Headlines

ಭಾರತೀಯರು ಬೇರೆಯವರಿಗೆ ಸೇವೆ ಸಲ್ಲಿಸಿದ್ದೇ ಆಯ್ತು, ಸ್ವಂತದ್ದೇನೂ ಸಾಧಿಸಲಿಲ್ಲ: ಸ್ಯಾಮ್ ಪಿತ್ರೋಡಾ – Kannada News | Sam Pitroda says Indian talent is used for serving others

ನವದೆಹಲಿ, ಫೆಬ್ರುವರಿ 22: ಭಾರತ ಸಾಕಷ್ಟು ಯುವ ಪ್ರತಿಭೆಗಳನ್ನು ಸೃಷ್ಟಿಸಿದೆ. ಆದರೆ, ಅವರು ಇತರರಿಗೆ ಸೇವೆ ಸಲ್ಲಿಸುತ್ತಿದ್ದಾರೆ. ಒಂದೇ ಒಂದು ಜಾಗತಿಕ ಮಟ್ಟದ ತಂತ್ರಜ್ಞಾನ ಉತ್ಪನ್ನಗಳನ್ನು ಭಾರತೀಯರು ಸೃಷ್ಟಿಸಲಿಲ್ಲ. 150 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಇದು ನಾಚಿಕೆಗೇಡಿತನದ ಸಂಗತಿ. ಹೀಗಂದವರು ಕಾಂಗ್ರೆಸ್​ನ ವಿದೇಶೀ ವಿಭಾಗದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda). ಯೂಟ್ಯೂಬ್ ವಾಹಿನಿಯೊಂದರಲ್ಲಿ ಸಂದರ್ಶನದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ದಾರೆ. ‘ನಾವು ಬಹಳ ಸಂಖ್ಯೆಯಲ್ಲಿ ಯುವ ಪ್ರತಿಭೆಗಳನ್ನು ಸೃಷ್ಟಿಸಿದ್ದೇವೆ. ಆದರೆ ಅವರೆಲ್ಲರೂ ಕಚ್ಚಾ ಪ್ರತಿಭೆಗಳು….

Read More

ರಿಹ್ಯಾಬ್‌ನಿಂದ ತಪ್ಪಿಸಿಕೊಂಡ ಯುವಕರಿಂದ ಆಟೋ ಚಾಲಕನ ದರೋಡೆ; ಮದ್ಯ ಮತ್ತು ಸಿಗರೆಟ್​​ಗಾಗಿ ಕೃತ್ಯ!

ಬೆಂಗಳೂರು, ಏಪ್ರಿಲ್ 05: ನಗರದ ಹೊರವಲಯದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿದ್ದ ಇಬ್ಬರು ಯುವಕರು ಅಪರಾಧ (Crime) ಕೃತ್ಯಕ್ಕೆ ಮುಂದಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷದ ಯುವಕ ಹಾಗೂ 17 ವರ್ಷದ ಅಪ್ರಾಪ್ತ ಸಹಚರನು ಸುಮಾರು ಒಂದು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡು, ವ್ಯಸನದ ಬೇಸರದಿಂದ ದರೋಡೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್​ಲೈನ್​ನಲ್ಲಿ ಆಟೋ ಬುಕ್ ಮಾಡಿ, ಗಂಟೆಗಳ ಕಾಲ ಅಲೆದಾಟ ಈ ಪ್ರಕರಣವು ಮಾರ್ಚ್ 5ರಂದು ಬಾಗಲೂರು ಪೊಲೀಸ್…

Read More

ಹುಬ್ಬಳ್ಳಿ: ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದ ಮುಸ್ಲಿಂ ಮುಖಂಡರು – Kannada News | Muslim Leaders Offer Udi to Hindu Goddess in Hubballi Fair, Arrange Prasada for Devotees, Video Goes Viral

ಹುಬ್ಬಳ್ಳಿ, ಮಾರ್ಚ್ 5: ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ ಕೋಮು ಸಾಮರಸ್ಯಕ್ಕೆ ಮಾದರಿಯಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ಮುಖಂಡರು ಗ್ರಾಮದೇವಿಯರಿಗೆ ಉಡಿ ತುಂಬಿದ್ದರ ಜತೆಗೆ, ಒಂದು ದಿನ ಭಕ್ತರಿಗೆ ತಾವೇ ಪ್ರಸಾದ ವ್ಯವಸ್ಥೆ ಮಾಡಿ ಭಾವೈಕ್ಯತೆ ಮೆರೆದಿದ್ದಾರೆ. ಸದ್ಯ, ಮುಸ್ಲಿಂ ಮುಖಂಡರು ಊಟದ ವ್ಯವಸ್ಥೆ ಮಾಡಿ ಭಕ್ತರಿಗೆ ಬಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು – Kannada News | Haveri: College Issues Hall Ticket to 2nd PUC Student After Bike Pawned Over Unpaid Fees

ಹಾವೇರಿ, ಮಾರ್ಚ್​​ 01: ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ.  ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ ಆರೋಪಿಸಿ ವಿದ್ಯಾರ್ಥಿನಿಗೆ ಪ್ರವೇಶ ಪತ್ರ ನೀಡಿಲ್ಲ.‌ ಅಷ್ಟೇ ಅಲ್ಲದೆ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯ ಬೈಕ್​​ ಅನ್ನು ಅಡವಿಟ್ಟುಕೊಂಡು ಬಳಿಕ ಹಾಲ್​ ಟಿಕೆಟ್​ (hall ticket) ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯಿಂದ ದರ್ಪ  ಹಾವೇರಿ…

Read More

ಕನ್ನಡ ಸಿನಿಮಾ ಟ್ರೈಲರ್ ನೋಡಿ ವಾವ್ ಎಂಬ ಸಲ್ಮಾನ್ ಖಾನ್ – Kannada News | Salman Khan watched Rakkasapuradol Kannada movie trailer

ಬಾಲಿವುಡ್​​ನ ಸ್ಟಾರ್ ನಟ ಸಲ್ಮಾನ್ ಖಾನ್​​ಗೂ (Salman Khan) ಕನ್ನಡ ಚಿತ್ರರಂಗಕ್ಕೂ ಎತ್ತಣಿಂದೆತ್ತ ಸಂಬಂಧ. ಸುದೀಪ್ ಜೊತೆಗೆ ಒಂದು ಸಿನಿಮಾನಲ್ಲಿ ನಟಿಸಿರುವುದು ಬಿಟ್ಟರೆ ಸಲ್ಲು ಕನ್ನಡ ಚಿತ್ರರಂಗದ ಜೊತೆಗೆ ಹೆಚ್ಚಿನ ನಂಟು ಹೊಂದಿಲ್ಲ. ಆದರೆ ಇದೀಗ ಹಠಾತ್ತನೆ ಸಲ್ಮಾನ್ ಖಾನ್, ಕನ್ನಡ ಸಿನಿಮಾದ ಟ್ರೈಲರ್ ಒಂದನ್ನು ವೀಕ್ಷಿಸಿ ವಾವ್ ಎಂದಿದ್ದಾರೆ. ಮಾತ್ರವಲ್ಲದೆ, ಈ ಸಿನಿಮಾದ ಹಿಂದಿ ಆವೃತ್ತಿ ಯಾವಾಗ ತೋರಿಸುತ್ತೀರಿ ಎಂದು ಚಿತ್ರತಂಡದವರನ್ನು ಕೇಳಿದ್ದಾರೆ. ಅಷ್ಟಕ್ಕೂ ಯಾವುದು ಆ ಸಿನಿಮಾ? ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ…

Read More

ಒಟಿಟಿಗಳ ಲಾಭಕೋರತನಕ್ಕೆ ಪ್ರೇಕ್ಷಕ ಹೈರಾಣು: ಸಿಗಲಿದೆಯೇ ಮುಕ್ತಿ? – Kannada News | Will Amazon Prime and other OTTs stop playing ads

ಕೋವಿಡ್ ಬಳಿಕ ಭಾರತ ಸೇರಿದಂತೆ ವಿಶ್ವದಾದ್ಯಂತ ಒಟಿಟಿ (OTT) ವೇದಿಕೆಗಳು ಭಾರಿ ಪ್ರಚಲಿತಕ್ಕೆ ಬಂದವು. ಈಗಂತೂ ಭಾರತವೊಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಒಟಿಟಿ ವೇದಿಕೆಗಳು ಸಕ್ರಿಯವಾಗಿವೆ. ಆದರೆ ಅವುಗಳಲ್ಲಿ ಪ್ರಮುಖವಾದುವು ಸುಮಾರು 15 ರಿಂದ 20 ಎನ್ನಬಹುದು. ಕೋವಿಡ್ ಸಮಯದಲ್ಲಿ ಹಾಗೂ ಅದಾದ ಕೆಲ ವರ್ಷಗಳ ಬಳಿಕ ಪ್ರೇಕ್ಷಕನನ್ನು ಪ್ರಭು ಎಂದು ಪರಿಗಣಿಸಿ ಸೇವೆ ನೀಡುತ್ತಿದ್ದ ಒಟಿಟಿಗಳು ಈಗ ವರಸೆ ಬದಲಿಸಿವೆ. ಸಬ್​ಸ್ಕ್ರಿಪ್ಷನ್ ಪಡೆದ ಬಳಿಕವೂ ಜಾಹೀರಾತುಗಳನ್ನು ಪ್ರದರ್ಶಿಸುತ್ತಿವೆ. ಜಾಹೀರಾತು ಬೇಡವೆಂದರೆ ವಾರ್ಷಿಕ ಮೊತ್ತದ ಮೇಲೆ ಮತ್ತೆ…

Read More

ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ – Kannada News | CM Siddaramaiah and DCM D.K. Shivakumar Fly Together to Davangere Amidst Political Buzz

ದಾವಣಗೆರೆ. ಡಿಸೆಂಬರ್​​ 27: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ದಾವಣಗೆರೆಗೆ ಒಂದೇ ಹೆಲಿಕಾಪ್ಟರ್​ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್​​ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ. ಮತ್ತಷ್ಟು…

Read More

ಪಶ್ಚಿಮ ಬಂಗಾಳದಲ್ಲೊಬ್ಬ ನರಭಕ್ಷಕ, ಜನರ ಕೊಂದು ಮೃತದೇಹ ತಿನ್ನುತ್ತಿದ್ದ ವ್ಯಕ್ತಿಯ ಸೆರೆ – Kannada News | Gruesome Incident in Cooch Behar: Man Found Dragging Body and Consuming Flesh

ಕೂಚ್​ಬೆಹಾರ್, ಜನವರಿ 14: ಪಶ್ಚಿಮ ಬಂಗಾಳ(West Bengal)ದಲ್ಲಿ ನರಭಕ್ಷಕನೊಬ್ಬ ಪತ್ತೆಯಾಗಿದ್ದಾನೆ. ಈತ ಜನರನ್ನು ಕೊಂದು ಮೃತದೇಹವನ್ನು ಎಳೆದುಕೊಂಡು ಹೋಗಿ ತಿನ್ನುತ್ತಿದ್ದ ಎನ್ನುವ ಮಾಹಿತಿಯನ್ನು ಪೊಲೀಸರು ನೀಡಿದ್ದು ಇಡೀ ಬಂಗಾಳದ ಜನತೆಯೇ ಬೆಚ್ಚಿಬಿದ್ದಿದ್ದಾರೆ.  ಆರೋಪಿ ಅಪರಿಚಿತ ವ್ಯಕ್ತಿಯನ್ನು  ಕೊಲೆ(Murder) ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ, ದಿನ್ಹಾಟಾ ಉಪಜಿಲ್ಲಾ ಪೊಲೀಸ್ ಅಧಿಕಾರಿ ಧಿಮಾನ್ ಮಿತ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 10 ರಂದು, ದಿನ್ಹಾಟಾ ಗಡಿಗೆ ಹೊಂದಿಕೊಂಡಿರುವ ಕುರ್ಷಾ ಹ್ಯಾಟ್‌ನಲ್ಲಿರುವ ದೂರದ…

Read More

ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ – Kannada News | Moving tanker fire reaches Road side Forest In Ankola

ಕಾರವಾರ, ಏಪ್ರಿಲ್ 16): ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಾಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೊದಲೇ ಪೆಟ್ರೋಲ್ ಇದ್ದಿದ್ದರಿಂದ ನೋಡ ನೋಡುತ್ತಿದ್ದಂತೇ ಟ್ಯಾಂಕರ್ ಹೊತ್ತಿ ಉರಿದಿದೆ. ಅಲ್ಲದೇ ಬೆಂಕಿಯ ಜ್ವಾಲೆ ರಸ್ತೆ ಪಕ್ಕದ ಅರಣ್ಯಕ್ಕೂ ವ್ಯಾಪಿಸಿದ್ದು, ಬೆಂಕಿ ನಂದಿಸಲು ಆಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ….

Read More

ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಬ್ಯಾನರ್ ತೆರೆವು ಕಾರ್ಯ ಚುರುಕು – Kannada News | GBA Cracks Down on Illegal Banners Across Bengaluru After Ballari, Chikkaballapur Row

ಬೆಂಗಳೂರು, ಜನವರಿ 21: ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಬೆಂಗಳೂರಿನಾದ್ಯಂತ (Bangalore) ಅಕ್ರಮವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್​​ಗಳ ತೆರೆವು ಕಾರ್ಯ ಚರುಕುಗೊಳಿಸಿದ್ದಾರೆ. ನಗರದಾದ್ಯಂತ ಸ್ಕೈವಾಕ್ ಮತ್ತು ಬಸ್ ಶೆಲ್ಟರ್‌ಗಳ ಸಮೀಪ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳನ್ನು ತೆಗೆದುಹಾಕಲಾಗಿದೆ. ಶಾಂತಿನಗರ ವಿಭಾಗದಲ್ಲಿ ಏಳು, ಸಿ.ವಿ. ರಾಮನ್ ನಗರದಲ್ಲಿ ಆರು, ಶಿವಾಜಿನಗರದಲ್ಲಿ ಹದಿಮೂರು, ಚಿಕ್ಕಪೇಟೆಯಲ್ಲಿ ಇಪ್ಪತ್ತೆರಡು ಹಾಗೂ ಗಾಂಧಿನಗರದಲ್ಲಿ ಮೂರು ಹೋರ್ಡಿಂಗ್ಸ್‌ಗಳನ್ನು ತೆರವು ಮಾಡಲಾಗಿದೆ. ಇದಲ್ಲದೆ, ಬೆಂಗಳೂರು…

Read More