ಈರುಳ್ಳಿ ಬೆಲೆ ಕುಸಿತ: ರೈತರು ಈರುಳ್ಳಿಯ ಜತೆಗೆ ಚೀಲವನ್ನೂ ಉಚಿತವಾಗಿ ಕೊಟ್ಟು ಹೋಗಬೇಕಾದ ದುಸ್ಥಿತಿ
ದಾವಣಗೆರೆ, ಮಾ.19: ಎಲ್ಲಿಯೋ ನಡೆಯುತ್ತಿರುವ ಯುದ್ಧದ ಪರಿಣಾಮ ದಾವಣಗೆರೆಯ ಈರುಳ್ಳಿ ಮಾರುಕಟ್ಟೆಯ ಮೇಲೆ ಭೀಕರವಾಗಿ ಪರಿಣಾಮವನ್ನು ಉಂಟು ಮಾಡಿದೆ. ಬೆಲೆ ಕುಸಿತದಿಂದಾಗಿ ರೈತರು ಕಂಗಾಲಾಗಿದ್ದು, ತಾವು ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ತಂದ ಕೂಲಿಯೂ ಸಿಗದೆ ಒದ್ದಾಡಿದ್ದಾರೆ. ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜೆಗೆ ಕೇವಲ 6 ರಿಂದ 12 ರೂಪಾಯಿಗೆ ಕುಸಿದಿದೆ. ಉತ್ತಮ ಗಾತ್ರದ ಈರುಳ್ಳಿಗೂ ಕೇವಲ 10-12 ರೂಪಾಯಿ ಸಿಗುತ್ತಿದ್ದರೆ, ಸಣ್ಣ ಗಾತ್ರದ ಈರುಳ್ಳಿಗೆ 6-8 ರೂಪಾಯಿ ಮಾತ್ರ ಲಭಿಸುತ್ತಿದೆ. ಜಾಗತಿಕ ಯುದ್ಧದ ಭೀತಿಯಿಂದಾಗಿ ಇಂಧನ…