ಕೆ.ಆರ್.ಮಾರುಕಟ್ಟೆ ಫ್ಲೈಓವರ್ ಕೆಳಗೆ ಅಗ್ನಿ ಅವಘಡ! – Kannada News | Massive Fire Breaks Out At KR Market

ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನ ಹೃದಯಭಾಗದಲ್ಲಿರುವ ಕೆ.ಆರ್. ಮಾರ್ಕೆಟ್ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯು ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿಸಿದೆ. ಮಾರ್ಕೆಟ್ ಬಳಿಯ ಕಸದ ರಾಶಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಜ್ವಾಲೆಗಳು ಕಸದ ರಾಶಿಯನ್ನು ವ್ಯಾಪಿಸಿ, ಅದನ್ನು ಸಂಪೂರ್ಣವಾಗಿ ಸುಟ್ಟು ಬೂದಿ ಮಾಡಿದೆ. ಅಗ್ನಿ ಅವಘಡದಿಂದಾಗಿ ಮಾರ್ಕೆಟ್ ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡಿದೆ. ಇದು ಸ್ಥಳದಲ್ಲಿ ಉಸಿರಾಟದ ಸಮಸ್ಯೆಯನ್ನುಂಟುಮಾಡುತ್ತಿದೆ ಮತ್ತು ಗೋಚರತೆಯನ್ನು ಕಡಿಮೆ ಮಾಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ, ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

Source link

Video: ಇದು ವೃದ್ಧ ದಂಪತಿಯ ಶುದ್ಧ ಪ್ರೀತಿ; ಮಡದಿಯನ್ನು ಜೋಪಾನವಾಗಿ ರೈಲು ಹತ್ತಿಸಿದ ವೃದ್ಧ ವ್ಯಕ್ತಿ – Kannada News | An old man who boarded a train to protect his wife

ಹೆಣ್ಣಿಗೆ ಗಂಡನೇ (wife-husband) ಸರ್ವಸ್ವವಾಗಿರುತ್ತಾನೆ. ಹೀಗಾಗಿ ಪ್ರತಿಯೊಬ್ಬ ಹೆಣ್ಣು ತನ್ನ ಉಸಿರು ಇರುವ ತನಕ ತನ್ನ ಗಂಡ ತನ್ನ ಮೇಲೆ ಕಾಳಜಿ ವಹಿಸಲಿ ಎಂದು ಬಯಸುತ್ತಾಳೆ. ಆದರೆ ವೃದ್ಧ ದಂಪತಿಗಳು (elderly couple) ಕೊನೆಯವರೆಗೆ ಒಬ್ಬರಿಗೊಬ್ಬರು ಆಸರೆಯಾಗಿರುವುದನ್ನು ನೀವು ನೋಡಿರುತ್ತೀರಿ. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ರೈಲು ಹತ್ತಲು ಕಷ್ಟ ಪಡುತ್ತಿದ್ದ ತನ್ನ ಮಡದಿಯನ್ನು, ಬೀಳದಂತೆ ಹಿಡಿದು ಜೋಪಾನವಾಗಿ ವೃದ್ಧ ವ್ಯಕ್ತಿ ರೈಲು ಹತ್ತಿಸಿದ್ದಾನೆ. ಈ ಸುಮಧುರ ಬಾಂಧವ್ಯದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

me_bhanu_pilla ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ವೃದ್ಧ ದಂಪತಿಯ ಸುಮಧುರ ಬಾಂಧವ್ಯವನ್ನು ಕಾಣಬಹುದು. ಈ ಕ್ಲಿಪಿಂಗ್ ನಲ್ಲಿ ವೃದ್ಧ ಮಹಿಳೆ ರೈಲು ಹತ್ತಲು ಕಷ್ಟ ಪಡುತ್ತಿರುವುದನ್ನು ಕಾಣಬಹುದು. ಇದೇ ವೇಳೆ ವೃದ್ಧ ವ್ಯಕ್ತಿ ತನ್ನ ಮಡದಿಯನ್ನು ಬೀಳದಂತೆ ಹಿಡಿದು ಜೋಪಾನವಾಗಿ ರೈಲು ಹತ್ತಿಸಿರುವ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ನೋ ಕಿಡ್ಸ್, ಡಬಲ್ ಇನ್ಕಮ್; ಬೆಂಗಳೂರಿನಲ್ಲಿ ನೆಲೆಸಿರುವ ಈ ದಂಪತಿಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ವಿಡಿಯೋ ಎರಡು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ನೂರು ವರ್ಷಗಳ ಪ್ರೀತಿ ಎಂದು ಹೇಳಿದರೆ, ಮತ್ತೊಬ್ಬರು, ಇದು ಶುದ್ಧ ಪ್ರೀತಿ, ಏಳು ಬೀಳಿನಲ್ಲೂ ಜತೆಯಾಗಿ ನಿಂತ ಜೋಡಿಗಳು ಎಂದು ಹೇಳಿದ್ದಾರೆ. ಇನ್ನೊಬ್ಬರು, ಈ ದೃಶ್ಯ ನೋಡುವಾಗ ನನ್ನ ಕಣ್ಣ ತುಂಬಿ ಬಂದಿತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rates: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ – Kannada News | Gold Price Today on 15th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 15: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿದೆ. ನಿನ್ನೆ 135 ರೂಗಳಷ್ಟು ಬೆಲೆ ಏರಿಕೆ ಕಂಡಿದ್ದ ಬಂಗಾರವು, ಇವತ್ತು 130 ರೂ ಜಿಗಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಬೆಳ್ಳಿ ಬೆಲೆ (Silver Rates) ಇಂದು ಹೈಜಂಪ್ ಮಾಡಿದೆ. ಒಂದೇ ದಿನ ಗ್ರಾಮ್​ಗೆ 15 ರೂ ಜಿಗಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,651 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,240 ರೂ
  • ಚೆನ್ನೈ: 14,320 ರೂ
  • ಮುಂಬೈ: 14,240 ರೂ
  • ದೆಹಲಿ: 14,255 ರೂ
  • ಕೋಲ್ಕತಾ: 14,240 ರೂ
  • ಕೇರಳ: 14,240 ರೂ
  • ಅಹ್ಮದಾಬಾದ್: 14,245 ರೂ
  • ಜೈಪುರ್: 14,255 ರೂ
  • ಲಕ್ನೋ: 14,255 ರೂ
  • ಭುವನೇಶ್ವರ್: 14,240 ರೂ

ಇದನ್ನೂ ಓದಿ: ನಾಮಿನಿ ಹೆಸರಿಸದೆಯೇ ಹೂಡಿಕೆದಾರ ಮೃತಪಟ್ಟರೆ ಮ್ಯೂಚುವಲ್ ಫಂಡ್ ಹೂಡಿಕೆಗೆ ಏನಾಗುತ್ತದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (13,892 ರುಪಾಯಿ)
  • ದುಬೈ: 535.50 ಡಿರಾಮ್ (13,581 ರುಪಾಯಿ)
  • ಅಮೆರಿಕ: 149.50 ಡಾಲರ್ (13,716 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (13,929 ರುಪಾಯಿ)
  • ಕತಾರ್: 532.50 ಕತಾರಿ ರಿಯಾಲ್ (13,606 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,604 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,791 ರುಪಾಯಿ)
  • ಕುವೇತ್: 44.50 ಕುವೇತಿ ದಿನಾರ್ (13,531 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಹಾರದ ಇತಿಹಾಸದಲ್ಲಿ ಜೆಡಿಯು ಕೋಟಾದ ಇಬ್ಬರು ಉಪಮುಖ್ಯಮಂತ್ರಿಗಳು ಸರ್ಕಾರದ ಭಾಗವಾಗುವುದು ಇದೇ ಮೊದಲು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PM Modi Karnataka Visit Live: ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ; ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ! – Kannada News | PM Narendra Modi Adichunchanagiri Math Visit Live Streaming Online

ಬೆಂಗಳೂರು.ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಭೇಟಿ ಇಂದು ಭೇಟಿ ನೀಡಿದ್ದಾರೆ. ಪ್ರಧಾನಿಗಳು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿ, ಆದಿಚುಂಚನಗಿರಿಗೆ ಮೋದಿಯ ಮೊದಲ ಭೇಟಿ ನೀಡಿದ್ದಾರೆ. ಈ ಬಗ್ಗೆ ಲೈವ್​ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Samudrika Shastra: ಪಾದದ ಬೆರಳುಗಳ ನಡುವೇ ಅಂತರವಿದೆಯೇ? ನಿಮ್ಮ ಜೀವನದ ರಹಸ್ಯ ಇಲ್ಲಿ ತಿಳಿಯಿರಿ – Kannada News | Samudrika Shastra: What Your Toes Reveal About Personality, Love and Destiny

ಸಾಮಾನ್ಯವಾಗಿ ಒಬ್ಬರ ಮುಖ ಅಥವಾ ಹಸ್ತದ ರೇಖೆಗಳನ್ನು ನೋಡಿ ಅವರ ಗುಣಸ್ವಭಾವವನ್ನು ಅಳೆಯುತ್ತೇವೆ. ಆದರೆ, ಸಾಮುದ್ರಿಕ ಶಾಸ್ತ್ರದ ಪ್ರಕಾರ, ಪಾದಗಳು ಮತ್ತು ಬೆರಳುಗಳ ಆಕಾರವೂ ಕೂಡ ಜೀವನದ ಗುಪ್ತ ರಹಸ್ಯಗಳನ್ನು ಬಿಚ್ಚಿಡುತ್ತವೆ ಎಂಬುದು ನಿಮಗೆ ತಿಳಿದಿದೆಯೇ? ನಿಮ್ಮ ಪಾದದ ಬೆರಳುಗಳು ನಿಮ್ಮ ಪ್ರೇಮ ಜೀವನ, ಸ್ವಭಾವ ಮತ್ತು ಯಶಸ್ಸಿನ ಬಗ್ಗೆ ಏನು ಹೇಳುತ್ತವೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಬೆರಳುಗಳ ನಡುವೆ ಅಂತರವಿಲ್ಲವೇ? ಅಪ್ಪಟ ಪ್ರೇಮಜೀವಿಗಳು!

ನಿಮ್ಮ ಹೆಬ್ಬೆರಳು ಮತ್ತು ಅದರ ಪಕ್ಕದ ತೋರುಬೆರಳು ಪರಸ್ಪರ ಅಂಟಿಕೊಂಡಿದ್ದರೆ, ನೀವು ತುಂಬಾ ಬುದ್ಧಿವಂತರು ಮತ್ತು ಭಾವಜೀವಿಗಳು ಎಂದು ಅರ್ಥ. ಇವರು ಸಂಬಂಧಗಳಿಗೆ ಮೊದಲ ಆದ್ಯತೆ ನೀಡುತ್ತಾರೆ. ಇವರಿಗೆ ಕಲಹ ಎಂದರೆ ಇಷ್ಟವಿಲ್ಲ. ಕುಟುಂಬದಲ್ಲಿ ಶಾಂತಿ ನೆಲೆಸಲು ಎಂತಹ ತ್ಯಾಗಕ್ಕೂ ಇವರು ಸದಾ ಸಿದ್ಧ.

ಬೆರಳುಗಳ ನಡುವೆ ಅಂತರವಿದ್ದರೆ:

ಹೆಬ್ಬೆರಳು ಮತ್ತು ತೋರುಬೆರಳಿನ ನಡುವೆ ಸ್ಪಷ್ಟವಾದ ಜಾಗವಿದ್ದರೆ, ನೀವು ಮುಕ್ತ ಆಲೋಚನೆಯುಳ್ಳವರು. ಯಾರ ಕೆಳಗೂ ಕೆಲಸ ಮಾಡಲು ಇವರು ಇಷ್ಟಪಡುವುದಿಲ್ಲ. ತನ್ನದೇ ಆದ ಸ್ವಂತ ಗುರುತನ್ನು ಹೊಂದಲು ಬಯಸುತ್ತಾರೆ. ಪ್ರೇಮ ಜೀವನದಲ್ಲೂ ಇವರು ಸ್ವಲ್ಪ ‘ಸ್ಪೇಸ್’ ನಿರೀಕ್ಷಿಸುತ್ತಾರೆ. ಈ ಸ್ವತಂತ್ರ ಪ್ರವೃತ್ತಿ ಕೆಲವೊಮ್ಮೆ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು.

ತೋರುಬೆರಳು ಉದ್ದವಾಗಿದ್ದರೆ:

ಅನೇಕರಿಗೆ ಹೆಬ್ಬೆರಳಿಗಿಂತ ಅದರ ಪಕ್ಕದ ತೋರುಬೆರಳು ಉದ್ದವಾಗಿರುತ್ತದೆ. ಇದು ನಾಯಕತ್ವದ (Leadership) ಸಂಕೇತ. ಕಚೇರಿಯಲ್ಲಾಗಲಿ ಅಥವಾ ಮನೆಯಲ್ಲಾಗಲಿ, ಇವರು ಮುಂಚೂಣಿಯಲ್ಲಿ ನಿಂತು ನಿರ್ಧಾರ ತೆಗೆದುಕೊಳ್ಳುತ್ತಾರೆ. ಇವರ ಮಾತುಗಳು ಮತ್ತು ನಿರ್ಧಾರಗಳು ಇತರರ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ.

ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?

ತೋರುಬೆರಳು ಚಿಕ್ಕದಾಗಿದ್ದರೆ; ಮೃದು ಸ್ವಭಾವದವರು:

ಹೆಬ್ಬೆರಳಿಗಿಂತ ತೋರುಬೆರಳು ಚಿಕ್ಕದಾಗಿದ್ದರೆ, ನೀವು ಅತ್ಯಂತ ಶಾಂತ ಮತ್ತು ಸಹನಾಶೀಲ ವ್ಯಕ್ತಿತ್ವದವರು. ಇವರು ಇತರರ ಭಾವನೆಗಳಿಗೆ ಹೆಚ್ಚಿನ ಗೌರವ ನೀಡುತ್ತಾರೆ. ಎಂತಹ ಕಷ್ಟದ ಪರಿಸ್ಥಿತಿಯಲ್ಲೂ ಸಂಬಂಧಗಳನ್ನು ಸಮತೋಲನಗೊಳಿಸುವ ಅದ್ಭುತ ಕಲೆ ಇವರಿಗೆ ಸಿದ್ಧಿಸಿರುತ್ತದೆ.

ಹೆಬ್ಬೆರಳಿನ ಆಕಾರ ಮತ್ತು ನಿಮ್ಮ ಅದೃಷ್ಟ:

ಹೆಬ್ಬೆರಳಿನ ರಚನೆಯು ನಿಮ್ಮ ಜೀವನದ ಸುಖ-ಕಷ್ಟಗಳನ್ನು ಸೂಚಿಸುತ್ತದೆ:

  • ದುಂಡಗೆ ಆಕಾರ: ನೀವು ಅದೃಷ್ಟವಂತರು! ನಿಮ್ಮ ಜೀವನವು ಸುಖ-ಸಂತೋಷ ಮತ್ತು ಸಕಲ ಸೌಕರ್ಯಗಳಿಂದ ಕೂಡಿರುತ್ತದೆ ಎಂದು ಶಾಸ್ತ್ರ ಹೇಳುತ್ತದೆ.
  • ಮೃದು ಅಥವಾ ಬಾಗಿದ ಹೆಬ್ಬೆರಳು: ಜೀವನದ ಆರಂಭದಲ್ಲಿ ಸ್ವಲ್ಪ ಹೋರಾಟ ಮತ್ತು ತೊಂದರೆಗಳಿರಬಹುದು. ಆದರೆ, ಇವರು ತುಂಬಾ ತಾಳ್ಮೆಯುಳ್ಳವರು. ತಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದನ್ನು ಸಾಧಿಸಿಯೇ ತೀರುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಸೋಲಿನಿಂದ ಕಂಗೆಟ್ಟ ಕೆಕೆಆರ್ ತಂಡದ ನಾಯಕನಿಗೆ ದಂಡದ ಬರೆ..! – Kannada News | IPL 2026: Ajinkya Rahane fined Rs 12 lakh

IPL 2026: ಐಪಿಎಲ್ 2026ರ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ನಾಯಕ ಅಜಿಂಕ್ಯ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಏಪ್ರಿಲ್ 14 ರಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ನಿಗದಿತ ಸಮಯದೊಳಗೆ ತನ್ನ ಓವರ್‌ಗಳನ್ನು ಪೂರ್ಣಗೊಳಿಸಲು ವಿಫಲವಾಗಿದೆ. ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಕನಿಷ್ಠ ಓವರ್ ರೇಟ್ ಅಪರಾಧವಾಗಿದ್ದು, ಪ್ರಸಕ್ತ ಸೀಸನ್‌ನಲ್ಲಿ ಕೆಕೆಆರ್ ತಂಡದ ಮೊದಲ ತಪ್ಪಾದ ಕಾರಣ ನಾಯಕನಿಗೆ 12 ಲಕ್ಷ ರೂ.ಗಳ ದಂಡ ವಿಧಿಸಿ ಐಪಿಎಲ್ ಆಡಳಿತ ಮಂಡಳಿ ಆದೇಶಿಸಿದೆ.

ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ.

ಇನ್ನು ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ ಎಲ್ಲಾ ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ 25% ದಂಡವನ್ನು ವಿಧಿಸಲಾಗುತ್ತದೆ.

ಈ ತಪ್ಪನ್ನು ಮೂರನೇ ಬಾರಿ ಆವರ್ತಿಸಿದರೆ, ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕನಿಗೆ ಡಿಮೆರಿಟ್ ಪಾಯಿಂಟ್ ನೀಡಲಾಗುತ್ತದೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ 50% ದಂಡವನ್ನು ವಿಧಿಸಲಾಗುತ್ತದೆ.

ಇನ್ನು ನಾಯಕ ನಾಯಕನ ಖಾತೆಯಲ್ಲಿ ಡಿಮೆರಿಟ್ ಪಾಯಿಂಟ್‌ಗಳು ಒಂದು ನಿರ್ದಿಷ್ಟ ಮಿತಿಯನ್ನು (ಉದಾಹರಣೆಗೆ 3 ವರ್ಷಗಳಲ್ಲಿ 4 ಪಾಯಿಂಟ್ಸ್) ಮೀರಿದಾಗ ಮಾತ್ರ ಪಂದ್ಯದ ನಿಷೇಧ ಹೇರಬಹುದು. ಅಂದರೆ ಅತ್ಯಂತ ಗಂಭೀರ ಅಥವಾ ಅತಿ ಹೆಚ್ಚು ಬಾರಿ ತಪ್ಪು ಮಾಡಿದಾಗ ಮಾತ್ರ ನಾಯಕನನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಭರ್ಜರಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್​ವೆಲ್

ಸೋಲಿನಿಂದ ಕಂಗೆಟ್ಟಿರುವ ಕೆಕೆಆರ್​:

ಐಪಿಎಲ್​ 2026 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ 5 ಪಂದ್ಯಗಳನ್ನಾಡಿದೆ. ಈ ಐದು ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ ಸೋಲಿನಿಂದ ಪಾರಾಗಿದೆ. ಇದೀಗ ಸಿಎಸ್​ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ಸ್ಲೋ ಓವರ್ ರೇಟ್ ತಪ್ಪಿಗಾಗಿ ಕೆಕೆಆರ್ ತಂಡದ ನಾಯಕ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

Source link

Video:ಪಂಜಾಬ್​ನಲ್ಲಿ ಬಸ್ ಪಲ್ಟಿ, ಐವರು ಸಾವು, 15 ಮಂದಿಗೆ ಗಾಯ – Kannada News | Punjab accident: Deadly Bus Crash in Fatehgarh Sahib Leaves Five Dead, Many Injured

ಅಮೃತಸರ, ಏಪ್ರಿಲ್ 15: ಪಂಜಾಬ್​ನ ಫತೇಹ್​ಗಢ ಸಾಹಿಬ್​ನಲ್ಲಿ ಬಸ್ ಅಪಘಾತಕ್ಕೀಡಾಗಿದ್ದು, ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿ ಪಠಾಣಾ ಬಳಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಹೊರಳಿ ಮರಕ್ಕೆ ಡಿಕ್ಕಿ ಹೊಡೆದಿದೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಪ್ರಸ್ತುತ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತವು ತೀವ್ರವಾಗಿದ್ದು, ಸ್ಥಳದಲ್ಲಿ ಭೀತಿ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಕಾರ್ಯಾಚರಣೆ ನಡೆಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಿಲ್ಲಿನ ಮದುವೆ ಆಗ್ತೀರಾ? ಪ್ರಶ್ನೆಗೆ ನಾಚಿ ನೀರಾದ ಕಾವ್ಯಾ ಶೈವ – Kannada News | Small Girl Ask About Kavya Shaiva wedding with Gilli Nata

ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಲಿಗಿಲಿ ಜೂನಿಯರ್’ ವೇದಿಕೆ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯಾ ನಾಚಿ ನೀರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಮತಾಂತರಕ್ಕೆ ಪ್ರಚೋದನೆ, ಹಿಂದೂ ಯುವತಿಯರ ಮೇಲೆ ಕಣ್ಣು, ನಾಸಿಕ್ ಟಿಸಿಎಸ್ ಕಚೇರಿಯಲ್ಲಿ ನಡೆದಿತ್ತಾ ಕಾರ್ಪೊರೇಟ್ ಜಿಹಾದ್, ಸಂತ್ರಸ್ತೆ ಹೇಳಿದ್ದೇನು? – Kannada News | TCS Nashik Corporate Jihad: Hindu Women Targeted for Conversion and Harassment

ನಾಸಿಕ್, ಏಪ್ರಿಲ್ 15: ಭಾರತದ ಅತಿದೊಡ್ಡ ಸಾಫ್ಟ್‌ವೇರ್ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಶಾಖೆಯಲ್ಲಿ ನಡೆದಿದೆ ಎನ್ನಲಾದ ಘಟನೆಗಳು ಇಡೀ ಐಟಿ ಲೋಕವನ್ನೇ ಬೆಚ್ಚಿಬೀಳಿಸಿವೆ. ಕೇವಲ ವೃತ್ತಿಪರ ಕೆಲಸಕ್ಕೆ ಸೀಮಿತವಾಗಬೇಕಿದ್ದ ಕಚೇರಿ ಆವರಣದಲ್ಲಿ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ ಮತ್ತು ವ್ಯವಸ್ಥಿತ ಮತಾಂತರದ ಸಂಚು ನಡೆಯುತ್ತಿತ್ತು ಎಂಬ ಸ್ಫೋಟಕ ಮಾಹಿತಿ ತನಿಖೆಯಿಂದ ಹೊರಬಂದಿದೆ.

ಹಿಂದೂ ಯುವತಿಯರೇ ಟಾರ್ಗೆಟ್!
ಈ ಪ್ರಕರಣದಲ್ಲಿ ಸಾಕ್ಷಿಯೊಬ್ಬರು ನೀಡಿರುವ ಹೇಳಿಕೆ ಬೆಚ್ಚಿಬೀಳಿಸುವಂತಿದೆ. ಆರೋಪಿಗಳು ಇತರ ಪುರುಷ ಉದ್ಯೋಗಿಗಳಿಗೆ “ಹೋಗಿ ಹಿಂದೂ ಹುಡುಗಿಯರನ್ನು ನಿಮ್ಮ ಗೆಳತಿಯರನ್ನಾಗಿ ಮಾಡಿಕೊಳ್ಳಿ, ಅವರನ್ನು ಮದುವೆಯಾಗಿ ಮತಾಂತರ ಮಾಡಿ” ಎಂದು ಪ್ರಚೋದಿಸುತ್ತಿದ್ದರು. ಈ ಕೆಲಸಕ್ಕಾಗಿ ಹಣದ ಆಮಿಷವನ್ನೂ ಒಡ್ಡಲಾಗುತ್ತಿತ್ತು ಎನ್ನಲಾಗಿದೆ. 2021 ರಿಂದಲೇ ಈ ಜಾಲ ಸಕ್ರಿಯವಾಗಿದ್ದು, ಇದಕ್ಕೆ ಮಾನವ ಸಂಪನ್ಮೂಲ (HR) ವಿಭಾಗದ ಬೆಂಬಲವೂ ಇತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬಂಧಿತರಲ್ಲಿ ಒಬ್ಬರಾದ ಹೆಚ್.ಆರ್ ಮ್ಯಾನೇಜರ್ ನಿದಾ ಖಾನ್ ಅವರನ್ನು ‘ಲೇಡಿ ಕ್ಯಾಪ್ಟನ್’ ಎಂದು ಕರೆಯಲಾಗುತ್ತಿತ್ತು. ಈಕೆ ಮಹಿಳಾ ಉದ್ಯೋಗಿಗಳೊಂದಿಗೆ ಆತ್ಮೀಯವಾಗಿ ಸ್ನೇಹ ಬೆಳೆಸಿ, ನಂತರ ಅವರಿಗೆ ನಮಾಜ್ ಮಾಡಲು ಮತ್ತು ಹಿಜಾಬ್ ಧರಿಸಲು ತರಬೇತಿ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಾರಾದರೂ ಪ್ರತಿರೋಧ ತೋರಿದರೆ ಕೆಲಸದಿಂದ ತೆಗೆದುಹಾಕುವ ಬೆದರಿಕೆ ಹಾಕಲಾಗುತ್ತಿತ್ತು.

ಎಂಟು ಮಹಿಳೆಯರಿಂದ ದೂರು: ಎಸ್​ಐಟಿ ತನಿಖೆ
ಫೆಬ್ರವರಿ 2022 ರಿಂದ ಮಾರ್ಚ್ 2026 ರ ನಡುವೆ ನಡೆದ ಈ ದೌರ್ಜನ್ಯಗಳ ಬಗ್ಗೆ ಎಂಟು ಮಹಿಳಾ ಉದ್ಯೋಗಿಗಳು ಧೈರ್ಯದಿಂದ ದೂರು ನೀಡಿದ್ದಾರೆ. ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸುವುದು ಮತ್ತು ಅಸಭ್ಯವಾಗಿ ವರ್ತಿಸಿದ ಆರೋಪಗಳು ಕೇಳಿಬಂದಿವೆ.

ಹಿಂದೂ ಉದ್ಯೋಗಿಗಳನ್ನು ನಮಾಜ್ ಮಾಡಲು ಒತ್ತಾಯಿಸುವುದು ಮತ್ತು ಅವರ ಧರ್ಮವನ್ನು ಅವಮಾನಿಸುವ ಕೆಲಸ ನಿರಂತರವಾಗಿ ನಡೆಯುತ್ತಿತ್ತು. ಉನ್ನತ ಅಧಿಕಾರಿಗಳಿಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಳ್ಳದೆ, ಆರೋಪಿಗಳಿಗೆ ಪ್ರಚೋದನೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ಬಂಧಿತ ಆರೋಪಿಗಳು
ಡ್ಯಾನಿಶ್ ಶೇಖ್

ತೌಸಿಫ್ ಅತ್ತರ್

ರಾಜಾ ಮೆಮನ್

ಶಾರುಖ್ ಖುರೇಷಿ

ಶಫಿ ಶೇಖ್

ಆಸಿಫ್ ಅಫ್ತಾಬ್ ಅನ್ಸಾರಿ

ನಿದಾ ಖಾನ್ (HR ಮ್ಯಾನೇಜರ್)

ಟಾಟಾ ಸಂಸ್ಥೆಯ ಕಠಿಣ ನಿಲುವು
ಘಟನೆ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರನ್, ಇದು “ಗಂಭೀರವಾಗಿ ಕಳವಳಕಾರಿ ಮತ್ತು ದುಃಖಕರ” ಎಂದು ಬಣ್ಣಿಸಿದ್ದಾರೆ. ಕಂಪನಿಯು ಈಗಾಗಲೇ ಆರೋಪಿಗಳನ್ನು ಅಮಾನತುಗೊಳಿಸಿದ್ದು, ಆರತಿ ಸುಬ್ರಮಣಿಯನ್ ಅವರ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ.
ನಾಸಿಕ್ ಪೊಲೀಸರು ರಚಿಸಿರುವ ವಿಶೇಷ ತನಿಖಾ ತಂಡ (SIT) ಈಗ ಈ ಮತಾಂತರದ ಜಾಲದ ಹಿಂದಿರುವ ದೊಡ್ಡ ತಲೆಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಐಟಿ ಸಂಸ್ಥೆಯೊಂದರ ಒಳಗೆ ಇಂತಹ ವ್ಯವಸ್ಥಿತ ಸಂಚು ನಡೆದದ್ದು ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಟಿಸಿಎಸ್ ವಿವಾದದ ಬಗ್ಗೆ ಟಿ.ವಿ. ಮೋಹನ್‌ದಾಸ್ ಪೈ ಕಿಡಿ
ನಾಸಿಕ್‌ನ ಟಿಸಿಎಸ್ (TCS) ಕಚೇರಿಯಲ್ಲಿ ನಡೆದಿದೆ ಎನ್ನಲಾದ ಮತಾಂತರದ ಪ್ರಯತ್ನ ಮತ್ತು ಕಿರುಕುಳದ ಘಟನೆಯು ಕೇವಲ ಒಂದು ಕಚೇರಿಯ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಇದು ಭಾರತದ ವೈಟ್-ಕಾಲರ್ (White-Collar) ಉದ್ಯೋಗ ವಲಯದಲ್ಲಿ ಭಾರಿ ಚರ್ಚೆಗೆ ನಾಂದಿ ಹಾಡಿದೆ. ಐಟಿ ವಲಯದ ದಿಗ್ಗಜ ಮತ್ತು ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಟಿ.ವಿ. ಮೋಹನ್‌ದಾಸ್ ಪೈ ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ವೃತ್ತಿಪರತೆ ಇರಬೇಕಾದ ಕಚೇರಿಗಳಲ್ಲಿ ಒಂದು ನಿರ್ದಿಷ್ಟ ಗುಂಪು ತನ್ನ ಧಾರ್ಮಿಕ ಅಜೆಂಡಾವನ್ನು ಹೇರುವುದು ಅಪಾಯಕಾರಿ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಲಸದ ಸ್ಥಳದಲ್ಲಿ ಕೆಲವರು ತಮ್ಮ ಧರ್ಮದ ಪ್ರಚಾರ ಮಾಡುವುದು ಮತ್ತು ಇತರರನ್ನು ಮತಾಂತರಕ್ಕೆ ಪ್ರಚೋದಿಸುವುದನ್ನು ನಾನು ವೈಯಕ್ತಿಕವಾಗಿ ನೋಡಿದ್ದೇನೆ.ಸಮುದಾಯದ ರೇಖೆಗಳನ್ನು ಮೀರಿ ಸಹೋದ್ಯೋಗಿಗಳನ್ನು ಮಾನಸಿಕವಾಗಿ ಗುರಿಯಾಗಿಸಲು ಸಾಮಾಜಿಕ ಜಾಲತಾಣದ ಗುಂಪುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Exit mobile version