Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ.

StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗಿ ಹಾಗೂ ಮನೆಯ ಮುದ್ದಿನ ಶ್ವಾನದ ನಡುವಿನ ಬಾಂಧವ್ಯವನ್ನು ನೋಡಬಹುದು. ಪುಟ್ಟ ಹುಡುಗಿಯೂ ಶಾಲೆಗೆ ಹೋಗಲು ಸಿದ್ಧವಾಗಿದ್ದು, ರಸ್ತೆಯತ್ತ ನಡೆದುಕೊಂಡು ಹೋಗುತ್ತಿರುವುದನ್ನು ನೀವು ಕಾಣಬಹುದು. ಶ್ವಾನವು ಆಕೆಯನ್ನೇ ಹಿಂಬಾಲಿಸಿದ್ದು, ಸ್ಕೂಲ್ ಬಸ್‌ಗೆ ಹತ್ತಿಸಿದೆ. ಆ ಬಳಿಕ ಬಸ್ಸಿನ ಮೆಟ್ಟಿಲನ್ನು ಹತ್ತಿ ಪುಟ್ಟ ಹುಡುಗಿಯೂ ಸೀಟಿನಲ್ಲಿ ಕುಳಿತುಕೊಂಡಿದ್ದಾಳೋ ಎಂದು ಪರೀಕ್ಷಿಸಿದೆ.

ವೈರಲ್ ವಿಡಿಯೋ ಇಲ್ಲಿದೆ

 

ಇದನ್ನೂ ಓದಿ: ತನ್ನ ಕಾಲೆರಡು ಸ್ವಾಧೀನ ಕಳೆದುಕೊಂಡಂತೆ ನಟಿಸಿ ಆಹಾರ ಗಿಟ್ಟಿಸಿಕೊಂಡ ಶ್ವಾನ

ಈ ವಿಡಿಯೋ ಹದಿಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆ ದಾರ ಬಾಡಿ ಗಾರ್ಡ್ ಎಂದರೆ, ಮತ್ತೊಬ್ಬರು, ಈ ಪುಟಾಣಿಗೆ ಸೀಟ್ ಸಿಕ್ಕಿತೇ ಎಂದು ಪರೀಕ್ಷಿಸಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ತುಂಬಾ ಜವಾಬ್ದಾರಿಯುತ ಶ್ವಾನ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

ರಮ್ಯಾ, ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akasha Movie) ಮರು ಬಿಡುಗಡೆ ಆಗಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಈ ಸಿನಿಮಾ ನೋಡಲು ಇಂದು (ಮಾರ್ಚ್ 13) ಚಿತ್ರಮಂದಿರಕ್ಕೆ ಬಂದಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದರು. ‘ಪುನೀತ್ ಇಲ್ಲದೇ ಈ ಸಿನಿಮಾ ನೋಡಲು ಕಷ್ಟ ಆಗುತ್ತಿದೆ. ಮತ್ತೆ ಆ ದಿನಗಳು ವಾಪಸ್ ಬರಬಾರದೇ ಎನಿಸುತ್ತದೆ. ಆಕಾಶ್ ಸಿನಿಮಾ ಈಗ ನೋಡೋಕೂ ಅಷ್ಟೇ ಚೆನ್ನಾಗಿದೆ. ಅಪ್ಪು ಮತ್ತು ರಮ್ಯಾ ಜೋಡಿ ಚೆನ್ನಾಗಿದೆ. ಅಭಿಮಾನಿಗಳು ಅದೇ ಪ್ರೀತಿಯಿಂದ ಬಂದು ಸಿನಿಮಾ ನೋಡುತ್ತಿದ್ದಾರೆ. ಅದನ್ನು ನೋಡಿದಾಗ ಪುನೀತ್ ಇಲ್ಲ ಅಂತ ಅನಿಸಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಮೇಲೆ 2 ಬಾರಿ ಮಾರಣಾಂತಿಕ ದಾಳಿ; ಇರಾನ್ ಸಂಸದ ಮಾಹಿತಿ

ವಾಷಿಂಗ್ಟನ್, ಮಾರ್ಚ್ 13: ಇರಾನ್‌ನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ (Mojtaba Khamenei) ಇತ್ತೀಚಿನ ದಿನಗಳಲ್ಲಿ ಎರಡು ಮಾರಣಾಂತಿಕ ದಾಳಿಗಳಿಂದ ಬದುಕುಳಿದಿದ್ದಾರೆ ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ಇರಾನ್ ಸಂಸತ್ ಸದಸ್ಯರೊಬ್ಬರು ತಿಳಿಸಿದ್ದಾರೆ. ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಹಗೆತನದ ಮಧ್ಯೆ ಈ ದಾಳಿಗಳು ನಡೆದಿವೆ ಎಂದು ಸಂಸದ ಮೊಹಮ್ಮದ್ರೆಜಾ ರೆಝಾಯಿ ಕೌಚಿ ಹೇಳಿದ್ದಾರೆ. ಇರಾನ್‌ನ ರಾಜ್ಯ ಸುದ್ದಿ ಸಂಸ್ಥೆ ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿಯೊಂದಿಗೆ ಮಾತನಾಡಿದ ಅವರು, ದೇಶದ ಮಾಜಿ ಸುಪ್ರೀಂ ಲೀಡರ್ ಅಲಿ ಖಮೇನಿ ಅವರ ನಿವಾಸದ ಮೇಲೆ ನಡೆದ ದಾಳಿಯ ಸಮಯದಲ್ಲಿ ಮೊಜ್ತಬಾ ಖಮೇನಿ ಕೂಡ ಹಾಜರಿದ್ದರು ಎಂದು ಹೇಳಿದ್ದಾರೆ.

ಅಮೆರಿಕ ಹಾಗೂ ಇಸ್ರೇಲ್​ನ ಮಾರಕ ದಾಳಿಯ ಸಮಯದಲ್ಲಿ ಮೊಜ್ತಬಾ ಖಮೇನಿ ಕೂಡ ಅಲಿ ಖಮೇನಿ ಜೊತೆಗೆ ಸ್ಥಳದಲ್ಲಿದ್ದರು. ಆದರೆ ಹತ್ಯೆ ಪ್ರಯತ್ನದಿಂದ ಮೊಜ್ತಬಾ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ರೆಝಾಯಿ ಕೌಚಿ ಹೇಳಿದ್ದಾರೆ. ಬಳಿಕ ಮೊಜ್ತಬಾ ಖಮೇನಿ ದಾಖಲಾಗಿದ್ದ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಮತ್ತೊಂದು ದಾಳಿ ನಡೆದಿತ್ತು. ಆದರೆ, ಅಮೆರಿಕ ಮತ್ತು ಇಸ್ರೇಲ್ ತಮ್ಮ ಗುರಿಯನ್ನು ಸಾಧಿಸುವಲ್ಲಿ ವಿಫಲವಾಗಿವೆ ಎಂದು ಟೀಕಿಸಿದ್ದಾರೆ. ಆದರೆ, ಅವರು ದಾಳಿ ನಡೆದ ಆಸ್ಪತ್ರೆಯ ಹೆಸರನ್ನು ಅಥವಾ ದಾಳಿಯ ನಿಖರವಾದ ಸ್ಥಳವನ್ನು ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಇದಕ್ಕೂ ಮೊದಲು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಆರಂಭಿಕ ಹಂತದಲ್ಲಿ ಇರಾನ್‌ನ ಹೊಸ ನಾಯಕ ಗಾಯಗೊಂಡಿರಬಹುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರು. ಮೊಜ್ತಬಾ ಖಮೇನಿ ಈ ದಾಳಿಯಲ್ಲಿ ವಿರೂಪಗೊಂಡಿರುವ ಸಾಧ್ಯತೆಯಿದೆ, ಅವರು ಕೋಮಾದಲ್ಲಿದ್ದಾರೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು. ಹತ್ಯೆಗೀಡಾದ ಅಯತೊಲ್ಲಾ ಅಲಿ ಖಮೇನಿ ಅವರ 56 ವರ್ಷದ ಮಗ ತೀವ್ರ ಗಾಯಗೊಂಡಿದ್ದಾರೆ ಮತ್ತು ಪ್ರಸ್ತುತ ಟೆಹ್ರಾನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬ್ರಿಟಿಷ್ ಟ್ಯಾಬ್ಲಾಯ್ಡ್ ವರದಿ ಮಾಡಿತ್ತು. ಅವರು ಒಂದು ಕಾಲನ್ನು ಕಳೆದುಕೊಂಡಿದ್ದಾರೆ, ಅವರ ಹೊಟ್ಟೆ, ಲಿವರ್​​ಗೆ ಗಂಭೀರ ಹಾನಿಯಾಗಿದೆ ಎಂದು ಹೇಳಿತ್ತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಜೈಲ್‌ ನರಕ…ಯಾರಿಗೂ ಬೇಡ: 13 ವರ್ಷ ಬಳಿಕ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್

ಬೆಂಗಳೂರು, (ಮಾರ್ಚ್ 13): ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಲ್ಲಿನ ಸಜಾಬಂಧಿಗಳಾಗಿ ಸೆರೆವಾಸ ಅನುಭವಿಸುತ್ತಿದ್ದ 30 ಮಂದಿ ಸಜಾಬಂಧಿಗಳಿಗೆ ಇಂದು (ಮಾರ್ಚ್ 13) ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ. ಇನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದ್ರೆ, ಸನ್ನಡತೆ ಆಧಾರದ ಮೇಲೆ ಸರ್ಕಾರ ಅವಧಿಪೂರ್ವ ರಿಲೀಸ್ ಮಾಡಿದೆ. ಇನ್ನು ಇದೇ ವೇಳೆ ತುಮಕೂರಿನ ಕೈದಿಯೋರ್ವ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ. ಕೌಟುಂಬಿಕ ಗಲಾಟೆಯಲ್ಲಿ ಕೊಲೆ ಮಾಡಿ ಜೈಲಿಗೆ ಹೋಗಿದ್ದು, ಇದೀಗ ಬರೋಬ್ಬರಿ 13 ವರ್ಷಗಳ ನಂತರ ಜೈಲಿನಿಂದ ರಿಲೀಸ್​ ಆಗಿರುವುದಕ್ಕೆ ಸಂತೋಷಗೊಂಡಿದ್ದಾರೆ. ಇನ್ನು ಏನೆಲ್ಲಾ ಹೇಳಿದ್ದಾರೆ ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟಿ, ದಿವಂಗತ ಮಧುಬಾಲಾ ಅವರ ಬಯೋಪಿಕ್ (Madhubala Biopic) ಬಗ್ಗೆ ಬಿಟೌನ್‌ನಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಈ ಚಿತ್ರದಲ್ಲಿ ಮಧುಬಾಲಾ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಅನೇಕ ನಟಿಯರ ಹೆಸರು ಕೇಳಿಬರುತ್ತಿದೆ. ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡುವ ಆಲೋಚನೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರಿಗೆ ಇತ್ತು ಎನ್ನಲಾಗಿದೆ.

ವರದಿಗಳ ಪ್ರಕಾರ, ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ಮಧುಬಾಲಾ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲು ತೀವ್ರ ಆಸಕ್ತಿ ಹೊಂದಿದ್ದರು. ಬಾಲಿವುಡ್‌ಗೆ ಸಾಯಿ ಪಲ್ಲವಿ ಹೊಸ ಮುಖವಾಗಿರುವುದರಿಂದ, ಮಧುಬಾಲಾ ಅವರಂತಹ ಐತಿಹಾಸಿಕ ಪಾತ್ರಕ್ಕೆ ಅವರು ಹೊಸ ಕಳೆ ನೀಡಬಲ್ಲರು ಎಂದು ಬನ್ಸಾಲಿ ಭಾವಿಸಿದ್ದರು. ಆದರೆ, ಮಾತುಕತೆಗಳು ಅಂದುಕೊಂಡಂತೆ ನಡೆಯಲಿಲ್ಲ. ಮೂಲಗಳ ಪ್ರಕಾರ, ಕಾಲ್‌ಶೀಟ್ ಸಮಸ್ಯೆಯಿಂದಾಗಿ ಸಾಯಿ ಪಲ್ಲವಿ ಈ ಬಹುದೊಡ್ಡ ಅವಕಾಶದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಮಧುಬಾಲಾ ಬಯೋಪಿಕ್ ಕೈತಪ್ಪಿದರೂ, ಸಾಯಿ ಪಲ್ಲವಿ ಬಾಲಿವುಡ್‌ಗೆ ಭರ್ಜರಿಯಾಗಿಯೇ ಎಂಟ್ರಿ ಕೊಡುತ್ತಿದ್ದಾರೆ. ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ‘ಏಕ್ ದಿನ್’ ಚಿತ್ರದ ಮೂಲಕ ಸಾಯಿ ಪಲ್ಲವಿ ಅವರು ಹಿಂದಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸುನಿಲ್ ಪಾಂಡೆ ನಿರ್ದೇಶನದ ಈ ರೊಮ್ಯಾಂಟಿಕ್ ಸಿನಿಮಾ ಮೇ 1ರಂದು ಬಿಡುಗಡೆ ಆಗಲಿದೆ.

ಇಷ್ಟೇ ಅಲ್ಲದೆ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ ಪಾರ್ಟ್ 1’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಣಬೀರ್ ಕಪೂರ್ ರಾಮನಾಗಿ ನಟಿಸುತ್ತಿರುವ ಈ ಬೃಹತ್ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ (ರಾವಣ), ಸನ್ನಿ ಡಿಯೋಲ್ (ಹನುಮಂತ) ಸೇರಿದಂತೆ ಭಾರತದ ದೊಡ್ಡ ತಾರಾಬಳಗವೇ ಇದೆ.

ಇದನ್ನೂ ಓದಿ: ರಣಬೀರ್, ಸಾಯಿ ಪಲ್ಲವಿ ‘ರಾಮಾಯಣ’ ಫೋಟೋ ಫೇಕ್; ಅಸಲಿ ವಿಷಯ ಬಿಚ್ಚಿಟ್ಟ ನಟ

ಮಧುಬಾಲಾ ಪಾತ್ರದಲ್ಲಿ ಸಾಯಿ ಪಲ್ಲವಿ ಅವರನ್ನು ನೋಡಲಾಗದಿದ್ದರೂ, ಸೀತೆಯ ಪಾತ್ರದಲ್ಲಿ ಅವರ ನಟನೆಯನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಈಗಾಗಲೇ ಮೋಡಿ ಮಾಡಿರುವ ಅವರಿಗೆ ಬಾಲಿವುಡ್ ಪ್ರೇಕ್ಷಕರು ಯಾವ ರೀತಿ ಸ್ವಾಗತ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ರನೌಟ್ ಮಾಡಿದಕ್ಕೆ ಕೆರಳಿ ಕೆಂಡವಾದ ಪಾಕ್ ಆಟಗಾರ; ಇದರಲಿ ಯಾರದ್ದು ತಪ್ಪು? ನೀವೇ ನೋಡಿ

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು. ಹೀಗಾಗಿ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿ ಉತ್ತಮ ಆರಂಭವನ್ನು ಪಡೆದುಕೊಂಡಿತು. ಆದಾಗ್ಯೂ ಪಾಕ್ ಇನ್ನಿಂಗ್ಸ್​ನ 39ನೇ ಓವರ್​ನಲ್ಲಿ ನಡೆದ ಅದೊಂದು ಘಟನೆ ಪಾಕ್ ಟಿ20 ತಂಡದ ನಾಯಕ ಸಲ್ಮಾನ್ ಆಘಾ ಕೆರಳುವಂತೆ ಮಾಡಿದಲ್ಲದೆ, ವಿಕೆಟ್ ಕೂಡ ಕಳೆದುಕೊಳ್ಳುವಂತೆ ಮಾಡಿತು.

ಢಾಕಾದಲ್ಲಿ ನಡೆದ ಎರಡನೇ ಏಕದಿನ ಪಂದ್ಯದ ಪಾಕಿಸ್ತಾನದ ಇನ್ನಿಂಗ್ಸ್‌ನ 39 ನೇ ಓವರ್‌ ವಿಚಿತ್ರ ರನೌಟ್​ಗೆ ಸಾಕ್ಷಿಯಾಯಿತು​. ಬಾಂಗ್ಲಾದೇಶದ ಬೌಲರ್ ಮೆಹದಿ ಹಸನ್ ಎಸೆದ ಈ ಓವರ್‌ನ ನಾಲ್ಕನೇ ಚೆಂಡನ್ನು ರಿಜ್ವಾನ್ ನೇರವಾಗಿ ಬೌಲರ್ ಕಡೆಗೆ ಆಡಿದರು. ಇತ್ತ ನಾನ್-ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ಸಲ್ಮಾನ್ ಆಘಾ ರನ್​ಗಾಗಿ ತಮ್ಮ ಕ್ರೀಸ್‌ನಿಂದ ಹೊರಬಂದರಾದರೂ ಅಲ್ಲಿ ರನ್ ಇಲ್ಲದಿರುವುದನ್ನು ಗಮನಿಸಿ ಅಲ್ಲಿಯೇ ನಿಂತರು. ಅಷ್ಟರಲ್ಲಿ ರಿಜ್ವಾನ್ ಬಾರಿಸಿದ ಚೆಂಡು ಕೂಡ ಆಘಾ ಕಡೆಗೆ ಬಂತು. ಹೀಗಾಗಿ ಆಘಾ ಚೆಂಡನ್ನು ಹಿಡಿದು ಬೌಲರ್​ ಮೆಹದಿ ಹಸನ್​ಗೆ ರವಾನಿಸಲು ಪ್ರಯತ್ನಿಸಿದರು.

ಈ ಹಂತದಲ್ಲಿ ಚಾಣಾಕ್ಷತೆ ತೋರಿದ ಮೆಹದಿ ಹಸನ್ ಚೆಂಡನ್ನು ಹಿಡಿದು, ನೇರವಾಗಿ ಸ್ಟಂಪ್​ಗೆ ಎಸೆದರು. ಇದೆಲ್ಲ ನಡೆಯುವಾಗ ಕ್ರೀಸ್​ನಿಂದ ಹೊರಗೆ ನಿಂತಿದ್ದ ಆಘಾ, ಕ್ರೀಸ್ ಒಳಗೆ ಬರುವ ಪ್ರಯತ್ನವನ್ನು ಮಾಡಲಿಲ್ಲ. ಹೀಗಾಗಿ ಚೆಂಡನ್ನು ಸ್ಟಂಪ್​ಗೆ ಎಸೆದ ಕೂಡಲೇ ಮೆಹದಿ ಹಸನ್​ ಔಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಲಾರಂಬಿಸಿದರು. ಇದನ್ನು ನೋಡಿ ಕಕ್ಕಾಬಿಕ್ಕಿಯಾದ ಆಘಾ, ಹಸನ್ ಜೊತೆಗೆ ವಾದಿಸಲು ಪ್ರಾರಂಭಿಸಿದರು. ಇತ್ತ ಫಿಲ್ಡ್ ಅಂಪೈರ್ ಮೂರನೇ ಅಂಪೈರ್​ ಬಳಿ ಮರುಪರಿಶೀಲನೆಗೆ ಮನವಿ ಮಾಡಿದರು. ಎಲ್ಲವನ್ನು ಕುಲಂಕುಶವಾಗಿ ಪರಿಶೀಲಿಸಿದ ಅಂಪೈರ್, ಸಲ್ಮಾನ್ ಆಘಾ ಔಟೆಂದು ತೀರ್ಪು ನೀಡಿದರು. ಇದರಿಂದ ಇನ್ನಷ್ಟು ಕೆರಳಿದ ಆಘಾ, ತಮ್ಮ ಹೆಲ್ಮೆಟ್ ಮತ್ತು ಕೈಗವಸುಗಳನ್ನು ತೆಗೆದು ನೆಲದ ಮೇಲೆ ಎಸೆದು ಆಕ್ರೋಶ ಹೊರಹಾಕಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಏಯ್‌.. ಏಯ್‌ ಅಂದ್ರೂ ಕೇಳದ ಯುವಕ ಸ್ಟೇಜ್​​​​ ಮೇಲೇರಿ ಸಿಎಂಗೆ ಹೇಳಿದ್ದೇನು ಗೊತ್ತಾ?

ಮೈಸೂರು, (ಮಾರ್ಚ್ 13): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು (ಮಾರ್ಚ್ 13) ತವರು ಕ್ಷೇತ್ರ ಮೈಸೂರಿನ ವರುಣಾಕ್ಕೆ ಭೇಟಿ ನೀಡಿದ್ದು, ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದ ಸಂಪ್ರೋಕ್ಷಣ, ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ ಹಾಗೂ ಮಹಾದ್ವಾರದ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯನವರನ್ನು ಅದ್ಧೂರಿಯಾಗಿ ತೆರೆ ವಾಹನದಲ್ಲಿ ಮೆರವಣಿಗೆ ಮೂಲಕ ಬರಮಾಡಿಕೊಂಡರು.

ಇನ್ನು ಇದೇ ವೇಳೆ ಭದ್ರತಾಲೋಪವಾಗಿದೆ. ಸಿದ್ದರಾಮ್ಯಯ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಯುವಕನೋರ್ವ ಏಕಾಏಕಿ ವೇದಿಕೆ ನುಗ್ಗಿದ್ದು, ನಮ್ಮ ಹುಡುಗರು ನಿಮ್ಮ ಜೊತೆ ಫೋಟೋ ತೆಗೆದುಕೊಳ್ಳಬೇಕೆಂದಿದ್ದಾರೆ. ಆದ್ದರಿಂದ ಸ್ವಲ್ಪ ಬಿಡುವು ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾನೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

T20 World Cup 2026: ಜಾಹೀರಾತಿನಿಂದಲೇ 1500 ಕೋಟಿ ರೂ. ಆದಾಯ..!

Source link

ಪಿಎಂ ಕಿಸಾನ್ ಸ್ಕೀಮ್; ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ; ನಿಮಗೆ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?

ನವದೆಹಲಿ, ಮಾರ್ಚ್ 13: ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಮ್​ನ ಗುವಾಹಟಿಯಲ್ಲಿ ಇಂದು ಪಿಎಂ ಕಿಸಾನ್ ಸ್ಕೀಮ್​ನಡಿ ((PM Kisan scheme) 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. 9.32 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂನಂತೆ ಒಟ್ಟು 18,640 ಕೋಟಿ ರೂ ಹಾಕಲಾಗಿದೆ. ಕಳೆದ ಬಾರಿಗಿಂತ ಈ ಸಲ ಫಲಾನುಭವಿಗಳ ಸಂಖ್ಯೆ 4 ಲಕ್ಷದಷ್ಟು ಕಡಿಮೆ ಆಗಿದೆ. ಇಕೆವೈಸಿ ಆಗಿಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಗೆ ಲಕ್ಷಾಂತರ ಮಂದಿಗೆ ಯೋಜನೆಯ ಲಾಭ ಕೈತಪ್ಪಿದೆ. 21ನೇ ಕಂತಿನ ಹಣವನ್ನು 9,35,79,869 ಮಂದಿ ಪಡೆದಿದ್ದರು. ಈ ಬಾರಿ 3.8 ಲಕ್ಷದಷ್ಟು ಸಂಖ್ಯೆ ಕಡಿಮೆ ಆಗಿದೆ.

ಏನಿದು ಪಿಎಂ ಕಿಸಾನ್ ಸ್ಕೀಮ್?

ಪಿಎಂ ಕಿಸಾನ್ ಯೋಜನೆಯು ರೈತರ ವ್ಯವಸಾಯಕ್ಕೆ ಸರ್ಕಾರ ನೀಡುವ ಸಹಾಯಧನದ ಸ್ಕೀಮ್. ವರ್ಷಕ್ಕೆ 6,000 ರೂ ನೀಡಲಾಗುತ್ತದೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣ ವಿತರಣೆ ಆಗುತ್ತದೆ. ನೇರವಾಗಿ ರೈತರ ಬ್ಯಾಂಕ್ ಅಕೌಂಟ್​ಗಳಿಗೆ ಈ ಹಣ ಜಮೆ ಆಗುತ್ತದೆ.

ಇದನ್ನೂ ಓದಿ: ಸ್ಮಾರ್ಟ್​ಫೋನ್ ಉತ್ಪಾದನೆಗೆ ಉತ್ತೇಜಿಸಲು ಸರ್ಕಾರದಿಂದ ಹೊಸ ಸಬ್ಸಿಡಿ ಸ್ಕೀಮ್; ಪಿಎಲ್​ಐ ಬದಲು ಹೊಸ ಯೋಜನೆ

ಫಲಾನುಭವಿಯಾಗಿದ್ದೂ ಹಣ ಬಂದಿಲ್ಲವಾ? ಹೀಗೆ ಮಾಡಿ…

ನೀವು ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿದ್ದು, ಹಣ ಇನ್ನೂ ಬಂದಿಲ್ಲ ಎಂದಾದಲ್ಲಿ ಹಲವಾರು ಕಾರಣಗಳಿರುವ ಸಾಧ್ಯತೆ ಇದೆ. ನೀವು ಇಕೆವೈಸಿ ಮಾಡಿಲ್ಲದಿರಬಹುದು, ಯೋಜನೆಗೆ ಅರ್ಹರಲ್ಲದಿರಬಹುದು, ಅಥವಾ ಬೇರೇನೇ ಇರಬಹುದು.

ನಿಮಗೆ ಹಣ ಬಂದಿಲ್ಲದಿದ್ದರೆ ಸ್ಕೀಮ್​ನಲ್ಲಿ ನಿಮ್ಮ ಗ್ರಾಮದ ಎಲ್ಲಾ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಪರಿಶೀಲಿಸಿ. ಈ ಕೆಲಸ ಮಾಡಲು ಪಿಎಂ ಕಿಸಾನ್ ವೆಬ್​ಸೈಟ್​ಗೆ ಹೋಗಿ: https://pmkisan.gov.in/

ಇದನ್ನೂ ಓದಿ: ಸಿಲಿಕಾನ್ ಸಿಟಿ ಹೊಂದಿರುವ ಕರ್ನಾಟಕದಲ್ಲಿ 470 ಹಳ್ಳಿಗಳಲ್ಲಿ ಈಗಲೂ ಇಲ್ಲ ಮೊಬೈಲ್ ಸಂಪರ್ಕ

ಇಲ್ಲಿ ತುಸು ಕೆಳಗೆ ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ಕಾಣುತ್ತದೆ. ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಗ್ರಾಮವನ್ನು ಆಯ್ದುಕೊಳ್ಳಿ. ನಿಮ್ಮ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ನಿಮ್ಮ ಹೆಸರಿದೆಯಾ ನೋಡಿಕೊಳ್ಳಿ. ಇದೇ ವೆಬ್​ಸೈಟ್​ನಲ್ಲಿ ನೀವು ಇಕೆವೈಸಿ ಅಪ್​ಡೇಟ್ ಕೂಡ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೀದರ್​​ನ​ ಬಿದ್ರಿ ಕಲೆಗೂ ತಟ್ಟಿದ ಯುದ್ಧದ ಬಿಸಿ: ವಿದೇಶಿ ವಹಿವಾಟು ಕುಸಿತ; ಸಂಕಷ್ಟದಲ್ಲಿ ಕಲಾವಿದರು

ಬೀದರ್​​​, ಮಾರ್ಚ್​​ 13: ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಐತಿಹಾಸಿಕ ಬೀದರಿ ಕಲೆಗೆ ಅಮೆರಿಕಾ, ಇಸ್ರೇಲ್, ಇರಾನ್ ಯುದ್ಧದಿಂದಾಗಿ (iran israel war) ವ್ಯಾಪಾರ ಕುಸಿತವಾಗಿದೆ. ಬೀದರಿ ಕಲೆಯನ್ನ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಎದುರಾಗಿದೆ. ಬೀದರಿ ಕಲೆಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕರು ಈ ಕಲೆಯನ್ನ ಪ್ರೋತ್ಸಾಹಿಸಬೇಕಾದ ಸರ್ಕಾರ ಕಂಡುಕಾಣದಂತೆ ಕುಳಿತುಬಿಟ್ಟಿದ್ದು, ಯುದ್ಧದ ಎಫೆಕ್ಟ್​​ ಹಿನ್ನಲೆ ಬಿದ್ರಿ ಕಲಾಕೃತಿಗಳು ಮಾರಾಟವಾಗುತ್ತಿಲ್ಲ.

ಬೀದರ್ ಜಿಲ್ಲೆ ಎಂದ ಕೂಡಲೇ ನಮಗೆ ತಕ್ಷಣ ನೆನಪಾಗುವುದು ಜಗತ್ತಿನಾದ್ಯಾಂತ ಪ್ರಸಿದ್ಧಿ ಪಡೆದಿರುವ ಬೀದರಿ ಕಲೆ. ಇಂತಹ ಅಪರೂಪದ ಕಲೆಗಳು ಮಾರಾಟವಾಗದೆ ಕಲಾವಿದರಿಗೆ ಸಂಕಷ್ಟ ಎದುರಾಗಿದೆ. ಬೀದರ್​​ನ (ಬಿದ್ರಿ ಕಲೆ)ಗೂ ಈಗ ಯುದ್ಧದ ಬಿಸಿ ತಟ್ಟಿದ್ದು, ವಿದೇಶಿ ಮಾರಾಟದಲ್ಲಿ ದೊಡ್ಡ ಮಟ್ಟದ ಕುಸಿತ ಕಂಡುಬಂದಿದೆ. ಶೇಕಡಾ 50ರಷ್ಟು ವಿದೇಶಿ ವ್ಯವಹಾರ ಕಡಿಮೆಯಾಗಿರುವುದರಿಂದ ಬಿದ್ರಿ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಪ್ಪು ಮಿಶ್ರಿತ ಲೋಹದ ಮೇಲಿನ ಬೆಳ್ಳಿಯ ನವಿರು ಕೆತ್ತನೆಯಿಂದ ತಯಾರಾಗುವ ಬಿದ್ರಿ ಕಲಾಕೃತಿಗಳು ವಿಶ್ವದ ಗ್ರಾಹಕರನ್ನು ಸೆಳೆದಿದ್ದವು. ವಿಶೇಷವಾಗಿ ಯುಎಸ್​, ದುಬೈ, ಫ್ರಾನ್ಸ್​​ ಮತ್ತು ಕೆನಾಡಾ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇತ್ತು. ಯುದ್ಧದ ಕರಿನೆರಳು ಮುಂದುವರಿದರೆ, ಬೀದರ್‌ನ ಈ ಪಾರಂಪರಿಕ ಕೈಗಾರಿಕೆಗೆ ಮತ್ತಷ್ಟು ಹೊಡೆತ ಬೀಳುವ ಭೀತಿ ಎದುರಾಗಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಸಿಲಿಂಡರ್ ಕೊರತೆ: ಸೌದೆ ಒಲೆ ಮೇಲೆ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್​ ಸಿಬ್ಬಂದಿ

ಈ ವಿದೇಶಿ ಗ್ರಾಹಕರೇ ದುಬಾರಿ ಬಿದ್ರಿ ಕಲಾಕೃತಿಗಳ ಪ್ರಮುಖ ಬೆಂಬಲವಾಗಿದ್ದರು. ಆದರೆ ಯುದ್ದದ ಪರಿಣಾಮ ಅಂತಾರಾಷ್ಟ್ರೀಯ ಸಾಗಾಟ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಿವೆ. ವಿಮಾನ ಮತ್ತು ಹಡಗು ಸಂಚಾರದಲ್ಲಿ ಅಡಚಣೆಗಳಿರುವುದರಿಂದ ಕಲಾಕೃತಿಗಳನ್ನು ವಿದೇಶಗಳಿಗೆ ಕಳುಹಿಸುವಲ್ಲಿ ವಿಳಂಬವಾಗುತ್ತಿದೆ. ಆನ್‌ಲೈನ್ ಮೂಲಕ ಬುಕ್ಕಿಂಗ್ ಪ್ರಮಾಣ ಹೆಚ್ಚಿದ್ದರೂ ಸಾಗಾಟದ ಸಮಸ್ಯೆಯಿಂದ ರಫ್ತು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಬಿದ್ರಿ ಕಲೆ ನಂಬಿಕೊಂಡಿರುವ ನೂರಾರು ಕಲಾವಿದರಲ್ಲಿ ಆತಂಕ ಹೆಚ್ಚಾಗಿದೆ.

ಅತ್ಯಂತ ಸೂಕ್ಷ್ಮವಾದ ಕುಸುರಿ ಕಲೆಯಿಂದ ವಸ್ತುಗಳನ್ನ ತಯಾರು ಮಾಡುವುದಕ್ಕೆ ತಿಂಗಳು ಬೇಕಾಗುತ್ತದೆ. ಕಷ್ಟಪಟ್ಟು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಇಲ್ಲವಾಗಿದ್ದು, ಕಲೆಯನ್ನ ನಂಬಿಕೊಂಡವರಿಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಎರಡು ವರ್ಷದ ಹಿಂದೆ ಬಿದರಿ ಕಲೆಗಾರ ಷಾ ರಷೀದ್ ಅಹ್ಮದ್ ಖಾದ್ರಿಗೆ ಈ ಕಲೆಯನ್ನು ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ವಂಶಪರಂಪರವಾಗಿ ಬಂದಿದ್ದ ಕುಶಲಕರ್ಮಿಗೆ ಸರ್ಕಾರ ಗುರುತಿಸಿ 74ನೇ ಗಣರಾಜ್ಯೋತ್ಸವದಂದು ಪದ್ಮಶ್ರೀ ಪ್ರಶಸ್ತಿ ಕೊಟ್ಟು ಗೌರವಿಸಿದೆ.

ಇನ್ನು ಶೆಕಡಾ 50ರಷ್ಟು ವಿದೇಶದಲ್ಲಿ ಬಿದ್ರಿ ಕಲೆಗಳು ಮಾರಾಟವಾಗುತ್ತವೆ. ಇನ್ನೂಳಿದ 50ರಷ್ಟು ನಮ್ಮ ದೇಶದಲ್ಲಿ ಮಾರಾಟವಾಗುತ್ತವೆ ಆದರೆ ವಂಶಪಾರಂಪರಗತವಾಗಿ ಬಂದಿರುವ ಈ ಕಲೆಯಿಂದಲೇ ಬದುಕು ಕಟ್ಟಿಕೊಂಡಿರುವ ಕಲಾವಿದರಿಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರಾಟಕ್ಕೆ ಸರಕಾರ ಪ್ರೋತ್ಸಾಹ ಕೊಡುತ್ತಿಲ್ಲ. ಜೊತೆಗೆ ಈ ವಸ್ತುಗಳನ್ನ ತಯಾರಿಸಲಿಕ್ಕೆ ಬೇಕಾದ ಕಚ್ಚಾವಸ್ತುಗಳನ್ನು ಪೂರೈಸುತ್ತಿಲ್ಲ. ಈ ಕಲೆಯನ್ನೇ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಜನರ ಸ್ಥಿತಿ ಆರಕ್ಕೇರದೆ ಮೂರಕ್ಕಿಳಿಯದಂತಾಗಿದೆ.  ನಮ್ಮ ಕಲೆಗೆ ಸರಕಾರದ ಬೆಂಬಲ ಬೇಕಾಗಿದೆ ಎಂದು ಕಲಾವಿದರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಗ್ಯಾಸ್ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಕಾದಿದೆ ಮತ್ತೊಂದು ಶಾಕ್!

ಶತಮಾನಗಳ ಇತಿಹಾಸ ಹೊಂದಿರುವ ಬೀದರಿ ಕಲೆ ಇಂದು ಯುದ್ದದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆ ಬಂದ್ ಆಗಿದೆ. ಜಿಲ್ಲಾಡಳಿತ ಹಾಗೂ ಸರಕಾರದ ದಿವ್ಯ ನಿರ್ಲಕ್ಷದಿಂದ ಇಡೀ ಜಗತ್ತಿಗೆ ಕರ್ನಾಟಕದ ಬೀದರಿ ಕಲೆಯನ್ನ ಪರಿಚಯಿಸಿದ ಕಲಾವಿದರ ಬದುಕು ಮಾತ್ರ ಬೀದಿಗೆ ಬಂದಿದೆ. ಕಲೆ ಹಾಗೂ ಕಲಾವಿದರನ್ನ ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಜಿಲ್ಲಾಡಳಿತಕ್ಕಿದೆ. ಇಂತಹ ಅಪರೂಪದಲ್ಲಿ ಅಪರೂಪದ ಕಲೆಗೆ ಪ್ರಚಾರ ಮತ್ತು ಮಾರುಕಟ್ಟೆಯ ಕೊರತೆಯಿದ್ದು, ಸರಕಾರ ಮುಂದೆ ಬಂದು ಬೀದರಿ ಕಲೆಯನ್ನ ಉಳಿಸುವ ಕಡೆಗೆ ಕಾಳಜಿ ವಹಿಸುವುದು ಅನಿವಾರ್ಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version