Headlines

ನಾನೇ ನಂಬರ್ 1 ಟಾರ್ಗೆಟ್,ಇರಾನ್‌ ನನ್ನ ಹತ್ಯೆಗೆ ಸಂಚು ರೂಪಿಸುತ್ತಿದೆ ಎಂದ ಟ್ರಂಪ್ – Kannada News | Trump: Iran Plotting My Assassination; US Iran Conflict Escalates Amid Attacks

ವಾಷಿಂಗ್ಟನ್, ಜುಲೈ 09: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಮತ್ತು ಇರಾನ್(Iran) ನಡುವಿನ ಸೇನಾ ಸಂಘರ್ಷವು ಈಗ ತುತ್ತತುದಿಗೆ ತಲುಪಿದೆ. ಇರಾನ್ ದೇಶವು ತನ್ನನ್ನು ಹತ್ಯೆ ಮಾಡಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯ ಸಂಚು ರೂಪಿಸುತ್ತಿರಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಡರಾತ್ರಿ ಅತ್ಯಂತ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಟರ್ಕಿಯ ಅಂಕಾರಾದಲ್ಲಿ ನಡೆಯುತ್ತಿರುವ ನ್ಯಾಟೋ ಶೃಂಗಸಭೆಯ ನಡುವೆ ಪತ್ರಕರ್ತರೊಂದಿಗೆ ಮಾತನಾಡಿದ ಟ್ರಂಪ್, “ನಾನು ಇರಾನ್‌ನ ಪ್ರಮುಖ ಮತ್ತು ನಂಬರ್ ಒನ್ ಗುರಿಯಾಗಿದ್ದೇನೆ. ಇರಾನ್ ನಾಯಕತ್ವದ ಕೆಲವು ಶಕ್ತಿಗಳು…

Read More

Solar Eclipse: ಆಗಸ್ಟ್ 12 ರಂದು ಸಂಭವಿಸಲಿದೆ ಸಂಪೂರ್ಣ ಸೂರ್ಯಗ್ರಹಣ; ಭಾರತದಲ್ಲಿ ಇದು ಗೋಚರಿಸುತ್ತಾ? – Kannada News | August 12, 2026 Total Solar Eclipse: Global Spectacle and Scientific Insights

ಖಗೋಳಶಾಸ್ತ್ರಜ್ಞರು ಹಾಗೂ ವಿಜ್ಞಾನಿಗಳಿಗೆ 2026ರ ವರ್ಷ ಅತ್ಯಂತ ರೋಮಾಂಚನಕಾರಿ ವರ್ಷವಾಗಿದೆ. ಈ ಒಂದೇ ವರ್ಷದಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣಗಳು ಸೇರಿದಂತೆ ಒಟ್ಟು ನಾಲ್ಕು ಗ್ರಹಣಗಳು ಸಂಭವಿಸುತ್ತಿವೆ. ಕೆಲವು ಗ್ರಹಣಗಳು ಈಗಾಗಲೇ ಮುಗಿದಿದ್ದು, ಈಗ ವಿಶ್ವದಾದ್ಯಂತ ಎಲ್ಲರ ಕಣ್ಣು ಆಗಸ್ಟ್ 12 ರಂದು ಸಂಭವಿಸಲಿರುವ ವರ್ಷದ ಎರಡನೇ ಹಾಗೂ ಅತ್ಯಂತ ಪ್ರಮುಖ ಸಂಪೂರ್ಣ ಸೂರ್ಯಗ್ರಹಣ (Total Solar Eclipse) ಮೇಲಿದೆ. ವಿಜ್ಞಾನ ಲೋಕದಲ್ಲಿ ಈ ಘಟನೆಯನ್ನು ಒಂದು ದೊಡ್ಡ ಹಬ್ಬದಂತೆ ಆಚರಿಸಲಾಗುತ್ತಿದೆ. ಈ ಗ್ರಹಣದ ಸಂಪೂರ್ಣ…

Read More

CET 2026: NEET ರಿಸಲ್ಟ್ ಲೇಟ್​​; ಈ ಸಲ ಆಪ್ಷನ್ ಎಂಟ್ರಿ ಹೇಗೆ? KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು? – Kannada News | KEA Executive Director H. Prasanna Clarifies CET Option Entry Amid NEET Delays

ನೀಟ್ ಪರೀಕ್ಷೆಗಳು ವಿಳಂಬವಾಗಿರುವುದರಿಂದ, ಮೆಡಿಕಲ್, ಡೆಂಟಲ್ ಮತ್ತು ಆಯುಷ್ ಕೋರ್ಸ್‌ಗಳ ಸೀಟು ಹಂಚಿಕೆ ಎರಡನೇ ಸುತ್ತಿನಲ್ಲಿ ನಡೆಯಲಿದೆ. ಎಂಸಿಸಿ ಮತ್ತು ಮೆಡಿಕಲ್ ಎಜುಕೇಶನ್ ವಿಭಾಗದಿಂದ ಸೀಟ್ ಮ್ಯಾಟ್ರಿಕ್ಸ್ ಲಭ್ಯವಾದ ನಂತರ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ ವೈದ್ಯಕೀಯ ಸೀಟು ಮಾತ್ರ ಬಯಸುವ ವಿದ್ಯಾರ್ಥಿಗಳು ಎರಡನೇ ಸುತ್ತಿಗಾಗಿ ಕಾಯಬಹುದು. ಆದರೆ, ವೈದ್ಯಕೀಯ ಸೀಟು ದೊರೆಯದಿದ್ದಲ್ಲಿ ಇಂಜಿನಿಯರಿಂಗ್ ಅಥವಾ ಇತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು…

Read More

Video: ಅಮ್ಮ ಪ್ಲೀಸ್ ಮಲಗೋಕೆ ಬಿಡಮ್ಮ; ಹಾಯಾಗಿ ಮಲಗಿರುವ ಕಂದಮ್ಮನನ್ನು ಎಬ್ಬಿಸುತ್ತಿರುವ ತಾಯಾನೆ – Kannada News | A mother elephant gently wakes up her baby elephant with her trunk

ಆನೆಗಳು (elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಮರಿಯಾನೆಗಳ ಆಟ ತುಂಟಾಟ, ತಾಯಾನೆ ತನ್ನ ಮರಿಗಳ ಮೇಲೆ ತೋರುವ ಪ್ರೀತಿಯ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಹಾಯಾಗಿ ಮಲಗಿ ನಿದ್ರಿಸುತ್ತಿರುವ ಮರಿಯಾನೆಯನ್ನು ತಾಯಾನೆ ಮೆಲ್ಲನೆ ಎಬ್ಬಿಸಲು ಪ್ರಯತ್ನಿಸುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. leezahverse ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಾಯಿ ಪ್ರೀತಿಯನ್ನು ಕಾಣಬಹುದು. ಮರಿಯಾನೆಯೊಂದು ಹಾಯಾಗಿ ನಿದ್ರಿಸುತ್ತಿದೆ. ನಿದ್ರೆಗೆ ಜಾರಿರುವ ಕಂದಮ್ಮನನ್ನು ತಾಯಿ ಆನೆಯು ಮೆಲ್ಲನೆ ಎಬ್ಬಿಸುತ್ತಿದೆ. ಆದರೆ ಆನೆ ಮರಿ ಮಾತ್ರ…

Read More

‘ಅವಳ ಪರಿಸ್ಥಿತಿ ನೋಡಿದ್ರೆ ಬೇಸರವಾಗುತ್ತೆ’; ಶೋಭಿತಾ ಬಗ್ಗೆ ನಾಗ ಚೈತನ್ಯ ಮಾತು – Kannada News | Naga Chaitanya on Sobhita: Sad to see her situation, breaks silence on hate comments and marriage

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಸಮಂತಾ ವಿಚ್ಛೇದನದ ಬಳಿಕ ನಾಗ ಚೈತನ್ಯ ಬಾಳಲ್ಲಿ ಶೋಭಿತಾ ಬಂದರು. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಚ್ಯಾಟ್ ಮಾಡಿಕೊಂಡರು. ಆ ಬಳಿಕ ಎದುರು ಭೇಟಿ ಆಗಿ, ಗೆಳೆತನ ಮೂಡಿ, ಅದು ಪ್ರೀತಿಗೆ ತಿರುಗಿ ಈಗ ವಿವಾಹ ಆಗಿದ್ದಾರೆ. ಈಗ ನಾಗಚೈತನ್ಯ ಅವರು ಶೋಭಿತಾ ಬಗ್ಗೆ ಮಾತನಾಡಿದ್ದಾರೆ. ಶೋಭಿತಾ ಅವರನ್ನು ನೋಡಿದರೆ ಬೇಸರವಾಗುತ್ತದೆ ಎಂದಿದ್ದಾರೆ. ಸಮಂತಾ ಜೊತೆಗಿನ ವಿಚ್ಛೇದನದ ಬಳಿಕ ಕೆಲ ಸಮಯ ನಾಗ ಚೈತನ್ಯ…

Read More

Video: ವೇಗವಾಗಿ ಬಂದು ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಬೈಕ್ ಸವಾರ – Kannada News | Traffic Check Turns Tragic as Speeding Biker Mows Down Home Guard in Hyderabad

ಹೈದರಾಬಾದ್, ಜನವರಿ 14: ತೆಲಂಗಾಣದ ಹೈದರಾಬಾದ್‌ನಲ್ಲಿ ಮಂಗಳವಾರ ದಿನನಿತ್ಯದ ಸಂಚಾರ ತಪಾಸಣೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಸಂಚಾರ ಗೃಹರಕ್ಷಕ ಸಿಬ್ಬಂದಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಗಾಯಗೊಂಡಿದ್ದು,ಆತನನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಗಾಯಗೊಂಡ ಗೃಹರಕ್ಷಕ ದಳದ ಸಿಬ್ಬಂದಿಯನ್ನು 40 ವರ್ಷದ ಜಂಗಯ್ಯ ಎಂದು ಗುರುತಿಸಲಾಗಿದೆ. ಫಲಕ್ನುಮಾ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಚೆಕ್ ಪೋಸ್ಟ್ ಸ್ಥಾಪಿಸಲು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕುತ್ತಿದ್ದಾಗ ಈ ಘಟನೆ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ…

Read More

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾರಾಟ; ಶೀಘ್ರವೇ ಆರ್​​ಸಿಬಿ ಹೆಸರು ಬದಲಾವಣೆ?

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ. ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ. ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು…

Read More

ರಕ್ತಚರಿತ್ರೆಯ ನಾಡಿನಲ್ಲಿ ಕ್ರಿಕೆಟ್ ಕ್ರಾಂತಿ; ಭೂಲೋಕದ ಸ್ವರ್ಗಕ್ಕೆ ಮೊಟ್ಟ ಮೊದಲ ರಣಜಿ ಕಿರೀಟ – Kannada News | Jammu & Kashmir’s Ranji Cup Dream Achieved: A Decade of Transformation Through Cricket

ಜಮ್ಮು ಕಾಶ್ಮೀರ ಅಂದ್ರೆ ಥಟ್ಟನೆ ನೆನಪಾಗೋದು ಅಲ್ಲಿನ ಹಿಂಸಾಚಾರಗಳು, ಭಯೋತ್ಪಾದಕ ದಾಳಿಗಳು, ಇಂಡಿಯಾ ಪಾಕಿಸ್ತಾನ ಸಂಘರ್ಷ ಸೇರಿದಂತೆ ಅನೇಕ ಘಟನೆಗಳು. ಇದೇ ಕಾರಣಕ್ಕೆ ಭೂಲೋಕದ ಸ್ವರ್ಗ ಜಮ್ಮು ಕಾಶ್ಮೀರ ಕೆಟ್ಟ ಘಟನೆಗಳಿಂದ ಸುದ್ದಿಯಾಗಿದ್ದೇ ಹೆಚ್ಚು. ಆದ್ರೆ ಅದೇ ಜಮ್ಮು ಕಾಶ್ಮೀರದಲ್ಲಿ ಕಳೆದ ಒಂದು ದಶಕದಿಂದ ಪರಿಸ್ಥಿತಿ ಬದಲಾಗುತ್ತಿದೆ. ಬಂದೂಕು ಹಿಡಿಯೋ ಕೈಗಳು ಇದೀಗ ಕ್ರಿಕೆಟ್ ಬ್ಯಾಟ್ ಬಾಲ್ ಹಿಡಿಯುತ್ತಿವೆ. ಜಮ್ಮು ಕಾಶ್ಮೀರ ದಲ್ಲಿ ಅದ್ಯಾವ ಮಟ್ಟಿಗೆ ಕ್ರಿಕೆಟ್ ಕ್ರೇಜ್ ಬೆಳದಿದೆ ಅಂದ್ರೆ ಇಂದು ಮೊಟ್ಟಮೊದಲ ಬಾರಿಗೆ ರಣಜಿ…

Read More

T20 World Cup: ‘ಕೋಚ್ ಆಗಲು ನಾನು ರೆಡಿ’; ನೇಪಾಳ ತಂಡದ ಆಟಕ್ಕೆ ಆಫ್ರಿಕಾ ವೇಗಿ ಫಿದಾ – Kannada News | Dale Steyn Offers to Coach Nepal Cricket After Heroic T20 World Cup Fight vs England

2026 ರ ಟಿ20 ವಿಶ್ವಕಪ್ (T20 World Cup 2026) ಅಬ್ಬರದಿಂದ ಆರಂಭವಾಗಿದೆ. ಪ್ರಮುಖ ತಂಡಗಳ ಜೊತೆಗೆ, ಹೊಸ ತಂಡಗಳು ಸಹ ಈ ಪಂದ್ಯಾವಳಿಯಲ್ಲಿ ಭಾಗವಹಿಸಿವೆ. ನಡೆದಿರುವ 5 ಪಂದ್ಯಗಳಲ್ಲಿ ಹೊಸ ತಂಡಗಳು ಕೂಡ ಅದ್ಭುತ ಪ್ರದರ್ಶನ ನೀಡಿ ಪಂದ್ಯಾವಳಿಯನ್ನು ರೋಚಕಗೊಳಿಸಿವೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು. ಯುಎಸ್ಎ ಕೂಡ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ವಿರುದ್ಧ ಗಮನಾರ್ಹ ಪ್ರದರ್ಶನ ನೀಡಿತ್ತು. ಇದೀಗ ಫೆಬ್ರವರಿ 8 ರಂದು ನಡೆದ ಪಂದ್ಯದಲ್ಲಿ ನೇಪಾಳ,…

Read More