Headlines

ಕಾಂಗ್ರೆಸ್ ಮಾತ್ರವಲ್ಲ ದಾವಣಗೆರೆ ಬಿಜೆಪಿಯಲ್ಲೂ ಮತ್ತೆ ಭಿನ್ನಮತ ಸ್ಫೋಟ, ಸಿಡಿದೆದ್ದ ರೇಣುಕಾಚಾರ್ಯ

ದಾವಣಗೆರೆ, (ಏಪ್ರಿಲ್ 12): ದಾವಣಗೆರೆ (Davanagere) ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ (BJP) ಸಹ ಭಾರೀ ಗೊಂದಲಗಳು ಏರ್ಪಟ್ಟಿದ್ದವು. ಒಂದೆಡೆ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಇನ್ನೊಂದೆಡೆ ಎಂಪಿ ರೇಣುಕಾಚಾರ್ಯ ಬಣದ ನಡುವೆ ಟಿಕೆಟ್ ಫೈಟ್ ಜೋರಾಗಿತ್ತು. ಅಂತಿಮವಾಗಿ ಹೈಕಮಾಂಡ್ ಎರಡು ಬಣಗಳ ಕಿತ್ತಾಟ ನಡುವೆ ಮೂರನೇ ವ್ಯಕ್ತಿಗೆ ಮಣೆ ಹಾಕಿತ್ತು. ಇದೀಗ ಬೈ ಎಲೆಕ್ಷನ್ ಎಲ್ಲಾ ಮುಗಿದು ಫಲಿತಾಂಶಕ್ಕಾಗಿ ಕಾಯುವಂತಾಗಿದೆ. ಇದರ ನಡುವೆ ಇದೀಗ…

Read More

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ…

Read More

ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸದಿಂದ ದೇಹದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಇಂದಿನ ವೇಗದ ಜೀವನಶೈಲಿಯಲ್ಲಿ ಜನರು ಎಲ್ಲ ಕೆಲಸಗಳನ್ನು ಬೇಗ ಮುಗಿಸಲು ಪ್ರಯತ್ನಿಸುತ್ತಾರೆ. ಇದರಲ್ಲಿ ಊಟ ಮಾಡುವುದು ಕೂಡ ಹೊರತಾಗಿಲ್ಲ. ಕೆಲಸದ ಒತ್ತಡದಲ್ಲಿ ಊಟ, ತಿಂಡಿಯನ್ನು ಸರಿಯಾಗಿ ಮಾಡಲು ಕೂಡ ಸರಿಯಾಗಿ ಸಮಯವಿರುವುದಿಲ್ಲ. ಈ ರೀತಿ ಬದಲಾದ ಜೀವನಶೈಲಿಯಿಂದ ಹಲವರು ತ್ವರಿತವಾಗಿ ಅಂದರೆ ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಅದರಲ್ಲಿಯೂ ಬೊಜ್ಜಿನ ಸಮಸ್ಯೆಯನ್ನು (Obesity) ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹೌದು ವೇಗವಾಗಿ ಊಟ…

Read More

ಮೈಸೂರು ಬಿಜೆಪಿಯಲ್ಲಿ ಭಿನ್ನಮತದ ಕಿಡಿಹಚ್ಚಿದ ಪ್ರತಾಪ್ ಸಿಂಹ ಆ ಒಂದು ಹೇಳಿಕೆ! – Kannada News | Mysuru BJP Infighting Erupts as Pratap Simha and L Nagendra Clash Over Chamaraja Ticket

ಎಲ್.ನಾಗೇಂದ್ರ v/s ಪ್ರತಾಪಸಿಂಹ ಜಟಾಪಟಿ ಬೆಂಗಳೂರು, ಜನವರಿ 8: ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಿರುವ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಬಹಿರಂಗ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜಪಿಯ (BJP) ಮೈಸೂರು ಘಟಕದಲ್ಲಿ ಅಸಮಾಧಾನ ಸ್ಫೋಟಗೊಳ್ಳುವ ಸುಳಿವು ಗೋಚರಿಸಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ, ಹಾಲಿ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ನಡುವೆ ಜಟಾಪಟಿ ಏರ್ಪಡುವ ಎಲ್ಲ ಲಕ್ಷಣ ಕಾಣಿಸಿದೆ. ಚಾಮರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೇ ಈ ಜಟಾಪಟಿಗೆ ಮೂಲ…

Read More

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರು, ಏಪ್ರಿಲ್ 11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಎಲ್‌ಪಿಜಿ (LPG) ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವಂತಾಗಿದೆ. ಇರಾನ್, ಇಸ್ರೇಲ್, ಅಮೆರಿಕ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಗ್ಯಾಸ್ ಅಭಾವವು ಈಗ ವಿಮಾ ಏಜೆಂಟ್‌ಗಳ (Insurance Agents) ನಿದ್ದೆಗೆಡಿಸಿದೆ. ಗ್ಯಾಸ್ ಇಲ್ಲದೆ ಬಾಡಿಗೆ ಸಿಗುತ್ತಿಲ್ಲ, ಬಾಡಿಗೆ ಇಲ್ಲದೆ ಇನ್ಶೂರೆನ್ಸ್ ಕಟ್ಟಲು ಹಣವಿಲ್ಲ ಎಂಬ ಸ್ಥಿತಿಗೆ ಚಾಲಕರು ಬಂದು ತಲುಪಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋ ಬೆಂಗಳೂರಿನಲ್ಲಿ! ದೇಶದಲ್ಲೇ ಅತಿ ಹೆಚ್ಚು ಎಲ್‌ಪಿಜಿ ಆಟೋಗಳನ್ನು ಬಳಸುವ ನಗರ…

Read More

ಜಾತ್ರೆ, ಪೆಟ್ರೋಲ್ ಬಂಕ್ ಸೇರಿ ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್ – Kannada News | Vijayanagara Police Bust Fake Currency Gang Operating at Fairs and Petrol Bunks

ವಿಜಯನಗರ, ಡಿಸೆಂಬರ್ 26: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅರಸೀಕೆರೆಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಜಾತ್ರೆಗಳು, ಪೆಟ್ರೋಲ್ ಬಂಕ್​ಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋಟಾ ನೋಟು ಚಲಾವಣೆ ಮಾಡುತ್ತಿದ್ದ ಗ್ಯಾಂಗ್‌ ಅನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಐವರು ಆರೋಪಿಗಳನ್ನು ಹಾಗೂ ಒಬ್ಬ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 500 ರೂಪಾಯಿ ಮುಖಬೆಲೆಯ ಒಟ್ಟು 40 ನಕಲಿ ನೋಟುಗಳು ಹಾಗೂ ಒಂದು ಆಟೋವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆಯ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ನೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ…

Read More

ಕೊನೆಗೂ ಕೊಹ್ಲಿಯ ದಾಖಲೆ ಮುರಿದ ಸೂರ್ಯಕುಮಾರ್ ಯಾದವ್ – Kannada News | Suryakumar Yadav Breaks Virat Kohli’s Huge Record

ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (virat kohli) ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್​ಎ ತಂಡದ ನಾಯಕ ಮೊನಾಂಕ್ ಪಟೇಲ್ ಭಾರತ ತಂಡವನ್ನು ಬ್ಯಾಟಿಂಗ್ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್…

Read More

ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ ಕನ್ನಡದಲ್ಲಿ ನಟಿಸಿದ ಸುಂದರಿ

2009ರಲ್ಲಿ ಬಂದ ಕನ್ನಡದ ‘ಜೋಶ್’ ಸಿನಿಮಾದಲ್ಲಿ ಮಿಂಚಿದ್ದ ಪೂರ್ಣ ಅಲಿಯಾಸ್ ಶಮ್ನಾ ಖಾಸಿಮ್ ಇತ್ತೀಚೆಗೆ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿಲ್ಲ. ಕನ್ನಡದಲ್ಲೂ ಅವರು ನಟಿಸದೆ ಬಹಳ ಸಮಯ ಕಳೆದಿದೆ. ಈಗ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. ಚಲನಚಿತ್ರಗಳಲ್ಲಿ ನಟಿಸುವುದರ ಜೊತೆಗೆ, ಪೂರ್ಣಾ ಹಲವಾರು ಟಿವಿ ಕಾರ್ಯಕ್ರಮಗಳು ಮತ್ತು ರಿಯಾಲಿಟಿ ಶೋಗಳನ್ನು ಸಹ ಸದ್ದು ಮಾಡುತ್ತಿದ್ದಾರೆ. ಈ ಸುಂದರ ತಾರೆ ಇತ್ತೀಚೆಗೆ ಬಾಲಯ್ಯ ಅವರ ‘ಅಖಂಡ 2: ತಾಂಡವಂ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ನಟಿ…

Read More

ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್, ದೇವರ ಫೋಟೊಗಳ ಫ್ರೇಮ್​ನಲ್ಲಿಟ್ಟು ಮಾರಾಟ: ಬಯಲಾಯ್ತು ಜೋಡಿಯ ಮೋಜು-ಮಸ್ತಿ ರಹಸ್ಯ – Kannada News | Luxury Apartment Turned Drug Den in Bangalore: Couple Hid Narcotics in Photo Frames, CCB Busts Interstate Racket

ಬೆಂಗಳೂರು, ಮಾರ್ಚ್ 5: ಅಂತಾರಾಜ್ಯ ಡ್ರಗ್ ಪೆಡ್ಲರ್ ಜೋಡಿ ಅಶ್ವಿನ್ ಮತ್ತು ಮೊಬೀನಾರನ್ನು ಸಿಸಿಬಿ ನಾರ್ಕೋಟಿಕ್ಸ್ ತಂಡವು ಬಂಧಿಸಿದ್ದು, ಇದರ ಬೆನ್ನಲ್ಲೇ ಒಂದೊಂದೇ ರೋಚಕ ರಹಸ್ಯಗಳು ಹೊರಬರತೊಡಗಿವೆ. ಈ ಜೋಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಪದೇ ಪದೇ ವಿಮಾನದಲ್ಲಿ ಪ್ರಯಾಣಿಸುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುತ್ತಿದ್ದರು. ಇದೀಗ ಇವರ ಶೋಕಿ ಜೀವನವನ್ನು ಸಿಸಿಬಿ ಬಯಲು ಮಾಡಿದೆ. ಕೇರಳದ ಅಶ್ವಿನ್ ಮತ್ತು ಮೊಬೀನಾ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದಿದ್ದರು. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇವರು, ಕಳೆದ ವರ್ಷ…

Read More

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More