Headlines

ಪತಿ ಬಿಟ್ಟು ನವವಿವಾಹಿತೆ ನಾಪತ್ತೆ; ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಕೊಪ್ಪಳ, ಮಾರ್ಚ್​​ 26: ಮದುವೆ ಎಂಬುದು ಎರಡು ಕುಟುಂಬಗಳ ನಡುವೆ ಹೊಸ ಸಂಬಂಧ ಬೆಸೆಯುವ ಸೇತುವೆ. ಬಲಗಾಲಿಟ್ಟು ಪತಿ ಮನೆಗೆ ಬರುವವಳು ತಮ್ಮ ಮನೆಯನ್ನು ಬೆಳಗಿಸುತ್ತಾಳೆ. ವಂಶೋದ್ಧಾರಕ್ಕೆ ಆಕೆ ಕಾರಣವಾಗುತ್ತಾಳೆ ಎಂಬ ಭಾವನೆ ನಮ್ಮಲ್ಲಿದೆ. ಆದರೆ ಇತ್ತೀಚಿಗೆ ಇವುಗಳಿಗೆ ವಿರುದ್ಧ ಎಂಬಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಮದುವೆಯಾಗಿ ಕೆಲ ದಿನಗಳ ಒಳಗೆಯೇ ನಾನಾ ಕಾರಣಕ್ಕೆ ದಾಂಪತ್ಯ ಸಂಬಂಧ ಹಳಸಿ ಅದೆಷ್ಟೋ ಕುಟುಂಬಗಳು ಸರ್ವನಾಶ ಆದ ಉದಾಹರಣೆಯನ್ನೂ ಕೇಳಿದ್ದೇವೆ. ಇಂತಹುದ್ದೇ ಮನಕಲಕುವ ಘಟನೆಯೊಂದೀಗ ಕರ್ನಾಟಕದ ಕೊಪ್ಪಳದಲ್ಲಿ…

Read More

Video: ಅಮೆರಿಕದ ಹಾಕಿ ಕ್ರೀಡಾಂಗಣದಲ್ಲಿ ಗುಂಡಿನ ದಾಳಿ, ಮೂವರು ಸಾವು – Kannada News | Gunfire Erupts at Rhode Island Hockey Game, in US Three Dead

ವಾಷಿಂಗ್ಟನ್, ಫೆಬ್ರವರಿ 17: ಅಮೆರಿಕದ ರೋಡ್ ಐಲೆಂಡ್ ರಾಜ್ಯದ ಹಾಕಿ ಕ್ರೀಡಾಂಗಣದಲ್ಲಿ ನಡೆದ ಗುಂಡಿನ ದಾಳಿಯು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದೆ.ಗುಂಡಿನ ದಾಳಿಯಲ್ಲಿ ಶಂಕಿತ ದಾಳಿಕೋರ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ಸತ್ತವರಲ್ಲಿ ಒಬ್ಬ ಯುವತಿಯೂ ಸೇರಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ. ಘಟನೆಯ ನಂತರ ದಾಳಿಕೋರನು ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಗುಂಡು ಹಾರಿಸಿದ ವ್ಯಕ್ತಿ ತನ್ನ ಕುಟುಂಬದ…

Read More

ರಕ್ಷಣಾ ಪಾಲುದಾರಿಕೆ, AI ಸಹಯೋಗ, ರಫೇಲ್ ಜೆಟ್ ಖರೀದಿ; ಫ್ರಾನ್ಸ್​ ಜೊತೆ 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ – Kannada News | From Defence partnership to AI collaboration India France signs 20 agreements PM Modi Macron joint presser

ಮುಂಬೈ, ಫೆಬ್ರವರಿ 17: ಮುಂಬೈನಲ್ಲಿ ನಡೆದ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಬಳಿಕ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಸಂಜೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿ ಫ್ರಾನ್ಸ್ ಅನ್ನು ಯುರೋಪಿನ…

Read More

ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಪಾರ್ಥಸಾರಥಿ ಸುವರ್ಣ ರಥದ ವಿಶೇಷ ಏನು? ಹೇಗಿದೆ ನೋಡಿ – Kannada News | Golden Chariot Dedicated to Udupi Krishna: Special Features of the Parthasarathi Suvarna Ratha Revealed

ಉಡುಪಿ, ಡಿಸೆಂಬರ್ 26: ಉಡುಪಿಯ ಕಡೆಗೋಲು ಕೃಷ್ಣ ದೇವರನ್ನು ‘ಅನ್ನ ಬ್ರಹ್ಮ’ ಎಂದೂ ಕರೆಯುತ್ತಾರೆ. ಅದೇ ರೀತಿ ‘ಉತ್ಸವ ಬ್ರಹ್ಮ’ ಎಂದೂ ಬಣ್ಣಿಸಲಾಗುತ್ತದೆ. ಪ್ರತಿದಿನ ಕೃಷ್ಣ ದೇವರಿಗೆ ಉತ್ಸವ ನಡೆಯುತ್ತದೆ. ಇನ್ನು ಮುಂದೆ ಕೃಷ್ಣದೇವರ ಉತ್ಸವಕ್ಕೆ ಹೊಸ ಮೆರಗು ಸಿಗಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶರು ಇದೀಗ ಪಾರ್ಥಸಾರಥಿ ಸುವರ್ಣ ರಥವನ್ನು ಕೃಷ್ಣನಿಗೆ ಅರ್ಪಿಸಲಿದ್ದಾರೆ. ಸನ್ಯಾಸಿಯಾಗಿ 50 ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ, ಸುಂದರ ರಥವನ್ನು ನಿರ್ಮಿಸಿ ಕೃಷ್ಣದೇವರಿಗೆ ಅರ್ಪಿಸುತ್ತಿದ್ದಾರೆ. ಉಡುಪಿ ಕೃಷ್ಣ ಮಠದ ಪೂಜಾ ಪರಂಪರೆಯಲ್ಲಿ ಇದೊಂದು ಐತಿಹಾಸಿಕ…

Read More

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್…

Read More

ವಿವಾಹದ ಬೆನ್ನಲ್ಲೇ ರಶ್ಮಿಕಾ ಮಂದಣ್ಣಗೆ ಸಿಕ್ತು ಸಿಹಿ ಸುದ್ದಿ; ಸಿಕ್ತು ಅವಾರ್ಡ್

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಇತ್ತೀಚೆಗೆ ಮದುವೆ ಆದರು. ಈ ವಿವಾಹದ ಬಳಿಕ ಅವರು ವಿವಿಧ ರೀತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈಗ ಮದುವೆ ಆದ ಬಳಿಕ ರಶ್ಮಿಕಾ ಮಂದಣ್ಣಗೆ ಗುಡ್ ನ್ಯೂಸ್ ಸಿಕ್ಕಿದೆ. ತೆಲಂಗಾಣ ಸರ್ಕಾರ ‘2025ರ ಗದ್ದರ್ ಫಿಲ್ಮ್ ಅವಾರ್ಡ್’ ಸಿಕ್ಕಿದೆ. ‘ಗರ್ಲ್​​ಫ್ರೆಂಡ್’ ಚಿತ್ರದ ನಟನೆಗೆ ಈ ಅವಾರ್ಡ್ ಸಿಕ್ಕಿದೆ. ಇದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ರಶ್ಮಿಕಾ ಮಂದಣ್ಣ ಅವರು ಫೆಬ್ರವರಿ 26ರಂದು ಮದುವೆ ಆದರು. ಉದಯಪುರದಲ್ಲಿ ಈ ವಿವಾಹ ನಡೆಯಿತು….

Read More

Inspiring- ದಿಶಾ ಸಾಧನೆಯ ಕಥೆ; ಮದುವೆ, ವೈದವ್ಯದ ಹಿನ್ನಡೆಯ ನಡುವೆಯೂ ಕನಸು ಬೆಂಬತ್ತಿದ ಛಲಗಾತಿ – Kannada News | Disha Garg’s inspiring journey from humble housewife to successful entrepreneurship

ಪರಿಸ್ಥಿತಿಯ ಒತ್ತಡದಿಂದ ಕೆಲ ಕನಸುಗಳು ಹಿನ್ನಡೆ ಕಂಡರೂ ಅವು ಎಂದಿಗೂ ಸಾಯುವುದಿಲ್ಲ. ದಿಶಾ ಗರ್ಗ್ (Disha Garg) ಎನ್ನುವ ಕೆಚ್ಚೆದೆಯ ಹೆಣ್ಮಗಳ ಜೀವನ ಇದಕ್ಕೆ ತಾಜಾ ನಿದರ್ಶನ. NIFT ನಲ್ಲಿ (ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ) ತನ್ನ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ದಿಶಾ ಅವರು ಫ್ಯಾಷನ್ ಜಗತ್ತಿನಲ್ಲಿ ದೊಡ್ಡ ಹೆಸರು ಮಾಡಬೇಕೆಂದು ಕನಸು ಕಂಡಿದ್ದರು. ಆದರೆ, ವಿಧಿ ಆಟವೋ ಎಂಬಂತೆ ಆಕೆ ಬೇಗನೇ ವಿವಾಹವಾಗಬೇಕಾಯಿತು. ದಿನಗಳೆದಂತೆ ಕೌಟುಂಬಿಕ ಜವಾಬ್ದಾರಿ ಮತ್ತು ಹೊರೆ ಹೆಚ್ಚತೊಡಗಿತು. ಇದರ ನಡುವೆ…

Read More

ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಯುದ್ಧದ ಬಿಸಿ; ಸಿಲಿಂಡರ್ ಇಲ್ಲದೆ ರೋಗಿಗಳಿಗೂ ಪ್ರಾಬ್ಲಮ್!

ಗದಗ, ಮಾರ್ಚ್​ 21: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಾದ್ಯಂತ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಅದರ ಬಿಸಿ ಇದೀಗ ಗದಗ (Gadag) ಜಿಲ್ಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೂ ತಟ್ಟಿದೆ. ಗದಗದ ಸರ್ಕಾರಿ ಆಯುಷ್ಯ ಆಸ್ಪತ್ರೆಯಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿ ಎದುರಾಗಿದ್ದು, ಚಿಕಿತ್ಸೆ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿದೆ. ತಾತ್ಕಾಲಿಕವಾಗಿ 5ಕೆಜಿ ಸಿಲಿಂಡರ್ ಬಳಕೆ ಪಂಚಕರ್ಮ ಚಿಕಿತ್ಸೆಗೆ ಗ್ಯಾಸ್ ಸಿಲಿಂಡರ್ ಅತ್ಯಾವಶ್ಯಕವಾಗಿದ್ದು, ಮಸಾಜ್ ಎಣ್ಣೆ ಬಿಸಿ ಮಾಡಲು ಹಾಗೂ ಸ್ಟೀಮ್ ಚಿಕಿತ್ಸೆ ನೀಡಲು ಗ್ಯಾಸ್ ಅವಶ್ಯಕವಾಗಿದೆ. ಆದರೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 3ರ ದಿನಭವಿಷ್ಯ

ಪ್ರೀತಿಯಲ್ಲಿ ಇದ್ದು, ವಿರಸಗಳು ಪದೇ ಪದೇ ಆಗುತ್ತಾ ಇದ್ದಲ್ಲಿ ಹಾಗೂ ಮದುವೆಗೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ನಾನಾ ರೀತಿ ಅಡೆತಡೆಗಳು ಎದುರಾಗುತ್ತಾ ಇದ್ದಲ್ಲಿ ‘ರೋಸ್ ಕ್ವಾರ್ಟ್ಜ್’ ಸ್ಟೋನ್ ಉಂಗುರ, ಹಾರ ಅಥವಾ ಬ್ರೇಸ್ ಲೆಟ್ ಹಾಕಿದಲ್ಲಿ ಶುಭ ಬೆಳವಣಿಗೆಗಳು ಆಗಲಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನಿಮ್ಮ ಬಳಿ ಇರುವಂಥ ಉಳಿತಾಯ- ಹೂಡಿಕೆ ಹಣವನ್ನು ಹೇಗೆ ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ನಿರ್ಧಾರ ಮಾಡುವುದಕ್ಕೆ ಇದು ಸೂಕ್ತ…

Read More

Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು…

Read More