Bidadi Township: ವಿವಾದದ ನಡುವೆಯೂ ಬಿಡದಿ ಟೌನ್​ ಶಿಪ್​​​ಗೆ​ ಅಂತಿಮ ಅಧಿಸೂಚನೆ ಪ್ರಕಟ, ರೈತರ ಮುಂದೆ 2 ಆಯ್ಕೆ – Kannada News | Karnataka government notifies Land acquisition for bidadi township, here Is More Details

ಬೆಂಗಳೂರು, (ಜೂನ್ 12): ರೈತರ (Farmers) ವಿರೋಧದ ನಡುವೆಯೂ ರಾಜ್ಯ ಸರ್ಕಾರ (Karnataka Governmnet) ಬಿಡದಿ ಟೌನ್ ಶಿಪ್‌ಗೆ (Bidadi Township) ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ತಿಕ್ಕಾಟ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಈ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳ ಪೈಕಿ ಪ್ರಾರಂಭಿಕವಾಗಿ 3 ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ. ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯಲಿದ್ದು, ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿ ರೂಪಾಯಿವರೆಗೂ ದರ ನಿಗದಿ ಮಾಡಲಾಗಿದೆ.ಅಥವಾ ಶೇ.50ರಷ್ಟು ಅಭಿವೃದ್ಧಿ ಪಡಿಸಿರುವ ಭೂಮಿ ನೀಡಲು ಆದೇಶಿಸಲಾಗಿದೆ.

ಮುಖ್ಯಾಂಶಗಳು

  • ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರಕ್ಕೆ ಅಧಿಸೂಚನೆ
  • ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕು ವ್ಯಾಪ್ತಿಯ ಬಿಡದಿ
  • 3 ಗ್ರಾಮಗಳ ಒಟ್ಟು 519 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ
  • ಕೆಂಪಯ್ಯನಪಾಳ್ಯದ 384 ಎಕರೆ 22 ಗುಂಟೆ, ಮಂಡಲಹಳ್ಳಿಯ 71 ಎಕರೆ 13 ಗುಂಟೆ, ವಡೇರಹಳ್ಳಿಯ 63 ಎಕರೆ 10 ಗುಂಟೆ ಭೂಸ್ವಾಧೀನ.
  • ರಾಜಕೀಯ ತಿಕ್ಕಾಟ, ಪ್ರತಿಭಟನೆಗಳ ನಡುವೆ ಗರಾಭಿವೃದ್ಧಿ ಇಲಾಖೆಯಿಂದ ಅಧಿಸೂಚನೆ
  • ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿವರೆಗೂ ದರ ನಿಗದಿ

3 ಗ್ರಾಮಗಳ ಒಟ್ಟು 519 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದ್ದು,ಕೆಂಪಯ್ಯನಪಾಳ್ಯದ 384 ಎಕರೆ 22 ಗುಂಟೆ, ಮಂಡಲಹಳ್ಳಿಯ 71 ಎಕರೆ 13 ಗುಂಟೆ ಹಾಗೂ ವಡೇರಹಳ್ಳಿಯ 63 ಎಕರೆ 10 ಗುಂಟೆ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ತನ್ನ ಅಧಿಸೂಚನೆಯಲ್ಲಿ ಪ್ರಕಟಿಸಿದೆ.

ಇದನ್ನೂ ಓದಿ: ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು

ರೈತರ ಮುಂದೆ ಎರಡು ಆಯ್ಕೆ ಇಟ್ಟ ಸರ್ಕಾರ

ಬಿಡದಿ ಟೌನ್​ ಶಿಪ್​​​ಗಾಗಿ ಭೂಸ್ವಾಧೀನಕ್ಕೆ ಪರಿಹಾರವಾಗಿ ಪ್ರತಿ ಎಕರೆ ಭೂಮಿಗೆ ಕನಿಷ್ಠ 2.07 ಕೋಟಿ ರಿಂದ 2.5 ಕೋಟಿ ರೂಪಾಯಿ ವರೆಗೆ ನೀಡುವಂತೆ ಪ್ರಸ್ತಾಪಿಸಲಾಗಿದೆ. ಮತ್ತೊಂದು ಆಯ್ಕೆಯಾಗಿ, ಶೇ.50 ರಷ್ಟು ಅಭಿವೃದ್ಧಿಪಡಿಸಿದಭೂಮಿಯನ್ನು ರೈತರಿಗೆ ಹಿಂತಿರುಗಿಸಿ ನೀಡುವ ವ್ಯವಸ್ಥೆಯನ್ನೂ ಸರ್ಕಾರ ಮಾಡಿದೆ. ಅಂದರೆ, ರೈತರು ಹಣ ಅಥವಾ ಅಭಿವೃದ್ಧಿಪಡಿಸಿದ ಭೂಮಿ ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಲಾಗಿದ್ದು. ಆದ್ರೆ, ರೈತರ ನಡೆ ಏನು ಎನ್ನುವುದು ಕಾದುನೋಡಬೇಕಿದೆ.

ಒಟ್ಟು 754 ರೈತರ ಭೂಮಿ ಸ್ವಾಧೀನಕ್ಕೆ ನರ್ಧಾರ

ಒಟ್ಟು 754 ರೈತರ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ. ಈ ರೈತರಿಗೆ ತಮ್ಮ ಭೂಮಿಗೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ನಿರ್ದಿಷ್ಟ ಸಮಯದಲ್ಲಿ ಪರಿಹಾರವನ್ನು ಪಡೆಯಲು ಸೂಚಿಸಲಾಗಿದೆ. ಪ್ರತಿ ಎಕರೆಗೆ ಕನಿಷ್ಠ 2.14 ಕೋಟಿರೂ ದರ ನಿಗದಿ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಅಂದರೆ, ಇದಕ್ಕಿಂತ ಕಡಿಮೆ ದರಕ್ಕೆ ಭೂಮಿ ತೆಗೆದುಕೊಳ್ಳಬಾರದು ಎಂಬ ಭರವಸೆಯನ್ನು ಸರ್ಕಾರ ನೀಡಲು ಪ್ರಯತ್ನಿಸಿದೆ.

ರೈತರ ವಿರೋಧ, ಸ್ಥಳೀಯರ ಅಸಮಾಧಾನ ಇದ್ದರೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಸರ್ಕಾರದ ನಿಲುವು ಪ್ರಕಾರ, ಟೌನ್ ಶಿಪ್ ಯೋಜನೆ ಮೂಲಕ ಪ್ರದೇಶದಲ್ಲಿ ಅಭಿವೃದ್ಧಿ, ಮೂಲಸೌಕರ್ಯ, ಉದ್ಯೋಗಾವಕಾಶಗಳು ಹೆಚ್ಚುವುವು ಎಂದು ಹೇಳಲಾಗುತ್ತಿದೆ. ಆದರೆ ರೈತರಿಗೆ ತಮ್ಮ ಭೂಮಿ, ಜೀವನ, ಭವಿಷ್ಯ ಬಗ್ಗೆ ಆತಂಕ ಇದೆ.

ಕುಮಾರಸ್ವಾಮಿ ಹೇಳಿದ್ದೇನು?

ಇನ್ನು ಈ ಬಗ್ಗೆ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ, ಸರ್ಕಾರ ಫೈನಲ್ ನೋಟಿಫಿಕೇಶನ್ ಮಾಡಿದೆ. ಆದ್ರೆ, ಕಳೆದ 470 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಆ ಜಾಗದಲ್ಲಿ ಯಶಸ್ವಿಯಾಗಿ ಕೃಷಿ ಕೆಲಸ ನಡೆಯುತ್ತಿದೆ.ಇವತ್ತು ಅವರನ್ನ ಒಕ್ಕಲಿಬ್ಬಿಸುವ ಕೆಲಸವನ್ನು ಸರ್ಕಾರ ಅಲ್ಲಿ ಪ್ರತಿಭಟನೆ ಮಾಡ್ಲಿಕ್ಕೆ ಹೊರಟಿರುವ ರೈತರ ಮೇಲೆ ಎಫ್ಐಆರ್ ಹಾಕುತ್ತಾರೆ. ನಾನು ಈಗಿನ ಗೃಹ ಸಚಿವರ ಹೇಳಿಕೆಯನ್ನು ಗಮನಿಸಿದ್ದೇನೆ. ಯಾವುದು ಎಫ್​​​ಐಆರ್ ಹಾಕಿಲ್ಲ ಎಂದು ಈಗಿನ ಗೃಹ ಸಚಿವರು ಹೇಳುತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವವರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ನಡೆಸುತ್ತಿದೆ. ಇದರ ಜೊತೆಗೆ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಜನಪ್ರತಿನಿಧಿಗಳು ಕೂಡ ಸೇರ್ಕೊಂಡಿದ್ದಾರೆ. ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿದರೂ ಅದಕ್ಕೆ ರೈತರ ಒಪ್ಪಿಗೆ ಬೇಕು ಎಂದರು.

ರೈತರ ಭಾವನೆಗೆ ಬೆಲೆಕೊಟ್ಟು ಯೋಜನೆ ಸ್ಥಗಿತ ಮಾಡಿದ್ದೆ

ಯಾವುದೇ ಮೀಟಿಂಗ್ ಸಹ ಮಾಡಿಲ್ಲ. ಶೇ. 80% ಪರ್ಸೆಂಟ್ ರೈತರ ವಿರೋಧ ಇದೆ.ಸರ್ಕಾರ ನಾವು ಮಾಡಿದ್ದೇ ತೀರ್ಮಾನ ಅಂತ ದಬ್ಬಾಳಿಕೆಯಲ್ಲಿ ಹೊರಟಿದ್ದಾರೆ. ಹಲವು ಪ್ರದೇಶಗಳಲ್ಲಿ ಡ್ರೈ ಲ್ಯಾಂಡ್ ಏರಿಯಾ ಇದೆ. ಅದನ್ನ ಐಡೆಂಟಿಫೈ ಮಾಡಿ ಇವತ್ತಿನ ಸಮಸ್ಯೆಗೆ ಜಾಗಗಳನ್ನು ಹುಡುಕಿ. ಈ ಹಿಂದೆ 2006ರಲ್ಲಿ ಐದು ಟೌನ್ ಶಿಪ್ ಮಾಡಬೇಕು ಅಂತ ನಿರ್ಧಾರ ಮಾಡಿದ್ದೆ.ಅದಕ್ಕೆ ರೈತರ ವಿರೋಧ ಬಂದಿತ್ತು. ಬೆಂಗಳೂರಲ್ಲಿ ಜನ ಸಂದಣಿ ಜಾಸ್ತಿಯಾಗಿದೆ. ಅದಕ್ಕಾಗಿ ಸುತ್ತ ಮೂವತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಟೌನ್ ಶಿಪ್ ಪ್ಲಾನಿಂಗ್ ಮಾಡಿದ್ದೆ. ಕಾಂಗ್ರೆಸ್ ಅವರು ಇದಕ್ಕೆ ವಿರೋಧ ಮಾಡಿದ್ರು. ಅವರ ವಿರೋಧ ಹಾಗೂ ರೈತರ ಭಾವನೆಗೆ ಬೆಲೆಕೊಟ್ಟು ಯೋಜನೆಯನ್ನು ಸ್ಥಗಿತ ಮಾಡಿದ್ದೆ ಎಂದು ಸ್ಪಷ್ಟಪಡಿಸಿದರು.

ಈಗ ಬೆಂಗಳೂರು ದಕ್ಷಿಣ ಅಂತ ಮಾಡಿ ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಈಗ ಅಲ್ಲಿನ ರೈತರಿಗೆ ಇರುವಂತದ್ದು ಕಾನೂನು ಹೋರಾಟ ಮಾಡಬೇಕು ಅಂತ. ಪ್ರಿಯಾಂಕ ಖರ್ಗೆ ಅವರು ಸಹ ಹೇಳಿದ್ದಾರೆ ಕಾನೂನು ಹೋರಾಟ ಮಾಡಲಿ ಎಂದು. ಇದರಿಂದ ರೈತರ ಬಗ್ಗೆ ಎಷ್ಟು ಗೌರವ ಇದೆ ಎಂದು ಗೊತ್ತಾಗುತ್ತೆ. ದೊಡ್ಡಬಳ್ಳಾಪುರ ಭಾಗದಲ್ಲಿ ಕೂಡ ರೈತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು.

Published On – 4:00 pm, Fri, 12 June 26

Source link

ಕೊಲ್ಕತ್ತಾದ ಸರ್ಕಾರಿ ಕಟ್ಟಡದಲ್ಲಿ ಅತಿದೊಡ್ಡ ಬೆಂಕಿ ಅವಘಡ; 4,000 ಇವಿಎಂಗಳು ಸುಟ್ಟು ಕರಕಲು – Kannada News | 4000 EVMs destroyed in Kolkata government building massive fire

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದಲ್ಲಿ 4,000 ಇವಿಎಂ (EVM) ಯಂತ್ರಗಳು ನಾಶವಾಗಿವೆ. ಕೊಲ್ಕತ್ತಾದ ಸರ್ಕಾರಿ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು (EVM) ಸುಟ್ಟು ಕರಕಲಾಗಿವೆ ಎಂದು ಪಶ್ಚಿಮ ಬಂಗಾಳದ ಸಚಿವ ಕೌಶಿಕ್ ಚೌಧರಿ ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ದಕ್ಷಿಣ ಕೊಲ್ಕತ್ತಾದ ಅಲಿಪೋರ್ ಪ್ರದೇಶದಲ್ಲಿರುವ 9 ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭೀಕರ ಬೆಂಕಿ ಕಾಣಿಸಿಕೊಂಡಿತ್ತು. ಈ ಬೃಹತ್ ಕಟ್ಟಡದಲ್ಲಿ ದಕ್ಷಿಣ 24 ಪರಗಣ ಜಿಲ್ಲಾ ಪರಿಷತ್ ಕಚೇರಿ ಸೇರಿದಂತೆ ಇತರ ಇಲಾಖೆಗಳ ಕಚೇರಿಗಳೂ ಕಾರ್ಯನಿರ್ವಹಿಸುತ್ತಿದ್ದವು.

“ಬೆಂಕಿಯ ಜ್ವಾಲೆಗೆ ಸುಮಾರು 4,000 ಇವಿಎಂ ಯಂತ್ರಗಳು ನಾಶವಾಗಿವೆ. ಈ ವರ್ಷ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 10 ಮತಕ್ಷೇತ್ರಗಳಲ್ಲಿ ಈ ಇವಿಎಂಗಳನ್ನು ಬಳಸಲಾಗಿತ್ತು,” ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ರಾಜ್ಯ ಸಚಿವರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಸಚಿವ ಕೌಶಿಕ್ ಚೌಧರಿ, “ಇದು ಸಾಮಾನ್ಯ ಅಗ್ನಿ ಆಕಸ್ಮಿಕದಂತೆ ಕಂಡುಬರುತ್ತಿಲ್ಲ. ಇದರ ಹಿಂದೆ ಏನಾದರೂ ಪಿತೂರಿ ಇದೆಯೇ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ. ಕಟ್ಟಡದ ಮೇಲಿನ ಅಂತಸ್ತುಗಳಿಗೆ ಬೆಂಕಿ ಹೇಗೆ ತಲುಪಿತು ಎಂಬುದು ಇನ್ನು ಸ್ಪಷ್ಟವಾಗಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಓಮನ್ ಕರಾವಳಿಯಲ್ಲಿ 24 ಭಾರತೀಯ ನಾವಿಕರಿದ್ದ ಹಡಗಿನಲ್ಲಿ ಬೆಂಕಿ ಅವಘಡ

ಮೊದಲಿಗೆ ಕಟ್ಟಡದ ಎರಡನೇ ಮತ್ತು ಮೂರನೇ ಅಂತಸ್ತುಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. “4, 5 ಮತ್ತು 6ನೇ ಅಂತಸ್ತುಗಳಿಗೆ ಯಾವುದೇ ಹಾನಿ ಮಾಡದ ಬೆಂಕಿ, ನೇರವಾಗಿ 7 ಮತ್ತು 8ನೇ ಅಂತಸ್ತುಗಳಿಗೆ ಹೇಗೆ ಹರಡಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಬೆಂಕಿ ಕಾಣಿಸಿಕೊಂಡ ಸುಮಾರು 24 ಗಂಟೆಗಳ ನಂತರವೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.

ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೋರಿ ದಕ್ಷಿಣ 24 ಪರಗಣ ಜಿಲ್ಲಾಡಳಿತವು ಅಲಿಪೋರ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದೆ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಈ ದೂರು ದಾಖಲಿಸಿದ್ದು, ಇದರ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ನೋಂದಾಯಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಯಾವುದೇ ಕಾರಣದಿಂದ ಬೆಂಕಿ ಸಂಭವಿಸಿದೆಯೇ ಎಂಬುದನ್ನು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಆದರೆ, ಸದ್ಯಕ್ಕೆ ಈ ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಬೆಂಕಿ ದುರಂತ; ಹೋಟೆಲ್ ಮಾಲೀಕ ಬಂಧನ, ನ್ಯಾಯಾಂಗ ತನಿಖೆಗೆ ಆದೇಶ

ಹಲವಾರು ಅಂತಸ್ತುಗಳಿಗೆ ಬೆಂಕಿ ಹರಡಿದ ಜಾಲದ ಶೈಲಿಯನ್ನು ತನಿಖಾಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿರುವುದರಿಂದ, ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಕಟ್ಟಡದ ಸುತ್ತಮುತ್ತ ಕಣ್ಗಾವಲು ಹೆಚ್ಚಿಸಿದ್ದಾರೆ. ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿಯ ಮೂಲವನ್ನು ಪತ್ತೆಹಚ್ಚಲು ಮಾದರಿಗಳನ್ನು ಸಂಗ್ರಹಿಸುವ ನಿರೀಕ್ಷೆಯಿದೆ. ಈ ಬೆಂಕಿ ದುರಂತ ಕೇವಲ ಆಕಸ್ಮಿಕವೇ ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯವೇ ಎಂಬುದನ್ನು ನಿರ್ಧರಿಸಲು ಫೋರೆನ್ಸಿಕ್ ವರದಿ ಅತ್ಯಂತ ಪ್ರಮುಖವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯು ರಾಜಕೀಯ ವಲಯದಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಪಿತೂರಿಯ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದರೆ, ಬಿಜೆಪಿ ನಾಯಕ ರಾಕೇಶ್ ಸಿಂಗ್ ಇದು ಪೂರ್ವಯೋಜಿತ ಕೃತ್ಯ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಮಗಳು ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ಸರ್ಪ್ರೈಸ್ ಕೊಟ್ಟ ತಂದೆ, ಇದೇ ನೋಡಿ ತಂದೆ ಪ್ರೀತಿ – Kannada News | Father surprises daughter by giving her entry into his office

ಅಪ್ಪ ಮಗಳ (father- daughter) ಬಾಂಧವ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಗಳ ಪಾಲಿಗೆ ಅಪ್ಪ ಎಲ್ಲವೂ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಮಗಳಿಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ತಂದೆಯೊಬ್ಬರು ಮಗಳಿಗೆ ಸರ್ಪ್ರೈಸ್ ನೀಡಿ ಅಚ್ಚರಿ ಮೂಡಿಸಿದ್ದಾರೆ. ಮಗಳು ಕೆಲಸ ಮಾಡುವ ಸ್ಥಳಕ್ಕೆ ಹೂಗುಚ್ಛ ಹಿಡಿದುಕೊಂಡು ಬಂದ ತಂದೆಯನ್ನು ನೋಡಿ ಮಗಳು ಆಶ್ಚರ್ಯ ಚಕಿತಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕವಿಯಾ (kaviyaa.dr_) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೃದಯ ಸ್ಪರ್ಶಿ ಕ್ಷಣದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮಗಳು ಕೆಲಸಕ್ಕೆ ಸೇರಿದ ಒಂದೇ ವಾರಕ್ಕೆ ತಂದೆಯೊಬ್ಬರು ಸರ್ಪ್ರೈಸ್ ನೀಡಿರುವುದನ್ನು ನೀವು ನೋಡಬಹುದು. ನಾನು ಒಂದು ವಾರದ ಹಿಂದೆಯಷ್ಟೇ ಕೆಲಸಕ್ಕೆ ಸೇರಿಕೊಂಡೆ. ನನ್ನ ತಂದೆ ಇಂದು ನನ್ನ ಕಚೇರಿಗೆ ನನ್ನನ್ನು ಭೇಟಿ ಮಾಡಲು ಬಂದರು ಎನ್ನುವುದರೊಂದಿಗೆ ಈ ವಿಡಿಯೋ ಪ್ರಾರಂಭವಾಗುತ್ತದೆ.

ವೈರಲ್ ವಿಡಿಯೋ ಇಲ್ಲಿದೆ

ಕವಿಯಾ ತನ್ನ ಆಫೀಸಿನ ಒಳಗೆ ಇದ್ದಾಗ ತಂದೆ ಕಿಟಕಿಯಿಂದ ಹೊರಗೆ ನೋಡಲು ಹೇಳಿದ್ದಾರೆ. ಆಕೆ ಕೆಳಗೆ ನೋಡಿದಾಗ, ತನ್ನ ಅಪ್ಪನು ಕಟ್ಟಡದ ಹೊರಗೆ ಕೈಯಲ್ಲಿ ಹೂಗುಚ್ಛದೊಂದಿಗೆ ನಿಂತಿರುವುದನ್ನು ಗಮನಿಸಿದ್ದಾಳೆ. ಬಹಳ ಉತ್ಸುಕತೆ ಹಾಗೂ ಆಶ್ಚರ್ಯದಿಂದ ತಂದೆಯನ್ನು ಭೇಟಿಯಾಗಲು ಕೆಳಗೆ ಧಾವಿಸುವುದನ್ನು ನೀವು ನೀಡಬಹುದು. ಆ ಬಳಿಕ ತಂದೆ ಹೂಗುಚ್ಛ, ಚೀಟಿ ಹಾಗೂ ಚಾಕೊಲೇಟ್ ನ್ನು ನೀಡಿರುವುದನ್ನು ನೀವು ಗಮನಿಸಬಹುದು.

ಈ ಚೀಟಿಯಲ್ಲಿ ನಾನು ಆಫೀಸ್ ಪರಿಶೀಲಿಸಲು ಇಲ್ಲಿಗೆ ಬಂದಿಲ್ಲ. ನನ್ನ ಮಗಳು ತನ್ನ ವೃತ್ತಿಜೀವನವನ್ನು ಎಲ್ಲಿ ನಿರ್ಮಿಸಲು ಪ್ರಾರಂಭಿಸಿದ್ದಾಳೆಂದು ನೋಡಲು ನಾನು ಇಲ್ಲಿದ್ದೇನೆ ಎಂಬ ಸಂದೇಶವನ್ನು ಬರೆಯಲಾಗಿದೆ. ಅಪ್ಪನ ಕಾಳಜಿಯುತ ಸಂದೇಶವು ಮಗಳನ್ನು ಭಾವುಕಳಾಗಿಸಿದೆ. ಕವಿಯಾ ತನ್ನ ತಂದೆಗೆ ಬಹಳ ಹೆಮ್ಮೆಯಿಂದ ತನ್ನ ಆಫೀಸಿನ ಕಟ್ಟಡವನ್ನು ತೋರಿಸಿರುವುದನ್ನು ಕಾಣಬಹುದು. ಈ ವಿಡಿಯೋದ ಕೊನೆಗೆ ಮಗಳು ತನ್ನ ತಂದೆಯ ಜತೆಗೆ ಸೆಲ್ಫಿಗೆ ಪೋಸ್ ಕೊಟ್ಟಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ: ಹೆತ್ತವರಿಗೆ ತಾನು ಕೆಲಸ ಮಾಡುವ ಬೆಂಗಳೂರಿನ ಮೈಕ್ರೋಸಾಫ್ಟ್ ಆಫೀಸ್ ತೋರಿಸಿದ ಉದ್ಯೋಗಿ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಪ್ಪನ ಪ್ರೀತಿಯೇ ಹಾಗೆ, ಮಕ್ಕಳ ಯಶಸ್ಸಿನಲ್ಲಿ ತಂದೆಯ ಖುಷಿ ಅಡಗಿದೆ ಎಂದಿದ್ದಾರೆ. ಇನ್ನೊಬ್ಬರು, ನಿಮ್ಮ ಸಂತೂರ್ ತಂದೆಯ ಹಿಂದಿನ ರಹಸ್ಯವೇನು ಎಂದು ಕೇಳಿದ್ದಾರೆ. ಮತ್ತೊಬ್ಬರು, ಇದುವರೆಗಿನ ಅತ್ಯಂತ ಸಂತೋಷಕರ ವಿಷಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಷೇರುಬಜಾರಿನಲ್ಲಿ ಭಾರಿ ಗೂಳಿ ಓಟ; ಗರಿಬಿಚ್ಚಿದ ಸೆನ್ಸೆಕ್ಸ್, ನಿಫ್ಟಿ; ಮಾರುಕಟ್ಟೆಯ ಭರ್ಜರಿ ಆಟಕ್ಕೆ ಕಾರಣಗಳೇನು? – Kannada News | Indian Stock Market Surges: Sensex Jumps 1700 Pts, Nifty Crosses 23600 – Why?

ನವದೆಹಲಿ, ಜೂನ್ 12: ಭಾರತೀಯ ಷೇರು ಮಾರುಕಟ್ಟೆ (India Stock Market) ಇಂದು ಶುಕ್ರವಾರ ಭಾರಿ ಏರಿಕೆ ಕಂಡಿದೆ. ಬಿಎಸ್‌ಇ ಸೆನ್ಸೆಕ್ಸ್ (BSE Sensex) ಸುಮಾರು 1,700 ಅಂಕಗಳಷ್ಟು ಜಿಗಿತ ಸಾಧಿಸಿದರೆ, ಎನ್‌ಎಸ್‌ಇ ನಿಫ್ಟಿ (NSE Nifty 50) ಮತ್ತೆ 23,600 ರ ಮಟ್ಟವನ್ನು ದಾಟಿದೆ. ಈ ಭರ್ಜರಿ ಚೇತರಿಕೆಯಿಂದಾಗಿ ಹೂಡಿಕೆದಾರರ ಸಂಪತ್ತು ಒಂದೇ ದಿನದಲ್ಲಿ ಸುಮಾರು 7 ಲಕ್ಷ ಕೋಟಿ ರೂಗಿಂತಲೂ ಹೆಚ್ಚು ಹೆಚ್ಚಾಗಿದೆ. ಮಾರುಕಟ್ಟೆ ಇವತ್ತು ಶೇ. 2ರಷ್ಟು ಜಿಗಿತ ಕಂಡಿರುವುದು ವಿಶೇಷ. ಸೆನ್ಸೆಕ್ಸ್ 75,527 ಅಂಕಗಳೊಂದಿಗೆ ಟ್ರೇಡಿಂಗ್ ಮುಗಿಸಿದೆ. ನಿಫ್ಟಿ ಸೂಚ್ಯಂಕ 23,622 ಅಂಕಗಳೊಂದಿಗೆ ಅಂತ್ಯಗೊಂಡಿದೆ. ಭಾರತದ ಷೇರು ಮಾರುಕಟ್ಟೆ ಈ ಪರಿ ಭರ್ಜರಿ ಏರಿಕೆಗೆ ಏನು ಕಾರಣ? ಇಲ್ಲಿದೆ ಡೀಟೇಲ್ಸ್.

ಯುಎಸ್-ಇರಾನ್ ಶಾಂತಿ ಒಪ್ಪಂದದ ಭರವಸೆ

ಜಾಗತಿಕವಾಗಿ ಹೂಡಿಕೆದಾರರ ಉತ್ಸಾಹ ಹೆಚ್ಚಾಗಲು ಪ್ರಮುಖ ಕಾರಣ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ. ಅಮೆರಿಕ ಮತ್ತು ಇರಾನ್ ನಡುವೆ ಈ ವಾರಾಂತ್ಯದಲ್ಲೇ ಶಾಂತಿ ಒಪ್ಪಂದ ಏರ್ಪಡಬಹುದು ಎಂದು ಟ್ರಂಪ್ ಸುಳಿವು ನೀಡಿದ್ದಾರೆ. ಇದು ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಭರವಸೆ ಮೂಡಿಸಿದೆ.

ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಕುಸಿತ

ಯುದ್ಧದ ಆತಂಕ ದೂರವಾಗುತ್ತಿರುವ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ (Crude Oil) ಬೆಲೆ ಬ್ಯಾರೆಲ್‌ಗೆ 88.80 ಡಾಲರ್‌ಗೆ ಕುಸಿದಿದೆ. ಇದು ಕಳೆದ ಎರಡು ತಿಂಗಳಲ್ಲೇ ಅತ್ಯಂತ ಕನಿಷ್ಠ ಮಟ್ಟವಾಗಿದೆ. ತೈಲ ಬೆಲೆ ಇಳಿಕೆಯು ಭಾರತದಂತಹ ದೊಡ್ಡ ಆಮದು ದೇಶದ ಆರ್ಥಿಕತೆಗೆ ವರದಾನವಾಗಿದೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ

ಜಾಗತಿಕ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ಟ್ರೆಂಡ್

ಟ್ರಂಪ್ ಅವರ ಶಾಂತಿ ಸಂಕೇತದಿಂದಾಗಿ ಏಷ್ಯಾದ ಪ್ರಮುಖ ಷೇರು ಮಾರುಕಟ್ಟೆಗಳಾದ ಜಪಾನ್‌ನ ಟೋಪಿಕ್ಸ್ (Topix), ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಮತ್ತು ಆಸ್ಟ್ರೇಲಿಯಾದ ಮಾರುಕಟ್ಟೆಗಳು ಶೇಕಡಾ 1 ರಿಂದ 1.5 ರಷ್ಟು ಏರಿಕೆ ಕಂಡವು. ಯುಎಸ್ ಮಾರುಕಟ್ಟೆಯ ಫ್ಯೂಚರ್ಸ್ ಕೂಡ ಲಾಭದಲ್ಲಿದ್ದವು.

ಬಲಗೊಂಡ ಭಾರತೀಯ ರೂಪಾಯಿ

ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು 60 ಪೈಸೆಗಿಂತಲೂ ಹೆಚ್ಚು ಜಿಗಿತ ಕಂಡು 95.25 ರೂ. ಮಟ್ಟದಲ್ಲಿ ವಹಿವಾಟು ಆರಂಭಿಸಿತು. ರೂಪಾಯಿ ಬಲಗೊಂಡಿರುವುದು ವಿದೇಶಿ ಹೂಡಿಕೆದಾರರಲ್ಲಿ (FIIs) ಭಾರತೀಯ ಮಾರುಕಟ್ಟೆಯ ಮೇಲಿನ ನಂಬಿಕೆಯನ್ನು ಹೆಚ್ಚಿಸಿದೆ.

ಆರ್‌ಬಿಐ (RBI) ತೆಗೆದುಕೊಂಡ ಮಹತ್ವದ ಕ್ರಮಗಳು

ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಮತ್ತು ರೂಪಾಯಿ ಮೌಲ್ಯಕ್ಕೆ ಬೆಂಬಲ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ ಕೆಲವು ಪ್ರಮುಖ ನೀತಿ ಕ್ರಮಗಳನ್ನು ಪ್ರಕಟಿಸಿದೆ. ಇದು ಕೂಡ ಮಾರುಕಟ್ಟೆಯ ಇಂದಿನ ಮುನ್ನಡೆಗೆ ಮತ್ತೊಂದು ಪ್ರಮುಖ ಶಕ್ತಿಯಾಗಿದೆ.

ಇದನ್ನೂ ಓದಿ: ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ

ಬ್ಯಾಂಕಿಂಗ್, ಆಟೋಮೊಬೈಲ್, ಮೆಟಲ್ ಮತ್ತು ಐಟಿ ಸೇರಿದಂತೆ ಎಲ್ಲಾ ವಲಯದ ಷೇರುಗಳೂ ಇಂದು ಹಸಿರು ನಿಶಾನೆ (ಲಾಭ) ಕಂಡಿವೆ. ಶ್ರೀರಾಮ್ ಫೈನಾನ್ಸ್, ಟ್ರೆಂಟ್, ಎಲ್‌ಆಂಡ್‌ಟಿ ಮತ್ತು ಬಜಾಜ್ ಫೈನಾನ್ಸ್ ಪ್ರಮುಖ ಲಾಭ ಗಳಿಸಿದ ಷೇರುಗಳಾಗಿವೆ. ನಿಫ್ಟಿ ಬ್ಯಾಂಕ್ ಬಹುತೇಕ ಶೇ. 3ರ ಸಮೀಪದಷ್ಟು ಹೆಚ್ಚಳ ಕಂಡಿದೆ. ನಿಫ್ಟಿ ಫಿನಾನ್ಷಿಯಲ್ ಸರ್ವಿಸ್ ಇಂಡೆಕ್ಸ್ ಸಾಧಿಸಿದ ಹೆಚ್ಚಳವು ಶೇ. 3 ಅನ್ನು ದಾಟಿ ಹೋಗಿದೆ. ಬಿಎಸ್​ಇನಲ್ಲೂ ಬ್ಯಾಂಕ್ ಮತ್ತು ಹಣಕಾಸು ಸೇವೆಗಳ ಸೂಚ್ಯಂಕಗಳು ಸಖತ್ ಹಿಗ್ಗಿವೆ. ಹೆಚ್ಚಿನ ಇಂಡೆಕ್ಸ್​ಗಳು ಪಾಸಿಟಿವ್ ಇವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸೆಪ್ಟೆಂಬರ್ 21ರಿಂದ ‘ಬಿಗ್ ಬಾಸ್ 20’ ಆರಂಭ: ಈ ಬಾರಿಯೂ ಸಲ್ಮಾನ್ ಖಾನ್ ನಿರೂಪಣೆ – Kannada News | Salman Khan to host Bigg Boss Season 20 Premiere Date and contestants update

ಭಾರತೀಯ ಕಿರುತೆರೆಯಲ್ಲಿ ಅತ್ಯಂತ ಜನಪ್ರಿಯ ಹಾಗೂ ಯಶಸ್ವಿ ರಿಯಾಲಿಟಿ ಶೋ ಆಗಿ ಹೊರಹೊಮ್ಮಿರುವ ‘ಬಿಗ್ ಬಾಸ್’ (Bigg Boss) ಈಗ ತನ್ನ ಹೊಸ ಅಧ್ಯಾಯಕ್ಕೆ ಸಜ್ಜಾಗುತ್ತಿದೆ. ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ (Salman Khan) ನಡೆಸಿಕೊಡುವ ಈ ಶೋ, ಪ್ರತಿ ಬಾರಿಯಂತೆ ಈ ಬಾರಿಯೂ ಭಾರಿ ಸದ್ದು ಮಾಡಲು ರೆಡಿಯಾಗಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ 19ನೇ ಸೀಸನ್ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ಗೌರವ್ ಖನ್ನಾ, ಫರ್ಹಾನಾ ಭಟ್, ಅಮಾಲ್ ಮಲ್ಲಿಕ್, ತಾನ್ಯಾ ಮಿತ್ತಲ್ ಮತ್ತು ಬಸೀರ್ ಅಲಿ ಅವರಂತಹ ಸ್ಪರ್ಧಿಗಳ ಆಟದಿಂದಾಗಿ ಕಳೆದ ಸೀಸನ್ ಸಖತ್ ಹೈಲೈಟ್ ಆಗಿತ್ತು. ಈಗ ಬಿಗ್ ಬಾಸ್ ಇತಿಹಾಸದಲ್ಲೇ ಮೈಲಿಗಲ್ಲಾಗಲಿರುವ 20ನೇ ಸೀಸನ್ ಅನ್ನು ಮತ್ತಷ್ಟು ರೋಮಾಂಚನಕಾರಿಯಾಗಿ ಮತ್ತು ಅದ್ಧೂರಿಯಾಗಿ ಪ್ರಸಾರ ಮಾಡಲು ವಾಹಿನಿ ಪ್ಲಾನ್ ಮಾಡಿದೆ.

‘ವೆರೈಟಿ ಇಂಡಿಯಾ’ ವರದಿಯ ಪ್ರಕಾರ, ಬಿಗ್ ಬಾಸ್ 20ನೇ ಸೀಸನ್ ಸೆಪ್ಟೆಂಬರ್ 21ರಂದು ಅದ್ಧೂರಿಯಾಗಿ ಪ್ರೀಮಿಯರ್ ಆಗಲಿದೆ. ಬಿಗ್ ಬಾಸ್ ಸೆಟ್‌ಗೆ ಮರಳುವ ಮುನ್ನ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಬಿಗ್ ಬಜೆಟ್ ಆ್ಯಕ್ಷನ್-ಥ್ರಿಲ್ಲರ್ ಸಿನಿಮಾದ ಪ್ರಮುಖ ಭಾಗದ ಚಿತ್ರೀಕರಣವನ್ನು ಮುಗಿಸಲು ನಿರ್ಧರಿಸಿದ್ದಾರೆ. ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ನಿರ್ದೇಶಿಸುತ್ತಿರುವ, ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಸೌತ್ ಸೂಪರ್‌ಸ್ಟಾರ್ ನಯನತಾರಾ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಲ್ಮಾನ್ ಖಾನ್ ಅವರ ಮ್ಯಾನೇಜ್‌ಮೆಂಟ್ ತಂಡವು ಬಹಳ ಅಚ್ಚುಕಟ್ಟಾಗಿ ಡೇಟ್ಸ್ ಪ್ಲಾನ್ ಮಾಡುತ್ತಿದ್ದು, ಸಿನಿಮಾದ ಶೂಟಿಂಗ್ ಯಾವುದೇ ತೊಂದರೆಯಿಲ್ಲದೆ ಸಾಗುವಂತೆ ನೋಡಿಕೊಳ್ಳುವುದರ ಜೊತೆಗೆ ಬಿಗ್ ಬಾಸ್ ಶೋ ನಡೆಸಿಕೊಡಲು ಸಲ್ಲುಗೆ ಸಾಕಷ್ಟು ಸಮಯ ಸಿಗುವಂತೆ ವೇಳಾಪಟ್ಟಿ ಸಿದ್ಧಪಡಿಸುತ್ತಿದೆ ಎನ್ನಲಾಗಿದೆ. ಇದು 20ನೇ ಸೀಸನ್ ಆದ್ದರಿಂದ ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷೆ ಇದೆ.

ಬಿಗ್ ಬಾಸ್ 20ರ ಪೂರ್ವಭಾವಿ ಕೆಲಸಗಳು ಈಗಾಗಲೇ ಜೋರಾಗಿ ನಡೆಯುತ್ತಿವೆ. ಆಡಿಷನ್ ಮತ್ತು ಸ್ಪರ್ಧಿಗಳ ಶಾರ್ಟ್‌ಲಿಸ್ಟ್ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದ್ದು, ಕಾಸ್ಟಿಂಗ್ ಟೀಮ್ ಈಗಾಗಲೇ ಕಿರುತೆರೆಯ ಹಲವು ಪ್ರಮುಖ ಸೆಲೆಬ್ರಿಟಿಗಳನ್ನು ಸಂಪರ್ಕಿಸಿದೆ. ವಿಶೇಷವೆಂದರೆ, ಈ ಬಾರಿ ಕೇವಲ ಸಾಂಪ್ರದಾಯಿಕ ಟಿವಿ ಸೆಲೆಬ್ರಿಟಿಗಳಿಗಷ್ಟೇ ಸೀಮಿತವಾಗದೆ, ಸೋಶಿಯಲ್ ಮೀಡಿಯಾ ಹಾಗೂ ಒಟಿಟಿ ಲೋಕದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಯುವ ತಲೆಮಾರಿನ ಸ್ಪರ್ಧಿಗಳನ್ನು ಮನೆಗೆ ಕರೆತರಲು ಬಿಗ್ ಬಾಸ್ ತಂಡ ಮುಂದಾಗಿದೆ.

ಇದನ್ನೂ ಓದಿ: ಬಂದೇ ಬಿಡ್ತು ಬಿಗ್ ಬಾಸ್ ಹೊಸ ಸೀಸನ್: ಸರ್ಪ್ರೈಸ್ ನೀಡಿದ ‘ಕಲರ್ಸ್ ಕನ್ನಡ’

ಸ್ಟ್ರೀಮಿಂಗ್ ಆ್ಯಪ್ಸ್ ಹಾಗೂ ಇತರೆ ರಿಯಾಲಿಟಿ ಶೋಗಳ ಮೂಲಕ ಯುವ ವೀಕ್ಷಕರನ್ನು ಸೆಳೆಯುವುದು ವಾಹಿನಿಯ ಮುಖ್ಯ ಉದ್ದೇಶವಾಗಿದೆ. ಅಲ್ಲದೆ, ಈ ಹಿಂದಿನ ಸೀಸನ್‌ಗಳ ಕೆಲವು ಪರಿಚಿತ ಮುಖಗಳು ಕೂಡ ಈ ಬಾರಿ ಮರುಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯಕ್ಕೆ ಶೋನ ಈ ಬಾರಿಯ ಥೀಮ್ ಏನು ಎಂಬುದನ್ನು ಸಸ್ಪೆನ್ಸ್ ಆಗಿ ಇಡಲಾಗಿದ್ದು, ಪ್ರೀಮಿಯರ್ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಅಂತಿಮ ಸ್ಪರ್ಧಿಗಳ ಪಟ್ಟಿ ಮತ್ತು ಬಿಗ್ ಟ್ವಿಸ್ಟ್‌ಗಳು ರಿವೀಲ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಿರ್ದೇಶಕನಿಗೆ ಐಶಾರಾಮಿ ಕಾರು ಕೊಟ್ಟು ಗಾಸಿಪ್​​ಗೆ ತೆರೆ ಎಳೆದ ನಟ ಸೂರ್ಯ – Kannada News | Actor Suriya gifted SUV car to Karuppu movie director RJ Balaji

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ (Suriya) ಕಳೆದ ಕೆಲ ವರ್ಷಗಳಿಂದ ಹಿಟ್ ಸಿನಿಮಾ ನೀಡಿರಲಿಲ್ಲ. ಅವರು ನಟಿಸಿದ್ದ ‘ಇಟಿ’, ‘ಕಂಗುವ’ ಮತ್ತು ‘ರೆಟ್ರೊ’ ಸಿನಿಮಾಗಳು ಒಂದರ ಹಿಂದೊಂದರಂತೆ ಸೋತವು. ಸೂರ್ಯ ಅವರಿಗೆ ಹಿಟ್ ಸಿನಿಮಾದ ತೀವ್ರ ಅವಶ್ಯಕತೆ ಇತ್ತು. ಆ ಅವಶ್ಯಕತೆಯನ್ನು ಪೂರ್ಣಗೊಳಿಸಿದೆ ‘ಕರುಪ್ಪು’ ಸಿನಿಮಾ. ಆರ್​​ಜೆ ಬಾಲಾಜಿ ನಿರ್ದೇಶನದ ‘ಕರುಪ್ಪು’ ಸಿನಿಮಾ ದೊಡ್ಡ ಹಿಟ್ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಸುಮಾರು 400 ಕೋಟಿ ರೂಪಾಯಿ ಹಣ ಗಳಿಸಿದೆ. ಇದೀಗ ತಮಗೆ ಹಿಟ್ ಕೊಟ್ಟ ನಿರ್​ದೇಶಕನಿಗೆ ಐಶಾರಾಮಿ ಎಸ್​​ಯುವಿ ಕಾರೊಂದನ್ನು ನಟ ಸೂರ್ಯ ಉಡುಗೊರೆಯಾಗಿ ನೀಡಿದ್ದಾರೆ. ಮಾತ್ರವಲ್ಲದೆ, ಅದರಲ್ಲಿ ನಿರ್ದೇಶಕನನ್ನು ಕರೆದುಕೊಂಡು ನಗರದಲ್ಲಿ ರೌಂಡ್ ಸಹ ಹೊಡೆದಿದ್ದಾರೆ.

ಬಾಲಾಜಿ ಅವರಿಗೆ ಸೂರ್ಯ ಅವರು ಟೊಯೊಟಾ ಇನ್ನೋವ ಹೈಕ್ರಾಸ್ ಟಾಪ್ ಎಂಡ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಖುದ್ದು ಅವರೇ ಸೂರ್ಯ ಅವರನ್ನು ಕರೆದುಕೊಂಡು ಹೊಸ ಕಾರಿನಲ್ಲಿ ರೌಂಡ್ ಹೊಡೆಸಿದ್ದಾರೆ. ವಿಡಿಯೋ ಅನ್ನು ನಿರ್ದೇಶಕ ಬಾಲಾಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೋಂಡಿದ್ದಾರೆ. ಆರ್​​ಜೆ ಬಾಲಾಜಿ, ‘ತುಂಬಾ ಚೆನ್ನಾಗಿದೆ ಸರ್, ತುಂಬಾ ಥ್ಯಾಂಕ್ಸ್’ ಎಂದು ಸೂರ್ಯ ಅವರಿಗೆ ಹೇಳುತ್ತಿರುವ ವಿಡಿಯೋ ಅನ್ನು ಬಾಲಾಜಿ ಇನ್​​ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿದವರು, ಸೂರ್ಯ ಅವರ ಕಾರ್ಯವನ್ನು ಕೊಂಡಾಡುತ್ತಿದ್ದಾರೆ.

ಆದರೆ ಕೆಲವು ದಿನಗಳ ಹಿಂದೆಯಷ್ಟೆ, ಸೂರ್ಯ ಅವರು ‘ಕರುಪ್ಪು’ ನಿರ್ದೇಶಕ ಬಾಲಾಜಿ ಮೇಲೆ ಬೇಸರಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಸಂದರ್ಶನಗಳಲ್ಲಿ ‘ಕರುಪ್ಪು’ ಸಿನಿಮಾ ವಿಜಯ್ ಅವರಿಗಾಗಿ ಮಾಡಿದ್ದು, ಅವರು ಒಪ್ಪಿಕೊಳ್ಳಲಿಲ್ಲ ಅದಕ್ಕೆ ಸೂರ್ಯ ಅವರಿಗೆ ಕತೆ ಹೇಳಿದೆ ಎಂದು ಬಾಲಾಜಿ ಹೇಳಿದ್ದರು. ಇದು ಸೂರ್ಯ ಅವರಿಗೆ ಬೇಸರ ತಂದಿದೆ ಎನ್ನಲಾಗಿತ್ತು. ಅದೇ ಸಮಯದಲ್ಲಿ ಸೂರ್ಯ ಅವರು ಹಂಚಿಕೊಂಡಿದ್ದ ಸಾಮಾಜಿಕ ಜಾಲತಾಣ ಪೋಸ್ಟ್ ಒಂದನ್ನು ಸಹ ಇದಕ್ಕೇ ಲಿಂಕ್ ಮಾಡಿ, ಬಾಲಾಜಿ ಮತ್ತು ಸೂರ್ಯ ನಡುವೆ ಎಲ್ಲವೂ ಸರಿಯಿಲ್ಲ ಎಂದಿದ್ದರು. ಆದರೆ ಅದನ್ನೆಲ್ಲ ಸುಳ್ಳು ಮಾಡಿ, ಇದೀಗ ಖುದ್ದು ಸೂರ್ಯ ಅವರು ಬಾಲಾಜಿ ಅವರನ್ನು ಕರೆಸಿ ಅವರಿಗೆ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ:ಸೂರ್ಯವಂಶಿ ಟೀಮ್ ಇಂಡಿಯಾ ಡೆಬ್ಯೂ ವಿಳಂಬ? ಎದುರಾಯ್ತು ಅಡಚಣೆ

ಹಿಟ್ ಸಿನಿಮಾ ನೀಡಿದ ನಿರ್ದೇಶಕರುಗಳಿಗೆ ಐಶಾರಾಮಿ ಕಾರನ್ನು ಉಡುಗೊರೆಯಾಗಿ ನೀಡುವ ಸಂಪ್ರದಾಯ ತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿದೆ. ‘ಜೈಲರ್’ ಸಿನಿಮಾ ಹಿಟ್ ಆದಾಗ ರಜನೀಕಾಂತ್, ನಿರ್ದೇಶಕ ನೆಲ್ಸನ್ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದ್ರನ್ ಅವರಿಗೆ ನಿರ್ಮಾಪಕ ಕಲಾನಿಧಿ ಮಾರನ್ ಕೋಟ್ಯಂತರ ಮೌಲ್ಯದ ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದರು. ಆ ಬಳಿಕ ಉದಯನಿಧಿ ಸ್ಟಾಲಿನ್ ಅವರು ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ಮಿನಿ ಕೂಪರ್ ಕಾರು ಉಡುಗೊರೆಯಾಗಿ ಕೊಟ್ಟರು. ಲೋಕೇಶ್ ಕನಗರಾಜ್ ಅವರಿಗೆ ಕಮಲ್ ಹಾಸನ್ ಕಾರು ಉಡುಗೊರೆಯಾಗಿ ಕೊಟ್ಟರು. ಇನ್ನೂ ಹಲವು ನಿರ್ದೇಶಕರುಗಳಿಗೆ ಕಾರುಗಳು ಉಡುಗೊರೆಯಾಗಿ ದೊರೆತವು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ – Kannada News | New Zealand Legend Kane Williamson Bids Adieu: End of a Glorious Cricket Era

ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಳೆಪ ಫಾರ್ಮ್​ನಿಂದ ಬಳಲುತ್ತಿದ್ದ ವಿಲಿಯಮ್ಸನ್ ತಮ್ಮ 35 ನೇ ವಯಸ್ಸಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆಟದ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ವರ್ಷ ಅಂದರೆ 2025 ರಲ್ಲಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದ ಕೇನ್, ಬಹಳ ಸಮಯದಿಂದ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇದೀಗ ತಮ್ಮ 16 ವರ್ಷಗಳ ವೃತ್ತಿಜೀವನಕ್ಕೆ ಪೂರ್ಣವಿರಾಮವನ್ನಿಟ್ಟಿರುವ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ಪರ ಹಲವಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕಿವೀಸ್ ಪರ ಅತ್ಯಧಿಕ ರನ್ ಕಲೆಹಾಕಿರುವ ಆಟಗಾರನೆನಿಸಿಕೊಂಡಿರುವ ಕೇನ್, ಇದುವರೆಗೆ ಆಡಿರುವ 378 ಪಂದ್ಯಗಳಲ್ಲಿ 19,346 ರನ್ ಗಳಿಸಿದ್ದಾರೆ. ಇದರಲ್ಲಿ 48 ಶತಕಗಳು ಸೇರಿವೆ. ಆಟಗಾರನಾಗಿ ಮಾತ್ರವಲ್ಲದೆ ನಾಯಕನಾಗಿಯೂ ತಂಡವನ್ನು ಮುನ್ನಡೆಸಿರುವ ವಿಲಿಯಮ್ಸನ್, ತಮ್ಮ ನಾಯಕತ್ವದಲ್ಲಿ ತಂಡವನ್ನು ಎರಡು ಐಸಿಸಿ ಪಂದ್ಯಾವಳಿಗಳ ಫೈನಲ್‌ಗೆ ಕೊಂಡೊಯ್ದಿದ್ದರು. ಅದರಲ್ಲಿ ಒಮ್ಮೆ ತಂಡವನ್ನು ಚಾಂಪಿಯನ್ ಕೂಡ ಮಾಡಿದ್ದರು.

Published On – 4:18 pm, Fri, 12 June 26

Source link

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್​​ – Kannada News | Tamil Nadu CM Vijay Offers Special Prayers at Kollur Mookambika Temple

ಉಡುಪಿ, ಜೂನ್​​ 12: ತಮಿಳುನಾಡು ಸಿಎಂ ವಿಜಯ್​​ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದ್ದಾರೆ. ಈ ವೇಳೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂಗೆ ಬೊಕ್ಕೆ ನೀಡಿ ಅರ್ಚಕರು ಸ್ವಾಗತಿಸಿದ್ದು, ರಾಜ್ಯ ಸರ್ಕಾರದ ವತಿಯಿಂದ ಕುಂದಾಪುರ ಎಸಿ ರಶ್ಮಿ ಕೂಡ ವಿಜಯ್​​ರನ್ನು ದೇಗುಲಕ್ಕೆ ಬರಮಾಡಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

‘ಅಂದು ನೀವೇ ಸಿಎಂ ಆಗಿ ಅಂದಿದ್ದೆ, ಆಗದ್ದಕ್ಕೆ ಕಾಂಗ್ರೆಸ್ಸಿಗರೇ ಕಾರಣ’: ಡಾ. ಪರಮೇಶ್ವರ್​​ಗೆ ಹೆಚ್​.ಡಿ.ಕುಮಾರಸ್ವಾಮಿ ಟಾಂಗ್

ಬೆಂಗಳೂರು, ಜೂ.12: ತಮಗೆ ಮುಖ್ಯಮಂತ್ರಿ ಆಗುವ ಅವಕಾಶ ಕೈತಪ್ಪಿದ ಕುರಿತು ಸಚಿವ ಡಾ. ಜಿ. ಪರಮೇಶ್ವರ್ ಇತ್ತೀಚೆಗೆ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ‘ಡಾ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಲು ಅವರದೇ ಪಕ್ಷದವರಾದ ಕಾಂಗ್ರೆಸ್ಸಿಗರೇ ನೇರ ಕಾರಣ, ಈ ಬಗ್ಗೆ ಪರಮೇಶ್ವರ್ ಅವರು ನಮ್ಮನ್ನು ಕೇಳುವ ಬದಲು ಮೊದಲು ತಮ್ಮದೇ ಪಕ್ಷದವರ ಜೊತೆ ಕೂತು ಚರ್ಚೆ ಮಾಡಲಿ. ಅಂದು ಅವರು ನನ್ನ ಜೊತೆ ಬಂದಾಗ ನಾನು ಸಿಎಂ ಆಗಬೇಡಿ ಅಂತಾ ಹೇಳಿದ್ನಾ? ನೀವೇ ಮುಖ್ಯಮಂತ್ರಿಯಾಗಿ ಎಂದು ನಾನೇ ಖುದ್ದಾಗಿ ಹೇಳಿದ್ದೆ. ನೀವೇ ಸಿಎಂ ಆಗಿ ಎಂದಾಗಲೂ ಅವರು ಆಗಲಿಲ್ಲವಲ್ಲ ಎಂದು ಟಾಂಗ್ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು – Kannada News | Maharaja T20 Trophy: Rahul Dravid Praises Vaibhav Sooryavanshi as Unique Talent

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಹರಾಜು ಕೂಡ ನಡೆದಿದೆ. ಈ ಲೀಗ್​ನಲ್ಲಿ ಭಾಗವಹಿಸುತ್ತಿರುವ ಐದು ಫ್ರಾಂಚೈಸಿಗಳು ಕೂಡ ಬಲಿಷ್ಠ ತಂಡಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ. ಅದರ ಭಾಗವಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಜೂನ್ 11 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid) ಕೂಡ ಭಾಗವಹಿಸಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ದ್ರಾವಿಡ್, ತಮ್ಮ ಶಿಷ್ಯ ವೈಭವ್ ಸೂರ್ಯವಂಶಿಯನ್ನು (Vaibhav Sooryavanshi) ಹೊಗಳಿ ಮಾತನಾಡಿದ್ದಾರೆ.

ಹೋಲಿಕೆ ಮಾಡುವುದು ಸರಿಯಲ್ಲ

ಮೊದಲಿಗೆ ಮಹಾರಾಜ ಟ್ರೋಫಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಿದರು. ಇದೇ ವೇಳೆ ಪತ್ರಕರ್ತರೊಬ್ಬರು, ‘ವೈಭವ್ ಸೂಯವಂಶಿಯಂತಹ ಆಟಗಾರರು ಕರ್ನಾಟಕದಲ್ಲೂ ಹುಟ್ಟಿಕೊಳ್ತಾರಾ ಎಂಬ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ದ್ರಾವಿಡ್, ಎಲ್ಲಾ ಆಟಗಾರರನ್ನು ವೈಭವ್ ಸೂರ್ಯವಂಶಿಗೆ ಹೋಲಿಕೆ ಮಾಡುವುದು ಸರಿಯಲ್ಲ. ವೈಭವ್ ಒಬ್ಬ ಅಪರೂಪದ ಆಟಗಾರ. ಸಚಿನ್ ತೆಂಡೂಲ್ಕರ್ ಬಳಿಕ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರ ವೈಭವ್. ಸಚಿನ್​ ರೀತಿ ಮತ್ತೊಬ್ಬ ಆಟಗಾರ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲು 40 ವರ್ಷಗಳು ಬೇಕಾಯ್ತು.

ಆತ ವಿಶೇಷ ಪ್ರತಿಭೆ

ಹೀಗಾಗಿ 40 ಆದ ಬಳಿಕ ಮತ್ತೊಬ್ಬ ವೈಭವ್ ಸೂರ್ಯವಂಶಿ ಹುಟ್ಟಿಕೊಳ್ತಾನೆ. ಹಾಗಂತ ಯಾರನ್ನು ಹೋಲಿಕೆ ಮಾಡಲು ಹೋಗಬಾರದು. ನಮ್ಮ ಹುಡುಗರು ಕೂಡ ಚೆನ್ನಾಗಿ ಆಡ್ತಾರೆ. ಆದ್ರೆ ವೈಭವ್ ಒಬ್ಬ ಯೂನಿಕ್ ಪ್ಲೇಯರ್ ನಾವು ಅದನ್ನು ಒಪ್ಪಿಕೊಳ್ಳಬೇಕು. ಆತ ಅದ್ಭುತವಾಗಿ ಆಡುತ್ತಿದ್ದಾನೆ. ಆತ ವಿಶೇಷ ಪ್ರತಿಭೆ. ಆತ ಮುಂದೆಯೂ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸುತ್ತಾನೆ ಅಂತ ಭಾವಿಸಿದ್ದೇನೆ. ಆತ ಚೆನ್ನಾಗಿ ಆಡಿ ತಂಡವನ್ನು ಗೆಲ್ಲಿಸಲಿ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ

ತ್ರಿಕೋನ ಸರಣಿಯಲ್ಲಿ ವೈಭವ್ ಪ್ರದರ್ಶನ

ದ್ರಾವಿಡ್ ಹೇಳಿಕೆಯಂತೆ ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಈಗಷ್ಟೇ ಮುಗಿದ ಐಪಿಎಲ್‌ನಲ್ಲಿ 776 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಇದರ ಫಲವಾಗಿ ವೈಭವ್​ಗೆ ಭಾರತ ಎ ತಂಡ, ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ ಟಿ20 ತಂಡದಲ್ಲೂ ಅವಕಾಶ ನೀಡಲಾಗಿದೆ. ಪ್ರಸ್ತುತ ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿರುವ ವೈಭವ್, ಶ್ರೀಲಂಕಾ ಎ ವಿರುದ್ಧದ ಮೊದಲ ಪಂದ್ಯದಲ್ಲಿ 12 ಎಸೆತಗಳಲ್ಲಿ 14 ರನ್ ಬಾರಿಸಿದರೆ, ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 22 ಎಸೆತಗಳಲ್ಲಿ 44 ರನ್ ಬಾರಿಸಿದರು.

Published On – 4:06 pm, Fri, 12 June 26

Source link

Exit mobile version