Mayuranathaswamy Temple: ಪಾರ್ವತಿ ದೇವಿಯೇ ಶಿವಲಿಂಗ ಪ್ರತಿಷ್ಠಾಪಿಸಿದ ಮಯೂರನಾಥ ದೇವಾಲಯ ಎಲ್ಲಿದೆ ಗೊತ್ತಾ? – Kannada News | Mayuranathaswamy Temple Mayiladuthurai: Shiva and Peacock Goddess Legend

ಮಯೂರನಾಥ ಸ್ವಾಮಿ ದೇವಾಲಯImage Credit source: Pinterest

ತಮಿಳುನಾಡು ರಾಜ್ಯವು ಅನೇಕ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವದ ದೇವಾಲಯಗಳಿಗೆ ಪ್ರಸಿದ್ಧವಾಗಿದೆ. ಅದಕ್ಕಾಗಿಯೇ ಇದನ್ನು “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. ಅರುಣಾಚಲೇಶ್ವರ, ಚಿದಂಬರಂ ನಟರಾಜ ಹಾಗೂ ಮೀನಾಕ್ಷಿ ಅಮ್ಮನ್ ದೇವಾಲಯಗಳಂತೆ ಹಲವು ಶೈವ ಕ್ಷೇತ್ರಗಳ ನಡುವೆ ಮೈಲಾಡುತುರೈನಲ್ಲಿ ಇರುವ ಮಯೂರನಾಥ ಸ್ವಾಮಿ ದೇವಾಲಯವೂ ತನ್ನ ಪುರಾತನತೆ, ವೈಶಿಷ್ಟ್ಯಮಯ ಪುರಾಣ ಕಥೆಗಳು ಮತ್ತು ಭವ್ಯ ವಾಸ್ತುಶಿಲ್ಪದಿಂದ ವಿಶೇಷ ಸ್ಥಾನ ಪಡೆದಿದೆ. ಇದು ಕೇವಲ ಭಕ್ತರಿಗಷ್ಟೇ ಅಲ್ಲದೆ ಇತಿಹಾಸ ಮತ್ತು ಸಂಸ್ಕೃತಿ ಪ್ರಿಯರಿಗೂ ಆಕರ್ಷಕ ತಾಣವಾಗಿದೆ.

ಈ ದೇವಾಲಯದ ಅತ್ಯಂತ ವಿಶಿಷ್ಟ ಅಂಶವೆಂದರೆ, ಇಲ್ಲಿ ಶಿವನು ‘ಮಯೂರನಾಥ’ ರೂಪದಲ್ಲಿ ಪೂಜಿಸಲ್ಪಡುವುದು. ಪುರಾಣಗಳ ಪ್ರಕಾರ, ಪಾರ್ವತಿ ದೇವಿಯೇ ನವಿಲಿನ ರೂಪದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದ್ದಾಳೆ. ದಕ್ಷ ಪ್ರಜಾಪತಿಯ ಯಜ್ಞದಲ್ಲಿ ಉಂಟಾದ ಅವಮಾನ ಮತ್ತು ಆತ್ಮಶುದ್ಧಿಗಾಗಿ ಪಾರ್ವತಿ ದೇವಿ ತಪಸ್ಸು ಮಾಡಿ, ತನ್ನ ಮುಂದಿನ ಜನ್ಮದಲ್ಲಿ ನವಿಲಾಗಿ ಹುಟ್ಟಿ ಶಿವನ ಆರಾಧನೆ ಮಾಡಿದಳು ಎಂದು ಕಥೆಗಳು ಹೇಳುತ್ತವೆ. ಈ ಕಾರಣದಿಂದಲೇ ‘ಮಯೂರ’ (ನವಿಲು) + ‘ನಾಥ’ (ಶಿವ) ಎಂಬ ಹೆಸರಿನಿಂದ ದೇವಾಲಯಕ್ಕೆ ಮಯೂರನಾಥ ಎಂದು ಹೆಸರು ಬಂದಿದೆ. ಇಲ್ಲಿ ಪಾರ್ವತಿ ದೇವಿಯನ್ನು ಅಭಯಾಂಬಿಕಾ ಮತ್ತು ಅಭಯಪ್ರದಾಂಬಿಕಾ ಎಂದು ಪೂಜಿಸಲಾಗುತ್ತದೆ.

ಮಯೂರನಾಥ ದೇವಾಲಯವು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಮೈಲಾಡುತುರೈ (ಹಿಂದೆ ಮಾಯಾವರಂ) ಪಟ್ಟಣದಲ್ಲಿ ಇದೆ. ಭವ್ಯವಾದ ಒಂಬತ್ತು ಅಂತಸ್ತಿನ ರಾಜಗೋಪುರ, ಸುಂದರ ಶಿಲ್ಪಗಳು, ಸೂಕ್ಷ್ಮವಾದ ಕಲ್ಲಿನ ಕೆತ್ತನೆಗಳು ಮತ್ತು ದ್ರಾವಿಡ ಶೈಲಿಯ ವಾಸ್ತುಶಿಲ್ಪ ಈ ದೇವಾಲಯದ ಸೌಂದರ್ಯವನ್ನು ಹೆಚ್ಚಿಸಿವೆ. ಪ್ರಾಚೀನ ಶಾಸನಗಳ ಪ್ರಕಾರ, ಈ ದೇವಾಲಯವನ್ನು ಚೋಳರ ಕಾಲದಲ್ಲಿ, ಕ್ರಿ.ಶ. 9ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂದು ತಿಳಿದುಬರುತ್ತದೆ. ಶಿಲ್ಪಕಲೆ ಮತ್ತು ಕಟ್ಟಡ ವಿನ್ಯಾಸದಲ್ಲಿ ಆ ಕಾಲದ ಕಲಾತ್ಮಕ ಮೆರುಗು ಸ್ಪಷ್ಟವಾಗಿ ಕಾಣಿಸುತ್ತದೆ.

ಸ್ಥಳೀಯ ದಂತಕಥೆಯ ಪ್ರಕಾರ, ದಕ್ಷ ಯಜ್ಞದ ಸಂದರ್ಭದಲ್ಲಿ ಯಜ್ಞಗುಂಡದಲ್ಲಿದ್ದ ಮರಿ ನವಿಲು ಭಯದಿಂದ ಪಾರ್ವತಿ ದೇವಿಯ ಮಡಿಲಲ್ಲಿ ಅಡಗಿಕೊಂಡಿತು. ಆ ನವಿಲನ್ನು ರಕ್ಷಿಸಲು ಪಾರ್ವತಿ ದೇವಿ ತಪಸ್ಸು ಕೈಗೊಂಡಳು. ಆ ತಪಸ್ಸಿನ ಫಲವಾಗಿ ಅವಳು ಮುಂದಿನ ಜನ್ಮದಲ್ಲಿ ನವಿಲಾಗಿ ಹುಟ್ಟಿ ಶಿವಲಿಂಗವನ್ನು ಪ್ರತಿಷ್ಠಾಪಿಸಿ ಶಿವನ ಅನುಗ್ರಹ ಪಡೆದಳು. ಈ ಕಥೆ ಭಕ್ತರಲ್ಲಿ ಭಕ್ತಿ, ಕರುಣೆ ಮತ್ತು ಆತ್ಮಶುದ್ಧಿಯ ಸಂದೇಶವನ್ನು ಸಾರುತ್ತದೆ.

ಇದನ್ನೂ ಓದಿ: ದಿನಕ್ಕೆ 5 ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ, ಈ ಅದ್ಭುತ ದೇವಸ್ಥಾನ ಎಲ್ಲಿದೆ ಗೊತ್ತಾ?

ಈ ಕ್ಷೇತ್ರಕ್ಕೆ ಆಧ್ಯಾತ್ಮಿಕ ಮಹತ್ವವೂ ಅಪಾರವಾಗಿದೆ. ದೇವಾಲಯದ ಆವರಣದಲ್ಲಿ ಪಾರ್ವತಿ ದೇವಿ ಆಲದ ಮರದ ಕೆಳಗೆ ತಪಸ್ಸು ಮಾಡಿದಳು ಎಂದು ನಂಬಲಾಗುತ್ತದೆ. ಹತ್ತಿರದ ಕಾವೇರಿ ನದಿ ಮತ್ತು ವೃಷಭ ತೀರ್ಥ ಸಂಗಮವನ್ನು ‘ದಕ್ಷಿಣ ತ್ರಿವೇಣಿ ಸಂಗಮ’ ಎಂದು ಕರೆಯುತ್ತಾರೆ. ಪ್ರತಿ ಹುಣ್ಣಿಮೆಯಂದು ಇಲ್ಲಿ ಸ್ನಾನ ಮಾಡಿದರೆ ಪಾಪಕ್ಷಯ ಮತ್ತು ಮನಶಾಂತಿ ದೊರೆಯುತ್ತದೆ ಎಂಬ ನಂಬಿಕೆ ಇದೆ.

ಮಹಾಶಿವರಾತ್ರಿ, ಕಾರ್ತಿಕ ಮಾಸ ಹಾಗೂ ಇತರ ಪ್ರಮುಖ ಹಬ್ಬಗಳ ಸಂದರ್ಭದಲ್ಲಿ ಈ ದೇವಾಲಯ ಭಕ್ತರಿಂದ ಕಿಕ್ಕಿರಿದು ಕಾಣುತ್ತದೆ. ಶಿವನ ನಾಮಸ್ಮರಣೆ, ವಿಶೇಷ ಪೂಜೆಗಳು ಮತ್ತು ಉತ್ಸವಗಳು ಭಕ್ತರಿಗೆ ಆಧ್ಯಾತ್ಮಿಕ ಉಲ್ಲಾಸವನ್ನು ನೀಡುತ್ತವೆ. ಹೀಗಾಗಿ ಮಯೂರನಾಥ ದೇವಾಲಯವು ಕೇವಲ ಐತಿಹಾಸಿಕ ಸ್ಮಾರಕವಲ್ಲ, ಶಿವಭಕ್ತರಿಗಾಗಿ ಶಾಂತಿ, ಭಕ್ತಿ ಮತ್ತು ಆತ್ಮಚಿಂತನೆಯ ಜೀವಂತ ಕೇಂದ್ರವಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಾಂಗ್ಲಾದೇಶ; ಟ್ಯಾರಿಫ್ ಶೇ. 19ಕ್ಕೆ ಇಳಿಕೆ – Kannada News | US reduces tariffs on Bangladesh to 19pc, after both countries sign for trade deal

ಅಮೆರಿಕ ಬಾಂಗ್ಲಾದೇಶ ವ್ಯಾಪಾರ ಒಪ್ಪಂದ

ಢಾಕಾ, ಫೆಬ್ರುವರಿ 10: ಅಮೆರಿಕ ಮತ್ತು ಬಾಂಗ್ಲಾದೇಶ ಮಧ್ಯೆ ವ್ಯಾಪಾರ ಒಪ್ಪಂದ (US Bangladesh trade deal) ಏರ್ಪಟ್ಟಿದೆ. ಎರಡೂ ದೇಶಗಳು ಒಪ್ಪಂದಕ್ಕೆ ಸಹಿಹಾಕಿವೆ. ಅದರ ಪ್ರಕಾರ, ಬಾಂಗ್ಲಾದೇಶಕ್ಕೆ ವಿಧಿಸುವ ಟ್ಯಾರಿಫ್ ಅನ್ನು ಅಮೆರಿಕ ಶೇ. 19ಕ್ಕೆ ಇಳಿಸಲಿದೆ. ಅಮೆರಿಕದ ಸಾಮಗ್ರಿಗಳಿಂದ ತಯಾರಾದ ಕೆಲ ಜವಳಿ ಮತ್ತು ಉಡುಪುಗಳ ಮೇಲೆ ಅಮೆರಿಕ ಟ್ಯಾರಿಫ್​ನಿಂದ ಪೂರ್ಣ ವಿನಾಯಿತಿ ಕೊಡಲಿದೆ.

ಇದಕ್ಕೆ ಬದಲಾಗಿ, ಅಮೆರಿಕದ ಹೆಚ್ಚಿನ ಉತ್ಪನ್ನಗಳಿಗೆ ಬಾಂಗ್ಲಾದೇಶದ ಮಾರುಕಟ್ಟೆಗೆ ಮುಕ್ತ ಪ್ರವೇಶ ಸಿಗಲಿದೆ. ಸೋಯಾ ಉತ್ಪನ್ನಗಳು, ಡೈರಿ ಉತ್ಪನ್ನಗಳು, ಬೀಫ್, ಯಂತ್ರೋಪಕರಣ, ವಾಹನ, ವಾಹನ ಬಿಡಿಭಾಗಗಳು, ರಾಸಾಯನಿಕ, ಹಣ್ಣು, ವೈದ್ಯಕೀಯ ಸಾಧನ ಇತ್ಯಾದಿ ಅಮೆರಿಕದ ಕೈಗಾರಿಕಾ ಮತ್ತು ಕೃಷಿ ಉತ್ಪನ್ನಗಳಿಗೆ ಬಾಂಗ್ಲಾದೇಶ ಆದ್ಯತೆಯ ಮೇಲೆ ಅವಕಾಶ ಕಲ್ಪಿಸಲಿದೆ.

ಇದನ್ನೂ ಓದಿ: ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ

ಹಾಗೆಯೇ, ಅಮೆರಿಕದ ವಾಹನ ಸುರಕ್ಷತೆ ಮತ್ತು ಆಹಾರ ಗುಣಮಟ್ಟದ ಪ್ರಮಾಣಪತ್ರ ಮತ್ತು ಮಾನದಂಡಗಳನ್ನು ಬಾಂಗ್ಲಾದೇಶ ಸ್ವೀಕರಿಸಲಿದೆ. ಮರುತಯಾರಿತ ಸರುಕಗಳ ಮೇಲಿನ ಆಮದು ನಿರ್ಬಂಧವನ್ನು ತೆಗೆದುಹಾಕಲಿದೆ ಎಂದು ಅಮೆರಿಕದ ಶ್ವೇತಭವನ ಹೇಳಿಕೆಯಲ್ಲಿ ತಿಳಿಸಿದೆ.

ಮುಂದಿನ 15 ವರ್ಷದಲ್ಲಿ 15 ಬಿಲಿಯನ್ ಡಾಲರ್​ನಷ್ಟು ಅಮೆರಿಕನ್ ಇಂಧನ ಉತ್ಪನ್ನಗಳು, ಹಾಗೂ 3.5 ಬಿಲಿಯನ್ ಡಾಲರ್​ನಷ್ಟು ಕೃಷಿ ಉತ್ಪನ್ನಗಳನ್ನು ಖರೀದಿಸಲು ಬಾಂಗ್ಲಾದೇಶ ಬದ್ಧವಾಗಿದೆ. ಬಿಮಾನ್ ಬಾಂಗ್ಲಾದೇಶ್ ಏರ್ಲೈನ್ಸ್ ಸಂಸ್ಥೆ 14 ಬೋಯಿಂಗ್ ವಿಮಾನಗಳನ್ನು ಖರೀದಿಸಲು ಉದ್ದೇಶಿಸಿದೆ. ಇತರ ದೇಶಗಳ ಬದಲು ಅಮೆರಿಕದಿಂದ ಮಿಲಿಟರಿ ಉಪಕರಣಗಳನ್ನು ಬಾಂಗ್ಲಾದೇಶ ಖರೀದಿ ಮಾಡಲಿದೆ ಎಂದು ಒಪ್ಪಂದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ?

ಡೊನಾಲ್ಡ್ ಟ್ರಂಪ್ ಅವರು ಕಳೆದ ವರ್ಷ ಬಾಂಗ್ಲಾದೇಶಕ್ಕೆ ಶೇ. 37ರಷ್ಟು ಪ್ರತಿಸುಂಕ ಹಾಕಿದ್ದರು. ನಂತರ ಅದನ್ನು ಶೇ. 20ಕ್ಕೆ ಇಳಿಸಲು ಬಾಂಗ್ಲಾದೇಶ ಯಶಸ್ವಿಯಾಗಿತ್ತು. ಈಗ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಟ್ಯಾರಿಫ್ ಶೇ. 19ಕ್ಕೆ ಇಳಿದಿದೆ. ಇದೇ ವೇಳೆ, ಭಾರತವು ಟ್ಯಾರಿಫ್ ಅನ್ನು ಶೇ. 18ಕ್ಕೆ ಇಳಿಸಲು ಯಶಸ್ವಿಯಾಗಿರುವುದು ಕುತೂಹಲದ ಸಂಗತಿ. ಬಾಂಗ್ಲಾದೇಶಕ್ಕೆ ಜವಳಿ ರಫ್ತು ಪ್ರಮುಖ ಆದಾಯ ಮೂಲವಾಗಿದೆ. ಭಾರತದ ಟೆಕ್ಸ್​ಟೈಲ್ಸ್ ಉದ್ಯಮಕ್ಕೆ ಕಡಿಮೆ ಟ್ಯಾರಿಫ್​ನ ಅನುಕೂಲ ಸಿಕ್ಕಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ – Kannada News | Five Members of a Family Found Dead in Suspected Suicide Case in Mathura

ಮಥುರಾ, ಫೆಬ್ರವರಿ 10: ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಪತಿ, ಪತ್ನಿ ಮತ್ತು ಅವರ ಮೂವರು ಮಕ್ಕಳು ರಾತ್ರಿಯಿಡೀ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎಂದು ವರದಿಯಾಗಿದೆ. ಬೆಳಗ್ಗೆ ಅವರು ಎಚ್ಚರಗೊಳ್ಳದಿದ್ದಾಗ, ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದರು. ಐವರೂ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗಳು ಮೊದಲು ತಮ್ಮ ಮೂವರು ಮಕ್ಕಳ ಹಾಲಿಗೆ ವಿಷ ಬೆರೆಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಈ ಭಯಾನಕ ಹೆಜ್ಜೆ ಇಟ್ಟಿದ್ದಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.
ಏತನ್ಮಧ್ಯೆ, ಕುಟುಂಬದ ದುರಂತ ನಷ್ಟದ ನಂತರ ಇಡೀ ಪ್ರದೇಶವು ಶೋಕದಲ್ಲಿ ಮುಳುಗಿದೆ. ಕುಟುಂಬವು ಈ ಕಠಿಣ ಕ್ರಮ ಕೈಗೊಳ್ಳಲು ಕಾರಣವೇನೆಂದು ಸಂಬಂಧಿಕರು ಮತ್ತು ನೆರೆಹೊರೆಯವರು ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ: ಕೈಕೊಟ್ಟ 3 ವರ್ಷ ಪ್ರೀತಿಸಿದ ಪ್ರೇಯಸಿ: ನೊಂದ ಬಾಡಿಬಿಲ್ಡರ್​​ ತೆಗೆದುಕೊಂಡಿದ್ದು ದುಡುಕಿನ ನಿರ್ಧಾರ

ಮತ್ತೊಂದು ಘಟನೆ
ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಾಗಪ್ರಸನ್ನ, ತಾಯಿ ಸುಮಂಗಲಾ(78), ಸಹೋದರಿ ಶಿಲ್ಪಾ(48), ಶ್ರುತಾ (43) ಆತ್ಮಹತ್ಯೆಗೆ ಶರಣಾದವರು.

ಘಟನಾ ಸ್ಥಳದ ವಿಡಿಯೋ

ಕೆಲ ತಿಂಗಳ ಹಿಂದೆ ಫ್ರೀಫೈರ್ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗ ಅಮೋಘಕೀರ್ತಿಯನ್ನು ಕೊಲೆ ಮಾವ ನಾಗಪ್ರಸಾದ್ ಕೊಲೆ ಮಾಡಿದ್ದರು. ಬಾಲಕನ ಸಾವಿನ ಹಿನ್ನೆಲೆ ಮನನೊಂದಿದ್ದ ಕುಟುಂಬಸ್ಥರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮೃತ ಶರೀರಗಳ ಬಳಿ ನಿದ್ರೆ ಮಾತ್ರೆಗಳು ಸಿಕ್ಕಿದ್ದು, ಈ ಮಾತ್ರೆಗಳ ಓವರ್ ಡೋಸ್​ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.

ಬಾಲಕ ಅಮೋಘಕೀರ್ತಿ ಮೊಬೈಲ್ ​ನಲ್ಲಿ ಫ್ರೀಫೈರ್ ಗೇಮ್​​ ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕ ಅಮೋಘಕೀರ್ತಿಯನ್ನು ಕೊಲೆ ಮಾಡಿದ್ದ. ಘಟನೆಯ ಬಳಿಕ ಹಣದ ಕೊರತೆಯಿಂದ ಮೆಜೆಸ್ಟಿಕ್‌ನಲ್ಲಿ ಮೂರು ದಿನ ಕಾಲ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಶರಣಾಗಿದ್ದನು. ಪೊಲೀಸರು ಆತನ ಮೇಲೆ ಎಫ್​ಐಆರ್ ದಾಖಲಿಸಿ ಜೈಲಿನಲ್ಲಿಟ್ಟಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ಕೂದಲೆಳೆಯ ಅಂತರದಲ್ಲಿ ತಪ್ಪಿದ ಭಾರೀ ದುರಂತ – Kannada News | Ksrtc bus axle snaps in chamarajanagar major tragedy averted

ಚಾಮರಾಜನಗರ, ಫೆಬ್ರವರಿ 10: ಜಿಲ್ಲೆಯ ತ್ರಯಂಬಕಪುರ ಗೇಟ್ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಆಕ್ಸೆಲ್ ಏಕಾಏಕಿ ಕಟ್ ಆಗಿದ್ದು, ಸಂಭವನೀಯ ದೊಡ್ಡ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಾಮರಾಜನಗರದಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್​ನ ಆಕ್ಸೆಲ್ ಮುರಿದ ಕಾರಣ ಬಸ್ ಮಾರ್ಗ ಮಧ್ಯದಲ್ಲೇ ನಿಂತಿದೆ. ಇದರಿಂದಾಗಿ ಶಾಲೆ-ಕಾಲೇಜುಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆ ಅನುಭವಿಸಿದ್ದಾರೆ. ಬಸ್‌ಗಳ ಸ್ಥಿತಿಗತಿಯನ್ನು ಪರಿಶೀಲಿಸದೆ ಹೇಗೆ ಡಿಪೋದಿಂದ ಹೊರಗೆ ಕಳುಹಿಸಲಾಗುತ್ತದೆ ಎಂದು ಪ್ರಯಾಣಿಕರು ಪ್ರಶ್ನಿಸಿದ್ದು, ಒಂದು ಸಣ್ಣ ಎಡವಟ್ಟಾಗಿದ್ದರೂ ಕೂಡ ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್ – Kannada News | Power Sharing Row: No Secret Talks With CM Siddaramaiah, Says DK Shivakumar at Bengaluru Airport

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್​ನಲ್ಲಿ(Congress) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ‘ಬಾಯಿ ಮುಚ್ಚಿಕೊಂಡಿರಬೇಕು’ ಎಂದು ಹೇಳಿದ್ದಾರೆ. ಈ ಸೂಚನೆಯನ್ನು ಪಕ್ಷದ ಎಲ್ಲರೂ ಪಾಲಿಸಬೇಕು. ಮಂತ್ರಿಗಳು, ಶಾಸಕರು ಅಥವಾ ಯಾರೇ ಆಗಲಿ, ನೀಡುವ ಹೇಳಿಕೆಗಳು ಪಕ್ಷಕ್ಕೆ ಹಾನಿಕಾರಕವಾಗಬಾರದು, ಬದಲಿಗೆ ಪಕ್ಷಕ್ಕೆ ಒಳಿತು ಮಾಡುವಂತಿರಬೇಕು. ಇಂತಹ ಹೇಳಿಕೆಗಳಿಂದ ಯಾರಿಗೂ ಯಾವುದೇ ಪ್ರಯೋಜನವಾಗುವುದಿಲ್ಲ, ಬದಲಾಗಿ ಪಕ್ಷದ ಇಮೇಜ್‌ಗೆ ಧಕ್ಕೆ ಉಂಟಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಯತೀಂದ್ರ ಅವರಿಗೆ ನೋಟಿಸ್ ನೀಡುವ ವಿಚಾರವಾಗಿ ಇಕ್ಬಾಲ್ ಹುಸೇನ್ ಅವರು ಪ್ರಶ್ನೆ ಮಾಡಿದ್ದಾರೆ. ತಾವು ಮಾತನಾಡಿದರೆ ನೋಟಿಸ್ ನೀಡುತ್ತಾರೆ, ಯತೀಂದ್ರ ಅವರಿಗೆ ಏಕೆ ನೋಟಿಸ್ ನೀಡುವುದಿಲ್ಲ ಎಂದು ಪ್ರಶ್ನಿಸಿದ್ದಾರೆ ಎಂಬ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ, ‘ಈ ವಿಷಯದ ಬಗ್ಗೆ ಹೈಕಮಾಂಡ್‌ ಬಳಿ ಕೇಳೋಣ ಬಿಡಿ’ ಎಂದರು.

ಪ್ರತಿದಿನವೂ ನನಗೆ ಶುಭದಿನ: ಡಿಕೆ ಶಿವಕುಮಾರ್

ದೆಹಲಿಗೆ ತೆರಳುವ ಮುನ್ನ ಮಾತನಾಡಿದ ಡಿಕೆಶಿವಕುಮಾರ್, ಪ್ರತಿದಿನವೂ ನನಗೆ ಶುಭದಿನ. ಪ್ರತಿದಿನವೂ ಕಷ್ಟದ ದಿನವೂ ಹೌದು, ಯಾವುದೂ ಕೂಡ ಸುಲಭವಲ್ಲ ಎಂದು ಹೇಳಿದರು. ಸಾರ್ವಜನಿಕ ಜೀವನದಲ್ಲಿ ನಿತ್ಯ ಟೀಕೆಗಳು, ಕಷ್ಟಗಳು, ಕಾರ್ಪಣ್ಯಗಳು ಇದ್ದೇ ಇರುತ್ತವೆ. ಸಮಸ್ಯೆಗಳನ್ನು ಬಗೆಹರಿಸಲು ಅಡಕುಗಳು, ತೊಡಕುಗಳು ಸಹಜ. ಇವೆಲ್ಲವನ್ನೂ ಎದುರಿಸಬೇಕು ಮತ್ತು ನಮ್ಮ ಕೆಲಸವನ್ನು ಮುಂದುವರಿಸಬೇಕು ಎಂದರು.

ಇದನ್ನೂ ಓದಿ: ಸಿಎಂ ಬಜೆಟ್​ಗೆ ಸಜ್ಜಾದ ಹೊತ್ತಲ್ಲೇ ಡಿಕೆ ಶಿವಕುಮಾರ್​ಗೆ ಅಸಮಾಧಾನ? ದೆಹಲೀಲಿ ದುಃಖ, ದುಮ್ಮಾನ ಚರ್ಚಿಸ್ತೀನೆಂದ ಡಿಸಿಎಂ

ಪ್ರತಿಯೊಂದು ದಿನವೂ ಹೊಸ ಆರಂಭ, ಸಂತೋಷದ ದಿನ, ಯಶಸ್ಸಿನ ದಿನ. ರಾಜಕೀಯ ಸವಾಲುಗಳ ನಡುವೆಯೂ ತಮ್ಮ ಕರ್ತವ್ಯ ಮತ್ತು ಜನರ ಸಮಸ್ಯೆಗಳನ್ನು ನಿವಾರಿಸುವ ಕಡೆಗೆ ತಮ್ಮ ಗಮನವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ – Kannada News | Bigg Boss Kannada: Ashwini Gowda and Chaitra Kundapura’s Post Show Brawl Over Scratches

ಬಿಗ್ ಬಾಸ್ (Bigg Boss) ಆಟ ಪೂರ್ಣಗೊಂಡ ಬಳಿಕವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್​ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗಿತ್ತು. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ.

ಮಾಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ ಕುಂದಾಪುರ ಮೇಲೆ ನೇರವಾಗಿ ಆರೋಪ ಮಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಗಾಯಗಳಾಗಿವೆ. ಚೈತ್ರಾ ಕುಂದಾಪುರ ಅವರು ನನಗೆ ಪರಚಿದ್ದರು’ ಎಂದು ಅಶ್ವಿನಿ ಗೌಡ ಆರೋಪ ಮಾಡಿದ್ದರು. ಅಲ್ಲದೆ ಕೈಗೆ ಆದ ಗಾಯಗಳನ್ನು ಮಾಧ್ಯಮಗಳಿಗೆ ತೋರಿಸಿದ್ದರು. ಇದಕ್ಕೆ ಚೈತ್ರಾ ಅವರು ತಡವಾಗಿ ಉತ್ತರ ನೀಡಿದ್ದಾರೆ.

‘ನನಗೂ ಪರಚಿದ ಕಲೆಗಲಿವೆ. ಆದರೆ ಕ್ಷಮಿಸಿ ನನ್ನ ಬಳಿ ಪಿ.ಆರ್ ಟೀಮ್ ಇಲ್ಲ. ನನಗೂ ನೋವು, ಕಲೆಗಳಿದೆ. ಆದರೆ ನನಗೆ ಆಟವನ್ನು ಆಟವಾಗಿಯೇ ನೋಡುವ ಮನಸ್ಥಿತಿ ಇದೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಬಿಗ್ ಬಾಸ್ ಟಾಸ್ಕ್ ಮುಗಿದ ಬಳಿಕ ಪರಸ್ಪರ ಕ್ಷಮೆ ಕೇಳಿ ಪ್ರಕರಣವನ್ನು ಅಶ್ವಿನಿ-ಚೈತ್ರಾ ಅಲ್ಲಿಯೇ ಮುಗಿಸಿದ್ದರು. ಆದರೆ, ಹೊರ ಬಂದ ಬಳಿಕ ಅಶ್ವಿನಿ ಗೌಡ ಈ ವಿಷಯವನ್ನು ಮತ್ತೆ ತೆಗೆದಿದ್ದಾರೆ.

ಟಾಸ್ಕ್ ವೇಳೆ ಅನೇಕರಿಗೆ ಗಾಯಗಳಾಗುತ್ತವೆ. ಅದನ್ನು ಎಲ್ಲರೂ ಅಲ್ಲಿಗೇ ಬಿಡುತ್ತಾರೆ. ಆದರೆ, ಕೆಲವರು ಅದನ್ನು ಹೊರಕ್ಕೂ ತೆಗೆದುಕೊಂಡು ಹೋಗುತ್ತಾರೆ. ಈಗ ಆ ಕೆಲಸವನ್ನು ಅಶ್ವಿನಿ ಮಾಡಿದ್ದಾರೆ. ಈ ಕಾರಣಕ್ಕೆ ಚೈತ್ರಾ ಕುಂದಾಪುರ ಅವರು ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

ಇನ್ನು ಗಿಲ್ಲಿ ಬಗ್ಗೆ ಅಶ್ವಿನಿ ಗೌಡ ಅವರು ಗಂಭೀರ ಆರೋಪ ಮಾಡಿದ್ದರು. ‘ಗಿಲ್ಲಿ ಬಡವ ಎಂದು ಬಿಂಬಿಸಿಕೊಂಡಿದ್ದಾನೆ. ಆತ ನಿಜವಾಗಲೂ ಬಡವನಾ’ ಎಂದು ಅವರು ಪ್ರಶ್ನೆ ಮಾಡಿದ್ದರು. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಕಹಾನಿ – Kannada News | Big Twist in Belthangady Student Kidnap Attempt Case: Girl’s Drama Exposed in Police Investigation

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada

ಮಂಗಳೂರು, ಫೆಬ್ರವರಿ 10: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು ಯತ್ನಿಸಿದ್ದಾರೆ ಎಂದು ದೂರಿದ್ದಳು. ಈ ವೇಳೆ ತನ್ನ ಕೈಗೆ ಗಾಯವಾಗಿದೆ ಎಂದು ಹೇಳಿದ್ದಳು. ಈ ವಿಚಾರ ಕುಟುಂಬಸ್ಥರ ಜೊತೆಗೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಹಿರಿಯ ಪೊಲೀಸ್​​ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆದರೆ ಪೊಲೀಸರ ತನಿಖೆ ವೇಳೆ ವಿದ್ಯಾರ್ಥಿನಿಯ ಡ್ರಾಮಾ ಬಯಲಾಗಿದೆ. ಕಿಡ್ನ್ಯಾಪ್​​ ನಾಟಕ ಮಾಡಿದ್ರೆ ತನ್ನನ್ನು ಮನೆಯವರು ಮಂಗಳೂರಿ‌ನ ಕಾಲೇಜಿಗೆ ಸೇರಿಸುತ್ತಾರೆ ಎಂದುಕೊಂಡಿದ್ದ ಯುವತಿ ಅದಕ್ಕೆ ತಕ್ಕಂತೆ ಭರ್ಜರಿ ಪ್ಲ್ಯಾನ್​​ ಕೂಡ ಮಾಡಿದ್ದಳು. ಬ್ಲೇಡ್​​ನಲ್ಲಿ ತಾನೇ ಕೈ ಕೊಯ್ದುಕೊಂಡು ಕತೆ ಹೇಳಿದ್ದಳು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಯತ್ನ ಪ್ರಕರಣ ಸಂಬಂಧ ಪೊಲೀಸರು ಇಡೀ ದಿನ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಬಾಲಕಿಯನ್ನು ಭೇಟಿ ಮಾಡಿದ್ದರು. ಆದ್ರೆ ತನಿಖೆ ವೇಳೆ ವಿದ್ಯಾರ್ಥಿನಿಯೇ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾಳೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ

ಬ್ಯಾಗ್​​ನಲ್ಲಿರುವ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿದ್ದ ಈಕೆ, ಬಳಿಕ ಬ್ಯಾಗ್​​ನ ದಾರಿಯಲ್ಲೇ ಬಿಸಾಕಿದ್ದಳು. ಸ್ಕೂಟಿಯನ್ನು ನಿಲ್ಲಿಸಿ ಬ್ಲೇಡ್​​ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು. ಮತ್ತೊಂದೆಡೆ ವಿದ್ಯಾರ್ಥಿನಿ ಸ್ಕೂಟಿಯಿಂದ ಬಿದ್ದಿರುವಂತೆ ನಟಿಸುವ ವೇಳೆ ಹಿಬದಿಯಿಂದ ಬಂದಿದ್ದ ಅಬ್ಬುಸಾಲಿ ಎಂಬಾತ ಕೂಡ ಘಟನೆಯ ಬಗ್ಗೆ ವಿವರಿಸಿದ್ದ ಕಾರಣ ಆರಮಭದಲ್ಲಿ ಈಕೆ ಹೇಳುತ್ತಿರುವುದು ಸುಳ್ಳು ಕತೆಯಾಗಿರಬಹುದೆಂಬ ಅನುಮಾನ ಯಾರಿಗೂ ಬಂದಿರಲಿಲ್ಲ. ವಿದ್ಯಾರ್ಥಿನಿ ಹೇಳಿದ್ದನ್ನ ಮೊದಲು ಅಬ್ಬುಸಾಲಿ ನಂಬಿದ್ದರೆ ಬಳಿಕ ಎಲ್ಲರೂ ಆಕೆ ಹೇಳ್ತಿರೋದು ಸತ್ಯ ಎಂದು ನಂಬಿ ಕುಟುಂಬಸ್ಥರೂ ಕಂಗಾಲಾಗಿದ್ದರು.  ಆದರೆ ಪೊಲೀಸರ ತನಿಖೆಯಿಂದ ಕೊನೆಗೂ ವಿದ್ಯಾರ್ಥಿನಿ ನಾಟಕ ಬಯಲಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು ಬ್ಯಾಟರ್​ಗಳನ್ನು ಕಳೆದುಕೊಂಡಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನದೀಮ್ ಖಾನ್ 18 ಎಸೆತಗಳಲ್ಲಿ 20 ರನ್ ಬಾರಿಸಿದರು.

ಆದರೆ ಕೊನೆಯ ಓವರ್​ನಲ್ಲಿ ನದೀಮ್ ಖಾನ್ ಅವರ ವಿಕೆಟ್ ಪಡೆಯುವಲ್ಲಿ ಬ್ರಾಡ್ ಇವನ್ಸ್ ಯಶಸ್ವಿಯಾದರು. ಅದು ಕೂಡ ಬ್ರಿಯಾನ್ ಬೆನೆಟ್ ಹಿಡಿದ ಅತ್ಯದ್ಭುತ ಕ್ಯಾಚ್ ಮೂಲಕ ಎಂಬುದು ವಿಶೇಷ.

20ನೇ ಓವರ್​ನ ಐದನೇ ಎಸೆತದಲ್ಲಿ ನದೀಮ್ ಖಾನ್ ಡೀಪ್ ಮಿಡ್ ವಿಕೆಟ್​ನತ್ತ ಬಾರಿಸಿದ್ದರು. ಅತ್ತ ಬೌಂಡರಿ ಲೈನ್​ನಿಂದ ಓಡಿ ಬಂದ ಬ್ರಿಯಾನ್ ಬೆನೆಟ್ ಅದ್ಭುತ ಡೈವಿಂಗ್ ಮೂಲಕ ಚೆಂಡನ್ನು ಬಂಧಿಸಿದರು.

ಬ್ರಿಯಾನ್ ಬೆನೆಟ್ ಹಿಡಿದ ಈ ಅದ್ಭುತ ಕ್ಯಾಚ್ ನೋಡಿ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಕ್ಯಾಚ್ ಅನ್ನು 2026 ಟಿ20 ವಿಶ್ವಕಪ್​ನ ಬೆಸ್ಟ್ ಕ್ಯಾಚ್ ಎಂದು ಬಣ್ಣಿಸಲಾಗುತ್ತಿದೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಇದಕ್ಕಿಂತ ಉತ್ತಮ ಕ್ಯಾಚ್ ಹಿಡಿಯುವವರು ಯಾರು ಎಂಬ ಕುತೂಹಲ ಕೂಡ ಕ್ರಿಕೆಟ್ ಪ್ರೇಮಿಗಳಲ್ಲಿ ಮೂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 19.5 ಓವರ್​ಗಳಲ್ಲಿ 103 ರನ್​ ಬಾರಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನೆಟ್ 36 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು.

ಬೆನೆಟ್ ಅವರ ಈ ಜವಾಬ್ದಾರಿಯುತ ಇನಿಂಗ್ಸ್​ನೊಂದಿಗೆ ಝಿಂಬಾಬ್ವೆ ತಂಡವು 13.3 ಓವರ್​ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್​ಗಳ ಜಯ ಸಾಧಿಸಿದೆ. ಇನ್ನು ಝಿಂಬಾಬ್ವೆ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಈ ಪಂದ್ಯವು ಫೆಬ್ರವರಿ 13 ರಂದು ನಡೆಯಲಿದೆ.

ಇದನ್ನೂ ಓದಿ: IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಬಳಿಕ ಝಿಂಬಾಬ್ವೆ ಐರ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಂದರೆ ಝಿಂಬಾಬ್ವೆ ಆಸೀಸ್ ಪಡೆ ವಿರುದ್ಧ ಸೋತರೂ ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳನ್ನು ಮಣಿಸಿ ಸೂಪರ್-8 ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲೂ ಝಿಂಬಾಬ್ವೆ ಕಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Source link

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು ಈಗಲೂ ಸಿನಿಮಾದ ಮೀಮ್​​ಗಳು ಹರಿದಾಡುತ್ತಿರುತ್ತವೆ. ಇದೀಗ ‘ಆವೇಶಂ 2’ ಸಿನಿಮಾದ ಬಗ್ಗೆ ಅಪ್​​ಡೇಟ್ ಹೊರಬಿದ್ದಿದ್ದು ಫಹಾದ್ ಅವರು ಮತ್ತೆ ರಂಗನ ಪಾತ್ರದಲ್ಲಿ ಮಿಂಚಲಿದ್ದಾರೆ.

‘ಆವೇಶಂ’ ಸಿನಿಮಾ 2024ರ ಏಪ್ರಿಲ್ ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಮಲಯಾಳಂ ಮಾತ್ರವಲ್ಲ ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿಯೂ ಸೂಪರ್ ಹಿಟ್ ಆಗಿತ್ತು. ಒಟಿಟಿಯಲ್ಲಿ ಹಲವು ದಿನಗಳ ಕಾಲ ಟಾಪ್ ಟ್ರೆಂಡಿಂಗ್​​ನಲ್ಲಿತ್ತು ಸಿನಿಮಾ. ಆಗಿನಿಂದಲೂ ಸಿನಿಮಾದ ಸೀಕ್ವೆಲ್​​ಗಾಗಿ ಬೇಡಿಕೆ ಬರುತ್ತಲೇ ಇತ್ತು. ಫಹಾದ್ ಸಹ ‘ಆವೇಶಂ 2’ ಬಂದಲ್ಲಿ ನಟಿಸಲು ಉತ್ಸುಕನಾಗಿದ್ದೇನೆ ಎಂದು ಹಿಂದೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಇದೀಗ ಆ ಸಮಯ ಬಂದಿದೆ. ‘ಆವೇಶಂ 2’ ಸಿನಿಮಾ ನಿರ್ಮಾಣಗೊಳ್ಳುವುದು ಪಕ್ಕಾ ಆಗಿದ್ದು, ಫಹಾದ್ ಅವರು ಐಕಾನಿಕ್ ‘ರಂಗ’ ಪಾತ್ರದಲ್ಲಿ ಮತ್ತೊಮ್ಮೆ ಮಿಂಚಲಿದ್ದಾರೆ.

ಇದನ್ನೂ ಓದಿ:ಆಸ್ಕರ್ ವಿಜೇತ ನಿರ್ದೇಶಕನಿಗೆ ನೋ ಹೇಳಿದ ಫಹಾದ್ ಫಾಸಿಲ್

‘ಆವೇಶಂ’ ಸಿನಿಮಾ ಬಿಡುಗಡೆ ಆದಾಗ ಆ ಸಿನಿಮಾದ ತೆಲುಗು ರೀಮೇಕ್ ಬಗ್ಗೆ ಬಹಳ ಚರ್ಚೆಗಳು ನಡೆದಿದ್ದವು. ನಂದಮೂರಿ ಬಾಲಕೃಷ್ಣ ಅಥವಾ ರವಿತೇಜ ಅವರು ‘ಆವೇಶಂ’ ಸಿನಿಮಾ ರೀಮೇಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಕೈಗೂಡಿಲ್ಲ. ಇದೀಗ ಸಿನಿಮಾದ ಎರಡನೇ ಭಾಗವನ್ನೇ ಘೋಷಣೆ ಮಾಡಲಾಗಿದೆ. ಸ್ವತಃ ಫಹಾದ್ ಫಾಸಿಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿನಿಮಾದ ಚಿತ್ರೀಕರಣ 2027ರ ಅಂತ್ಯ ಅಥವಾ 2028ರ ಆರಂಭದಲ್ಲಿ ಚಿತ್ರೀಕರಣ ಪ್ರಾರಂಭ ಆಗಲಿದೆ ಎಂದಿದ್ದಾರೆ.

‘ಆವೇಶಂ’ ಸಿನಿಮಾದ ನಿರ್ದೇಶಕ ಜಿತು ಮಾಧವನ್ ಪ್ರಸ್ತುತ ತಮ್ಮ ಮೊದಲ ತಮಿಳು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ಸ್ಟಾರ್ ನಟ ಸೂರ್ಯ ನಾಯಕ. ಆ ಸಿನಿಮಾದ ಕತೆಯೂ ಬೆಂಗಳೂರಿನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಫಹಾದ್ ಫಾಸಿಲ್ ಕ್ಯಾಮಿಯೋ ಸಹ ಆ ಸಿನಿಮಾನಲ್ಲಿ ಇರಲಿದೆ ಎನ್ನಲಾಗುತ್ತಿದೆ. ಸೂರ್ಯ ಸಿನಿಮಾ ಬಿಡುಗಡೆ ಬಳಿಕವಷ್ಟೆ ‘ಆವೇಶಂ 2’ ಸಿನಿಮಾ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:45 am, Tue, 10 February 26

Source link

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ – Kannada News | Optical Illusion: If you are a genius, find the leopard hiding in the dense forest

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version