Headlines

ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ – Kannada News | Alyssa Healy achieved this historic feat ODI Cricket

ಭಾರತ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ್ತಿ ಅಲಿಸಾ ಹೀಲಿ ಭರ್ಜರಿ ಶತಕ ಸಿಡಿಸಿದ್ದಾರೆ. ವಿಶೇಷ ಎಂದರೆ ಇದು ಹೀಲಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯ. ಅಂದರೆ ವಿದಾಯ ಪಂದ್ಯದಲ್ಲಿ ಮೂರಂಕಿ ಮೊತ್ತಗಳಿಸುವ ಮೂಲಕ ಅಲಿಸಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹೋಬರ್ಟ್​ನ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ…

Read More

ಅಧಿಕಾರ ಹಂಚಿಕೆ ಚರ್ಚೆ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಹತ್ವದ ಹೇಳಿಕೆ ನೀಡಿದ ಡಿಕೆ ಶಿವಕುಮಾರ್ – Kannada News | Power Sharing Row: No Secret Talks With CM Siddaramaiah, Says DK Shivakumar at Bengaluru Airport

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಕಾಂಗ್ರೆಸ್​ನಲ್ಲಿ(Congress) ಅಧಿಕಾರ ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮಹತ್ವದ ಹೇಳಿಕೆ ನೀಡಿದ್ದಾರೆ. ದೆಹಲಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿರುವ ಅವರು, ಸಿಎಂ ಸಿದ್ದರಾಮಯ್ಯ ಜತೆ ಕದ್ದುಮುಚ್ಚಿ ಯಾವುದೇ ಮಾತುಕತೆ ನಡೆಸಿಲ್ಲ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಎಲ್ಲರೂ ಸೇರಿ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದೊಳಗೆ ಅನಗತ್ಯ ಗೊಂದಲ ಸೃಷ್ಟಿಸುವ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More

ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದ ಟ್ರಂಪ್; ಅಮೆರಿಕದ ಸುಂಕ ಮತ್ತೆ ಶೇ. 15ಕ್ಕೆ ಹೆಚ್ಚಳ – Kannada News | Donbald Trump Raises global tariff to 15 percent Calls US supreme Court Ruling Anti American

ವಾಷಿಂಗ್ಟನ್, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಕ್ಷಣವೇ ಜಾರಿಗೆ ಬರುವಂತೆ ಜಾಗತಿಕ ಸುಂಕವನ್ನು ಶೇ. 10ರಿಂದ ಶೇ. 15ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕವನ್ನು ಅಮೆರಿಕದ ಸುಪ್ರೀಂ ಕೋರ್ಟ್​ ರದ್ದುಗೊಳಿಸಿದ ಬೆನ್ನಲ್ಲೇ ಇಂದು ಮತ್ತೆ ಟ್ರಂಪ್ ಹೊಸ ಸುಂಕ ಘೋಷಣೆ ಮಾಡಿದ್ದಾರೆ. “ನಾನು, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕದ ಅಧ್ಯಕ್ಷನಾಗಿ, ತಕ್ಷಣವೇ ಜಾರಿಗೆ ಬರುವಂತೆ ಜಗತ್ತಿನ ಎಲ್ಲ ದೇಶಗಳ ಮೇಲಿನ ಶೇ. 10ರಷ್ಟು ಸುಂಕವನ್ನು ಕಾನೂನುಬದ್ಧವಾಗಿಯೇ ಶೇ. 15ಕ್ಕೆ ಹೆಚ್ಚಿಸಿದ್ದೇನೆ” ಎಂದು…

Read More

ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ ಈಕೆ – Kannada News | Sunetra Pawar takes oath as Maharashtra Dy CM, and becomes first woman to become Maha DCM

ಸುನೇತ್ರಾ ಪವಾರ್Image Credit source: Emmanual Yogoni, The Hindu ಮುಂಬೈ, ಜನವರಿ 31: ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ತಮ್ಮ ಪತಿಯ ಸ್ಥಾನವನ್ನು ಅವರು ತುಂಬಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ಸುನೇತ್ರಾ ಪವಾರ್ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ಆಗಿದ್ದಿಲ್ಲ. ಸುನೇತ್ರಾ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎನ್ನುವ…

Read More

ಮಿಂಚಿದ ಯಶವರ್ಧನ್; ಕೂಚ್ ಬೆಹಾರ್ ಟ್ರೋಫಿ ಗೆದ್ದ ಮಧ್ಯಪ್ರದೇಶ – Kannada News | Cooch Behar Trophy: Madhya Pradesh Crowned Champions, Yashvardhan Singh Chauhan Shines

ಮಧ್ಯಪ್ರದೇಶ ತಂಡವು ಅದ್ಭುತ ಪ್ರದರ್ಶನ ನೀಡುವ ಮೂಲಕ ಕೂಚ್ ಬೆಹಾರ್ ಟ್ರೋಫಿ (Cooch Behar Trophy) ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ವಲ್ಸಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಪಂದ್ಯದಲ್ಲಿ ಗುಜರಾತ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸುವಲ್ಲಿ ಮಧ್ಯಪ್ರದೇಶ ಯಶಸ್ವಿಯಾಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 216 ರನ್ ಕಲೆಹಾಕಿತು. ಉತ್ತರವಾಗಿ ಮಧ್ಯಪ್ರದೇಶ ತಂಡವು 178 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತು. ಇತ್ತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

ಕನಸಲ್ಲಿ ಕಾಡಿದ 3 ಮಹಿಳೆಯರು; ಭಯದಿಂದ ಪ್ರಾಣವನ್ನೇ ಕಳೆದುಕೊಂಡ ಯುವಕ – Kannada News | 25 Year Old dies by Suicide after fear of Dreams in Madhya Pradesh

ನವದೆಹಲಿ, ಜನವರಿ 13: ವಿಜ್ಞಾನವು ಎಷ್ಟೇ ಪ್ರಗತಿ ಸಾಧಿಸುತ್ತಿದ್ದರೂ ಮುಗ್ಧ ಜನರು ಮಾಟ- ಮಂತ್ರಗಳೆಂಬ ಮೂಢನಂಬಿಕೆಗಳಿಗೆ ಬಲಿಯಾಗುತ್ತಿದ್ದಾರೆ. ದೀರ್ಘಕಾಲ ನಿದ್ರಿಸಲು ಸಾಧ್ಯವಾಗದ ಮತ್ತು ಕನಸಿನಲ್ಲಿ ಬರುವ ದುಃಸ್ವಪ್ನಗಳ ಭಯವನ್ನು ಸಹಿಸಲಾಗದ ಯುವಕ ತನ್ನ ಜೀವನವನ್ನು ಮಾನಸಿಕ ಯಾತನೆಯಿಂದ (Depression) ಕೊನೆಗೊಳಿಸಿದ್ದಾರೆ. ಮೂವರು ಮಹಿಳೆಯರ ರೂಪದಲ್ಲಿ ಅವರನ್ನು ಕಾಡುತ್ತಿದ್ದ ಆ ದುಃಸ್ವಪ್ನಗಳು ಅವರನ್ನು ಸಾವಿನ ಮಡಿಲಿಗೆ ತಳ್ಳಿದ್ದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ. ಆಧುನಿಕ ಯುಗದಲ್ಲೂ ಮೂಢನಂಬಿಕೆಗಳು ಅಮಾಯಕರ ಜೀವಗಳನ್ನು ಬಲಿ ಪಡೆಯುತ್ತಿವೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 25…

Read More

ಪಶ್ಚಿಮ ಏಷ್ಯಾ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯಗಳ ಸಿದ್ಧತೆ ಪರಿಶೀಲಿಸಲು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಸಭೆ

ನವದೆಹಲಿ, ಮಾರ್ಚ್ 27: ಇರಾನ್ ಜೊತೆಗಿನ ಇಸ್ರೇಲ್ ಮತ್ತು ಅಮೆರಿಕದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ನಿರ್ಬಂಧದಿಂದ ಉಂಟಾದ ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಇಂಧನ ಪೂರೈಕೆಯ ಕುರಿತಾದ ಸಿದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವರ್ಚುವಲ್ ಆಗಿ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಅವರ ಸನ್ನದ್ಧತೆ ಮತ್ತು ಯೋಜನೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ…

Read More

20ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಟಿಬಿ ಜಯಚಂದ್ರ

ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರಚನೆಯ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ನ ಹಿರಿಯ ಶಾಸಕರು ಈ ವಿಷಯವಾಗಿ ದೆಹಲಿಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಯಾವುದೇ ನಿರ್ದಿಷ್ಟ ನಾಯಕತ್ವ ಹೆಸರಿನಲ್ಲಲ್ಲದೆ, ಮೂರು, ನಾಲ್ಕು, ಐದು ಬಾರಿ ಶಾಸಕರಾಗಿರುವ ಅನುಭವಿಗಳು ಒಟ್ಟಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಶಾಸಕರ ದೆಹಲಿ ಪ್ರವಾಸದ ಬಗ್ಗೆ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟದ ಅವಧಿ ಮೂರು ವರ್ಷಗಳನ್ನು ಪೂರೈಸಿದ್ದು,…

Read More

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’! – Kannada News | Inhuman Social Boycott in Chamarajanagar: Kenchamma Fights for Justice Against Elders

ಚಾಮರಾಜನಗರ, ಏ.17: ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ನೋಡಲು ತವರು ಮನೆಗೆ ಹೋದ ಮಹಿಳೆಗೆ ಗ್ರಾಮದ ಯಜಮಾನರು ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಅನಿಷ್ಠ ಪದ್ಧತಿಯನ್ನು ಮುಂದುವರಿಸಿದ್ದಾರೆ.ಇದೀಗ ಈ ಬಗ್ಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಯರಂಬಾಡಿ ಮೂಲದ ಕೆಂಚಮ್ಮ ಎಂಬುವವರು ಹೂಗ್ಯಂ ಗ್ರಾಮದ ರಾಮು ಎಂಬುವವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಕೆಂಚಮ್ಮ ಅವರ ತಾಯಿಗೆ ಆರೋಗ್ಯ ಕೈಕೊಟ್ಟ ಕಾರಣ, ಅವರನ್ನು ಉಪಚರಿಸಲು ಕೆಂಚಮ್ಮ ತವರು ಮನೆಗೆ ತೆರಳಿದ್ದರು. ತವರು…

Read More