‘ನನಗೂ ಪರಚಿದ ಕಲೆ ಇದೆ, ಆದರೆ ಪಿಆರ್ ಟೀಮ್ ಇಲ್ಲ’; ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ – Kannada News | Bigg Boss Kannada: Ashwini Gowda and Chaitra Kundapura’s Post Show Brawl Over Scratches

ಬಿಗ್ ಬಾಸ್ (Bigg Boss) ಆಟ ಪೂರ್ಣಗೊಂಡ ಬಳಿಕವೂ ಅದರ ಬಗ್ಗೆ ಚರ್ಚೆಗಳು ಇದ್ದೇ ಇರುತ್ತವೆ. ದೊಡ್ಮನೆ ಒಳಗೆ ನಡೆದ ವಿಷಯ ಹೊರಗೂ ಚರ್ಚೆ ಆಗುತ್ತದೆ. ಈ ಬಾರಿ ಸೀಸನ್​ ಅಲ್ಲಿ ಅದು ಕೊಂಚ ಹೆಚ್ಚೇ ಇದೆ ಎನ್ನಬಹುದು. ಚೈತ್ರಾ ಕುಂದಾಪುರ ಹಾಗೂ ಅಶ್ವಿನಿ ಗೌಡ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಆಗಿತ್ತು. ಈ ಕಿರಿಕ್ ಹೊರ ಬಂದಮೇಲೂ ಮುಂದುವರಿದಿದೆ. ಪರಸ್ಪರ ಮಾತಿನ ಕಿತ್ತಾಟ ನಡೆದಿದೆ.

ಮಾಧ್ಯದಮವರ ಬಳಿ ಮಾತನಾಡುವಾಗ ಅಶ್ವಿನಿ ಗೌಡ ಅವರು ಚೈತ್ರಾ ಕುಂದಾಪುರ ಮೇಲೆ ನೇರವಾಗಿ ಆರೋಪ ಮಾಡಿದ್ದರು. ‘ಬಿಗ್ ಬಾಸ್ ಮನೆಯಲ್ಲಿ ಗಾಯಗಳಾಗಿವೆ. ಚೈತ್ರಾ ಕುಂದಾಪುರ ಅವರು ನನಗೆ ಪರಚಿದ್ದರು’ ಎಂದು ಅಶ್ವಿನಿ ಗೌಡ ಆರೋಪ ಮಾಡಿದ್ದರು. ಅಲ್ಲದೆ ಕೈಗೆ ಆದ ಗಾಯಗಳನ್ನು ಮಾಧ್ಯಮಗಳಿಗೆ ತೋರಿಸಿದ್ದರು. ಇದಕ್ಕೆ ಚೈತ್ರಾ ಅವರು ತಡವಾಗಿ ಉತ್ತರ ನೀಡಿದ್ದಾರೆ.

‘ನನಗೂ ಪರಚಿದ ಕಲೆಗಲಿವೆ. ಆದರೆ ಕ್ಷಮಿಸಿ ನನ್ನ ಬಳಿ ಪಿ.ಆರ್ ಟೀಮ್ ಇಲ್ಲ. ನನಗೂ ನೋವು, ಕಲೆಗಳಿದೆ. ಆದರೆ ನನಗೆ ಆಟವನ್ನು ಆಟವಾಗಿಯೇ ನೋಡುವ ಮನಸ್ಥಿತಿ ಇದೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಬಿಗ್ ಬಾಸ್ ಟಾಸ್ಕ್ ಮುಗಿದ ಬಳಿಕ ಪರಸ್ಪರ ಕ್ಷಮೆ ಕೇಳಿ ಪ್ರಕರಣವನ್ನು ಅಶ್ವಿನಿ-ಚೈತ್ರಾ ಅಲ್ಲಿಯೇ ಮುಗಿಸಿದ್ದರು. ಆದರೆ, ಹೊರ ಬಂದ ಬಳಿಕ ಅಶ್ವಿನಿ ಗೌಡ ಈ ವಿಷಯವನ್ನು ಮತ್ತೆ ತೆಗೆದಿದ್ದಾರೆ.

ಟಾಸ್ಕ್ ವೇಳೆ ಅನೇಕರಿಗೆ ಗಾಯಗಳಾಗುತ್ತವೆ. ಅದನ್ನು ಎಲ್ಲರೂ ಅಲ್ಲಿಗೇ ಬಿಡುತ್ತಾರೆ. ಆದರೆ, ಕೆಲವರು ಅದನ್ನು ಹೊರಕ್ಕೂ ತೆಗೆದುಕೊಂಡು ಹೋಗುತ್ತಾರೆ. ಈಗ ಆ ಕೆಲಸವನ್ನು ಅಶ್ವಿನಿ ಮಾಡಿದ್ದಾರೆ. ಈ ಕಾರಣಕ್ಕೆ ಚೈತ್ರಾ ಕುಂದಾಪುರ ಅವರು ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ: ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?

ಇನ್ನು ಗಿಲ್ಲಿ ಬಗ್ಗೆ ಅಶ್ವಿನಿ ಗೌಡ ಅವರು ಗಂಭೀರ ಆರೋಪ ಮಾಡಿದ್ದರು. ‘ಗಿಲ್ಲಿ ಬಡವ ಎಂದು ಬಿಂಬಿಸಿಕೊಂಡಿದ್ದಾನೆ. ಆತ ನಿಜವಾಗಲೂ ಬಡವನಾ’ ಎಂದು ಅವರು ಪ್ರಶ್ನೆ ಮಾಡಿದ್ದರು. ಈ ವಿಷಯ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಕಿಡ್ನ್ಯಾಪ್​​ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಇಲ್ಲಿದೆ ಅಸಲಿ ಕಹಾನಿ – Kannada News | Big Twist in Belthangady Student Kidnap Attempt Case: Girl’s Drama Exposed in Police Investigation

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada

ಮಂಗಳೂರು, ಫೆಬ್ರವರಿ 10: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿದ್ಯಾರ್ಥಿನಿ ಅಪಹರಣ ಯತ್ನ ಕೇಸ್​​ಗೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ  ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು ಯತ್ನಿಸಿದ್ದಾರೆ ಎಂದು ದೂರಿದ್ದಳು. ಈ ವೇಳೆ ತನ್ನ ಕೈಗೆ ಗಾಯವಾಗಿದೆ ಎಂದು ಹೇಳಿದ್ದಳು. ಈ ವಿಚಾರ ಕುಟುಂಬಸ್ಥರ ಜೊತೆಗೆ ಸ್ಥಳೀಯರಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಹಿರಿಯ ಪೊಲೀಸ್​​ ಅಧಿಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆದರೆ ಪೊಲೀಸರ ತನಿಖೆ ವೇಳೆ ವಿದ್ಯಾರ್ಥಿನಿಯ ಡ್ರಾಮಾ ಬಯಲಾಗಿದೆ. ಕಿಡ್ನ್ಯಾಪ್​​ ನಾಟಕ ಮಾಡಿದ್ರೆ ತನ್ನನ್ನು ಮನೆಯವರು ಮಂಗಳೂರಿ‌ನ ಕಾಲೇಜಿಗೆ ಸೇರಿಸುತ್ತಾರೆ ಎಂದುಕೊಂಡಿದ್ದ ಯುವತಿ ಅದಕ್ಕೆ ತಕ್ಕಂತೆ ಭರ್ಜರಿ ಪ್ಲ್ಯಾನ್​​ ಕೂಡ ಮಾಡಿದ್ದಳು. ಬ್ಲೇಡ್​​ನಲ್ಲಿ ತಾನೇ ಕೈ ಕೊಯ್ದುಕೊಂಡು ಕತೆ ಹೇಳಿದ್ದಳು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಯತ್ನ ಪ್ರಕರಣ ಸಂಬಂಧ ಪೊಲೀಸರು ಇಡೀ ದಿನ ಕಾರ್ಯಾಚರಣೆ ನಡೆಸಿದ್ದು, ಸ್ಥಳೀಯ ಶಾಸಕ ಹರೀಶ್ ಪೂಂಜಾ ಕೂಡ ದೌಡಾಯಿಸಿ ಬಾಲಕಿಯನ್ನು ಭೇಟಿ ಮಾಡಿದ್ದರು. ಆದ್ರೆ ತನಿಖೆ ವೇಳೆ ವಿದ್ಯಾರ್ಥಿನಿಯೇ ಪೊಲೀಸರ ಬಳಿ ಸತ್ಯ ಬಾಯ್ಬಿಟ್ಟಿದ್ದಾಳೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಯುವತಿ ಅಪಘಾತಕ್ಕೆ ಬಲಿ; ಭಾವಿ ಪತಿ ಜೊತೆಗಿದ್ದಾಗಲೇ ಅವಘಡ

ಬ್ಯಾಗ್​​ನಲ್ಲಿರುವ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿದ್ದ ಈಕೆ, ಬಳಿಕ ಬ್ಯಾಗ್​​ನ ದಾರಿಯಲ್ಲೇ ಬಿಸಾಕಿದ್ದಳು. ಸ್ಕೂಟಿಯನ್ನು ನಿಲ್ಲಿಸಿ ಬ್ಲೇಡ್​​ನಿಂದ ಕೈ ಕುಯ್ದುಕೊಂಡು ನಾಟಕ ಮಾಡಿದ್ದಳು. ಮತ್ತೊಂದೆಡೆ ವಿದ್ಯಾರ್ಥಿನಿ ಸ್ಕೂಟಿಯಿಂದ ಬಿದ್ದಿರುವಂತೆ ನಟಿಸುವ ವೇಳೆ ಹಿಬದಿಯಿಂದ ಬಂದಿದ್ದ ಅಬ್ಬುಸಾಲಿ ಎಂಬಾತ ಕೂಡ ಘಟನೆಯ ಬಗ್ಗೆ ವಿವರಿಸಿದ್ದ ಕಾರಣ ಆರಮಭದಲ್ಲಿ ಈಕೆ ಹೇಳುತ್ತಿರುವುದು ಸುಳ್ಳು ಕತೆಯಾಗಿರಬಹುದೆಂಬ ಅನುಮಾನ ಯಾರಿಗೂ ಬಂದಿರಲಿಲ್ಲ. ವಿದ್ಯಾರ್ಥಿನಿ ಹೇಳಿದ್ದನ್ನ ಮೊದಲು ಅಬ್ಬುಸಾಲಿ ನಂಬಿದ್ದರೆ ಬಳಿಕ ಎಲ್ಲರೂ ಆಕೆ ಹೇಳ್ತಿರೋದು ಸತ್ಯ ಎಂದು ನಂಬಿ ಕುಟುಂಬಸ್ಥರೂ ಕಂಗಾಲಾಗಿದ್ದರು.  ಆದರೆ ಪೊಲೀಸರ ತನಿಖೆಯಿಂದ ಕೊನೆಗೂ ವಿದ್ಯಾರ್ಥಿನಿ ನಾಟಕ ಬಯಲಾಗಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

VIDEO: ಭಯಂಕರ ಬ್ರಿಯಾನ್… ವಾಟ್ ಎ ಕ್ಯಾಚ್ – Kannada News | Brian Bennett pulls off stunning diving catch in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಝಿಂಬಾಬ್ವೆ ಆಟಗಾರ ಬ್ರಿಯಾನ್ ಬೆನೆಟ್ ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಒಮಾನ್ ಹಾಗೂ ಝಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಝಿಂಬಾಬ್ವೆ ತಂಡದ ನಾಯಕ ಸಿಕಂದರ್ ರಾಝ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 27 ರನ್​ಗಳಿಸುವಷ್ಟರಲ್ಲಿ ಅಗ್ರ ಕ್ರಮಾಂಕದ ಐವರು ಬ್ಯಾಟರ್​ಗಳನ್ನು ಕಳೆದುಕೊಂಡಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ನದೀಮ್ ಖಾನ್ 18 ಎಸೆತಗಳಲ್ಲಿ 20 ರನ್ ಬಾರಿಸಿದರು.

ಆದರೆ ಕೊನೆಯ ಓವರ್​ನಲ್ಲಿ ನದೀಮ್ ಖಾನ್ ಅವರ ವಿಕೆಟ್ ಪಡೆಯುವಲ್ಲಿ ಬ್ರಾಡ್ ಇವನ್ಸ್ ಯಶಸ್ವಿಯಾದರು. ಅದು ಕೂಡ ಬ್ರಿಯಾನ್ ಬೆನೆಟ್ ಹಿಡಿದ ಅತ್ಯದ್ಭುತ ಕ್ಯಾಚ್ ಮೂಲಕ ಎಂಬುದು ವಿಶೇಷ.

20ನೇ ಓವರ್​ನ ಐದನೇ ಎಸೆತದಲ್ಲಿ ನದೀಮ್ ಖಾನ್ ಡೀಪ್ ಮಿಡ್ ವಿಕೆಟ್​ನತ್ತ ಬಾರಿಸಿದ್ದರು. ಅತ್ತ ಬೌಂಡರಿ ಲೈನ್​ನಿಂದ ಓಡಿ ಬಂದ ಬ್ರಿಯಾನ್ ಬೆನೆಟ್ ಅದ್ಭುತ ಡೈವಿಂಗ್ ಮೂಲಕ ಚೆಂಡನ್ನು ಬಂಧಿಸಿದರು.

ಬ್ರಿಯಾನ್ ಬೆನೆಟ್ ಹಿಡಿದ ಈ ಅದ್ಭುತ ಕ್ಯಾಚ್ ನೋಡಿ ಪ್ರೇಕ್ಷಕರು ನಿಬ್ಬೆರಗಾದರು. ಇದೀಗ ಈ ಕ್ಯಾಚ್ ಅನ್ನು 2026 ಟಿ20 ವಿಶ್ವಕಪ್​ನ ಬೆಸ್ಟ್ ಕ್ಯಾಚ್ ಎಂದು ಬಣ್ಣಿಸಲಾಗುತ್ತಿದೆ. ಇನ್ನು ಮುಂಬರುವ ಪಂದ್ಯಗಳಲ್ಲಿ ಇದಕ್ಕಿಂತ ಉತ್ತಮ ಕ್ಯಾಚ್ ಹಿಡಿಯುವವರು ಯಾರು ಎಂಬ ಕುತೂಹಲ ಕೂಡ ಕ್ರಿಕೆಟ್ ಪ್ರೇಮಿಗಳಲ್ಲಿ ಮೂಡಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 19.5 ಓವರ್​ಗಳಲ್ಲಿ 103 ರನ್​ ಬಾರಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ಪರ ಆರಂಭಿಕನಾಗಿ ಕಣಕ್ಕಿಳಿದ ಬ್ರಿಯಾನ್ ಬೆನೆಟ್ 36 ಎಸೆತಗಳಲ್ಲಿ 7 ಫೋರ್​ಗಳೊಂದಿಗೆ ಅಜೇಯ 48 ರನ್ ಬಾರಿಸಿದರು.

ಬೆನೆಟ್ ಅವರ ಈ ಜವಾಬ್ದಾರಿಯುತ ಇನಿಂಗ್ಸ್​ನೊಂದಿಗೆ ಝಿಂಬಾಬ್ವೆ ತಂಡವು 13.3 ಓವರ್​ಗಳಲ್ಲಿ 106 ರನ್ ಬಾರಿಸಿ 8 ವಿಕೆಟ್​ಗಳ ಜಯ ಸಾಧಿಸಿದೆ. ಇನ್ನು ಝಿಂಬಾಬ್ವೆ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಈ ಪಂದ್ಯವು ಫೆಬ್ರವರಿ 13 ರಂದು ನಡೆಯಲಿದೆ.

ಇದನ್ನೂ ಓದಿ: IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಬಳಿಕ ಝಿಂಬಾಬ್ವೆ ಐರ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಂದರೆ ಝಿಂಬಾಬ್ವೆ ಆಸೀಸ್ ಪಡೆ ವಿರುದ್ಧ ಸೋತರೂ ಶ್ರೀಲಂಕಾ ಮತ್ತು ಐರ್ಲೆಂಡ್ ತಂಡಗಳನ್ನು ಮಣಿಸಿ ಸೂಪರ್-8 ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲೂ ಝಿಂಬಾಬ್ವೆ ಕಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

Source link

ಮತ್ತೆ ಬರುತ್ತಿದ್ದಾನೆ ಬೆಂಗಳೂರು ರೌಡಿ ‘ರಂಗ’ ಈ ಬಾರಿ ಡಬಲ್ ಮ್ಯಾಡ್​​ನೆಸ್ – Kannada News | Fahad Faasil confirms Aavesham 2, shoot will start in 2027 or 2028

ಫಹಾದ್ ಫಾಸಿಲ್​​ಗೆ (Fahad Faasil) ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಪಾತ್ರದಲ್ಲಿ ನಟಿಸಿದರೂ ಆ ಪಾತ್ರದ ಮೇಲೆ ತಮ್ಮ ಛಾಪು ಉಳಿಸುತ್ತಾರೆ, ಫಹಾದ್ ಹೊರತಾಗಿ ಇನ್ಯಾರನ್ನೂ ಪಾತ್ರದಲ್ಲಿ ಊಹಿಸಲಾರದಂತೆ ನಟಿಸುತ್ತಾರೆ ಈ ಮಲಯಾಳಿ ನಟ. ಫಹಾದ್ ಹಲವು ಅತ್ಯುತ್ತಮ ಪಾತ್ರಗಳಲ್ಲಿ ನಟಿಸಿದ್ದಾರೆ ಆದರೆ ಅವರ ‘ಆವೇಶಂ’ ಸಿನಿಮಾದ ರಂಗ ಪಾತ್ರಕ್ಕೆ ಇರುವಷ್ಟು ಅಭಿಮಾನಿಗಳು ಇನ್ಯಾವ ಪಾತ್ರಕ್ಕೂ ಇದ್ದಂತಿಲ್ಲ. ಬೆಂಗಳೂರಿನ ಡಾನ್ ರಂಗ ಪಾತ್ರದಲ್ಲಿ ಸಖತ್ ಆಗಿ ಮಿಂಚಿದ್ದರು ಫಹಾದ್ ಫಾಸಿಲ್. ಸಿನಿಮಾ ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದ್ದು ಈಗಲೂ ಸಿನಿಮಾದ ಮೀಮ್​​ಗಳು ಹರಿದಾಡುತ್ತಿರುತ್ತವೆ. ಇದೀಗ ‘ಆವೇಶಂ 2’ ಸಿನಿಮಾದ ಬಗ್ಗೆ ಅಪ್​​ಡೇಟ್ ಹೊರಬಿದ್ದಿದ್ದು ಫಹಾದ್ ಅವರು ಮತ್ತೆ ರಂಗನ ಪಾತ್ರದಲ್ಲಿ ಮಿಂಚಲಿದ್ದಾರೆ.

‘ಆವೇಶಂ’ ಸಿನಿಮಾ 2024ರ ಏಪ್ರಿಲ್ ನಲ್ಲಿ ಬಿಡುಗಡೆ ಆಗಿತ್ತು. ಸಿನಿಮಾ ಮಲಯಾಳಂ ಮಾತ್ರವಲ್ಲ ಬಿಡುಗಡೆ ಆದ ಎಲ್ಲ ರಾಜ್ಯಗಳಲ್ಲಿಯೂ ಸೂಪರ್ ಹಿಟ್ ಆಗಿತ್ತು. ಒಟಿಟಿಯಲ್ಲಿ ಹಲವು ದಿನಗಳ ಕಾಲ ಟಾಪ್ ಟ್ರೆಂಡಿಂಗ್​​ನಲ್ಲಿತ್ತು ಸಿನಿಮಾ. ಆಗಿನಿಂದಲೂ ಸಿನಿಮಾದ ಸೀಕ್ವೆಲ್​​ಗಾಗಿ ಬೇಡಿಕೆ ಬರುತ್ತಲೇ ಇತ್ತು. ಫಹಾದ್ ಸಹ ‘ಆವೇಶಂ 2’ ಬಂದಲ್ಲಿ ನಟಿಸಲು ಉತ್ಸುಕನಾಗಿದ್ದೇನೆ ಎಂದು ಹಿಂದೆ ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಇದೀಗ ಆ ಸಮಯ ಬಂದಿದೆ. ‘ಆವೇಶಂ 2’ ಸಿನಿಮಾ ನಿರ್ಮಾಣಗೊಳ್ಳುವುದು ಪಕ್ಕಾ ಆಗಿದ್ದು, ಫಹಾದ್ ಅವರು ಐಕಾನಿಕ್ ‘ರಂಗ’ ಪಾತ್ರದಲ್ಲಿ ಮತ್ತೊಮ್ಮೆ ಮಿಂಚಲಿದ್ದಾರೆ.

ಇದನ್ನೂ ಓದಿ:ಆಸ್ಕರ್ ವಿಜೇತ ನಿರ್ದೇಶಕನಿಗೆ ನೋ ಹೇಳಿದ ಫಹಾದ್ ಫಾಸಿಲ್

‘ಆವೇಶಂ’ ಸಿನಿಮಾ ಬಿಡುಗಡೆ ಆದಾಗ ಆ ಸಿನಿಮಾದ ತೆಲುಗು ರೀಮೇಕ್ ಬಗ್ಗೆ ಬಹಳ ಚರ್ಚೆಗಳು ನಡೆದಿದ್ದವು. ನಂದಮೂರಿ ಬಾಲಕೃಷ್ಣ ಅಥವಾ ರವಿತೇಜ ಅವರು ‘ಆವೇಶಂ’ ಸಿನಿಮಾ ರೀಮೇಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಕೈಗೂಡಿಲ್ಲ. ಇದೀಗ ಸಿನಿಮಾದ ಎರಡನೇ ಭಾಗವನ್ನೇ ಘೋಷಣೆ ಮಾಡಲಾಗಿದೆ. ಸ್ವತಃ ಫಹಾದ್ ಫಾಸಿಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿನಿಮಾದ ಚಿತ್ರೀಕರಣ 2027ರ ಅಂತ್ಯ ಅಥವಾ 2028ರ ಆರಂಭದಲ್ಲಿ ಚಿತ್ರೀಕರಣ ಪ್ರಾರಂಭ ಆಗಲಿದೆ ಎಂದಿದ್ದಾರೆ.

‘ಆವೇಶಂ’ ಸಿನಿಮಾದ ನಿರ್ದೇಶಕ ಜಿತು ಮಾಧವನ್ ಪ್ರಸ್ತುತ ತಮ್ಮ ಮೊದಲ ತಮಿಳು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ಸ್ಟಾರ್ ನಟ ಸೂರ್ಯ ನಾಯಕ. ಆ ಸಿನಿಮಾದ ಕತೆಯೂ ಬೆಂಗಳೂರಿನಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ ಫಹಾದ್ ಫಾಸಿಲ್ ಕ್ಯಾಮಿಯೋ ಸಹ ಆ ಸಿನಿಮಾನಲ್ಲಿ ಇರಲಿದೆ ಎನ್ನಲಾಗುತ್ತಿದೆ. ಸೂರ್ಯ ಸಿನಿಮಾ ಬಿಡುಗಡೆ ಬಳಿಕವಷ್ಟೆ ‘ಆವೇಶಂ 2’ ಸಿನಿಮಾ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 11:45 am, Tue, 10 February 26

Source link

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ – Kannada News | Optical Illusion: If you are a genius, find the leopard hiding in the dense forest

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ! – Kannada News | Angry Customer Locks Tata Hitachi Showroom in Tumakuru, Speaks Out Over Faulty Machine

ತುಮಕೂರು, ಫೆಬ್ರವರಿ 10: 52 ಲಕ್ಷ ರೂಪಾಯಿ ಮೌಲ್ಯದ ‘ಹಿಟಾಚಿ 140’ ಯಂತ್ರವು ಖರೀದಿಸಿದ ಐದೇ ತಿಂಗಳಲ್ಲಿ ಕೆಟ್ಟುಹೋಗಿದ್ದರಿಂದ ಅಸಮಾಧಾನಗೊಂಡ ಗ್ರಾಹಕ ಗಿರೀಶ್ ಅವರು ಹಿಟಾಚಿ ಶೋರೂಂಗೆ ಬೀಗ ಜಡಿದ ಘಟನೆ ತುಮಕೂರಿನ ಅಂತರಸನಹಳ್ಳಿ ಬಳಿ ನಡೆದಿದೆ. 2022ರ ಡಿಸೆಂಬರ್‌ನಲ್ಲಿ ಯಂತ್ರವನ್ನು ಖರೀದಿಸಲಾಗಿತ್ತು. 7,000 ಗಂಟೆಗಳ ವಾರಂಟಿ ಇದ್ದರೂ, ಕೇವಲ 480 ಗಂಟೆಗಳ ಬಳಿಕ ಯಂತ್ರದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಗುಬ್ಬಿ ಮೂಲದ ಗಿರೀಶ್ ಅಳಲು ತೋಡಿಕೊಂಡಿದ್ದಾರೆ.

ಕಳೆದ ಎರಡು ತಿಂಗಳಿಂದ ದುರಸ್ತಿಗಾಗಿ ಹಲವಾರು ಬಾರಿ ಪ್ರಯತ್ನಿಸಿದರೂ, ಸಮಸ್ಯೆಯನ್ನು ಪರಿಹರಿಸಿಲ್ಲ ಎಂದು ಗಿರೀಶ್ ಆರೋಪಿಸಿದ್ದಾರೆ. ಯಂತ್ರವು ನಿರೀಕ್ಷೆಗಿಂತ ಹೆಚ್ಚು ಇಂಧನ (ಡೀಸೆಲ್) ಮುಗಿಸುತ್ತಿದ್ದು, ಪ್ರತಿ ತಿಂಗಳು 1,15,000 ರೂಪಾಯಿ EMI ಪಾವತಿಸುವುದು ಕಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿಕ್ರಿಯೆ ನೀಡದ ಕಂಪನಿ ಸಿಬ್ಬಂದಿ ಮತ್ತು ಮಾರಾಟ ಪ್ರತಿನಿಧಿ ಶಿವಾನಂದ್ ಅವರ ವರ್ತನೆಯಿಂದ ರೋಸಿಹೋಗಿ, ಶೋರೂಂಗೆ ಬೀಗ ಹಾಕಿದ್ದಾಗಿ ‘ಟಿವಿ9’ಗೆ ಗಿರೀಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸದಾಗಿ ಖರೀದಿಸಿದ ಹಿಟಾಚಿ ಕೆಟ್ಟುಹೋಯ್ತೆಂದು ಶೋರೂಮ್​ಗೇ ಬೀಗ ಹಾಕಿದ ಗ್ರಾಹಕ!

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ – Kannada News | Woman’s Disappearance and Shed Snake Skin Trigger Panic in UP Village

ಉತ್ತರ ಪ್ರದೇಶ, ಫೆಬ್ರವರಿ 10: ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಯುವತಿ ಹಠಾತ್ ಕಣ್ಮರೆಯಾಗಿದ್ದಾರೆ. ಆದರೆ ಅದಕ್ಕಿಂತ ಅಚ್ಚರಿಗೊಳಿಸುವ ವಿಚಾರವೆಂದರೆ ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆಯಾಗಿದೆ. ಆಕೆಯ ಕುಟುಂಬವು ಆಕೆಯ ಹಾಸಿಗೆಯ ಮೇಲೆ ಬಟ್ಟೆಯಲ್ಲಿ ಸುತ್ತಿದ ಐದು ಅಡಿ ಉದ್ದದ ಹಾವಿನ ಪೊರೆಯನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಆಕೆ ನಾಗಿಣಿಯಾಗಿ ಮಾರ್ಪಟ್ಟಿದ್ದಾಳೆ ಎಂದು ಹೇಳುತ್ತಾ ಎಲ್ಲರೂ ತಿರುಗಾಡಿದ್ದಾರೆ.

ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಯುವತಿ ಮನೆಯಿಂದ ನಾಪತ್ತೆಯಾಗಿದ್ದಳು. ಮಹಿಳೆ ತನ್ನ ಕೋಣೆಯಿಂದ ಹೊರಗೆ ಬಾರದಿದ್ದಾಗ ಈ ವಿಷಯ ಬೆಳಕಿಗೆ ಬಂದಿದೆ. ಗಾಬರಿಗೊಂಡ ಕುಟುಂಬ ಸದಸ್ಯರು ಆಕೆಯ ಕೋಣೆಗೆ ಪ್ರವೇಶಿಸಿದಾಗ ಅವರು ಕಂಡ ದೃಶ್ಯದಿಂದ ಬೆಚ್ಚಿಬಿದ್ದರು. ಅಲ್ಲಿ ಹಾವಿನ ಪೊರೆ ಇತ್ತು.

ಮದುವೆಯನ್ನು ತಪ್ಪಿಸಲು, ಯುವತಿಯೊಬ್ಬಳು 5 ಅಡಿ ಉದ್ದದ ಹಾವಿನ ಪೊರೆಯನ್ನು ತನ್ನ ಹಾಸಿಗೆಯ ಮೇಲೆ ಬಿಟ್ಟು ನಾಟಕವಾಡಿದ್ದಳು, ಇದು ಗ್ರಾಮದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. 25 ವರ್ಷದ ರೀನಾಳ ಕುಟುಂಬವು ಮದುವೆಯನ್ನು ನಿಶ್ಚಯಿಸಿತ್ತು, ಆದರೆ ಹುಡುಗಿ ಆ ಸಂಬಂಧವನ್ನು ಒಪ್ಪಿರಲಿಲ್ಲ, ಆಕೆಗೆ ಅದೇ ಗ್ರಾಮದ ಯುವಕನೊಂದಿಗೆ ಸಂಬಂಧವಿತ್ತು. ಓಡಿಹೋಗುವ ಮೊದಲು, ರೀನಾ ಒಂದು ಯೋಜನೆಯನ್ನು ರೂಪಿಸಿದಳು, ಅದು ಎಲ್ಲರಿಗೂ ಆಘಾತವನ್ನುಂಟು ಮಾಡಿತ್ತು. ಆದರೆ ಪೊಲೀಸರು ಬಂದು ತನಿಖೆ ನಡೆಸಿ ನಿಜವಾದ ಕಾರಣವನ್ನು ಬಯಲು ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 10th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,791 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,475 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,844 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,791 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,475 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,475 ರೂ
  • ಚೆನ್ನೈ: 14,580 ರೂ
  • ಮುಂಬೈ: 14,475 ರೂ
  • ದೆಹಲಿ: 14,490 ರೂ
  • ಕೋಲ್ಕತಾ: 14,475 ರೂ
  • ಕೇರಳ: 14,475 ರೂ
  • ಅಹ್ಮದಾಬಾದ್: 14,480 ರೂ
  • ಜೈಪುರ್: 14,490 ರೂ
  • ಲಕ್ನೋ: 14,490 ರೂ
  • ಭುವನೇಶ್ವರ್: 14,475 ರೂ

ಇದನ್ನೂ ಓದಿ: ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 600 ರಿಂಗಿಟ್ (13,893 ರುಪಾಯಿ)
  • ದುಬೈ: 565.25 ಡಿರಾಮ್ (13,955 ರುಪಾಯಿ)
  • ಅಮೆರಿಕ: 157.50 ಡಾಲರ್ (14,283 ರುಪಾಯಿ)
  • ಸಿಂಗಾಪುರ: 198.90 ಸಿಂಗಾಪುರ್ ಡಾಲರ್ (14,258 ರುಪಾಯಿ)
  • ಕತಾರ್: 561.50 ಕತಾರಿ ರಿಯಾಲ್ (13,971 ರೂ)
  • ಸೌದಿ ಅರೇಬಿಯಾ: 573 ಸೌದಿ ರಿಯಾಲ್ (13,855 ರುಪಾಯಿ)
  • ಓಮನ್: 59.90 ಒಮಾನಿ ರಿಯಾಲ್ (14,118 ರುಪಾಯಿ)
  • ಕುವೇತ್: 46.09 ಕುವೇತಿ ದಿನಾರ್ (13,697 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 290 ರೂ
  • ಚೆನ್ನೈ: 300 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 290 ರೂ
  • ಜೈಪುರ್: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 300 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಕಂದಮ್ಮನ ಕಿಡ್ನ್ಯಾಪ್, ಕಾರಣ ಕೇಳಿದ್ರೆ ಶಾಕ್​​ ಆಗ್ತೀರಾ! – Kannada News | Male Child Desire: Woman Abducts Boy from Tumakuru Fair, Police Rescue in Bengaluru

ಚಾಕಲೇಟ್ ತೋರಿಸಿ ಎರಡೂವರೆ ವರ್ಷದ ಮಗುವನ್ನೇ ಕಿಡ್ನ್ಯಾಪ್ ಮಾಡಿದ್ರು!

ತುಮಕೂರು, ಫೆಬ್ರವರಿ 10: ಇಂದಿನ 21ನೇ ಶತಮಾನದಲ್ಲಿ ಹೆಣ್ಣು-ಗಂಡು ಸಮಾನರು ಎಂಬ ಆಲೋಚನೆ ತಕ್ಕಮಟ್ಟಿಗೆ ನಮ್ಮ ಸಮಾಜದಲ್ಲಿದೆ. ಆದರೂ ಇಲ್ಲೊಬ್ಬ ಮಹಿಳೆ ತನಗೆ ಇಬ್ಬರು ಹೆಣ್ಣು ಮಕ್ಕಳಿದ್ದರೂ ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದು, ಎರಡೂವರೆ ವರ್ಷದ ಮಗುವನ್ನೇ ಅಪರಹಿಸಿದ್ದಾಳೆ. ತುಮಕೂರಿನ (Tumkuru) ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಅಪರಹಿಸಲಾಗ ಮಗುವನ್ನು ಬೆಂಗಳೂರಿನ ಕೊರಮಂಗಲ ಪ್ರದೇಶದಲ್ಲಿ ಪತ್ತೆ ಮಾಡಲಾಗಿದ್ದು, ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲಾಗಿದೆ.

ಜಾತ್ರೆಯಲ್ಲಿ ಕಾಣೆಯಾದ ಮಗು ಬೆಂಗಳೂರಿನಲ್ಲಿ ಪತ್ತೆ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮಾಗೋಡು ಗ್ರಾಮದಲ್ಲಿ ನಡೆದ ಶ್ರೀರಂಗ ಜಾತ್ರೆ ವೇಳೆ ಅಪಹರಣಗೊಂಡಿದ್ದ ಎರಡುವರೆ ವರ್ಷದ ಗಂಡು ಮಗುವನ್ನು ಶಿರಾ ಪೊಲೀಸರು ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಬೆಂಗಳೂರಿನ ಲಗ್ಗೆರೆಯಲ್ಲಿ ವಾಸಿಸುವ ದಂಪತಿಯ ಮಗುವನ್ನು ಫೆಬ್ರವರಿ 1ರಂದು ಶಿರಾ ಜಾತ್ರಾ ಮಹೋತ್ಸವದ ವೇಳೆ ಅಪಹರಿಸಲಾಗಿತ್ತು. ಮಗುವನ್ನು ಅದರ ತಾತ ಪುಟ್ಟರಂಗಯ್ಯ ತಮ್ಮೊಂದಿಗೆ ಜಾತ್ರೆಗೆ ಕರೆತಂದಿದ್ದರು.

ಇದನ್ನೂ ಓದಿ ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ

ಜಾತ್ರೆಯಲ್ಲಿ ಅಂಗಡಿ ಹಾಕಿದ್ದ ತಾತನೊಂದಿಗೆ ಇದ್ದ ಮಗುವನ್ನು ನೋಡಿದ ಆರೋಪಿಗಳು ಚಾಕೊಲೇಟ್ ಕೊಡಿಸುವ ನೆಪದಲ್ಲಿ ಮಗುವನ್ನು ಕರೆದೊಯ್ದಿದ್ದರು. ಈ ಕುರಿತು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿರಾ ಡಿವೈಎಸ್‌ಪಿ ಶೇಖರ್ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆಂಧ್ರ ಪ್ರದೇಶ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತು.

ಗಂಡು ಮಗು ಬೇಕೆಂಬಾಸೆಗೆ ಮಗು ಕಿಡ್ನ್ಯಾಪ್

ಕೊನೆಗೆ ಬೆಂಗಳೂರಿನ ಕೊರಮಂಗಲದಲ್ಲಿರುವ ಶಾಂತಮೇರಿ ಎಂಬ ಮಹಿಳೆಯ ಮನೆಯಲ್ಲಿ ಮಗು ಪತ್ತೆಯಾಗಿದೆ. ಆರೋಪಿ ಶಾಂತಮೇರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದರೂ ಗಂಡು ಮಗು ಬೇಕೆಂಬ ಹಂಬಲದಿಂದ ಸಂಬಂಧಿ ನರಸಯ್ಯನೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾತ್ರೆಗೂ ಎರಡು ದಿನ ಮೊದಲು ತುಮಕೂರಿಗೆ ಬಂದಿದ್ದ ಶಾಂತಮೇರಿ ಮತ್ತು ನರಸಯ್ಯ, ಪೂರ್ವ ಯೋಜನೆಯೊಂದಿಗೆ ಮಗುವಿನ ಅಪಹರಣ ನಡೆಸಿರುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಜಾತ್ರೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಚಲನವಲನ ಗಮನಿಸಿದ ಪೊಲೀಸರು ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ – Kannada News | Akshaye Khanna: Kangana Ranaut’s Viral Flirt Attempt on Koffee With Karan Resurfaces

ನಟ ಅಕ್ಷಯ್ ಖನ್ನಾ (Akshaye Khanna) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ‘ಛಾವಾ’ ನಂತರ, ‘ಧುರಂಧರ್’ ಚಿತ್ರದಲ್ಲಿ ನಟಿಸಿ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಈಗ ಅಭಿಮಾನಿಗಳು ನಟನ ಮುಂಬರುವ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಅಕ್ಷಯ್ ಖನ್ನಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟನ ಜೊತೆ ಸಂಸದೆ ಒಬ್ಬರು ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಈಗ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ನಟನೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸಿದ ನಟಿ, ಮಹಿಳಾ ಸಂಸದೆ ಬೇರೆ ಯಾರೂ ಅಲ್ಲ ಕಂಗನಾ ರಣಾವತ್. ಪ್ರಸ್ತುತ, ಕಂಗನಾ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಒಮ್ಮೆ ಕಂಗನಾ ನಿರ್ದೇಶಕ ಕರಣ್ ಜೋಹರ್ ಅವರ ‘ ಕಾಫಿ ವಿತ್ ಕರಣ್ ‘ ಕಾರ್ಯಕ್ರಮಕ್ಕೆ ಅನಿಲ್ ಕಪೂರ್ ಮತ್ತು ಸಂಜಯ್ ದತ್ ಅವರೊಂದಿಗೆ ಬಂದಿದ್ದರು. ಕಂಗನಾ ಹೇಳಿಕೆಯಿಂದ ಅನಿಲ್ ಮತ್ತು ಸಂಜಯ್ ಕೂಡ ಆಘಾತಕ್ಕೊಳಗಾದರು. ಕಂಗನಾ ಅವರು ಅಕ್ಷಯ್ ಜೊತೆ ಫ್ಲರ್ಟ್ ಮಾಡಲು ಪ್ರಯತ್ನಿಸಿದರು, ಆದರೆ ಅವರು ಯಾವುದೇ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರ.

‘ನೀವು ಎಂದಾದರೂ ಯಾರೊಂದಿಗಾದರೂ ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದೀರಾ ಮತ್ತು ಆ ವ್ಯಕ್ತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವೇ’ ಎಂದು ಕರಣ್ ಕೇಳಿದರು. ಇದಕ್ಕೆ ಕಂಗನಾ, ‘ಅಕ್ಷಯ್ ಖನ್ನಾ. ನಾನು ಅಕ್ಷಯ್ ಜೊತೆ ಮಾತನಾಡಲು ಮತ್ತು ಫ್ಲರ್ಟ್ ಮಾಡಲು ಪ್ರಯತ್ನಿಸಿದೆ. ಆದರೆ ಅವರು ಎಂದಿಗೂ ಉತ್ತರಿಸಲಿಲ್ಲ. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ’ ಎಂದಿದ್ದರು.

ಇದನ್ನೂ ಓದಿ: ‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ

ಕಂಗನಾ ಅವರ ಖಾಸಗಿ ಜೀವನದ ಬಗ್ಗೆ ಹೇಳುವುದಾದರೆ, ಅವರ ಹೆಸರು ಅನೇಕ ಸೆಲೆಬ್ರಿಟಿಗಳೊಂದಿಗೆ ಚರ್ಚಿಸಲ್ಪಟ್ಟಿದೆ. ಅವರು ಹಲವರ ಜೀವನವನ್ನು ಮುರಿದ ಆರೋಪವನ್ನೂ ಹೊಂದಿದ್ದಾರೆ. ನಟರಾದ ಆದಿತ್ಯ ಪಂಚೋಲಿ, ಹೃತಿಕ್ ರೋಷನ್ ಮತ್ತು ಅಜಯ್ ದೇವಗನ್ ಅವರೊಂದಿಗೂ ಕಂಗನಾ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಆದರೆ, ಯಾವುದೂ ವಿವಾಹದವರೆಗೆ ಹೋಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version