ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು.

ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ ವೇಗಿ ರಾಸಿಖ್ ಸಲಾಂ ದಾರ್, ಅನುಭವಿ ಬೌಲರ್​ಗಳಾದ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಝಲ್​ವುಡ್.

  • ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ರಾಸಿಖ್ ಸಲಾಂ ದಾರ್ ಕೇವಲ 24 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು.
  • ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದಿದ್ದರು.
  • ಜೋಶ್ ಹೇಝಲ್​ವುಡ್ 4 ಓವರ್​ಗಳಲ್ಲಿ 20 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು.

ಆರ್​ಸಿಬಿ ಪರ ಮೂವರು ಅತ್ಯುತ್ತಮ ದಾಳಿ ಸಂಘಟಿಸಿದರೂ ಅಂತಿಮವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದ್ದು ಜೋಶ್ ಹೇಝಲ್​ವುಡ್​ಗೆ. ಇದರ ಬೆನ್ನಲ್ಲೇ 4 ಹಾಗೂ 3 ವಿಕೆಟ್​ಗಳನ್ನು ಕಬಳಿಸಿದ್ದರೂ ರಾಸಿಖ್ ಸಲಾಂ ಹಾಗೂ ಭುವನೇಶ್ವರ್ ಕುಮಾರ್​ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಯಾಕೆ ನೀಡಲಾಗಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ…

ಎಕಾನಮಿ ರೇಟ್​: ಸಾಮಾನ್ಯವಾಗಿ ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಮೈದಾನದಲ್ಲಿ ಜೋಶ್ ಹೇಝಲ್‌ವುಡ್ ರನ್ ಬಿಟ್ಟುಕೊಡಲು ಜಿಪುಣತನ ತೋರಿದರು. ತಮ್ಮ 4 ಓವರ್‌ಗಳ ಕೋಟಾದಲ್ಲಿ ಕೇವಲ 20 ರನ್ ನೀಡಿ 1 ಪ್ರಮುಖ ವಿಕೆಟ್ ಪಡೆದರು. ಅಂದರೆ ಕೇವಲ 5 ರನ್​ಗಳ ಎಕಾನಮಿ ರೇಟ್​ನಲ್ಲಿ ಅವರು ರನ್ ಬಿಟ್ಟು ಕೊಟ್ಟಿದ್ದರು. ಇದು ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ಸಾಧನೆ.

ಡಾಟ್ ಬಾಲ್​: ಹೇಝಲ್‌ವುಡ್ ತಮ್ಮ ವಿಶಿಷ್ಟವಾದ ‘ಹಾರ್ಡ್ ಲೆಂತ್’ ಮೂಲಕ ಎಲ್‌ಎಸ್‌ಜಿ ಬ್ಯಾಟರ್‌ಗಳನ್ನು ಕಟ್ಟಿಹಾಕಿದರು. ಅವರು ತಮ್ಮ 4 ಓವರ್​ಗಳಲ್ಲಿ ಬರೋಬ್ಬರಿ 13 ಡಾಟ್ ಬಾಲ್‌ಗಳನ್ನು ಎಸೆದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ನಿಕೋಲಸ್ ಪೂರನ್ ವಿಕೆಟ್: ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಅವರ ವಿಕೆಟ್ ಪಡೆಯುವ ಮೂಲಕ ಲಕ್ನೋ ತಂಡದ ಮಧ್ಯಮ ಕ್ರಮಾಂಕಕ್ಕೆ ಆಘಾತ ನೀಡುವಲ್ಲಿಯೂ ಹೇಝಲ್​ವುಡ್ ಯಶಸ್ವಿಯಾದರು.

ಕಂಬ್ಯಾಕ್ ಪಂದ್ಯ: ಫಿಟ್​ನೆಸ್ ಸಮಸ್ಯೆ ಕಾರಣ ಜೋಶ್ ಹೇಝಲ್​ವುಡ್ ಸೀಸನ್‌ನ ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದರು. ಇದಾಗ್ಯೂ ಕಂಬ್ಯಾಕ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸುವಲ್ಲಿ ಹೇಝಲ್​ವುಡ್ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೇವಲ ಒಂದು ವಿಕೆಟ್ ಪಡೆದಿದ್ದರೂ ಜೋಶ್ ಹೇಝಲ್​ವುಡ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ.

Source link

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ. ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರಾಜಧಾನಿಯ ಫ್ರೇಜರ್ ಟೌನ್‌ನಲ್ಲಿ ಈ ಪ್ರಕರಣ ನಡೆದಿದೆ ಎಂದು ಹೇಳಲಾಗಿದೆ.

ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಜುಹೇಬ್ ಎಂಬಾತನ ಪರಿಚಯವಾಗಿತ್ತು. ಆರಂಭದಲ್ಲಿ ಕೆಲಸದ ನಿಮಿತ್ತ ಭೇಟಿಯಾಗಿದ್ದ ಇವರು ನಂತರ ಸ್ನೇಹಿತರಾಗಿದ್ದರು.

ಇಲ್ಲಿದೆ ನೋಡಿ ವಿಡಿಯೋ:

2024 ರಿಂದ ಜುಹೇಬ್ ಯುವತಿಯ ಹಿಂದೆ ಬಿದ್ದಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ಯುವತಿ ಆತನನ್ನು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಯು, “ನೀನು ನನ್ನನ್ನು ಮದುವೆಯಾಗದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಲು ಪ್ರಾರಂಭಿಸಿದ್ದ. ಯುವತಿಯು ಫ್ರೇಜರ್ ಟೌನ್‌ನಲ್ಲಿದ್ದಾಗ ಆರೋಪಿಯು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಯುವತಿಯ ಮುಖ ಮತ್ತು ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ವಿಡಿಯೋದಲ್ಲಿ ಯುವತಿ ತನ್ನ ಗಾಯಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಜುಹೇಬ್ ತನ್ನ ವಾಟ್ಸಾಪ್ ಸಂದೇಶಗಳಲ್ಲಿ “ನಾನು ಆಕೆಯನ್ನು ಸಾಯಿಸುತ್ತೇನೆ,” “ಯುವತಿ ಸಾಯಲೇಬೇಕು,” ಎಂದು ಹಸಿಬಿಸಿಯಾಗಿ ಸಂದೇಶ ಕಳುಹಿಸಿದ್ದಾನೆ. ಅಲ್ಲದೆ, “ನನಗೆ ಹುಡುಗಿಯರ ಕೊರತೆಯಿಲ್ಲ, ಹಣದ ಕೊರತೆಯಿಲ್ಲ” ಎಂದು ಅಹಂಕಾರ ಮಾತುಗಳನ್ನು ಆಡಿದ್ದಾನೆ ಎಂದು ಆರೋಪಿಸಲಾಗಿದೆ.ಸಂತ್ರಸ್ತ ಯುವತಿಯು ಧೈರ್ಯವಾಗಿ ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಆರೋಪಿ ಜುಹೇಬ್‌ನನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ.

ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ ಭಾರಿ ಪ್ರಮಾಣದ ತೈಲ ಖರೀದಿಸಿತ್ತು.ಕಳೆದ ವಾರವಷ್ಟೇ ಭಾರತವು ಏಳು ವರ್ಷಗಳ ಸುದೀರ್ಘ ವಿರಾಮದ ನಂತರ ಇರಾನ್‌ನಿಂದ 4 ಮಿಲಿಯನ್ ಬ್ಯಾರೆಲ್ ತೈಲವನ್ನು ಎರಡು ಬೃಹತ್ ಹಡಗುಗಳ ಮೂಲಕ ಪಡೆದುಕೊಂಡಿತ್ತು.

ಏನಿದು ಅಮೆರಿಕದ ಹೊಸ ನಿಲುವು?
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, “ರಷ್ಯಾ ಮತ್ತು ಇರಾನ್ ತೈಲದ ಮೇಲಿನ ಸಾಮಾನ್ಯ ಪರವಾನಗಿಯನ್ನು ನಾವು ಇನ್ನು ಮುಂದೆ ವಿಸ್ತರಿಸುವುದಿಲ್ಲ. ಮಾರ್ಚ್ 11 ರ ಒಳಗೆ ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ಈಗಾಗಲೇ ಬಳಸಲಾಗಿದೆ. ಹಾಗಾಗಿ ಈ ವಿನಾಯಿತಿಯನ್ನು ಮುಂದುವರಿಸುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.
ಭಾರತ ಸರ್ಕಾರವು ತನ್ನಲ್ಲಿ ಸಾಕಷ್ಟು ದಾಸ್ತಾನು ಇರುವುದಾಗಿ ಹೇಳಿಕೊಂಡಿದ್ದರೂ, ಅಮೆರಿಕದ ಈ ಕಠಿಣ ನಿಲುವು ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಭೀತಿ ಹುಟ್ಟಿಸಿದೆ.

ಮತ್ತಷ್ಟು ಓದಿ: ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಾಗ, ತೈಲ ಬೆಲೆ ಏರಿಕೆಯನ್ನು ತಡೆಯಲು ಟ್ರಂಪ್ ಸರ್ಕಾರವು ಈ ವಿನಾಯಿತಿಗಳನ್ನು ನೀಡಿತ್ತು. ಆದರೆ ಈಗ ಆ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಅಮೆರಿಕವು ಮತ್ತೆ ಈ ದೇಶಗಳ ಮೇಲೆ ‘ಗರಿಷ್ಠ ಒತ್ತಡ’ (Maximum Pressure) ಹೇರುವ ತಂತ್ರಕ್ಕೆ ಮರಳಿದೆ.
ಒಂದೆಡೆ ಅಮೆರಿಕ ಬಿಗಿ ನಿಲುವು ತಳೆದಿದ್ದರೆ, ಮತ್ತೊಂದೆಡೆ ಒಮಾನ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಎರಡನೇ ಸುತ್ತಿನ ಶಾಂತಿ ಮಾತುಕತೆ ನಡೆಯುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ಇರಾನ್ ಅವಕಾಶ ನೀಡಬಹುದು ಎಂಬ ವರದಿಗಳ ಬೆನ್ನಲ್ಲೇ ತೈಲ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.

ಭಾರತವು ತನ್ನ ಇಂಧನ ಭದ್ರತೆ ಮತ್ತು ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧದ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಸವಾಲಿನಲ್ಲಿದೆ. ಏಪ್ರಿಲ್ ತಿಂಗಳಿನಲ್ಲಿ ಈ ನಿರ್ಬಂಧಗಳ ವಿನಾಯಿತಿ ಸಂಪೂರ್ಣ ಮುಕ್ತಾಯಗೊಳ್ಳಲಿದ್ದು, ಜಾಗತಿಕ ಮಾರುಕಟ್ಟೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಭಾರತಕ್ಕೆ ಸಿಕ್ಕಿದ್ದ ಲಾಭವೇನು?
ಈ ನಿರ್ಬಂಧಗಳ ವಿನಾಯಿತಿಯ ಅತಿದೊಡ್ಡ ಫಲಾನುಭವಿ ಭಾರತ ಎಂದರೆ ತಪ್ಪಾಗಲಾರದು. ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ನಡುವೆಯೂ ಭಾರತದ ಸಂಸ್ಕರಣಾಗಾರಗಳು ಸುಮಾರು 30 ಮಿಲಿಯನ್ ಬ್ಯಾರೆಲ್ ರಷ್ಯಾದ ತೈಲಕ್ಕೆ ಆರ್ಡರ್ ನೀಡಿದ್ದವು. ಕಳೆದ ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ಎರಡು ಬೃಹತ್ ತೈಲ ಹಡಗುಗಳು ಭಾರತದ ಬಂದರನ್ನು ತಲುಪಿದ್ದವು. 2018 ರ ಮೊದಲು ಭಾರತದ ಒಟ್ಟು ತೈಲ ಆಮದಿನಲ್ಲಿ ಇರಾನ್ ಪಾಲು ಶೇ. 11.5 ರಷ್ಟಿತ್ತು.

ಕುತೂಹಲಕಾರಿ ವಿಷಯವೆಂದರೆ, ಟ್ರಂಪ್ ಆಡಳಿತವು ರಷ್ಯಾಕ್ಕೆ ಈ ಹಿಂದೆ ನೀಡಿದ್ದ ವಿನಾಯಿತಿಯನ್ನು ಅಮೆರಿಕದ ವಿರೋಧ ಪಕ್ಷವಾದ ಡೆಮೋಕ್ರಾಟ್‌ಗಳು ತೀವ್ರವಾಗಿ ಖಂಡಿಸಿದ್ದರು. ಟ್ರಂಪ್ ನೀಡಿದ ವಿನಾಯಿತಿಯು ರಷ್ಯಾದ ಯುದ್ಧ ಯಂತ್ರಕ್ಕೆ ದಿನಕ್ಕೆ ಸುಮಾರು 150 ಬಿಲಿಯನ್ ಡಾಲರ್ ಹಣ ಸಿಗುವಂತೆ ಮಾಡಿತು. ಇದು ಉಕ್ರೇನಿಯನ್ ಮಕ್ಕಳ ಹತ್ಯೆಗೆ ರಷ್ಯಾ ಬಳಸುತ್ತಿರುವ ಹಣ ಎಂದು ಸೆನೆಟರ್ ರಿಚರ್ಡ್ ಬ್ಲೂಮೆಂಥಾಲ್ ಕಿಡಿಕಾರಿದ್ದರು.

ಇನ್ನು ಮುಂದೆ ಭಾರತವು ರಷ್ಯಾ ಅಥವಾ ಇರಾನ್‌ನಿಂದ ತೈಲ ಖರೀದಿಸಿದರೆ ಅಮೆರಿಕದ ಕಠಿಣ ನಿರ್ಬಂಧಗಳನ್ನು ಎದುರಿಸಬೇಕಾಗಬಹುದು. ಇದರಿಂದಾಗಿ ರಿಲಯನ್ಸ್‌ನಂತಹ ಪ್ರಮುಖ ಕಂಪನಿಗಳು ಈಗಾಗಲೇ ತಮ್ಮ ಆಮದು ಕಾರ್ಯತಂತ್ರವನ್ನು ಬದಲಾಯಿಸಲು ಶುರು ಮಾಡಿದ್ದು, ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಮತ್ತೆ ಬೇರೆ ದೇಶಗಳತ್ತ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ.

ಯಶ್ ಅವರು ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಯಶ್ ಅವರಿಗೆ ರಣಬೀರ್ ಕಪೂರ್ ಬಗ್ಗೆ ಕೇಳಲಾಯಿತು. ಆಗ ಯಶ್ ಅವರು ಮಾತನಾಡುತ್ತಾ, ‘ನಾನು ಹಾಗೂ ರಣಬೀರ್ ಕಪೂರ್ ರಾಮಾಯಣದಲ್ಲಿ ಈವರೆಗೆ ಒಟ್ಟಿಗೆ ಕಾಣಿಸಿಕೊಂಡಿಲ್ಲ’ ಎಂದು ಹೇಳಿದ್ದಾರೆ. ಅಂದರೆ, ಮೊದಲ ಭಾಗದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಖಚಿತ ಮಾಡಿದಂತಾಯ್ತು.

ಆದರೆ, ಕೆಲವರು ಇದನ್ನು ಬೇರೆ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ‘ಯಶ್ ಹಾಗೂ ರಣಬೀರ್ ಕಪೂರ್​ ದೃಶ್ಯ ಮೊದಲ ಪಾರ್ಟ್​​​ನಲ್ಲಿ ಇರಲಿದೆ ಎಂದು ನಿರೀಕ್ಷಿಸಿದವರಿಗೆ ಇದು ನಿರಾಸೆ ಮೂಡಿಸಿದೆ. ಯಶ್ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿದ್ದಾರೆ’ ಎಂದೆಲ್ಲ ಹೇಳಿದರು.

ಇದನ್ನೂ ಓದಿ: ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್

ಆದರೆ, ಅಸಲಿಯತ್ತು ಹಾಗಿಲ್ಲ. ವಾಲ್ಮೀಕಿ ರಾಮಾಯಣದ ಪ್ರಕಾರ, ಲಂಕಾದಲ್ಲಿ ಅಂತಿಮ ಯುದ್ಧ ನಡೆಯುವವರೆಗೂ ರಾಮ ಮತ್ತು ರಾವಣ ಮುಖಾಮುಖಿಯಾಗಲಿಲ್ಲ. ಈ ಸಿನಿಮಾ ಎರಡು ಭಾಗದಲ್ಲಿ ಬರಲಿದೆ ಎಂದು ಮೊದಲೇ ಹೇಳಲಾಗಿದೆ. ಹೀಗಿರುವಾಗ ಯಶ್ ಹೇಳಿದ್ದು ಸ್ಪಾಯ್ಲರ್ ಹೇಗಾಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು, ‘ಇವರು ಕ್ಲೈಮ್ಯಾಕ್ಸ್​​ನ ಮೊದಲ ಭಾಗದಲ್ಲೇ ನಿರೀಕ್ಷೆ ಮಾಡಿತ್ತಿದ್ದಾರೆ’ ಅನಿಸುತ್ತದೆ ಎಂದು ಟೀಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:27 am, Thu, 16 April 26

Source link

SSLC ಪರೀಕ್ಷೆಯಲ್ಲಿ ಹಿಂದಿಗೆ ಗ್ರೇಡ್ ನೀಡಲು ಹೊರಟಿದ್ದ ಸರ್ಕಾರಕ್ಕೆ ತೀವ್ರ ಮುಖಭಂಗ: ಅಂಕ ನೀಡಲು ಹೈಕೋರ್ಟ್ ಆದೇಶ – Kannada News | Karnataka High Court Orders Marks for SSLC Hindi and 3rd language: Major Setback for Congress Government Grading Policy

SSLC ಪರೀಕ್ಷೆಯಲ್ಲಿ ಗ್ರೆಡಿಂಗ್ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶImage Credit source: tv9

ಬೆಂಗಳೂರು, ಏಪ್ರಿಲ್ 16: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ತೃತೀಯ ಭಾಷೆಗಳಿಗೆ (ಮುಖ್ಯವಾಗಿ ಹಿಂದಿಯನ್ನು ಗಮನದಲ್ಲಿಟ್ಟುಕೊಂಡು) ಕೇವಲ ಗ್ರೇಡ್ (Grading System) ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಹಿಂದಿ (Hindi) ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮಹತ್ವದ ನಿರ್ದೇಶನ ನೀಡಿದೆ. ಇದು, ಸರ್ಕಾರದ ನಿರ್ಧಾರದಿಂದ ಆತಂಕಕ್ಕೊಳಗಾಗಿದ್ದ ಸಾವಿರಾರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ದೊಡ್ಡ ಸಮಾಧಾನ ತಂದುಕೊಟ್ಟಿದೆ.

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.

ತೃತೀಯ ಭಾಷೆ ಗ್ರೇಡಿಂಗ್ ವಿವಾದದ ಹಿನ್ನೆಲೆ

ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ತೃತೀಯ ಭಾಷೆ (ಹೆಚ್ಚಾಗಿ ಹಿಂದಿ, ಇತರ ಭಾಷೆಗಳು) ವಿಷಯಕ್ಕೆ ಸಂಬಂಧಿಸಿದಂತೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಆಸಕ್ತಿ ತೋರಿತ್ತು. ಇತ್ತೀಚೆಗೆ ಆ ಬಗ್ಗೆ ಅಧಿಕೃತ ಆದೇಶ ಘೋಷಣೆ ಮಾಡಿತ್ತು. ಪ್ರಥಮ ಮತ್ತು ದ್ವಿತೀಯ ಭಾಷೆಗಳಿಗೆ ನೀಡುವ ಪ್ರಾಮುಖ್ಯತೆಯನ್ನು ತೃತೀಯ ಭಾಷೆಗೆ ನೀಡದೆ, ಅದನ್ನು ಕೇವಲ ಅರ್ಹತಾ ವಿಷಯವನ್ನಾಗಿ ಪರಿವರ್ತಿಸಲು ಸರ್ಕಾರ ಮುಂದಾಗಿತ್ತು. ಇದು ಹಿಂದಿ ಭಾಷಾ ಶಿಕ್ಷಕರ ಸಂಘ ಮತ್ತು ಪೋಷಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಹಿಂದಿ ಮಾತ್ರವಲ್ಲ, ಕನ್ನಡವೂ ಸೇರಿ 9 ಭಾಷೆಗಳಿಗೆ ಅನ್ವಯವಾಗಲಿದೆ ಗ್ರೇಡಿಂಗ್! ಗ್ರೇಡ್ ಕೊಡೋದು ಹೇಗೆ ಗೊತ್ತಾ?

ಈ ವಿವಾದವು ಕೇವಲ ಅಂಕಗಳಿಗೆ ಸೀಮಿತವಾಗದೆ, ಭಾಷಾ ನೀತಿಯ ಸಂಘರ್ಷವಾಗಿಯೂ ಬದಲಾಗಿತ್ತು. ತೃತೀಯ ಭಾಷೆಗೆ ಅಂಕ ನೀಡದಿದ್ದರೆ ವಿದ್ಯಾರ್ಥಿಗಳು ಆ ವಿಷಯದ ಕಡೆಗೆ ಆಸಕ್ತಿ ಕಳೆದುಕೊಳ್ಳುತ್ತಾರೆ ಮತ್ತು ಇದು ಭವಿಷ್ಯದಲ್ಲಿ ಉದ್ಯೋಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅವರಿಗೆ ಹಿನ್ನಡೆಯಾಗಬಹುದು ಎಂಬ ವಾದ ಕೇಳಿಬಂದಿತ್ತು. ಈಗ ಹೈಕೋರ್ಟ್ ನೀಡಿದ ಆದೇಶವು ಸರ್ಕಾರದ ಈ ವಿವಾದಾತ್ಮಕ ನಿರ್ಧಾರಕ್ಕೆ ಬ್ರೇಕ್ ಹಾಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs LSG: ಪಂತ್ ‘ಫಂಕಿ’ ಎಂಟ್ರಿ: ವಿಡಿಯೋ ವೈರಲ್

IPL 2026: ಐಪಿಎಲ್ 2026ರ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹಣಾಹಣಿಯಲ್ಲಿ ಲಕ್ನೋ ತಂಡದ ನಾಯಕ ರಿಷಬ್ ಪಂತ್ ಅವರ ಎಂಟ್ರಿ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ಸಾಮಾನ್ಯವಾಗಿ ಆಟಗಾರರು ಮೈದಾನದ ಪ್ರವೇಶ ದ್ವಾರದ ಮೂಲಕ ಕ್ರೀಡಾಂಗಣಕ್ಕೆ ಬರುತ್ತಾರೆ.

ಆದರೆ, ರಿಷಭ್ ಪಂತ್ ಅವರು ಪಂದ್ಯದ ಆರಂಭದಲ್ಲಿ ಅನಿರೀಕ್ಷಿತವಾಗಿ ಮೈದಾನದ ಬದಿಯಲ್ಲಿದ್ದ ಜಾಹೀರಾತು ಬೋರ್ಡ್‌ಗಳನ್ನು ಜಂಪ್​ ಮಾಡಿಕೊಂಡು ಮೈದಾನದೊಳಗೆ ನುಗ್ಗಿದರು. ಪಂತ್ ಅವರ ಈ ‘ಫಂಕಿ’ ಶೈಲಿಯ ಎಂಟ್ರಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪಂತ್ ಇನ್ನಿಂಗ್ಸ್‌ನ 5ನೇ ಓವರ್‌ನಲ್ಲಿ ಹೇಝಲ್‌ವುಡ್ ಎಸೆದ ವೇಗದ ಬೌನ್ಸರ್ ಚೆಂಡನ್ನು ಪುಲ್  ಮಾಡಲು ಪ್ರಯತ್ನಿಸಿದರು. ಆದರೆ, ಚೆಂಡು ಅವರ ಬ್ಯಾಟ್‌ಗೆ ತಗುಲುವ ಬದಲು ನೇರವಾಗಿ ಮೊಣಕೈ ಮೂಳೆಗೆ ಬಲವಾಗಿ ಅಪ್ಪಳಿಸಿತು.

ಕೈ ಬಿದ್ದ ಏಟಿನಿಂದ ಪಂತ್ ತೀವ್ರ ನೋವಿನಿಂದ ನರಳಿದರು. ತಂಡದ ಫಿಸಿಯೋ ಬಂದು ಚಿಕಿತ್ಸೆ ನೀಡಿದರೂ ನೋವು ಕಡಿಮೆಯಾಗದ ಕಾರಣ ಅವರು ಮೈದಾನದಿಂದ ಹೊರನಡೆದಿದ್ದರು. ಇದಾದ ಬಳಿಕ ತಂಡದ ಹಿತದೃಷ್ಟಿಯಿಂದ ಪಂತ್ 16ನೇ ಓವರ್‌ನಲ್ಲಿ ಮತ್ತೆ ಬ್ಯಾಟಿಂಗ್ ಮಾಡಲು ಬಂದರಾದರೂ, ಕೇವಲ 1 ರನ್ ಗಳಿಸಿ ಔಟಾದರು.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ ಕೇವಲ 146 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ ತಂಡ 15.1 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Source link

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು – Kannada News | Tragic Road Accident Near Mantralaya: 8 Devotees from Chikkaballapur Killed in Bolero Tanker Collision

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ವಿವರ

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಮಂತ್ರಾಲಯಕ್ಕೆ ಹೋಗುವ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:26 am, Thu, 16 April 26

Source link

ಮಹಿಳಾ ನೌಕರರಿಗೆ ಗುಡ್ ನ್ಯೂಸ್: ತಿಂಗಳಿಗೆ ಒಂದು ದಿನ ‘ಋತುಸ್ರಾವ ರಜೆ’ ಕಡ್ಡಾಯ; ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ – Kannada News | Menstrual Leave in Karnataka: HC Orders Mandatory Implementation for All Women

ಬೆಂಗಳೂರು, ಏ.16: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ತಮ್ಮ ಮಹಿಳಾ ಉದ್ಯೋಗಿಗಳಿಗೆ ನೀಡಲು ಹಿಂದೆ-ಮುಂದೆ ನೋಡುತ್ತಿದೆ. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್​​ ನೀಡಿದೆ.

ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್‌ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, “ಮಹಿಳೆಯರ ಋತುಸ್ರಾವದ ಆರೋಗ್ಯವು ಸಂವಿಧಾನದ 21ನೇ ವಿಧಿಯಡಿ ಬರುವ ‘ಬದುಕುವ ಹಕ್ಕಿನ’ ಅವಿಭಾಜ್ಯ ಅಂಗವಾಗಿದೆ. ಇದು ಕೇವಲ ರಜೆಯಲ್ಲ, ಮಹಿಳೆಯರ ಘನತೆಯ ಪ್ರಶ್ನೆ” ಎಂದು ಅಭಿಪ್ರಾಯಪಟ್ಟಿದೆ. ಪ್ರಸ್ತುತ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದರ ಜೊತೆಗೆ, ಈ ಕುರಿತು ಪ್ರಸ್ತಾವಿತ ‘ಕರ್ನಾಟಕ ಋತುಸ್ರಾವ ರಜೆ ಮತ್ತು ನೈರ್ಮಲ್ಯ ವಿಧೇಯಕ-2025’ ಅನ್ನು ಶೀಘ್ರವಾಗಿ ಕಾನೂನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ.

ಇದನ್ನೂ ಓದಿ: ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು

ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್ – Kannada News | Yash’s ‘Toxic’ Movie Global Ambition: Star Shines at CinemaCon 2026

ರಾಕಿಂಗ್ ಸ್ಟಾರ್ ಯಶ್ ಅವರ (Yash) ‘ಟಾಕ್ಸಿಕ್’ ಸಿನಿಮಾ ಕನ್ನಡದ ಜೊತೆಗೆ ಇಂಗ್ಲಿಷ್​​ನಲ್ಲೂ ಶೂಟ್​ ಆಗಿದೆ. ಈ ಸಿನಿಮಾ ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಇದರ ಜೊತೆಗೆ ಬಹುನಿರೀಕ್ಷಿತ ‘ರಾಮಾಯಣ’ ಚಿತ್ರದಲ್ಲೂ ಯಶ್ ನಟಿಸಿದ್ದಾರೆ. ಈಗ ಯಶ್ ಅವರು ಅಮೆರಿಕದ ಲಾಸ್ ಎಂಜಲೀಸ್​​ಗೆ ತೆರಳಿದ್ದಾರೆ. ಅಲ್ಲಿ ನಡೆದ ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ.

ಇಂಗ್ಲಿಷ್ ರಿಪೋರ್ಟರ್ ಒಬ್ಬರು ಯಶ್ ಬಳಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಟಾಕ್ಸಿಕ್’ ಟೀಸರ್ ಹೊಗಳಿದ್ದಾರೆ. ವಿಶ್ಯುವಲ್ಸ್​ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ‘ನಮಗೆ ಇಲ್ಲಿ ಟಾಕ್ಸಿಕ್ ಸಿನಿಮಾದ ರೀತಿಯ ವಿಶ್ಯುವಲ್ಸ್ ಏಕೆ ಕಾಣಲ್ಲ’ ಎಂದು ತಮಗೆ ತಾವೇ ಪ್ರಶ್ನೆ ಮಾಡಿಕೊಂಡಿದ್ದಾಗಿ ರಿಪೋರ್ಟರ್ ಹೇಳಿದ್ದಾರೆ. ಜೊತೆಗೆ ಸಿನಿಮಾ ಮಾಡುವಾಗ, ಆ್ಯಕ್ಷನ್ ಮಾಡುವಾಗ ಸಾಕಷ್ಟು ಫನ್ ಮಾಡಿದ್ದೀರಿ ಎನಿಸುತ್ತದೆ ಅಲ್ಲವೇ ಎಂದು ಯಶ್​​ಗೆ ಕೇಳಲಾಗಿದೆ.

‘ಟಾಕ್ಸಿಕ್ ತುಂಬಾನೇ ಮಹತ್ವಾಕಾಂಕ್ಷೆಯ ಸಿನಿಮಾ. ಜನರು ನನಗೆ ಯಶಸ್ಸು ಕೊಟ್ಟಿದ್ದು ಸೆಲೆಬ್ರೇಟ್ ಮಾಡಲಾಗಲಿ ಅಥವಾ ಫನ್ ಮಾಡೋದಕ್ಕಾಗಲಿ ಅಲ್ಲ. ಪ್ರತಿ ಬಾರಿ ದೊಡ್ಡ ಯಶಸ್ಸು ಸಿಕ್ಕಾಗ ಇನ್ನೂ ಉತ್ತಮವಾಗಿ ಮಾಡುವ ಜವಾಬ್ದಾರಿ ನನ್ನ ಮೇಲೆ ಇದೆ ಎಂದು ನನಗೆ ಸದಾ ಅನಿಸುತ್ತದೆ’ ಎಂದಿದ್ದಾರೆ ಯಶ್.

ಅಮೆರಿಕದಲ್ಲೂ ಯಶ್ ತಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ‘ಭಾರತದಲ್ಲಿ ನನ್ನನ್ನು ಜನರು ಸಾಕಷ್ಟು ಬೆಂಬಲಿಸಿದ್ದಾರೆ. ಭಾರತದ ಕಥೆ ಹಾಗೂ ಭಾರತ ಚಿತ್ರರಂಗವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂಬುದು ನನ್ನ ಉದ್ದೇಶ’ ಎಂದು ಯಶ್ ಹೇಳಿದ್ದಾರೆ. ಅವರ ಹೇಳಿಕೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಇದನ್ನೂ ಓದಿ: ನೀವಂದುಕೊಂಡಂತಿಲ್ಲ ‘ಟಾಕ್ಸಿಕ್’, ಕಾಣುವುದೇ ಒಂದು, ಇರುವುದೇ ಒಂದು ಎಂದ ಯಶ್

ಯಶ್ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಈಗ ಭಾರತ ಚಿತ್ರರಂಗವನ್ನು ವಿಶ್ವ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕನಸು ಕಂಡು, ಅದರಲ್ಲಿ ಯಶಸ್ಸು ಕಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

Source link

Exit mobile version