Headlines

ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ – Kannada News | Belagavi Tourism Alert: Forest Department Bans Entry to 9 Waterfalls in Khanapur and Jamboti Due to Heavy Rains

ಬೆಳಗಾವಿ, ಜುಲೈ 6: ಪಶ್ಚಿಮಘಟ್ಟದ ಭಾಗದಲ್ಲಿ ಮಳೆ ಚುರುಕು ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಜಾಂಬೋಟಿ ಮತ್ತು ಕಣಕುಂಬಿ ಪ್ರದೇಶದಲ್ಲಿ ಅಧಿಕ ಮಳೆಯಾಗುತ್ತಿದೆ. ಇದರಿಂದ ಜಲಪಾತಗಳು ಮೈದುಂಬಿಕೊಂಡಿದ್ದು ಧುಮ್ಮಿಕ್ಕಿ ಹರಿಯುತ್ತಿವೆ. ಇದನ್ನು ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಲಪಾತಗಳತ್ತ ಮುಖ ಮಾಡುತ್ತಿದ್ದು, ಅನಾಹುತಗಳನ್ನು ತಡೆಯಲು ಅರಣ್ಯ ಇಲಾಖೆಯು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಖಾನಾಪುರ ತಾಲೂಕಿನ ಬೆಟಣೆ, ಚಿಕಲೆ, ಚೋರ್ಲಾ, ಬಟವಾಡೆ ಫಾಲ್ಸ್ ಸೇರಿದಂತೆ ಒಟ್ಟು 9 ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವೇಶ ನಿರ್ಬಂಧ ಹೇರಿದೆ. ಈ ಪ್ರದೇಶಗಳನ್ನು…

Read More

ಒಳಚರಂಡಿ ತ್ಯಾಜ್ಯದಿಂದ ಕೋಟಿ ಕೋಟಿ ಆದಾಯ! ಬೆಂಗಳೂರಿನಲ್ಲಿ ದೇಶದಲ್ಲೇ ಅತಿ ದೊಡ್ಡ ವೇಸ್ಟ್ ಟು ವೆಲ್ತ್ ಯೋಜನೆಗೆ ಜಲಮಂಡಳಿ ಸಿದ್ಧತೆ – Kannada News | BWSSB to Generate Rs 120 Crore from Sewage Biogas; Bengaluru Hotels Adopt Waste to Gas Model to Tackle LPG Scarcity

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ತ್ಯಾಜ್ಯ ನೀರು ಇನ್ನು ಮುಂದೆ ಕೇವಲ ಕೊಳಚೆಯಾಗಿ ಉಳಿಯುವುದಿಲ್ಲ, ಬದಲಿಗೆ ಜಲಮಂಡಳಿಯ ಪಾಲಿಗೆ ಆದಾಯದ ಮೂಲವಾಗಲಿದೆ. ಬೆಂಗಳೂರು ಜಲಮಂಡಳಿಯು (BWSSB) ತನ್ನ ಐದು ಬೃಹತ್ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿಂದ (STP) ಹೊರಬರುವ ಜೈವಿಕ ಅನಿಲವನ್ನು (Biogas) ಕಂಪ್ರೆಸ್ಡ್ ಬಯೋಗ್ಯಾಸ್ (CBG) ಆಗಿ ಪರಿವರ್ತಿಸಿ ಮಾರಾಟ ಮಾಡಲು ಮುಂದಾಗಿದೆ. ಈ ಮೂಲಕ ಮುಂದಿನ 20 ವರ್ಷಗಳಲ್ಲಿ ಬರೋಬ್ಬರಿ 120 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಗಳಿಸುವ ಗುರಿ…

Read More

ವಿಜಯ್-ತ್ರಿಷಾ ಮದುವೆ ಆಗಲಿ ಎಂದು ಹಾರೈಸಿದ ಬಾಲಿವುಡ್ ನಟಿ – Kannada News | Vijay Trisha Marriage: Rakhi Sawant’s Call Amidst Divorce and Political Entry Buzz

ದಳಪತಿ ವಿಜಯ್ ಮತ್ತು ತ್ರಿಷಾ ಕೃಷ್ಣನ್ ನಡುವಿನ ಸ್ನೇಹದ ಬಗ್ಗೆ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಇಬ್ಬರೂ ಮದುವೆ ಆಗಲಿ ಎಂಬುದು ಕೆಲ ಅಭಿಮಾನಿಗಳ ಕೋರಿಕೆ. ಇದೀಗ ಈ ಚರ್ಚೆಗೆ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ಎಂಟ್ರಿಕೊಟ್ಟಿದ್ದಾರೆ ಎಂಬುದು ವಿಶೇಷ. ವಿಜಯ್ ಮತ್ತು ತ್ರಿಷಾ ಮದುವೆಯಾಗಬೇಕು ಎಂದು ಹೇಳುವ ಮೂಲಕ ರಾಖಿ ಸಂಚಲನ ಮೂಡಿಸಿದ್ದಾರೆ. 1. ವಿಜಯ್-ತ್ರಿಷಾ ಮದುವೆಯಾಗಲಿ ಎಂದ ರಾಖಿ ಸಾವಂತ್ 2. ವಿಜಯ್ ಮತ್ತು ಸಂಗೀತ ಅವರ ಡಿವೋರ್ಸ್ ವದಂತಿಗಳ ನಡುವೆ…

Read More

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ? – Kannada News | Bengaluru Police Commissioner Seemant Kumar Singh Talks flyover Open And Close On December 31 During New Year Celebration

ಬೆಂಗಳೂರು, ಡಿಸೆಂಬರ್ 26): ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್…

Read More

ಪ್ರಜ್ವಲ್​​ ವಿಡಿಯೋ ವೈರಲ್​​ ಹಿಂದೆ ಜೆಡಿಎಸ್​​ನವರದ್ದೂ ಕೈವಾಡ: ಚಾರ್ಜ್​​ಶೀಟ್​​ನಲ್ಲಿ ಸ್ಫೋಟಕ ಮಾಹಿತಿ ರಿವೀಲ್​​

ಹಾಸನ, ಮಾರ್ಚ್​​ 19: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್​ ಸಂಬಂಧ SIT ಸಲ್ಲಿಕೆ ಮಾಡಿರುವ ದೋಷಾರೋಪ ಪಟ್ಟಿ ಜೆಡಿಎಸ್ ವಲಯದಲ್ಲಿಯೇ ತಲ್ಲಣ ಮೂಡಿಸಿದೆ. ಪೆನ್​ಡ್ರೈವ್​ ಹಂಚಿದ ಕೇಸ್​ನ ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ, ಕಾಂಗ್ರೆಸ್​​ ಜೊತೆ ಜೆಡಿಎಸ್ ಕಾರ್ಯಕರ್ತರನ್ನೂ ಕೂಡ SIT ಆರೋಪಿಗಳಾಗಿಸಿರೋದು ನಾಯಕರ ಅಚ್ಚರಿಗೆ ಕಾರಣವಾಗಿದೆ. ಚಾರ್ಜ್​ಶೀಟ್​ನಲ್ಲಿ ಶಾಸಕ ಸ್ವರೂಪ್ ಚಿಕ್ಕಪ್ಪ ಹರ್ಷ ಅವರ ಪುತ್ರ ರೇವಂತ್, ರೇವಂತ್ ಸ್ನೇಹಿತ ತೇಜಸ್, ಭವಾನಿ ರೇವಣ್ಣ ಆಪ್ತ ಎನ್​.ಸಿ.ಹರೀಶ್, JDS ಕಾರ್ಯಕರ್ತ ಬೂವನಹಳ್ಳಿ…

Read More

ವಾರಕ್ಕೆ ಎರಡು ರಜೆಗೆ ಆಗ್ರಹ: ಬ್ಯಾಂಕ್ ಉದ್ಯೋಗಿಗಳಿಂದ ಜ. 27ರಂದು ರಾಷ್ಟ್ರವ್ಯಾಪಿ ಮುಷ್ಕರ – Kannada News | Bank employees decide nation wide strike on January 27th, demanding 5 day work week

ನವದೆಹಲಿ, ಜನವರಿ 5: ವಾರದ ಕಾರ್ಯದಿನಗಳನ್ನು ಐದಕ್ಕೆ ಮಿತಿಗೊಳಿಸಬೇಕೆಂದು (5 day work wek) ಆಗ್ರಹಿಸಿ ಬ್ಯಾಂಕ್ ಉದ್ಯೋಗಿಗಳು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಬ್ಯಾಂಕ್ ಉದ್ಯೋಗಿಗಳ ವಿವಿಧ ಒಕ್ಕೂಟಗಳ ವೇದಿಕೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್​ಬಿಯು) ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿರುವುದಾಗಿ ಘೋಷಿಸಿದೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಒಕ್ಕೂಟ (ಎಐಬಿಒಸಿ) ಈ ನಿರ್ಧಾರವನ್ನು ತಿಳಿಸಿ ಜನವರಿ 4ರಂದು ಸುತ್ತೋಲೆ ಹೊರಡಿಸಿದೆ. ಬ್ಯಾಂಕುಗಳಲ್ಲಿ ಈಗ ಭಾನುವಾರದ ಜೊತೆಗೆ ಎರಡನೇ ಶನಿವಾರ ಮತ್ತು ನಾಲ್ಕನೇ…

Read More

ಹೈಕೋರ್ಟ್​​ನಲ್ಲಿ ‘ಬಾಸ್’: ಜೂನ್ 30ಕ್ಕೆ ಭವಿಷ್ಯ ನಿರ್ಧಾರ – Kannada News | Boss Movie controversy, High court to hear case on June 30

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಕೊಲೆ ಕುರಿತು ಪ್ರಕರಣ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ನಟ ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕುರಿತಾದದ್ದು ಎನ್ನಲಾಗುತ್ತಿರುವ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿತ್ತು, ಆದರೆ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಿನಿಮಾದ ಬಿಡುಗಡೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಸಿನಿಮಾ ಬಿಡುಗಡೆಗೆ ತಾತ್ಕಾಲಿಕ ತಡೆ ತರುವಲ್ಲಿ ಯಶಸ್ವಿ ಆಗಿದ್ದರು. ಮಾರ್ಚ್ 27ರಂದು ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ದೊರಕಿತ್ತು,…

Read More

ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನೇ ಕದ್ದು ಧರಿಸುವ ಸೈಕೋ! ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತಿಯ ದೃಶ್ಯ

ಚಾಮರಾಜನಗರ, ಏಪ್ರಿಲ್ 8: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಚಿತ್ರ ಸೈಕೋಪಾತ್‌ ಒಬ್ಬನ ಕೈಚಳಕ ಮಹಿಳೆಯರಲ್ಲಿ ಭೀತಿ ಹುಟ್ಟಿಸಿದೆ. ಇಲ್ಲಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಮನೆಗಳ ಮುಂದೆ ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳು ಪದೇ ಪದೇ ನಾಪತ್ತೆಯಾಗುತ್ತಿದ್ದವು. ಇದರಿಂದ ಸಂಶಯಗೊಂಡ ನಿವಾಸಿಗಳು ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲಿಸಿದಾಗ ಅಸಲಿ ಸತ್ಯ ಕಂಡು ಬೆಚ್ಚಿಬಿದ್ದಿದ್ದಾರೆ. ತಡರಾತ್ರಿ ಮಹಿಳೆಯ ವೇಷದಲ್ಲಿ ಬರುವ ಈ ವ್ಯಕ್ತಿ,…

Read More

ನಾಪತ್ತೆಯಾಗಿದ್ದ ಕಾಂಗ್ರೆಸ್​​ ಮುಖಂಡ ಶವವಾಗಿ ಪತ್ತೆ: ನಡೀತಾ ಭೀಕರ ಕೊಲೆ?

ಚಿತ್ರದುರ್ಗ/ ಚಿಕ್ಕಮಗಳೂರು, ಏಪ್ರಿಲ್​​ 02: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್​ ಮುಖಂಡನ ಶವ ಪತ್ತೆಯಾಗಿದೆ. ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ‘ಕೈ’​ ಮುಖಂಡ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಮೂರು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ  ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ…

Read More