Headlines

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More

ಊಬರ್ ಕಂಪನಿ ಚಾಲಕರಿಗೆ ಮಾಡೋ ಮೋಸ ಎಂಥದ್ದು ಅಂತ ಬಿಚ್ಚಿಟ್ಟ ಚಾಲಕರು!

ಬೆಂಗಳೂರು, ಏಪ್ರಿಲ್ 08: ಬೊಮ್ಮನಹಳ್ಳಿಯ ಊಬರ್ ಕಚೇರಿ ಮುಂದೆ ಚಾಲಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಊಬರ್ ಕಂಪನಿಯಿಂದ ತಮಗೆ ಆಗುತ್ತಿರುವ ಅನ್ಯಾಯ ಮತ್ತು ಶೋಷಣೆಯನ್ನು ಖಂಡಿಸಿ, ಚಾಲಕರು ಮನವಿ ಸಲ್ಲಿಸಿದ್ದಾರೆ. ಸರ್ಕಾರ ನಿಗದಿಪಡಿಸಿದ ದರಗಳನ್ನು ಊಬರ್ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ, ನಾನ್-ಪೀಕ್ ಅವರ್‌ಗಳಲ್ಲಿ ಸಿಗುವ ದರ ಅತ್ಯಂತ ಕಡಿಮೆಯಾಗಿದ್ದು, ಒಂದು ಟ್ರಿಪ್‌ಗೆ ಕೇವಲ 8 ರಿಂದ 15 ರೂಪಾಯಿ ಮಾತ್ರ ಸಿಗುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್‌ಪಿಜಿ ಮತ್ತು ಸಿಎನ್‌ಜಿ ಇಂಧನ ಬೆಲೆಗಳು ಗಣನೀಯವಾಗಿ…

Read More

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್! ಸಿಸಿಟಿವಿ ವಿಡಿಯೋ ವೈರಲ್

ಮಂಗಳೂರು, ಮಾರ್ಚ್ 17: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಬಲವಂತ ಮಾಡಿರುವ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಇದೀಗ ಅನೇಕ ಆರೋಪಗಳು ಕೇಳಿಬರುತ್ತಿವೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾರಾದರೂ ಸಂತ್ರಸ್ತೆಯರಿದ್ದರೆ ಧೈರ್ಯವಾಗಿ ಬಂದು ದೂರು ನೀಡಿ, ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅಭಯ ನೀಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು, ತಡರಾತ್ರಿ ಮಹಿಳೆಯೊಬ್ಬರ…

Read More

‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ? – Kannada News | Toxic movie teaser released, Some people comparing it with Mahaan movie story

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆಬ್ರವರಿ 20) ಬಿಡುಗಡೆ ಆಗಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀವ್ಸ್​ಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ರೀತಿಯೇ ಈ ಟೀಸರ್ ಸಹ ಮಾಸ್ ಆಗಿ ಮೂಡಿಬಂದಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ…

Read More

ಹಾಸನ ಎಸ್​ಪಿ ಕಚೇರಿ ಹೊರಗೆ ಕಾದು ಕುಳಿತ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar arrives at Hassan SP office to give complaint

ಹಾಸನದಲ್ಲಿನ ನಿವೇಶನದ ಗಲಾಟೆಗೆ ಸಂಬಂಧಪಟ್ಟಂತೆ ಯಶ್ ತಾಯಿ (Yash mother) ಪುಷ್ಪಾ ಅರುಣ್ ಕುಮಾರ್ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ಎಸ್​​ಪಿ ಕಚೇರಿ ಹೊರಗೆ ಅವರು ಕಾದು ಕುಳಿತಿದ್ದಾರೆ. ಸೈಟ್ ಗಲಾಟೆಯಲ್ಲಿ ಸರಿಯಾಗಿ ತನಿಖೆ ಆಗಿಲ್ಲ ಎಂದು ದೂರು ನೀಡಲು ಅವರು ಬಂದಿದ್ದಾರೆ. ಕ್ರಯಪತ್ರಗಳ ದಾಖಲೆ ಸಮೇತವಾಗಿ ಅವರು ಎಸ್​ಪಿ ಕಚೇರಿಗೆ ಆಗಮಿಸಿದ್ದಾರೆ. ‘ಸೈಟ್ ಗಲಾಟೆಗೆ ಸಂಬಂಧಿಸಿದಂತೆ ತಕ್ಷಣ ದೂರು ನೀಡಿದ್ದೆ. ಹಾಸನ ಬಡಾವಣೆ ಪೊಲೀಸರು ಸರಿಯಾಗಿ ತನಿಖೆ ಮಾಡಿಲ್ಲ. ರೌಡಿಸಂ ಮತ್ತು ಭೂ ಮಾಫಿಯಾದವರಿಗೆ…

Read More

ಕೊಲೆಯಾದ ಹುಬ್ಬಳ್ಳಿ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮನೆ: ಸಿಎಂ ಮುಂದೆ ಕಣ್ಣೀರಿಟ್ಟ ಅಜ್ಜಿ – Kannada News | Hubballi Anjali Murder: CM Siddaramaiah Allocates House to Victim’s Family, Grandmother Emotional

ಅಜ್ಜಿ, ಮನೆ ವಿತರಣೆ ಕಾರ್ಯಕ್ರಮ, ಅಂಜಲಿ ಅಂಬಿಗೇರ ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಪುತ್ರಿ ನೇಹಾಳ ಬರ್ಬರ ಹತ್ಯೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದ್ದು, ಅಂಜಲಿ ಅಂಬಿಗೇರ ಕೊಲೆ ಕೇಸ್​​. ಇದೇ ಪ್ರಕರಣ ರಾಜಕೀಯ ತಿಕ್ಕಾಟಕ್ಕೂ ಕಾರಣವಾಗಿತ್ತು. ಅಂದು ಕುಟುಂಬಕ್ಕೆ ಸಾಂತ್ವನ ಹೇಳಿದ್ದ ಸರ್ಕಾರ ಇಂದು ಮನೆ ನೀಡಿದೆ. ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah ಕೊಲೆಯಾಗಿರುವ ಅಂಜಲಿ ಅಂಬಿಗೇರ (Anjali Ambiger) ಪೋಷಕರಿಗೆ ಮನೆ ಹಂಚಿಕೆ ಮಾಡಲಾಗಿದ್ದು,…

Read More

Manufacturing sector: ಮತ್ತೆ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್ ಧ್ವನಿ; ಸತ್ಯ ಎಷ್ಟು, ಸುಳ್ಳೆಷ್ಟು? – Kannada News | Rahul Gandhi says Indian manufacturing declining, Amit Malviya and others counter with data

ನವದೆಹಲಿ, ಡಿಸೆಂಬರ್ 18: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿದೇಶಕ್ಕೆ ಹೋದಾಗೆಲ್ಲಾ ಭಾರತದ ಸರ್ಕಾರ ಹಾಗೂ ದೇಶದ ಪರಿಸ್ಥಿತಿ ಬಗ್ಗೆ ಟೀಕೆ ಮಾಡುವುದು ಈಗ ಸಾಮಾನ್ಯವಾಗಿ ಹೋಗಿದೆ. ಜರ್ಮನಿಯ ಮ್ಯೂನಿಕ್ ನಗರದಲ್ಲಿ ಬಿಎಂಡಬ್ಲ್ಯು ಕಾರ್ ಕಂಪನಿಯ ಫ್ಯಾಕ್ಟರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದಲ್ಲಿ ಮ್ಯಾನುಫ್ಯಾಕ್ಚರಿಂಗ್ ಕಾರ್ಯ ಇಳಿಮುಖವಾಗಿದೆ ಎಂದು ಹೇಳಿ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಬಿಎಂಡಬ್ಲ್ಯುದ ಮುಖ್ಯ ಕಚೇರಿ ಮ್ಯೂನಿಕ್ ನಗರದಲ್ಲೇ ಇದೆ. ಅಲ್ಲೇ ಅದರ ವೆಲ್ಟ್ ಅಂಡ್ ಬಿಎಂಡಬ್ಲ್ಯು…

Read More

ನಮಗೆ ರಸ್ತೆ ಇಲ್ಲ, 500 ಕೋಟಿ ರೂ. ಕೊಡಿ: ‘ಧುರಂಧರ್ 2’ ತಂಡಕ್ಕೆ ಪಾಕಿಸ್ತಾನಿಗಳ ಮನವಿ

ಆದಿತ್ಯ ಧರ್ (Aditya Dhar) ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್ ಆಗಿದೆ. ಮೊದಲ ಭಾಗದ ರೀತಿಯೇ ಈ ಸೀಕ್ವೆಲ್ ಕೂಡ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾ ಈಗಾಗಲೇ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಪಾಕಿಸ್ತಾನದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಅಲ್ಲಿನ ಜನರು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಯಾಕೆಂದರೆ, ಈ ಚಿತ್ರದ ಕಥೆ ನಡೆಯುವುದೇ ಪಾಕಿಸ್ತಾನದಲ್ಲಿ. ಈಗ…

Read More

ಟ್ರಂಪ್ ನಮ್ಮ ಕರಾವಳಿ ಮೇಲೆ ದಾಳಿ ನಡೆಸಿದರೆ ಗಲ್ಫ್​ನಲ್ಲಿ ಸಮುದ್ರ ಗಣಿಗಳನ್ನು ಹಾಕುತ್ತೇವೆ; ಇರಾನ್ ಎಚ್ಚರಿಕೆ

ಟೆಹ್ರಾನ್, ಮಾರ್ಚ್ 23: ಇರಾನ್ ದೇಶದ ಕರಾವಳಿ ಅಥವಾ ದ್ವೀಪಗಳ ಮೇಲೆ ಯಾವುದಾದರೂ ದಾಳಿ ನಡೆದರೆ ಇಡೀ ಪರ್ಷಿಯನ್ ಕೊಲ್ಲಿಯಾದ್ಯಂತ ಸ್ಫೋಟಕ ಸಮುದ್ರ ಗಣಿಗಳನ್ನು ನಿಯೋಜಿಸಬೇಕಾಗುತ್ತದೆ ಎಂದು ಇರಾನ್‌ನ ರಕ್ಷಣಾ ಮಂಡಳಿ ಇಂದು ಎಚ್ಚರಿಸಿದೆ. ಇಂದು ರಾತ್ರಿಯೊಳಗೆ ಇರಾನ್‌ನ (Iran War) ಪ್ರಮುಖ ಜಲಮಾರ್ಗವನ್ನು ಮತ್ತೆ ತೆರೆಯಲು ವಿಫಲವಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಇರಾನ್ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇರಾನ್‌ ಮೇಲಿನ ನಿರಂತರ ದಾಳಿಗಳಿಂದ ಈಗಾಗಲೇ ಹಾರ್ಮುಜ್…

Read More

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More