ಬಿಗ್ ಬಾಸ್ ಕ್ಯಾಪ್ಟನ್ ಆದ ಕಾವ್ಯಾ; ಗಿಲ್ಲಿ ಬಿಟ್ಟು ಆಡಲು ಇದು ಅಗ್ನಿ ಪರೀಕ್ಷೆ – Kannada News | Kavya Shaiva became captain in Bigg Boss Kannada Season 12 this week

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇನ್ನೇನು ಕೆಲವೇ ವಾರಗಳಲ್ಲಿ ಮುಕ್ತಾಯ ಆಗಲಿದೆ. ಈ ಸೀಸನ್ ಆರಂಭ ಆದಾಗಿನಿಂದ ಗಿಲ್ಲಿ ನಟ (Gilli Nata) ಮತ್ತು ಕಾವ್ಯ ಶೈವ ಅವರು ಜೊತೆಯಾಗಿಯೇ ಇದ್ದಾರೆ. ಅವರಿಬ್ಬರ ನಡುವೆ ಜಗಳ ಬಂದಿದ್ದು ಕಡಿಮೆ. ಇದೇ ಕಾರಣಕ್ಕೆ ಅವರಿಬ್ಬರನ್ನು ಕೆಲವರು ಟೀಕೆ ಮಾಡಿದ್ದು ಕೂಡ ಇದೆ. ಕಾವ್ಯಾ ಅವರು ಯಾವಾಗಲೂ ಗಿಲ್ಲಿಯ ನೆರಳಲ್ಲಿ ಇರುತ್ತಾರೆ ಎಂಬುದು ಅನೇಕರು ಅಭಿಪ್ರಾಯ. ಆದರೆ ಈ ವಾರ ಕಾವ್ಯ ಶೈವ (Kavya Shaiva) ಅವರು ಬಿಗ್ ಬಾಸ್ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಲೂ ಅವರು ಗಿಲ್ಲಿಯ ನೆರಳಲ್ಲೇ ಇರುತ್ತಾರಾ ಅಥವಾ ಸಂಪೂರ್ಣ ಸ್ವತಂತ್ರವಾಗಿ ಆಟ ಆಡುತ್ತಾರಾ ಎಂಬ ಅಗ್ನಿಪರೀಕ್ಷೆ ಎದುರಾಗಲಿದೆ.

ಈ ವಾರ ಬಿಗ್ ಬಾಸ್ ಮನೆಯ ಕ್ಯಾಪ್ಟೆನ್ಸಿ ಆಟಕ್ಕೆ ಅಂತಿಮವಾಗಿ ಸೂರಜ್ ಸಿಂಗ್ ಮತ್ತು ಕಾವ್ಯ ಶೈವ ನಡುವೆ ಪೈಪೋಟಿ ಏರ್ಪಟ್ಟಿತ್ತು. ಬಿಗ್ ಬಾಸ್ ಮನೆಯ ಸದಸ್ಯರ ವೋಟಿಂಗ್ ಆಧಾರದ ಮೇಲೆ ಕ್ಯಾಪ್ಟನ್ ಯಾರು ಎಂಬುದನ್ನು ಆಯ್ಕೆ ಮಾಡಲಾಯಿತು. ಸೂರಜ್ ಸಿಂಗ್ ಪರವಾಗಿ ಅಶ್ವಿನಿ ಗೌಡ ಮತ್ತು ರಾಶಿಕಾ ಶೆಟ್ಟಿ ಅವರು ಮಾತ್ರ ವೋಟ್ ಮಾಡಿದರು.

ಕಾವ್ಯ ಶೈವ ಪರವಾಗಿ ಗಿಲ್ಲಿ ನಟ, ರಜತ್, ಮಾಳು ನಿಪನಾಳ, ಮ್ಯೂಟೆಂಟ್ ರಘು, ಸ್ಪಂದನಾ, ಚೈತ್ರಾ ಕುಂದಾಪುರ, ಧನುಶ್ ಅವರು ವೋಟ್ ಮಾಡಿದ್ದಾರೆ. ಈ ವಾರ ಕಾವ್ಯ ಅವರು ಆಟ ಆಡಿದ ರೀತಿಯು ಬಹುತೇಕರಿಗೆ ಇಷ್ಟ ಆಗಿದೆ. ಅಲ್ಲದೇ ಅವರ ಕ್ಯಾಪ್ಟನ್ಸಿ ಹೇಗಿರುತ್ತೆ ಎಂಬುದನ್ನು ನೋಡಬೇಕಿದೆ. ಹಾಗಾಗಿ ಅವರಿಗೆ ಕ್ಯಾಪ್ಟನ್ ಆಗುವ ಅವಕಾಶವನ್ನು ನೀಡಲಾಯಿತು.

ಕ್ಯಾಪ್ಟನ್ ಆದಾಗ ಹೆಚ್ಚು ಜವಾಬ್ದಾರಿ ಇರುತ್ತದೆ. ಕಾವ್ಯ ಅವರು ತಮ್ಮ ಸ್ವಂತಿಕೆಯನ್ನು ತೋರಿಸಲು ಇದು ಉತ್ತಮ ಅವಕಾಶ ಆಗಿದೆ. ಈಗ ಅವರು ಗಿಲ್ಲಿಯ ಹಂಗು ಇಲ್ಲದೇ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕಿದೆ. ಅವರ ಮೇಲೆ ಬಹುತೇಕರು ನಂಬಿಕೆ ಇಟ್ಟುಕೊಂಡು ವೋಟ್ ಮಾಡಿದ್ದಾರೆ. ಒಂದು ವೇಳೆ ಅವರು ಈ ನಂತರವೂ ಗಿಲ್ಲಿಯ ಜೊತೆಯೇ ಹೆಚ್ಚು ಕಾಲ ಕಳೆದರೆ ಸಿಕ್ಕ ಅವಕಾಶ ಕೈಚೆಲ್ಲಿದಂತೆ ಆಗುತ್ತದೆ. ಗಿಲ್ಲಿಯನ್ನು ಸಂಪೂರ್ಣ ಬಿಟ್ಟರೆ ಬಣ್ಣ ಬದಲಾಯಿಸಿದಂತೆ ಆಗುತ್ತದೆ. ಹಾಗಾಗಿ ಇದು ಕಾವ್ಯ ಪಾಲಿಗೆ ಅಗ್ನಿಪರೀಕ್ಷೆಯಂತಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು ಗೊತ್ತಾ?

ಇನ್ನು, ಈ ವಾರದ ಕಳಪೆ ಪಟ್ಟ ಚೈತ್ರಾ ಕುಂದಾಪುರ ಅವರಿಗೆ ನೀಡಲಾಗಿದೆ. ಟಾಸ್ಕ್ ವೇಳೆ ಚೈತ್ರಾ ಕುಂದಾಪುರ ಅವರು ಅತಿರೇಕದಿಂದ ವರ್ತಿಸಿದ್ದರಿಂದ 9 ಸದಸ್ಯರು ಅವರಿಗೆ ಕಳಪೆ ನೀಡಿದ್ದಾರೆ. ಆರಂಭದಲ್ಲಿ ಉತ್ತಮವಾಗಿ ಟಾಸ್ಕ್ ಆಡಿ ಕ್ಯಾಪ್ಟನ್ ಆಗಿದ್ದ ಚೈತ್ರಾ ಅವರು ಈ ವಾರ ಕಳಪೆ ಪಟ್ಟ ಪಡೆದು ಜೈಲು ಸೇರುವಂತಾಗಿದೆ. ಮನೆಯವರ ಆಯ್ಕೆಯ ಪ್ರಕಾರ ಕಾವ್ಯ ಶೈವ ಅವರು ಉತ್ತಮ ಪಟ್ಟ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | Ind vs SA T20 Final:India Beats South Africa by 30 Runs, Clinches Series 3 1

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 30 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳ ಅಂತ್ಯಕ್ಕೆ ರನ್ 201 ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಭಾರತ ಪ್ರವಾಸವನ್ನು ಆರಂಭಿಸಿದ್ದ ಆಫ್ರಿಕಾ ತಂಡ, ಟಿ20 ಸರಣಿ ಸೋಲಿನೊಂದಿಗೆ ತನ್ನ ಪ್ರವಾಸವನ್ನು ಅಂತ್ಯಗೊಳಿಸಿದೆ.

Published On – 11:00 pm, Fri, 19 December 25

Source link

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು ಸಿದ್ದತೆ ನಡೆಸಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಗೇಟ್ ಗಳನ್ನ ತೆರವು ಮಾಡಿ, ಡಿಸೆಂಬರ್ 24ರಿಂದ ಹೊಸ ಗೇಟ್ ಅಳವಡಿಕೆ ಕಾರ್ಯ ಶುರುವಾಗಲಿದೆ. ಮಳೆಗಾಲ ಆರಂಭಕ್ಕೂ ಮುನ್ನ ಗೇಟ್ ಅಳವಡಿಕೆ ಮಾಡಬೇಕು ಎನ್ನುವುದು ಸರ್ಕಾರದ ನಿರ್ಧಾರವಾಗಿದೆ. ಜೂನ್ ವೇಳೆಗೆ ಹೊಸ ಗೇಟ್‌ಗಳು ಅಳವಡಿಕೆಯಾಗಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Pandava Sera Valley: ಪಾಂಡವರು ತಂಗಿದ್ದ ಈ ಜಾಗದಲ್ಲಿ ಇಂದಿಗೂ ಕೂಡ ಭತ್ತ ನೈಸರ್ಗಿಕವಾಗಿ ಬೆಳೆಯುತ್ತಿವೆ! – Kannada News | Pandava Sera Valley: Unveiling Himalayan Mythology and Trekking in Uttarakhand

ಪಾಂಡವ ಸೆರಾ ಕಣಿವೆಯು ಉತ್ತರಾಖಂಡ ರಾಜ್ಯದ ಹಿಮಾಲಯ ಪರ್ವತಶ್ರೇಣಿಗಳ ಮಧ್ಯದಲ್ಲಿರುವ ಒಂದು ಅತ್ಯಂತ ಸುಂದರ ಹಾಗೂ ಪೌರಾಣಿಕ ಮಹತ್ವ ಹೊಂದಿರುವ ಕಣಿವೆಯಾಗಿದೆ. ಹಿಂದೂ ಮಹಾಕಾವ್ಯ ಮಹಾಭಾರತದ ಪ್ರಕಾರ, ಪಾಂಡವರು ವನವಾಸದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕೆಲಕಾಲ ತಂಗಿದ್ದರು ಎಂಬ ನಂಬಿಕೆ ಇದೆ. “ಸೆರಾ” ಎಂದರೆ ತಂಗುದಾಣ ಅಥವಾ ವಾಸಸ್ಥಳ ಎಂಬ ಅರ್ಥ ಬರುತ್ತದೆ. ಆದ್ದರಿಂದ ಪಾಂಡವರು ವಾಸಿಸಿದ್ದ ಸ್ಥಳವೆಂದು ಇದನ್ನು ಪಾಂಡವ ಸೆರಾ ಎಂದು ಕರೆಯಲಾಗಿದೆ.

ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮಹತ್ವ:

ಪಾಂಡವ ಸೆರಾ ಕಣಿವೆ ಸುತ್ತಮುತ್ತ ಅನೇಕ ಪುರಾತನ ಗುಹೆಗಳು, ಸಣ್ಣ ದೇವಾಲಯಗಳು ಮತ್ತು ಧ್ಯಾನಸ್ಥಳಗಳು ಇವೆ. ಸ್ಥಳೀಯ ಜನರ ನಂಬಿಕೆಯ ಪ್ರಕಾರ, ಪಾಂಡವರು ಇಲ್ಲಿ ತಪಸ್ಸು ಮತ್ತು ಧ್ಯಾನ ನಡೆಸಿದ್ದರು ಎಂದು ಹೇಳಲಾಗುತ್ತದೆ. ಈ ಪ್ರದೇಶವು ಇಂದಿಗೂ ಸಾಧು-ಸಂತರಿಗೆ ಆಧ್ಯಾತ್ಮಿಕ ಸಾಧನೆಗೆ ಸೂಕ್ತ ಸ್ಥಳವಾಗಿದೆ.

ಕುತೂಹಲಕಾರಿ ದಂತಕಥೆ:

ಪಾಂಡವ ಸೆರಾಗೆ ಭತ್ತಕ್ಕೆ ಬಿತ್ತನೆ ಅಥವಾ ಕೊಯ್ಲು ಅಗತ್ಯವಿಲ್ಲ. ಪ್ರತಿ ವರ್ಷ, ಭತ್ತದ ಬೆಳೆ ಇಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ
ಮತ್ತು ನಂತರ ಮಣ್ಣಿನಲ್ಲಿ ಕಣ್ಮರೆಯಾಗುತ್ತವೆ. ಹಳ್ಳಿಗರು ಇದನ್ನು ದೈವಿಕ ಕೊಡುಗೆ ಎಂದು ನಂಬುತ್ತಾರೆ, ಕಣಿವೆಯಲ್ಲಿ ಪಾಂಡವರ ಉಪಸ್ಥಿತಿಯ ಸಂಕೇತ. ಯಾತ್ರಿಕರು ಮತ್ತು ಚಾರಣಿಗರಿಗೆ, ಇದು ಪುರಾಣವನ್ನು ನೈಸರ್ಗಿಕ ಪ್ರಪಂಚದೊಂದಿಗೆ ಸಂಪರ್ಕಿಸುವ ಜೀವಂತ ಪವಾಡವಾಗಿದೆ.

ಜಾನಪದ ಕಥೆಗಳ ಪ್ರಕಾರ, ಪಾಂಡವರು ಮತ್ತು ದ್ರೌಪದಿ ಬದರಿನಾಥದ ಕಡೆಗೆ ಪ್ರಯಾಣ ಬೆಳೆಸಿದ ದಾರಿಯಲ್ಲಿ, ಅವರು ಮದ್ಮಹೇಶ್ವರ ಮತ್ತು ಪಾಂಡವಸೇರದಲ್ಲಿ ತಂಗಿದರು. ಇಲ್ಲಿ, ಅವರು ತಮ್ಮ ಪೂರ್ವಜರಿಗೆ ತರ್ಪಣ ಮಾಡಿ ತಮ್ಮ ಜೀವನವನ್ನು ನಡೆಸಲು ಭತ್ತವನ್ನು ಬೆಳೆದರ ಎಂದು ಹೇಳಲಾಗುತ್ತದೆ. ಅವರು ನಿರ್ಮಿಸಿದ ನೀರಾವರಿ ಕಾಲುವೆ ಇನ್ನೂ ಕಣಿವೆಯ ಮೂಲಕ ಹರಿಯುತ್ತದೆ, ಇದು ಅವರ ವಾಸ್ತವ್ಯಕ್ಕೆ ಮೌನ ಸಾಕ್ಷಿಯಾಗಿದೆ.

ಪಾಂಡವ ಸೆರಾ ಕಣಿವೆಯ ಪ್ರಕೃತಿ ಅತ್ಯಂತ ಮನಮೋಹಕವಾಗಿದೆ. ಹಿಮಾವೃತ ಪರ್ವತ ಶಿಖರಗಳು, ಹಸಿರುಗಾವಲುಗಳು ಮತ್ತು ಕಾಡುಗಳು, ಪರ್ವತಗಳಿಂದ ಹರಿಯುವ ಸಣ್ಣ ನದಿಗಳು ಮತ್ತು ಜಲಪಾತಗಳು, ಅಪರೂಪದ ಸಸ್ಯ ಮತ್ತು ಪ್ರಾಣಿ ಜಾತಿಗಳು, ಇಲ್ಲಿನ ಶುದ್ಧ ವಾತಾವರಣ ಮತ್ತು ನಿಶ್ಶಬ್ದತೆ ಮನಸ್ಸಿಗೆ ಅಪಾರ ಶಾಂತಿಯನ್ನು ನೀಡುತ್ತದೆ.

ಪ್ರವಾಸೋದ್ಯಮ ಮತ್ತು ಟ್ರೆಕ್ಕಿಂಗ್:

ಪಾಂಡವ ಸೆರಾ ಕಣಿವೆ ಸಾಹಸ ಪ್ರವಾಸಿಗರು ಮತ್ತು ಟ್ರೆಕ್ಕಿಂಗ್ ಪ್ರಿಯರಿಗೆ ವಿಶೇಷ ಆಕರ್ಷಣೆಯಾಗಿದೆ. ಇದು ಇನ್ನೂ ವ್ಯಾಪಕವಾಗಿ ವಾಣಿಜ್ಯೀಕರಣವಾಗಿಲ್ಲದಿರುವುದರಿಂದ, ನೈಸರ್ಗಿಕ ಸ್ವರೂಪ ಬಹುತೇಕ ಅಚಲವಾಗಿದೆ. ಪ್ರಕೃತಿ, ಪೌರಾಣಿಕತೆ ಮತ್ತು ಶಾಂತಿ ಹುಡುಕುವವರಿಗೆ ಇದು ಸೂಕ್ತ ತಾಣ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಭೇಟಿ ನೀಡಲು ಸೂಕ್ತ ಸಮಯ:

ಮೇ ಯಿಂದ ಅಕ್ಟೋಬರ್ ವರೆಗೆ ಭೇಟಿ ನೀಡಲು ಉತ್ತಮ ಸಮಯ. ಚಳಿಗಾಲದಲ್ಲಿ ಹೆಚ್ಚಿನ ಹಿಮಪಾತವಾಗುವುದರಿಂದ ಪ್ರವೇಶ ಕಷ್ಟಕರವಾಗಬಹುದು.

ಆಧ್ಯಾತ್ಮಿಕ ಮಹತ್ವ:

ಪಾಂಡವ ಸೆರಾದಿಂದ ಕೇವಲ 5 ಕಿ.ಮೀ ದೂರದಲ್ಲಿ ನಂದಿ ಕುಂಡವಿದೆ, ಇದು ಪವಿತ್ರ ಸರೋವರವಾಗಿದ್ದು, ಅಲ್ಲಿ ಸ್ನಾನ ಮಾಡುವುದರಿಂದ ಆತ್ಮಸಾಕ್ಷಿಯನ್ನು ಶುದ್ಧೀಕರಿಸುತ್ತದೆ ಎಂದು ನಂಬಲಾಗಿದೆ. ಪಾಂಡವ ಸೆರಾ ಮತ್ತು ನಂದಿ ಕುಂಡ ಒಟ್ಟಾಗಿ ಒಂದು ಆಧ್ಯಾತ್ಮಿಕ ವೃತ್ತವನ್ನು ರೂಪಿಸುತ್ತವೆ, ಇದು ಶಾಂತಿ ಮತ್ತು ತೃಪ್ತಿಯನ್ನು ಬಯಸುವ ಭಕ್ತರನ್ನು ಆಕರ್ಷಿಸುತ್ತದೆ. ಹತ್ತಿರದ ನಂದಾ ದೇವಿಯ ದೇವಾಲಯದಲ್ಲಿ ಪೂಜೆ ಮಾಡುವುದರಿಂದ ಆಸೆಗಳನ್ನು ಈಡೇರಿಸುತ್ತದೆ ಎಂದು ಹೇಳಲಾಗುತ್ತದೆ, ಇದು ಚಾರಣವನ್ನು ಭೌತಿಕ ಮತ್ತು ಆಧ್ಯಾತ್ಮಿಕ ಪ್ರಯಾಣವನ್ನಾಗಿ ಮಾಡುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್​​ ತಿಪ್ಪೇಸ್ವಾಮಿ ಮತ್ತು ಆನೇಕಲ್ ತಹಶಿಲ್ದಾರ್ ಶಶಿಧರ್ ಮಾಡ್ಯಾಳ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ

ಆನೇಕಲ್ ತಾಲ್ಲೂಕು ಕಛೇರಿ ಅಭಿಲೇಖಾಲಯದಲ್ಲಿ ಸರ್ಕಾರಿ ಗೋಮಾಳದ ದಾಖಲೆಗಳನ್ನು ತಿದ್ದಿದ್ದ ಆರೋಪದಡಿ ಆನೇಕಲ್ ತಾಲ್ಲೂಕು ಕಚೇರಿಯ 16 ಮಂದಿ ಅಧಿಕಾರಿಗಳ ವಿರುದ್ಧ ನವೆಂಬರ್​​​ 28ರಂದು ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇಲ್ಲಿಯವರೆಗೆ ಆನೇಕಲ್ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ.

ಎಚ್ಚರಿಕೆ ನೀಡಿದ ಹೋರಾಟಗಾರರು

ಜಿಲ್ಲಾಧಿಕಾರಿಗಳ ಸೂಚನೆಯಂತೆ ಕೇವಲ ಅಧಿಕಾರ ವಿರುದ್ದ ಮಾತ್ರ ತಹಶಿಲ್ದಾರ್ ಪ್ರಕರಣ ದಾಖಲಿಸಿದ್ದಾರೆ. ಆದರೆ ಕೋಟ್ಯಂತರ ರೂ ಮೌಲ್ಯದ ಸರ್ಕಾರಿ ಜಮೀನು ಕಬಳಿಸಿದ ಭೂಗಳ್ಳರ ವಿರುದ್ಧ ಎಫ್​​ಐಆರ್​ ದಾಖಲಿಸಿಲ್ಲ. ಹಾಗಾಗಿ ಕೂಡಲೇ ಭೂಗಳ್ಳರು ಸಹಿತ ಆರೋಪಿತ ಅಧಿಕಾರಿಗಳನ್ನು ಬಂಧಿಸಬೇಕು. ಇಲ್ಲವಾದರೆ ಆನೇಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಹೋರಾಟಗಾರ, ವಕೀಲ ಪುರುಷೋತ್ತಮ್​​​​ ಅವರು ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕು ಕಚೇರಿ ಖಾಲಿ ಖಾಲಿ

ಇನ್ನು ಎಫ್​​ಐಆರ್​ ದಾಖಲಾದ ಬಳಿಕ ತಾಲ್ಲೂಕು ಕಚೇರಿ ಖಾಲಿ ಖಾಲಿಯಾಗಿದೆ. ಬಹುತೇಕ ಅಧಿಕಾರಿಗಳು ಬಂಧನ ಭೀತಿ ಹಿನ್ನಲೆ ಪರಾರಿಯಾಗಿದ್ದಾರೆ. ತಹಶಿಲ್ದಾರ್ ಶಶಿಧರ್ ಮಾಡ್ಯಾಳ್ ಸಾಮಾನ್ಯ ಜನರಿಗೆ ಕಚೇರಿ ಸಮಯದಲ್ಲಿ ಸಿಗುತ್ತಿಲ್ಲ. ಸಂಜೆ ವೇಳೆ ಬಂದು ತಡರಾತ್ರಿವರೆಗೆ ದಾಖಲೆಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ತಹಶಿಲ್ದಾರ್ ಕಚೇರಿಯಲ್ಲಿ ಹಣವಂತರ ಕೆಲಸ ಮಾತ್ರ ನಡೆಯುತ್ತಿದೆ. ಜನಸಾಮಾನ್ಯರು ಕಚೇರಿಗೆ ಅಲೆದಾಡುತ್ತಿದ್ದಾರೆ ಎಂದು ಆನೇಕಲ್ ತಹಶಿಲ್ದಾರ್ ವಿರುದ್ಧ ವಕೀಲ ಆನಂದ್ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಒಟ್ಟಿನಲ್ಲಿ ಸರ್ಕಾರಿ ಸ್ವತ್ತುಗಳನ್ನು ರಕ್ಷಣೆ ಮಾಡಬೇಕಿದ್ದ ಸರ್ಕಾರಿ ಅಧಿಕಾರಿಗಳು ಪ್ರಭಾವಿಗಳ ಜೊತೆ ಶಾಮೀಲಾಗಿ ನೂರಾರು ಕೋಟಿ ರೂ ಮೌಲ್ಯದ ಆಸ್ತಿ ಭೂಗಳ್ಳರ ಪಾಲಾಗುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಭೂಗಳ್ಳರ ವಿರುದ್ಧ ಕ್ರಮ ಜರುಗಿಸುತ್ತಾರಾ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು.

ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ ಐತಿಹಾಸಿಕ ದೇವಾಲಯ ರಚನೆಗಳಿಂದ ಪ್ರಭಾವಿತರಾದರು. ದೇವಾಲಯದಲ್ಲಿ ರಾಹು ಕೇತು ಪೂಜೆಗಳಲ್ಲಿ ಭಾಗವಹಿಸಿದ ರಷ್ಯನ್ನರಲ್ಲಿ 29 ಮಹಿಳೆಯರು ಮತ್ತು 9 ಪುರುಷರು ಸೇರಿದ್ದರು. ದೇವಾಲಯದಲ್ಲಿ 2 ಗಂಟೆಗಳಿಗೂ ಹೆಚ್ಚು ಕಾಲ ಕಳೆದ ರಷ್ಯನ್ನರು ಇಲ್ಲಿ ನಡೆಯುತ್ತಿರುವ ಪೂಜೆಗಳ ಬಗ್ಗೆ ತಿಳಿದುಕೊಂಡರು. ದೇವಾಲಯದಲ್ಲಿನ ಶಿಲ್ಪಗಳಿಂದ ರಷ್ಯಾದ ಭಕ್ತರು ಪ್ರಭಾವಿತರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ ಬೆಂಬಲವಾಗಿ ಇದ್ದ ಅಂತ ಅವಳು ಹೇಳಿದ್ದಾಳೆ. ಅದು ಸುಳ್ಳು. ಅವನು ಕೂಡ ನನಗೆ ಮಾನಸಿಕ ಹಿಂಸೆ ನೀಡಿದ್ದಾನೆ’ ಎಂದು ಬಾಲಕೃಷ್ಣ ನಾಯ್ಕ್ (Balakrishna Naik) ಅವರು ಹೇಳಿದ್ದಾರೆ. ಇನ್ನೂ ಸಾಕಷ್ಟು ಆರೋಪಗಳನ್ನು ಅವರು ಮಾಡಿದ್ದಾರೆ. ವಿಡಿಯೋ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ – Kannada News | Husband sketch wife murder over affair with another woman

ಮೈಸೂರು, ಡಿಸೆಂಬರ್​ 19: ಮರ್ಯಾದೆ ಕೊಡದಿದ್ದಕ್ಕೆ ಪತ್ನಿ ಕೊಲೆಗೆ ಪತಿ ಸುಪಾರಿ ಕೊಟ್ಟಿದ್ದ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದ ಹಿನ್ನೆಲೆ ಪತ್ನಿ ಕೊಲೆಗೆ ಪತಿ ಸ್ಕೆಚ್ ಹಾಕಿದ್ದ. ಆದರೆ ಆ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಸದ್ಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಪೊಲೀಸ್ ಕಮಿಷನರ್‌ ಮೈಸೂರು ಸೀಮಾ ಲಾಟ್ಕರ್ ಮಾತನಾಡಿದ್ದು, ಮದುವೆ ಆಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇವಳು ಸತ್ತರೆ ನಾನು ಅವಳನ್ನ ಮನೆಗೆ ಕರೆದುಕೊಂಡು ಬರ್ತೀನಿ ಅಂತಾ ಮಹೇಶ್‌ ಫೋನ್‌ನಲ್ಲಿ ಮಾತನಾಡಿರುವುದು ಗೊತ್ತಾಗಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್ – Kannada News | Relative Talks about Kunigal Man Killed Who Loves 19 Year old Young Woman at Magadi

ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ. ಇನ್ನು ಕೊಲೆಯಾದ ಚಲುವ ಬಗ್ಗೆ ಸಂಬಂಧಿಗಳು ಮಾತನಾಡಿದ್ದು, ಏನು ಹೇಳಿದ್ದಾರೆ ಕೇಳಿ.

ಇದನ್ನೂ ಓದಿ: 40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ!

Source link

Exit mobile version