Headlines

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ (Mohanlal) ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು, ತಾವು ಮುಂಬೈಗೆ, ಮಾಜಿ ಸಿಎಂ ಮಗಳ ಮದುವೆಗೆ ಹೋಗಿದ್ದಾಗ ಅಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ನಡೆದ ಚರ್ಚೆಯ ಬಗ್ಗೆ ಹೇಳಿದರು. ಬಾಲಿವುಡ್​ನ ಕೆಲವರು ನನ್ನೊಂದಿಗೆ ಅಂದು ಮಾತನಾಡಿದರು, ‘ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್​​ವುಡ್ ಬೆಳೆದು ನಿಂತಿದೆ’…

Read More

ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ

ಬೆಂಗಳೂರು, ಏಪ್ರಿಲ್​ 11: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನೇ ಟಾರ್ಗೆಟ್ ಮಾಡಿ ಬೆಂಗಳೂರಿನಲ್ಲಿ ಜೆಡಿಎಸ್​ ಪಕ್ಷ ಶಕ್ತಿ ಪ್ರದರ್ಶನ ಮಾಡಿದೆ. ಜೆಡಿಎಸ್ (JDS) 25ನೇ ವರ್ಷದ ಬೆಳ್ಳಿ ಹಬ್ಬದ ಆಚರಣೆ ನೆಪದಲ್ಲಿ ಸುಮಾರು 50 ಸಾವಿರಕ್ಕೆ ಹೆಚ್ಚು ಕಾರ್ಯಕರ್ತರನ್ನ ಸೇರಿಸುವ ಮೂಲಕ ಬೆಂಗಳೂರಿನಲ್ಲಿ ಜೆಡಿಎಸ್ ಇದೆಯಾ ಎಂಬ ಟೀಕೆಗಳಿಗೆ ದಳಪತಿಗಳು ಉತ್ತರ ನೀಡಿದ್ದಾರೆ. ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ‌. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ…

Read More

ಕಾಪು ಮಾರಿಯಮ್ಮನ ಸನ್ನಿಧಿಗೆ ಭೇಟಿ ನೀಡಿದ ಬಳಿಕ ನಾಯಕನಾಗಿ ಆಯ್ಕೆ; ಇಷ್ಟರಲ್ಲೇ ಉಡುಪಿಗೆ ಬರಲಿರುವ ಸೂರ್ಯ

ಸೂರ್ಯಕುಮಾರ್ ಯಾದವ್ (Suryakumar Yadav) ನೇತೃತ್ವದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯನ್ನು (T20 World Cup 2026) ಗೆದ್ದುಕೊಂಡಿತು. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ತಮ್ಮ ಮೊದಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ ವಿಶ್ವಕಪ್ ಗೆದ್ದ ಭಾರತದ ಐದನೇ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಪ್ರಸ್ತುತ ಭಾರತ ಕ್ರಿಕೆಟ್​ನ ಮನೆಮಾತಾಗಿರುವ ಸೂರ್ಯಕುಮಾರ್ ಯಾದವ್​ಗೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ಸೂರ್ಯಕುಮಾರ್ ಯಾದವ್ ಕರ್ನಾಟಕದ…

Read More

ತೈಲ ಬಿಕ್ಕಟ್ಟು ಹೀಗೇ ಇದ್ದರೆ ಈ ವರ್ಷದ ಜಿಡಿಪಿ ಬೆಳವಣಿಗೆ ಎಷ್ಟಕ್ಕಿಳಿಯಬಹುದು ಗೊತ್ತಾ?

ಮುಂಬೈ, ಏಪ್ರಿಲ್ 3: ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿದ್ದು ಜಾಗತಿಕ ತೈಲ ಬಿಕ್ಕಟ್ಟು ಸ್ಥಿತಿ ಉದ್ಭವವಾಗಿದೆ. ಇದು ಹೆಚ್ಚು ಕಾಲ ಹೀಗೇ ಮುಂದುವರಿದರೆ ಜಾಗತಿಕ ಆರ್ಥಿಕ ಹಿಂಜರಿತ ಶುರುವಾಗುತ್ತದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಭಾರತದ ಆರ್ಥಿಕತೆಯೂ ಈ ಪರಿಣಾಮದಿಂದ ಹೊರತಾಗಿರುವುದಿಲ್ಲ. ಕೇರ್ ಎಡ್ಜ್ ರೇಟಿಂಗ್ಸ್ (CareEdge Ratings) ವರದಿ ಪ್ರಕಾರ ದೀರ್ಘಾವಧಿ ತೈಲ ಬಿಕ್ಕಟ್ಟಿನಿಂದ ಭಾರತದ ಆರ್ಥಿಕ ಬೆಳವಣಿಗೆಯ ವೇಗ ಮಂದಗೊಳ್ಳಬಹುದು ಮತ್ತು ಹಣದುಬ್ಬರ ಹೆಚ್ಚಬಹುದು. ಕಚ್ಛಾ ತೈಲ ಬೆಲೆ 2026-27ರ ವರ್ಷದಲ್ಲಿ ಒಂದು ಬ್ಯಾರಲ್​ಗೆ ಸರಾಸರಿ…

Read More

ಬಳ್ಳಾರಿ ಗಲಭೆ: ನಾಳೆ ನಡೆಯಲಿರುವ ಬಿಜೆಪಿ ಬೃಹತ್​ ಪ್ರತಿಭಟನೆ ರ‍್ಯಾಲಿ ಬಗ್ಗೆ ಎಸ್​​ಪಿ ಹೇಳಿದ್ದಿಷ್ಟು – Kannada News | Ballari SP Details Strict Security for BJP Protest Amidst Banner and Firing Tensions

ಬಳ್ಳಾರಿ, ಜನವರಿ 16: ಬ್ಯಾನರ್​​​ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಸುಮನ್ ಡಿ.ಪನ್ನೇಕರ್​ ಪ್ರತಿಕ್ರಿಯಿಸಿದ್ದು, ಸಮಾವೇಶದಲ್ಲಿ 15-20 ಸಾವಿರ ಜನ ಭಾಗಿಯಾಗುವ ಸಾಧ್ಯತೆ ಇದೆ. ಭದ್ರತೆಗಾಗಿ ಬೇರೆ ಜಿಲ್ಲೆಗಳಿಂದ ಅಧಿಕಾರಿಗಳು, ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇಬ್ಬರು ಎಸ್​ಪಿ, 7 ಹೆಚ್ಚವರಿ ಎಸ್​​​ಪಿ, 15 ಡಿವೈಎಸ್​ಪಿ,…

Read More

ವ್ಯಕ್ತಿಯನ್ನು ಚೀಲಕ್ಕೆ ತುಂಬಿಕೊಂಡು ತಂದು ಕೊರಿಯರ್ ಮಾಡುವಂತೆ ಪಟ್ಟು

ಬೆಂಗಳೂರು, ಮಾರ್ಚ್​ 17: ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ವೃತ್ತದ ಬಳಿ ಅಚ್ಚರಿ ಮೂಡಿಸುವ ಘಟನೆಯೊಂದು ನಡೆದಿದೆ. ವ್ಯಕ್ತಿಯನ್ನು ಚೀಲಕ್ಕೆ ಹಾಕಿ ಕೊರಿಯರ್ ಶಾಪ್​ಗೆ ತಂದಿದ್ದಾರೆ. ಪುಂಡರ ಹುಚ್ಚಾಟಕ್ಕೆ ಕೊರಿಯರ್ ಶಾಪ್ ಸಿಬ್ಬಂದಿ ಕಂಗಾಲಾಗಿದ್ದಾರೆ. ಪ್ರೊಫೆಷನಲ್ ಕೊರಿಯರ್ ಶಾಪ್​ಗೆ ಬಂದ ಪುಂಡರು ಪ್ಲಾಸ್ಟಿಕ್ ಚೀಲದಲ್ಲಿರುವ ವ್ಯಕ್ತಿಯನ್ನು ಕೊರಿಯರ್ ಮಾಡುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಈ ವೇಳೆ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಕೊರಿಯರ್ ಸಿಬ್ಬಂದಿ ಪರಿಶೀಲಿಸಿದ್ದು, ಅದರೊಳಗೆ ಮನುಷ್ಯನೊಬ್ಬ ಇರುವುದು ಕಂಡುಬಂದಿದೆ. ಒಂದು ಕ್ಷಣ ಕೊರಿಯರ್ ಶಾಪ್ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ….

Read More

ಇಂಡಿಯಾ ಪೋಸ್ಟ್‌ನಿಂದ ನೆಕ್ಸ್ಟ್-ಡೇ ಡೆಲಿವರಿ ಸೇವೆ: ಬೆಂಗಳೂರು ಸೇರಿ ಲಿಸ್ಟ್​​ನಲ್ಲಿರುವ ನಗರಗಳ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾರ್ಚ್​​ 16: ಪಾರ್ಸೆಲ್‌ಗಳು, ಕಾನ್ಸೈನ್‌ಮೆಂಟ್‌ಗಳು ಮತ್ತು ಇತರ ಅಂಚೆ ವಸ್ತುಗಳನ್ನು 24 ಗಂಟೆಗಳೊಳಗೆ ತಲುಪಿಸುವ ಹೊಸ ಎಕ್ಸ್‌ಪ್ರೆಸ್ ಸೇವೆಯನ್ನು ಆರಂಭಿಸಲು ಇಂಡಿಯಾ ಪೋಸ್ಟ್ ಸಿದ್ಧವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ’24 ಸ್ಪೀಡ್ ಪೋಸ್ಟ್’ ಎಂಬ ಈ ಹೊಸ ಸೇವೆಯನ್ನು ಮಾರ್ಚ್ 17ರಿಂದ (ನಾಳೆ) ಆರಂಭಿಸಲಾಗುತ್ತಿದ್ದು, ತುರ್ತು ಹಾಗೂ ಸಮಯಕ್ಕೆ ತಲುಪಬೇಕಾದ ಪಾರ್ಸೆಲ್‌ಗಳಿಗೆ ಮರುದಿನವೇ ಗ್ಯಾರಂಟಿ ಡೆಲಿವರಿ ನೀಡಲಾಗುತ್ತದೆ ಎಂದು ತಿಳಿಸಿದೆ. ಈ ಸೇವೆಯನ್ನು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ. ಸಿಂಧಿಯಾ…

Read More

ಹೊಸ ವರ್ಷಕ್ಕೆ ಹೊಸ ಚಾಲೆಂಜ್; 10 ದಿನ ಸಕ್ಕರೆ ತಿನ್ನದಿದ್ದರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ನೋಡಿ – Kannada News | Sugar Detox: 10 Days to a Healthier You

ಇತ್ತೀಚಿಗೆ ಶುಗರ್ (Sugar) ಫ್ರೀ ಚಾಲೆಂಜ್ ನಡೆಯುತ್ತಿದ್ದು ಇದು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು, ತೂಕ ಇಳಿಸಿಕೊಳ್ಳಲು, ದೇಹದಲ್ಲಿರುವ ಶಕ್ತಿಯನ್ನು ಹೆಚ್ಚಿಸಲು ಮತ್ತು ಮಧುಮೇಹದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಆದರೆ ಸಿಹಿ ತಿನ್ನುವ ಬಯಕೆ ಅಥವಾ ಹಂಬಲವನ್ನು ನಿಯಂತ್ರಿಸುವುದು ಮತ್ತು ಸಂಸ್ಕರಿಸಿದ ಆಹಾರಗಳಿಂದ ದೂರವಿರುವುದು ಅಷ್ಟು ಸುಲಭವಲ್ಲ, ಅದೊಂದು ಸವಾಲಾಗಿರುತ್ತದೆ. ಆದರೆ ಸಿಹಿ ತಿಂಡಿ ಸೇವನೆ ಮಾಡುವುದನ್ನು ಕಡಿಮೆ ಮಾಡುವ ಮೂಲಕ ಅಥವಾ ತ್ಯಜಿಸುವ ಮೂಲಕ ಒಬ್ಬ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹಾಗಾದರೆ ಸಕ್ಕರೆಯ ಸೇವನೆ…

Read More

IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

2008 ರಿಂದ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) ನಿಸ್ಸಂದೇಹವಾಗಿ ವಿಶ್ವದ ಅತ್ಯಂತ ಶ್ರೀಮಂತ ಲೀಗ್. ಯುವ ಪ್ರತಿಭೆಗಳನ್ನು ಸ್ಟಾರ್‌ ಆಟಗಾರರನ್ನಾಗಿ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಕೂಡ ಐಪಿಎಲ್​ಗೆ ಸಲ್ಲಬೇಕು. ಅನೇಕ ಆಟಗಾರರು ಐಪಿಎಲ್​ ಮೂಲಕವೇ ರಾಷ್ಟ್ರೀಯ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಇದೇ ಕಾರಣದಿಂದಾಗಿ ಯುವ ಆಟಗಾರರು ಕೂಡ ಐಪಿಎಲ್​ನಲ್ಲಿ ಭಾಗವಹಿಸುವುದನ್ನು ಎದುರು ನೋಡುತ್ತಿರುತ್ತಾರೆ. ಅದರಂತೆ ಐಸಿಸಿ ಸ್ಥಾನಮಾನ ಹೊಂದಿರುವ ಬಹುತೇಕ ರಾಷ್ಟ್ರಗಳ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಪಾಕಿಸ್ತಾನದ 11 ಸ್ಟಾರ್ ಆಟಗಾರರು 2008ರ…

Read More

ಐಪಿಎಲ್ ಮ್ಯಾಚ್ ನೋಡಲು ಹೋಗುವ ಕ್ರಿಕೆಟ್ ಅಭಿಮಾನಿಗಳೇ ಈ ಮಹಿಳೆಯ ಮಾತು ಕೇಳಿ

ಬೆಂಗಳೂರು, (ಮಾರ್ಚ್ 30): ಈಗಾಗಲೇ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟೂರ್ನಿ 2026ಕ್ಕೆ ಚಾಲನೆ ಸಿಕ್ಕಿದೆ. ಆರ್​​ಸಿಬಿ ಹಾಗೂ ಸನ್ ರೈಸರ್ಸ್​ ಉದ್ಘಾಟನಾ ಪಂದ್ಯವಾಡಿದ್ದು, ತವರಿನ ಅಂಗಳದಲ್ಲಿ ಆರ್​​ಸಿಬಿ ಶುಭಾರಂಭ ಮಾಡಿದೆ. ಇನ್ನು ಕಾಲ್ತುಳಿತ ದುರಂತ ಸಂಬಂಧ ಪೊಲೀಸರು ಹಾಗೂ ಕೆಎಸ್​ಸಿಯಿಂದ ಯಾವುದೇ ಗೊಂದಲಗಳು ಆಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಪ್ರೇಕ್ಷಕರಿಗೆ ಆಗಮನ ಮತ್ತು ನಿರ್ಗಮನದಲ್ಲಿ ಯಾವುದೇ ನೂಕುನುಗ್ಗಲು ಆಗಿಲ್ಲ. ಆದ್ರೆ, ಕಳ್ಳರು ಮಾತ್ರ ತಮ್ಮ ಕೈಚಳ ತೋರಿಸಿದ್ದಾರೆ. ಹೌದು…ಮಾರ್ಚ್ 28ರಂದು ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ…

Read More