ಅಕ್ಷಯ್ ಖನ್ನಾ ಜೊತೆ ಫ್ಲರ್ಟ್ ಮಾಡಲು ನೋಡಿದ್ದ ಆ ನಟಿ; ಈಗ ಅವರು ಸಂಸದೆ – Kannada News | Akshaye Khanna: Kangana Ranaut’s Viral Flirt Attempt on Koffee With Karan Resurfaces

ನಟ ಅಕ್ಷಯ್ ಖನ್ನಾ (Akshaye Khanna) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ಕಾರಣದಿಂದಾಗಿ ಸುದ್ದಿಯಲ್ಲಿದ್ದಾರೆ. ‘ಛಾವಾ’ ನಂತರ, ‘ಧುರಂಧರ್’ ಚಿತ್ರದಲ್ಲಿ ನಟಿಸಿ ಖ್ಯಾತಿಯನ್ನು ಹೆಚ್ಚಿಸಿಕೊಂಡರು. ಈಗ ಅಭಿಮಾನಿಗಳು ನಟನ ಮುಂಬರುವ ಸಿನಿಮಾಗಳಿಗಾಗಿ ಕಾಯುತ್ತಿದ್ದಾರೆ. ಅಕ್ಷಯ್ ಖನ್ನಾ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನಟನ ಜೊತೆ ಸಂಸದೆ ಒಬ್ಬರು ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ.

ಈಗ ಹಳೆಯ ವಿಡಿಯೋ ವೈರಲ್ ಆಗುತ್ತಿದೆ. ನಟನೊಂದಿಗೆ ಚೆಲ್ಲಾಟವಾಡಲು ಪ್ರಯತ್ನಿಸಿದ ನಟಿ, ಮಹಿಳಾ ಸಂಸದೆ ಬೇರೆ ಯಾರೂ ಅಲ್ಲ ಕಂಗನಾ ರಣಾವತ್. ಪ್ರಸ್ತುತ, ಕಂಗನಾ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಒಮ್ಮೆ ಕಂಗನಾ ನಿರ್ದೇಶಕ ಕರಣ್ ಜೋಹರ್ ಅವರ ‘ ಕಾಫಿ ವಿತ್ ಕರಣ್ ‘ ಕಾರ್ಯಕ್ರಮಕ್ಕೆ ಅನಿಲ್ ಕಪೂರ್ ಮತ್ತು ಸಂಜಯ್ ದತ್ ಅವರೊಂದಿಗೆ ಬಂದಿದ್ದರು. ಕಂಗನಾ ಹೇಳಿಕೆಯಿಂದ ಅನಿಲ್ ಮತ್ತು ಸಂಜಯ್ ಕೂಡ ಆಘಾತಕ್ಕೊಳಗಾದರು. ಕಂಗನಾ ಅವರು ಅಕ್ಷಯ್ ಜೊತೆ ಫ್ಲರ್ಟ್ ಮಾಡಲು ಪ್ರಯತ್ನಿಸಿದರು, ಆದರೆ ಅವರು ಯಾವುದೇ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರ.

‘ನೀವು ಎಂದಾದರೂ ಯಾರೊಂದಿಗಾದರೂ ಫ್ಲರ್ಟ್ ಮಾಡಲು ಪ್ರಯತ್ನಿಸಿದ್ದೀರಾ ಮತ್ತು ಆ ವ್ಯಕ್ತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲವೇ’ ಎಂದು ಕರಣ್ ಕೇಳಿದರು. ಇದಕ್ಕೆ ಕಂಗನಾ, ‘ಅಕ್ಷಯ್ ಖನ್ನಾ. ನಾನು ಅಕ್ಷಯ್ ಜೊತೆ ಮಾತನಾಡಲು ಮತ್ತು ಫ್ಲರ್ಟ್ ಮಾಡಲು ಪ್ರಯತ್ನಿಸಿದೆ. ಆದರೆ ಅವರು ಎಂದಿಗೂ ಉತ್ತರಿಸಲಿಲ್ಲ. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ’ ಎಂದಿದ್ದರು.

ಇದನ್ನೂ ಓದಿ: ‘ಧುರಂದರ್ 2’ ಚಿತ್ರದಲ್ಲಿ ಅಕ್ಷಯ್ ಖನ್ನಾ ಇರೋದು ಖಚಿತ; ಸಿಕ್ತು ಪಕ್ಕಾ ಸಾಕ್ಷಿ

ಕಂಗನಾ ಅವರ ಖಾಸಗಿ ಜೀವನದ ಬಗ್ಗೆ ಹೇಳುವುದಾದರೆ, ಅವರ ಹೆಸರು ಅನೇಕ ಸೆಲೆಬ್ರಿಟಿಗಳೊಂದಿಗೆ ಚರ್ಚಿಸಲ್ಪಟ್ಟಿದೆ. ಅವರು ಹಲವರ ಜೀವನವನ್ನು ಮುರಿದ ಆರೋಪವನ್ನೂ ಹೊಂದಿದ್ದಾರೆ. ನಟರಾದ ಆದಿತ್ಯ ಪಂಚೋಲಿ, ಹೃತಿಕ್ ರೋಷನ್ ಮತ್ತು ಅಜಯ್ ದೇವಗನ್ ಅವರೊಂದಿಗೂ ಕಂಗನಾ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಆದರೆ, ಯಾವುದೂ ವಿವಾಹದವರೆಗೆ ಹೋಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

World Pulses Day 2026: ಫೆ. 10ರಂದು ವಿಶ್ವ ದ್ವಿದಳ ಧಾನ್ಯ ದಿನ; ಪೌಷ್ಟಿಕಾಂಶ, ಆರ್ಥಿಕ ಮತ್ತು ಪರಿಸರ ಸ್ನೇಹಿ ಪ್ರಯೋಜನಗಳು – Kannada News | World Pulses Day 2026: Celebrate Health and Sustainability with Pulses’ Power

ಪ್ರತಿ ವರ್ಷ ಫೆಬ್ರವರಿ 10ರಂದು ವಿಶ್ವದಾದ್ಯಂತ ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ದ್ವಿದಳ ಧಾನ್ಯಗಳ ಪೌಷ್ಟಿಕ, ಪರಿಸರ ಮತ್ತು ಆರ್ಥಿಕ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಜನರಿಗೆ ತಿಳಿಸುವ ಉದ್ದೇಶದಿಂದ ಸಂಯುಕ್ತ ರಾಷ್ಟ್ರಸಂಘದ ಮಹಾಸಭೆಯು 2018ರಲ್ಲಿ ಈ ದಿನವನ್ನು ಘೋಷಿಸಿತು. 2019ರಲ್ಲಿ ಮೊದಲ ಬಾರಿಗೆ ಆಚರಣೆ ಪ್ರಾರಂಭವಾಯಿತು. ಇದಕ್ಕೂ ಮೊದಲು 2016 ಅನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯ ವರ್ಷದಾಗಿ ಆಚರಿಸಲಾಗಿದ್ದು, ಅದರ ಯಶಸ್ಸಿನ ಮುಂದುವರಿಕೆಯೇ ಈ ವಿಶೇಷ ದಿನ. ಸಾವಿರಾರು ವರ್ಷಗಳಿಂದ ಮಾನವ ಆಹಾರ ಸಂಸ್ಕೃತಿಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ಈ ಧಾನ್ಯಗಳು ಇಂದು ಆರೋಗ್ಯಕರ ಜೀವನಶೈಲಿಯ ಅವಿಭಾಜ್ಯ ಅಂಗವಾಗಿವೆ.

ಲೆಗ್ಯೂಮಿನೋಸೇ (Leguminosae) ಕುಟುಂಬಕ್ಕೆ ಸೇರಿದ ಸಸ್ಯಗಳ ಖಾದ್ಯ ಬೀಜಗಳನ್ನು ದ್ವಿದಳ ಧಾನ್ಯಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಸುಲಭವಾಗಿ ಸಂಗ್ರಹಿಸಬಹುದು ಹಾಗೂ ಮಾನವ ಮತ್ತು ಪಶು ಆಹಾರವಾಗಿ ವ್ಯಾಪಕವಾಗಿ ಬಳಸಲಾಗುತ್ತದೆ. ಭಾರತದಲ್ಲಿ ತೊಗರಿ, ಹೆಸರು, ಕಡಲೆ, ಉದ್ದು, ಮಸೂರ, ಅವರೆಕಾಳು, ಹುರುಳಿ, ಅಲಸಂದೆ, ರಾಜ್ಮಾ ಮತ್ತು ಸೋಯಾಬೀನ್ಸ್ ಮುಂತಾದ ಧಾನ್ಯಗಳು ಸಾಮಾನ್ಯವಾಗಿ ಬಳಸಲ್ಪಡುತ್ತವೆ. ನಮ್ಮ ದೈನಂದಿನ ಊಟದ ತಟ್ಟೆಯಲ್ಲಿ ಬೇಳೆಸಾರು, ದಾಲ್, ತೊವ್ವೆ, ಬಿಸಿಬೇಳೆಬಾತ್, ವಡೆ, ಅಂಬೋಡೆ ಮತ್ತು ಪಾಯಸಗಳ ರೂಪದಲ್ಲಿ ಇವುಗಳ ಬಳಕೆ ಸಾಮಾನ್ಯವಾಗಿದೆ.

ಆರೋಗ್ಯದ ದೃಷ್ಟಿಯಿಂದ ದ್ವಿದಳ ಧಾನ್ಯಗಳು ಅತ್ಯಂತ ಪೌಷ್ಟಿಕ ಆಹಾರವಾಗಿವೆ. ಪ್ರೋಟೀನ್‌ಗಳ ಉತ್ತಮ ಮೂಲವಾಗಿರುವ ಇವು ಸಸ್ಯಾಹಾರಿಗಳಿಗೆ ವಿಶೇಷವಾಗಿ ಉಪಯುಕ್ತ. ಜೊತೆಗೆ ಫೈಬರ್ ಅಧಿಕವಾಗಿರುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಮಲಬದ್ಧತೆ ಕಡಿಮೆಯಾಗುತ್ತದೆ. ಕಬ್ಬಿಣ, ಜಿಂಕ್, ಫೋಲೇಟ್, ಮೆಗ್ನೀಸಿಯಂ ಮುಂತಾದ ಖನಿಜಗಳು ದೇಹದ ಸಮಗ್ರ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗುತ್ತವೆ. ಕಡಿಮೆ ಕೊಬ್ಬು ಮತ್ತು ಕೊಲೆಸ್ಟ್ರಾಲ್ ರಹಿತ ಗುಣಗಳಿಂದ ಹೃದಯರೋಗ, ಮಧುಮೇಹ ಹಾಗೂ ತೂಕ ಹೆಚ್ಚಳದ ಅಪಾಯವನ್ನು ತಗ್ಗಿಸಲು ಸಹಾಯವಾಗುತ್ತದೆ. ಅಂದರೆ, ದ್ವಿದಳ ಧಾನ್ಯಗಳು “ಪೂರ್ಣ ಪೌಷ್ಟಿಕ ಆಹಾರ” ಎಂದೇ ಹೇಳಬಹುದು.

ಪರಿಸರದ ದೃಷ್ಟಿಯಿಂದಲೂ ಇವು ಬಹಳ ಮಹತ್ವದ್ದಾಗಿವೆ. ದ್ವಿದಳ ಬೆಳೆಗಳ ಬೇರುಗಳಲ್ಲಿ ಇರುವ ರೈಜೋಬಿಯಂ ಬ್ಯಾಕ್ಟೀರಿಯಾ ಮಣ್ಣಿನಲ್ಲಿ ಸಾರಜನಕವನ್ನು ಸ್ಥಿರೀಕರಿಸಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಇದರಿಂದ ರಾಸಾಯನಿಕ ರಸಗೊಬ್ಬರಗಳ ಅವಶ್ಯಕತೆ ಕಡಿಮೆಯಾಗುತ್ತದೆ. ಜೊತೆಗೆ ಇತರ ಬೆಳೆಗಳಿಗಿಂತ ಕಡಿಮೆ ನೀರು ಬೇಕಾಗುವುದು ಮತ್ತು ಕಡಿಮೆ ಹಸಿರುಮನೆ ಅನಿಲಗಳನ್ನು ಉತ್ಪತ್ತಿ ಮಾಡುವುದು ಪರಿಸರ ಸ್ನೇಹಿ ಕೃಷಿಗೆ ನೆರವಾಗುತ್ತದೆ. ಹೀಗಾಗಿ, ದ್ವಿದಳ ಧಾನ್ಯಗಳು ಸುಸ್ಥಿರ ಕೃಷಿಯ ಪ್ರಮುಖ ಭಾಗವಾಗಿವೆ.

ಇದನ್ನೂ ಓದಿ: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ನ ಭಾಗವಾಗಿದ್ದು ಹೇಗೆ? ಈ ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಆರ್ಥಿಕವಾಗಿ ಕೂಡ ದ್ವಿದಳ ಧಾನ್ಯಗಳು ಬಹಳ ಪ್ರಯೋಜನಕಾರಿ. ಅಗ್ಗದ ಬೆಲೆಯಲ್ಲಿ ಲಭ್ಯವಾಗುವ ಈ ಧಾನ್ಯಗಳು ಜನರಿಗೆ ಪೌಷ್ಟಿಕ ಆಹಾರ ಭದ್ರತೆಯನ್ನು ಒದಗಿಸುತ್ತವೆ. ಸಣ್ಣ ಮತ್ತು ಮಧ್ಯಮ ರೈತರಿಗೆ ಉತ್ತಮ ಆದಾಯದ ಮೂಲವಾಗಿದ್ದು, ದೀರ್ಘಕಾಲ ಸಂಗ್ರಹಿಸಬಹುದಾದ ಗುಣದಿಂದ ಆಹಾರ ಸುರಕ್ಷತೆಯನ್ನೂ ಹೆಚ್ಚಿಸುತ್ತದೆ. ಭಾರತವು ವಿಶ್ವದಲ್ಲೇ ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ಹಾಗೂ ಗ್ರಾಹಕ ರಾಷ್ಟ್ರವಾಗಿದ್ದು, ಕರ್ನಾಟಕದಲ್ಲಿ ತೊಗರಿ, ಹೆಸರು, ಕಡಲೆ, ಉದ್ದು ಮತ್ತು ಅವರೆ ಬೆಳೆಗಳು ಪ್ರಮುಖ ಸ್ಥಾನ ಪಡೆದಿವೆ.

ಸರಳವಾಗಿ ಕಾಣುವ ಈ ಸಣ್ಣ ಬೀಜಗಳು ಆರೋಗ್ಯಕರ ಸಮಾಜ, ಸುರಕ್ಷಿತ ಪರಿಸರ ಮತ್ತು ಸ್ಥಿರ ಆರ್ಥಿಕತೆಯ ಅಡಿಪಾಯವಾಗಿವೆ. ನಮ್ಮ ದೈನಂದಿನ ಆಹಾರದಲ್ಲಿ ದ್ವಿದಳ ಧಾನ್ಯಗಳನ್ನು ಹೆಚ್ಚು ಸೇರಿಸುವುದು ಕೇವಲ ಆರೋಗ್ಯಕ್ಕಲ್ಲ, ಭವಿಷ್ಯದ ಸುಸ್ಥಿರ ಬದುಕಿಗೆ ಸಹ ಮಹತ್ವದ ಹೆಜ್ಜೆಯಾಗಿದೆ. “ಸಣ್ಣ ಬೀಜಗಳು – ದೊಡ್ಡ ಶಕ್ತಿ” ಎಂಬ ಮಾತಿನಂತೆ, ದ್ವಿದಳ ಧಾನ್ಯಗಳೊಂದಿಗೆ ಆರೋಗ್ಯಕರ ಮತ್ತು ಸುಸ್ಥಿರ ನಾಳೆಯನ್ನು ನಿರ್ಮಿಸೋಣ.

ಲೇಖನ: ಡಾ. ರವಿಕಿರಣ ಪಟವರ್ಧನ, ಪಟವರ್ಧನ ಆಯುರ್ವೇದ ಕ್ಲಿನಿಕ್, ಶಿರಸಿ – 581401, ದೂರವಾಣಿ: 08384225836

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9

ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ ಜೆಡಿಎಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಶಾಸಕರ ವರ್ತನೆ ಬಗ್ಗೆ ಜೆಡಿಎಸ್ ರಾಜ್ಯ ನಾಯಕರು ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಬೆನ್ನಲ್ಲೇ ಅಗರ್ವಾಲ್ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಜೊತೆ ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಗಳು, ಮಾಜಿ ಶಾಸಕರ ಹೇಳಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವಿನ ಸಮನ್ವಯದ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದರೆಂದು ತಿಳಿದುಬಂದಿದೆ. ಅನಗತ್ಯ ಹೇಳಿಕೆಗಳು ಮೈತ್ರಿ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೊಂದಲ ಉಂಟಾಗಬಹುದು ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರಲ್ಲೂ ಗೊಂದಲ ಹೆಚ್ಚಬಹುದು. ಕಾರ್ಯಕರ್ತರಲ್ಲಿ ಗೊಂದಲವಾದರೆ ಕಾಂಗ್ರೆಸ್‌ಗೆ ಲಾಭವಾಗುತ್ತದೆ ಎಂಬ ಆತಂಕವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ನಾಯಕರ ಹೇಳಿಕೆಗಳಿಗೆ ಬ್ರೇಕ್ ಹಾಕಲಾಗುವುದು ಎಂದು ಅಗರ್ವಾಲ್ ತಿಳಿಸಿದ್ದಾರೆ.

ಏನು ಹೇಳಿದ್ದರು ಪ್ರೀತಂಗೌಡ, ನಾರಾಯಣಗೌಡ?

ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಮಂಡ್ಯ ಜಿಲ್ಲೆಯಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ನಾಯಕರ ನಡುವೆ ಟಿಕೆಟ್ ಗುದ್ದಾಟ ಆರಂಭವಾಗಿತ್ತು. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಕ್ಷೇತ್ರ ಹಂಚಿಕೆ ಕುರಿತು ಎರಡೂ ಪಕ್ಷಗಳ ನಾಯಕರು ತಮ್ಮ ತಮ್ಮ ಹಕ್ಕು ಮಂಡಿಸಲು ಮುಂದಾಗಿದ್ದರು. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ನಾಯಕರಾದ ಪ್ರೀತಂಗೌಡ, ನಾರಾಯಣಗೌಡ ಒತ್ತಾಯಿಸಿದ್ದರು. ಕೆಆರ್ ಪೇಟೆ ಸೇರಿದಂತೆ ಮೂರು ಕ್ಷೇತ್ರಗಳನ್ನು ನೀಡುವಂತೆ ಆಗ್ರಹ ವ್ಯಕ್ತಪಡಿಸಲಾಗಿತ್ತು. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಶೇ 50ರಷ್ಟು ಸ್ಥಾನಗಳನ್ನು ಬಿಜೆಪಿಗೆ ನೀಡಬೇಕು ಎಂಬ ಬೇಡಿಕೆಯನ್ನು ಮಾಜಿ ಸಚಿವ ನಾರಾಯಣಗೌಡ ಹಾಗೂ ಮಾಜಿ ಶಾಸಕ ಪ್ರೀತಂಗೌಡ ಮುಂದಿಟ್ಟಿದ್ದರು.

ಇದೇ ವೇಳೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ನೀಡಿದ ಹೇಳಿಕೆಗಳಿಗೂ ಬಿಜೆಪಿ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. 2028ರ ಚುನಾವಣೆಯಲ್ಲಿ ಎಚ್​​ಟಿ ಮಂಜು ಅವರನ್ನು ಮತ್ತೆ ಗೆಲ್ಲಿಸಬೇಕು ಎಂದು ಕೆಆರ್ ಪೇಟೆಯಲ್ಲಿ ನಿಖಿಲ್ ಮನವಿ ಮಾಡಿದ್ದನ್ನು ಬಿಜೆಪಿ ನಾಯಕರು ವಿರೋಧಿಸಿದ್ದರು. ಅಭ್ಯರ್ಥಿ ಘೋಷಣೆ ಮಾಡುವ ಅಧಿಕಾರ ನಿಖಿಲ್ ಅವರಿಗೆ ಇಲ್ಲ ಎಂದು ತಿರುಗೇಟು ನೀಡಿದ್ದರು.

ನಿಖಿಲ್ ಕುಮಾರಸ್ವಾಮಿ ನಿರಂತರ ಸೋಲು ಅನುಭವಿಸಿರುವ ನಾಯಕರು; ಮೊದಲಿಗೆ ತಮ್ಮ ರಾಜಕೀಯ ಅಸ್ತಿತ್ವವನ್ನು ಸಾಬೀತುಪಡಿಸಿಕೊಳ್ಳಲಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದರು. ಈ ರೀತಿಯ ಹೇಳಿಕೆಗಳು ಮುಂದುವರಿದರೆ ಮೈತ್ರಿ ಸಂಬಂಧಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಇದನ್ನೂ ಓದಿ: ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಒಟ್ಟಿನಲ್ಲಿ, ಸ್ಥಳೀಯ ಸಂಸ್ಥೆ ಚುನಾವಣೆಗಳ ಹೊಸ್ತಿಲಲ್ಲೇ ಮೈತ್ರಿ ಪಕ್ಷಗಳೊಳಗಿನ ಭಿನ್ನಾಭಿಪ್ರಾಯಗಳು ಹೊರಹೊಮ್ಮುತ್ತಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೊದಲ ಪಂದ್ಯದಲ್ಲಿ ಎದ್ದು ಬಿದ್ದು ಗೆದ್ದ ಪಾಕಿಸ್ತಾನಕ್ಕೆ ನಡುಕ! – Kannada News | T20 World Cup 2026: Pakistan vs United States of America Match Today

T20 World Cup 2026: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಾಕಿಸ್ತಾನ್ ಶುಭಾರಂಭ ಮಾಡಿದೆ. ಈ ಶುಭಾರಂಭ ರೋಚಕ ಗೆಲುವಿನೊಂದಿಗೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ನೆದರ್​ಲೆಂಡ್ಸ್ ವಿರುದ್ಧದ ಈ ಪಂದ್ಯದಲ್ಲಿ ಪಾಕ್ ಪಡೆ ಅಂತಿಮ ಓವರ್​ನಲ್ಲಿ ಗೆಲುವು ದಾಖಲಿಸಿತ್ತು. ಅದು ಸಹ 3 ವಿಕೆಟ್​ಗಳಿಂದ.

ಕೊಲಂಬೊದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್ ತಂಡವು ಕಲೆಹಾಕಿದ್ದು ಕೇವಲ 147 ರನ್​ಗಳು ಮಾತ್ರ.

ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ಪಾಕ್ ಪಡೆ ಅಕ್ಷರಶಃ ಒದ್ದಾಡಿದರು. ಅದರಲ್ಲೂ ಕೊನೆಯ 2 ಓವರ್​ಗಳಲ್ಲಿ ಪಾಕಿಸ್ತಾನ್ ತಂಡಕ್ಕೆ 29 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಮ್ಯಾಕ್ಸ್ ಒಡೌಡ್ ಬಿಟ್ಟ ಕ್ಯಾಚ್ ನೆದರ್​ಲೆಂಡ್ಸ್ ಪಾಲಿಗೆ ಮುಳುವಾಯಿತು.

ಅಂತಿಮ ಹಂತದಲ್ಲಿ ಸಿಕ್ಕ ಜೀವದಾನವನ್ನು ಬಳಸಿಕೊಂಡ ಫಯೀಮ್ ಅಶ್ರಫ್ 19ನೇ ಓವರ್​ನಲ್ಲಿ 24 ರನ್ ಚಚ್ಚಿದರು. ಅಲ್ಲದೆ ಕೊನೆಯ ಓವರ್​ನ 3ನೇ ಎಸೆತದಲ್ಲಿ ಫೋರ್ ಬಾರಿಸಿ ಪಾಕಿಸ್ತಾನ್ ತಂಡಕ್ಕೆ 3 ವಿಕೆಟ್​ಗಳ ರೋಚಕ ಗೆಲುವು ತಂದು ಕೊಟ್ಟರು.

ಅಂದರೆ ಇಲ್ಲಿ ನೆದರ್​ಲೆಂಡ್ಸ್ ಫೀಲ್ಡರ್ ಮಾಡಿದ ತಪ್ಪಿನಿಂದಾಗಿ ಪಾಕಿಸ್ತಾನ್ ತಂಡ ಗೆಲ್ಲುವಂತಾಯಿತು ಎಂದರೆ ತಪ್ಪಾಗಲಾರದು. ಏಕೆಂದರೆ ಫಯೀಮ್ ಅಶ್ರಫ್ ವಿಕೆಟ್ ಪಡೆದಿದ್ದರೆ, ಪಂದ್ಯವು ಸಂಪೂರ್ಣ ನೆದರ್​ಲೆಂಡ್ಸ್ ಪರ ವಾಲುತ್ತಿತ್ತು. ಆದರೆ ಅಂತಿಮ ಹಂತದಲ್ಲಿ ಮ್ಯಾಕ್ಸ್​ ಒಡೌಡ್ ಮಾಡಿದ ತಪ್ಪಿನಿಂದಾಗಿ ನೆದರ್​ಲೆಂಡ್ಸ್ ಸೋಲನುಭವಿಸಿತು.

ಇದೀಗ ಪಾಕಿಸ್ತಾನ್ ತಂಡವು ತನ್ನ 2ನೇ ಪಂದ್ಯವಾಡಲು ಸಜ್ಜಾಗಿದೆ. ಇಂದು (ಫೆ.10) ನಡೆಯಲಿರುವ ಟಿ20 ವಿಶ್ವಕಪ್​ನ 12ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಯುಎಸ್​ಎ ಮುಖಾಮುಖಿಯಾಗಲಿದೆ. ಮೊದಲ ಪಂದ್ಯದಲ್ಲೇ ಎದ್ದು ಬಿದ್ದು ಗೆದ್ದಿರುವ ಪಾಕ್ ಪಡೆಗೆ ಇದೀಗ ಇತಿಹಾಸದ್ದೇ ಚಿಂತೆ.

ಮರುಕಳಿಸಲಿದೆಯಾ ಇತಿಹಾಸ?

ಪಾಕಿಸ್ತಾನ್ ಮತ್ತು ಯುಎಸ್​ಎ ಟಿ20 ಕ್ರಿಕೆಟ್​ನಲ್ಲಿ ಈವರೆಗೆ ಒಮ್ಮೆ ಮಾತ್ರ ಮುಖಾಮುಖಿಯಾಗಿದೆ. ಈ ಮುಖಾಮುಖಿಯಲ್ಲಿ ಗೆದ್ದಿರುವುದು ಯುಎಸ್​ಎ ಎಂಬುದು ವಿಶೇಷ. ಅಂದರೆ 2024 ರಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಯುಎಸ್​ಎ ಯಶಸ್ವಿಯಾಗಿತ್ತು.

ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು ಅಂತಿಮ ಓವರ್​ನಲ್ಲಿ 14 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು.

ಇನ್ನು ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ತಂಡವು 18 ರನ್ ಕಲೆಹಾಕಿದ್ದರು. 19 ರನ್​ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ 13 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಯುಎಸ್​ಎ ತಂಡ 5 ರನ್​ಗಳ ವಿಜಯ ಸಾಧಿಸಿತ್ತು.

ಇದನ್ನೂ ಓದಿ: IPL 2026: ಬೆಂಗಳೂರು ಯುನೈಟೆಡ್ ಆಗಲಿದೆಯಾ RCB?

ಇದೀಗ ಮತ್ತೊಮ್ಮೆ ಪಾಕಿಸ್ತಾನ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ ಯುಎಸ್​ಎ. ಅದರಲ್ಲೂ ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ಭಾರತ ತಂಡವನ್ನೇ ಕಾಡಿದ್ದ ಯುಎಸ್​ಎ ಬೌಲರ್​ಗಳು ಪಾಕಿಸ್ತಾನ್ ತಂಡವನ್ನು ಸಹ ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವುದರಲ್ಲಿ ಅನುಮಾನವೇ ಇಲ್ಲ.

Source link

ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ – Kannada News | Vijayapura Love Story: Adult Daughter Chooses Muslim Husband Over Crying Parents

‘ನಾನು ಅವನ ಜೊತೆಗೇ ಹೋಗ್ತೀನಿ, ನಿಮ್ಮ ಜೊತೆ ಬರಲ್ಲ’ ಪೋಷಕರ ಕಣ್ಣೀರಿಗೂ ಕರಗದ ಮಗಳು!

ವಿಜಯಪುರ, ಫೆಬ್ರವರಿ 10: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ.

ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಅದೇ ಠಾಣೆಗೆ ಸ್ವಯಂಪ್ರೇರಿತವಾಗಿ ಪ್ರಿಯಕರನೊಂದಿಗೆ ಬಂದ ಯುವತಿ, ತಾನು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ.

ಪೊಲೀಸ್ ವಾಹನದ ಮುಂದೆ ಅಡ್ಡ ಬಿದ್ದು ಗೋಳಾಡಿದ ತಂದೆ-ತಾಯಿ

ಈ ವೇಳೆ ಠಾಣೆಗೆ ಬಂದ ತಂದೆ-ತಾಯಿ, ಮನೆಗೆ ವಾಪಸ್ ಬರುವಂತೆ ಮಗಳಲ್ಲಿ ಅಂಗಲಾಚಿದ್ದಾರೆ. ಆದರೆ ಯುವತಿ ಮಾತ್ರ ಹೆತ್ತವರ ಕಣ್ಣೀರಿಗೂ ಕರಗದೆ, ನಾನು ನನ್ನ ಗಂಡನ ಜೊತೆಗೆ ಹೋಗುತ್ತೇನೆ, ನಿಮ್ಮ ಜೊತೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾಳೆ. ಯುವತಿಯೂ ಪ್ರಾಪ್ತ ವಯಸ್ಸಿನವಳಾದ್ದರಿಂದ ಪೊಲೀಸರು ಆಕೆಯನ್ನು ಪತಿಯ ಜೊತೆಗೇ ಕಳುಹಿಸಿಕೊಟ್ಟಿದ್ದಾರೆ.

ಇದನ್ನೂ ಓದಿ ಸಾವಿರ ರೂಪಾಯಿಗೆ ಹೆಂಡತಿಯನ್ನು ಸ್ನೇಹಿತರಿಗೆ ಮಾರಿದ ವ್ಯಕ್ತಿ, ಆಮೇಲೆ ನಡೀಬಾರದ್ದು ನಡೆದೇ ಹೋಯ್ತು

ಪೋಷಕರು ಎಷ್ಟೇ ಕರೆದರೂ ಒಪ್ಪದ ಮಗಳು ಗಂಡನೊಂದಿಗೇ ಹೋದಾಗ, ಆಕೆಯಿದ್ದ ಪೊಲೀಸ್ ವಾಹನಕ್ಕೂ ಅಡ್ಡಬಿದ್ದು ಮಗಳನ್ನು ಓಲೈಸಲು ಪೋಷಕರು ಪ್​ರಯತ್ನಿಸಿದ್ದಾರೆ. ಆದರೂ ಹೆತ್ತ ಕರುಳಿಗೆ ಸಮಾಧಾನವಾಗದೇ ಪೊಲೀಸ್ ಠಾಣೆಯ ಮುಂದೇ ಕುಳಿತು ತಂದೆ ತಾಯಿಯಿಬ್ಬರೂ ಗೋಗರೆದಿದ್ದಾರೆ. ಮಗಳು ಮಾತ್ರ ತಂದೆ ತಾಯಿಯ ಮುಖವನ್ನೂ ನೋಡದೆ ಅನ್ಯಕೋಮಿನ ಪ್ರಿಯಕರನೊಂದಿಗೆ ಹೊರಟು ಹೋಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Pearl for Weak Moon: Astrological Remedies for Mental Peace and Zodiac Benefits

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರ ನಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ನಮ್ಮ ಆಲೋಚನೆಗಳು, ಭಾವನೆಗಳು, ನಿದ್ರೆ ಮತ್ತು ಮನಸ್ಥಿತಿಯ ಮೇಲೆ ಚಂದ್ರನ ಪ್ರಭಾವ ಬಹಳ ಗಟ್ಟಿಯಾಗಿರುತ್ತದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಗೊಂದಲ, ಅತಿಯಾದ ಕೋಪ, ಆತಂಕ, ನಿರ್ಧಾರಗಳಲ್ಲಿ ಅಸ್ಥಿರತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮುತ್ತು (Pearl) ಧರಿಸುವುದು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಜ್ಯೋತಿಷಿಗಳು ಸೂಚಿಸುತ್ತಾರೆ. ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ದೊರೆಯುತ್ತದೆ.

ಮೇಷ ಮತ್ತು ಕರ್ಕ ರಾಶಿ:

ಮೇಷ ಮತ್ತು ಕರ್ಕ ರಾಶಿಯವರಿಗೆ ಮುತ್ತು ಧರಣೆ ವಿಶೇಷವಾಗಿ ಶುಭಕರವಾಗಿದೆ. ಮೇಷ ರಾಶಿಯವರಿಗೆ ಚಂದ್ರನು ನಾಲ್ಕನೇ ಪಾದದ ಅಧಿಪತಿ ಆಗಿರುವುದರಿಂದ, ಮುತ್ತು ಧರಿಸಿದರೆ ಮನೆ, ವಾಹನ ಮತ್ತು ಇತರೆ ಭೌತಿಕ ಸೌಕರ್ಯಗಳಲ್ಲಿ ಪ್ರಗತಿ ಕಾಣಬಹುದು. ಕುಟುಂಬ ಜೀವನದಲ್ಲಿ ಸ್ಥಿರತೆ ಹೆಚ್ಚಾಗಿ, ಜೀವನದಲ್ಲಿ ರಾಜಯೋಗದಂತಾದ ಫಲಿತಾಂಶಗಳು ದೊರೆಯುವ ಸಾಧ್ಯತೆ ಇದೆ. ಕರ್ಕ ರಾಶಿಯವರು ಚಂದ್ರನ ಸ್ವರಾಶಿಯವರಾಗಿರುವುದರಿಂದ ಮುತ್ತು ಅವರಿಗೆ ಅತ್ಯಗತ್ಯ. ಇದು ಮಾನಸಿಕ ಗೊಂದಲವನ್ನು ಕಡಿಮೆ ಮಾಡಿ, ಕುಟುಂಬದಲ್ಲಿ ಸಾಮರಸ್ಯ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ವೃತ್ತಿಜೀವನದಲ್ಲಿಯೂ ಉತ್ತಮ ಪ್ರಗತಿ ಕಾಣಬಹುದು.

ವೃಶ್ಚಿಕ ಮತ್ತು ಮೀನ ರಾಶಿ:

ವೃಶ್ಚಿಕ ಮತ್ತು ಮೀನ ರಾಶಿಯವರಿಗೂ ಮುತ್ತು ಧರಣೆ ಬಹಳ ಉಪಕಾರಿಯಾಗಿದೆ. ವೃಶ್ಚಿಕ ರಾಶಿಯವರು ಸಾಮಾನ್ಯವಾಗಿ ಹಠಾತ್ ಮತ್ತು ತೀವ್ರ ಸ್ವಭಾವ ಹೊಂದಿರುತ್ತಾರೆ. ಮುತ್ತು ಧರಿಸುವುದರಿಂದ ಕೋಪ ನಿಯಂತ್ರಣದಲ್ಲಿದ್ದು, ಆಲೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯವಾಗುತ್ತದೆ. ಸಂಬಂಧಗಳಲ್ಲಿ ಮಧುರತೆ ಹೆಚ್ಚಾಗಿ, ಆರ್ಥಿಕ ಸ್ಥಿರತೆ ಕೂಡ ದೊರೆಯುತ್ತದೆ. ಮೀನ ರಾಶಿಯವರು ಮುತ್ತಿನಿಂದ ಮಾನಸಿಕ ಸ್ಪಷ್ಟತೆ ಮತ್ತು ಆತ್ಮಶಾಂತಿ ಪಡೆಯುತ್ತಾರೆ. ಗೊಂದಲಮಯ ಸಂದರ್ಭಗಳಲ್ಲಿಯೂ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಆರಂಭವಾಗುತ್ತವೆ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಮುತ್ತು ಧರಿಸುವ ವಿಧಾನ:

ಮುತ್ತು ಧರಿಸುವ ವಿಧಾನವೂ ಮಹತ್ವದ್ದಾಗಿದೆ. ಯಾವಾಗಲೂ ಬೆಳ್ಳಿ ಲೋಹದಲ್ಲೇ ಮುತ್ತು ಹೂಡಿಸಬೇಕು. ಶುಕ್ಲ ಪಕ್ಷದ ಸೋಮವಾರದಂದು ಹಾಲು ಮತ್ತು ಗಂಗಾಜಲದಿಂದ ಶುದ್ಧೀಕರಿಸಿ ‘ಓಂ ಸೌಂ ಸೋಮಾಯ ನಮಃ’ ಮಂತ್ರವನ್ನು ಜಪಿಸಿದ ನಂತರ ಬಲಗೈಯ ಕಿರುಬೆರಳಿಗೆ ಧರಿಸುವುದು ಶುಭಕರವೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯದ ಲಾಭಗಳ ಜೊತೆಗೆ, ಮುತ್ತು ಧರಿಸುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರಲು ಮತ್ತು ಜೀರ್ಣಕ್ರಿಯೆ ಸುಧಾರಿಸಲು ಸಹಾಯವಾಗುತ್ತದೆ ಎಂಬ ನಂಬಿಕೆಯೂ ಇದೆ. ಆದ್ದರಿಂದ ನೈಸರ್ಗಿಕ ಹಾಗೂ ಗುಣಮಟ್ಟದ ಮುತ್ತುಗಳನ್ನು ಮಾತ್ರ ಆಯ್ಕೆ ಮಾಡುವುದು ಉತ್ತಮ. ಒಟ್ಟಾರೆ, ಮುತ್ತು ಧರಣೆ ಚಂದ್ರನ ಶಕ್ತಿಯನ್ನು ಬಲಪಡಿಸಿ ಮನಸ್ಸಿಗೆ ಶಾಂತಿ, ಆರೋಗ್ಯಕ್ಕೆ ಬಲ ಮತ್ತು ಜೀವನದಲ್ಲಿ ಅದೃಷ್ಟವನ್ನು ತರಬಲ್ಲ ಸರಳವಾದ ಆದರೆ ಪರಿಣಾಮಕಾರಿ ಜ್ಯೋತಿಷ್ಯ ಪರಿಹಾರವಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:36 am, Tue, 10 February 26

Source link

ಸ್ಪೀಕರ್​ಗೆ ಪತ್ರ ಬರೆದ ಬಿಜೆಪಿಯ ಮಹಿಳಾ ಸಂಸದರು – Kannada News | BJP Women MPs Seek Speaker’s Intervention Over House Disruption

ನವದೆಹಲಿ, ಫೆಬ್ರವರಿ 10: ಲೋಕಸಭೆ(LokSabha)ಯಲ್ಲಿ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಕೊನೆಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಪ್ರತಿಪಕ್ಷಗಳ ಮಹಿಳಾ ಸಂಸದರ ನಂತರ ಬಿಜೆಪಿ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್​ಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 4ರಂದು ಸದನದೊಳಗೆ ಪ್ರಧಾನಿ ಮೋದಿ ಕುರ್ಚಿಯನ್ನು ಸುತ್ತುವರೆದು ಅವರು ಭಾಷಣ ಮಾಡದಂತೆ ತಡೆದ ಮಹಿಳಾ ಸಂಸದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿಯ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದಾರೆ.

ಫೆಬ್ರವರಿ 4ರಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರ ನಡವಳಿಕೆಯನ್ನು ಬಿಜೆಪಿ ಮಹಿಳಾ ಸಂಸದರು ಪತ್ರದಲ್ಲಿ ವಿವರಿಸಿದ್ದಾರೆ ಮತ್ತು ಲೋಕಸಭೆ ಕೊಠಡಿಯೊಳಗಿನ ಘಟನೆಯನ್ನು ಬೆಳಕಿಗೆ ತಂದಿದ್ದಾರೆ. ಲೋಕಸಭೆಯ ಕೊಠಡಿಯೊಳಗೆ ಅತ್ಯಂತ ದುರದೃಷ್ಟಕರ ಮತ್ತು ವಿಷಾದನೀಯ ಘಟನೆಗಳಲ್ಲಿ ಒಂದನ್ನು ನಾವು ನೋಡಿದ್ದೇವೆ. ವಿರೋಧ ಪಕ್ಷಗಳ ಸದಸ್ಯರು ಸದನದ ಬಾವಿಗೆ ಪ್ರವೇಶಿಸಿದ್ದಲ್ಲದೆ, ಮೇಜುಗಳ ಮೇಲೆ ಹತ್ತುವುದು, ಕಾಗದಗಳನ್ನು ಹರಿದು ಕುರ್ಚಿಯ ಕಡೆಗೆ ಎಸೆಯುವುದನ್ನು ನಾವು ನೋಡಿದ್ದೇವೆ ಎಂದು ಬರೆಯಲಾಗಿದೆ.

ಈ ಗಂಭೀರ ಪ್ರಚೋದನೆಯಿಂದ ತೀವ್ರ ಕೋಪಗೊಂಡಿದ್ದರೂ, ತಮ್ಮ ಹಿರಿಯ ನಾಯಕರ ಆದೇಶದ ಮೇರೆಗೆ ಸಂಯಮವನ್ನು ಕಾಯ್ದುಕೊಂಡರು ಮತ್ತು ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಲಿಲ್ಲ ಎಂದು ಮಹಿಳಾ ಸಂಸದರು ಹೇಳುತ್ತಾರೆ. ನಾವು ಸಂಯಮವನ್ನು ಕಾಯ್ದುಕೊಳ್ಳದಿದ್ದರೆ, ಗಂಭೀರ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಲೋಕಸಭೆಯಲ್ಲಿ ನಡೆದ ಈ ಅಪಾಯಕಾರಿ ಘಟನೆ ನಮ್ಮೆಲ್ಲರಿಗೂ ತೊಂದರೆಯುಂಟು ಮಾಡಿದೆ.

ಮತ್ತಷ್ಟು ಓದಿ: ಲೋಕಸಭೆ ಅಧಿವೇಶನದಲ್ಲಿ ಸ್ಪೀಕರ್ ಮೇಲೆ ಪೇಪರ್ ಎಸೆದಿದ್ದ 8 ಸಂಸದರ ಅಮಾನತು

ಸದನದೊಳಗೆ ಇಂತಹ ಹೇಯ ಕೃತ್ಯಗಳನ್ನು ಎಸಗಿದ ವಿರೋಧ ಪಕ್ಷದ ಸಂಸದರ ವಿರುದ್ಧ ನಿಯಮಗಳ ವ್ಯಾಪ್ತಿಯಲ್ಲಿ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಮಹಿಳಾ ಸಂಸದರು ಲೋಕಸಭೆ ಸ್ಪೀಕರ್‌ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ವಿರೋಧ ಪಕ್ಷದ ಮಹಿಳಾ ಸಂಸದರು ಕೂಡ ಪತ್ರ ಬರೆದಿದ್ದರು

ಸೋಮವಾರದಂದು ವಿರೋಧ ಪಕ್ಷಗಳ ಮಹಿಳಾ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದು ತಮ್ಮ ತೀವ್ರ ಅಸಮಾಧಾನ ಮತ್ತು ಕಳವಳವನ್ನು ವ್ಯಕ್ತಪಡಿಸಿದ್ದರು. ತಮಿಳುನಾಡು ಲೋಕಸಭಾ ಸಂಸದ ಎಸ್. ಜೋತಿಮಣಿ ಅವರ ಲೆಟರ್‌ಹೆಡ್‌ನಲ್ಲಿ ಬರೆಯಲಾದ ಈ ಪತ್ರಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ, ಆರ್. ಸುಧಾ, ಜ್ಯೋತ್ಸ್ನಾ ಚರಂದಾಸ್ ಮಹಾಂತ್ ಮತ್ತು ವರ್ಷಾ ಏಕನಾಥ್ ಗಾಯಕ್ವಾಡ್ ಸೇರಿದಂತೆ ಹಲವಾರು ಮಹಿಳಾ ಸಂಸದರು ಸಹಿ ಮಾಡಿದ್ದಾರೆ.

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಕುರಿತು ಲೋಕಸಭೆಯಲ್ಲಿ ಮುಂದುವರೆದ ಬಿಕ್ಕಟ್ಟಿನ ನಡುವೆಯೇ ಈ ವಿವಾದ ತೆರೆದುಕೊಂಡಿದೆ. 2020 ರ ಚೀನಾದೊಂದಿಗಿನ ಬಿಕ್ಕಟ್ಟನ್ನು ಉಲ್ಲೇಖಿಸುವಾಗ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಉಲ್ಲೇಖಿಸಲು ಗಾಂಧಿ ಪ್ರಯತ್ನಿಸಿದ ನಂತರ ಬಿಕ್ಕಟ್ಟು ಉದ್ಭವಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್ – Kannada News | Ajith Kumar’s Racing Focus: Why Fans Are Upset Over His Recent Behavior and Abu Dhabi Incident

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ಇತ್ತೀಚೆಗೆ ನಟನೆಗಿಂತ ರೇಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ತೆರಳಿ ಕಾರ್ ರೇಸ್​ ಅಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ. ಅಜಿತ್ ಅವರನ್ನು ನೋಡಲು ಬಂದ ಫ್ಯಾನ್ಸ್ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಹಿಟ್ ಚಿತ್ರಗಳನ್ನು ಕೂಡ ನೀಡಿದ್ದಾರೆ. 2025ರಲ್ಲಿ ಅವರು ‘ವಿದುಮುಯಾರ್ಚಿ’ ಹಾಗೂ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾಗಳು ತೆರೆಗೆ ಬಂದವು. ಎರಡೂ ಸಿನಿಮಾಗಳು ಸಾಧಾರಣ ಎನಿಸಿಕೊಂಡವು. ‘ವಿದುಮುಯಾರ್ಚಿ’ ರಿಲೀಸ್ ಆಗಿ ವರ್ಷ ಕಳೆದಿದೆ. ಆದಾಗ್ಯೂ ಅವರು ಹೊಸ ಸಿನಿಮಾ ಘೋಷಣೆ ಆಗಿಲ್ಲ. ಬದಲಿಗೆ ಅವರು ವಿದೇಶದಲ್ಲಿ ಕಾರ್​ ರೇಸ್ ಅಲ್ಲಿ ಭಾಗಿ ಆಗುತ್ತಿದ್ದಾರೆ.

ಅಬುಧಾಬಿಯಲ್ಲಿ ನಡೆದ ರೇಸ್​​ನಲ್ಲಿ ಅಜಿತ್ ಭಾಗಿ ಆಗಿದ್ದರು. ಈ ವೇಳೆ ಅಭಿಮಾನಿಗಳು ಅವರನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾರೆ. ಆಗ ಸಿಟ್ಟಾದ ಅಜಿತ್, ‘ಸರಿಯಾಗಿ ವರ್ತಿಸಿ. ಇದು ಥಿಯೇಟರ್​ ಅಲ್ಲ’ ಎಂದು ಖಾರವಾಗಿಯೇ ಹೇಳಿದ್ದಾರೆ. ಇದಕ್ಕೆ ಕೆಲವರು ಕೋಪ ಹೊರಹಾಕಿದ್ದಾರೆ. ‘ಅಭಿಮಾನಿಗಳನ್ನು ಹೀಗೆ ಟ್ರೀಟ್ ಮಾಡಬಾರದು’ ಎಂದು ಖಡಕ್ ಆಗಿಯೇ ಉತ್ತರಿಸಲಾಗಿದೆ.

ಅಜಿತ್ ಅವರು ಅಭಿಮಾನಿಗಳ ಕೈಗೆ ಸಿಗದೇ ಅದೆಷ್ಟೋ ವರ್ಷಗಳೇ ಕಳೆದಿವೆ. ಅವರು ಸಿನಿಮಾ ಮಾಡಿದ ಬಳಿಕ ಅದರ ಪ್ರಚಾರಕ್ಕೆ ತೆರಳೋದಿಲ್ಲ. ಅಭಿಮಾನಿಗಳ ಜೊತೆ ಸಿನಿಮಾ ನೋಡೋಕೆ ತೆರಳೋದಿಲ್ಲ. ಈ ಎಲ್ಲಾ ಕಾರಣದಿಂದ ಅಜಿತ್ ಅವರು ಕಂಡಾಗ ಫ್ಯಾನ್ಸ್ ಮುತ್ತಿಕೊಳ್ಳುತ್ತಾರೆ. ಆದರೆ, ಇದನ್ನು ಅವರು ಸಹಿಸಿಕೊಳ್ಳೋದೇ ಇಲ್ಲ.

ಇದನ್ನೂ ಓದಿ: ಕಮಲ್ ಹಾಸನ್, ಅಜಿತ್ ಕುಮಾರ್ ಬಳಿಕ ದಿಟ್ಟ ನಿರ್ಧಾರ ಕೈಗೊಂಡ ನಟಿ ನಯನತಾರಾ 

ಈ ಮೊದಲು ಕೂಡ ಅಜಿತ್ ಅವರು ಅನೇಕ ಬಾರಿ ಕೋಪ ಹೊರಹಾಕಿದ್ದು ಇದೆ. ಅಜಿತ್ ಸೋಶಿಯಲ್ ಮೀಡಿಯಾದಲ್ಲಿಯೂ ಆ್ಯಕ್ಟೀವ್ ಆಗಿಲ್ಲ. ಹೀಗಾಗಿ, ಅವರು ಅಭಿಮಾನಿಗಳ ಕೈಗೂ ಸಿಗೋದೆ ಇಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 10:20 am, Tue, 10 February 26

Source link

ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, 1.5 ಲಕ್ಷ ನಗದು ಇದ್ದ ಬ್ಯಾಗ್ ಕಳವು! – Kannada News | Gold Cash Theft Inside Minister Byrathi Suresh Office at Vidhana Soudha; D Group Employee Arrested

ಬೆಂಗಳೂರು, ಫೆಬ್ರವರಿ 10: ಅತಿಹೆಚ್ಚಿನ ಭದ್ರತೆ ಇರುವ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಸಹಿತ ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ.

ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಯುತ್ತಿದ್ದು, ಭದ್ರತಾ ವ್ಯವಸ್ಥೆಗಳ ಕುರಿತು ಸಹ ಪ್ರಶ್ನೆಗಳು ಎದ್ದಿವೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

World Pulses Day 2026: ದ್ವಿದಳ ಧಾನ್ಯಗಳ ಸೇವನೆ ನಮ್ಮ ಆರೋಗ್ಯ ವೃದ್ಧಿಗೆ ಸಹಕಾರಿ – Kannada News | World Pulses Day 2026: Why is World Pulses Day celebrated? Here is the information

ವಿಶ್ವ ದ್ವಿದಳ ಧಾನ್ಯ ದಿನImage Credit source: vecteezy

ಕಡಲೆ, ತೊಗರಿ, ಉದ್ದಿನ ಬೇಳೆ, ಅವರೆ, ಸೋಯಾಬೀನ್‌, ರಾಜ್ಮಾ, ಹುರುಳಿ, ಬಟಾಣಿ ಇವೆಲ್ಲವೂ ದ್ವಿದಳ ಧಾನ್ಯಗಳಾಗಿದ್ದು (Pulses), ಹೆಚ್ಚಿನ ಅಡುಗೆಗಳಲ್ಲಿ ಈ ಎಲ್ಲಾ ಧಾನ್ಯಗಳನ್ನು ಬಳಸಲಾಗುತ್ತದೆ. ದ್ವಿದಳ ಧಾನ್ಯಗಳು ಕೇವಲ ಕಾಳುಗಳಲ್ಲ,  ಪೌಷ್ಟಿಕಾಂಶದ ನಿಧಿಯೂ ಹೌದು.  ಇವುಗಳಲ್ಲಿ ಅಮೈನೋ ಆಮ್ಲ, ಪ್ರೋಟೀನ್‌, ಕಬ್ಬಿಣ, ಪೋಲಿಕ್‌ ಆಮ್ಲ ಇತ್ಯಾದಿ ಪೋಷಕಾಂಶಗಳಿದ್ದು, ಇವು ಹೃದಯ ಮತ್ತು ಸಂಪೂರ್ಣ ದೇಹಾರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿಯಾಗಿದೆ. ಹಾಗಾಗಿ ದ್ವಿದಳ ಧಾನ್ಯಗಳ ಪೌಷ್ಟಿಕಾಂಶ ಮೌಲ್ಯಗಳು ಮತ್ತು ಅವುಗಳ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಪ್ರತಿವರ್ಷ ಫೆಬ್ರವರಿ 10 ರಂದು ವಿಶ್ವ ದ್ವಿದಳ ಧಾನ್ಯ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ ಬನ್ನಿ.

ವಿಶ್ವ ದ್ವಿದಳ ಧಾನ್ಯ ದಿನದ ಇತಿಹಾಸವೇನು?

ದ್ವಿದಳ ಧಾನ್ಯಗಳ ಮಹತ್ವವನ್ನು ಎತ್ತಿ ತೋರಿಸಲು ಮತ್ತು ಜನರಿಗೆ ಅವುಗಳ ಮಹತ್ವದ ಬಗ್ಗೆ ಅರಿವು ಮೂಡಿಸಲು, 2016 ನೇ ವರ್ಷವನ್ನು ಅಂತರರಾಷ್ಟ್ರೀಯ ದ್ವಿದಳ ಧಾನ್ಯಗಳ ವರ್ಷವೆಂದು ಘೋಷಿಸಲಾಯಿತು. ಇದರ ನಂತರ, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಫೆಬ್ರವರಿ 10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವೆಂದು ಗೊತ್ತುಪಡಿಸುವ ನಿರ್ಣಯವನ್ನು ಅಂಗೀಕರಿಸಿತು. ಅಂದಿನಿಂದ, ಫೆಬ್ರವರಿ 10 ಅನ್ನು ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ವಿಶ್ವ ದ್ವಿದಳ ಧಾನ್ಯಗಳ ದಿನವನ್ನು ಏಕೆ ಆಚರಿಸಲಾಗುತ್ತದೆ ?

ಆಧುನಿಕತೆಯ ಓಟದಲ್ಲಿ, ತ್ವರಿತ ಆಹಾರದ ವ್ಯಾಪಕತೆಯು ನಮ್ಮ ಆಹಾರಕ್ರಮದಲ್ಲಿ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡುತ್ತಿದೆ. ಇದು ದೇಹಕ್ಕೆ ಸಾಕಷ್ಟು ಪೌಷ್ಟಿಕಾಂಶವನ್ನು ನೀಡದೆ ವಂಚಿತಗೊಳಿಸುತ್ತದೆ, ಇದು ಜನರ, ವಿಶೇಷವಾಗಿ ಮಕ್ಕಳು ಮತ್ತು ಯುವಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಮಾನವನ ಆರೋಗ್ಯ ಮತ್ತು ಆಹಾರ ಸುರಕ್ಷತೆಗಾಗಿ ದ್ವಿದಳ ಧಾನ್ಯಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜನರು ತಮ್ಮ ಆಹಾರಕ್ರಮದಲ್ಲಿ ಅವುಗಳನ್ನು ಸೇರಿಸಿಕೊಳ್ಳಲು ಪ್ರೋತ್ಸಾಹಿಸಲು ಅಂತರರಾಷ್ಟ್ರೀಯ ದ್ವಿದಳ ಧಾನ್ಯಗಳ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಟೆಡ್ಡಿ ಡೇ ವ್ಯಾಲೆಂಟೈನ್‌ ವೀಕ್‌ಭಾಗವಾಗಿದ್ದು ಹೇಗೆ? ದಿನದ ಹಿನ್ನೆಲೆಯ ಬಗ್ಗೆ ತಿಳಿಯಿರಿ

 ದ್ವಿದಳ ಧಾನ್ಯಗಳು ನಮ್ಮ ಆರೋಗ್ಯದ ನಿಧಿ:

ದ್ವಿದಳ ಧಾನ್ಯಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದೆ. ಅವು ಕಡಿಮೆ ಕೊಬ್ಬು ಮತ್ತ ಫೈಬರ್‌ನಲ್ಲಿ ಸಮೃದ್ಧವಾಗಿವೆ, ಗ್ಲುಟನ್-ಮುಕ್ತವಾಗಿವೆ. ಅವುಗಳಲ್ಲಿ ಕಡಿಮೆ ಸೋಡಿಯಂ ಅಂಶವಿದ್ದು, ಇದು ಹೃದಯ ರೋಗಿಗಳು ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಸೂಕ್ತವಾದ ಸೂಪರ್‌ಫುಡ್ ಆಗಿದೆ. ಅಲದೆ ದ್ವಿದಳ ಧಾನ್ಯಗಳು ಖನಿಜಗಳು, ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು, ಪ್ರೋಟೀನ್‌ ಮತ್ತು ನಾರಿನಾಂಶ ಹೆಚ್ಚಿದ್ದು, ಇದು ದೇಹಕ್ಕೆ ಶಕ್ತಿ ನೀಡುವುದರೊಂದಿಗೆ ಸ್ನಾಯುಗಳನ್ನು ನಿರ್ಮಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.  ಜೊತೆಗೆ ದ್ವಿದಳ ಧಾನ್ಯಗಳು ದೇಹಕ್ಕೆ ಕಬ್ಬಿಣಾಂಶವನ್ನು ಪೂರೈಸುತ್ತವೆ, ಶಕ್ತಿಯನ್ನು ಉತ್ಪಾದಿಸಲು ಮತ್ತು ಚಯಾಪಚಯಕ್ರಿಯೆಯನ್ನು ಉತ್ತೇಜಿಸಲೂ ಸಹಾಯ ಮಾಡುತ್ತದೆ.

ವಿಶ್ವ ದ್ವಿದಳ ಧಾನ್ಯಗಳ ದಿನದ ಮಹತ್ವವೇನು?

  • ವಿಶ್ವ ದ್ವಿದಳ ಧಾನ್ಯಗಳ ದಿನದ ಪ್ರಮುಖ ಉದ್ದೇಶವೆಂದರೆ ಜಾಗತಿಕವಾಗಿ ಅಪೌಷ್ಟಿಕತೆ ಮತ್ತು ಹಸಿವನ್ನು ಕಡಿಮೆ ಮಾಡಲು ದ್ವಿದಳ ಧಾನ್ಯಗಳ ಉತ್ಪಾದನೆ ಮತ್ತು ಬಳಕೆಯನ್ನು ಉತ್ತೇಜಿಸುವುದು.
  • ಹೆಚ್ಚುವರಿಯಾಗಿ, ಸುಸ್ಥಿರ ಕೃಷಿಯನ್ನು ಪ್ರೋತ್ಸಾಹಿಸಲು ಮತ್ತು ದ್ವಿದಳ ಧಾನ್ಯಗಳ ಪರಿಸರ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವು ಸಹಾಯ ಮಾಡುತ್ತದೆ.
  • ದ್ವಿದಳ ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯ ಮತ್ತು ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version