Headlines

ನಾವು ಕೇಳಿದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ; ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಪ್ರತಿಕ್ರಿಯೆ

ವಾಷಿಂಗ್ಟನ್, ಮಾರ್ಚ್ 16: ಇರಾನ್ ಜೊತೆಗಿನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇರಾನ್ ಮೇಲೆ ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ, ಎಲ್ಲವನ್ನೂ ಧ್ವಂಸಗೊಳಿಸಲಾಗಿದೆ ಎಂದಿದ್ದ ಟ್ರಂಪ್ ಇರಾನ್ ಕದನವಿರಾಮಕ್ಕೆ ರೆಡಿ ಇದ್ದರೂ ನಾವು ಸಿದ್ಧರಿಲ್ಲ ಎಂದಿದ್ದರು. ಆದರೆ, ನಿನ್ನೆ ಬೇರೆ ರೀತಿಯದ್ದೇ ಹೇಳಿಕೆ ನೀಡಿರುವ ಅವರು ನಾವು ಇರಾನ್ ಜೊತೆ ಯುದ್ಧ ನಿಲ್ಲಿಸುವ ಬಗ್ಗೆ ಮಾತುಕತೆ ನಡೆಸಿದ್ದರೂ ಇರಾನ್ ಒಪ್ಪಂದಕ್ಕೆ ಸಿದ್ಧವಿಲ್ಲ ಎಂದು ಹೇಳಿದ್ದಾರೆ. ಇರಾನ್- ಇಸ್ರೇಲ್,…

Read More

ಕರಾವಳಿ ಕಥೆಯ ‘ಮ್ಯಾರೇಜ್ ಪಾರ್ಟಿ’ ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡು

ಕರಾವಳಿ ಭಾಗದ ಕಥೆ ಹೊಂದಿರುವ ಸಿನಿಮಾಗಳಿಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಅಂತಹ ಸಿನಿಮಾಗಳ ಸಾಲಿಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಕೂಡ ಸೇರ್ಪಡೆ ಆಗಲಿದೆ. ಈ ಮೊದಲು ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ‘ಅಧಿಪತ್ರ’ ಸಿನಿಮಾದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದ ಚಯನ್ ಶೆಟ್ಟಿ ಅವರು ಈಗ ‘ಮ್ಯಾರೇಜ್ ಪಾರ್ಟಿ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ ಆಗಿರಲಿದ್ದು, ಹಲವು ಹಾಸ್ಯ ಕಲಾವಿದರು ಅಭಿನಯಿಸುತ್ತಿದ್ದಾರೆ. ವಿನೀತ್ ಕುಮಾರ್, ಪ್ರಕಾಶ್ ತುಮಿನಾಡು (Prakash Thuminad),…

Read More

ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ಚುನಾವಣೆ: ಕರಡು ಮತಪಟ್ಟಿ ಮತ್ತು ಮತಚೋರಿಯ ಸತ್ಯ ಅನಾವರಣ

ಹಲವು ವರ್ಷಗ ದರೋಡೆ ಹಾಗೂ ಅಧಿಕಾರಿಗಳ ಉತ್ಸವದ ಬಳಿಕ ಬಿಬಿಎಂಪಿಯನ್ನು ಜಿಬಿಎ ಎನ್ನುವ ದೊಡ್ಡ ನಾಟಕ ಮಂಡಳಿ ಮಾಡಿ ಚುನಾವಣೆಗೆ ತಯಾರಿ ನಡೆಸಿರುವುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಈಗ ಶನಿವಾರದಂದು ರಾಜ್ಯ ಚುನಾವಣೆ ಆಯೋಗ ಪ್ರಕಟಿಸಿರುವ ಕರಡು ಮತಪಟ್ಟಿಯು ಕಾಂಗ್ರೆಸ್‌ನ ನಾಟಕ ಹಾಗೂ ಸುಳ್ಳುಗಳನ್ನು ಅನಾವರಣ ಮಾಡಿದೆ. ಹಾಗೆಯ ಮತಚೋರಿ ಎನ್ನುವುದು ರಾಹುಲ್‌ ಗಾಂಧಿ ಪಟಾಲಂನ ಸುಳ್ಳುಗಳ ಸರಣಿಯ ಮುಂದುವರಿದ ಭಾಗ ಎನ್ನುವುದು ಖಾತ್ರಿಯಾಗುತ್ತದೆ. ಆದರೀಗ ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಮಾಡಿರುವ ‘ಮತಚೋರಿ’ಯನ್ನು ನಾನು…

Read More

ಇರಾನ್ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನವನ್ನು ಧ್ವಂಸ ಮಾಡಿದ ಇಸ್ರೇಲ್

ಜೆರುಸಲೇಂ, ಮಾರ್ಚ್ 16: ಇಸ್ರೇಲ್ ತನ್ನ ವಾಯುಪಡೆಯು ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇರಾನ್‌ನ (Iran) ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ವಿಮಾನವನ್ನು ರಾತ್ರೋರಾತ್ರಿ ಹೊಡೆದು ನಾಶಪಡಿಸಿರುವುದಾಗಿ ಘೋಷಿಸಿದೆ. ಈ ದಾಳಿಯು ಇರಾನ್‌ನ ಪ್ರಾದೇಶಿಕ ಸಮನ್ವಯಗಳಿಗೆ ದೊಡ್ಡ ಹೊಡೆತ ನೀಡಿದೆ ಎಂದು ಹೇಳಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣದ ಮೂಲಕ ಮಿತ್ರರಾಷ್ಟ್ರಗಳ ಜೊತೆ ಸಂಪರ್ಕ ಸಾಧಿಸಲು, ಮಿಲಿಟರಿ ಸಂಗ್ರಹಣೆಯನ್ನು ಸುಗಮಗೊಳಿಸಲು ಮತ್ತು ಸಂಬಂಧಗಳನ್ನು ನಿರ್ವಹಿಸಲು ಖಮೇನಿ ಮತ್ತು ಇರಾನಿನ ಇತರ ಹಿರಿಯ ಅಧಿಕಾರಿಗಳು…

Read More

ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಬಿಜೆಪಿ ಮಿತ್ರ ಜೆಡಿಎಸ್ ಮುಖಂಡ

ದಾವಣಗೆರೆ, (ಮಾರ್ಚ್ 16): ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಳದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕರಣವಾಗಲಿದೆ. ಇನ್ನು ಎಲೆಕ್ಷನ್ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಇತ್ತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಿದರೆ ಇತ್ತ ಬಿಜೆಪಿ ಬೈ ಎಲೆಕ್ಷನಲ್ಲಿ ಕಮಲ ಅರಳಿಸುವ…

Read More

‘ಬ್ಯಾಟಲ್ ಆಫ್ ಗಲ್ವಾನ್’ ಶೀರ್ಷಿಕೆ ಬದಲು: ಸಲ್ಮಾನ್ ಖಾನ್ ಚಿತ್ರಕ್ಕೆ ಈಗ ‘ಮಾತೃಭೂಮಿ’ ಟೈಟಲ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಸಿನಿಮಾದ ಬಿಡುಗಡೆಯನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಆದರೆ ಈಗ ಯಾವುದೇ ಸೂಚನೆ ನೀಡದೇ ಚಿತ್ರತಂಡದವರು ಶೀರ್ಷಿಕೆ ಬದಲಾವಣೆ ಮಾಡಿದ್ದಾರೆ. ‘ಬ್ಯಾಟಲ್ ಆಫ್ ಗಲ್ವಾನ್’ ಬದಲಿಗೆ ‘ಮಾತೃಭೂಮಿ’ (Maatrubhoomi) ಎಂದು ನಾಮಕರಣ ಮಾಡಲಾಗಿದೆ. ಮಾರ್ಚ್ 16ರಂದು ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿರುವ ಸಲ್ಮಾನ್ ಖಾನ್ (Salman Khan), ‘ಯುದ್ಧಕ್ಕೆ ಶಾಂತಿ ಸಿಗಲಿ’ ಎಂಬ ಕ್ಯಾಪ್ಶನ್ ನೀಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ…

Read More

ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​: ರೆಡಿಮೇಡ್ ಉಡುಪುಗಳ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 16: ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ ಬೆಂಗಳೂರಿನ ಚಿಕ್ಕಪೇಟೆಯ ಜವಳಿ ಉದ್ಯಮದಕ್ಕೂ ತಟ್ಟಿದೆ. ಕಡಿಮೆ ಬೆಲೆಗೆ ಮತ್ತು ವಿವಿಧ ಬಗೆಯ ಬಟ್ಟೆಗಳಿಗೆ ಹೆಸರುವಾಸಿಯಾದ ಚಿಕ್ಕಪೇಟೆಯ ರೆಡಿಮೇಡ್ ಉಡುಪುಗಳ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದ್ದು, ಟ್ರೇಡ್ ಆಕ್ಟಿವಿಸ್ಟ್ ಸಜ್ಜನ್‌ರಾಜ್ ಮೆಹ್ತಾ ಅವರ ಪ್ರಕಾರ ಯುದ್ಧ ಮುಂದುವರಿದರೆ ಏಪ್ರಿಲ್‌ನಿಂದ ಬಟ್ಟೆಗಳ ಬೆಲೆ ಶೇ. 10-15 ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ಪಾದನಾ ಹಂತದಲ್ಲಿ ಈಗಾಗಲೇ ಶೆ. 30-40ರಷ್ಟು ಬೆಲೆ ಏರಿಕೆಯಾಗಿದ್ದು, ಕಚ್ಚಾ ವಸ್ತುಗಳು, ರಾಸಾಯನಿಕಗಳು ಮತ್ತು…

Read More

‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದ ವಿವರ ಎಲ್ಲರಿಗೂ ತಿಳಿದಿದೆ. ಚಾರ್ಜ್​​ಶೀಟ್​​​ನಲ್ಲಿ ಎಲ್ಲ ವಿಷಯವನ್ನೂ ವಿವರವಾಗಿ ಬರೆಯಲಾಗಿದೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಸೆಟ್ಟೇರಿ, ರಿಲೀಸ್​​​ಗೆ ರೆಡಿ ಆಗಿದೆ. ಈ ಸಿನಿಮಾ ಟೀಸರ್ ನೋಡಿದರೆ ಇದು ದರ್ಶನ್ ಪ್ರಕರಣವನ್ನೇ ನೆನಪಿಸಿದೆ. ಇದು ಚರ್ಚೆಗೆ ಕಾರಣ ಆಗಿತ್ತು. ಹೀಗಿರುವಾಗಲೇ ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದು, ಸಿನಿಮಾಗೆ…

Read More

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ರಾಜ್ಯದಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಬೆಂಗಳೂರು, ಮಾರ್ಚ್​​ 16: ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ ಹಿನ್ನೆಲೆ ಭಾರತದಿಂದ ದುಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದುಗೊಂಡಿದೆ. ಏರ್‌ ಇಂಡಿಯಾ, ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಭವಿಷ್ಯದ ಬೇರೆ ದಿನಾಂಕಕ್ಕೆ ತಮ್ಮ ಪ್ರಯಾಣವನ್ನು ಮರುನಿಗದಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಯಾಣ ಬೇಡವೆನ್ನುವವರು ಟಿಕೆಟ್ ರದ್ದುಗೊಳಿಸಿ ಪೂರ್ಣ ಹಣವನ್ನು ಮರಳಿ ಪಡೆಯಬಹುದಾಗಿದೆ. ಇನ್ನು ವಿಮಾನ ರದ್ದಿನಿಂದ‌ ದುಬೈನಲ್ಲಿ ಸಿಲುಕಿರುವ ಪ್ರಯಾಣಿಕರು ಪರದಾಟ ನಡೆಸಿರುವ ಪ್ರಸಂಗವೂ ವರದಿಯಾಗಿದೆ….

Read More

ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ಭಯಾನಕ ವಿಡಿಯೋ ವೈರಲ್

ಆನೇಕಲ್, ಮಾರ್ಚ್ 16: ಬೆಂಗಳೂರು–ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡೆಡ್ಲಿ ರೋಡ್ ರೇಜ್ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ತಮಿಳುನಾಡು ಗಡಿಯ ಸಮೀಪದ ಜೂಜುವಾಡಿ ಚೆಕ್​ಪೋಸ್ಟ್ ಬಳಿ ಪೊಲೀಸರು ತಡೆದಾಗ ಕಾರು ನಿಲ್ಲಿಸದ ಚಾಲಕ ಎದುರಿದ್ದ ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹಾರಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾನೆ. ತಮಿಳುನಾಡಿನಲ್ಲಿ ಗುಟ್ಕಾ ನಿಷೇಧ ಇರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಅಕ್ರಮವಾಗಿ ಗುಟ್ಕಾ ಮತ್ತು ಮದ್ಯವನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನಕ್ಕೆ ಪೊಲೀಸರು ಕಾರನ್ನು ತಡೆದು ಪರಿಶೀಲಿಸಲು ಮುಂದಾದರು. ಈ ವೇಳೆ ಕಾರು ಚಾಲಕ…

Read More