Headlines

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್ – Kannada News

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ‘ಭಾರತ್ ಭಾಗ್ಯ ವಿಧಾತ’ (Bharat Bhagya Vidhata) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ. ದೇಶವನ್ನೇ ನಡುಗಿಸಿದ್ದ 2008ರ 26/11 ಮುಂಬೈ ಉಗ್ರರ ದಾಳಿಯ ಕರಾಳ ರಾತ್ರಿಗೆ ಸಂಬಂಧಿಸಿದಂತೆ ತಮ್ಮ ನೆನಪೊಂದನ್ನು ಅವರು ಹಂಚಿಕೊಂಡಿದ್ದಾರೆ. ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಆ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವಿಷಯವನ್ನು ಕಂಗನಾ (Kangana Ranaut) ಬಹಿರಂಗಪಡಿಸಿದ್ದಾರೆ. ಆ ಕರಾಳ ರಾತ್ರಿಯನ್ನು ನೆನಸಿಕೊಂಡ ಕಂಗನಾ,…

Read More

ಶವವಾಗಿ ಪತ್ತೆಯಾದ ಕಿರುತೆರೆ ನಟಿ ಸುಭಾಷಿಣಿ; ಗಂಡನಿಗೆ ಕೊನೆಯ ವಿಡಿಯೋ ಕಾಲ್

‘ಸನ್ ಟಿವಿ’ಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಕಯಲ್’ (Kayal) ಮೂಲಕ ಮನೆಮಾತಾಗಿದ್ದ ನಟಿ ಸುಭಾಷಿಣಿ ಬಾಲಸುಬ್ರಮಣಿಯಂ ಇಂದು (ಏಪ್ರಿಲ್ 6) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಉದಯೋನ್ಮುಖ ನಟಿಯ ಹಠಾತ್ ಸಾವು (Subashini Death) ತಮಿಳು ಕಿರುತೆರೆ ಲೋಕಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ವರದಿಗಳ ಪ್ರಕಾರ, ಚೆನ್ನೈನ ತಮ್ಮ ನಿವಾಸದಲ್ಲಿ ಸುಭಾಷಿಣಿ (Subashini Balasubramaniyam) ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ಪೊಲೀಸ್ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದಾಗ…

Read More

ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು – Kannada News | Kogilu Layout Housing Row: No Housing for Non Kannadigas in Kogilu Layout; Zameer Khan

ಬೆಂಗಳೂರು, ಜನವರಿ 01: ಕರ್ನಾಟಕದವರಲ್ಲದೆ ಹೊರಗಿನವರಿಗೆ ಹೇಗೆ ಮನೆ ಕೊಡಲು ಸಾಧ್ಯ? ಬಾಂಗ್ಲಾದೇಶದವರು ಹೇಗೆ ಬೆಂಗಳೂರಿನಲ್ಲಿ ಇರಲು ಸಾಧ್ಯ? ಹಾಗೇನಾದ್ರೂ ಅವರು ಬಾಂಗ್ಲಾದೇಶದವರಾಗಿದ್ದರೆ ಸಾಬೀತುಪಡಿಸಲಿ. ಬಾಯಿಗೆ ಬಂದಂತೆ ಮಾತನಾಡಬಾರದು ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ಗೆ ವಸತಿ ಸಚಿವ ಜಮೀರ್​​ ತಿರುಗೇಟು ನೀಡಿದ್ದಾರೆ. ಕರ್ನಾಟಕದವರನ್ನು ಬಿಟ್ಟು ಹೊರಗಿನವರಿಗೆ ಮನೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

Video: ಮದ್ಯದ ಅಮಲಿನಲ್ಲಿ ವಿದ್ಯುತ್ ಕಂಬ ಹತ್ತಿ ಹೈ ವೋಲ್ಟೇಜ್ ತಂತಿ ಮೇಲೆ ಮಲಗಿದ ವ್ಯಕ್ತಿ, ಆಮೇಲೇನಾಯ್ತು ನೋಡಿ – Kannada News | Drunk Man on High Voltage Pole in Maharajganj Miraculously Survives Electrocution

ಮಹಾರಾಜ್‌ಗಂಜ್, ಜೂನ್ 25: ಕುಡಿದ ಮತ್ತಿನಲ್ಲಿ ಮನುಷ್ಯರು ಏನೇನೆಲ್ಲಾ ಮಾಡುತ್ತಾರೆ ಎಂಬುದಕ್ಕೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿರುವ ಈ ಘಟನೆಯೇ ಸಾಕ್ಷಿ. ಇಲ್ಲಿನ ಪರ್ಸಾ ಖುರ್ದ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಅತಿಯಾಗಿ ಮದ್ಯ(Alcohol) ಸೇವಿಸಿ, ಬರೋಬ್ಬರಿ 11,000 ವೋಲ್ಟ್ ಹೈವೋಲ್ಟೇಜ್ ವಿದ್ಯುತ್ ತಂತಿಗಳ ಮೇಲೆಯೇ ಮಲಗಿ ಸಾಹಸ ಪ್ರದರ್ಶಿಸಿದ್ದಾನೆ. ಇದನ್ನು ಕಂಡ ಇಡೀ ಗ್ರಾಮಸ್ಥರು ಯಾವುದೇ ಕ್ಷಣದಲ್ಲಾದರೂ ಆತ ಸುಟ್ಟು ಬೂದಿಯಾಗಬಹುದು ಎಂಬ ಭೀತಿಯಲ್ಲಿ ನಡುಗಿದ್ದಾರೆ. ವಿದ್ಯುತ್ ಕಂಬ ಹತ್ತಿದ ಈ ವಿಲಕ್ಷಣ ವ್ಯಕ್ತಿಯನ್ನು…

Read More

ಇರಾನ್​ನ ಭದ್ರತಾ ಮುಖ್ಯಸ್ಥರ ಹತ್ಯೆಯಾಗಿದೆ ಎಂದ ಇಸ್ರೇಲ್; ಕೆಲವೇ ಗಂಟೆಗಳಲ್ಲಿ ಕೈಬರಹದ ಪೋಸ್ಟ್ ಹಾಕಿದ ಅಲಿ ಲಾರಿಜಾನಿ!

ಟೆಹ್ರಾನ್, ಮಾರ್ಚ್ 17: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸಿದ ಬಳಿಕ ಶುರುವಾದ ಸಂಘರ್ಷ ಇನ್ನೂ ಮುಂದುವರೆದಿದೆ. ಈ ದಾಳಿಯಲ್ಲಿ ಮೊದಲ ದಿನವೇ ಇರಾನ್​ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಇರಾನ್ (Iran- Israel War) ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆಲ್ಲ ದಾಳಿ ನಡೆಸಿತ್ತು. ಈ ದಾಳಿಯ ಮಾಸ್ಟರ್ ಮೈಂಡ್ ಆಗಿರುವ ಇರಾನ್​ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್​ ಘೋಷಿಸಿತ್ತು….

Read More

ಕೊಲನ್‌ ಕ್ಯಾನ್ಸರ್ ಎಷ್ಟು ಅಪಾಯಕಾರಿ ಗೊತ್ತಾ? ಹೇಗಿರುತ್ತೆ ಇದರ ಲಕ್ಷಣಗಳು? ಡಾ ಅನುರಾಗ್‌ ಶೆಟ್ಟಿ ನೀಡಿರುವ ಮಾಹಿತಿ ಇಲ್ಲಿದೆ

ಕೊಲನ್‌ ಕ್ಯಾನ್ಸರ್ (Colon Cancer) ಅಥವಾ ದೊಡ್ಡ ಕರುಳಿನ ಕ್ಯಾನ್ಸರ್ ಬಗ್ಗೆ ನೀವು ಕೇಳಿರಬಹುದು. ಅತಿ ಹೆಚ್ಚು ಕಾಣಿಸಿಕೊಳ್ಳುವ ಕ್ಯಾನ್ಸರ್ ಗಳಲ್ಲಿ ಇದು ಒಂದಾಗಿದೆ. ಜಾಗತಿಕವಾಗಿ ಕ್ಯಾನ್ಸರ್ (Cancer) ನಿಂದ ಸಂಭವಿಸುವ ಸಾವುಗಳಿಗೆ ಎರಡನೇ ಪ್ರಮುಖ ಕಾರಣವಾಗಿದೆ. ಇದನ್ನು “ಸೈಲೆಂಟ್‌” ಕ್ಯಾನ್ಸರ್ ಎಂದು ಕೂಡ ಕರೆಯಲಾಗುತ್ತದೆ, ಏಕೆಂದರೆ ಇದರ ಆರಂಭಿಕ ಹಂತಗಳಲ್ಲಿ ಯಾವುದೇ ರೀತಿಯ ಲಕ್ಷಣಗಳು ಕೂಡ ಕಂಡುಬರುವುದಿಲ್ಲ. ಆದರೆ ಈ ರೀತಿ ಕಂಡು ಬರುವ ಕ್ಯಾನ್ಸರ್ ಗೆ ಕಾರಣವೇನು, ಲಕ್ಷಣಗಳನ್ನು ಗುರುತಿಸುವುದು ಹೇಗೆ, ಕೊಲನ್‌ ಕ್ಯಾನ್ಸರ್…

Read More

ಮಳೆಗಾಲ ಆರಂಭವಾದರೂ ಜೋಗಿಮಟ್ಟಿ ವೀಕ್ಷಣೆಗೆ ಇನ್ನೂ ನಿರ್ಬಂಧ: ಪ್ರವಾಸಿಗರಿಂದ ಅರಣ್ಯ ಇಲಾಖೆಗೆ ಹಿಡಿಶಾಪ – Kannada News

ಚಿತ್ರದುರ್ಗ, ಜೂನ್​​ 06: ಬಯಲುಸೀಮೆಯ ಊಟಿ ಎಂದೇ ಖ್ಯಾತಿ ಪಡೆದಿರುವ ಜೋಗಿಮಟ್ಟಿ (Jogi Matti)  ವನ್ಯಜೀವಿಧಾಮ ವೀಕ್ಷಣೆಗೆ ನಿತ್ಯ ನೂರಾರು ಜನರು ಆಗಮಿಸುತ್ತಾರೆ. ಬೇಸಿಗೆ ಕಾಲದಲ್ಲಿ ಜೋಗಿಮಟ್ಟಿ ಪ್ರವೇಶಕ್ಕೆ ಅರಣ್ಯ ಇಲಾಖೆ ಇತ್ತೀಚೆಗೆ ನಿರ್ಬಂಧ ವಿಧಿಸಿತ್ತು. ಆದರೆ ಮಳೆಗಾಲ (Monsoon) ಆರಂಭವಾದರೂ ನಿರ್ಬಂಧ ತೆರವುಗೊಳಿಸದಿರುವುದು ಪರಿಸರ ಪ್ರಿಯರ ಹಿಡಿಶಾಪಕ್ಕೆ ಗುರಿ ಆಗಿದೆ. ಮುಖ್ಯಾಂಶಗಳು ಬೇಸಿಗೆ ಕಾಲದಲ್ಲಿ ಬೆಂಕಿ ಅವಘಡ ತಪ್ಪಿಸಲು ಅರಣ್ಯ ಪ್ರವೇಶಕ್ಕೆ ನಿರ್ಬಂಧ. ಮಳೆಗಾಲ ಶುರುವಾದರೂ ನಿರ್ಬಂಧ ತೆರವುಗೊಳಿಸದ ಅಧಿಕಾರಿಗಳು. ಜೋಗಿಮಟ್ಟಿ ಸೊಬಗು ಸವಿಯಲು ಬಂದವರಿಗೆ…

Read More

ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

ರೈಲ್ವೆ ನಿಲ್ದಾಣದ ಚಿತ್ರImage Credit source: PTI ನವದೆಹಲಿ, ಜೂನ್ 1: ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ರೈಲುಗಳಲ್ಲಿ ಹೆಚ್ಚುತ್ತಿರುವ ಭಾರಿ ಜನಸಂದಣಿಯನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು (Indian Railways) ಇಂದಿನಿಂದ (ಜೂನ್ 1, 2026) ಟಿಕೆಟ್ ಬುಕಿಂಗ್ ಮತ್ತು ಪ್ರಯಾಣದ ನಿಯಮಗಳಲ್ಲಿ ಅತ್ಯಂತ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಈ ಹೊಸ ನಿಯಮಗಳು ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆಯನ್ನು ಹೆಚ್ಚಿಸಲಿವೆ. ಈ ನಿಯಮಗಳ ಪೈಕಿ ವೈಟಿಂಗ್ ಲಿಸ್ಟ್ ಟಿಕೆಟ್​ಗಳ ಸಂಖ್ಯೆಗೆ ಮಿತಿ ಹಾಕುವುದೂ ಒಂದು….

Read More

ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಬೀಜಿಂಗ್, ಮೇ 3: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ AI ಅಳವಡಿಸಿಕೊಳ್ಳುತ್ತಿವೆ. ಆದರೆ ಚೀನಾದ ನ್ಯಾಯಾಲಯವೊಂದು ಈ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, “ಕಂಪನಿಗಳು ಲಾಭಕ್ಕಾಗಿ ಅಥವಾ ಕೆಲಸದ ವೇಗಕ್ಕಾಗಿ AI ಬಳಸಿಕೊಳ್ಳುವುದು ಅವರ ವೈಯಕ್ತಿಕ ನಿರ್ಧಾರ. ಆದರೆ ಈ ನಿರ್ಧಾರದ ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಅಥವಾ ಅವರ ಸಂಬಳ ಕಡಿತಗೊಳಿಸುವುದು ಕಾನೂನುಬಾಹಿರ” ಎಂದು ಹೇಳಿದೆ. ಚೀನಾದ ಹ್ಯಾಂಗ್‌ಝೌ (Hangzhou) ನ್ಯಾಯಾಲಯದಿಂದ ಈ ತೀರ್ಪು…

Read More

ಪಂಜಾಬ್ ಲಾಟರಿಯಲ್ಲಿ 6 ಕೋಟಿ ಗೆದ್ದ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ – Kannada News | Delhi 80 year old retired postmaster wins Rs 6 crore Punjab Baisakhi Bumper lottery

ನವದೆಹಲಿ, ಏಪ್ರಿಲ್ 22: ದೆಹಲಿಯ 80 ವರ್ಷದ ನಿವೃತ್ತ ಪೋಸ್ಟ್ ಮಾಸ್ಟರ್ ಪಂಜಾಬ್ ರಾಜ್ಯ ಡಿಯರ್ ಬೈಸಾಖಿ ಬಂಪರ್ ಲಾಟರಿಯಲ್ಲಿ (Bumper Lottery) 6 ಕೋಟಿ ರೂ. ಪ್ರಥಮ ಬಹುಮಾನವನ್ನು ಗೆದ್ದಿದ್ದಾರೆ. ದೆಹಲಿಯ ನಿವಾಸಿಯಾದ 80 ವರ್ಷದ ಓಂ ಪ್ರಕಾಶ್ ಲುಧಿಯಾನದ ಘಂಟಾ ಘರ್ ನಲ್ಲಿರುವ ಅಂಗಡಿಯಿಂದ 500 ರೂ.ಗೆ ಲಾಟರಿ ಟಿಕೆಟ್ ಖರೀದಿಸಿದ್ದರು. ಬಿ 520729 ಸಂಖ್ಯೆಯ ಅವರ ಲಾಟರಿ ಟಿಕೆಟ್ ಏಪ್ರಿಲ್ 19ರಂದು ಘೋಷಿಸಲಾದ ಡ್ರಾದಲ್ಲಿ ಮೊದಲ ಬಹುಮಾನವನ್ನು ಪಡೆದುಕೊಂಡಿದೆ. ಹೀಗಾಗಿ, ರಾತ್ರಿ ಬೆಳಗಾಗುವಷ್ಟರಲ್ಲಿ…

Read More