Headlines

ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್ – Kannada News | Ninasam Satish Introduce Her Daughter To fans video goes viral

ನೀನಾಸಂ ಸತೀಶ್ ಅವರ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಕಾರ್ಯಕ್ರಮದಲ್ಲಿ ರವಿಚಂದ್ರನ್, ದುನಿಯಾ ವಿಜಯ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ವೇದಿಕೆ ಮೇಲೆ ಮತ್ತೋರ್ವ ವಿಶೇಷ ವ್ಯಕ್ತಿ ಗಮನ ಸೆಳೆಯುತ್ತಿದ್ದರು. ಅವರೇ ನೀನಾಸಂ ಸತೀಶ್ ಅವರ ಮಗಳು. ಇಷ್ಟು ದಿನ ಸತೀಶ್ ಅವರು ವೇದಿಕೆ ಮೇಲೆ ಮಗಳನ್ನು ಪರಿಚಯ ಮಾಡಿಸಿಲ್ಲ. ಈಗ ಅವರು ಮಗಳನ್ನು ವೇದಿಕೆ ಮೇಲೆ ಕರೆದರು. ಆ ಸಂದರ್ಭದಲ್ಲಿ ಮಗಳು ಭಾವುಕಳಾದಳು. ಅಪ್ಪನಿಗೆ ಆಲ್…

Read More

ನಂಬಿಕೆ ದ್ರೋಹ ಮಾಡಿದರು: ಬಾಲಿವುಡ್ ಸಿನಿಮಾ ವಿರುದ್ಧ ಮೃಣಾಲ್ ಠಾಕೂರ್ ಬೇಸರ – Kannada News | Mrunal Thakur express unhappy over her Hindi movie Son Of Sardar 2

ಪ್ಯಾನ್ ಇಂಡಿಯಾ ನಟಿ ಮೃಣಾಲ್ ಠಾಕೂರ್ (Mrunal Thakur), ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿಯೂ ನಟಿಸುತ್ತಾ ಬರುತ್ತಿದ್ದಾರೆ. ಅದರಲ್ಲೂ ಅವರಿಗೆ ಹೆಚ್ಚು ಹಿಟ್ ನೀಡಿರುವುದು ಮತ್ತು ಒಳ್ಳೆಯ, ನೆನಪುಳಿಯುವ ಪಾತ್ರಗಳನ್ನು ನೀಡಿರುವುದು ತೆಲುಗು ಚಿತ್ರರಂಗ. ಮೂಲತಃ ಮರಾಠಿ ನಟಿಯಾದರೂ ಹಾಗೂ ನಟನೆಗೆ ಪ್ರವೇಶವನ್ನು ಹಿಂದಿ ಚಿತ್ರರಂಗದಿಂದ ಮಾಡಿದ್ದರೂ ಸಹ ಬಾಲಿವುಡ್ ಮೇಲೆ ಅವರಿಗೆ ಬೇಸರ ಇದೆ. ಇದೀಗ ಅವರು ಬಾಲಿವುಡ್​ನ ಸಿನಿಮಾ ತಂಡವೊಂದು ತಮಗೆ ದೊಡ್ಡ ನಂಬಿಕೆ ದ್ರೋಹ ಮಾಡಿದೆ ಎಂದು ನಟಿ ಮೃಣಾಲ್ ಠಾಕೂರ್ ಬೇಸರ…

Read More

Namma Metro: ನಗರದ 9 ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ! – Kannada News | BMRCL Offers Free Cycle Parking at 9 Bangalore Metro Stations for Last Mile Connectivity

ನಗರದ 9 ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ! ಬೆಂಗಳೂರು, ಜನವರಿ 27: ಮೆಟ್ರೋ ನಿಲ್ದಾಣಗಳಿಗೆ ಲಾಸ್ಟ್–ಮೈಲ್ ಸಂಪರ್ಕವಾಗಿ ಸೈಕ್ಲಿಂಗ್‌ನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ನಗರದಲ್ಲಿನ ಒಂಬತ್ತು ಮೆಟ್ರೋ ನಿಲ್ದಾಣಗಳಲ್ಲಿ ಉಚಿತ ಸೈಕಲ್ ಪಾರ್ಕಿಂಗ್ ಸೌಲಭ್ಯ ಒದಗಿಸಲು ನಿರ್ಧರಿಸಿದೆ. ನಿಗಮದ ಈ ಯೋಜನೆಗೆ ಸೈಕಲಿಸ್ಟ್​ಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಾರ್ಕಿಂಗ್ ಶುಲ್ಕಕ್ಕಿಂತ ಮೂಲಸೌಕರ್ಯದ್ದೇ ಬಾಧೆ ಈ ನಿರ್ಧಾರವನ್ನು ಮೆಟ್ರೋ ಪಾರ್ಕಿಂಗ್ ವ್ಯವಸ್ಥೆ ನಿರ್ವಹಣೆಗೆ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ಇತ್ತೀಚೆಗೆ ಆಹ್ವಾನಿಸಿರುವ…

Read More

‘ಚಿಕ್ನಿ ಚಮೇಲಿ’ ಹಾಡಿನ ವಿವಾದಕ್ಕೆ ಸ್ಪಷ್ಟನೆ ನೀಡಿದ ಗಾಯಕಿ ಶ್ರೇಯಾ ಘೋಷಾಲ್ – Kannada News | Shreya Ghoshal responds to trolling over chikni chameli and objectifying lyrics

ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ‘ಚಿಕ್ನಿ ಚಮೇಲಿ’ (Chikni Chameli) ರೀತಿಯ ಹಾಡುಗಳ ಬಗ್ಗೆ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ನಾನು ಇನ್ಮುಂದೆ ಇಂತಹ ಹಾಡುಗಳನ್ನು ಹಾಡುವುದಿಲ್ಲ’ ಎಂದು ಅವರು ಹೇಳಿದ್ದನ್ನು ಕೆಲವರು ಟ್ರೋಲ್ ಮಾಡಿದ್ದರು. ಈಗ ಈ ಎಲ್ಲಾ ಟ್ರೋಲ್‌ಗಳಿಗೆ ಶ್ರೇಯಾ ಖಡಕ್ ಆಗಿಯೇ ಉತ್ತರ ನೀಡಿದ್ದು, ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ರಾಜ್ ಶಾಮನಿ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಶ್ರೇಯಾ ಘೋಷಾಲ್ (Shreya Ghoshal), ಚಿತ್ರರಂಗದಲ್ಲಿ ಮಹಿಳೆಯರನ್ನು ಅತಿ…

Read More

ಆನ್ಲೈನ್​ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! – Kannada News | Bangalore Rental Home Cyber Fraud: AI Photo Scams Target Renters Online

ಆನ್ಲೈನ್ ನಲ್ಲಿ ಬಾಡಿಗೆ ಮನೆ ಹುಡುಕುವವರೇ ಎಚ್ಚರ! ನೀವು ಹೀಗೂ ಮೋಸ ಹೋಗಬಹುದು! ಬೆಂಗಳೂರು, ಫೆಬ್ರವರಿ 18: ಆನ್‌ಲೈನ್‌ನಲ್ಲಿ ಬಾಡಿಗೆ ಮನೆ ಹುಡುಕುವವರನ್ನೇ ಟಾರ್ಗೆಟ್ ಮಾಡಿಕೊಂಡು ಸೈಬರ್ ವಂಚಕರು ಹೊಸ ತಂತ್ರದ ಮೂಲಕ ಹಣ ದೋಚುತ್ತಿರುವ ಪ್ರಕರಣಗಳು ಬೆಂಗಳೂರಿನಲ್ಲಿ (Bengaluru) ಬೆಳಕಿಗೆ ಬಂದಿವೆ. ಐಷಾರಾಮಿ ಫ್ಲಾಟ್‌ಗಳ ಎಐ ಫೋಟೋಗಳನ್ನು ಬಳಸಿ ಜಾಹೀರಾತು ಹಾಕಿ, ನಂತರ ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿರುವುದು ಪತ್ತೆಯಾಗಿದ್ದು, ವಂಚಕರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಡ್ವಾನ್ಸ್ ಹೆಸರಿನಲ್ಲಿ ಸಾವಿರಾರು ರೂ. ಜೇಬಿಗೆ!…

Read More

ಬೆಂಗಳೂರಿನಲ್ಲಿ ವಿನಾ ಕಾರಣ ಬೈಕ್ ತಡೆದು ಹಣ ವಸೂಲಿ: ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು, (ಮಾರ್ಚ್ 30): ಸ್ಮಾರ್ಟ್‌ ಟ್ರಾಫಿಕ್‌ ನಿರ್ವಹಣಾ ವ್ಯವಸ್ಥೆ ಜಾರಿಗೆ ಕಾನೂನು ಸುವ್ಯವಸ್ಥೆ ಹಾಗೂ ಮೇಲ್ವಿಚಾರಣೆ ದೃಷ್ಟಿಯಿಂದ ಕರ್ತವ್ಯನಿರತ ಪೊಲೀಸ್‌ ಸಿಬ್ಬಂದಿ ಬಾಡಿ ಕ್ಯಾಮೆರಾ (body worn camera) ಬಳಸುವುದು ಕಡ್ಡಾಯವಾಗಿದೆ. ಆದ್ರೆ, ಬೆಂಗಳೂರಿನ ಹೈಗ್ರೌಂಡ್ಸ್ ಸಂಚಾರಿ ಪೊಲಿಸ್ ಠಾಣೆಯ (Bengaluru High Grounds Traffic Police Station) ಮೂವರು ಸಿಬ್ಬಂದಿ ಬಾಡಿ ಕ್ಯಾಮೆರಾ ಆಫ್ ಮಾಡಿಕೊಂಡು ವಿನಾ ಕಾರಣ ಬೈಕ್ ನಿಲ್ಲಿಸಿ ಹಣ ವಸೂಲಿ ಮಾಡಿದ ಆರೋಪ ಕೇಳಿಬಂದಿದ್ದು, ಸಂಬಂಧ ಇದೀಗ ಮೂವರು ಪೊಲೀಸ್ ಸಿಬ್ಬಂದಿಯನ್ನು…

Read More

Love and Relationship: ಪ್ರೀತಿಯಲ್ಲಿ ಪದೇ ಪದೇ ನೀವು ಮೋಸ ಹೋಗುತ್ತಿದ್ದೀರಾ? ಜ್ಯೋತಿಷ್ಯ ಕಾರಣ ತಿಳಿಯಿರಿ – Kannada News | Astrology: 5th House and Love Relationships Remedies for Problems

ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಜಾತಕದ ಐದನೇ ಮನೆಯು ನಮ್ಮ ಹೃದಯದ ಭಾವನೆಗಳು, ಸೃಜನಶೀಲತೆ ಮತ್ತು ಪ್ರೇಮ ಸಂಬಂಧಗಳನ್ನು ನಿಯಂತ್ರಿಸುತ್ತದೆ. ಈ ಮನೆಯ ಅಧಿಪತಿ, ಐದನೇ ಮನೆ ಬಲಶಾಲಿಯಾಗಿದ್ದರೆ ಮತ್ತು ಶುಭ ಗ್ರಹಗಳಿಂದ ನೋಡಲ್ಪಟ್ಟಿದ್ದರೆ, ಆ ವ್ಯಕ್ತಿಯ ಪ್ರೇಮ ಜೀವನವು ಸಂತೋಷವಾಗಿರುತ್ತದೆ. ಆದಾಗ್ಯೂ, ಈ ಮನೆ ಕ್ರೂರ ಅಥವಾ ದುಷ್ಟ ಗ್ರಹಗಳಿಂದ ಪ್ರಭಾವಿತವಾದಾಗ, ಸಂಬಂಧಗಳು ಮುರಿಯಲು ಪ್ರಾರಂಭಿಸುತ್ತವೆ ಎಂದು ಹೇಳಲಾಗಿದೆ. ನಿಮ್ಮ ಜಾತಕದ ಐದನೇ ಮನೆಯಲ್ಲಿ ಶನಿ, ಮಂಗಳ ಅಥವಾ ಸೂರ್ಯ ದುರ್ಬಲ ಸ್ಥಾನದಲ್ಲಿದ್ದರೆ, ಅದು ಪ್ರೇಮ ಸಂಬಂಧಗಳಿಗೆ…

Read More

Video: ಅಪ್ಪನಿಗೆ ತನ್ನ ತಾಯಿ ಮೆಲ್ಲನೆ ಹೊಡೆಯುತ್ತಿದ್ದಂತೆ ಜೋರಾಗಿ ಗದರಿದ ಕಂದಮ್ಮ

ಪ್ರತಿಯೊಬ್ಬ ಅಪ್ಪನಿಗೆ (father) ಮುದ್ದಿನ ಮಗಳು ಪುಟ್ಟ ರಾಜಕುಮಾರಿಯೇ. ಹೆಣ್ಣು ಮಕ್ಕಳ ಪಾಲಿಗೆ ತಂದೆಯೇ ಎಲ್ಲಾ ಆಗಿರುತ್ತಾರೆ. ಅಪ್ಪನಿಗೂ ಮಗಳೆಂದರೆ ಜೀವಕ್ಕಿಂತ ಹೆಚ್ಚು. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ತಂದೆಯ ಮಡಿಲಿನಲ್ಲಿ ಮಲಗಿರುವ ಕಂದಮ್ಮನು ತನ್ನ ಅಮ್ಮನಿಗೆ ಗದರಿದೆ. ತನ್ನ ಅಮ್ಮನು ಅಪ್ಪನಿಗೆ ಮೆಲ್ಲನೆ ಒಂದೇಟು ಹೊಡೆಯುತ್ತಿದ್ದಂತೆ ಈ ಪುಟಾಣಿ ತನ್ನದೇ ಭಾಷೆಯಲ್ಲಿ ಬೈಯಲು ಶುರು ಮಾಡಿದೆ. ಈ ಪುಟಾಣಿಯ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. baby-doll-udhra ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ – Kannada News | Bengaluru temperature: clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು ಚಳಿಯ ಜೊತೆಗೆ ಶುಷ್ಕ ಹವಾಮಾನ ಬೆಂಗಳೂರು, ಫೆಬ್ರುವರಿ 04: ರಾಜ್ಯದಲ್ಲಿ ಹಲವು ದಿನಗಳಿಂಧ ಶುಷ್ಕ ವಾತಾವರಣವೇ (Weather Forecast) ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ…

Read More

Gold Rates: ಇಳಿಕೆಯ ಹಾದಿ ಬಿಟ್ಟ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು, ಮಾರ್ಚ್ 25: ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಸುಮಾರು 600 ರೂಗಳಷ್ಟು ಏರಿಕೆ ಪಡೆದಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 13,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಸಮೀಪಕ್ಕೆ ದೌಡಾಯಿಸಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಏರಿದರೆ, ಕೆಲವೆಡೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆ ಆಗಿದೆ. ಒಂದು ಗ್ರಾಮ್​ಗೆ 15-20 ರೂಗಳಷ್ಟು ಬೆಲೆ ಜಿಗಿದಿದೆ. ಭಾರತದಲ್ಲಿ…

Read More