ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲು.
ಬೆಂಗಳೂರು.ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ಇಂದು ಭೇಟಿ ನೀಡಿದ್ದಾರೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ, ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ಸಾಮಾನ್ಯವಾಗಿ ಒಬ್ಬರ ಮುಖ ಅಥವಾ ಹಸ್ತದ ರೇಖೆಗಳನ್ನು ನೋಡಿ ಅವರ ಗುಣಸ್ವಭಾವವನ್ನು ಅಳೆಯುತ್ತೇವೆ. ಆದರೆ, ಸಾಮುದ್ರಿಕ ಶಾಸ್ತ್ರದ ಪ್ರಕಾರ, ಪಾದಗಳು ಮತ್ತು ಬೆರಳುಗಳ ಆಕಾರವೂ ಕೂಡ ಜೀವನದ ಗುಪ್ತ ರಹಸ್ಯಗಳನ್ನು ಬಿಚ್ಚಿಡುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ನಿಮ್ಮ ಪಾದದ ಬೆರಳುಗಳು ನಿಮ್ಮ ಪ್ರೇಮ ಜೀವನ, ಸ್ವಭಾವ ಮತ್ತು ಯಶಸ್ಸಿನ ಬಗ್ಗೆ ಏನು ಹೇಳುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ.
ಬೆರಳುಗಳ ನಡುವೆ ಅಂತರವಿಲ್ಲವೇ? ಅಪ್ಪಟ ಪ್ರೇಮಜೀವಿಗಳು!
ನಿಮ್ಮ ಹೆಬ್ಬೆರಳು ಮತ್ತು ಅದರ ಪಕ್ಕದ ತೋರುಬೆರಳು ಪರಸ್ಪರ ಅಂಟಿಕೊಂಡಿದ್ದರೆ, ನೀವು ತುಂಬಾ ಬುದ್ಧಿವಂತರು ಮತ್ತು ಭಾವಜೀವಿಗಳು ಎಂದು ಅರ್ಥ. ಇವರು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತಾರೆ. ಇವರಿಗೆ ಕಲಹ ಎಂದರೆ ಇಷ್ಟವಿಲ್ಲ. ಕುಟುಂಬದಲ್ಲಿ ಶಾಂತಿ ನೆಲೆಸಲು ಎಂತಹ ತ್ಯಾಗಕ್ಕೂ ಇವರು ಸದಾ ಸಿದ್ಧ.
ಬೆರಳುಗಳ ನಡುವೆ ಅಂತರವಿದ್ದರೆ:
ಹೆಬ್ಬೆರಳು ಮತ್ತು ತೋರುಬೆರಳಿನ ನಡುವೆ ಸ್ಪಷ್ಟವಾದ ಜಾಗವಿದ್ದರೆ, ನೀವು ಮುಕ್ತ ಆಲೋಚನೆಯುಳ್ಳವರು. ಯಾರ ಕೆಳಗೂ ಕೆಲಸ ಮಾಡಲು ಇವರು ಇಷ್ಟಪಡುವುದಿಲ್ಲ. ತನ್ನದೇ ಆದ ಸ್ವಂತ ಗುರುತನ್ನು ಹೊಂದಲು ಬಯಸುತ್ತಾರೆ. ಪ್ರೇಮ ಜೀವನದಲ್ಲೂ ಇವರು ಸ್ವಲ್ಪ ‘ಸ್ಪೇಸ್’ ನಿರೀಕ್ಷಿಸುತ್ತಾರೆ. ಈ ಸ್ವತಂತ್ರ ಪ್ರವೃತ್ತಿ ಕೆಲವೊಮ್ಮೆ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.
ತೋರುಬೆರಳು ಉದ್ದವಾಗಿದ್ದರೆ:
ಅನೇಕರಿಗೆ ಹೆಬ್ಬೆರಳಿಗಿಂತ ಅದರ ಪಕ್ಕದ ತೋರುಬೆರಳು ಉದ್ದವಾಗಿರುತ್ತದೆ. ಇದು ನಾಯಕತ್ವದ (Leadership) ಸಂಕೇತ. ಕಚೇರಿಯಲ್ಲಾಗಲಿ ಅಥವಾ ಮನೆಯಲ್ಲಾಗಲಿ, ಇವರು ಮುಂಚೂಣಿಯಲ್ಲಿ ನಿಂತು ನಿರ್ಧಾರ ತೆಗೆದುಕೊಳ್ಳುತ್ತಾರೆ. ಇವರ ಮಾತುಗಳು ಮತ್ತು ನಿರ್ಧಾರಗಳು ಇತರರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ.
ಹೆಬ್ಬೆರಳಿಗಿಂತ ತೋರುಬೆರಳು ಚಿಕ್ಕದಾಗಿದ್ದರೆ, ನೀವು ಅತ್ಯಂತ ಶಾಂತ ಮತ್ತು ಸಹನಾಶೀಲ ವ್ಯಕ್ತಿತ್ವದವರು. ಇವರು ಇತರರ ಭಾವನೆಗಳಿಗೆ ಹೆಚ್ಚಿನ ಗೌರವ ನೀಡುತ್ತಾರೆ. ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಸಂಬಂಧಗಳನ್ನು ಸಮತೋಲನಗೊಳಿಸುವ ಅದ್ಭುತ ಕಲೆ ಇವರಿಗೆ ಸಿದ್ಧಿಸಿರುತ್ತದೆ.
ಹೆಬ್ಬೆರಳಿನ ಆಕಾರ ಮತ್ತು ನಿಮ್ಮ ಅದೃಷ್ಟ:
ಹೆಬ್ಬೆರಳಿನ ರಚನೆಯು ನಿಮ್ಮ ಜೀವನದ ಸುಖ-ಕಷ್ಟಗಳನ್ನು ಸೂಚಿಸುತ್ತದೆ:
ದುಂಡಗೆ ಆಕಾರ: ನೀವು ಅದೃಷ್ಟವಂತರು! ನಿಮ್ಮ ಜೀವನವು ಸುಖ-ಸಂತೋಷ ಮತ್ತು ಸಕಲ ಸೌಕರ್ಯಗಳಿಂದ ಕೂಡಿರುತ್ತದೆ ಎಂದು ಶಾಸ್ತ್ರ ಹೇಳುತ್ತದೆ.
ಮೃದು ಅಥವಾ ಬಾಗಿದ ಹೆಬ್ಬೆರಳು: ಜೀವನದ ಆರಂಭದಲ್ಲಿ ಸ್ವಲ್ಪ ಹೋರಾಟ ಮತ್ತು ತೊಂದರೆಗಳಿರಬಹುದು. ಆದರೆ, ಇವರು ತುಂಬಾ ತಾಳ್ಮೆಯುಳ್ಳವರು. ತಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದನ್ನು ಸಾಧಿಸಿಯೇ ತೀರುತ್ತಾರೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
IPL 2026: ಐಪಿಎಲ್ 2026ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
ಏಪ್ರಿಲ್ 14 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ನಿಗದಿತ ಸಮಯದೊಳಗೆ ತನ್ನ ಓವರ್ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಪ್ರಸಕ್ತ ಸೀಸನ್ನಲ್ಲಿ ಕೆಕೆಆರ್ ತಂಡದ ಮೊದಲ ತಪ್ಪಾದ ಕಾರಣ ನಾಯಕನಿಗೆ 12 ಲಕ್ಷ ರೂ.ಗಳ ದಂಡ ವಿಧಿಸಿ ಐಪಿಎಲ್ ಆಡಳಿತ ಮಂಡಳಿ ಆದೇಶಿಸಿದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್ನಿಂದ ಒಬ್ಬ ಫೀಲ್ಡರ್ನನ್ನು ಕಡಿತ ಮಾಡಲಾಗುತ್ತದೆ.
ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.
ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.
ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.
ಐಪಿಎಲ್ 2026 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ ಸೋಲಿನಿಂದ ಪಾರಾಗಿದೆ. ಇದೀಗ ಸಿಎಸ್ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ಸ್ಲೋ ಓವರ್ ರೇಟ್ ತಪ್ಪಿಗಾಗಿ ಕೆಕೆಆರ್ ತಂಡದ ನಾಯಕ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.
ಅಮೃತಸರ, ಏಪ್ರಿಲ್ 15: ಪಂಜಾಬ್ನ ಫತೇಹ್ಗಢ ಸಾಹಿಬ್ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವು ತೀವ್ರವಾಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ.
ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಲಿಗಿಲಿ ಜೂನಿಯರ್’ ವೇದಿಕೆ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ನಾಚಿ ನೀರಾದರು.
ನಾಸಿಕ್, ಏಪ್ರಿಲ್ 15: ಭಾರತದ ಅತಿದೊಡ್ಡ ಸಾಫ್ಟ್ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ.
ಹಿಂದೂ ಯುವತಿಯರೇ ಟಾರ್ಗೆಟ್!
ಈ ಪ್ರಕರಣದಲ್ಲಿ ಸಾಕ್ಷಿಯೊಬ್ಬರು ನೀಡಿರುವ ಹೇಳಿಕೆ ಬೆಚ್ಚಿಬೀಳಿಸುವಂತಿದೆ. ಆರೋಪಿಗಳು ಇತರ ಪುರುಷ ಉದ್ಯೋಗಿಗಳಿಗೆ “ಹೋಗಿ ಹಿಂದೂ ಹುಡುಗಿಯರನ್ನು ನಿಮ್ಮ ಗೆಳತಿಯರನ್ನಾಗಿ ಮಾಡಿಕೊಳ್ಳಿ, ಅವರನ್ನು ಮದುವೆಯಾಗಿ ಮತಾಂತರ ಮಾಡಿ” ಎಂದು ಪ್ರಚೋದಿಸುತ್ತಿದ್ದರು. ಈ ಕೆಲಸಕ್ಕಾಗಿ ಹಣದ ಆಮಿಷವನ್ನೂ ಒಡ್ಡಲಾಗುತ್ತಿತ್ತು ಎನ್ನಲಾಗಿದೆ. 2021 ರಿಂದಲೇ ಈ ಜಾಲ ಸಕ್ರಿಯವಾಗಿದ್ದು, ಇದಕ್ಕೆ ಮಾನವ ಸಂಪನ್ಮೂಲ (HR) ವಿಭಾಗದ ಬೆಂಬಲವೂ ಇತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬಂಧಿತರಲ್ಲಿ ಒಬ್ಬರಾದ ಹೆಚ್.ಆರ್ ಮ್ಯಾನೇಜರ್ ನಿದಾ ಖಾನ್ ಅವರನ್ನು ‘ಲೇಡಿ ಕ್ಯಾಪ್ಟನ್’ ಎಂದು ಕರೆಯಲಾಗುತ್ತಿತ್ತು. ಈಕೆ ಮಹಿಳಾ ಉದ್ಯೋಗಿಗಳೊಂದಿಗೆ ಆತ್ಮೀಯವಾಗಿ ಸ್ನೇಹ ಬೆಳೆಸಿ, ನಂತರ ಅವರಿಗೆ ನಮಾಜ್ ಮಾಡಲು ಮತ್ತು ಹಿಜಾಬ್ ಧರಿಸಲು ತರಬೇತಿ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಾರಾದರೂ ಪ್ರತಿರೋಧ ತೋರಿದರೆ ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಲಾಗುತ್ತಿತ್ತು.
ಎಂಟು ಮಹಿಳೆಯರಿಂದ ದೂರು: ಎಸ್ಐಟಿ ತನಿಖೆ
ಫೆಬ್ರವರಿ 2022 ರಿಂದ ಮಾರ್ಚ್ 2026 ರ ನಡುವೆ ನಡೆದ ಈ ದೌರ್ಜನ್ಯಗಳ ಬಗ್ಗೆ ಎಂಟು ಮಹಿಳಾ ಉದ್ಯೋಗಿಗಳು ಧೈರ್ಯದಿಂದ ದೂರು ನೀಡಿದ್ದಾರೆ. ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸುವುದು ಮತ್ತು ಅಸಭ್ಯವಾಗಿ ವರ್ತಿಸಿದ ಆರೋಪಗಳು ಕೇಳಿಬಂದಿವೆ.
ಹಿಂದೂ ಉದ್ಯೋಗಿಗಳನ್ನು ನಮಾಜ್ ಮಾಡಲು ಒತ್ತಾಯಿಸುವುದು ಮತ್ತು ಅವರ ಧರ್ಮವನ್ನು ಅವಮಾನಿಸುವ ಕೆಲಸ ನಿರಂತರವಾಗಿ ನಡೆಯುತ್ತಿತ್ತು. ಉನ್ನತ ಅಧಿಕಾರಿಗಳಿಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಳ್ಳದೆ, ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಟಾ ಸಂಸ್ಥೆಯ ಕಠಿಣ ನಿಲುವು
ಘಟನೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್, ಇದು “ಗಂಭೀರವಾಗಿ ಕಳವಳಕಾರಿ ಮತ್ತು ದುಃಖಕರ” ಎಂದು ಬಣ್ಣಿಸಿದ್ದಾರೆ. ಕಂಪನಿಯು ಈಗಾಗಲೇ ಆರೋಪಿಗಳನ್ನು ಅಮಾನತುಗೊಳಿಸಿದ್ದು, ಆರತಿ ಸುಬ್ರಮಣಿಯನ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ.
ನಾಸಿಕ್ ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ (SIT) ಈಗ ಈ ಮತಾಂತರದ ಜಾಲದ ಹಿಂದಿರುವ ದೊಡ್ಡ ತಲೆಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಐಟಿ ಸಂಸ್ಥೆಯೊಂದರ ಒಳಗೆ ಇಂತಹ ವ್ಯವಸ್ಥಿತ ಸಂಚು ನಡೆದದ್ದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಟಿಸಿಎಸ್ ವಿವಾದದ ಬಗ್ಗೆ ಟಿ.ವಿ. ಮೋಹನ್ದಾಸ್ ಪೈ ಕಿಡಿ
ನಾಸಿಕ್ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಮತಾಂತರದ ಪ್ರಯತ್ನ ಮತ್ತು ಕಿರುಕುಳದ ಘಟನೆಯು ಕೇವಲ ಒಂದು ಕಚೇರಿಯ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಇದು ಭಾರತದ ವೈಟ್-ಕಾಲರ್ (White-Collar) ಉದ್ಯೋಗ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಐಟಿ ವಲಯದ ದಿಗ್ಗಜ ಮತ್ತು ಇನ್ಫೋಸಿಸ್ನ ಮಾಜಿ ಸಿಎಫ್ಒ ಟಿ.ವಿ. ಮೋಹನ್ದಾಸ್ ಪೈ ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ವೃತ್ತಿಪರತೆ ಇರಬೇಕಾದ ಕಚೇರಿಗಳಲ್ಲಿ ಒಂದು ನಿರ್ದಿಷ್ಟ ಗುಂಪು ತನ್ನ ಧಾರ್ಮಿಕ ಅಜೆಂಡಾವನ್ನು ಹೇರುವುದು ಅಪಾಯಕಾರಿ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಲಸದ ಸ್ಥಳದಲ್ಲಿ ಕೆಲವರು ತಮ್ಮ ಧರ್ಮದ ಪ್ರಚಾರ ಮಾಡುವುದು ಮತ್ತು ಇತರರನ್ನು ಮತಾಂತರಕ್ಕೆ ಪ್ರಚೋದಿಸುವುದನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ.ಸಮುದಾಯದ ರೇಖೆಗಳನ್ನು ಮೀರಿ ಸಹೋದ್ಯೋಗಿಗಳನ್ನು ಮಾನಸಿಕವಾಗಿ ಗುರಿಯಾಗಿಸಲು ಸಾಮಾಜಿಕ ಜಾಲತಾಣದ ಗುಂಪುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ Image Credit source: The Hindu
ಬೆಂಗಳೂರು, ಏಪ್ರಿಲ್ 15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ (2nd PUC) ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ಪರೀಕ್ಷೆ-2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ ಪ್ರಾರಂಭವಾಗಿ ಏಪ್ರಿಲ್ 17ರವರೆಗೆ ನಡೆಯಲಿದೆ.
ನೋಂದಾಯಿಸಿಕೊಳ್ಳುವುದು ಎಲ್ಲಿ?
2026ರಲ್ಲಿ ರೆಗ್ಯೂಲರ್ ಫ್ರೆಶ್ (Regular Fresh) ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮೊದಲನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳಿಸದ (Not Completed) ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸದೆ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೀಡಿರುವ ಆನ್ಲೈನ್ ಲಿಂಕ್ (http://tinyurl.com/mvp9k6es) ಮೂಲಕ ಅಥವಾ ತಮ್ಮ ಸಂಬಂಧಿತ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಿಯು ಎಕ್ಸಾಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇದಲ್ಲದೆ, ಮೊದಲನೇ ಪರೀಕ್ಷೆಯಲ್ಲಿ ಗೈರುಹಾಜರಾಗಿದ್ದ ಅಥವಾ ಫಲಿತಾಂಶ ಪೂರ್ಣಗೊಳಿಸದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ತಮ್ಮ ಲಾಗಿನ್ ಮೂಲಕ ನೇರವಾಗಿ ನೋಂದಾಯಿಸಲು ಅವಕಾಶ ನೀಡಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಮಂಡಳಿ ಸೂಚಿಸಿದೆ.
ಯಾವಾಗ ನಡೆಯಲಿದೆ ಪರೀಕ್ಷೆ?
ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಪ್ರವೇಶಪತ್ರಗಳನ್ನು ನಿಗದಿತ ಸಮಯದಲ್ಲಿ ಸಂಬಂಧಿತ ಕಾಲೇಜುಗಳ ಪ್ರಾಂಶುಪಾಲರ ಲಾಗಿನ್ ಮೂಲಕ ಲಭ್ಯಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಪರೀಕ್ಷೆಯ ವೇಳಾಪಟ್ಟಿಯನ್ನು ಮರುನಿಗದಿ ಮಾಡಲಾಗಿದ್ದು, ಪರೀಕ್ಷೆಗಳು 30 ಏಪ್ರಿಲ್ 2026ರಿಂದ ಆರಂಭವಾಗಲಿವೆ. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಪ್ರಶ್ನೆ ಕೋಶ ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉಪಯೋಗಿಸಿಕೊಂಡು ಶಾಂತ ಮನಸ್ಥಿತಿಯಲ್ಲಿ ಸಿದ್ಧತೆ ನಡೆಸಿ ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಲಾಗಿದೆ.
ಏಕದೇವೋಪಾಸನೆಯ ಆಳವಾದ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸನಾತನ ಹಿಂದೂ ಸಂಸ್ಕೃತಿಯಲ್ಲಿ 33 ಕೋಟಿ ದೇವತೆಗಳ ಆರಾಧನೆಗೆ ಅವಕಾಶವಿದ್ದರೂ, ಒಬ್ಬ ದೇವರಲ್ಲಿ ದೃಢವಾದ ಭಕ್ತಿಯನ್ನು ಕೇಂದ್ರೀಕರಿಸುವುದು ಜೀವನಕ್ಕೆ ಮಹತ್ತರವಾದ ಸಾರ್ಥಕತೆಯನ್ನು ತರುತ್ತದೆ. ವ್ಯಾಪಾರ, ವ್ಯವಹಾರ, ಶಾಸ್ತ್ರ ಚಿಕಿತ್ಸೆ ಮುಂತಾದ ವಿವಿಧ ಕ್ಷೇತ್ರಗಳಿಗೆ ಆಯಾ ದೇವರುಗಳನ್ನು ಪೂಜಿಸುವುದು ರೂಢಿಯಲ್ಲಿದ್ದರೂ, ಏಕದೇವೋಪಾಸನೆಯು ಸಮಗ್ರ ಶುಭವನ್ನು ನೀಡುತ್ತದೆ.
“ಸರ್ವದೇವ ನಮಸ್ಕಾರಾಃ ಕೇಶವಂ ಪ್ರತಿಗಚ್ಛತಿ” ಎಂಬ ಮಾತಿನಂತೆ, ಎಲ್ಲಾ ದೇವರುಗಳಿಗೆ ನಮಸ್ಕರಿಸಿದರೂ, ಒಬ್ಬ ದೇವರನ್ನು ಹೃದಯದಲ್ಲಿ ಶಾಶ್ವತವಾಗಿ ಸ್ಥಾಪಿಸಿಕೊಳ್ಳುವುದು ಅತ್ಯಂತ ಪ್ರಮುಖವಾಗಿದೆ. ಇದು ನಮ್ಮ ಆಧ್ಯಾತ್ಮಿಕ ಪಯಣದಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಏಕದೇವೋಪಾಸನೆಯು ಏಕಂ ಸತ್ ವಿಪ್ರಬಹುದ ವದಂತಿ ಎಂಬ ಮಾತಿಗೆ ಸಮಾನವಾಗಿದ್ದು, ಸತ್ಯ ಒಂದೇ, ಆದರೆ ಅದನ್ನು ಜ್ಞಾನಿಗಳು ಅನೇಕ ಹೆಸರುಗಳಿಂದ ಕರೆಯುತ್ತಾರೆ ಎಂಬುದನ್ನು ಸೂಚಿಸುತ್ತದೆ. ಇದರಿಂದ ನಮ್ಮಲ್ಲಿ ಏಕಾಗ್ರತೆ, ನಂಬಿಕೆ ವೃದ್ಧಿಯಾಗಿ, ಬರುವ ಕಂಟಕಗಳು ಹಾಗೂ ಕರ್ಮಗಳು ಸರಿಪಡಿಸಲು ದಾರಿ ಸಿಗುತ್ತದೆ.
ಯಾವುದೇ ದೇವರನ್ನು – ಗಣಪತಿ, ಸುಬ್ರಮಣ್ಯ, ಶಿವ, ವಿಷ್ಣು, ವೆಂಕಟೇಶ್ವರ, ದತ್ತಾತ್ರೇಯ ಇರಬಹುದು – ನಿಮ್ಮ ಕುಲದೇವರು ಅಥವಾ ಇಷ್ಟದೇವರನ್ನಾಗಿ ಆಯ್ಕೆ ಮಾಡಿಕೊಂಡು, ಅವರ ನಾಮಸ್ಮರಣೆ, ದರ್ಶನ, ಪೂಜೆಯನ್ನು ನಿರಂತರವಾಗಿ ಮತ್ತು ಯಥಾವಿಧಿಯಾಗಿ ಆಚರಿಸಬೇಕು. “ಯದ್ಭಾವಂ ತದ್ಭವತಿ” ಎಂಬ ಮಾತಿನಂತೆ, ಒಂದೇ ದೇವರ ಜಪ ಮತ್ತು ಪೂಜೆಯನ್ನು ಹೆಚ್ಚಾಗಿ ಮಾಡುವುದು ಉತ್ತಮ. ಎಲ್ಲಾ ದೇವರುಗಳ ದರ್ಶನ, ತೀರ್ಥ ಸೇವನೆ ಮಾಡಬಹುದಾದರೂ, ಒಬ್ಬ ದೇವರಲ್ಲಿ ತಾಯಿ ಮಗುವಿನ ಸಂಬಂಧದಂತೆ ದೃಢ ಭಕ್ತಿ ಇಡುವುದು ಅಗತ್ಯ. ಇದು ರಾಜಕೀಯ ಪಕ್ಷಗಳ ಬದಲಾವಣೆಯಂತೆ ಒಂದು ವರ್ಷ ಒಂದು ದೇವರು, ಇನ್ನೊಂದು ವರ್ಷ ಇನ್ನೊಂದು ದೇವರನ್ನು ಪೂಜಿಸುವುದಲ್ಲ.
ದೈವದೂಷಣೆ, ದೈವಾಪರಾಧಗಳಿಂದ ದೂರವಿರಬೇಕು. ನಮ್ಮ ಕರ್ಮಫಲಗಳು ನಮ್ಮ ಜೀವನವನ್ನು ರೂಪಿಸುತ್ತವೆ. ಇಂದಿನ ದಾನ, ತ್ಯಾಗಗಳು ತಕ್ಷಣ ಫಲ ನೀಡದಿದ್ದರೂ, ಮುಂದಕ್ಕೆ ಅವು ನಮಗೆ ಬೆಂಬಲ ನೀಡುತ್ತವೆ ಮತ್ತು ನಮ್ಮ ಕರ್ಮಫಲಗಳನ್ನು ಕಡಿಮೆ ಮಾಡುತ್ತವೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನು, “ಅನನ್ಯಶ್ಚಿಂತಯಂತೋ ಮಾಂ” ಎಂದು ಹೇಳುತ್ತಾ, ತನ್ನನ್ನು ನಂಬಿದವರ ಯೋಗಕ್ಷೇಮವನ್ನು ತಾನೇ ನೋಡಿಕೊಳ್ಳುವುದಾಗಿ ಭರವಸೆ ನೀಡುತ್ತಾನೆ. ಒಂದೇ ಮಂತ್ರವನ್ನು ಸತತವಾಗಿ ಜಪಿಸುವುದರಿಂದ, ಆ ಮಂತ್ರದ ಅಧಿದೇವತೆ ಎಲ್ಲವನ್ನು ಬೆಂಬಲಿಸುತ್ತದೆ. ಓಂ ನಮಃಶಿವಾಯ, ಓಂ ಮಹಾಲಕ್ಷ್ಮಿ ನಮಃ, ಓಂ ನಮೋ ವೆಂಕಟೇಶಾಯ ಮುಂತಾದ ಮಂತ್ರಗಳ ನಿರಂತರ ಜಪದಿಂದ ಆ ದೇವಿಯ ಕೃಪೆಗೆ ಪಾತ್ರರಾಗಬಹುದು.
ಪರಮಹಂಸರ ಮಾತು “ಆತ್ಮಾನೋಂ ಮೋಕ್ಷಾರ್ಥಂ ಜಗದ್ದಿತಾಯಚ” ಎಂಬುದನ್ನು ನೆನಪಿಸಿಕೊಳ್ಳಬೇಕು. ಹತ್ತಾರು ಗುಂಡಿಗಳನ್ನು ಒಂದೇ ಜಾಗದಲ್ಲಿ ತೋಡಿದರೆ ನೀರು ಸಿಗುವುದಿಲ್ಲ. ಆದರೆ ಒಂದೇ ಗುಂಡಿಯನ್ನು ಆಳವಾಗಿ ತೋಡಿದರೆ ನೀರು ಸಿಕ್ಕೇ ಸಿಗುತ್ತದೆ. ಅದೇ ರೀತಿ, ಒಂದೇ ದೋಣಿಯಲ್ಲಿ ಪ್ರಯಾಣಿಸಿದಂತೆ, ಒಬ್ಬ ದೇವರಲ್ಲಿ ನಿಷ್ಠೆಯಿಂದ ಭಕ್ತಿ ಇಡುವುದರಿಂದ ಮುಕ್ತಿ ಪಡೆಯಲು ಸಾಧ್ಯ. ಸರ್ವಾಂತರ್ಯಾಮಿ, ಸರ್ವವ್ಯಾಪಿ, ಸರ್ವಶಕ್ತನಾದ ಭಗವಂತ ಯಾರಿಗೂ ಅನ್ಯಾಯ ಮಾಡುವುದಿಲ್ಲ. ನಿಮಗೆ ಅನುಕೂಲವಾದ ದೇವರ ಸ್ಮರಣೆಯನ್ನು ಶಾಶ್ವತವಾಗಿ ಮಾಡಿಕೊಂಡು ಹೋಗಿ, ಒಳಿತಾಗುತ್ತದೆ ಮತ್ತು ಮುಕ್ತಿ ಸಿಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.
ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪಾಕಿಸ್ತಾನ್ ಸೂಪರ್ ಲೀಗ್ನ 21ನೇ ಪಂದ್ಯದಲ್ಲಿ 21 ರನ್ ಸಿಡಿಸುವ ಮೂಲಕ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಟಿ20 ಕ್ರಿಕೆಟ್ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಈ ದಾಖಲೆಯೊಂದಿಗೆ ಈ ಸಾಧನೆ ಮಾಡಿದ ಆಸ್ಟ್ರೇಲಿಯಾದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.