ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ – Kannada News | Chandrulamani Remanded to Judicial Custody Till March 2 by Special Court for People’s Representatives
ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಯಲಹಂಕ ಜುಡಿಷಿಯಲ್ ಲೇಔಟ್ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಅನ್ವಯ ಬಿಜೆಪಿ ಶಾಸಕ ಚಂದ್ರು ಲಮಾಣಿಯೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಗೂ ನ್ಯಾಯಾಂಗ ಬಂಧನ…