ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ತಮ್ಮ ಬಗ್ಗೆ ಜನರಿಂದ ತಿಳಿಯುವ ಕುತೂಹಲ

ಮೇಷ ರಾಶಿ: ಜೀವನದಲ್ಲಿ ಬದಲಾವಣೆಯೆ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ನೆಮ್ಮದಿ ನಿಮ್ಮೆದುರು ನಿಲ್ಲುವುದು. ಇಂದು ಸಂಗಾತಿಗೆ ನಿಮ್ಮ ಮೇಲೆ ಅಭಿಮಾನ ಬರಬಹುದು. ಅವಿವಾಹಿತರು ವಿವಾಹದ ಬಗ್ಗೆ ಬಂಧುಗಳ ಜೊತೆ ಚರ್ಚಿಸುವಿರಿ. ಮನಸ್ಸಿನ ನಿಯಂತ್ರಣವು ಲಯವನ್ನು ತಪ್ಪಬಹುದು. ನೀವು ಇಂದು ವೃತ್ತಿಪರ ರಂಗದಲ್ಲಿ ನಿಮಗೆ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸುವಿರಿ. ಭೂಮಿ ಮತ್ತು ಆಸ್ತಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ವೃಷಭ ರಾಶಿ: ಸಾಲದ ವಿಚಾರ…

Read More

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್…

Read More

ಋತುಚಕ್ರ ರಜೆಗೆ ಪುರುಷ ನೌಕರರ ವಿರೋಧ, ಮರು ಪರಿಶೀಲನೆಗಾಗಿ ಸರ್ಕಾರಕ್ಕೆ ಪತ್ರ: ಇದಕ್ಕಿದೆ ಹಲವು ಕಾರಣ! – Kannada News | Menstrual Leave Sparks Debate in Karnataka: Male Government Employees Seek Policy Review

ಋತುಚಕ್ರ ರಜೆಗೆ ಪುರುಷ ನೌಕರರ ವಿರೋಧ ಬೆಂಗಳೂರು, ಜನವರಿ 23: ಮಹಿಳಾ ಸರ್ಕಾರಿ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಗೆ (Menstrual Leave) ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಈ ಕುರಿತು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಶಿಷ್ಟಾಚಾರ ವಿಭಾಗದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ ಅವರ…

Read More

ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್​ ವಿಶ್ವ ದಾಖಲೆ ಮುರಿದ ಪರ್ತ್​ ಸ್ಕಾಚರ್ಸ್​

ಟಿ20 ಲೀಗ್ ಕ್ರಿಕೆಟ್​ನಲ್ಲಿ ಪರ್ತ್​ ಸ್ಕಾಚರ್ಸ್ (Perth Scorchers)  ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಮುಂಬೈ ಇಂಡಿಯನ್ಸ್ (MI) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳ ಭರ್ಜರಿ ದಾಖಲೆಗಳನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.  ಬಿಗ್ ಬ್ಯಾಷ್ ಲೀಗ್​ನ 15ನೇ ಸೀಸನ್​ನಲ್ಲಿ ಪರ್ತ್​ ಸ್ಕಾಚರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ನೀಡಿದ 133 ರನ್​ಗಳ ಗುರಿಯನ್ನು ಪರ್ತ್​ ಸ್ಕಾಚರ್ಸ್ ತಂಡವು ಕೇವಲ 17.3 ಓವರ್​ಗಳಲ್ಲಿ ಚೇಸ್…

Read More

ಕೆಲ ದಿನಗಳಿಂದ ಚಿನ್ನ, ಬೆಳ್ಳಿ ಬೆಲೆಗಳ ಭರ್ಜರಿ ಕುಸಿತ; ಇಗೋ ಇಲ್ಲಿವೆ ಕಾರಣಗಳು – Kannada News | How CME Group’s hike in margin requirements led to crash in gold and silver prices

ಕಳೆದ ಒಂದು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver prices) ಸಿಕ್ಕಾಪಟ್ಟೆ ಏರಿದಷ್ಟು ವೇಗದಲ್ಲಿ ಕೆಲ ದಿನಗಳಿಂದ ಕುಸಿತ ಕಾಣುತ್ತಿವೆ. ಈ ಅಮೂಲ್ಯ ಲೋಹಗಳ ಬೆಲೆಯನ್ನು ಕಟ್ಟಿಹಾಕುವುದು ಸಾಧ್ಯವೇ ಇಲ್ಲ ಎಂದುಕೊಳ್ಳುತ್ತಿರುವ ಹೊತ್ತಲ್ಲೇ ಭರ್ಜರಿ ಕುಸಿತ ಆಗಿದೆ. ಹೂಡಿಕೆದಾರರು ಲಾಭಕ್ಕೆ ಮಾರಿಕೊಳ್ಳುತ್ತಿರಬಹುದು ಎಂದು ಮೇಲ್ನೋಟಕ್ಕೆ ತೋರುತ್ತದೆ. ಆದರೆ, ಕಾಮೆಕ್ಸ್ ಮಾರುಕಟ್ಟೆಯಲ್ಲಿ ಪ್ಯಾನಿಕ್ ಸೆಲ್ಲಾಫ್ (Panic Sell-off) ಆಗಿರುವುದು ಕಂಡು ಬಂದಿದೆ. ಪ್ಯಾನಿಕ್ ಸೆಲ್ಲಾಫ್ ಎಂದರೆ ಹೂಡಿಕೆದಾರರು ಯಾವುದೋ ಆತಂಕದಿಂದ ತಮ್ಮ ಹೂಡಿಕೆಯನ್ನು ಹಿಂಪಡೆಯುತ್ತಿರುವುದಾಗಿದೆ….

Read More

6 ಅಡಿ ಉದ್ದದ ಹಾವನ್ನು ಹಿಡಿದು ಆಟವಾಡುತ್ತಿದ್ದ ವೃದ್ಧನ ಕತೆ ಏನಾಯ್ತು? – Kannada News | Aged man dies after snake bitten 3 times while showing off with a 6 foot black cobra

ನವದೆಹಲಿ, ಜನವರಿ 16: ವೃದ್ಧನೊಬ್ಬ 6 ಅಡಿ ಉದ್ದದ ವಿಷಪೂರಿತ ಹಾವನ್ನು ಕೈಯಲ್ಲಿ ಹಿಡಿದು ಜನರೆದುರು ಹುಡುಗಾಟವಾಡುತ್ತಿದ್ದರು. ಆಗ ಆ ಹಾವು (Snake) 3 ಬಾರಿ ಆ ವ್ಯಕ್ತಿಗೆ ಕಚ್ಚಿದೆ. ಆದರೂ ಆ ವೃದ್ಧ ಹಾವನ್ನು ಕೆಳಗೆ ಬಿಡಲಿಲ್ಲ. ಅದನ್ನು ತಮ್ಮ ಕುತ್ತಿಗೆಯ ಸುತ್ತ ಹಿಡಿದುಕೊಂಡು ಜನರಿಂದ ಫೋಟೋ ತೆಗೆಸಿಕೊಳ್ಳುತ್ತಲೇ ಇದ್ದರು. ಕೊನೆಗೆ ಆ ಹಾವಿನ ವಿಷ ಮೈ ಪೂರ್ತಿ ಆವರಿಸಿಕೊಳ್ಳುತ್ತಿದ್ದಂತೆ ನಿತ್ರಾಣರಾದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಸಾವನ್ನಪ್ಪಿದರು. ಹಾವಿನೊಂದಿಗೆ ಆ ವೃದ್ಧ ಇರುವ…

Read More

Horoscope Today 06 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for February​ 6th 2025: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, 2026, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ, ಹಸ್ತ ನಕ್ಷತ್ರ, ಧೃತಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ. ಇದು ಮಹಾಲಕ್ಷ್ಮಿಯ ಆರಾಧನೆಗೆ ಪ್ರಶಸ್ತ್ಯವಾದ ಶುಭ ದಿನವಾಗಿದ್ದು, ಸಂಕಲ್ಪಗಳನ್ನು ಈಡೇರಿಸಿಕೊಳ್ಳಲು, ಲಲಿತಾ ಸಹಸ್ರನಾಮ ಅಥವಾ ಮಹಾಲಕ್ಷ್ಮಿ ಅಷ್ಟಕ ಪಾರಾಯಣಕ್ಕೆ ಉತ್ತಮವಾಗಿದೆ….

Read More

ಸ್ಯಾಂಡಲ್​​ವುಡ್​ ಕಡೆಗಣಿಸಿದ ಫಿಲ್ಮ್​​ಫೇರ್​​ಗೆ ಛೀಮಾರಿ ಹಾಕಿದ ಕನ್ನಡಿಗರು

ಕನ್ನಡ ಚಿತ್ರರಂಗವನ್ನು ಅನೇಕ ಕಡೆಗಳಲ್ಲಿ ಕಡೆಗಣಿಸುವ ಕೆಲಸ ಆಗುತ್ತಲೇ ಬರುತ್ತಿದೆ. ಈ ಮೊದಲು ಸೈಮಾ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂದ ನಟರನ್ನು ಕಡೆಗಣಿಸಿದ ಬಗ್ಗೆ ಟೀಕೆ ವ್ಯಕ್ತವಾಗಿತ್ತು. ಈಗ ಫಿಲ್ಮ್​​ಫೇರ್ (Filma Fare) ಅದೇ ತಪ್ಪನ್ನು ಮಾಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಕನ್ನಡ ಚಿತ್ರರಂಗವನ್ನು ಕಡೆಗಣಿಸಿದ್ದು ಎಷ್ಟು ಸರಿ ಎಂಬ ಚರ್ಚೆ ಶುರುವಾಗಿದೆ. ತಪ್ಪನ್ನು ತಿದ್ದುಕೊಂಡು ಅವರು ಕ್ಷಮೆ ಕೇಳಬೇಕು ಎಂಬ ಆಗ್ರಹಕೂಡ ವ್ಯಕ್ತವಾಗಿದೆ. ಫಿಲ್ಮ್​ ಫೇರ್ ಅವಾರ್ಡ್ ಆರಂಭ ಆಗಿದ್ದು 1954ರಲ್ಲಿ. ಹಿಂದಿ…

Read More

ಕೆಐಎಡಿಬಿ ಕಚೇರಿಯಲ್ಲಿ 16 ಕೋಟಿ ಲೂಟಿ! ಗುತ್ತಿಗೆ ನೌಕರ ಸೇರಿ ಏಳು ಮಂದಿ ಮೇಲೆ ಎಫ್ಐಆರ್

ಬಳ್ಳಾರಿ, ಮಾರ್ಚ್​ 24: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಬಳ್ಳಾರಿ ವಲಯ ಕಚೇರಿಯಲ್ಲಿ ಭಾರೀ ಆರ್ಥಿಕ ಅವ್ಯವಹಾರ ಬೆಳಕಿಗೆ ಬಂದಿದೆ. ಈ ವರ್ಷದ ಆಂತರಿಕ ಆಡಿಟ್ ವೇಳೆ ಒಟ್ಟೂ 16 ಕೋಟಿ ರೂ.ಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆ ಮಂಡಳಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಪೊಲೀಸರಿಗೆ ದೂರು ನೀಡಿದ್ದು, ಏಳು ಮಂದಿ ಮೇಲೆ ಎಫ್​ಐಆರ್ ದಾಖಲಾಗಿದೆ. ಅಧಿಕಾರಿಗಳ ಸಹಿ ಫೋರ್ಜರಿ ಮಾಡಿದ್ದ ಆರೋಪಿ 2022ರಿಂದ 2026ರವರೆಗೆ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 16…

Read More

ಹನಿಟ್ರ್ಯಾಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ

ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಖಾಸಗಿ ಆಸ್ಪತ್ರೆ ನರ್ಸ್​​ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು…

Read More