೀಯ ಮಾನ್ಯತೆ’ ನೀಡಿ, ಘೋಷಿತ ₹5,300 ಕೋಟಿ ಸಹಾಯಧನ ಬಿಡುಗಡೆಗೆ ಮನವಿ.
  • ಕೃಷ್ಣಾ ಮೇಲ್ದಂಡೆ ಯೋಜನೆ (UKP-III): ಕೃಷ್ಣಾ ನ್ಯಾಯಾಧೀಕರಣ-2ರ ತೀರ್ಪನ್ನು ಗೆಜೆಟ್‌ನಲ್ಲಿ ಪ್ರಕಟಿಸಲು ಮತ್ತು ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಮನವಿ.
  • ಮಹದಾಯಿ (ಕಳಸಾ ನಾಲಾ): ಕುಡಿಯುವ ನೀರಿನ ಯೋಜನೆಗೆ ವನ್ಯಜೀವಿ ವಿಭಾಗದಿಂದ ಶೀಘ್ರ ಅನುಮತಿ ಕೊಡಿಸಲು ವಿನಂತಿ.
  • ನದಿಗಳ ಜೋಡಣೆ: ಗೋದಾವರಿ-ಕಾವೇರಿ ಮತ್ತು ಬೆಡ್ತಿ-ವರದಾ ಯೋಜನೆಗಳಲ್ಲಿ ಕರ್ನಾಟಕಕ್ಕೆ 40-45 TMC ನೀರು ಹಂಚಿಕೆಗೆ ಒತ್ತಾಯ.
  • ಮೀಸಲಾತಿ ರಕ್ಷಣೆ: ರಾಜ್ಯದ 56% ಮೀಸಲಾತಿ ನೀತಿಯನ್ನು ಸಂವಿಧಾನದ 9ನೇ ವೇಳಾಪಟ್ಟಿಗೆ ಸೇರಿಸಲು ಮನವಿ.
  • ST ಪಟ್ಟಿಗೆ ಸೇರ್ಪಡೆ: ರಾಜ್ಯ ಶಿಫಾರಸು ಮಾಡಿರುವ ಕೆಲವು ಹಿಂದುಳಿದ ಜಾತಿಗಳನ್ನು ಕೇಂದ್ರದ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೋರಿಕೆ.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಆರ್ಟಿಕಲ್ 371(J) ಅಡಿಯಲ್ಲಿ ವಾರ್ಷಿಕ ₹5,000 ಕೋಟಿ ಅನುದಾನ ಮತ್ತು ಪ್ರತಿ ಜಿಲ್ಲೆಯಲ್ಲೂ ಸಾರ್ವಜನಿಕ ವಲಯದ ಉದ್ಯಮ (PSU) ಸ್ಥಾಪನೆಗೆ ಮನವಿ.
  • ಶರಾವತಿ ಪಂಪ್ಡ್ ಸ್ಟೋರೇಜ್: 2,000 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಯ ಶೀಘ್ರ ಅನುಮತಿಗೆ ಕೋರಿಕೆ.
  • ರಾಯಚೂರಿನಲ್ಲಿ ಏಮ್ಸ್ (AIIMS): ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸುಧಾರಣೆಗಾಗಿ ರಾಯಚೂರಿನಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸಲು ಮಂಜೂರಾತಿಗೆ ಮನವಿ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ! – Kannada News | Massive Fire Breaks Out At KR Market

ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನ ಹೃದಯಭಾಗದಲ್ಲಿರುವ ಕೆ.ಆರ್. ಮಾರ್ಕೆಟ್ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾರ್ಕೆಟ್ ಬಳಿಯ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವಾಲೆಗಳು ಕಸದ ರಾಶಿಯನ್ನು ವ್ಯಾಪಿಸಿ, ಅದನ್ನು ಸಂಪೂರ್ಣವಾಗಿ ಸುಟ್ಟು ಬೂದಿ ಮಾಡಿದೆ. ಅಗ್ನಿ ಅವಘಡದಿಂದಾಗಿ ಮಾರ್ಕೆಟ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ. ಇದು ಸ್ಥಳದಲ್ಲಿ ಉಸಿರಾಟದ ಸಮಸ್ಯೆಯನ್ನುಂಟುಮಾಡುತ್ತಿದೆ ಮತ್ತು ಗೋಚರತೆಯನ್ನು ಕಡಿಮೆ ಮಾಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

Source link

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯನ್ನು ಜೋಪಾನವಾಗಿ ರೈಲು ಹತ್ತಿಸಿದ ವೃದ್ಧ ವ್ಯಕ್ತಿ – Kannada News | An old man who boarded a train to protect his wife

ಹೆಣ್ಣಿಗೆ ಗಂಡನೇ (wife-husband) ಸರ್ವಸ್ವವಾಗಿರುತ್ತಾನೆ. ಹೀಗಾಗಿ ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನ ಮೇಲೆ ಕಾಳಜಿ ವಹಿಸಲಿ ಎಂದು ಬಯಸುತ್ತಾಳೆ. ಆದರೆ ವೃದ್ಧ ದಂಪತಿಗಳು (elderly couple) ಕೊನೆಯವರೆಗೆ ಒಬ್ಬರಿಗೊಬ್ಬರು ಆಸರೆಯಾಗಿರುವುದನ್ನು ನೀವು ನೋಡಿರುತ್ತೀರಿ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರೈಲು ಹತ್ತಲು ಕಷ್ಟ ಪಡುತ್ತಿದ್ದ ತನ್ನ ಮಡದಿಯನ್ನು, ಬೀಳದಂತೆ ಹಿಡಿದು ಜೋಪಾನವಾಗಿ ವೃದ್ಧ ವ್ಯಕ್ತಿ ರೈಲು ಹತ್ತಿಸಿದ್ದಾನೆ. ಈ ಸುಮಧುರ ಬಾಂಧವ್ಯದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

me_bhanu_pilla ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ವೃದ್ಧ ದಂಪತಿಯ ಸುಮಧುರ ಬಾಂಧವ್ಯವನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ವೃದ್ಧ ಮಹಿಳೆ ರೈಲು ಹತ್ತಲು ಕಷ್ಟ ಪಡುತ್ತಿರುವುದನ್ನು ಕಾಣಬಹುದು. ಇದೇ ವೇಳೆ ವೃದ್ಧ ವ್ಯಕ್ತಿ ತನ್ನ ಮಡದಿಯನ್ನು ಬೀಳದಂತೆ ಹಿಡಿದು ಜೋಪಾನವಾಗಿ ರೈಲು ಹತ್ತಿಸಿರುವ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನೂರು ವರ್ಷಗಳ ಪ್ರೀತಿ ಎಂದು ಹೇಳಿದರೆ, ಮತ್ತೊಬ್ಬರು, ಇದು ಶುದ್ಧ ಪ್ರೀತಿ, ಏಳು ಬೀಳಿನಲ್ಲೂ ಜತೆಯಾಗಿ ನಿಂತ ಜೋಡಿಗಳು ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ದೃಶ್ಯ ನೋಡುವಾಗ ನನ್ನ ಕಣ್ಣ ತುಂಬಿ ಬಂದಿತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,651 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,240 ರೂ
  • ಚೆನ್ನೈ: 14,320 ರೂ
  • ಮುಂಬೈ: 14,240 ರೂ
  • ದೆಹಲಿ: 14,255 ರೂ
  • ಕೋಲ್ಕತಾ: 14,240 ರೂ
  • ಕೇರಳ: 14,240 ರೂ
  • ಅಹ್ಮದಾಬಾದ್: 14,245 ರೂ
  • ಜೈಪುರ್: 14,255 ರೂ
  • ಲಕ್ನೋ: 14,255 ರೂ
  • ಭುವನೇಶ್ವರ್: 14,240 ರೂ

ಇದನ್ನೂ ಓದಿ: ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (13,892 ರುಪಾಯಿ)
  • ದುಬೈ: 535.50 ಡಿರಾಮ್ (13,581 ರುಪಾಯಿ)
  • ಅಮೆರಿಕ: 149.50 ಡಾಲರ್ (13,716 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (13,929 ರುಪಾಯಿ)
  • ಕತಾರ್: 532.50 ಕತಾರಿ ರಿಯಾಲ್ (13,606 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,604 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,791 ರುಪಾಯಿ)
  • ಕುವೇತ್: 44.50 ಕುವೇತಿ ದಿನಾರ್ (13,531 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version