ವೈಭವ್ ಮಾತ್ರ ಅಲ್ಲ, ನಮ್ ಹುಡುಗ್ರು ಆಡ್ತಾರೆ; ಯೂನಿವರ್ಸಲ್ ಬೇಬಿ ಬಾಸ್ ಬಗ್ಗೆ ದ್ರಾವಿಡ್ ಮಾತು – Kannada News | Maharaja T20 Trophy: Rahul Dravid Praises Vaibhav Sooryavanshi as Unique Talent

ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ (Maharaja T20 Trophy) ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಈಗಾಗಲೇ ಹರಾಜು ಕೂಡ ನಡೆದಿದೆ. ಈ ಲೀಗ್​ನಲ್ಲಿ ಭಾಗವಹಿಸುತ್ತಿರುವ ಐದು ಫ್ರಾಂಚೈಸಿಗಳು ಕೂಡ ಬಲಿಷ್ಠ ತಂಡಗಳನ್ನು ಕಟ್ಟಿಕೊಂಡು ಅಖಾಡಕ್ಕಿಳಿಯಲು ಸಜ್ಜಾಗಿವೆ. ಅದರ ಭಾಗವಾಗಿ ಈ ಟೂರ್ನಿಗೆ ಆತಿಥ್ಯವಹಿಸುತ್ತಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಟೂರ್ನಿಯ ಟ್ರೋಫಿ ಅನಾವರಣ ಕಾರ್ಯಕ್ರಮವನ್ನು ಜೂನ್ 11 ರಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ (Rahul Dravid) ಕೂಡ ಭಾಗವಹಿಸಿದ್ದರು. ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ದ್ರಾವಿಡ್, ತಮ್ಮ ಶಿಷ್ಯ ವೈಭವ್ ಸೂರ್ಯವಂಶಿಯನ್ನು (Vaibhav Sooryavanshi) ಹೊಗಳಿ ಮಾತನಾಡಿದ್ದಾರೆ.

ಹೋಲಿಕೆ ಮಾಡುವುದು ಸರಿಯಲ್ಲ

ಮೊದಲಿಗೆ ಮಹಾರಾಜ ಟ್ರೋಫಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ರಾಹುಲ್ ಉತ್ತರಿಸಿದರು. ಇದೇ ವೇಳೆ ಪತ್ರಕರ್ತರೊಬ್ಬರು, ‘ವೈಭವ್ ಸೂಯವಂಶಿಯಂತಹ ಆಟಗಾರರು ಕರ್ನಾಟಕದಲ್ಲೂ ಹುಟ್ಟಿಕೊಳ್ತಾರಾ ಎಂಬ ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ದ್ರಾವಿಡ್, ಎಲ್ಲಾ ಆಟಗಾರರನ್ನು ವೈಭವ್ ಸೂರ್ಯವಂಶಿಗೆ ಹೋಲಿಕೆ ಮಾಡುವುದು ಸರಿಯಲ್ಲ. ವೈಭವ್ ಒಬ್ಬ ಅಪರೂಪದ ಆಟಗಾರ. ಸಚಿನ್ ತೆಂಡೂಲ್ಕರ್ ಬಳಿಕ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರ ವೈಭವ್. ಸಚಿನ್​ ರೀತಿ ಮತ್ತೊಬ್ಬ ಆಟಗಾರ 15 ವರ್ಷಕ್ಕೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಲು 40 ವರ್ಷಗಳು ಬೇಕಾಯ್ತು.

ಆತ ವಿಶೇಷ ಪ್ರತಿಭೆ

ಹೀಗಾಗಿ 40 ಆದ ಬಳಿಕ ಮತ್ತೊಬ್ಬ ವೈಭವ್ ಸೂರ್ಯವಂಶಿ ಹುಟ್ಟಿಕೊಳ್ತಾನೆ. ಹಾಗಂತ ಯಾರನ್ನು ಹೋಲಿಕೆ ಮಾಡಲು ಹೋಗಬಾರದು. ನಮ್ಮ ಹುಡುಗರು ಕೂಡ ಚೆನ್ನಾಗಿ ಆಡ್ತಾರೆ. ಆದ್ರೆ ವೈಭವ್ ಒಬ್ಬ ಯೂನಿಕ್ ಪ್ಲೇಯರ್ ನಾವು ಅದನ್ನು ಒಪ್ಪಿಕೊಳ್ಳಬೇಕು. ಆತ ಅದ್ಭುತವಾಗಿ ಆಡುತ್ತಿದ್ದಾನೆ. ಆತ ವಿಶೇಷ ಪ್ರತಿಭೆ. ಆತ ಮುಂದೆಯೂ ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸುತ್ತಾನೆ ಅಂತ ಭಾವಿಸಿದ್ದೇನೆ. ಆತ ಚೆನ್ನಾಗಿ ಆಡಿ ತಂಡವನ್ನು ಗೆಲ್ಲಿಸಲಿ’ ಎಂದು ದ್ರಾವಿಡ್ ಹೇಳಿದ್ದಾರೆ.

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ

ತ್ರಿಕೋನ ಸರಣಿಯಲ್ಲಿ ವೈಭವ್ ಪ್ರದರ್ಶನ

ದ್ರಾವಿಡ್ ಹೇಳಿಕೆಯಂತೆ ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವ ಕ್ರಿಕೆಟ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಈಗಷ್ಟೇ ಮುಗಿದ ಐಪಿಎಲ್‌ನಲ್ಲಿ 776 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಕೂಡ ಗೆದ್ದಿದ್ದರು. ಇದರ ಫಲವಾಗಿ ವೈಭವ್​ಗೆ ಭಾರತ ಎ ತಂಡ, ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸಕ್ಕೆ ಭಾರತ ಟಿ20 ತಂಡದಲ್ಲೂ ಅವಕಾಶ ನೀಡಲಾಗಿದೆ. ಪ್ರಸ್ತುತ ಭಾರತ ಎ ತಂಡದೊಂದಿಗೆ ಶ್ರೀಲಂಕಾ ಪ್ರವಾಸ ಮಾಡಿರುವ ವೈಭವ್, ಶ್ರೀಲಂಕಾ ಎ ವಿರುದ್ಧದ ಮೊದಲ ಪಂದ್ಯದಲ್ಲಿ 12 ಎಸೆತಗಳಲ್ಲಿ 14 ರನ್ ಬಾರಿಸಿದರೆ, ಅಫ್ಘಾನಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ 22 ಎಸೆತಗಳಲ್ಲಿ 44 ರನ್ ಬಾರಿಸಿದರು.

Published On – 4:06 pm, Fri, 12 June 26

Source link

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳಕು: ನಟನ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ – Kannada News | Sri Rama Sene Protests Against Actor Prakash Raj in Belagavi Over Dharmasthala Case Link

ಬೆಳಗಾವಿ, ಜೂನ್​​ 12: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​​ಗೆ ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರು ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ, ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ಪ್ರಕಾಶ್ ರಾಜ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಲಾಗಿದೆ. ಪ್ರತಿಭಟನಾಕಾರರು ಧರ್ಮದ್ರೋಹಿ ಪ್ರಕಾಶ್ ರಾಜ್ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಟೇಕ್​ಆಫ್ ವೇಳೆ ಲಕ್ನೋದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ! – Kannada News | Delhi Bound IndiGo Flight gets Bomb Threat Minutes Before Takeoff From Lucknow

ಲಕ್ನೋ, ಜೂನ್ 12: ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಬೇಕಿದ್ದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯ ವಿಮಾನ ಹಾರಾಟ ಆರಂಭಿಸುವ ಕೆಲವೇ ಕ್ಷಣಗಳ ಮುನ್ನ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದಿದೆ. ಇಂಡಿಗೋ ವಿಮಾನವು ರನ್‌ವೇ ಕಡೆಗೆ ಚಲಿಸಲು ಸಜ್ಜಾಗುತ್ತಿದ್ದಾಗ, ವಿಮಾನ ನಿಲ್ದಾಣದ ಏರ್‌ಲೈನ್ಸ್ ಕಂಟ್ರೋಲ್ ರೂಮ್‌ಗೆ ಈ ವಿಮಾನದಲ್ಲಿ ಬಾಂಬ್ (Bomb Threat) ಇಡಲಾಗಿದೆ ಎಂಬ ಅನಾಮಧೇಯ ಬೆದರಿಕೆ ಸಂದೇಶ ಬಂದಿದೆ. ಇದನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸಿದ ಪೈಲಟ್ ಮತ್ತು ಎಟಿಎಸ್ (Air Traffic Control) ಅಧಿಕಾರಿಗಳು ಹಾರಾಟವನ್ನು ತುರ್ತಾಗಿ ಸ್ಥಗಿತಗೊಳಿಸಿದರು.

ಬಾಂಬ್ ಬೆದರಿಕೆಯ ಚೀಟಿ ಪತ್ತೆಯಾದ ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಭದ್ರತಾ ಸಂಸ್ಥೆಗಳಿಗೆ ತುರ್ತು ಮಾಹಿತಿ ನೀಡಲಾಯಿತು. ಭದ್ರತಾ ಸಿಬ್ಬಂದಿಯು ನಿಗದಿಪಡಿಸಿದ ಸುರಕ್ಷತಾ ನಿಯಮಾವಳಿಗಳ ಪ್ರಕಾರ ವಿಮಾನದಾದ್ಯಂತ ಸಮಗ್ರ ತಪಾಸಣೆ ನಡೆಸಿದರು.

ಇದನ್ನೂ ಓದಿ: ಇಂಡಿಗೋ ವಿಮಾನದೊಳಗೆ 25 ನಿಮಿಷ ಎಸಿ, ಕರೆಂಟ್ ಇಲ್ಲದೆ ಕತ್ತಲಲ್ಲಿ ಒದ್ದಾಡಿದ ಪ್ರಯಾಣಿಕರು

ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಯಿತು. ವಿಮಾನವನ್ನು ತಕ್ಷಣವೇ ರನ್‌ವೇಯಿಂದ ದೂರವಿರುವ ಸುರಕ್ಷಿತ ‘ಐಸೊಲೇಶನ್ ಬೇ’ಗೆ ಕೊಂಡೊಯ್ಯಲಾಯಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಮತ್ತು ಸಿಬ್ಬಂದಿಯನ್ನು ತುರ್ತು ನಿರ್ಗಮನ ದ್ವಾರಗಳ ಮೂಲಕ ಅತ್ಯಂತ ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು.

ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳವು (BDS) ತರಬೇತಿ ಪಡೆದ ಶ್ವಾನದಳದೊಂದಿಗೆ ವಿಮಾನದ ಒಳಭಾಗ, ಇಂಜಿನ್ ಹಾಗೂ ಪ್ರಯಾಣಿಕರ ಎಲ್ಲಾ ಲಗೇಜ್‌ಗಳನ್ನು ಸಂಪೂರ್ಣವಾಗಿ ಜಾಲಾಡಿದ್ದಾರೆ. ಆದರೆ, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಸುರಕ್ಷತೆಯ ದೃಷ್ಟಿಯಿಂದ ಇಡೀ ವಿಮಾನವನ್ನು ಸಂಪೂರ್ಣ ಮರು-ಪರಿಶೀಲನೆಗೆ ಒಳಪಡಿಸಬೇಕಾಗಿ ಬಂದಿದ್ದರಿಂದ ದೆಹಲಿಗೆ ಹೋಗಬೇಕಿದ್ದ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಗಂಟೆಗಟ್ಟಲೆ ಕಾಯಬೇಕಾಯಿತು.

ಇದನ್ನೂ ಓದಿ: ಬೆಂಗಳೂರು-ದೆಹಲಿ ಇಂಡಿಗೋ ಫ್ಲೈಟ್‌ನಲ್ಲಿ ಹುಸಿ ಬಾಂಬ್ ಬೆದರಿಕೆ!

ಇತ್ತೀಚಿನ ದಿನಗಳಲ್ಲಿ ಭಾರತೀಯ ವಿಮಾನಗಳಿಗೆ ಇಂತಹ ಹುಸಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಹೆಚ್ಚಾಗುತ್ತಿದ್ದು, ಈ ಕರೆಯ ಹಿಂದೆ ಯಾರಿದ್ದಾರೆ ಮತ್ತು ಸಂದೇಶ ಎಲ್ಲಿಂದ ಬಂದಿದೆ ಎಂಬುದರ ಕುರಿತು ಲಕ್ನೋ ಸೈಬರ್ ಕ್ರೈಮ್ ಮತ್ತು ಸ್ಥಳೀಯ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಭಾರತದ ಸಿಬ್ಬಂದಿಯಿದ್ದ ಹಡಗುಗಳ ಮೇಲೆ ದಾಳಿ; ಅಮೆರಿಕದ ರಾಯಭಾರಿಗೆ ಭಾರತ 2ನೇ ಬಾರಿ ಸಮನ್ಸ್ – Kannada News | India summons US diplomat for second time over attacks on ships with India crew

ನವದೆಹಲಿ, ಜೂನ್ 12: ಅಮೆರಿಕ ಪಡೆಗಳು ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಿಬ್ಬಂದಿಯಿದ್ದ ವಾಣಿಜ್ಯ ಹಡಗುಗಳ ಮೇಲೆ ನಡೆಸುತ್ತಿರುವ ಸರಣಿ ಕ್ಷಿಪಣಿ ದಾಳಿಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ನವದೆಹಲಿಯಲ್ಲಿರುವ ಅಮೆರಿಕದ (United States) ಹಿರಿಯ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರಿಗೆ ಕೇವಲ 2 ದಿನಗಳಲ್ಲಿ ಎರಡನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದೆ. ಪಶ್ಚಿಮ ಏಷ್ಯಾ ಮತ್ತು ಒಮಾನ್ ಕರಾವಳಿಯ ಬಳಿ ಭಾರತೀಯ ನಾವಿಕರನ್ನು ಒಳಗೊಂಡ ವಾಣಿಜ್ಯ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕದ ಮಿಲಿಟರಿ ಪಡೆಗಳು ನಡೆಸುತ್ತಿರುವ ಸರಣಿ ದಾಳಿಗಳು ಭಾರತ ಮತ್ತು ಅಮೆರಿಕ ನಡುವಿನ ರಾಜತಾಂತ್ರಿಕ ಬಾಂಧವ್ಯದಲ್ಲಿ ಬಿರುಕು ಮೂಡಿಸಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಅಮೆರಿಕದ ಪ್ರಭಾರ ರಾಯಭಾರಿ ಜೇಸನ್ ಮೀಕ್ಸ್ ಅವರನ್ನು ಕರೆಸಿಕೊಂಡು ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಅಮೆರಿಕ ಪಡೆಗಳು ಇರಾನ್ ತೈಲ ದಿಗ್ಬಂಧನ ಉಲ್ಲಂಘನೆಯ ಆರೋಪದ ಮೇಲೆ ‘ಎಂ/ಟಿ ಜಲವೀರ್’ ಎಂಬ ಹಡಗಿನ ಇಂಜಿನ್ ಕೋಣೆಗೆ ಎರಡು ‘ಹೆಲ್‌ಫೈರ್ ಕ್ಷಿಪಣಿ’ಗಳನ್ನು ಉಡಾಯಿಸಿದ್ದನ್ನು ಅಧಿಕೃತವಾಗಿ ಒಪ್ಪಿಕೊಂಡ ಬೆನ್ನಲ್ಲೇ ಭಾರತ ಈ ಕಠಿಣ ಕ್ರಮ ಕೈಗೊಂಡಿದೆ. ಈ ಹಡಗಿನಲ್ಲಿ ಭಾರತೀಯ ಸಿಬ್ಬಂದಿ ಕೂಡ ಇದ್ದರು.

ಇದನ್ನೂ ಓದಿ: ಒಮಾನ್ ಬಳಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಭಾರತೀಯ ಸಿಬ್ಬಂದಿಯನ್ನು ಹೊಂದಿದ್ದ ಹಡಗುಗಳ ಮೇಲೆ ಇತ್ತೀಚೆಗೆ ನಡೆದ ಮೂರು ದಾಳಿಗಳು ಈ ಕಠಿಣ ನಿರ್ದೇಶನಕ್ಕೆ ಕಾರಣವಾಗಿವೆ. ಇದರಲ್ಲಿ ಓಮನ್ ಕರಾವಳಿಯ ಬಳಿ ನಡೆದ ಒಂದು ಭೀಕರ ದಾಳಿಯು ಮೂವರು ಭಾರತೀಯ ನಾವಿಕರ ಜೀವವನ್ನು ಬಲಿ ತೆಗೆದುಕೊಂಡಿತ್ತು. ಅಧಿಕೃತ ಅಂದಾಜಿನ ಪ್ರಕಾರ, ಭಾರತದ ಧ್ವಜವನ್ನು ಹೊಂದಿರುವ 13 ಹಡಗುಗಳಲ್ಲಿ ಸದ್ಯ 622 ಭಾರತೀಯ ನಾವಿಕರು ಹಾರ್ಮುಜ್ ಜಲಸಂಧಿಯ ಪೂರ್ವ ಮತ್ತು ಪಶ್ಚಿಮದ ಕಡಲ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದು ಕೇವಲ ಒಂದೇ ವಾರದಲ್ಲಿ ಭಾರತೀಯ ನಾವಿಕರಿದ್ದ ಹಡಗುಗಳ ಮೇಲೆ ನಡೆದ ಮೂರನೇ ದಾಳಿಯಾಗಿದೆ. ಇದಕ್ಕೂ ಮುನ್ನ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದರು. ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಅಮೆರಿಕದ ರಾಜತಾಂತ್ರಿಕ ಅಧಿಕಾರಿ ಜೇಸನ್ ಮೀಕ್ಸ್ ಅವರ ಮುಂದೆ ಪ್ರಮುಖವಾಗಿ ಮೂರು ಬೇಡಿಕೆ ಹಾಗೂ ಆಕ್ಷೇಪಗಳನ್ನು ಮಂಡಿಸಿದ್ದಾರೆ.

ಇದನ್ನೂ ಓದಿ: Kharg Island: ವೆನೆಜುವೆಲಾ ಬಳಿಕ ಖಾರ್ಗ್ ದ್ವೀಪದ ಮೇಲೆ ಕಣ್ಣಿಟ್ಟ ಟ್ರಂಪ್; ಇರಾನ್​ಗೆ ಈ ಸಣ್ಣ ಪ್ರದೇಶವೇಕೆ ಬಹಳ ಮುಖ್ಯ?

ಕಡಲ ವ್ಯಾಪಾರ ಮಾರ್ಗಗಳಲ್ಲಿ ಸಂಚರಿಸುವ ಯಾವುದೇ ದೇಶದ ಹಡಗುಗಳಾಗಿದ್ದರೂ, ಅದರಲ್ಲಿರುವ ನಾಗರಿಕ ಸಿಬ್ಬಂದಿ ಮತ್ತು ಭಾರತೀಯ ನಾವಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ನಿರಪರಾಧಿ ನಾವಿಕರ ಜೀವಕ್ಕೆ ಕುತ್ತು ತರುವ ಇಂತಹ ದಾಳಿಗಳು ಒಪ್ಪಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಗಲ್ಫ್ ಮತ್ತು ಒಮಾನ್ ಕರಾವಳಿ ವಲಯದಲ್ಲಿ ಅಮೆರಿಕ ಮಿಲಿಟರಿ ನಡೆಸುತ್ತಿರುವ ಇಂತಹ ಏಕಪಕ್ಷೀಯ ಆಕ್ರಮಣಕಾರಿ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಎಲ್ಲಾ ದೇಶಗಳು ಸಂಯಮ ಕಾಯ್ದುಕೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನ ಆರ್ಥಿಕ ಬೆನ್ನೆಲುಬಾಗಿರುವ ತೈಲ ಮಾರುಕಟ್ಟೆಯನ್ನು ಧ್ವಂಸಗೊಳಿಸಲು ಮತ್ತು ಖಾರ್ಗ್ ದ್ವೀಪವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಕಡಲ ದಿಗ್ಬಂಧನ ವಿಧಿಸಿದ್ದಾರೆ. ಈ ದಿಗ್ಬಂಧನವನ್ನು ಮೀರಿ ಇರಾನ್ ತೈಲ ಸಾಗಿಸುವ ಹಡಗುಗಳ ಮೇಲೆ ಅಮೆರಿಕದ ಯುದ್ಧ ವಿಮಾನಗಳು ದಾಳಿ ಮಾಡುತ್ತಿವೆ. ಆದರೆ, ಇಲ್ಲಿನ ಬಹುತೇಕ ಅಂತಾರಾಷ್ಟ್ರೀಯ ಹಡಗುಗಳಲ್ಲಿ ಭಾರತದ ನಾವಿಕರು ಕೆಲಸ ಮಾಡುತ್ತಿರುವುದರಿಂದ ಭಾರತವು ಈಗ ನೇರವಾಗಿ ಅಮೆರಿಕದ ಕೃತ್ಯದ ವಿರುದ್ಧ ರಾಜತಾಂತ್ರಿಕವಾಗಿ ವಿರೋಧ ವ್ಯಕ್ತಪಡಿಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಬಾಲಿವುಡ್​​ನ ಸೀಕ್ವೆಲ್ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಕತ್ರಿನಾ ಕೈಫ್ ರೆಡಿ? – Kannada News | After Break, Katrina Kaif Ready for Comeback: Is Chandni Bar 2 Her Next Film

ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ (Katrina Kaif) ಸದ್ಯದಲ್ಲೇ ಮತ್ತೆ ಬಣ್ಣದ ಲೋಕಕ್ಕೆ ಮರಳಲಿದ್ದಾರೆ ಎಂಬ ಬಿಸಿಬಿಸಿ ಚರ್ಚೆ ಬಿಟೌನ್‌ನಲ್ಲಿ ಕೇಳಿಬರುತ್ತಿದೆ. ನಟ ವಿಕ್ಕಿ ಕೌಶಲ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಳಿಕವೂ ಅವರು ಸಿನಿಮಾ ಮಾಡಿದರು. ಆದರೆ, ಮಗು ಜನಿಸಿದ ನಂತರದಲ್ಲಿ ಕತ್ರಿನಾ ಕೈಫ್ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಬ್ರೇಕ್ ನಂತರ ಅವರು ಚಿತ್ರರಂಗಕ್ಕೆ ಮರಳುತ್ತಿದ್ದಾರೆ ಎಂದು ವರದಿ ಆಗಿದೆ.

ಸಿನಿಮಾಗಳಿಂದ ಕತ್ರಿನಾ ಕೈಫ್ ಸುದೀರ್ಘ ಬ್ರೇಕ್ ಪಡೆದಾಗ, ಚಿತ್ರರಂಗದಲ್ಲಿ ಒಂದು ದೊಡ್ಡ ವದಂತಿ ಹಬ್ಬಿತ್ತು. ನಟಿ ಅನುಷ್ಕಾ ಶರ್ಮಾ ಅವರು ತಾಯಿಯಾದ ಮೇಲೆ ಹೇಗೆ ಸಿನಿಮಾಗಳಿಂದ ಸಂಪೂರ್ಣ ದೂರ ಸರಿದು ಸಂಸಾರದತ್ತ ಗಮನ ಹರಿಸಿದರೋ, ಅದೇ ರೀತಿ ಕತ್ರಿನಾ ಕೂಡ ಚಿತ್ರರಂಗಕ್ಕೆ ಗುಡ್‌ಬೈ ಹೇಳಲಿದ್ದಾರೆ ಎಂದೇ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ಆದರೆ, ಈಗ ಕೇಳಿಬರುತ್ತಿರುವ ಹೊಸ ಅಪ್ಡೇಟ್‌ಗಳು ಆ ಎಲ್ಲಾ ಮಾತುಗಳೂ ಬರಿ ಸುಳ್ಳು ಎಂಬುದನ್ನು ಸಾಬೀತುಪಡಿಸಿವೆ. ಕತ್ರಿನಾ ಚಿತ್ರರಂಗ ತೊರೆಯುತ್ತಿಲ್ಲ, ಬದಲಿಗೆ ಭರ್ಜರಿ ಕಂಬ್ಯಾಕ್‌ಗೆ ರೆಡಿಯಾಗುತ್ತಿದ್ದಾರೆ.

‘ಚಾಂದಿನಿ ಬಾರ್ 2’ ನಲ್ಲಿ ಕತ್ರಿನಾ ಕಮಾಲ್?

ಫಿಲ್ಮ್ ಫೇರ್ ವರದಿಯ ಪ್ರಕಾರ, 2001 ರ ಕ್ಲಾಸಿಕ್ ಹಿಟ್ ಸಿನಿಮಾ ‘ಚಾಂದಿನಿ ಬಾರ್’ ಚಿತ್ರದ ಸೀಕ್ವೆಲ್‌ನಲ್ಲಿ ಕತ್ರಿನಾ ಕೈಫ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಅಜಯ್ ಬಹ್ಲ್ ನಿರ್ದೇಶಿಸಲಿರುವ ‘ಚಾಂದಿನಿ ಬಾರ್ 2’ ಚಿತ್ರದ ತಾರಾಗಣ ಪಟ್ಟಿಯಲ್ಲಿ ಕತ್ರಿನಾ ಹೆಸರು ಇದೆ ಎನ್ನಲಾಗಿದೆ. ವಿಶೇಷವೆಂದರೆ, ಮೊದಲ ಭಾಗದಲ್ಲಿ ಅದ್ಭುತವಾಗಿ ನಟಿಸಿದ್ದ ಖ್ಯಾತ ನಟಿ ಟಬು ಕೂಡ ಈ ಸೀಕ್ವೆಲ್‌ನಲ್ಲಿ ಭಾಗವಾಗಲಿದ್ದಾರೆ ಎಂಬ ವದಂತಿ ಇದೆ.

ಕತ್ರಿನಾ ಕೊನೆಯದಾಗಿ ತೆರೆಮೇಲೆ ಕಾಣಿಸಿಕೊಂಡಿದ್ದು ಡಿಸೆಂಬರ್ 2024 ರಲ್ಲಿ ಬಿಡುಗಡೆಯಾದ ‘ಮೇರಿ ಕ್ರಿಸ್ಮಸ್’ ಚಿತ್ರದಲ್ಲಿ. ಸಿನಿಮಾಗಳಿಂದ ದೂರವಿದ್ದರೂ ಅವರ ಜನಪ್ರಿಯತೆ ಮಾತ್ರ ತಗ್ಗಿಲ್ಲ. 2025ರ ಒರ್ಮ್ಯಾಕ್ಸ್ ಮೀಡಿಯಾ ಸಮೀಕ್ಷೆಯ ಪ್ರಕಾರ, ಆಲಿಯಾ ಭಟ್, ದೀಪಿಕಾ ಪಡುಕೋಣೆ ಅವರೊಂದಿಗೆ ಕತ್ರಿನಾ ಇಂದಿಗೂ ಬಾಲಿವುಡ್‌ನ ‘ಟಾಪ್ 5’ ಪ್ರೀತಿಯ ನಟಿಯರ ಪಟ್ಟಿಯಲ್ಲಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿ ಮಗನನ್ನು ಪರಿಚಯಿಸಿದ ಕತ್ರಿನಾ ಕೈಫ್‌, ವಿಕ್ಕಿ ಕೌಶಲ್: ಆದರೆ ಒಂದು ಷರತ್ತು

ಇತ್ತೀಚೆಗಷ್ಟೇ ಕತ್ರಿನಾ ಒಟಿಟಿ (OTT) ಪ್ರಾಜೆಕ್ಟ್‌ಗಳ ಸ್ಕ್ರಿಪ್ಟ್ ಕೇಳುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡಿತ್ತು. ಸದ್ಯಕ್ಕೆ ‘ಚಾಂದಿನಿ ಬಾರ್ 2’ ಚಿತ್ರತಂಡವಾಗಲಿ ಅಥವಾ ಕತ್ರಿನಾ ಕೈಫ್ ಅವರಾಗಲಿ ಈ ಬಗ್ಗೆ ಯಾವುದೇ ಅಧಿಕೃತ ಮುದ್ರೆ ಒತ್ತಿಲ್ಲ. ಆದರೂ, ಕತ್ರಿನಾ ಕೈಫ್ ಮತ್ತೆ ಬೆಳ್ಳಿಪರದೆಗೆ ಮರಳುವುದು ಗ್ಯಾರಂಟಿ ಎಂಬ ಸುದ್ದಿ ಕೇಳಿ ಅವರ ಫ್ಯಾನ್ಸ್ ಸಖತ್ ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ – Kannada News | Big Relief For NEET Aspirants: No Hike In Medical And Dental Course Fees In Karnataka For 2026

ಬೆಂಗಳೂರು, ಜೂ.12: ನೀಟ್ (NEET) ಮರುಪರೀಕ್ಷೆಯ ತೀವ್ರ ಒತ್ತಡ ಮತ್ತು ಆತಂಕದಲ್ಲಿರುವ ರಾಜ್ಯದ ವೈದ್ಯಕೀಯ ಸೀಟ್ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ರಿಲೀಫ್ ನೀಡಿದೆ. ಪ್ರಸಕ್ತ ಸಾಲಿನ (2026-27) ವೈದ್ಯಕೀಯ (MBBS) ಮತ್ತು ದಂತ ವೈದ್ಯಕೀಯ (BDS) ಕೋರ್ಸ್‌ಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದೆ, ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಅಧಿಕೃತವಾಗಿ ಘೋಷಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕಳೆದ ವರ್ಷ (2025-26ನೇ ಸಾಲು) ನಿಗದಿಪಡಿಸಲಾಗಿದ್ದ ಹಳೆಯ ಶುಲ್ಕ ರಚನೆಯೇ ಈ ವರ್ಷಕ್ಕೂ ಅನ್ವಯಿಸಲಿದೆ ಎಂದು ಸ್ಪಷ್ಟಪಡಿಸಿದರು. ಈ ಮಹತ್ವದ ತೀರ್ಮಾನವು ರಾಜ್ಯದ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳೆರಡಕ್ಕೂ ಸಮಾನವಾಗಿ ಅನ್ವಯಿಸಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶುಲ್ಕವನ್ನು ಗಣನೀಯವಾಗಿ ಹೆಚ್ಚಳ ಮಾಡಬೇಕೆಂದು ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಿದ್ದವು ಮತ್ತು ಈ ಸಂಬಂಧ ಮನವಿಯನ್ನೂ ಸಲ್ಲಿಸಿದ್ದವು. ಆದರೆ, ವಿದ್ಯಾರ್ಥಿಗಳು ಮತ್ತು ಪೋಷಕರ ಆರ್ಥಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಸಂಸ್ಥೆಗಳ ಶುಲ್ಕ ಹೆಚ್ಚಳದ ಬೇಡಿಕೆಯನ್ನು ರಾಜ್ಯ ಸರ್ಕಾರವು ಕಠಿಣವಾಗಿ ತಿರಸ್ಕರಿಸಿದೆ. “ಶುಲ್ಕ ಹೆಚ್ಚಳದ ಕುರಿತು ಹರಡುತ್ತಿರುವ ಯಾವುದೇ ರೀತಿಯ ಊಹಾಪೋಹಗಳಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಿವಿಗೊಡಬಾರದು” ಎಂದು ಸಚಿವರು ಇದೇ ವೇಳೆ ಮನವಿ ಮಾಡಿದರು. ಈಗಾಗಲೇ ದೇಶಾದ್ಯಂತ ನೀಟ್ ಗೊಂದಲಗಳಿಂದ ಕಂಗಾಲಾಗಿದ್ದ ವಿದ್ಯಾರ್ಥಿ ವಲಯಕ್ಕೆ ರಾಜ್ಯ ಸರ್ಕಾರದ ಈ ನಿರ್ಧಾರವು ಆರ್ಥಿಕವಾಗಿ ದೊಡ್ಡ ನಿಟ್ಟುಸಿರು ಬಿಡುವಂತೆ ಮಾಡಿದೆ.

ಪ್ರಸಕ್ತ ಸಾಲಿನ ಶುಲ್ಕದ ವಿವರ ಇಲ್ಲಿದೆ:

ಎಂಬಿಬಿಎಸ್ (MBBS) ಕೋರ್ಸ್ ಶುಲ್ಕ:

ಸರ್ಕಾರಿ ಕಾಲೇಜುಗಳು: 55,000

ಖಾಸಗಿ ಕಾಲೇಜುಗಳು (ಸರ್ಕಾರಿ ಕೋಟಾ): 11,88,167

ದಂತ ವೈದ್ಯಕೀಯ (BDS) ಕೋರ್ಸ್ ಶುಲ್ಕ:

ಸರ್ಕಾರಿ ಕಾಲೇಜುಗಳು: 40,000

ಖಾಸಗಿ ಕಾಲೇಜುಗಳು (ಸರ್ಕಾರಿ ಕೋಟಾ): 7,32,625

ಇದನ್ನೂ ಓದಿ: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

ಜೂನ್ 21 ನೀಟ್ ಯುಜಿ ಮರು ಪರೀಕ್ಷೆ:

ಇತ್ತೀಚಿನ ಗೊಂದಲಗಳಿಗೆ ತೆರೆ ಎಳೆದು, ಪ್ರತಿಯೊಬ್ಬ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗೂ ಸಮಾನ ಹಾಗೂ ನ್ಯಾಯಯುತವಾದ ಅವಕಾಶ ಸಿಗಬೇಕು ಎಂಬ ಕಾರಣಕ್ಕೆ ಸರ್ಕಾರ ನೀಟ್ ಯುಜಿ(NEET UG) 2026ರ ಮರು ಪರೀಕ್ಷೆಯು ಜೂನ್ 21ರಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ವಿದ್ಯಾರ್ಥಿಗಳಿಗಾಗಿ ಎನ್​ಟಿಎ ವಿಶೇಷ ಕ್ರಮಗಳನ್ನು ಘೋಷಿಸಿದೆ. ಅಭ್ಯರ್ಥಿಗಳಿಗೆ ಹೆಚ್ಚುವರಿ 15 ನಿಮಿಷಗಳನ್ನು ನೀಡಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ಪರೀಕ್ಷೆ ನಡೆಯಲಿದೆ. ನೀಟ್ ಯುಜಿ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಜೂನ್ 14 ರಂದು ಬಿಡುಗಡೆ ಮಾಡಲಾಗುವುದು. ರಫ್​ ವರ್ಕ್​ಗೆ ಕೂಡ ಹೆಚ್ಚು ಸ್ಥಳಾವಕಾಶವನ್ನು ಪೇಪರ್​ನಲ್ಲಿ ನೀಡಲಾಗುತ್ತದೆ ಎಂದು ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Women’s T20 World Cup 2026: ಇಂದಿನಿಂದ ಟಿ20 ವಿಶ್ವಕಪ್ ಆರಂಭ; ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | 2026 Women’s T20 World Cup: Eng vs SL Opener! Live Stream, Squads and Match Details

2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ ಅಂದರೆ ಜೂನ್ 12 ರಿಂದ ಆರಂಭವಾಗುತ್ತಿದೆ. ಇಂಗ್ಲೆಂಡ್‌ ಆತಿಥ್ಯದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ 12 ತಂಡಗಳು ಭಾಗವಹಿಸುತ್ತಿದ್ದು, 24 ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯವೂ ಸೇರಿದಂತೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಉದ್ಘಾಟನಾ ಪಂದ್ಯದಲ್ಲಿ ಬಿ ಗುಂಪಿನಲ್ಲಿರುವ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ಮುಖಾಮುಖಿಯಾಗುತ್ತಿವೆ. ಆತಿಥೇಯ ಇಂಗ್ಲೆಂಡ್‌, ಈ ಟೂರ್ನಿ ಆರಂಭಕ್ಕೂ ಮುನ್ನ ನಡೆದ ಟೀಂ ಇಂಡಿಯಾ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದು, ಇದೀಗ ಅದೇ ಗೆಲುವಿನ ಸರಣಿಯನ್ನು ಮುಂದುವರೆಸಲು ನೋಡುತ್ತಿದೆ. ಇತ್ತ ಲಂಕಾ ಪಡೆ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಆರಂಭಿಸುವ ಇರಾದೆಯಲ್ಲಿದೆ.

ಇಂಗ್ಲೆಂಡ್-ಶ್ರೀಲಂಕಾ ಮುಖಾಮುಖಿ ದಾಖಲೆ

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಕೊನೆಯ ಟಿ20 ಪಂದ್ಯವು 2023 ರಲ್ಲಿ ನಡೆದಿತ್ತು. ಆಗ ಶ್ರೀಲಂಕಾ ಇಂಗ್ಲೆಂಡ್ ತಂಡವನ್ನು ಸೋಲಿಸಿತ್ತು. ಇನ್ನು ಟಿ20 ಕ್ರಿಕೆಟ್ ಇತಿಹಾಸದಲ್ಲಿ, ಇಂಗ್ಲೆಂಡ್ ಮತ್ತು ಶ್ರೀಲಂಕಾ ಮಹಿಳಾ ತಂಡಗಳು ಒಟ್ಟು 12 ಪಂದ್ಯಗಳನ್ನು ಆಡಿವೆ. ಈ 12 ಪಂದ್ಯಗಳಲ್ಲಿ ಇಂಗ್ಲೆಂಡ್ 10 ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದರೆ, ಇತ್ತ ಶ್ರೀಲಂಕಾ ಕೇವಲ 2 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಯಾವಾಗ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಜೂನ್ 12 ರ ಶುಕ್ರವಾರದಂದು ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಲ್ಲಿ ನಡೆಯಲಿದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ಭಾರತೀಯ ಕಾಲಮಾನ ರಾತ್ರಿ 11 ಗಂಟೆಗೆ ಆರಂಭವಾಗಲಿದ್ದು, ಟಾಸ್ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ.

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವೆ ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಲಾರೆನ್ ಬೆಲ್, ಆಲಿಸ್ ಕ್ಯಾಪ್ಸೆ, ಟಿಲ್ಲಿ ಕಾರ್ಟೀನ್-ಕೋಲ್ಮನ್, ಚಾರ್ಲಿ ಡೀನ್, ಸೋಫಿಯಾ ಡಂಕ್ಲೆ, ಸೋಫಿ ಎಕ್ಲೆಸ್ಟೋನ್, ಲಾರೆನ್ ಫೈಲರ್, ಡ್ಯಾನಿ ಗಿಬ್ಸನ್, ಆಮಿ ಜೋನ್ಸ್, ಫ್ರೇಯಾ ಕೆಂಪ್, ಹೀದರ್ ನೈಟ್, ಲಿನ್ಸೆ ಸ್ಮಿತ್, ಇಸ್ಸಿ ವಾಂಗ್, ಡ್ಯಾನಿ ವ್ಯಾಟ್-ಹಾಡ್ಜ್

ಶ್ರೀಲಂಕಾ ತಂಡ: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವೀಶಾ ದಿಲ್ಹಾರಿ, ಹನ್ಸಿಮಾ ಕರುಣಾರತ್ನೆ, ಕೌಶಿನಿ ನುತ್ಯಂಗನಾ, ಸುಗಂದಿಕಾ ದಾಸನಾಯಕ, ನಿಮಾಶಾ ಮದುಶಾನಿ, ಕಾವ್ಯಾ ಕವಿಂದಿ, ಮಾಲ್ಕಿ ಮಾದರ, ಮಿಥಾಲಿ ಅಯೋಧ್ಯಾ, ಚೇತನಾ ವಿಮುಕ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್

ತಮಿಳುನಾಡು ಸಿಎಂ ವಿಜಯ್ (CM Vijay) ಅವರು ಇಂದು (ಜೂನ್ 12) ಕೊಲ್ಲೂರು ಮೂಕಾಂಬಿಕೆ ದೇವಾಲಯಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಿಗಿನಿಂದಲೇ ಮಂಗಳೂರು ವಿಮಾನ ನಿಲ್ದಾಣ ಹಾಗೂ ಕೊಲ್ಲೂರು ದೇವಾಲಯದ ಬಳಿ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. ವಿಜಯ್ ಅವರ ಅಭಿಮಾನಿಗಳು ಬೇರೆ ಬೇರೆ ಜಿಲ್ಲೆಗಳಿಂದ ಕೊಲ್ಲೂರಿಗೆ ಬಂದಿದ್ದಾರೆ. ಶಿವಮೊಗ್ಗದಿಂದ ಬಂದಿರುವ ಕೆಲವು ವಿಜಯ್ ಅಭಿಮಾನಿಗಳು, ವಿಜಯ್ ಅವರ ಟಿವಿಕೆ ಪಕ್ಷದ ಧ್ವಜ ಹಿಡಿದು ಕೊಂಡು ಬಂದಿದ್ದು, ಬೆಳಿಗಿನಿಂದ ವಿಜಯ್ ಅವರಿಗಾಗಿ ಕಾಯುತ್ತಿದ್ದಾರೆ. ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ – Kannada News | Pakistan Economic Crisis Deepens: Poverty Rate Soars 7pc in 6 Years

ಇಸ್ಲಾಮಾಬಾದ್, ಜೂನ್ 12: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆರ್ಥಿಕ ಸಮೀಕ್ಷೆ 2025-26’ (Pakistan Economic Survey) ವರದಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ದೇಶದ ಬಡತನದ ಪ್ರಮಾಣವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಸುಮಾರು 2.70 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ದೇಶದ ಒಟ್ಟು ಬಡವರ ಸಂಖ್ಯೆ ಈಗ ಅಂದಾಜು 7 ಕೋಟಿಗೆ ತಲುಪಿದೆ.

2018-19 ರಲ್ಲಿ ಪಾಕಿಸ್ತಾನ ದೇಶದಲ್ಲಿದ್ದ ಬಡತನದ ಪ್ರಮಾಣ ಶೇ. 21.9 ರಷ್ಟಿತ್ತು. 2024-25 ರ ವೇಳೆಗೆ ಇದು ಶೇ. 28.9 ಕ್ಕೆ ಏರಿಕೆಯಾಗಿದೆ. ಅಂದರೆ ಕೇವಲ 6 ವರ್ಷಗಳಲ್ಲಿ ಬಡತನದ ಪ್ರಮಾಣದಲ್ಲಿ ಶೇ. 7 ರಷ್ಟು ಜಿಗಿತ ಕಂಡುಬಂದಿದೆ. ಹಳ್ಳಿಗಳಲ್ಲಿ ಬಡತನದ ಪ್ರಮಾಣವು ಶೇಕಡಾ 28.2 ರಿಂದ 36.2 ಕ್ಕೆ ಏರಿದೆ. ನಗರ ಪ್ರದೇಶಗಳಲ್ಲೂ ಪರಿಸ್ಥಿತಿ ಬಿಗಡಾಯಿಸಿದ್ದು, ಬಡತನದ ಪ್ರಮಾಣವು ಶೇ. 11 ರಿಂದ 17.4 ಕ್ಕೆ ಏರಿಕೆಯಾಗಿದೆ.

ಪಾಕಿಸ್ತಾನದ ವಿವಿಧ ಪ್ರಾಂತ್ಯಗಳಲ್ಲಿ ಬಡತನದ ಸ್ಥಿತಿಗತಿ

  1. ಬಲೂಚಿಸ್ತಾನ್: ಇಲ್ಲಿ ಬಡತನದ ಪ್ರಮಾಣವು ಶೇ. 41.8 ರಿಂದ ಶೇ. 47 ಕ್ಕೆ ಏರಿಕೆಯಾಗಿದ್ದು, ದೇಶದಲ್ಲೇ ಅತ್ಯಂತ ಹೆಚ್ಚು ಬಡತನ ಹೊಂದಿರುವ ಪ್ರದೇಶವಾಗಿದೆ.
  2. ಸಿಂಧ್: ಶೇ. 24.5 ರಿಂದ ಶೇ. 32.6 ಕ್ಕೆ ಏರಿದೆ.
  3. ಖೈಬರ್ ಪಖ್ತುಂಖ್ವಾ: ಶೇ. 28.7 ರಿಂದ ಶೇ. 35.3 ಕ್ಕೆ ಹೆಚ್ಚಾಗಿದೆ.
  4. ಪಂಜಾಬ್: ಶೇ. 16.5 ರಿಂದ ಶೇ. 23.3 ಕ್ಕೆ ಏರಿಕೆಯಾಗಿದ್ದರೂ, ಬೇರೆ ಪ್ರಾಂತ್ಯಗಳಿಗೆ ಹೋಲಿಸಿದರೆ ಇಲ್ಲಿ ಬಡತನದ ತೀವ್ರತೆ ಸ್ವಲ್ಪ ಕಡಿಮೆ ಇದೆ.

ಇದನ್ನೂ ಓದಿ: ಈಗಲೂ ಭಾರತವೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ವಿಶ್ವಬ್ಯಾಂಕ್ ವರದಿ

ಬಡತನ ಹೆಚ್ಚಾಗಲು ಪ್ರಮುಖ ಕಾರಣಗಳೇನು?

ದೇಶದಲ್ಲಿ ನಿರಂತರವಾಗಿ ಉಂಟಾಗುತ್ತಿರುವ ಆರ್ಥಿಕ ಆಘಾತಗಳೇ ಇದಕ್ಕೆ ಕಾರಣ ಎಂದು ಆರ್ಥಿಕ ಸಮೀಕ್ಷಾ ವರದಿ ಹೇಳಿದೆ. ದಾಖಲೆ ಮಟ್ಟದ ಹಣದುಬ್ಬರ (ಬೆಲೆ ಏರಿಕೆ) ಮತ್ತು ಪಾಕಿಸ್ತಾನಿ ರೂಪಾಯಿ ಮೌಲ್ಯದ ಕುಸಿರುವುದು; ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ವಿಧಿಸಿರುವ ಕಠಿಣ ಆರ್ಥಿಕ ಸ್ಥಿರೀಕರಣ ಕ್ರಮಗಳು; ಭೀಕರ ಪ್ರವಾಹದಂತಹ ಹವಾಮಾನ ವೈಪರೀತ್ಯದ ವಿಕೋಪಗಳು; ಹಾಗೂ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಸಂಘರ್ಷಗಳ ಜಾಗತಿಕ ಪ್ರಭಾವವು ಬಡತನ ಹೆಚ್ಚಳಕ್ಕೆ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ.

ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ

ಬಡತನ ಹೆಚ್ಚಾಗುವುದರ ಜೊತೆಗೆ ಶ್ರೀಮಂತರು ಮತ್ತು ಬಡವರ ನಡುವಿನ ಆರ್ಥಿಕ ಅಸಮಾನತೆಯೂ (Income Inequality) ಹೆಚ್ಚಾಗಿದೆ. ದೇಶದ ಆದಾಯದ ಅಸಮಾನತೆಯನ್ನು ಅಳೆಯುವ ‘ಗಿನಿ ಕೋಫಿಷಿಯಂಟ್’ (Gini coefficient) ಸೂಚ್ಯಂಕವು 2018-19 ರಲ್ಲಿದ್ದ 28.4 ರಿಂದ 2024-25 ರ ವೇಳೆಗೆ 32.7 ಕ್ಕೆ ಏರಿಕೆಯಾಗಿದೆ. ಇದು ದೇಶದಲ್ಲಿ ಸಂಪತ್ತಿನ ಹಂಚಿಕೆ ಸರಿಯಾಗಿ ಆಗುತ್ತಿಲ್ಲ ಎಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ: ಡಾಲರ್ ಎದುರು ರುಪಾಯಿ ಮೌಲ್ಯ 67 ಪೈಸೆ ಜಿಗಿತ; 10 ದಿನದಲ್ಲಿ 100 ಪೈಸೆ ಮೌಲ್ಯ ಹೆಚ್ಚಳ

ಭಾರತದಲ್ಲಿರುವಂತೆ ಪಾಕಿಸ್ತಾನದಲ್ಲೂ ಕೂಡ ಪ್ರತಿ ವರ್ಷ ಸರ್ಕಾರವು ತನ್ನ ದೇಶದ ಬಜೆಟ್ ಮಂಡಿಸುವ ಮುನ್ನ ಅಧಿಕೃತ ಆರ್ಥಿಕ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡುತ್ತದೆ. ಈ ವರದಿಯು ಮೂಲಭೂತ ಅಗತ್ಯಗಳ ವೆಚ್ಚದ (Cost of Basic Needs) ಆಧಾರದ ಮೇಲೆ ಬಡತನವನ್ನು ಲೆಕ್ಕ ಹಾಕುತ್ತದೆ. ವಿಶ್ವಬ್ಯಾಂಕ್ ವರದಿ ಪ್ರಕಾರ ಭಾರತದಲ್ಲಿ ಕಡುಬಡತನದ ಮಟ್ಟ ಶೇ 5-6ರಷ್ಟು ಇದ್ದರೆ, ಪಾಕಿಸ್ತಾನದಲ್ಲಿ ಅದು ಶೇ. 25ಕ್ಕಿಂತಲೂ ಹೆಚ್ಚು ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅಚ್ಚರಿ ಅನ್ನಿಸಿದರೂ ಸತ್ಯ: ಹಾಸ್ಟೆಲ್​​ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ! – Kannada News | 9th Class Student Gives Birth to Baby in Hostel at Sirs

ಕಾರವಾರ, (ಜೂನ್ 12): 9ನೇ ತರಗತಿ ವಿದ್ಯಾರ್ಥಿನಿಯೋರ್ವಳು (Student) ಹಾಸ್ಟೆಲ್​​​ನಲ್ಲಿ (Hostel) ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ  ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ (Sirsi) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಚ್ಚರಿ ಅನ್ನಿಸಿದರೂ ಸತ್ಯ. ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿರಸಿ ತಹಶಿಲ್ದಾರ್ ಹಾಗೂ ಪಿಎಸ್ಐ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಆಕೆ 9ನೇ ತರಗತಿ ಅಂದ್ರೆ ಏನೋ ಹದಿನಾಲ್ಕು ಹದಿನೈದು ವರ್ಷ ಇರಬಹುದು. ತಮ್ಮ ಮಗಳು ಹಾಸ್ಟೆಲ್​ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ಆಕೆಯ ಪೋಷಕರು ಕೂಡ ನಿರಾಳವಾಗಿದ್ದರು. ಆದ್ರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಗುವನ್ನು ಹೇರಿರುವ ಸುದ್ದಿ ಕೇಳಿ ಶಾಕ್​​​ ಆಗಿದ್ದಾರೆ. ಬಾಲಕಿಯ ಈ ಸ್ಥಿತಿಗೆ ಯಾರು ಕಾರಣ? ಗರ್ಭಿಣಿಯಾಗಿರುವುದು ಗೊತ್ತಾಗಿಲ್ವಾ ಹೀಗೆ ಹತ್ತಾರು ಪ್ರಶ್ನೆಗಳು ಉದ್ಭವಿಸಿವೆ. ಯಾಕಂದ್ರೆ, ಮೊನ್ನೆ ಅಷ್ಟೇ ಶಾಲೆಗಳು ಪ್ರಾರಂಭವಾಗಿದ್ದು, 10 ದಿನದಲ್ಲೇ ಮಗುವಿಗೆ ಜನ್ಮ ನೀಡಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಸದ್ಯ ಪೊಲೀಸರು ತನಿಖೆ ನಡೆಸಿದ್ದಾರೆ.

Source link

Exit mobile version