ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಬೆನ್ನಲ್ಲೇ ರಸಗೊಬ್ಬರ ಅಭಾವ ಆತಂಕ: ಸೂಕ್ತ ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ, ಮಾರ್ಚ್ 29: ಇರಾನ್ ಇಸ್ರೇಲ್, ಅಮೆರಿಕಾ ನಡುವೆ ನಡೆಯುತ್ತಿರುವ ಯುದ್ದದಿಂದಾಗಿ (War) ನಮ್ಮ ದೇಶದ ಮೇಲೆ ಅನೇಕ ರೀತಿಯ ಪರಿಣಾಮಗಳಾಗುತ್ತಿವೆ. ಈಗಾಗಲೇ ಸಿಲಿಂಡರ್ ಅಭಾವ ಉಂಟಾಗಿದ್ದು, ಆಮದು, ರಫ್ತು ವ್ಯವಹಾರ ಕಡಿಮೆಯಾಗಿರೋದರಿಂದ ಅನೇಕ ವಸ್ತುಗಳ ಬೆಲೆ ಕೂಡ ಹೆಚ್ಚಾಗುತ್ತಿವೆ. ಇದರ ಜೊತೆಗೆ ಇದೀಗ ರಸಗೊಬ್ಬರಕ್ಕೂ ಅಭಾವ (Fertilizer Shortage) ಉಂಟಾಗುವ ಆತಂಕ ಎದುರಾಗಿದೆ. ಈ ಬಾರಿ ಮುಂಗಾರು ಬಿತ್ತನೆಗೆ ರಸಗೊಬ್ಬರ ಸಿಗುತ್ತೋ, ಇಲ್ವೋ ಅನ್ನೋ ಆತಂಕ ರೈತರನ್ನು ಕಾಡುತ್ತಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕಾ…