Headlines

ಪೌರಕಾರ್ಮಿಕ ದಂಪತಿಯ ಪುತ್ರನಿಗೂ ಸಿಕ್ತು ಸಚಿವ ಸ್ಥಾನ! 34 ಮತಗಳಿಂದ ಗೆದ್ದಿದ್ದ ಕೆಎಸ್ ಬಸವಂತಪ್ಪ ರಾಜಕೀಯ ಪಯಣ ಹೀಗಿದೆ – Kannada News | Karnataka Cabinet Expansion: Who Is KS Basavanthappa, From Pourakarmika Family to Minister

ದಾವಣಗೆರೆ, ಆಗಸ್ಟ್ 3: ಪೌರಕಾರ್ಮಿಕ ದಂಪತಿಯ ಕುಟುಂಬದಿಂದ ಬಂದ ಕೆಎಸ್ ಬಸವಂತಪ್ಪ (KS Basavanthappa) ಇದೀಗ ಕರ್ನಾಟಕ ಸಚಿವ ಸಂಪುಟಕ್ಕೆ (Karnataka Cabinet) ಸೇರುವ ಅವಕಾಶ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವಂತಪ್ಪ ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಬಳಿಕ ಸಚಿವರಾಗುತ್ತಿರುವುದು ವಿಶೇಷ. ದೀರ್ಘ ರಾಜಕೀಯ ಹೋರಾಟದ ಬಳಿಕ ಸಚಿವ ಸ್ಥಾನದ ಅವಕಾಶ ಪಡೆದಿರುವ ಬಸವಂತಪ್ಪ ಅವರ ಹಿನ್ನೆಲೆ ಇದೀಗ ಗಮನ ಸೆಳೆದಿದೆ. ಪೌರಕಾರ್ಮಿಕ ಕುಟುಂಬದಿಂದ ಸಚಿವ ಸ್ಥಾನದ ವರೆಗೆ ದಾವಣಗೆರೆಯ…

Read More

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​ – Kannada News | Karnataka Cabinet Expansion: 20 Ministers to Take Oath in CM DK Shivakumar’s Cabinet; Several Siddaramaiah Era Stalwarts Dropped

ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರುImage Credit source: PTI ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟಕ್ಕೆ 20 ಮಂದಿ ನೂತನ ಸಚಿವರ ಸೇರ್ಪಡೆ ಆಗಲಿದ್ದು, ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿದ್ದ ಹಲವು ಪ್ರಮುಖ ಶಾಸಕರಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದರೆ, ಮೊದಲ ಬಾರಿಗೆ ಸಚಿವರಾಗುವ ಆಸೆ ಹೊಂದಿದ್ದ ಅನೇಕ ನಾಯಕರ ಕನಸೂ ಭಗ್ನಗೊಂಡಿದೆ. ಹೀಗಾಗಿ ನಾಯಕರ…

Read More

Video: ಹಾಲು ಕರೆಯುವುದನ್ನು ಕಲಿಯುವ ಪ್ರಯತ್ನದಲ್ಲಿ ವಿದೇಶಿ ಮಹಿಳೆ, ವೈರಲ್ ಆಯ್ತು ದೃಶ್ಯ – Kannada News | A foreign lady who came to India and learned how to milk a cow.

ಹಳ್ಳಿ ಬದುಕು ನಿಜಕ್ಕೂ ಸುಂದರ. ಆದರೆ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಮಕ್ಕಳು ಓದು ಮುಗಿಯುತ್ತಿದ್ದಂತೆ ನಗರದತ್ತ ಹೊರಟು ಬಿಡುತ್ತಾರೆ. ಹೌದು, ಹಳ್ಳಿಯಲ್ಲಿ ಇರಲು ಇಷ್ಟ ಪಡುವುದೇ ಕಡಿಮೆ. ಆದರೆ ಇದೀಗ ವಿದೇಶಿ ಮಹಿಳೆಯೊಬ್ಬಳು (foreign woman) ಹಳ್ಳಿಯ ಜನರ ಕಾಯಕವನ್ನು ಮೆಚ್ಚಿಕೊಂಡಿದ್ದಾಳೆ. ಭಾರತದ ಹಳ್ಳಿಯೊಂದಕ್ಕೆ ಭೇಟಿ ನೀಡಿದ ವಿದೇಶಿ ಮಹಿಳೆ ದನದ ಹಾಲು ಕರೆಯುವ ಸಾಹಸಕ್ಕೆ ಕೈ ಹಾಕಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಹುಬ್ಬೇರಿಸುವಂತೆ ಮಾಡಿದೆ. ಮೈಕ್ (Meike) ಎಂಬ ಮಹಿಳೆ ತನ್ನ…

Read More

ರಸ್ತೆ ಇರುವಲ್ಲೆಲ್ಲಾ ಪಾದಚಾರಿ ಮಾರ್ಗ ಕಡ್ಡಾಯ: ಸುಪ್ರೀಂ ಮಹತ್ವದ ಆದೇಶ, ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ – Kannada News | Supreme Court Mandates Pedestrian Paths: Centre Directed to Ensure Walkers Safety

ನವದೆಹಲಿ, ಆಗಸ್ಟ್​ 03: ದೇಶಾದ್ಯಂತ ರಸ್ತೆಗಳಿರುವ ಪ್ರತಿಯೊಂದು ಕಡೆಯೂ ಪಾದಚಾರಿಗಳಿಗೆ ಪ್ರತ್ಯೇಕ ಹಾಗೂ ಅತಿಕ್ರಮಣ-ಮುಕ್ತ ಸ್ಥಳಗಳನ್ನು ಖಚಿತಪಡಿಸುವಂತೆ ಸುಪ್ರೀಂ ಕೋರ್ಟ್(Supereme Court) ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠವು ಈ ಆದೇಶ ನೀಡಿದ್ದು, ಪಾದಚಾರಿಗಳು ಯಾವುದೇ ಮೋಟಾರು ವಾಹನಗಳ ಬೆದರಿಕೆಯಿಲ್ಲದೆ ಮುಕ್ತವಾಗಿ ಸಂಚರಿಸುವ ವಾತಾವರಣ ನಿರ್ಮಿಸುವುದು ಸರ್ಕಾರದ ಜವಾಬ್ದಾರಿ ಎಂದು ನೆನಪಿಸಿದೆ. ಸರಳ ಮಾರ್ಗಗಳ ಬಳಕೆಗೆ ಸೂಚನೆ: ಕೇಂದ್ರ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್…

Read More

ಯುಪಿಐ ಪಾವತಿಗೆ ಹೆಚ್ಚುವರಿ ಭದ್ರತೆ; ಯೆಸ್ ಎಂದರಷ್ಟೇ ಪೇಮೆಂಟ್; ವಂಚನೆ, ತಪ್ಪಾದ ಹಣ ವರ್ಗಾವಣೆ ತಡೆಯಲು ಈ ಕ್ರಮಕ್ಕೆ ಯೋಚನೆ – Kannada News | UPI payments may need extra yes authentication before money leaves, Banks proposal to RBI

ನವದೆಹಲಿ, ಆಗಸ್ಟ್ 3: ಭಾರತದಲ್ಲಿ ಅತಿಹೆಚ್ಚು ಬಳಕೆಯಾಗುವ ಡಿಜಿಟಲ್ ಪೇಮೆಂಟ್ ಸಿಸ್ಟಂ ಯುಪಿಐ (UPI). ಸುರಕ್ಷಿತ ಹಾಗೂ ಸುಲಭ ಪಾವತಿಯಲ್ಲಿ ಜನರ ವಿಶ್ವಾಸ ಹೊಂದಿರುವ ಯುಪಿಐನಲ್ಲಿ ಈಗ ಹೆಚ್ಚುವರಿ ಸುರಕ್ಷತಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಆನ್​ಲೈನ್ ವಂಚನೆಗಳ ಸಾಧ್ಯತೆಯನ್ನು ಕಡಿಮೆ ಮಾಡಲು ಯುಪಿಐನಲ್ಲಿ ಹೆಚ್ಚುವರಿ ಸೆಕ್ಯೂರಿಟಿ ಲೇಯರ್ ತರಬೇಕೆಂದು ಬ್ಯಾಂಕುಗಳು ಪ್ರಸ್ತಾಪಿಸಿವೆ. ಇದು ಜಾರಿಯಾದಲ್ಲಿ, ಹಣ ವರ್ಗಾವಣೆ ಆಗುವ ಮೊದಲು ಹೆಚ್ಚುವರಿ ದೃಢೀಕರಣ ಕೇಳಲಾಗುತ್ತದೆ. ಅಂದರೆ, ಹಣ ಕಳುಹಿಸಿದ ಬಳಿಕ ಅಂತಿಮವಾಗಿ ಪೇಮೆಂಟ್​ಗೆ Yes ಅಥವಾ…

Read More

ಲೋಕಭವನದಲ್ಲಿ ಸಚಿವರ ಪ್ರಮಾಣವಚನ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗಗಳೇನು? ಇಲ್ಲಿದೆ ವಿವರ – Kannada News | Bengaluru Traffic Restrictions Today: Roads Closed Near Lok Bhavan for Karnataka Ministers’ Oath Ceremony

ಬೆಂಗಳೂರು ಸಂಚಾರ ನಿರ್ಬಂಧ (ಸಾಂದರ್ಭಿಕ ಚಿತ್ರ)Image Credit source: @blrcitytraffic ಬೆಂಗಳೂರು, ಆಗಸ್ಟ್ 3: ಲೋಕಭವನದಲ್ಲಿ ಇಂದು ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ (Karnataka Ministers’ Oath Ceremony) ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕೆಲ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಮಧ್ಯಾಹ್ನ 2ರಿಂದ ರಾತ್ರಿ 10ರವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ. ಸಂಚಾರ…

Read More

ಸುಪ್ರೀಂ ಕೋರ್ಟ್‌ನಲ್ಲಿ 96,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ: 10,000 ಕೇಸ್‌ಗಳು ಒಂದು ದಶಕದಿಂದ ಇತ್ಯರ್ಥವಾಗಿಲ್ಲ – Kannada News | SC Backlog Crisis: 96,000 plus Cases Pending, 10,000 Over Decade Old

ನವದೆಹಲಿ, ಆಗಸ್ಟ್​ 03: ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಮೇಲೆ ಹೆಚ್ಚುತ್ತಿರುವ ತೀವ್ರ ಒತ್ತಡವನ್ನು ಬಿಂಬಿಸುವ ಆಘಾತಕಾರಿ ಅಂಕಿಅಂಶವೊಂದು ಹೊರಬಿದ್ದಿದೆ. ದೇಶದ ಅತ್ಯುನ್ನತ ನ್ಯಾಯಾಲಯ(Court)ವಾದ ಸುಪ್ರೀಂ ಕೋರ್ಟ್‌ನಲ್ಲಿ 96,000 ಕ್ಕೂ ಹೆಚ್ಚು ಪ್ರಕರಣಗಳು ವಿಚಾರಣೆಗೆ ಕಾಯುತ್ತಿದ್ದು, ಅವುಗಳಲ್ಲಿ 10,000 ಕ್ಕೂ ಹೆಚ್ಚು ಕೇಸ್‌ಗಳು ಕಳೆದ ಒಂದು ದಶಕದಿಂದ ಇತ್ಯರ್ಥವಾಗದೆ ಬಾಕಿ ಉಳಿದಿವೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಒಟ್ಟು ಬಾಕಿ…

Read More

ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು? – Kannada News | Priyanka Upendras Detective Teekshana Journey: She explains how Action Challenges

ನಟಿ ಪ್ರಿಯಾಂಕಾ ಉಪೇಂದ್ರ ತಮ್ಮ ಹೊಸ ಚಿತ್ರ ‘ಡಿಟೆಕ್ಟಿವ್ ತೀಕ್ಷ್ಣ’ ಚಿತ್ರದ ಆ್ಯಕ್ಷನ್ ದೃಶ್ಯಗಳ ಅನುಭವ ಹಂಚಿಕೊಂಡಿದ್ದಾರೆ. ಚಿತ್ರೀಕರಣದ ವೇಳೆ ಸಣ್ಣಪುಟ್ಟ ಗಾಯಗಳು ಸಾಮಾನ್ಯವಾದರೂ, ಸುರಕ್ಷತಾ ಕ್ರಮಗಳಿಂದಾಗಿ ಯಾವುದೇ ದೊಡ್ಡ ಅಪಾಯಗಳು ಸಂಭವಿಸಿಲ್ಲ ಎಂದು ಅವರು ತಿಳಿಸಿದರು. ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಆದ ಗಾಯದ ಬಗ್ಗೆ ಪ್ರಸ್ತಾಪಿಸಿ, ‘ಆ್ಯಕ್ಷನ್ ದೃಶ್ಯಗಳಲ್ಲಿ ನಟಿಸುವಾಗ 200% ಸುರಕ್ಷತೆ ಅತ್ಯಗತ್ಯ’ ಎಂದು ಪ್ರಿಯಾಂಕಾ ಹೇಳಿದರು. ‘ಮಹಿಳಾ ಕಲಾವಿದರಿಗೆ ಆಕ್ಷನ್ ದೃಶ್ಯಗಳು ದೈಹಿಕ ಮತ್ತು ಮಾನಸಿಕವಾಗಿ ಹೆಚ್ಚು ಸವಾಲು ಎನಿಸುತ್ತವೆ….

Read More

ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರನ್ನು ಪ್ರಕಟಿಸಿದ ಎಐಸಿಸಿ – Kannada News | Karnataka Cabinet Expansion: AICC Names GS Patil as Assembly Speaker, Salim Ahmed as Council Chairman

ವಿಧಾನ ಸಭೆಯ ನೂತನ ಸ್ಪೀಕರ್​​, ಪರಿಷತ್​​ ಸಭಾಪತಿ ಹೆಸರು ಪ್ರಕಟ ಬೆಂಗಳೂರು, ಆಗಸ್ಟ್​​ 03: ಬಹುನಿರೀಕ್ಷಿತ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ನೂತನ ಸಚಿವರು ಇಂದು (ಆಗಸ್ಟ್​​ 03) ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ವಿಧಾನ ಸಭೆಯ ನೂತನ ಸ್ಪೀಕರ್​​, ಡೆಪ್ಯೂಟಿ ಸ್ಪೀಕರ್​​ ಹಾಗೂ ವಿಧಾನ ಪರಿಷತ್​​ ಸಭಾಪತಿ ಮತ್ತು ಉಪ ಸಭಾಪತಿಗಳ ಹೆಸರನ್ನೂ ಎಐಸಿಸಿ ಅಂತಿಮಗೊಳಿಸಿದೆ. ವಿಧಾನಸಭೆ ಸ್ಪೀಕರ್​ ಆಗಿ ಗದಗ ಜಿಲ್ಲೆ ರೋಣ ಕ್ಷೇತ್ರದ…

Read More

ಸತತ 10 ಎಸೆತಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಅಮಿರ್! – Kannada News | Mohammad Amir’s 10 Ball Magic Seals Thrilling 5 Run Win for Trent Rockets

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್‘ ಲೀಗ್​ ಟೂರ್ನಿಯಲ್ಲಿ ಟ್ರೆಂಟ್ ರಾಕೆಟ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ರೋಚಕ ಗೆಲುವಿನ ರೂವಾರಿ ಮೊಹಮ್ಮದ್ ಅಮಿರ್. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಲೀಡ್ಸ್ ಹಾಗೂ ಟ್ರೆಂಟ್ ರಾಕೆಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಟ್ರೆಂಟ್ ರಾಕೆಟ್ಸ್ ತಂಡದ ನಾಯಕ ಸ್ಯಾಮ್ ಬಿಲ್ಲಿಂಗ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟ್ರೆಂಟ್ ರಾಕೆಟ್ಸ್ ತಂಡವು 100 ಎಸೆತಗಳಲ್ಲಿ 4 ವಿಕೆಟ್…

Read More