ಗಾಳಿಯಿಲ್ಲ, ಮಳೆಯಿಲ್ಲ ಮುರಿದುಬಿದ್ದ ಮರದ ಕೊಂಬೆ: ಎರಡು ಕಾರು, ಒಂದು ಬೈಕ್ ಜಖಂ – Kannada News | Tree Branch Collapses Without Wind or Rain, Damages Two Cars and a Bike
ಬೆಂಗಳೂರು, ಜುಲೈ 03: ಮಳೆ ಅಥವಾ ಗಾಳಿಯಿಲ್ಲದೆ ಬೃಹತ್ ಮರದ ಕೊಂಬೆಯೊಂದು ಮುರಿದುಬಿದ್ದು, ಎರಡು ಕಾರು ಮತ್ತು ಒಂದು ಬೈಕ್ ಜಖಂ ಆಗಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಇನ್ನು ಅನಾಹುತ ಸಂಭವಿಸಿದ ಸ್ಥಳದಲ್ಲಿ ಸರ್ಕಾರಿ ಶಾಲೆ ಇದ್ದು, ಭಾರೀ ಅನಾಹುತವೊಂದು ತಪ್ಪಿದೆ. ಬಿ.ಎಂ.ಎಲ್. ಲೇಔಟ್ನಲ್ಲಿ ಮಧ್ಯಾಹ್ನ ಸುಮಾರು 3:30ರ ಸುಮಾರಿಗೆ ಘಟನೆ ನಡೆದಿದ್ದು, ಮರದ ಕೊಂಬೆ ಬಿದ್ದಿದ್ದಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮತ್ತೊಂದು ಕಾರು ಮತ್ತು ಒಂದು ಬೈಕ್ಗೆ ಭಾಗಶಃ ಹಾನಿಯಾಗಿದೆ. ಘಟನೆ ನಡೆದ ಸ್ಥಳದ…